Tag: ಸಿಎಂ ಬೊಮ್ಮಾಯಿ

  • ಅಂಬಿ ಸ್ಮಾರಕ ಲೋಕಾರ್ಪಣೆ, ಸುಮಲತಾ ಅಂಬರೀಶ್ ಕಣ್ಣೀರು

    ಅಂಬಿ ಸ್ಮಾರಕ ಲೋಕಾರ್ಪಣೆ, ಸುಮಲತಾ ಅಂಬರೀಶ್ ಕಣ್ಣೀರು

    ರೆಬೆಲ್ ಸ್ಟಾರ್ ಅಂಬರೀಶ್ (Rebel Star Ambareesh) ಅವರ ಸ್ಮಾರಕ ಇಂದು (ಮಾ.27) ಕಂಠೀರವ ಸ್ಟುಡಿಯೋದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಲೋಕಾರ್ಪಣೆ ಆಗಿದೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರು ನಾಮಕರಣ ಮಾಡಿದ ಬಳಿಕ ಅಂಬಿ ಸ್ಮಾರಕ (Memorial) ಉದ್ಘಾಟನೆ ಕಾರ್ಯಕ್ರಮ ನೆರವೇರಿದೆ.

    12 ಕೋಟಿ ರೂ. ವೆಚ್ಚದಲ್ಲಿ ವಿಶೇಷ ವಿನ್ಯಾಸದಲ್ಲಿ ಅಂಬಿ ಸ್ಮಾರಸ ನಿರ್ಮಾಣವಾಗಿದೆ. ಸ್ಮಾರಕ ಬಳಿ 32 ಅಡಿಯ ಅಂಬಿ ಪ್ರತಿಮೆ ಕೂಡ ಉದ್ಘಾಟನೆ ಆಗಿದೆ. ಒಂದು ಎಕರೆ 37 ಗುಂಟೆ ಜಾಗದಲ್ಲಿ ಅಂಬಿ ಸ್ಮಾರಕ ನಿರ್ಮಾಣ ಆಗಿದೆ. ಈ ವೇಳೆ ಸುಮಲತಾ ಅಂಬರೀಶ್ ಅವರು ಭಾವುಕರಾಗಿದ್ದಾರೆ.

    ಅಂಬರೀಶ್ ಅವರನ್ನು 10 ವರ್ಷಗಳಿಂದ ಪ್ರೀತಿಯಿಂದ ಸಾಕಿ ಬೆಳೆಸಿದ ಅಭಿಮಾನಿಗಳಿಗೆ ನನ್ನ ನಮಸ್ಕಾರಗಳು. ಇದು ಅಂಬರೀಶ್ 50 ವರ್ಷ ಪೂರೈಸಿದ ವರ್ಷವಾಗಿದೆ. ಅಭಿಮಾನಿಗಳು ಈ ದಿನ ಯಾವಾಗ ಬರುತ್ತೆ ಅಂತ ಕಾಯ್ತಾ ಇದ್ದರು. ಕರ್ನಾಟಕ ಸರ್ಕಾರದ ಅನುದಾನದ ಅಡಿಯಲ್ಲಿ ಈ ಸುಂದರ ಸ್ಮಾರಕ ನಿರ್ಮಾಣ ಆಗಿದೆ. ನಾನು ಅಭಿಮಾನಿಗಳಿಗೆ ಹೇಳ್ತಾನೇ ಇದ್ದೆ. ಆ ದಿನ ಇಂದು ಬಂದಿದೆ ಎಂದು ಸುಮಲತಾ ಮಾತನಾಡಿದರು.

    ಈ ಸಂದರ್ಭದಲ್ಲಿ ನಾನು ಓರ್ವರನ್ನು ಸ್ಮರಿಸೋಕೆ ಇಷ್ಟಪಡ್ತೀನಿ ಅವರೇ ಮಾಜಿ ಸಿಎಂ ಯಡಿಯೂರಪ್ಪನವರು. ನಮ್ಮ ಬೇಡಿಗೆ ಅವರ ಮುಂದೆ ಇಟ್ಟಾಗ ಕೊಂಚವೂ ನಿಧಾನಿಸದೇ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಚಾಲನೆ ಕೊಟ್ಟರು. 12 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗಿದೆ. ಅಂಬರೀಶ್ ಅವರು ಯಾವತ್ತೂ ತಮಗಾಗಿ ಏನು ಬೇಕು ಅಂತ ಬಯಸಿದವರಲ್ಲ. ಯಾರ ಬಳಿಯೂ ಕೈಚಾಚಿದವರಲ್ಲ. ಅವರದ್ದು ಕೊಟ್ಟ ಕೈ, ತಗೊಳ್ಳೊ ಕೈ ಅಲ್ಲ. ಅವರು ಮಂತ್ರಿ ಆಗಿದ್ದಾಗ ಸೈರನ್ ರೆಡ್ ಲೈಟ್ ಇರುವ ವೆಹಿಕಲ್ ಕಳಿಸಿದ್ದರು. ಇದನ್ನ ಮೊದಲು ಕಿತ್ತು ಬಿಸಾಕು ಅಂದಿದ್ದರು. ಇವತ್ತು ಇರುತ್ತೆ ನಾಳೆ ಇರಲ್ಲ, ಇದಕ್ಕೆಲ್ಲಾ ನಾನು ಅಡಿಕ್ಟ್ ಆಗಲ್ಲ ಅಂದಿದ್ದರು. ಎಲ್ಲರಿಗೂ ಅವರು ಇದ್ದಾಗ ಪ್ರೀತಿಸಿದ್ದೀರಿ. ನಿಮ್ಮ ಪ್ರೀತಿ ಒಂದೇ ಸಾಕು ಇನ್ನೇನು ಬೇಕಿಲ್ಲ ಎಂದು ಹೇಳ್ತಿದ್ದವರು. ಅಂಬರೀಶ್ ಎಲ್ಲೇ ಇದ್ರೂ ಅವರಿಗೆ ಈಗ ಖುಷಿಯಾಗುತ್ತೆ. ಅವರು ಎಲ್ಲರ ಪ್ರೀತಿ ಪಡೆದಿದ್ದರು. ಅವರು ನಿಜಕ್ಕೂ ದೇವರ ಮಗ ಎಂದು ಸುಮಲತಾ ಕಣ್ಣೀರಿಟ್ಟರು.

  • Biffes 2023: ಕೆಜಿಎಫ್- ಕಾಂತಾರ‌ ಸಿನಿಮಾವನ್ನು ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

    Biffes 2023: ಕೆಜಿಎಫ್- ಕಾಂತಾರ‌ ಸಿನಿಮಾವನ್ನು ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

    14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Banglore  Film Festival) ಗುರುವಾರ (ಮಾ.23)ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಚಿತ್ರೋತ್ಸವದಲ್ಲಿ ಸಿಎಂ ಬೊಮ್ಮಾಯಿ ಅವರು ಕನ್ನಡದ ಕೆಜಿಎಫ್, ಕಾಂತಾರ, ಆಸ್ಕರ್ ಗೆದ್ದಿರುವ RRR ಚಿತ್ರವನ್ನ ಹಾಡಿ ಹೊಗಳಿದ್ದಾರೆ.

    ಚಿತ್ರೋತ್ಸವ ಇಡೀ ಜಗತ್ತಿನಲ್ಲಿ ಅತ್ಯಂತ ಕಡಿಮೆ ನಗರದಲ್ಲಿ ನಡೆಯುತ್ತದೆ. ಅದರಲ್ಲಿ ಬೆಂಗಳೂರು ಒಂದಾಗಿರೋದು ಹೆಮ್ಮೆಯ ವಿಚಾರವಾಗಿದೆ. ಮುಂಬರುವ ದಿನಗಳಲ್ಲಿ ಬೆಂಗಳೂರು ಫೈನಾನ್ಸ್ ಕ್ಯಾಪಿಟಲ್ ಆಗಲಿದೆ. ಮಾತಿಲ್ಲದ ಸಿನಿಮಾದಿಂದ ಹಿಡಿದು ಅತ್ಯಂತ ಅದ್ಬುತ ತಂತ್ರಜ್ಞಾನ ಬಳಕೆ ಮಾಡಿದ ಸಿನಿಮಾ ನಮ್ಮಲ್ಲಿದೆ. ಬೆಂಗಳೂರು ಅಂತರಾಷ್ಟ್ರೀಯ ನಗರ. ಪ್ರತಿದಿನ ಐದು ಸಾವಿರಕ್ಕೂ ಹೆಚ್ಚು ಜನ ವಿಜ್ಞಾನಿಗಳು ಬರುತ್ತಾರೆ. 400 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಬೆಳೆದಿದೆ. ಇಲ್ಲಿ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಡೆಯದೆ ಇನ್ನೆಲ್ಲಿ ನಡೆಯುತ್ತದೆ. ಇದನ್ನೂ ಓದಿ: 14ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    ಸಿನಿಮಾಗೆ ಬಹಳ ದೊಡ್ಡ ಇತಿಹಾಸ ಇದೆ. ಅತ್ಯಂತ ಅದ್ಬುತವಾದ ತಂತ್ರಜ್ಞಾನ ಬಳಕೆಯಾಗುತ್ತಿದೆ. ಡಿಜಿಟಲೀಕರಣ ಆದ ಮೇಲೆ ಬಹಳಷ್ಟು ಬದಲಾವಣೆ ಆಗಿದೆ. ನಾವು ನೋಡುವುದಕ್ಕೂ, ನಮ್ಮ ಮಕ್ಕಳು ಸಿನೆಮಾ ನೋಡುವುದಕ್ಕು ವ್ಯತ್ಯಾಸ ಇದೆ. ಬದುಕಿನಲ್ಲಿ ಎಲ್ಲವೂ ವೇಗವಾಗಿ ಬೆಳೆಯುತ್ತಿರುವುದರಿಂದ ಸಿನೆಮಾದಲ್ಲಿಯೂ ವೇಗವಾಗಿ ಬೆಳವಣಿಗೆ ಆಗುತ್ತಿದೆ. ಈಗ ತಂತ್ರಜ್ಞಾನದ ಮೂಲಕ ಹೋದರೆ ಯಶಸ್ಸು ಸಿಗುತ್ತದೆ ಎಂದರು.

    ʻಕೆಜಿಎಫ್‌ʼ (KGF) ಮತ್ತು  ʻಕಾಂತಾರʼ (Kantara) ಸಿನಿಮಾ ಬಗ್ಗೆ ಯಾರು ನಿರೀಕ್ಷೆ ಮಾಡಿರಲಿಲ್ಲ. ʻಕಾಂತಾರʼ ಸ್ಥಳೀಯ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗದುಕೊಂಡು ಹೋಗಿದ್ದು, ಆ ತಂಡಕ್ಕೆ ಅಭಿನಂದನೆಗಳು. RRR ಸಿನಿಮಾ ಆಸ್ಕರ್ ಪಡೆದಿದ್ದು ನಾವೆಲ್ಲ ಹೆಮ್ಮೆ ಪಡಬೇಕು. ಇದರಿಂದ ಆಸ್ಕರ್ ನಮಗೆ ದೂರ ಇಲ್ಲ. ಪ್ರತಿವರ್ಷ ಪಡೆಯಬಹುದು ಅಂತ ತೋರಿಸಿ ಕೊಟ್ಟಿದೆ. ಈ ವರ್ಷ ಫೆಸ್ಟಿವಲ್ ನಲ್ಲಿ ಉತ್ತಮ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಸಿನಿಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದರು.

    ಸಿನಿಮಾ ಇಲ್ಲದೆ ನಮ್ಮ ಬದುಕಿಲ್ಲ. ಹೀಗಾಗಿ ಸಿನೆಮಾಗಾಗಿ ನಾನು ಏನೆಲ್ಲ ಬೇಕು, ಅದನ್ನು ಮಾಡಿದ್ದೇನೆ. ಸಿನಿಮಾ ಸಬ್ಸಿಡಿ ಹೆಚ್ಚಿಗೆ ಮಾಡಿದ್ದೇನೆ. ಸಬ್ಸಿಡಿ ಪಡೆಯುವ ಚಿತ್ರಗಳ ಸಂಖ್ಯೆ ಹೆಚ್ಚಳ ಮಾಡಿದ್ದೇನೆ. ಫಿಲ್ಮ್ ಸಿಟಿ ಕೂಡ ಆಗಲಿದೆ. ಅಲ್ಲಿ ಹಾಲಿವುಡ್ ಚಿತ್ರಗಳೂ ಶೂಟಿಂಗ್ ಆಗಬೇಕು ಎಂದರು.

    ಇನ್ನೂ ಈ ವೇಳೆ ಪುನೀತ್ ಸಮಾಧಿ ಅಭಿವೃದ್ಧಿ ಮತ್ತು  ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡುವ ಬಗ್ಗೆ ಸಿಎಂ ಮಾತನಾಡಿದ್ದಾರೆ.  ನಾವು ಈಗಾಗಲೇ ಪವರ್ ಸ್ಟಾರ್ ಪುನೀತ ರಾಜಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದೇವೆ. ಅವರ ಹೆಸರಿನಲ್ಲಿ ಸ್ಮಾರಕ ಮಾಡಲು ಎಲ್ಲ ಸಿದ್ಧತೆ ನಡೆದಿದೆ. ಇದೇ ವರ್ಷ ನಟ ದಿ.ಪುನಿತ್ ರಾಜಕುಮಾರ್ ಅವರ ಸ್ಮಾರಕ ಅಭಿವೃದ್ಧಿ ಮಾಡುತ್ತೇವೆ. ಇದರ ಜೊತೆಗೆ ಅಂಬರೀಶ್ ಅವರ ಸ್ಮಾರಕ ಸಿದ್ದವಾಗುತ್ತಿದೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ತೀರ್ಮಾನಿಸಲಾಗಿದೆ. ಮಾರ್ಚ್ 27 ರಂದು ಸ್ಮಾರಕ ಹಾಗೂ ಹೆಸರಿಡುವ ಕಾರ್ಯಕ್ರಮ ಮಾಡುತ್ತೇವೆ ಎಂದರು.

    ಈ ಸಂದರ್ಭಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸದ ರಾಜೀವ್ ಚಂದ್ರಶೇಖರ್, ಸಚಿವ ಆರ್. ಅಶೋಕ್ ಹಾಗೂ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ, ಹರ್ಷಿಕಾ, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು

  • 14ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    14ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Banglore Film Festival) ಗುರುವಾರ (ಮಾ.23)ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Cm Basavaraj Bommai) ಚಾಲನೆ ನೀಡಿದ್ದಾರೆ. ಆರ್‌ಆರ್‌ಆರ್ (RRR) ಖ್ಯಾತಿಯ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ (V. Vijendra Prasad) ಮುಖ್ಯ ಅತಿಥಿಯಾಗಿ ಬಂದಿದ್ದು, ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆ ಮಾಡಿದ್ದಾರೆ.

    ವಿಧಾನಸೌಧದ ಮುಂಭಾಗದಲ್ಲಿ ಚಿತ್ರೋತ್ಸವದ ಕಾರ್ಯಕ್ರಮವನ್ ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ(Saptami Gowda), ಹರ್ಷಿಕಾ, ಫಿಲ್ಮ್ ಚೇಂಬರ್ ಭಾ.ಮ ಹರೀಶ್ ಭಾಗಿಯಾಗಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಸಚಿವ ರಾಜೀವ್ ಚಂದ್ರಶೇಖರ್, ಆರ್ ಅಶೋಕ್ ಮುಖ್ಯ ಅತಿಥಿಗಳಾಗಿದ್ದರು.

    ಕಾರ್ಯಕ್ರಮದ ಉದ್ಘಾಟನಾ ಚಿತ್ರವಾಗಿ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ (Kantara) ಸಿನಿಮಾ ರಾತ್ರಿ 8 ಗಂಟೆಯಿAದ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಪ್ರದರ್ಶಿಸಲಾಗಿದೆ. ಮಾರ್ಚ್ 23ರಿಂದ 30ರವರೆಗೆ ನಡೆಯಲಿರುವ ಚಿತ್ರೋತ್ಸವದಲ್ಲಿ ವಿವಿಧ ದೇಶಗಳ ಹಲವು ಭಾಷೆಯ ನೂರಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶವಾಗಲಿದೆ. ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್‌ನಲ್ಲಿ ಒಂದು ವಾರಗಳ ಕಾಲ ಚಿತ್ರ ಪ್ರದರ್ಶನಗಳು ನಡೆಯಲಿವೆ.

    ಈ ಚಿತ್ರೋತ್ಸವದಲ್ಲಿ ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದೆ. ಪ್ರತ್ಯೇಕವಾಗಿ ಕನ್ನಡ ವಿಭಾಗ, ಇಂಡಿಯನ್ ವಿಭಾಗ ಹಾಗೂ ಏಷಿಯನ್ ವಿಭಾಗಗಳಲ್ಲಿ ಸ್ಪರ್ಧೆ ನಡೆಯುತ್ತದೆ. ಕ್ರಮವಾಗಿ ಆಯಾ ವಿಭಾಗದಲ್ಲಿ ಮೂರು ಚಿತ್ರಗಳಿಗೆ ಪ್ರಶಸ್ತಿ ನೀಡಲಾಗುವುದು. ಮೊದಲ ಪ್ರಶಸ್ತಿ ಬಂದ ಚಿತ್ರಕ್ಕೆ ಹತ್ತು ಲಕ್ಷ ರೂಪಾಯಿ ಬಹುಮಾನ ಕೂಡ ಇದೆ.

  • ಪುನೀತ್ ರಾಜ್‌ಕುಮಾರ್ ರಸ್ತೆ ಉದ್ಘಾಟನೆ

    ಪುನೀತ್ ರಾಜ್‌ಕುಮಾರ್ ರಸ್ತೆ ಉದ್ಘಾಟನೆ

    ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನು ಅಮರವಾಗಿಸುವ ಕೆಲಸ ಅನೇಕ ಕಡೆಗಳಲ್ಲಿ ಕಾರ್ಯರೂಪಕ್ಕೆ ಬಂದಿದೆ. ಬೆಂಗಳೂರಿನಲ್ಲಿ ಮೈಸೂರು ರಸ್ತೆಯಿಂದ ಬನ್ನೇರುಘಟ್ಟದವೆಗಿನ 12 ಕಿಲೋ ಮೀಟರ್ ರಸ್ತೆಗೆ ಪುನೀತ್ ಹೆಸರನ್ನು ಇಡಲಾಗಿದೆ. ಪುನೀತ್‌ ರಾಜ್‌ಕುಮಾರ್‌ ರಸ್ತೆಯನ್ನ ಸಿಎಂ ಬೊಮ್ಮಾಯಿ ಅವರು ಉದ್ಘಾಟನೆ ಮಾಡಿದ್ದಾರೆ.

    ಅಭಿಮಾನಿಗಳ ಆಸೆಯಂತೆ ನಾಯಂಡಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಹೆಸರನ್ನ (ಫೆ.7)ರಂದು ನಾಮಕರಣ ಮಾಡಲಾಯಿತು. ಈ ವೇಳೆ 1800 ಮಕ್ಕಳ ವಿದ್ಯಾಭ್ಯಾಸದ ಜವಬ್ದಾರಿಯನ್ನ ಸಿಎಂ ಬೊಮ್ಮಾಯಿ ಅವರು ವಹಿಸಿಕೊಳ್ಳೋದಾಗಿ ತಿಳಿಸಿದ್ದಾರೆ.

    ಪ್ರತಿಯೊಬ್ಬ ಮನುಷ್ಯನಿಗೂ ಹುಟ್ಡು ಸಾವು ಎರಡು ಬರುತ್ತೆ ಬದುಕಿದ್ದಾಗ ಹೇಗಿರುತ್ತಾರೆ ಅನ್ನೋದು ಇಂಪಾರ್ಟೆಂಟ್ ಅಪ್ಪಾಜಿ ಅವ್ರು ಅಭಿಮಾನಿಗಳನ್ನ ಗಳಿಸಿದರು. ಅಪ್ಪು ಅಭಿಮಾನಿಗಳನ್ನ ಗಳಿಸುತ್ತಿದ್ದಾರೆ. ಅಪ್ಪು ಯಾಕೆ ಬಂದಿದ್ದ ಅಂದರೆ ಏನೋ ಹೇಳಬೇಕು ಅಂತ ಬಂದಿದ್ದ. ಇನ್ನ ಜವಾಬ್ದಾರಿ ನಮಗೆ ಬಿಟ್ಟು ಹೋಗಿದ್ದಾನೆ. ನಾನು ನನ್ನ ಸಿನಿಮಾ ನೋಡಿ ನನ್ನ ಮಗನ್ನ ಬೆಳಸಿ ಅಂತ ಹೇಳೋದಿಲ್ಲ. ಅಪ್ಪು ಪವರ್ ಇಲ್ಲೇ ಬಿಟ್ಟು ಸ್ಟಾರ್ ಆಗಿ ಮೇಲೆ ಹೋಗಿದ್ದಾನೆ. ನನ್ನ ಜೀವನದಲ್ಲಿ ಅಪ್ಪು ಆಗಿ ಇನ್ನೋಬ್ಬರಿಗೋಸ್ಕರ ಬದುಕಬೇಕು. ನಾವು ಅಪ್ಪು ಆಗೋಣ, ಎರಡು ದಿನ ಆದ್ರೂ ಅಪ್ಪು ಆಗಿ ಬದುಕೋಣ. ಅ.29ರಂದು  ಅಪ್ಪು ಸತ್ತಿದ್ದ ದಿನ ಅಲ್ಲ, ಅವನು ಹುಟ್ಟಿದ್ದ ದಿನ ಅವತ್ತು ಒಂದು ಶಕ್ತಿ ಹುಟ್ಟಿದ ದಿನ ಎಂದು ಅಪ್ಪು ಬಗ್ಗೆ ಈ ವೇಳೆ ರಾಘವೇಂದ್ರ ರಾಜ್‌ಕುಮಾರ್ ಅವರು ಮಾತನಾಡಿದ್ದಾರೆ.

    ಪದ್ಮನಾಭನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರ ಜೊತೆ ಅಶ್ವಿನಿ ಪುನೀತ್, ಅಭಿಷೇಕ್ ಅಂಬರೀಶ್, ದೊಡ್ಡ ರಂಗೇಗೌಡ, ರಾಕ್‌ಲೈನ್ ವೆಂಕಟೇಶ್, ಆರ್,ಅಶೋಕ್, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಸಾಕ್ಷಿಯಾದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ – ಇದೊಂದು ವ್ಯವಸ್ಥಿತ ಜಾಲ ಎಂದ ಸಿಎಂ

    ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ – ಇದೊಂದು ವ್ಯವಸ್ಥಿತ ಜಾಲ ಎಂದ ಸಿಎಂ

    ಬಳ್ಳಾರಿ: ಇದೊಂದು ಉಗ್ರರ ಕೃತ್ಯ ಅಂತ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಇದೊಂದು ವ್ಯವಸ್ಥಿತ ಜಾಲ, ಆ ಜಾಲವನ್ನು ಪತ್ತೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.

    ಮಂಗಳೂರು (Mangaluru) ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ (Bellary) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಇದೊಂದು ಉಗ್ರರ ಕೃತ್ಯ ಅಂತ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ನಕಲಿ ಐಡಿ ಕಾರ್ಡ್, ನಕಲಿ ವಿಳಾಸ ಬಳಸಿ, ಈ ಕೃತ್ಯ ನಡೆಸಲಾಗಿದೆ. ನಕಲಿ ವಿಳಾಸ ಹುಬ್ಬಳ್ಳಿದೆಂದು ಗೊತ್ತಾಗಿದೆ. ಎನ್‍ಐಎ, ಐಬಿ ಸ್ಥಳದಲ್ಲೇ ಬೀಡು ಬಿಟ್ಟಿದೆ, ಅವರ ಜಾಡನ್ನು ಹಿಡಿಯಲು ಎನ್‍ಐಎ, ತನಿಖೆ ಮುಂದುವರೆಸಿದೆ. ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ ಇದೆ. ಇದೊಂದು ವ್ಯವಸ್ಥಿತ ಜಾಲ, ಆ ಜಾಲವನ್ನು ಪತ್ತೆ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಮಂಗಳೂರಿನಲ್ಲಿ ಇರುವಾಗಲೇ ಸ್ಕೆಚ್ – ಟೈಮರ್ ಕೈಕೊಟ್ಟು ದಾರಿ ಮಧ್ಯೆ ಬಾಂಬ್ ಸ್ಫೋಟ

    ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟಗೊಂಡಿದೆ. ದಾರಿ ಮಧ್ಯೆ ಸವಾರನೋರ್ವ ಕೈಯಲ್ಲಿ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದು ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆಯ ಎದುರು ಆಟೋದ ಒಳಗೆ ಸ್ಫೋಟಗೊಂಡಿದ್ದು ಸವಾರನ ಕೈಯಲ್ಲಿದ್ದ ಕುಕ್ಕರ್ ಛಿದ್ರಗೊಂಡಿತ್ತು. ಇದನ್ನೂ ಓದಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್‌ ಅನಿರೀಕ್ಷಿತವಾಗಿ ಸ್ಪೋಟಗೊಂಡಿಲ್ಲ, ಇದೊಂದು ಉಗ್ರ ಕೃತ್ಯ: ಪ್ರವೀಣ್‌ ಸೂದ್

    ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎನ್ನಲಾಗುತ್ತಿದ್ದು, ಈ ವಿಚಾರ ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಸದ್ಯ ಈ ಸ್ಫೋಟವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನ.1ರಂದು ನಟ ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

    ನ.1ರಂದು ನಟ ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

    ವರ್ ಸ್ಟಾರ್ ಪುನೀತ್ ರಾಜ್‌ಕುಮಾರ್(Puneeth Rajkumar) ಅಗಲಿ ಇದೇ ಅಕ್ಟೋಬರ್ ಅಂತ್ಯಕ್ಕೆ ಒಂದು ವರ್ಷವಾಗಲಿದೆ. ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ, ಸಾಕಷ್ಟು ಜನರ ಸಂಕಷ್ಟಕ್ಕೆ ಸಾಥ್ ಕೊಟ್ಟ ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ (Karnataka Ratna Award) ಪ್ರದಾನದ ಕುರಿತು ಸಿಎಂ ಬೊಮ್ಮಾಯಿ ಅವರು ಮಾತನಾಡಿದ್ದಾರೆ.

    ಚಿತ್ರರಂಗದಲ್ಲಿ ಸಿನಿಮಾಗಳ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದ ಅಪ್ಪು ಬಳಿಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದರು. ಅಪ್ಪು ಸಾಧನೆಯನ್ನ ಗಮನಿಸಿ, ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆಯೇ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಸಿಎಂ ಬೊಮ್ಮಾಯಿ(Cm Basavaraj Bommai) ಅವರು ನವೆಂಬರ್ 1ರಂದು ವಿಧಾನಸೌಧದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಈ ಸಭೆಯಲ್ಲಿ ರಾಜ್‌ಕುಮಾರ್ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

    ವಿಧಾನಸೌಧದ ಮೆಟ್ಟಿಲುಗಳ ಮೇಲೆ ನವೆಂಬರ್ 1ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. 2019ರ ನಂತರ ಯಾರಿಗೂ ಕೂಡ `ಕರ್ನಾಟಕ ರತ್ನ ಪ್ರಶಸ್ತಿ’ ಕೊಟ್ಟಿರಲಿಲ್ಲ. ಈಗ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಾಗಿದೆ. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನವಾಗಿದ್ದಾರೆ. ಯುವಜನತೆಗೆ ಅಪ್ಪು ಸದಾ ಪ್ರೇರಣೆ ನೀಡುತ್ತಿದ್ದರು. ಇದನ್ನೂ ಓದಿ:ದೊಡ್ಮನೆಗೆ ಮತ್ತೆ ಎಂಟ್ರಿ ಕೊಡಲಿದ್ದಾರೆ ಸೋನು ಶ್ರೀನಿವಾಸ್ ಗೌಡ

    ಇನ್ನೂ ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ. ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿಎಂ ಮಾತನಾಡಿದ್ದಾರೆ. ನವೆಂಬರ್ 1ರ ಬಳಿಕ ಬೆಂಗಳೂರಿನಲ್ಲಿ ಮೂರು ಕಾರ್ಯಕ್ರಮ ಮಾಡಲಿದ್ದೇವೆ. 10 ದಿನಗಳ ಅಂತರದಲ್ಲಿ ಬೆಂಗಳೂರಿನ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಈ ವೇಳೆ ಸಿಎಂ ಬೊಮ್ಮಾಯಿಯವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯಸಭೆ, ಪರಿಷತ್ ಚುನಾವಣೆ – ಬಿಜೆಪಿ ಟಿಕೆಟ್ ಶನಿವಾರ ಫೈನಲ್, ಸಿಎಂ ದೆಹಲಿಗೆ ದೌಡು

    ರಾಜ್ಯಸಭೆ, ಪರಿಷತ್ ಚುನಾವಣೆ – ಬಿಜೆಪಿ ಟಿಕೆಟ್ ಶನಿವಾರ ಫೈನಲ್, ಸಿಎಂ ದೆಹಲಿಗೆ ದೌಡು

    ಬೆಂಗಳೂರು: ರಾಜ್ಯಸಭೆ ಮತ್ತು ವಿಧಾನಪರಿಷತ್‍ಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ನವದೆಹಲಿಯಲ್ಲಿ ನಡೆಯಲಿದೆ.

    ಈ ಹಿನ್ನೆಲೆಯಲ್ಲಿ ವರಿಷ್ಠರ ಬುಲಾವ್ ಮೇರೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ದೌಡಾಯಿಸಲಿದ್ದಾರೆ. ಇತ್ತೀಚೆಗೆ ಬಿಜೆಪಿ ರಾಜ್ಯ ಕೋರ್ ಕಮಿಟಿ, ಪಕ್ಷದ ಅಭ್ಯರ್ಥಿಗಳ ಆಕಾಂಕ್ಷಿತರ ಪಟ್ಟಿಯನ್ನು ವರಿಷ್ಠರಿಗೆ ರವಾನಿಸಿತ್ತು. ಪರಿಷತ್‍ನ ನಾಲ್ಕು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸೇರಿದಂತೆ 30 ಮಂದಿಯ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ. ಇದನ್ನೂ ಓದಿ: ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ

    ಅದೇ ರೀತಿ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಾಲಿ ಸದಸ್ಯ ಕೆಸಿ ರಾಮಮೂರ್ತಿ, ಪಕ್ಷದ ಉಪಾಧ್ಯಕ್ಷ ನಿರ್ಮಲ್ ಸುರಾನ, ಲೆಹರ್ ಸಿಂಗ್, ಉದ್ಯಮಿಗಳಾದ ಪ್ರಕಾಶ್ ಶೆಟ್ಟಿ, ಲಹರಿ ವೇಲು ಮೊದಲಾದವರ ಹೆಸರನ್ನು ಕಳುಹಿಸಿಕೆೊಟ್ಟಿದೆ. ಇವೆಲ್ಲವನ್ನೂ ಪರಿಶೀಲಿಸಿ ಭಾನುವಾರ ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಅದಕ್ಕೂ ಮುನ್ನ ಸಿಎಂ ಜೊತೆ ವರಿಷ್ಠರ ಒಂದು ಸುತ್ತು ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ. ನಾಳೆ ತಡ ರಾತ್ರಿ ಸಿಎಂ ಬೊಮ್ಮಾಯಿ ದಾವೋಸ್‍ಗೆ ಪ್ರಯಾಣ ಬೆಳೆಸಲಿದ್ದು, ಅದಕ್ಕೂ ಮುನ್ನ ಸಮಾಲೋಚನೆಗೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

  • ಥಾಮಸ್ ಕಪ್ ಚಾಂಪಿಯನ್ಸ್ ಟೀಂನಲ್ಲಿದ್ದ ಲಕ್ಷ್ಯ ಸೇನ್‍ಗೆ ಸಿಎಂ ಗೌರವ

    ಥಾಮಸ್ ಕಪ್ ಚಾಂಪಿಯನ್ಸ್ ಟೀಂನಲ್ಲಿದ್ದ ಲಕ್ಷ್ಯ ಸೇನ್‍ಗೆ ಸಿಎಂ ಗೌರವ

    ಬೆಂಗಳೂರು: ಬ್ಯಾಂಕಾಕ್‍ನಲ್ಲಿ ನಡೆದ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಜಯಗಳಿಸಿದ ಭಾರತ ತಂಡದ ಸದಸ್ಯ ಹಾಗೂ ಬೆಂಗಳೂರಿನಲ್ಲಿದ್ದುಕೊಂಡು ತರಬೇತಿ ಪಡೆದಿರುವ ಲಕ್ಷ್ಯ ಸೇನ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು.

    ಈ ಸಂದರ್ಭದಲ್ಲಿ ಲಕ್ಷ್ಯ ಸೇನ್ ಅವರಿಗೆ 5 ಲಕ್ಷ ರೂಪಾಯಿ ಮೊತ್ತದ ಬಹುಮಾನದ ಚೆಕ್ ವಿತರಿಸಲಾಯಿತು. ಕ್ರೀಡಾ ಸಚಿವ ಡಾ. ನಾರಾಯಣಗೌಡ, ಸೇನ್ ಅವರ ತರಬೇತುದಾರ ವಿಮಲ್ ಕುಮಾರ ಹಾಗೂ ತಂದೆ ಬೀರೇನ್ ಕುಮಾರ ಸೇನ್ ಹಾಗೂ ತಾಯಿ ನಿರ್ಮಲಾ ಸೇನ್ ಅವರನ್ನು ಕೂಡಾ ಸನ್ಮಾನಿಸಿದರು. ಇದನ್ನೂ ಓದಿ: ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರು: ಕಮ್ರಾನ್ ಅಕ್ಮಲ್

    14 ಬಾರಿ ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಮಣಿಸಿರುವ ಭಾರತ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ತಂಡದಲ್ಲಿ ಬೆಂಗಳೂರಿನ ಆಟಗಾರ ಇರುವುದು ಕರ್ನಾಟಕಕ್ಕೆ ಮತ್ತಷ್ಟು ಹೆಮ್ಮೆ ತರಿಸಿದೆ. ಸದ್ಯ ಬೆಂಗಳೂರಿನ ದ್ರಾವಿಡ್ ಪಡುಕೊಣೆ ಸ್ಪೋಟ್ರ್ಸ್ ಸೆಂಟರ್‍ನಲ್ಲಿ ಲಕ್ಷ್ಯ ಸೇನ್ ತರಬೇತಿ ಪಡೆಯುತ್ತಿದ್ದಾರೆ. ಭಾರತದ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯವಾಗಿದ್ದು, ಈ ಐತಿಹಾಸಿಕ ಗೆಲುವು ನಮ್ಮ ದೇಶದ ಯುವಜನತೆಗೆ ಸ್ಫೂರ್ತಿ ನೀಡಲಿದೆ. ಇದನ್ನೂ ಓದಿ: ಮಹಿಳಾ T20 ಚಾಲೆಂಜ್‍ಗೆ ದೀಪ್ತಿ, ಹರ್ಮನ್‍ಪ್ರೀತ್, ಮಂದಾನ ನಾಯಕಿಯರು – 3 ತಂಡ ಪ್ರಕಟಿಸಿದ ಬಿಸಿಸಿಐ

  • ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ

    ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ

    ಧಾರವಾಡ: ನಾನು ಕಾಂಗ್ರೆಸ್ ಕಡೆ ಹೊರಟಿದ್ದೇನೆ ಎಂದು ಕೆಲ ಮಾಧ್ಯಮಗಳಲ್ಲಿ ಬಂದಿತ್ತು. ನಾನು ಅದನ್ನ ಅಷ್ಟು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸ್ಪಷ್ಟಪಡಿಸಿದರು.

    ಕಾಂಗ್ರೆಸ್ ಕಡೆ ಹೊರಟಿದ್ದೇನೆ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಕಡೆ ಹೊರಟಿದ್ದೇನೆ ಎಂದು ಮತ್ತೆ-ಮತ್ತೆ ಮಾಧ್ಯಮಗಳಲ್ಲಿ ಬರುತ್ತಿದೆ. ಅದಕ್ಕೆ ನಾನು ಸ್ಪಷ್ಟನೆ ಕೊಡುತ್ತಿದ್ದೇನೆ. ನಾನು ಹಿಂದುತ್ವವಾದಿ. ನನಗೆ ಬಿಜೆಪಿ ಪಕ್ಷ ಗುರುತಿಸಿ ಟಿಕೆಟ್ ಕೊಟ್ಟು ಗೆಲ್ಲಿಸಿದೆ. ನನಗೆ ಬೇಡದವರು ಈ ರೀತಿ ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ಎಚ್. ವಿಶ್ವನಾಥ್

    ನಮ್ಮ ಭಾಗದ ಜನರಿಗೆ ಹಾಗೂ ಕ್ಷೇತ್ರದ ಜನರಿಗೆ ಸ್ಪಷ್ಟಪಡಿಸುತ್ತೇನೆ. ಪಕ್ಷದ ವರಿಷ್ಠರಿಗೆ ಇದನ್ನ ಗಮನಕ್ಕೆ ತಂದಿದ್ದೇನೆ. ನನ್ನ ಬದ್ಧತೆ ಬಗ್ಗೆ ಅವರು ಕೂಡಾ ಮಾತನಾಡಿದ್ದಾರೆ. ನನ್ನ ಅಭಿವೃದ್ಧಿ ನೋಡಿ ಕೆಲವರು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಎರಡು ಬಾರಿ ನಾನು ಶಾಸಕನಾಗಿದ್ದೇನೆ. ಈ ಬಾರಿ ಹೆಚ್ಚಿನ ಮತದಿಂದ ಗೆದ್ದಿದ್ದೇನೆ ಎಂದ ಅವರು, ನನ್ನ ಏಳಿಗೆ ಸಹಿಸಲಾರದೇ ಈ ರೀತಿ ಮಾಡಿದ್ದಾರೆ. ಬೇರೆ ಪಕ್ಷದಿಂದಲೇ ನಮ್ಮ ಪಕ್ಷಕ್ಕೆ ಕೆಲವರು ಬರುತ್ತಿದ್ದಾರೆ. ನಮ್ಮ ಪಕ್ಷದಿಂದ ಯಾರೂ ಹೋಗುತ್ತಿಲ್ಲ. ತಿಂಗಳ ಕೊನೆಯಲ್ಲಿ ಯಾರೆಲ್ಲ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ತಿಳಿಯಲಿದೆ ಎಂದರು.

    ಸಿಎಂ ಬೊಮ್ಮಾಯಿ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ವರಿಷ್ಠರು ಕೂಡಾ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಯಾರೋ ನಾನು ಪಕ್ಷ ಬಿಟ್ಟು ಹೋಗುವ ಬಗ್ಗೆ ಪತ್ರಿಕೆಗಳಿಗೆ ಈ ರೀತಿ ಮಾಹಿತಿ ನೀಡುತ್ತಿದ್ದಾರೆ ಅಂತಾ ವರಿಷ್ಠರು ತಲೆ ಕೆಡಿಸಿಕೊಳ್ಳದಂತೆ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಆನಂದ್ ಸಿಂಗ್

    ಸಚಿವರು ಕೈಗೆ ಸಿಗಲ್ಲ ಎಂಬ ಶಾಸಕ ರೇಣುಕಾಚಾರ್ಯರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದನ್ನ ಅವರನ್ನೇ ಕೇಳಿ. ಅದು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡುವ ವಿಚಾರ. ನಾನು ಸುಖಾಸುಮ್ಮನೆ ತಲೆ ಕೆಡಿಸಿಕೊಳ್ಳಲ್ಲ. ಸಣ್ಣ-ಸಣ್ಣ ಆರೋಪ ಬರುವುದು ಸಹಜ ಎಂದು ಸ್ಪಷ್ಟನೆ ಕೊಟ್ಟರು.

  • 15 ದುರಂಹಕಾರಿ ಸಚಿವರನ್ನ ವಜಾ ಮಾಡಿ: ರೇಣುಕಾಚಾರ್ಯ ಗುಡುಗು

    15 ದುರಂಹಕಾರಿ ಸಚಿವರನ್ನ ವಜಾ ಮಾಡಿ: ರೇಣುಕಾಚಾರ್ಯ ಗುಡುಗು

    ದಾವಣಗೆರೆ: 15 ದುರಂಹಕಾರಿ ಸಚಿವರನ್ನು ವಜಾ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಶಾಸಕ ರೇಣುಕಾಚಾರ್ಯ ದೂರು ನೀಡಿದ್ದಾರೆ.

    ಸ್ವಪಕ್ಷದ ಸಚಿವರ ವಿರುದ್ಧವೇ ಗುಡುಗಿದ ರೇಣುಕಾಚಾರ್ಯರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದು, 15 ದುರಹಂಕಾರಿ ಸಚಿವರ ವಿರುದ್ಧ ನಾನು ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು ನೀಡಿದ್ದೇನೆ. ನಾವು ಕರೆ ಮಾಡಿದರೆ ನಮ್ಮ ಕರೆಯನ್ನ ಅವರು ಸ್ವೀಕರಿಸುವುದಿಲ್ಲ. ಅವರಿಗೆ ಅಭಿವೃದ್ಧಿ ಕೆಲಸಕ್ಕೆ ಪತ್ರ ಕೊಟ್ಟರೆ ಅವರ ಆಪ್ತ ಕಾರ್ಯದರ್ಶಿ ಪರೀಶಿಲಿಸಿ ಎಂದು ಅಧಿಕಾರಿಗಳಿಗೆ ಹೇಳುತ್ತಾರೆ. ಇದು ಶಾಸಕರಿಗೆ ಮಾಡುತ್ತಿರುವ ಅವಮಾನವಾಗಿದೆ. ಅದಕ್ಕೆ 15 ಸಚಿವರನ್ನ ಕ್ಯಾಬಿನೆಟ್‍ನಿಂದ ವಜಾ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ನಾನು ಲಾರ್ಡ್ ಶಿವ ಅಲ್ಲ, ನಾನು ನಿಮ್ಮ ಶಿವಣ್ಣ ಮಾತ್ರ: ಹ್ಯಾಟ್ರಿಕ್ ಹೀರೋ ಹೀಗಂದಿದ್ಯಾಕೆ..?

    ನಾನು 15 ಸಚಿವರು ವಿರುದ್ಧ ಲಿಖಿತ ದೂರು ನೀಡಿಲ್ಲ. ಕರೆ ಮಾಡಿ ಸಚಿವರ ವರ್ತನೆ ಬಗ್ಗೆ ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ನಾಲ್ಕು ದಿನದಲ್ಲಿ ಸಚಿವರ ಸಭೆ ಕರೆಯುತ್ತೇನೆ ಅಂತ ಹೇಳಿದ್ದಾರೆ. ಅಂತಹ ದುರಂಹಕಾರಿ ಸಚಿವರು ಕ್ಯಾಬಿನೆಟ್‍ನಲ್ಲಿರೋದು ಬೇಡ. ಅವರನ್ನ ಸಂಪುಟದಿಂದ ವಜಾ ಮಾಡಬೇಕು ಎಂದು ಗುಡುಗಿದ್ದಾರೆ.

    ನಾನು ಸಚಿವರೊಬ್ಬರಿಗೆ ಕರೆ ಮಾಡಿದೆ. ಅವರು ಫೋನ್ ರಿಸೀವ್ ಮಾಡಿಲ್ಲ. ಅವರ ಆಪ್ತ ಕಾರ್ಯದರ್ಶಿಗೆ ಮಾಡಿದರೆ ಕೋವಿಡ್ ಬಂದಿದೆ ಎಂದು ಹೇಳಿದ್ದಾರೆ. ಆದರೆ ಅದೇ ಸಚಿವರು ಸಚಿವ ಸಂಪುಟ ಸಭೆಗೆ ಹಾಜರಾಗಿದ್ದಾರೆ. ಇದು ನನಗೆ ಸಾಕಷ್ಟು ಬೇಸರ ತಂದಿರುವ ವಿಚಾರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ರೈತರಿಗೆ ಶಕ್ತಿ ತುಂಬುವ ಕೆಲಸವನ್ನು ಪಶುಪಾಲನೆ, ಪಶುವೈದ್ಯಕೀಯ ಇಲಾಖೆ ಮಾಡಬೇಕಿದೆ: ಪ್ರೀತಂಗೌಡ

    Nalin kumar katil

    ನಾನು ರಾಜ್ಯಾಧ್ಯಕ್ಷರ ಜೊತೆ ಇದನ್ನು ಹೇಳಿದ್ದೇನೆ. ದುರಹಂಕಾರಿ ಸಚಿವರ ಹೆಸರುಗಳನ್ನು ಹೇಳಿದ್ದೇನೆ. ಈ ರೀತಿಯ ಸಚಿವರಿಂದ ಪಕ್ಷಕ್ಕೆ, ಸಂಘಟನೆಗೆ ಮುಜುಗರವಾಗುತ್ತದೆ ಎಂದು ಹೇಳಿದ್ದೇನೆ. ಇನ್ನು ನಾಲ್ಕು ದಿನಗಳಲ್ಲಿ ರಾಜ್ಯಾಧ್ಯಕ್ಷರು ಅವರನ್ನು ಕರೆಸಿ ಮಾತನಾಡುತ್ತಾರೆ ಎಂದು ತಿಳಿಸಿದರು.