Tag: ಸಿಎಂ ಅಮರಿಂದರ್ ಸಿಂಗ್

  • ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    ಚಂಡೀಗಢ: ಪಂಜಾಬ್‍ನ ಲೂಧಿಯಾನದಲ್ಲಿ ನ್ಯಾಯಾಲಯದ ಆವರಣದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕಟ್ಟಡದ ಎರಡನೇ ಮಹಡಿಯಲ್ಲಿರುವ ಬಾತ್‍ರೂಮ್‍ನಲ್ಲಿ ಮಧ್ಯಾಹ್ನ 12:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಬಾತ್‍ರೂಮ್ ಗೋಡೆಗಳಿಗೆ ಹಾನಿಯಾಗಿದೆ ಮತ್ತು ಸಮೀಪದ ಕೋಣೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ. ಇದನ್ನೂ ಓದಿ: ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

    ಇದೀಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾ ನ್ಯಾಯಾಲಯ ಲುಧಿಯಾನ ನಗರದ ಹೃದಯಭಾಗದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಸಮೀಪದಲ್ಲಿದೆ.

    ಈ ಘಟನೆ ಸಂಬಂಧ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದು, ಈ ವಿಚಾರವಾಗಿ ಕೂಲಂಕಷವಾಗಿ ತನಿಖೆ ನಡೆಸುವಂತೆ ಪಂಜಾಬ್ ಪೊಲೀಸರಿಗೆ ಆದೇಶಿಸಿದ್ದಾರೆ. ಇದನ್ನೂ ಓದಿ:  ಜಾಹೀರಾತಿನಲ್ಲಿ ಸಹಾಯವಾಣಿ ನಂಬರ್ ತಪ್ಪಾಗಿದ್ದಕ್ಕೆ ಮಹಿಳೆಗೆ ಎಡಬಿಡದೇ ಬಂತು 4,500 ಫೋನ್‌ ಕಾಲ್‌!

    ಲುಧಿಯಾನ ಕೋರ್ಟ್ ಆವರಣದಲ್ಲಿ ಸಂಭವಿಸಿದ ಸ್ಫೋಟ ವಿಚಾರ ಗೊಂದಲನ್ನುಂಟು ಮಾಡಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಬಗ್ಗೆ ಕೇಳಿ ದುಃಖವಾಗಿದೆ ಮತ್ತು ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಈ ಕುರಿತಂತೆ ಪಂಜಾಬ್ ಪೊಲೀಸರು ಸೂಕ್ತ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್‌ ಬಗ್ಗೆ ಸಿಕ್ತು ಗುಡ್‌ ನ್ಯೂಸ್‌ – ಪ್ರಾಥಮಿಕ ಅಧ್ಯಯನ ವರದಿಗಳು ಬಹಿರಂಗ

    ಅಮರಿಂದರ್ ಸಿಂಗ್ ಅವರು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಪಡೆಗಳಿಂದ ರಾಜ್ಯಕ್ಕೆ ಬೆದರಿಕೆ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ರಕ್ಷಣೆಗಾಗಿ 25 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಡ್ರೋನ್ ವಿರೋಧಿ ಗ್ಯಾಜೆಟ್‍ಗಳನ್ನು ಗಡಿ ಭದ್ರತಾ ಪಡೆಗೆ (ಬಿಎಸ್‍ಎಫ್) ಕೋರಿದ್ದಾರೆ.

  • ಪಂಜಾಬ್‍ನಲ್ಲಿ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ

    ಪಂಜಾಬ್‍ನಲ್ಲಿ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ

    – ಬೆಳಗ್ಗೆ 7ರಿಂದ 11ರ ವರೆಗೆ ಮಾತ್ರ ಸಂಚಾರಕ್ಕೆ ಅವಕಾಶ

    ಚಂಡೀಗಢ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡುವುದಕ್ಕೂ ಮುನ್ನವೇ ಪಂಜಾಬ್ ಸರ್ಕಾರ ಲಾಕ್‍ಡೌನ್ ವಿಸ್ತರಣೆ ಕುರಿತು ನಿರ್ಧಾರ ಕೈಗೊಂಡಿದೆ.

    ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದು, ಇನ್ನೂ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಕುರಿತ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಲಾಕ್‍ಡೌನ್ ಕಟ್ಟುನಿಟ್ಟಾಗಿ ಜಾರಿಯಾಗಲಿದ್ದು, ಪ್ರತಿ ದಿನ ಬೆಳಗ್ಗೆ 7ರಿಂದ 11ರ ವರೆಗೆ ಮಾತ್ರ ಜನರ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಈ ಸಮಯದಲ್ಲಿ ಅಂಗಡಿಗಳಿಗೆ ಬಂದು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ಅಂಗಡಿಗಳು ಸಹ ಈ ಸಮಯದಲ್ಲಿ ಮಾತ್ರ ತೆರೆದಿರುತ್ತವೆ ಎಂದು ತಿಳಿಸಿದ್ದಾರೆ.

    ಲಾಕ್‍ಡೌನ್ ವಿಸ್ತರಣೆ ಕುರಿತು ಸಹ ನಿರ್ಧಾರ ಕೈಗೊಂಡಿದ್ದು, ಮೇ 3ರ ನಂತರವೂ ಎರಡು ವಾರಗಳ ಕಾಲ ಲಾಕ್‍ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ. ಕೊರೊನಾ ಹರಡುವಿಕೆ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಮರಿಂದರ್ ಸಿಂಗ್ ಮಾಹಿತಿ ನೀಡಿದ್ದಾರೆ.

    ಪಂಜಾಬ್‍ನಲ್ಲಿ ಇಂದು 9 ಹೊಸ ಪ್ರಕರಣಗಳು ಸೇರಿ ಈ ವರೆಗೆ ಒಟ್ಟು 322 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 71 ಜನ ಗುಣಮುಖರಾಗಿದ್ದಾರೆ. ಇಂದು ಒಬ್ಬರು ಮೃತಪಟ್ಟಿದ್ದು, ಒಟ್ಟು 19 ಜನ ಸಾವನ್ನಪ್ಪಿದ್ದಾರೆ.

  • ‘ನಿಮ್ಮಿಂದ ಆಗದಿದ್ರೆ, ನಮಗೆ ಬಿಡಿ’ – ಇಮ್ರಾನ್ ಖಾನ್ ಹೇಳಿಕೆಗೆ ಪಂಜಾಬ್ ಸಿಎಂ ತಿರುಗೇಟು

    ‘ನಿಮ್ಮಿಂದ ಆಗದಿದ್ರೆ, ನಮಗೆ ಬಿಡಿ’ – ಇಮ್ರಾನ್ ಖಾನ್ ಹೇಳಿಕೆಗೆ ಪಂಜಾಬ್ ಸಿಎಂ ತಿರುಗೇಟು

    ಚಂಡೀಗಢ: ಪುಲ್ವಾಮಾ ದಾಳಿಯಲ್ಲಿ ನಮ್ಮ ಪಾತ್ರ ಯಾವುದೇ ಇಲ್ಲ. ಸಾಕ್ಷ್ಯಾಧಾರಗಳು ಇಲ್ಲದೇ ಭಾರತ ಆರೋಪ ಮಾಡುತ್ತಿದೆ ಎಂದು ಆರೋಪಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತಿರುಗೇಟು ನೀಡಿದ್ದಾರೆ.

    ಭಯೋತ್ಪಾದಕರನ್ನು ಮಟ್ಟ ಹಾಕಲು ನಿಮ್ಮಿಂದ ಆಗದಿದ್ದರೆ ನಮಗೇ ಬಿಡಿ ನಾವು ಮಟ್ಟ ಹಾಕುತ್ತೇವೆ. ಅದರಲ್ಲೂ ಉಗ್ರ ಮಸೂದ್ ಅಜರ್ ಪಾಕಿಸ್ತಾನದ ಬಹವಾಲ್‍ಪುರದಲ್ಲಿ ಇದ್ದಾನೆ. ಆತನನ್ನು ಸೆರೆಹಿಡಿಯಲು ಆಗದಿದ್ದರೆ ಹೇಳಿ ನಾವೇ ಸೆರೆ ಹಿಡಿಯುತ್ತೇವೆ ಎಂದು ಸವಾಲು ಎಸೆದಿದ್ದಾರೆ.

    ಪುಲ್ವಾಮಾ ದಾಳಿ ನಡೆಸಿರುವ ಕುರಿತು ಜೈಶ್-ಇ-ಮಹಮದ್ ಸಂಘಟನೆ ಹೊಣೆ ಹೊತ್ತುಕೊಂಡಿದೆ. ಉಗ್ರ ಸಂಘಟನೆಯ ಸಂಚುಕೋರ ಮಸೂದ್ ಅಜರ್ ಪಾಕಿಸ್ತಾನದಲ್ಲೇ ಇದ್ದಾನೆ. ಅಲ್ಲಿಯೇ ಆತನನ್ನು ಬಂಧಿಸಿ. ಇಲ್ಲವಾದರೆ ನಮಗೆ ಹೇಳಿ. ಆತ ಐಸಿಸ್ ಸಹಾಯದಿಂದ ಅಲ್ಲಿಂದಲೇ ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿದ್ದಾನೆ. ಈ ಹಿಂದೆ ಮುಂಬೈ ದಾಳಿ ವೇಳೆ ನೀಡಿದ ಸಾಕ್ಷಿಗಳ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ್ದು, ಈಗ ಹೇಳಿದ್ದನ್ನ ಮಾಡಿ ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: ಸಾಕ್ಷ್ಯ ನೀಡಿದ್ರೆ ಕ್ರಮ, ಯುದ್ಧ ನಡೆದರೆ ಉತ್ತರ ಕೊಡ್ತೀವಿ: ಭಾರತವನ್ನು ಕೆಣಕಿದ ಇಮ್ರಾನ್ ಖಾನ್

    ಪಂಜಾಬ್ ಸಿಎಂ ಬೆನ್ನಲ್ಲೇ ಜಮ್ಮು ಕಾಶ್ಮೀರದ ಮಾಜಿ ಸಿಎಂ ಪಿಡಿಪಿ ಪಕ್ಷದ ಮುಖ್ಯಸ್ಥೆ ಮೊಹಬೂಬಾ ಮುಫ್ತಿ ಅವರು ಕೂಡ ಇಮ್ರಾನ್ ಖಾನ್ ಹೇಳಿಕೆಗೆ ಕಿಡಿಕಾರಿದ್ದಾರೆ. ದುಃಖದ ಸಮಯದಲ್ಲಿ ನಮ್ಮನ್ನು ಧರ್ಮ, ಗುರುತಿನ ಹೆಸರಿನಲ್ಲಿ ಹಿಂದು ವರ್ಸಸ್ ಮುಸ್ಲಿಂ, ಜಮ್ಮು ವರ್ಸಸ್ ಕಾಶ್ಮೀರ ಎಂದು ವಿಭಜಿಸಲು ಸಾಧ್ಯವಿಲ್ಲ. ಅಂತಿಮವಾಗಿ ಕೊಡಲಿಯನ್ನು ಮರೆಯಬಹುದೇ ವಿನಃ ಮರವನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡೋಪ್ ಟೆಸ್ಟ್‌ಗೆ  ನಾನು ರೆಡಿ- ಆಪ್ ಮುಖಂಡನ ಚಾಲೆಂಜ್ ಸ್ವೀಕರಿಸಿದ ಪಂಜಾಬ್ ಸಿಎಂ

    ಡೋಪ್ ಟೆಸ್ಟ್‌ಗೆ ನಾನು ರೆಡಿ- ಆಪ್ ಮುಖಂಡನ ಚಾಲೆಂಜ್ ಸ್ವೀಕರಿಸಿದ ಪಂಜಾಬ್ ಸಿಎಂ

    ಚಂಡೀಗಢ: ಸರ್ಕಾರಿ ನೌಕರರಿಗೆ ಡೋಪ್ ಟೆಸ್ಟ್ ಕಡ್ಡಾಯಗೊಳಿಸಿ ಆದೇಶ ನೀಡಿದ ಬಳಿಕ ನಾನು ಪರೀಕ್ಷೆ ಮಾಡಿಸಿಕೊಳ್ಳಲು ಸಿದ್ಧ ಎಂದು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹೇಳಿದ್ದಾರೆ.

    ಪಂಜಾಬ್ ರಾಜ್ಯವನ್ನು ಡಗ್ಸ್ ಮುಕ್ತ ರಾಜ್ಯವಾಗಿ ರೂಪಿಸಲು ಪಣತೊಟ್ಟಿರುವ ಸಿಎಂ ಅಮರಿಂದರ್ ಸಿಂಗ್ ಕಳೆದ ಎರಡು ದಿನಗಳ ಹಿಂದೆ ಎಲ್ಲಾ ಸರ್ಕಾರಿ ನೌಕರರಿಗೆ ಡೋಪಿಂಗ್ ಟೆಸ್ಟ್ ಕಡ್ಡಾಯ ಮಾಡಿ ಆದೇಶ ನೀಡಿದ್ದರು. ಆದರೆ ಸರ್ಕಾರದ ಈ ಆದೇಶಕ್ಕೆ ವಿರೋಧ ಪಕ್ಷದ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.

    ಸದ್ಯ ತಾವು ಡೋಪಿಂಗ್ ಪರೀಕ್ಷೆ ಎದುರಿಸಲು ಸಿದ್ಧ ಎಂದು ವಿರೋಧಿ ಪಕ್ಷಗಳಿಗೆ ಟಾಂಗ್ ನೀಡಿರುವ ಸಿಎಂ ಅಮರಿಂದರ್ ಸಿಂಗ್, ಸರ್ಕಾರಿ ನೌಕರರು ಈ ಪರೀಕ್ಷೆ ಎದುರಿಸಲು ನಾನು ಮೊದಲು ಡೋಪಿಂಗ್ ಪರೀಕ್ಷೆ ಮಾಡಿಕೊಳ್ಳುತ್ತೇನೆ. ಈ ಮೂಲಕ ನೌಕರರಲ್ಲಿ ಇರುವ ಭಾವನೆಯನ್ನು ದೂರ ಮಾಡಲು ಯತ್ನಿಸಲು ಸಿದ್ಧ ಎಂದು ಹೇಳಿದ್ದಾರೆ.

    ಇದೇ ವೇಳೆ ರಾಜ್ಯದ ರಾಜಕೀಯ ಮುಖಂಡರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ಇದುವರೆಗೂ ಯಾವೊಬ್ಬ ರಾಜಕೀಯ ನಾಯಕರು ಸಹ ಸ್ವತಃ ಡೋಪಿಂಗ್ ಪರೀಕ್ಷೆಗೆ ಒಳಗಾಗುವುದಾಗಿ ಕೈ ಎತ್ತಿಲ್ಲ. ನನ್ನ ಬಳಿಕವಾದರೂ ಶಾಸಕರು ಪರೀಕ್ಷೆ ಎದುರಿಸಲು ಸಿದ್ಧವಾದರೆ ಅವರನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಇದಕ್ಕೂ ಮುನ್ನ ಸ್ವತಃ ಡೋಪ್ ಪರೀಕ್ಷೆಗೆ ಒಳಗಾಗಿದ್ದ ಆಪ್ ನಾಯಕ ಅಮನ್ ಆರೋರಾ ನೈತಿಕ ಮೌಲ್ಯದ ಮೇಲೆ ಪರೀಕ್ಷೆ ಎದುರಿಸಿದ್ದೇನೆ. ಸಾಧ್ಯವಾದರೆ ಸಿಎಂ ಹಾಗೂ ಆಡಳಿತ ಪಕ್ಷದ ಶಾಸಕರು ಪರೀಕ್ಷೆ ಎದುರಿಸಲಿ ಎಂದು ಚಾಲೆಂಜ್ ಮಾಡಿದ್ದರು. ಅಲ್ಲದೇ ಸರ್ಕಾರದ ನೀತಿಯ ವಿರುದ್ಧ ನನಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಇದು ಕೇವಲ ಸರ್ಕಾರಿ ನೌಕರರಿಗೆ ಮಾತ್ರ ಏಕೆ ಅನ್ವಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

    ಏನಿದು ಡೋಪ್ ಟೆಸ್ಟ್ ಆದೇಶ: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ಕಳ್ಳಸಾಗಣೆ ಕುರಿತು ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿ, ಡ್ರಗ್ಸ್ ಕಳ್ಳಸಾಗಾಣೆ ಮಾಡುವವರಿಗೆ ಮರಣ ದಂಡನೆ ವಿಧಿಸುವ ನಿಯಮವನ್ನು ಜಾರಿಗೆ ತರುವ ಕುರಿತು ಎಚ್ಚರಿಕೆ ನೀಡಿದ್ದರು. ಆದರೆ ಆದಾದ ಬಳಿಕ ಉಂಟಾದ ಬೆಳವಣಿಗೆಯಲ್ಲಿ ಸರ್ಕಾರಿ ನೌಕರರಿಗೆ ಎಲ್ಲರಿಗೂ ಡೋಪಿಂಗ್ ಪರೀಕ್ಷೆ ಕಡ್ಡಾಯಗೊಳಿಸಿದ್ದರು. ಪ್ರಮುಖವಾಗಿ ಸೇವೆಯ ವಿವಿಧ ಹಂತಗಳಲ್ಲಿ ಇದನ್ನು ನಿರಂತವಾಗಿ ಸಲ್ಲಿಸಬೇಕು ಎಂದು ತಿಳಿಸಿದ್ದರು. ಅಲ್ಲದೇ ಸರ್ಕಾರಿ ಸೇವೆ ಸೇರುವ ಹಾಗೂ ಭಡ್ತಿ ವೇಳೆಯೂ ಡೋಪಿಂಗ್ ಪರೀಕ್ಷೆ ಕಡ್ಡಾಯಗೊಳಿಸಿದ್ದರು.