Tag: ಸಿಎಂ ಪ್ರಮೋದ್ ಸಾವಂತ್

  • ಗೋವಾದಲ್ಲಿ ಮೇ 31 ರವರೆಗೂ ಲಾಕ್‍ಡೌನ್ ವಿಸ್ತರಣೆ

    ಗೋವಾದಲ್ಲಿ ಮೇ 31 ರವರೆಗೂ ಲಾಕ್‍ಡೌನ್ ವಿಸ್ತರಣೆ

    ಪನಾಜಿ: ಕೋವಿಡ್-19 ಎರಡನೇ ಅಲೆಯಿಂದಾಗಿ ರ್ಯಾಜ್ಯವ್ಯಾಪ್ತಿ ಲಾಕ್‍ಡೌನ್‍ನನ್ನು ಮೇ 31 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶುಕ್ರವಾರ ತಿಳಿಸಿದ್ದಾರೆ.

    ಗೋವಾದಲ್ಲಿ ಲಾಕ್‍ಡೌನ್ ವಿಸ್ತರಣೆಯ ಕುರಿತಾಗಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಾವು ರಾಜ್ಯದಲ್ಲಿ ಕಫ್ರ್ಯೂವನ್ನು ಮೇ 31 ರವರೆಗೂ ವಿಸ್ತರಿಸುತ್ತಿದ್ದೇವೆ ಹಾಗೂ ಈ ಮುನ್ನ ಇದ್ದ ನಿಯಮಗಳು ಇದ್ದಂತೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

    ಕಫ್ರ್ಯೂ ವೇಳೆ ಅಗತ್ಯ ವಸ್ತುಗಳು, ದಿನಸಿ ಅಂಗಡಿ, ಮದ್ಯದಂಗಡಿಗಳನ್ನು ಬೆಳಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ತೆರೆಯಲಾಗುತ್ತದೆ ಮತ್ತು ಮೆಡಿಕಲ್ ಶಾಪ್ ಮತ್ತು ರೆಸ್ಟೋರೆಂಟ್‍ಗಳು ಬೆಳಗ್ಗೆ 7 ರಿಂದ ಸಂಜೆ 7ರವರೆಗೂ ಕಾರ್ಯನಿರ್ವಹಿಸಲಿದೆ.

  • ಗೋವಾದಲ್ಲಿ ಮಹಾಮಾರಿ ಕೊರೊನಾಗೆ ಮೊದಲ ಬಲಿ

    ಗೋವಾದಲ್ಲಿ ಮಹಾಮಾರಿ ಕೊರೊನಾಗೆ ಮೊದಲ ಬಲಿ

    ಪಣಜಿ: ಕಡಲ ತೀರದ ರಾಜ್ಯ ಗೋವಾದಲ್ಲಿ ಮೊದಲ ಕೊರೊನಾ ಸಾವಿನ ಪ್ರಕರಣ ವರದಿಯಾಗಿದೆ. ಸೋಮವಾರ ಕೋವಿಡ್-19 ಪಾಸಿಟಿವ್ ದೃಢವಾಗಿದ್ದ 85 ವರ್ಷದ ವೃದ್ಧ ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.

    ಕೋವಿಡ್ ಸಾವಿನ ಕುರಿತು ಟ್ವೀಟ್ ಮಾಡಿದ್ದ ವಿಶ್ವಜಿತ್ ರಾಣೆ, ಮೊದಲು ಸಾವನ್ನಪ್ಪಿದ್ದು ವೃದ್ಧೆ ಎಂದು ಹೇಳಿದ್ದರು. ಆದರೆ ಬಳಿಕ ಸ್ಪಷ್ಟನೆ ನೀಡಿ ವೃದ್ಧ ಸಾವನ್ನಪ್ಪಿರುವುದಾಗಿ ಸ್ಪಷ್ಟಪಡಿಸಿದರು. ಮೃತ ವೃದ್ಧ ದಕ್ಷಿಣ ಗೋವಾ ಜಿಲ್ಲೆಯ ಸತ್ತಾರಿ ತಾಲೂಕಿನ ಮೋರ್ಲೆಮ್ ಗ್ರಾಮದ ನಿವಾಸಿ ಎಂಬ ಮಾಹಿತಿ ಲಭಿಸಿದೆ.

    ಮೃತ ವೃದ್ಧನ ಕುಟುಂಬಸ್ಥರಿಗೆ ಸಂತ್ವಾನ ತಿಳಿಸಿರುವ ಸಚಿವರು, ಕೋವಿಡ್-19 ಲಕ್ಷಣದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾದ 24 ಗಂಟೆಗಳ ಅವಧಿಯಲ್ಲೇ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಹಾಗೂ ಸೋಂಕಿತರ ಚಿಕಿತ್ಸೆಗೆ ಅಗತ್ಯ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ದೇಶದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾದ 140 ದಿನಗಳ ಬಳಿಕ ಗೋವಾದಲ್ಲಿ ಕೋವಿಡ್-19 ಮೊದಲ ಸಾವು ಸಂಭವಿಸಿದೆ. ಜನವರಿ 30 ರಂದು ಕೇರಳದಲ್ಲಿ ವುಹಾನ್‍ನಿಂದ ಆಗಮಿಸಿದ್ದ ಯುವತಿಗೆ ಕೊರೊನಾ ಪಾಟಿಸಿಟಿವ್ ವರದಿ ಕಂಡು ಬಂದಿತ್ತು. ಚಿಕಿತ್ಸೆ ಪಡೆದ ಬಳಿಕ ಯುವತಿ ಕೊರೊನಾದಿಂದ ಗುಣಮುಖರಾಗಿದ್ದರು. ಉಳಿದಂತೆ ದೇಶದಲ್ಲಿ ಮೊದಲ ಕೊರೊನಾ ಸಾವಿನ ಪ್ರಕರಣ ಕಲಬುರಗಿಯಲ್ಲಿ ಮಾರ್ಚ್ 13 ರಂದು ವರದಿಯಾಗಿತ್ತು. ಅಂದು 76 ವರ್ಷದ ವೃದ್ಧ ಕೋವಿಡ್-19 ನಿಂದ ಸಾವನ್ನಪ್ಪಿದ್ದರು.

    ಕಳೆದ 24 ಗಂಟೆಗಳ ಅವಧಿಯಲ್ಲಿ ಗೋವಾದಲ್ಲಿ 64 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಗೋವಾದಲ್ಲಿ ಸೋಂಕಿತ ಸಂಖ್ಯೆ 818ಕ್ಕೇರಿದೆ. ಇದುವರೆಗೂ 135 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 683 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾಕ್‍ಡೌನ್ ಸಡಿಲಿಕೆ ಆದ ಬಳಿಕ ಗೋವಾದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿದೆ. ಇತ್ತೀಚೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ತಮ್ಮ ರಾಜ್ಯದಲ್ಲಿ ರೈಲು ನಿಲುಗಡೆ ಮಾಡದಂತೆ ಕೇಂದ್ರಕ್ಕೆ ಮನವಿ ಮಾಡಿದ್ದರು.

  • ವಿಶ್ವಾಸ ಮತಯಾಚನೆಯಲ್ಲಿ ಗೋವಾ ಸಿಎಂ ಪಾಸ್

    ವಿಶ್ವಾಸ ಮತಯಾಚನೆಯಲ್ಲಿ ಗೋವಾ ಸಿಎಂ ಪಾಸ್

    ಪಣಜಿ: ಇಂದು ನಡೆದ ವಿಶ್ವಾಸ ಮತಯಾಚನೆಯಲ್ಲಿ  ಗೋವಾ ಸಿಎಂ ಪ್ರಮೋದ್ ಸಾವಂತ್ ಬಹುಮತವನ್ನು ಸಾಬೀತು ಪಡಿಸಿದ್ದಾರೆ.

    20 ಶಾಸಕರು ಸರ್ಕಾರದ ಪರವಾಗಿ ವೋಟ್ ಚಲಾಯಿಸಿದ ಪರಿಣಾಮ ಬಿಜೆಪಿ ಗೋವಾ ರಾಜ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 11 ಬಿಜೆಪಿ, 3 ಎಂಜೆಪಿ, 3 ಜಿಎಂಫ್‍ಪಿ, ಮೂರು ಮಂದಿ ಪಕ್ಷೇತರ ಸದಸ್ಯರು ವಿಶ್ವಾಸ ಮತಯಾಚನೆಯ ಪರವಾಗಿ ವೋಟ್ ಹಾಕಿದ್ದರೆ, 14 ಕಾಂಗ್ರೆಸ್, ಓರ್ವ ಎನ್‍ಸಿಪಿ ಶಾಸಕರು ವಿರೋಧಿಸಿ ವೋಟ್ ಹಾಕಿದರು.

    ಒಟ್ಟು 40 ಸಂಖ್ಯಾ ಬಲದ ಗೋವಾ ವಿಧಾನಸಭೆಯಲ್ಲಿ ಪ್ರಸ್ತುತ 36 ಸದಸ್ಯರಿದ್ದಾರೆ. ಪ್ರಸ್ತುತ ಗೋವಾದಲ್ಲಿ ಬಿಜೆಪಿ 12 ಸದಸ್ಯ ಬಲವನ್ನು ಹೊಂದಿದ್ದು, ಬಿಜೆಪಿ ಮೈತ್ರಿ ಪಕ್ಷಗಳಾದ ಎಂಜಿಪಿ ಮತ್ತು ಜಿಎಫ್‍ಪಿ ಮೂರು ಶಾಸಕರನ್ನು ಹೊಂದಿದೆ. ಆ ಮೂಲಕ ಬಿಜೆಪಿ ಮೈತ್ರಿಕೂಟ ಒಟ್ಟು 15 ಸ್ಥಾನಗಳನ್ನು ಹೊಂದುವ ಮೂಲಕ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂಬುದು ಬಿಜೆಪಿ ಹೇಳಿತ್ತು. ಅಷ್ಟೇ ಅಲ್ಲದೇ ಮೂವರು ಪಕ್ಷೇತರ ಶಾಸಕರೂ ಕೂಡ ಬಿಜೆಪಿಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದರು.

    ಮಾಜಿ ಸಿಎಂ ದಿವಂಗತ ಮನೋಹರ್ ಪರಿಕ್ಕರ್ ಅವರ ಸಾವಿನ ಬೆನ್ನಲ್ಲೇ ಗೋವಾದಲ್ಲಿ ಭಾರೀ ರಾಜಕೀಯ ಬೆಳವಣಿಗೆ ಆರಂಭವಾಗಿತ್ತು. ಪರಿಕ್ಕರ್ ನಿಧನರಾದ ರಾತ್ರಿಯೇ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತವಿಲ್ಲ. ಸರ್ಕಾರ ರಚಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಚಿಸಲು ಪ್ರಯತ್ನ ನಡೆಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ನಾಯಕರು ಮಂಗಳವಾರ ರಾತ್ರಿ ಪ್ರಮಾಣವಚನ ಸ್ವೀಕರಿಸಿದ್ದರು.