Tag: ಸಿಂಧುತಾಯಿ ಸಪ್ಕಾಲ್

  • ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ನಿಧನ

    ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ನಿಧನ

    ಪುಣೆ: ಸಮಾಜ ಸೇವಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್ ಹೃದಯಾಘಾತದಿಂದ ಪುಣೆಯಲ್ಲಿ ನಿಧನರಾಗಿದ್ದಾರೆ.

    ಸಿಂಧೂತಾಯಿ ಸಪ್ಕಾಲ್(74) ಪುಣೆಯ ಗ್ಯಾಲಕ್ಸಿ ಕೇರ್ ಆಸ್ಪತ್ರೆಯಲ್ಲಿ ಮಂಗಳವಾರ 8.10ಕ್ಕೆ ಕೊನೆಯುಸಿರೆಳೆದರು. ಕಳೆದ ಒಂದು ತಿಂಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದೆ ಮಂಗಳವಾರ ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

    ಹಿನ್ನೆಲೆ: ಮಹಾರಾಷ್ಟ್ರದ ವಾರ್ಧಾದಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಸಿಂಧೂತಾಯಿ, ಹುಟ್ಟಿನಿಂದಲೇ ತಾರತಮ್ಯಕ್ಕೆ ಒಳಗಾಗಿದ್ದರು. ಸಿಂಧೂತಾಯಿಯ ತಾಯಿ ಶಿಕ್ಷಣದಿಂದ ದೂರವಾಗಿದ್ದರು. ದನ ಮೇಯಿಸಲು ಹೊರಗೆ ಹೋಗುತ್ತಾಳೆ ಎನ್ನುವ ನೆಪದಲ್ಲಿ ಅವರ ತಾಯಿಗೆ ಯಾರಿಗೂ ತಿಳಿಯದಂತೆ ಶಾಲೆಗೆ ಕಳುಹಿಸುತ್ತಿದ್ದರು. ಇದನ್ನೂ ಓದಿ: ಆಸ್ತಿ ವಿವಾದಕ್ಕೆ 70ರ ತಂದೆಯ ಕತ್ತು ಸೀಳಿ ಹತ್ಯೆಗೈದ ಮಗ

    ಮಾಯಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಪ್ಕಾಲ್, ಪುಣೆಯಲ್ಲಿ ಸನ್ಮತಿ ಬಾಲ ನಿಕೇತನ ಸಂಸ್ಥೆ ಅನಾಥಾಶ್ರಮ ಹಾಗೂ ಪ್ರಭುನೆ ಪುನರುತ್ತನ್ ಸಮರಸತಾ ಗುರುಕುಲಂ ಎಂಬ ಎನ್‍ಜಿಒ ನಡೆಸುತ್ತಿದ್ದರು. ಎನ್‍ಜಿಒ ಪಾರ್ಧಿ ಸಮುದಾಯ ಮತ್ತು ಅವರ ಮಕ್ಕಳ ಉನ್ನತಿಗಾಗಿ ಕೆಲಸ ಮಾಡುತ್ತದೆ. ಅವರು ಪಾರ್ಧಿ ಮಕ್ಕಳಿಗಾಗಿ ಶಾಲೆ ಮತ್ತು ಹಾಸ್ಟೆಲ್ ಸಹ ನಡೆಸುತ್ತಿದ್ದಾರೆ.

    ಸಾಮಾಜಿಕ ಕಾರ್ಯ: ಸಪ್ಕಾಲ್ ತನ್ನ ಸುದೀರ್ಘ ವೃತ್ತಿಜೀವನದಲ್ಲಿ 1,000ಕ್ಕೂ ಹೆಚ್ಚು ಅನಾಥ ಮಕ್ಕಳನ್ನು ದತ್ತು ಪಡೆದ್ದರು. ಸಾಮಾಜಿಕ ಸೇವೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. 2010ರಲ್ಲಿ, ಮಹಾರಾಷ್ಟ್ರದಲ್ಲಿ ಮಿ ಸಿಂಧುತೈ ಸಪ್ಕಲ್ ಬೋಲ್ತೆ ಎಂಬ ಶೀರ್ಷಿಕೆಯ ಸಪ್ಕಾಲ್‍ನ ಮರಾಠಿ ಜೀವನಚರಿತ್ರೆ ಬಯೊಪಿಕ್ ಬಿಡುಗಡೆಯಾಗಿದೆ.

    ಮೋದಿ ಟ್ವೀಟ್: ಡಾ.ಸಿಂಧೂತಾಯಿ ಸಪ್ಕಲ್ ಅವರು ಸಮಾಜಕ್ಕೆ ಸಲ್ಲಿಸಿದ ಉದಾತ್ತ ಸೇವೆಗಾಗಿ ಸ್ಮರಣೀಯರು. ಅವರ ಪ್ರಯತ್ನದಿಂದಾಗಿ, ಅನೇಕ ಮಕ್ಕಳು ಉತ್ತಮ ಗುಣಮಟ್ಟದ ಜೀವನವನ್ನು ನಡೆಸಿದ್ದರೆ. ಅವರ ನಿಧನದ ಸುದ್ದಿಯಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಬರೆದುಕೊಂಡು ಸಂತಾಪವನ್ನು ಸೂಚಿಸಿದ್ದಾರೆ.

  • ಸ್ಪರ್ಧಿಯ ಕಾಲಿಗೆ ನಮಸ್ಕರಿಸಿದ ಬಿಗ್-ಬಿ

    ಸ್ಪರ್ಧಿಯ ಕಾಲಿಗೆ ನಮಸ್ಕರಿಸಿದ ಬಿಗ್-ಬಿ

    ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ನಿರೂಪಣೆಯ ಕೌನ್ ಬನೇಗಾ ಕರೋಡಪತಿ ಕಾರ್ಯಕ್ರಮ ಪುನಃ ಆರಂಭಗೊಂಡಿದೆ. ಈ ಬಾರಿಯೂ ಕಾರ್ಯಕ್ರಮದಲ್ಲಿ ಹಲವು ಬದಲಾವಣೆಗಳನ್ನು ತರಲಾಗಿದ್ದು, ‘ಕರ್ಮವೀರ್’ ಎಂಬ ವಿಶೇಷ ಸಂಚಿಕೆಗಳು ಈ ಬಾರಿ ಪ್ರಸಾರಗೊಳ್ಳಲಿವೆ. ಮೊದಲ ಕರ್ಮವೀರ್ ಸಂಚಿಕೆ ಶುಕ್ರವಾರ ಪ್ರಸಾರವಾಗಿದ್ದು, ಸ್ಪರ್ಧಿಯಾಗಿ ಆಗಮಿಸಿರುವ ಸಮಾಜ ಸೇವಕಿ ಸಿಂಧುತಾಯಿ ಸಪ್ಕಾಲ್ ಅವರ ಕಾಲಿಗೆ ನಮಸ್ಕರಿಸುವ ಮೂಲಕ ಅಮಿತಾಬ್ ಬಚ್ಚನ್ ವಿಶೇಷ ಅತಿಥಿಯನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಂಡಿದ್ದಾರೆ.

    ಮಹಾರಾಷ್ಟ್ರದಲ್ಲಿ ‘ಅನಾಥ ಮಕ್ಕಳ ತಾಯಿ’ ಎಂದು ಗುರುತಿಸಿಕೊಳ್ಳುವ ಸಿಂಧುತಾಯಿ ಈ ಬಾರಿ ಕೌನ್ ಬನೇಗಾ ಕರೋಡಪತಿಗೆ ಅಗಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಂಧುತಾಯಿ ತಮ್ಮ ಜೀವನದ ಅತ್ಯಮೂಲ್ಯ ಕ್ಷಣಗಳನ್ನು ನೋಡುಗರೊಂದಿಗೆ ಹಂಚಿಕೊಂಡಿದ್ದಾರೆ. ಕೆಬಿಸಿಯಲ್ಲಿ ಸಿಂಧುತಾಯಿ ತಮ್ಮ ಕಥೆಯನ್ನು ಹೇಳಿದಾಗ ಕೇಳುಗರ ರೋಮ ರೋಮಾಂಚನವಾಗಿದೆ.

    ನಾನು 20 ವರ್ಷದವಳಿದ್ದಾಗ ಅತ್ತೆ ನನ್ನನ್ನು ಮನೆಯಿಂದ ಹೊರಹಾಕಿದರು. 10 ದಿನದ ಮಗಳು ಮಮತಾಳೊಂದಿಗೆ ಮನೆಯಿಂದ ಹೊರಬಂದಾಗ ಅಮ್ಮ ಸಹ ನನ್ನನ್ನು ಸೇರಿಸಿಕೊಳ್ಳಲಿಲ್ಲ. ಪುಟ್ಟ ಕಂದನನ್ನು ಕರೆದುಕೊಂಡು ಎಲ್ಲಿಗೆ ಹೋಗೋದು? ಎಲ್ಲಿ ಇರಬೇಕು ಎಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡವು. ಕೊನೆಗೆ ರೈಲಿನಲ್ಲಿ ಹಾಡು ಹಾಡುವ ಜೀವನ ಆರಂಭಿಸಿದೆ. ಹಗಲಿನಲ್ಲಿ ರೈಲಿನಲ್ಲಿ ಮಗಳೊಂದಿಗೆ ಹಾಡು ಹೇಳಿ, ರಾತ್ರಿ ಸ್ಮಶಾನದಲ್ಲಿ ಉಳಿದುಕೊಳ್ಳುತ್ತಿದೆ. ಒಮ್ಮೆ ದೇಶದಲ್ಲಿ ಎಷ್ಟೋ ಮಕ್ಕಳಿಗೆ ಅಮ್ಮ ಇರಲ್ಲ. ಅಂತಹ ಅನಾಥ ಮಕ್ಕಳಿಗೆ ಅಮ್ಮನ ಅವಶ್ಯಕತೆ ಇರುತ್ತದೆ. ಈ ಯೋಚನೆ ಬಂದ ದಿನವೇ ಅನಾಥ ಮಕ್ಕಳನ್ನು ನನ್ನ ಜೊತೆ ಇರಿಸಿಕೊಳ್ಳಲು ಆರಂಭಿಸಿದೆ ಎಂದು ಸಿಂಧುತಾಯಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

    ಇದೂವರೆಗೂ ಸಿಂಧುತಾಯಿ 1,200 ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ. ಸದ್ಯ 36 ಸೊಸೆಯಂದಿರು, 272 ಅಳಿಯಂದಿರು ಮತ್ತು 450ಕ್ಕೂ ಹೆಚ್ಚು ಮೊಮ್ಮಕ್ಕಳೊಂದಿಗೆ ವಾಸವಾಗಿದ್ದಾರೆ. ಯಾರಿಗೆ ತಾಯಿ ಇಲ್ಲವೋ ಅವರಿಗೆಲ್ಲ ನಾನು ಅಮ್ಮನಾಗುತ್ತಾನೆ ಎಂದು ಸಿಂಧುತಾಯಿ ಹೇಳುತ್ತಿರುತ್ತಾರೆ. ರೈಲ್ವೇ ಟ್ರ್ಯಾಕ್ ನಲ್ಲಿ ಸಿಕ್ಕ ದೀಪಕ್ ಸಿಂಧುತಾಯಿ ದತ್ತು ಪಡೆದ ಮೊದಲ ಮಗು.

    ಸಿಂಧುತಾಯಿ ಅವರ ಸೇವೆಗೆ 750ಕ್ಕೂ ಅಧಿಕ ಪ್ರಶಸ್ತಿಗಳು ಲಭಿಸಿವೆ. 2013ರಲ್ಲಿ ಐಕಾನಿಕ್ ಮದರ್ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಸಿಂಧುತಾಯಿ ಅವರನ್ನು ಗೌರವಿಸಲಾಗಿದೆ. 2010ರಲ್ಲಿ ಮಹಾರಾಷ್ಟ್ರ ಸರ್ಕಾರದ ಅಹಿಲ್ಯಾಬಾಯಿ ಹೋಲ್ಕರ್, 2012ರಲ್ಲಿ ಸಿಎನ್‍ಎನ್-ಐಬಿಎನ್ ಮತ್ತು ರಿಲಯನ್ಸ್ ಫೌಂಡೇಶನ್ ವತಿಯಿಂದ ನೀಡಲಾಗುವ ‘ರಿಯಲ್ ಹೀರೋ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2018ರಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂ ದ್ ಅವರು ‘ನಾರಿ ಶಕ್ತಿ’ ಅವಾರ್ಡ್ ನೀಡಿ ಗೌರವಿಸಲಾಗಿದೆ.

    ಕೌನ್ ಬನೇಗಾ ಕರೋಡಪತಿ ಕಾರ್ಯಕ್ರಮದಲ್ಲಿ ಸಿಂಧುತಾಯಿ ಮಗಳು ಮಮತಾ ಜೊತೆ ಸೀಟ್ ಹಂಚಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಸಿಂಧುತಾಯಿ 25 ಲಕ್ಷ ರೂ. ಗಳಿಸಿದ್ದಾರೆ.