Tag: ಸಿಂಧೂ ಲೋಕನಾಥ್

  • ‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ವಿಶ್ವನಾಥ್

    ‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ವಿಶ್ವನಾಥ್

    ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ ‘ದೇವರ ಆಟ ಬಲ್ಲವರಾರು’ (Devara Aata Ballavaraaru) ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ ‘ಫಿರಂಗಿ ಪುರ ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ (Janardhan P Jani) ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಲು ಹೊರಟಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

    ನಾನು ಈ ಹಿಂದೆ ಫಿರಂಗಿ ಪುರ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ತಮ್ಮನ್ನು ಭೇಟಿ ಮಾಡಿದ್ದೆ. ಈಗ ದೇವರ ಆಟ ಬಲ್ಲವರಾರು ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಇದು 1975 ರ ಕಾಲಘಟ್ಟದಲ್ಲಿ ನಡೆಯುವ ಕಥೆ.  ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಎಲ್ಲಾ ಕೆಲಸಗಳನ್ನು ಒಂದು ತಿಂಗಳೊಳಗೆ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಚಿತ್ರವನ್ನು ತೆರೆಗೆ ತರಬೇಕು. ನಮ್ಮ ಚಿತ್ರ ಗಿನ್ನಿಸ್ ರೆಕಾರ್ಡ್ ಆಗಬೇಕು ಎಂಬುದು ನನ್ನ ಆಸೆ. ಈ ಕುರಿತು ನಾನು, ನನ್ನ ತಂಡ ಸುಮಾರು ಆರು ತಿಂಗಳಿನಿಂದ ಶ್ರಮ ಪಡುತ್ತಿದ್ದೇವೆ. ಇಡೀ ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯಲಿದೆ. ಅಲ್ಲಿನ ವಿಶಾಲವಾದ ಜಾಗದಲ್ಲಿ ಸೆಟ್ ಗಳನ್ನು ನಿರ್ಮಿಸಿ ಅದೇ ಸ್ಥಳದಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ದಿನ ಸುಮಾರು 160 ಕ್ಕೂ ಹೆಚ್ಚು ಜನ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

    ಜೂನ್ 16 ರಿಂದ ಐದು ದಿನಗಳ ಕಾಲ ಚಿತ್ರೀಕರಣ ನಡೆಯುವ ಸ್ಥಳದಲ್ಲಿಯೇ ತಾಲೀಮು ನಡೆಸಲಿದ್ದೇವೆ.‌ ಆನಂತರ ಚಿತ್ರೀಕರಣ ಪ್ರಾರಂಭಿಸಲಿದ್ದೇವೆ. ಹದಿನಾರು ದಿನದೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಚಿತ್ರೀಕರಣವಾದ ನಂತರ ಎಲ್ಲಾ ಕಾರ್ಯಗಳನ್ನು ಪೂರೈಸಿ ಜುಲೈ 20ರಂದು ಚಿತ್ರವನ್ನು ತೆರೆಗೆ ತರುತ್ತಿದ್ದೇವೆ‌. ನಮ್ಮ ಕಾರ್ಯವೈಖರಿ ವೀಕ್ಷಿಸಲು ಆರು ಜನ ತೀರ್ಪುಗಾರರು‌ ಆ ಸ್ಥಳದಲ್ಲೇ ಇರುತ್ತಾರೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಅರ್ಜುನ್ ರಮೇಶ್, ಸಿಂಧೂ ಲೋಕನಾಥ್, ವರ್ಷ ವಿಶ್ವನಾಥ್, ಸಂಪತ್ ರಾಮ್, ಅರ್ಜುನ್, ಮೇದಿನಿ ಕೇಳಮನೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ನಿರ್ದೇಶಕ ಜನಾರ್ದನ್ ಪಿ ಜಾನಿ ತಿಳಿಸಿದರು.

    ನಾನು ಈ ಹಿಂದೆ ನಾಲ್ಕು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆದರೆ ಈ ಚಿತ್ರದ ನಿರ್ದೇಶಕರ ಕಾರ್ಯವೈಖರಿ ಕಂಡು ಆಶ್ಚರ್ಯವಾಯಿತು‌. ಈ ಚಿತ್ರಕ್ಕಾಗಿ ಎರಡು ತಿಂಗಳಲ್ಲಿ ಹದಿನಾಲ್ಕು ಕೆಜಿ ತೂಕ ಇಳಿಸಿದ್ದೇನೆ. ನೋಡಿದವರು ಕಂಡು ಹಿಡಿಯದಷ್ಟು ಸಣ್ಣ ಆಗಿದ್ದೇನೆ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸೂರಿ ನನ್ನ ಪಾತ್ರದ ಹೆಸರು ಎಂದರು ನಾಯಕ ಶನಿ ಧಾರಾವಾಹಿ ಖ್ಯಾತಿಯ (Arjun Ramesh) ಅರ್ಜುನ್ ರಮೇಶ್. ಇದನ್ನೂ ಓದಿ:ಯಶ್ ಸಿನಿಮಾಗಾಗಿ ಬೆಂಗಳೂರಿನಲ್ಲಿ ಬೀಡು ಬಿಟ್ಟ ಡೈರೆಕ್ಟರ್- ಇಲ್ಲಿದೆ ಗುಡ್ ನ್ಯೂಸ್

    ಮೂರು ವರ್ಷಗಳ ನಂತರ ನಾನು ನಟಿಸುತ್ತಿರುವ ಚಿತ್ರವಿದು. ರಚನ ನನ್ನ ಪಾತ್ರದ ಹೆಸರು‌‌. ನಾನು ಈವರೆಗೂ ಮಾಡಿರದ ಪಾತ್ರ ಈ ಚಿತ್ರದಲ್ಲಿ ಮಾಡುತ್ತಿದ್ದೇನೆ ಎಂದರು ನಾಯಕಿ ಸಿಂಧೂ ಲೋಕನಾಥ್ (Sindhu Loknath). ಇಂತಹ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಖುಷಿ ನಮಗಿದೆ ಎಂದರು ನಿರ್ಮಾಪಕರಾದ ಹನುಮಂತರಾಜು, ಲತಾ ರಾಗ ಹಾಗೂ ಸಹ ನಿರ್ಮಾಪಕ ಅನಿಲ್ ಜೈನ್‌.

    ಚಿತ್ರದಲ್ಲಿ ನಟಿಸುತ್ತಿರುವ ವರ್ಷ ವಿಶ್ವನಾಥ್,  ಅರ್ಜುನ್, ಸಂಪತ್ ರಾಮ್,  ಸಂಗೀತ ನಿರ್ದೇಶಕ ಶ್ಯಾನ್ ಎಲ್ ರಾಜ್, ಸಾಹಸ ನಿರ್ದೇಶಕ ಕುಂಗ್ಫು ಚಂದ್ರು ಹಾಗೂ ಕಾರ್ಯಕಾರಿ ನಿರ್ಮಾಪಕ ಶ್ರೀಪಾದ್ ಹೆಗಡೆ ಚಿತ್ರದ ಕುರಿತು ಮಾತನಾಡಿದರು. ದೇವರ ಆಟ ಬಲವರಾರು ಚಿತ್ರಕ್ಕೆ ಪ್ರತಿಯೊಬ್ಬ ಮನುಷ್ಯನ ಒಳಗೆ ಒಂದು ಕ್ರೂರ ಮೃಗ ಇದ್ದೆ ಇರುತ್ತದೆ ಎಂಬ ಅಡಿಬರಹವಿದೆ.

  • ಮರು ಬಿಡುಗಡೆಯಾಗಲಿದೆ ‘ಕಾಣದಂತೆ ಮಾಯಾವಾದನು’ ಚಿತ್ರ – ಅಕ್ಟೋಬರ್ 15ಕ್ಕೆ ರೀ ಎಂಟ್ರಿ

    ಮರು ಬಿಡುಗಡೆಯಾಗಲಿದೆ ‘ಕಾಣದಂತೆ ಮಾಯಾವಾದನು’ ಚಿತ್ರ – ಅಕ್ಟೋಬರ್ 15ಕ್ಕೆ ರೀ ಎಂಟ್ರಿ

    ಸುಮಾರು ಏಳು ತಿಂಗಳಿಂದ ಚಿತ್ರಮಂದಿರದಲ್ಲಿ ಸಿನಿಮಾ ನೋಡದೆ ಬೇಸರದಲ್ಲಿದ್ದ ಕನ್ನಡ ಸಿನಿ ರಸಿಕರಿಗೆ ಅಕ್ಟೋಬರ್ 15ರಿಂದ ಚಿತ್ರಮಂದಿರದಲ್ಲಿ ಸಿನಿಮಾ ನೋಡೋ ಭಾಗ್ಯ ಸಿಕ್ಕಿದೆ. ಚಿತ್ರಮಂದಿರ ಓಪನ್‍ಗೆ ಸರ್ಕಾರ ಅನುಮತಿ ನೀಡಿದ್ದೇ ತಡ ಹಲವು ಚಿತ್ರತಂಡಗಳು ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದ್ರ ನಡುವೆ ಕೊರೊನಾ ಹೊಡೆತಕ್ಕೆ ಸಿಕ್ಕಿ ಕಡಿಮೆ ದಿನ ಪ್ರದರ್ಶನ ಕಂಡ ಚಿತ್ರಗಳು ಒಂದಾದ ಮೇಲೊಂದರಂತೆ ರೀ ರಿಲೀಸ್‍ಗೆ ರೆಡಿಯಾಗುತ್ತಿವೆ. ಈ ಸಾಲಿನಲ್ಲಿ ವಿಕಾಸ್ ನಾಯಕ ನಟನಾಗಿ ನಟಿಸಿರುವ ‘ಕಾಣದಂತೆ ಮಾಯವಾದನು’ ಚಿತ್ರ ಕೂಡ ಸೇರ್ಪಡೆಯಾಗಿದೆ.

    ಅಕ್ಟೋಬರ್ 15ರಂದೇ ‘ಕಾಣದಂತೆ ಮಾಯವಾದನು’ ಚಿತ್ರ ಪ್ರೇಕ್ಷಕರಿಗೆ ಮನರಂಜನೆ ನೀಡಲು ಸಿದ್ಧವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಚಿತ್ರದ ನಿರ್ದೇಶಕ ರಾಜ್ ಪಾತಿಪಾಟಿ ಹಾಗೂ ನಟ ವಿಕಾಸ್ ಸಿನಿಮಾಗೆ ಒಳ್ಳೆಯ ರಿವೀವ್ ಬಂದಿತ್ತು. ಜನರು ಮೆಚ್ಚಿಕೊಂಡಿದ್ರು. ಬಟ್ ನಾವು ಒಂದಿಷ್ಟು ಸೀನ್‍ಗಳನ್ನು ತುಂಬಾ ಟ್ರಿಮ್ ಮಾಡಿದ್ವಿ. ಕಥೆಗೆ ಹೆಚ್ಚು ಇಂಪಾರ್ಟೆನ್ಸ್ ಕೊಟ್ಟು ಕೆಲವು ಸೀನ್‍ಗಳನ್ನು ಟ್ರಿಮ್ ಮಾಡಿದ್ವಿ. ಆದ್ರೀಗ ಒಂದಿಷ್ಟು ಬದಲಾವಣೆಯೊಂದಿಗೆ ಮರು ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ಜನರಿಗೆ ಖಂಡಿತ ಮೊದಲಿಗಿಂತ ಈ ಬಾರಿ ಹೆಚ್ಚಾಗಿ ಸಿನಿಮಾ ಇಷ್ಟವಾಗುತ್ತೆ ಅನ್ನೋದು ಚಿತ್ರತಂಡದ ಅಭಿಪ್ರಾಯ.

    ಅಕ್ಟೋಬರ್ 15ಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ‘ಕಾಣದಂತೆ ಮಾಯವಾದನು’ ಚಿತ್ರ ಮರುಬಿಡುಯಾಗುತ್ತಿದೆ. ಚಿತ್ರದಲ್ಲಿ ಲವರ್ ಬಾಯ್, ಆಕ್ಷನ್ ಹೀರೋ ಆಗಿ ವಿಕಾಸ್ ರಮ್ಮಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ನಟಿಯಾಗಿ ಸಿಂಧೂ ಲೋಕನಾಥ್ ನಟಿಸಿದ್ದಾರೆ. ಲವ್ ಫ್ಯಾಂಟಸಿ, ಹಾರಾರ್, ಆಕ್ಷನ್, ಸಸ್ಪೆನ್ಸ್ ಎಲ್ಲಾ ಎಲಿಮೆಂಟ್‍ಗಳು ಚಿತ್ರದಲ್ಲಿದ್ದು, ಅಚ್ಯುತ್ ಕುಮಾರ್, ಭಜರಂಗಿ ಲೋಕಿ, ಚಿತ್ರದ ತಾರಾಬಳಗದಲ್ಲಿದ್ದಾರೆ. ಚಂದ್ರಶೇಖರ್ ನಾಯ್ಡು, ಸೋಮ್ ಸಿಂಗ್, ಪುಷ್ಪ ಸೋಮ್ ಸಿಂಗ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅಂದ್ಹಾಗೆ ಈ ಸಿನಿಮಾ ಜನವರಿ 31ಕ್ಕೆ ಮೊದಲು ಬಿಡುಗಡೆಯಾಗಿತ್ತು.

  • ಕಾಣದಂತೆ ಮಾಯವಾದನು: ಎಲ್ಲರನ್ನೂ ಸೆಳೆಯೋ ಮಾಯೆಯಂಥಾ ಟ್ರೈಲರ್!

    ಕಾಣದಂತೆ ಮಾಯವಾದನು: ಎಲ್ಲರನ್ನೂ ಸೆಳೆಯೋ ಮಾಯೆಯಂಥಾ ಟ್ರೈಲರ್!

    ಬೆಂಗಳೂರು: ರಾಜ್ ಪತ್ತಿಪಾಟಿ ನಿರ್ದೇಶನದ ಕಾಣದಂತೆ ಮಾಯವಾದನು ಚಿತ್ರವೀಗ ಬಿಡುಗಡೆಯ ಹೊಸ್ತಿಲಲ್ಲಿದೆ. ಒಂದಷ್ಟು ಕಾಲ ಯಾವ ಸುದ್ದಿಯೂ ಇಲ್ಲದಂತಿದ್ದ ಈ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿದ್ದ ಕ್ಯಾರೆಕ್ಟರ್ ಪ್ರೋಮೋ ಮೂಲಕ ಮತ್ತೆ ಚರ್ಚೆಗೆ ಕಾರಣವಾಗಿತ್ತು. ಈ ಮೂಲಕವೇ ತನ್ನ ತಾರಾಗಣವನ್ನು ಪರಿಚಯಿಸಿದ್ದ ಚಿತ್ರತಂಡವೀಗ ಟ್ರೈಲರ್ ಮೂಲಕ ಇಡೀ ಸಿನಿಮಾದ ಆಂತರ್ಯವನ್ನು ಪ್ರೇಕ್ಷಕರ ಮುಂದೆ ತೆರೆದಿಟ್ಟಿದೆ.

    ಕಾಣದಂತೆ ಮಾಯವಾದನು ಚಿತ್ರದ ಟ್ರೈಲರ್ ಇದೀಗ ಬಿಡುಗಡೆಯಾಗಿದೆ. ವರ್ಷಾಂತರದಿಂದಲೂ ಸುದ್ದಿಯಾಗುತ್ತಾ ಸಾಗುತ್ತಿದ್ದ ಈ ಚಿತ್ರ ಯಾವ ಜಾನರಿನದ್ದು, ಇದರ ಕಥೆಯೇನು ಅಂತೆಲ್ಲ ಜನರಲ್ಲಿ ನಾನಾ ಪ್ರಶ್ನೆಗಳಿದ್ದವು. ಅದಕ್ಕೆ ಉತ್ತರಿಸುತ್ತಲೇ ಪ್ರೇಕ್ಷಕರ ನಿರೀಕ್ಷೆಯ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ರೀತಿಯಲ್ಲಿ ಈ ಟ್ರೈಲರ್ ಮೂಡಿ ಬಂದಿದೆ.

    ಹಾರರ್ ಕಥೆಗಳೆಂದರೆ ದೆವ್ವ, ಪ್ರೇತಗಳ ಮೂಲಕ ಭೀತಗೊಳಿಸೋದು ಎಂಬಂಥಾ ಕಲ್ಪನೆಯಿದೆ. ಆದರೆ ಅದಕ್ಕೆ ತದ್ವಿರುದ್ಧ ರೀತಿಯಲ್ಲಿ, ಹೊಸತನದೊಂದಿಗೆ ಈ ಸಿನಿಮಾ ಮೂಡಿಬಂದಿದೆ ಅನ್ನೋದಕ್ಕೂ ಟ್ರೈಲರ್ ಸಾಕ್ಷಿಯಂತಿದೆ. ಈ ಹಿಂದೆ ಜಯಮ್ಮನ ಮಗ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿಕಾಸ್ ಈ ಚಿತ್ರದ ಮೂಲಕ ಹೀರೋ ಆಗಿದ್ದಾರೆ. ಅವರಿಲ್ಲಿ ಪಕ್ಕಾ ಆಕ್ಷನ್ ಹೀರೋ ಆಗಿ ವಿಜೃಭಿಸಿರೋ ಸ್ಪಷ್ಟ ಸೂಚನೆಯನ್ನೂ ಈ ಟ್ರೈಲರ್ ನೀಡಿದೆ.

    ಹಾರರ್ ಕಂಟೆಂಟಿದೆಯಾದರೂ ಇದು ಮಾಮೂಲಿ ಶೈಲಿಯ ಚಿತ್ರವಲ್ಲ. ಇಲ್ಲಿರೋ ಆತ್ಮ ಬದುಕಿರೋ ಘಳಿಗೆಯಲ್ಲಿ ಜೀವದಂತಿದ್ದ ಪ್ರೀತಿಯ ಕಾವಲಿಗೆ ನಿಲ್ಲುತ್ತಲೇ ಸೇಡು ತೀರಿಸಿಕೊಳ್ಳೋ ಕಥೆಯ ಹೊಳಹೂ ಕೂಡಾ ಈ ಮೂಲಕವೇ ಪ್ರೇಕ್ಷಕರನ್ನು ತಲುಪಿಕೊಂಡಿದೆ. ಇದರ ಆಚೀಚೆಗೆ ಥ್ರಿಲ್ಲರ್ ಸ್ಟೋರಿ ಇರುವ ಲಕ್ಷಣಗಳೊಂದಿಗೇ ಮೇಕಿಂಗ್‍ನಲ್ಲಿಯೂ ಈ ಟ್ರೈಲರ್ ಗಮನ ಸೆಳೆಯುವಂತಿದೆ.

    ಆಗಾಗ ಸದ್ದು ಮಾಡುತ್ತಾ ಸೈಲೆಂಟಾಗುತ್ತಿದ್ದ ಈ ಚಿತ್ರ ಕೊಂಚ ತಡವಾಗಿದೆ ಎಂಬ ಕಂಪ್ಲೇಂಟು ಪ್ರೇಕ್ಷಕರಲ್ಲಿತ್ತು. ಆದರೆ ಈಗ ಬಿಡುಗಡೆಯಾಗಿರೋ ಟ್ರೈಲರ್ ಆ ಮುನಿಸನ್ನು ಮರೆಯಾಗಿಸಿ ಚಿತ್ರ ಬಿಡುಗಡೆಯಾಗೋದನ್ನ ತುದಿಗಾಲಲ್ಲಿ ನಿಂತು ಕಾಯುವಂತೆ ಮಾಡುವಲ್ಲಿಯೂ ಶಕ್ತವಾಗಿದೆ. ಈ ಮೂಲಕ ನಿರ್ದೇಶಕ ರಾಜ್ ಪತ್ತಿಪಾಟಿ ಭರವಸೆ ಹುಟ್ಟಿಸಿದ್ದಾರೆ. ಬಹುಶಃ ಮಾಸ್ತಿಗುಡಿ ದುರಂತದಲ್ಲಿ ಸಾವಿಗೀಡಾಗಿದ್ದ ಅನಿಲ್ ನಟಿಸಿರೋ ಕಡೆಯ ಚಿತ್ರವಿದು. ಈ ಮೂಲಕ ಉದಯ್ ಅವರನ್ನು ಅಬ್ಬರದ ಪಾತ್ರವೊಂದರ ಮೂಲಕ ಕಣ್ತುಂಬಿಕೊಳ್ಳೋ ಸದಾವಕಾಶವೂ ಪ್ರೇಕ್ಷಕರಿಗೆ ಸಿಕ್ಕಿದೆ.

    ಒಟ್ಟಾರೆಯಾಗಿ ಈ ಟ್ರೈಲರ್ ಮೂಲಕವೇ ಕಾಣದಂತೆ ಮಾಯವಾದನು ಚಿತ್ರ ಮತ್ತೆ ಜನಮಾನಸ ತಲುಪಿಕೊಂಡಿದೆ. ಬಿಡುಗಡೆಯಾದ ಕ್ಷಣದಿಂದಲೇ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಾ ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡುತ್ತಿದೆ. ಇದನ್ನು ಕಂಡು ಪ್ರೇಕ್ಷಕರು ಅದೆಷ್ಟು ಖುಷಿಗೊಂಡಿದ್ದಾರೆಂಬುದಕ್ಕೆ ಯೂ ಟ್ಯೂಬ್‍ನಲ್ಲಿ ಹರಿದು ಬರುತ್ತಿರೋ ಕಮೆಂಟುಗಳಿಗಿಂತಲೂ ಬೇರೆ ಪುರಾವೆ ಬೇಕಿಲ್ಲ.

    https://youtu.be/GNaimyGV1m4

  • ಕಾಣದಂತೆ ಮಾಯವಾದನು: ಪ್ರೋಮೋ ಮೂಲಕ ವಿಶಿಷ್ಟ ಪಾತ್ರಗಳ ದರ್ಶನ!

    ಕಾಣದಂತೆ ಮಾಯವಾದನು: ಪ್ರೋಮೋ ಮೂಲಕ ವಿಶಿಷ್ಟ ಪಾತ್ರಗಳ ದರ್ಶನ!

    ಬೆಂಗಳೂರು: ರಾಜ್ ಪತ್ತಿಪಾಟಿ ನಿರ್ದೇಶನದ ಕಾಣದಂತೆ ಮಾಯವಾದನು ಎಂಬ ಚಿತ್ರವೀಗ ಮತ್ತೆ ಸುದ್ದಿ ಕೇಂದ್ರದಲ್ಲಿದೆ. ತನ್ನ ವಿಶಿಷ್ಟವಾದ ಟೈಟಲ್ ಮತ್ತು ಕಥೆಯ ಸುಳಿವಿನೊಂದಿಗೇ ಪ್ರೇಕ್ಷಕರ ಆಸಕ್ತಿಯನ್ನು ತನ್ನತ್ತ ಸೆಳೆದುಕೊಂಡಿತ್ತು. ಇದೀಗ ಚಿತ್ರತಂಡ ಒಂದು ಕ್ಯಾರೆಕ್ಟರ್ ಪ್ರೋಮೋವನ್ನು ಬಿಡುಗಡೆಗೊಳಿಸಿದೆ. ಈ ಮೂಲಕ ಕೊಂಚ ತಡವಾದರೂ ಕೂಡಾ ಕಾಣದಂತೆ ಮಾಯವಾದನು ಚಿತ್ರ ಮತ್ತಷ್ಟು ನಿರೀಕ್ಷೆ ಮೂಡಿಸಿಕೊಂಡಿದೆ.

    ಸಿಂಧು ಲೋಕನಾಥ್ ಮತ್ತು ವಿಕಾಸ್ ಮುಖ್ಯಭೂಮಿಕೆಯಲ್ಲಿರೋ ಈ ಚಿತ್ರದಲ್ಲಿ ಅಚ್ಯುತ್ ಕುಮಾರ್, ಸೀತಾ ಕೋಟಿ, ಭಜರಂಗಿ ಲೋಕಿ, ರಾಘವ್ ಉದಯ್, ಗೌತಮ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್ ಪರಿಚಯ ಮಾಡಿಕೊಡುವಂತಿರುವ ಈ ಕ್ಯಾರೆಕ್ಟರ್ ಪ್ರೋಮೋಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿವೆ.

    ರಾಜ್ ಪತ್ತಿಪಾಟಿ ನಿರ್ದೇಶನ ಮಾಡಿರೋ ಈ ಚಿತ್ರವನ್ನು ಸೋಮ್ ಸಿಂಗ್ ನಿರ್ಮಾಣ ಮಾಡಿದ್ದಾರೆ. ಪುಷ್ಪಾ ಸೋಮ್ ಸಿಂಗ್ ಕೂಡಾ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಈ ಚಿತ್ರದಲ್ಲಿ ಪ್ರತಿ ಪಾತ್ರಗಳೂ ಕೂಡಾ ಭಿನ್ನವಾಗಿದೆ ಎಂಬುದನ್ನೂ ಕೂಡಾ ಈ ಕ್ಯಾರೆಕ್ಟರ್ ಪ್ರೋಮೋ ಜಾಹೀರು ಮಾಡಿದೆ. ಜಯಮ್ಮನ ಮಗ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿಕಾಸ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಸಿಂಧೂ ಲೋಕನಾಥ್ ಇಲ್ಲಿ ಎನ್‍ಜಿಓನಲ್ಲಿ ಕೆಲಸ ಮಾಡುವ ಹುಡುಗಿ ವಂದನಾ ಆಗಿ ನಟಿಸಿದ್ದಾರೆ.

    ಈ ಹಿಂದೆ ಮಫ್ತಿ ಚಿತ್ರದ ಪಾತ್ರದ ಮೂಲಕ ನಟರಾಗಿ ಬಹು ಬೇಡಿಕೆ ಪಡೆದುಕೊಂಡಿರೋ ಬಾಬು ಹಿರಣ್ಣಯ್ಯ ಕೂಡಾ ಕಾಣದಂತೆ ಮಾಯವಾದನು ಚಿತ್ರದಲ್ಲಿ ವಿಶಿಷ್ಟ ಪಾತ್ರದಲ್ಲಿ ನಟಿಸಿದ್ದಾರಂತೆ. ವಿಶೇಷವೆಂದರೆ ಈ ಚಿತ್ರ ಮಫ್ತಿಗಿಂತಲೂ ಮೊದಲೇ ಆರಂಭವಾಗಿತ್ತು. ಒಂದಷ್ಟು ಸುದೀರ್ಘ ಸಮಯ ಹಿಡಿದರೂ ಇದೀಗ ಈ ಚಿತ್ರ ಅಚ್ಚುಕಟ್ಟಾಗಿಯೇ ತಯಾರಾಗಿ ಬಿಡುಗಡೆಗೆ ರೆಡಿಯಾಗಿದೆ.