Tag: ಸಿಎಂ ಮನೋಹರ್ ಲಾಲ್ ಖಟ್ಟರ್

  • ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾಗೆ ಹರಿಯಾಣ ಸರ್ಕಾರ 6 ಕೋಟಿ ರೂ. ಹಾಗೂ ಮಹೀಂದ್ರ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಬ್ರ್ಯಾಂಡ್ ನ್ಯೂ ಎಕ್ಸ್ ಯುವಿ 700 ಕಾರ್ ನ್ನು ಉಡುಗೊರೆಯಾಗಿ ನೀಡುವುದಾಗಿ ಘೊಷಿಸಿದ್ದಾರೆ.

    ನೀರಜ್ ಚೋಪ್ರಾ ಶನಿವಾರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಅಥ್ಲೆಟಿಕ್ ಲೋಕ ನಿಬ್ಬೆರಗಾಗುವಂತೆ ಮಾಡಿದ್ದಾರೆ. ಅಲ್ಲದೆ ಹೊಸ ದಾಖಲೆಯನ್ನು ಬರೆದಿದ್ದಾರೆ. ಹೀಗಾಗಿ ಸರ್ಕಾರಗಳು ಸೇರಿದಂತೆ ಹಲವರು ಅವರಿಗೆ ಉಡುಗೊರೆಗಳನ್ನು ಘೊಷಿಸುತ್ತಿದ್ದಾರೆ. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

    ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೊಷಿಸಿದ್ದಾರೆ. ಇದರ ಬೆನ್ನಲ್ಲೇ ಆನಂದ್ ಮಹೀದ್ರಾ ಸಹ ಟ್ವೀಟ್ ಮಾಡುವ ಮೂಲಕ ನೀರಜ್‍ಗೆ ಹೊಸ ಎಸ್‍ಯುವಿ ಕಾರ್ ಗಿಫ್ಟ್ ಕೊಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶತಕೋಟಿ ಭಾರತೀಯರ ಕನಸು ನನಸು – ಚಿನ್ನ ಗೆದ್ದ ನೀರಜ್

    ಬರೋಬ್ಬರಿ 6 ಕೋಟಿ ನಗದು ಬಹುಮಾನದ ಜೊತೆಗೆ ನಿಯಮದಂತೆ ಸರ್ಕಾರದಲ್ಲಿ ಉನ್ನತ ಮಟ್ಟದ ಕೆಲಸ ನೀಡುವುದಾಗಿ ಹರಿಯಾಣ ಸಿಎಂ ಘೊಷಿಸಿದ್ದಾರೆ. ಅಲ್ಲದೆ ಅಥ್ಲೆಟ್ಸ್‍ಗಳಿಗಾಗಿ ಪಂಚಕುಲದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ನೀರಜ್‍ಗೆ ಗೌರವ ಸಲ್ಲಿಸಿದ್ದಾರೆ.

  • ಈಗ ನಮ್ಮ ಯುವಕರಿಗೆ ಕಾಶ್ಮೀರದ ಕನ್ಯೆ ತರಬಹುದು – ಹರಿಯಾಣ ಸಿಎಂ ವಿವಾದಾತ್ಮಕ ಹೇಳಿಕೆ

    ಈಗ ನಮ್ಮ ಯುವಕರಿಗೆ ಕಾಶ್ಮೀರದ ಕನ್ಯೆ ತರಬಹುದು – ಹರಿಯಾಣ ಸಿಎಂ ವಿವಾದಾತ್ಮಕ ಹೇಳಿಕೆ

    ನವದೆಹಲಿ: ಆರ್ಟಿಕಲ್ 370 ರದ್ದು, ಜಮ್ಮು ಕಾಶ್ಮೀರ ವಿಭಜನೆಯ ಹಿನ್ನೆಲೆಯಲ್ಲಿ ದೇಶದಲ್ಲಿ ಭಾರೀ ಚರ್ಚೆ ನಡೆದಿದೆ. ದೇಶದ ವಿವಿಧ ನಾಯಕರು ಈ ಕುರಿತು ತಮ್ಮದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಹರಿಯಾಣ ಸಿಎಂ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.

    ಫತೇಹಾಬಾದ್‍ನಲ್ಲಿ ನಡೆದ ಮಹರ್ಷಿ ಭಾಗೀರಥ್ ಜಯಂತಿಯಲ್ಲಿ ಭಾಗಿಯಾಗಿದ್ದ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ನಮ್ಮ ಸರ್ಕಾರದ ಕೆಲ ಸಚಿವರು ಹೆಣ್ಣು ಮಕ್ಕಳ ಲಿಂಗಾನುಪಾತದ ಕುರಿತು ಮಾತನಾಡುತ್ತಾ ಬಿಹಾರದಿಂದ ಸೊಸೆಯರನ್ನ ತರಬೇಕಾದ ಸ್ಥಿತಿ ಇದೆ ಎಂದಿದ್ದರು. ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ. ಕಾಶ್ಮೀರಿ ಯುವತಿರನ್ನು ಮದುವೆಯಾಗುವ ಹಾದಿ ಸುಗಮವಾಗಿದೆ. ಆರ್ಟಿಕಲ್ 370 ರದ್ದಾಗಿರುವುದರಿಂದ ಇದು ಸಾಧ್ಯವಾಗಿದೆ. ಕಾಶ್ಮೀರಿ ಯುವತಿಯರನ್ನು ಸೊಸೆಯರಾಗಿ, ಪತ್ನಿಯರಾಗಿ ಮಾಡಿಕೊಳ್ಳಲು ಪ್ರಯತ್ನಿಸಬಹುದು ಎಂದು ಹೇಳಿದ್ದಾರೆ.

    ಇದೇ ಸಂದರ್ಭದಲ್ಲಿ ಬೇಟಿ ಬಚಾವೋ, ಬೇಟಿ ಪಠಾವೋ ಯೋಜನೆಯ ಯಶಸ್ವಿಯಾಗಿದ್ದು, ಈ ಕಾರ್ಯಕ್ರಮದಿಂದ ಹರಿಯಾಣದಲ್ಲಿ ಲಿಂಗಾನುಪಾತ ವ್ಯತ್ಯಾಸ ಕಡಿಮೆ ಆಗಿದೆ. ಈ ಕಾರ್ಯಕ್ರಮ ಜಾರಿಯಾಗುವ ಮುನ್ನ ರಾಜ್ಯದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಲಿಂಗಾನುಪಾತದಲ್ಲಿ ಕಠಿಣ ಪರಿಸ್ಥಿತಿ ಇತ್ತು ಎಂದಿದ್ದಾರೆ.

    ಆಗಸ್ಟ್ 07 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370 ರದ್ದು ಮಾಡಿದ್ದರಿಂದ ಆಗುವ ಪ್ರಯೋಜನವೇನು ಎಂಬುವುದರ ಬಗ್ಗೆ ಮಾತನಾಡಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕ ವಿಕ್ರಮ್ ಸೈನಿ, ಇನ್ನುಮುಂದೆ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನ ಮದುವೆ ಆಗಬಹುದು ಎಂದು ಹೇಳಿದ್ದರು. ಶಾಸಕರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದೇಶದ ವ್ಯಾಪಿ ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು.

  • ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ಯುವಕನಿಗೆ ಗೂಸಾ ಕೊಟ್ಟ ಹರ್ಯಾಣ ಸಿಎಂ – ವಿಡಿಯೋ ನೋಡಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ಯುವಕನಿಗೆ ಗೂಸಾ ಕೊಟ್ಟ ಹರ್ಯಾಣ ಸಿಎಂ – ವಿಡಿಯೋ ನೋಡಿ

    ಚಂಡೀಗಢ: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಯುವಕನೊಬ್ಬನಿಗೆ ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಗೂಸಾ ಕೊಟ್ಟಿದ್ದಾರೆ.

    ಹರ್ಯಾಣದ 10 ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಗಳಿದೆ. ಹೀಗಾಗಿ ಕರ್ನಾಲ್‍ನಲ್ಲಿ ಇಂದು ಮತದಾರರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನ ಕಾರ್ಯಕ್ರಮ ಆಯೋಜಿಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ ಯುವಕನೊಂದಿಗೆ ನಡೆದುಕೊಂಡ ರೀತಿಯ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.

    ಬಿಜೆಪಿ ಕಾರ್ಯಕರ್ತನೊಬ್ಬ ಮನೋಹರ್ ಲಾಲ್ ಖಟ್ಟರ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆಯುತ್ತಾನೆ. ಬಳಿಕ ಅವರ ಜೊತೆಗೆ ಸೆಲ್ಫಿ ಫೋಟೋ ತೆಗೆದುಕೊಳ್ಳುವ ಸಲುವಾಗಿ ಮೊಬೈಲ್ ಹಿಡಿಯುತ್ತಾನೆ. ಈ ವೇಳೆ ಏಕಾಏಕಿ ಕೋಪಗೊಂಡ ಸಿಎಂ ಯುವಕನ ಕೈಗೆ ಹೊಡೆದು, ಹಿಂದಕ್ಕೆ ತಳ್ಳುತ್ತಾರೆ. ಮನೋಹರ್ ಲಾಲ್ ಖಟ್ಟರ್ ಅವರ ವರ್ತನೆಯಿಂದ ಮುಜುಗುರಕ್ಕೆ ಒಳಗಾದ ಯುವಕ ಕಾರ್ಯಕ್ರಮದಿಂದ ಹೊರ ನಡೆದಿದ್ದಾನೆ.

    ಈ ದೃಶ್ಯವನ್ನು ಸ್ಥಳದಲ್ಲಿದ್ದ ಸುದ್ದಿಗಾರರು ಹಾಗೂ ಸ್ಥಳೀಯರು ವಿಡಿಯೋ ಕ್ಯಾಮೆರಾ, ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಮನೋಹರ್ ಲಾಲ್ ಖಟ್ಟರ್ ಅವರು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿಲ್ಲ, ಸುಳ್ಳು ದೂರುಗಳು ಹೆಚ್ಚುತ್ತಿವೆ ಎಂಬ ವಿವಾದತ್ಮಕ ಹೇಳಿಕೆ ನೀಡಿ, ರಾಜ್ಯದ ಹಾಗೂ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಪಂಚಕುಲ ಜಿಲ್ಲೆಯ ಕಾಲ್ಕಾ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಮಾಡಿದ್ದ ಅವರು, ಹೆಚ್ಚಿನ ಸಂಖ್ಯೆಯ ಅತ್ಯಾಚಾರ ಪ್ರಕರಣಗಳನ್ನು ಮಹಿಳೆಯರು ಪರಿಚಿತರ ವಿರುದ್ಧ ದಾಖಲಿಸುತ್ತಾರೆ. ಅದರಲ್ಲೂ ಸುಳ್ಳು ಆರೋಪಗಳೇ ಹೆಚ್ಚಾಗಿರುತ್ತದೆ. ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿಲ್ಲ. ಆದರೇ ಹಿಂದೆ ಎಂದೋ ನಡೆದ ಘಟನೆಗಳು ಹಾಗೂ ಇಂದು ನಡೆಯುತ್ತಿರುವ ಘಟನೆಗಳನ್ನು ಮುಂದಿಟ್ಟುಕೊಂಡು ಬೇಕಂತಲೇ ಸುಳ್ಳು ಅತ್ಯಾಚಾರ ಕೇಸ್‍ಗಳನ್ನು ಕೆಲವರು ದಾಖಲಿಸುತ್ತಾರೆ. ಆದ್ದರಿಂದ ಇಂತಹ ಘಟನೆಗಳಿಗೆ ಸಂಬಂಧಪಟ್ಟ ದೂರುಗಳು ಹೆಚ್ಚಾಗುತ್ತಿದೆಯೇ ಹೊರತು ಪ್ರಕರಣಗಳಲ್ಲ ಎಂದು ಹೇಳಿಕೆ ನೀಡಿದ್ದರು.