Tag: ಸಿಎಂ ಚಂದ್ರಬಾಬು ನಾಯ್ಡು

  • ತಂಪು ಪಾನೀಯ ನೀಡಿ ಅತ್ಯಾಚಾರ: 14ರ ಬಾಲೆ ಈಗ 3 ತಿಂಗಳ ಗರ್ಭಿಣಿ

    ತಂಪು ಪಾನೀಯ ನೀಡಿ ಅತ್ಯಾಚಾರ: 14ರ ಬಾಲೆ ಈಗ 3 ತಿಂಗಳ ಗರ್ಭಿಣಿ

    ಹೈದರಾಬಾದ್: ತೆಲಗು ದೇಶಂ ಪಾರ್ಟಿ (ಟಿಡಿಪಿ) ಕಾರ್ಯಕರ್ತನೊಬ್ಬ 14 ವರ್ಷದ ಬಾಲಕಿಗೆ ತಂಪು ಪಾನೀಯದ ಆಮಿಷ ಒಡ್ಡಿ ನಿರಂತರ ಅತ್ಯಾಚಾರ ಎಸಗಿದ್ದು, ಸದ್ಯ ಆಕೆ ಈಗ ಮೂರು ತಿಂಗಳು ಗರ್ಭಿಣಿಯಾಗಿರುವ ಪ್ರಕರಣ ಆಂಧ್ರಪ್ರದೇಶದ ಗುಂಟೂರ್ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಅತ್ಯಾಚಾರ ಸಂತ್ರಸ್ತ ಬಾಲಕಿಯು ಕೆಲವು ದಿನಗಳಿಂದ ಪ್ರಜ್ಞೆ ತಪ್ಪಿ ಬೀಳುತ್ತಿದ್ದಳು. ಅನುಮಾನ ಬಂದ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

    ಪೋಷಕರು ಆಕೆಯನ್ನು ವಿಚಾರಿಸಿದಾಗ, ಟಿಡಿಪಿ ಕಾರ್ಯಕರ್ತನೊಬ್ಬ ಅತ್ಯಾಚಾರ ಮಾಡಿ 100 ರೂಪಾಯಿ ನೀಡಿ, ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿದ್ದ ಎಂದು ಬಾಯಿಬಿಟ್ಟಿದ್ದಾಳೆ.

    ಆರೋಪಿಯು ಮಾಬುಬ್ ವಾಲಿ(43) ಆಗಿದ್ದು, ಬಾಲಕಿಯ ನೆರೆಮನೆಯವನು. ಅತ್ಯಾಚಾರ ಮಾಡಿದ ನಂತರ, ನಿತ್ಯವೂ ಆಕೆಗೆ ತಂಪು ಪಾನೀಯ ಆಮಿಷ ಒಡ್ಡಿ ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗುತಿದ್ದ.

    ಆರೋಪಿಯು ಸ್ಥಳೀಯ ಸಂಸ್ಥೆಯ ಮುಖ್ಯಸ್ಥನಾಗಿದ್ದು, ಹೆಂಡತಿಯಿಂದ ವಿಚ್ಛೇದನ ಪಡೆದಿದ್ದಾನೆ. ಅವನಿಗೆ ಮಕ್ಕಳು ಮೊಮ್ಮಕ್ಕಳಿದ್ದಾರೆ. ಕೆಲವು ದಿನಗಳ ಹಿಂದೆ ನಮ್ಮ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದ. ಆದರೆ ಇಂತಾ ಹೀನ ಕೃತ್ಯ ಎಸಗುತ್ತಾನೆಂದು ನಮಗೆ ತಿಳಿದಿರಲಿಲ್ಲ ಎಂದು ಸಂತ್ರಸ್ತೆಯ ಅಕ್ಕ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

    ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಅತ್ಯಾಚಾರಿಯನ್ನು ಸಾರ್ವಜನಿಕರ ಮುಂದೆ ನೇಣು ಹಾಕಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರತಿಕ್ರಿಯೆ ನೀಡಿದ್ದಾರೆ.

    ಸದ್ಯ ಬಾಲಕಿಗೆ ಗುರಾಜಾಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯಬಿದ್ದರೆ ಆಕೆಯನ್ನು ಗುಂಟೂರು ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

  • ಪ್ರತ್ಯೇಕ ದಕ್ಷಿಣ ರಾಷ್ಟ್ರ ರಚನೆಗೆ ನನ್ನ ಸ್ವಾಗತವಿದೆ: ಡಿಎಂಕೆ ನಾಯಕ ಎಂಕೆ ಸ್ಟಾಲಿನ್

    ಪ್ರತ್ಯೇಕ ದಕ್ಷಿಣ ರಾಷ್ಟ್ರ ರಚನೆಗೆ ನನ್ನ ಸ್ವಾಗತವಿದೆ: ಡಿಎಂಕೆ ನಾಯಕ ಎಂಕೆ ಸ್ಟಾಲಿನ್

    ಚೆನ್ನೈ: ಪ್ರತ್ಯೇಕ ದ್ರಾವಿಡ ರಾಷ್ಟ್ರ ಸಂಭವಿಸಿದಲ್ಲಿ ಇದಕ್ಕೆ ತಮ್ಮ ಸ್ವಾಗತವಿದ್ದು, ಅಂತಹ ಪರಿಸ್ಥಿತಿ ಬರುತ್ತದೆಂದು ಆಶಿಸುತ್ತೇನೆ ಎಂದು ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಹೇಳಿದ್ದಾರೆ.

    ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಪ್ರತಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಈ ವೇಳೆ ಪ್ರತ್ಯೇಕ ದ್ರಾವಿಡ ರಾಷ್ಟ್ರ ಬೇಡಿಕೆ ಪ್ರಶ್ನೆಗೆ ಉತ್ತರಿಸಿ ದಕ್ಷಿಣ ಐದು ರಾಜ್ಯಗಳನ್ನು ಒಳಗೊಂಡ ದ್ರಾವಿಡ ರಾಷ್ಟ್ರ ಸ್ಥಾಪನೆಗೆ ನಮ್ಮ ಬೆಂಬಲವಿದೆ, ಅಂತಹ ಪರಿಸ್ಥಿತಿ ಬರುತ್ತದೆಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

    ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ತಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರ ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ನೇತೃತ್ವದ ಎನ್‍ಡಿಎ ಒಕ್ಕೂಟದಿಂದ ಹೊರನಡೆದಿದ್ದಾರೆ. ಈ ವೇಳೆಯಲ್ಲೇ ಎಂಕೆ ಸ್ಟಾಲಿನ್ ಪ್ರತ್ಯೇಕ ದ್ರಾವಿಡ ನಾಡು ಬೇಡಿಕೆಗೆ ಬೆಂಬಲ ಸೂಚಿಸಿದ್ದಾರೆ.

    ಇದೇ ವೇಳೆ ತಮಿಳುನಾಡು ಸಿಎಂ ಹಾಗೂ ಎಐಎಂಡಿಕೆ ನಾಯಕ ಪಳನಿಸ್ವಾಮಿ ಅವರಿಗೆ ಪತ್ರ ಬರೆದಿರುವ ಕುರಿತು ತಿಳಿಸಿರುವ ಅವರು, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಮಂಡಿಸಲಿರುವ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಸೂಚಿಸಲು ಮನವಿ ಮಾಡಿರುವುದಾಗಿ ತಿಳಿಸಿದರು. ಎಐಎಂಡಿಕೆ ಪಕ್ಷವು ಲೋಕಸಭೆಯಲ್ಲಿ ಮೂರನೇ ಅತೀ ದೊಡ್ಡ ಪಕ್ಷವಾಗಿದೆ.

    ದ್ರಾವಿಡ ನಾಡು ರಾಷ್ಟ್ರ ಕಲ್ಪನೆಯೂ ತಮಿಳು, ಮಲೆಯಾಳಂ, ತೆಲುಗು ಮತ್ತು ಕನ್ನಡ ಬಾಷೆ ಮಾತನಾಡುವ ರಾಷ್ಟ್ರಗಳ ಮಾತೃಭೂಮಿಯ ಕಲ್ಪನೆಯಾಗಿದೆ. 1940 ರಲ್ಲಿ ತಮಿಳುನಾಡಿನ ಇವಿ ರಾಮಸ್ವಾಮಿ ಪೆರಿಯಾರ್ ಅವರು ಈ ಕಲ್ಪನೆಯನ್ನು ರೂಪಿಸಿದರು. ಈ ವೇಳೆ ತಮಿಳರ ಆತ್ಮಾಭಿಮಾನ ಎಂಬ ಹೆಸರಿನಲ್ಲಿ ಆಂದೋಲನವನ್ನು ಮುನ್ನೆಡೆಸಿ `ದ್ರಾವಿಡ ಮುನೇತ್ರ ಕಳಗಂ'(ಡಿಎಂಕೆ) ಪಕ್ಷವನ್ನು ಸ್ಥಾಪಿಸಿದ್ದರು. ಡಿಎಂಕೆ ಪಕ್ಷದ ಸ್ಥಾಪಕ ತತ್ವಗಳಲ್ಲಿ ಪ್ರತ್ಯೇಕ ದ್ರಾವಿಡ ರಾಷ್ಟ್ರ ನಿರ್ಮಾಣವೂ ಮೂಲ ಅಂಶವಾಗಿದೆ.