Tag: ಸಿಎಎ

  • ನಿಷೇಧಾಜ್ಞೆ ಮಧ್ಯೆಯೂ ಪ್ರತಿಭಟನೆ: ರಾಯಚೂರಿನಲ್ಲಿ 50 ಕ್ಕೂ ಹೆಚ್ಚು ಜನರ ಬಂಧನ

    ನಿಷೇಧಾಜ್ಞೆ ಮಧ್ಯೆಯೂ ಪ್ರತಿಭಟನೆ: ರಾಯಚೂರಿನಲ್ಲಿ 50 ಕ್ಕೂ ಹೆಚ್ಚು ಜನರ ಬಂಧನ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

    ರಾಯಚೂರಿನ ಭಗತ್ ಸಿಂಗ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಎಸ್ ಯುಸಿಐ ನ ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು. ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಪ್ರತಿಭಟನೆ ಮುಂದುವರಿಸಿದ್ದರು. ಪ್ರತಿಭಟನೆ ಮಾಡ್ತಿದ್ದ ಸುಮಾರು 50ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲೇ ಬೀಡುಬಿಟ್ಟಿದ್ದ ಪ್ರತಿಭಟನಾಕಾರರನ್ನ ಪೊಲೀಸರು ಚದುರಿಸಿದ್ದಾರೆ. ಬಂಧನಕ್ಕೊಳಗಾದ ಪ್ರತಿಭಟನಾಕಾರರನ್ನ ಸದರ್ ಬಜಾರ್ ಠಾಣಾ ಪೋಲಿಸರು ವಶಕ್ಕೆ ಪಡೆದಿದ್ದಾರೆ.

    ಪ್ರತಿಭಟನೆ ಮುನ್ಸೂಚನೆ ಹಿನ್ನೆಲೆ ಜಿಲ್ಲೆಯಲ್ಲಿ ಡಿಸೆಂಬರ್ 21ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಹತ್ತು ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನ ತೆರೆಯಲಾಗಿದೆ. ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

  • CAA ವಿರೋಧಿಸಿ ಪ್ರತಿಭಟನೆ – SIT ತನಿಖೆಗೆ ಮುಂದಾದ ಸರ್ಕಾರ

    CAA ವಿರೋಧಿಸಿ ಪ್ರತಿಭಟನೆ – SIT ತನಿಖೆಗೆ ಮುಂದಾದ ಸರ್ಕಾರ

    ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಂಧರ್ಭದಲ್ಲಿ ನಡೆದ ಹಿಂಸಾತ್ಮಕ ಘಟನೆಗಳನ್ನು ತನಿಖೆ ನಡೆಸಲು ಅಸ್ಸಾಂ ಸರ್ಕಾರ ಮುಂದಾಗಿದೆ. ಈ ಸಂಬಂಧ ವಿಶೇಷ ತನಿಖಾ ತಂಡವನ್ನು ರಚಿಸಿರುವ ಸಿಎಂ ಸರ್ಬಾನಂದ ಸೋನೊವಾಲ್ ಹಿಂಸಾಚಾರದಲ್ಲಿ ಭಾಗಿಯಾಗಿ ಶಾಂತಿ ಕದಡಿದವರನ್ನ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    ಅಸ್ಸಾಂ ಜನರೊಂದಿಗೆ ಉಳಿಯಲಿದೆ ಇದಕ್ಕಾಗಿ ನಾವು ಯಾವ ಶಾಸನಗಳನ್ನು ಬೇಕಾದರು ಜಾರಿಗೆ ತರುತ್ತೇವೆ. ಅಸ್ಸಾಂ ಒಪ್ಪಂದ ಆರನೇ ಷರತ್ತು ಜಾರಿಗೆ ತರಲು ಎಲ್ಲ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೀಡಿದ್ದಾರೆ ಎಂದು ಸಿಎಂ ಸರ್ಬಾನಂದ ಸೋನೊವಾಲ್ ಅಸ್ಸಾಂ ಜನರಿಗೆ ಅಭಯ ನೀಡಿದ್ದಾರೆ.

    ಶುಕ್ರವಾರದಿಂದ ಇಂಟರ್ನೆಟ್ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಗಾ ವಹಿಸಿದ್ದು ಶಾಂತಿ ಕದಡುವ ಪೋಸ್ಟ್ ಹಾಕುವ ಮುನ್ನ ಎಚ್ಚರಿಕೆ ಇರಲಿ, ಜನರು ಜಾಗರೂಕರಾಗಿ ಎಂದು ಮನವಿ ಮಾಡಿದ್ದಾರೆ.

    ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪೊಸ್ಟ್ ಶೇರ್ ಮಾಡುವ ಮುನ್ನ ಎಚ್ಚರಿಕೆ ಇರಲಿ ಶಾಂತಿ ಸುವ್ಯವಸ್ಥೆ ಕದಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಸ್ಸಾಂ ಪೊಲೀಸ್ ಟ್ವೀಟ್ ಮಾಡಿದ್ದಾರೆ.

    CAA ವಿರೋಧಿಸಿ ಅಸ್ಸಾಂನಲ್ಲಿ ಬೃಹತ್ ಪ್ರತಿಭಟನೆಗಳು ನಡೆದು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಈ ವೇಳೆ ಸಾಕಷ್ಟು ಆಸ್ತಿ-ಪಾಸ್ತಿ ಹಾನಿಯಾಗಿತ್ತು ಈ ಹಿನ್ನೆಲೆ 24 ಗಂಟೆಗಳ ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರ ಗುವಾಹಟಿ ಹೈಕೋರ್ಟ್ ಸೂಚನೆ ಹಿನ್ನೆಲೆ ಇಂಟರ್ನೆಟ್ ಸಂಪರ್ಕ ನೀಡಲಾಗಿದೆ.

  • ಮೋದಿ ಸರ್ಕಾರದಿಂದ ಮನಬಂದಂತೆ ಕಾನೂನು – ಹೊರಟ್ಟಿ

    ಮೋದಿ ಸರ್ಕಾರದಿಂದ ಮನಬಂದಂತೆ ಕಾನೂನು – ಹೊರಟ್ಟಿ

    ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಬಹಳ ಸರಳ ಎಂದು ಮೋದಿ ಸರ್ಕಾರ ತಿಳಿದುಕೊಂಡಿತ್ತು, ಹೀಗಾಗಿ ಜನರ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವ ಕೆಲಸಕ್ಕೆ ನರೇಂದ್ರ ಮೋದಿ ಸರ್ಕಾರ ಹೋಗಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದರೆ.

    ಈ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು, ಕಾನೂನು ತರುವ ಮೊದಲು ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಆದರೆ ಕೇಂದ್ರ ಸರ್ಕಾರ ನಮ್ಮನ್ನು ಯಾರೂ ಕೇಳುವವರಿಲ್ಲ ಎನ್ನುವ ಭಾವನೆಯಲ್ಲಿದೆ. ಹೀಗಾಗಿ ಮನಬಂದಂತೆ ಕಾನೂನು ರೂಪಿಸಿದೆ ಎಂದು ಹೇಳಿದರು.

    ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇದೆ. ಇಲ್ಲಿ ಒಂದು ಸಮುದಾಯದ ವಿರುದ್ಧ ದ್ವೇಷದ ರಾಜಕಾರಣ ಕಾಣುತ್ತಿದೆ. ಪ್ರತಿಭಟನೆ ಮಾಡುವುದು ಜನ್ಮಸಿದ್ಧ ಹಕ್ಕು, ಪ್ರತಿಭಟಿಸುವ ಹಕ್ಕು ಹತ್ತಿಕ್ಕುವುದು ಡಿಕ್ಟೆರ್‍ಶಿಪ್ ಆಗುತ್ತದೆ. ಆದರೆ ಯಾರಾದರೂ ಕಾನೂನು ಮೀರಿ ನಡೆದರೆ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಹೋರಾಟ ಮಾಡುವುದೇ ಬೇಡ ಎಂದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

    ಹೋರಾಟ ಮಾಡುವುದೇ ಬೇಡ ಎನ್ನುವವವರು ನಾಳೆ ಬದುಕುವುದು ಬೇಡ, ಊಟ ಮಾಡುವುದು ಬೇಡ, ನೀರು ಕುಡಿಯುವುದು ಬೇಡ ಎಂದೂ ಹೇಳಬಹುದು ಎಂದು ಹೊರಟ್ಟಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದರು.

  • ಟೌನ್ ಹಾಲ್ ಬಳಿ ಪರಿಸ್ಥಿತಿ ಉದ್ವಿಗ್ನ- ಲಘು ಲಾಠಿ ಪ್ರಹಾರ

    ಟೌನ್ ಹಾಲ್ ಬಳಿ ಪರಿಸ್ಥಿತಿ ಉದ್ವಿಗ್ನ- ಲಘು ಲಾಠಿ ಪ್ರಹಾರ

    – ಸಿಕ್ಕ ವಾಹನಗಳಲ್ಲೇ ಪ್ರತಿಭಟನಾಕಾರರನ್ನು ತುಂಬಿದ ಪೊಲೀಸರು
    – ಖಾಸಗಿ ಬಸ್, ಆಟೋ, ಟಿಟಿ ವಾಹನಗಳ ಮೂಲಕ ಸ್ಥಳಾಂತರ

    ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ದಿನಗಳಿಂದ ದೇಶಾದ್ಯಂತ ನಡೆಯುತ್ತಿದ್ದ ಪ್ರತಿಭಟನೆ ಇಂದು ಸಿಲಿಕಾನ್ ಸಿಟಿಗೂ ವ್ಯಾಪಿಸಿದೆ. ನಗರದ ಟೌನ್ ಹಾಲ್ ಬಳಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೆ ಸಿಕ್ಕ ಸಿಕ್ಕ ವಾಹನಗಳಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ತುಂಬಿ ವಶಕ್ಕೆ ಪಡೆಯುತ್ತಿದ್ದಾರೆ.

    ಪ್ರತಿಭಟನೆ ನಡೆಯುವ ಮುನ್ಸೂಚನೆ ಇದ್ದಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದರು. ಆದರೂ ಸಹ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಪ್ರಹಾರ ನಡೆಸಿ, ವಶಕ್ಕೆ ಪಡೆಯುತ್ತಿದ್ದಾರೆ.

    ಪೊಲೀಸ್ ವಾಹನ, ಬಿಎಂಟಿಸಿ ಬಸ್ ಸಾಕಾಗದೆ, ಸಿಕ್ಕ ಸಿಕ್ಕ ಖಾಸಗಿ ವಾಹನಗಳನ್ನೂ ಬಳಸಿ ಪ್ರತಿಭಟನಾಕಾರರನ್ನು ಸಾಗಿಸುತ್ತಿದ್ದು, ಖಾಸಗಿ ಬಸ್, ಆಟೋ, ಟಿಟಿ ವಾಹನಗಳು ಸೇರಿದಂತೆ ಇತೆ ವಾಹನಗಳಲ್ಲಿ ಸಾಗಿಸುತ್ತಿದ್ದಾರೆ.

    ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಈ ವೇಳೆ ಬಿಎಂಟಿಸಿ ಬಸ್ಸಿಗೆ ಪ್ರತಿಭಟನಾಕಾರರು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ, ಕರಪತ್ರಗಳನ್ನು ಹಂಚುತ್ತಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸುತ್ತಿದ್ದಾರೆ.

    ಈ ವೇಳೆ ಪ್ರತಿಭಟನಾಕಾರಾಗಿ ಆಗಮಿಸಿದ್ದ ರಾಜೀವ್ ಗೌಡ ಮಾತನಾಡಿ, ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದೇವೆ. ಕಮೀಷನರ್ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇತ್ತ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದಿಂದಲೂ ವಿದ್ಯಾರ್ಥಿಗಳ ಗುಂಪು ಆಗಮಿಸಿದ್ದು, ಈ ವೇಳೆ ಪೊಲೀಸರು ಮನವೊಲಿಸಲು ಯತ್ನಿಸಿದ್ದಾರೆ. ಇದ್ಯಾವುದಕ್ಕೂ ಒಪ್ಪದ ವಿದ್ಯಾರ್ಥಿಗಳು ಧರಣಿ ಮಾಡಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್, ಪ್ರತಿಭಟನೆ ಸ್ಥಳಗಳಾದ ಟೌನ್ ಹಾಲ್, ಮೈಸೂರು ಬ್ಯಾಂಕ್ ವೃತ್ತದ ಬಳಿ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ ಕೇಂದ್ರ ವಿಭಾಗಕ್ಕೆ ಪರ-ವಿರೋಧ ಪ್ರತಿಭಟನೆಗೆ ಸಾಕಷ್ಟು ಅರ್ಜಿ ಬಂದಿತ್ತು. ಇದನ್ನು ಆಧರಿಸಿಯೇ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದನ್ನು ತಪ್ಪಿ ನಡೆದರೆ ಸೂಕ್ತ ಕ್ರಮಕ್ಕೆ ಪೋಲಿಸರು ಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ.

  • ಮೊಬೈಲಿನಲ್ಲಿ ದೆಹಲಿಯ ಹಿಂಸಾತ್ಮಕ ಪ್ರತಿಭಟನೆ ವಿಡಿಯೋ ಇಟ್ಟುಕೊಂಡಿದ್ದ ವ್ಯಕ್ತಿ ಅರೆಸ್ಟ್

    ಮೊಬೈಲಿನಲ್ಲಿ ದೆಹಲಿಯ ಹಿಂಸಾತ್ಮಕ ಪ್ರತಿಭಟನೆ ವಿಡಿಯೋ ಇಟ್ಟುಕೊಂಡಿದ್ದ ವ್ಯಕ್ತಿ ಅರೆಸ್ಟ್

    ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾಚಾರ ತಿರುಗಿತ್ತು. ಈ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ಇಟ್ಟುಕೊಂಡಿದ್ದ ಎಂದು ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಉತ್ತರ ಪ್ರದೇಶದ ಚಂದೌಸಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ವ್ಯಕ್ತಿಯನ್ನು ಹಾಗೂ ಆತನ ಮೊಬೈಲ್ ಪರಿಶೀಲಿಸಿದ್ದು, ಈ ವೇಳೆ ವಿಡಿಯೋಗಳಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮೊಬೈಲನ್ನು ಮುಟ್ಟುಗೋಲು ಹಾಕಿಕೊಂಡು, ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505(ಯಾವುದೇ ವರ್ಗ ಅಥವಾ ಸುಮುದಾಯದ ವಿರುದ್ಧ ಅಪರಾಧ ಹಾಗೂ ಪ್ರಚೋದನೆ ನೀಡುವುದು) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ಎ ಅಡಿ ಪ್ರಕರಣ ದಾಖಲಿಸಲಾಗಿದೆ.

    ಜೆಎಂಐ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆಯ ಡಜನ್‍ಗೂ ಅಧಿಕ ವಿಡಿಯೋಗಳನ್ನು ಮೊಬೈಲಿನಲ್ಲಿ ಇಟ್ಟುಕೊಂಡಿದ್ದನೆಂದು ಪೊಲೀಸರು ಆರೋಪಿಸಿದ್ದಾರೆ. ಇಂತಹ ವಿಡಿಯೋಗಳು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸುತ್ತವೆ ಹೀಗಾಗಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದ ಸುಮಾರು 10-11 ವಿಡಿಯೋಗಳು ಮೊಬೈಲಿನಲ್ಲಿದ್ದವು. ಈ ವಿಡಿಯೋಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತಿದ್ದವು ಎಂದು ಎಫ್‍ಐಆರ್‍ನಲ್ಲಿ ನಮೂದಿಸಲಾಗಿದೆ. ಪ್ರತಿಭಟನೆ ವೇಳೆ ಹಿಂಸಾಚಾರ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸರು ಈಗಾಗಲೇ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ 10 ಜನ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಇದರಲ್ಲಿ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳನ್ನು ಬಂಧಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

    ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಹೀಗಾಗಿ ಪೊಲೀಸರು ಮೂವರು ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್‍ನ ಮಾಜಿ ಶಾಸಕನ ವಿರುದ್ಧ ಬುಧವಾರ ಎಫ್‍ಐಆರ್ ದಾಖಲಿಸಿದ್ದರು. ಡಿ.17ರಂದು ನಡೆದ ತೀವ್ರ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ಪೊಲೀಸರ ಮೇಲೆ ಸಹ ಹಲ್ಲೆ ನಡೆಸಿದ್ದರು. ಹೀಗಾಗಿ ಪೊಲೀಸರು ಹಿಂಸಾತ್ಮಕ ಪ್ರತಿಭಟನಾಕಾರರ ವಿರುದ್ಧ ಗಲಭೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಿದ್ದರು.

    ಪ್ರತಿಭಟನೆಯ ವೇಳೆ ದೆಹಲಿ ನಗರ ಸಾರಿಗೆ ಬಸ್ಸುಗಳಿಗೆ ಬೆಂಕಿ ಹಚ್ಚಿ, ರಸ್ತೆ ಹಾಗೂ ಸಾರೈ ಜುಲೆನಾ ಪೊಲೀಸ್ ಬೂತ್‍ನಲ್ಲಿದ್ದ ಹಲವು ವಾಹನಗಳನ್ನು ಧ್ವಂಸ ಮಾಡಿದ್ದರು. ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದಾಗ ಗುಂಪು ಚದುರಿಸಲು ಪೊಲೀಸರು ಗ್ಯಾಸ್ ಫಿರಂಗಿ ಬಳಸಿದ್ದರು. ಆದರೂ ಪ್ರತಿಭಟನಾಕಾರರು ಗೇಟ್ ನಂ.4.7 ಹಾಗೂ 8ರಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಆಗ ಪೊಲೀಸ್ ಸಿಬ್ಬಂದಿ ವಿಶ್ವವಿದ್ಯಾಲಯದೊಳಗೆ ಪ್ರವೇಶಿಸಿ ಹಿಂಸಾತ್ಮಕ ಪ್ರತಿಭನಾಕಾರರನ್ನು ಎಳೆತಂದು ಎಫ್‍ಐಆರ್ ದಾಖಲಿಸಿದ್ದರು.

    ಈ ಸಂದರ್ಭದಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿದ್ದವು. ಇಷ್ಟಾದರೂ ಪ್ರತಿಭಟನಾಕಾರರು ಟಿಕೋನಾ ಪಾರ್ಕ್, ಝಾಕೀರ್ ನಗರ, ಧಲನ್ ಪೊಲೀಸ್ ಬೂತ್ ಬಳಿಯ ಸುಮಾರು 70 ರಿಂದ 80 ಬೈಕ್‍ಗಳನ್ನು ಧ್ವಂಸ ಮಾಡಿದ್ದರು.

  • ಕಾಯ್ದೆ ಜಾರಿಯಾದ್ರೆ ಕರ್ನಾಟಕ ಹೊತ್ತಿ ಉರಿಯುತ್ತದೆ: ಖಾದರ್ ವಿವಾದಾತ್ಮಕ ಹೇಳಿಕೆ

    ಕಾಯ್ದೆ ಜಾರಿಯಾದ್ರೆ ಕರ್ನಾಟಕ ಹೊತ್ತಿ ಉರಿಯುತ್ತದೆ: ಖಾದರ್ ವಿವಾದಾತ್ಮಕ ಹೇಳಿಕೆ

    – ನಿರಾಶ್ರಿತರಿಗೆ ಪೌರತ್ವ ಕೊಡ್ತಿದ್ದೇವೆ, ಖಾದರ್ ಹಕ್ಕು ಕಿತ್ಕೊಂಡಿಲ್ಲ
    – ಖಾದರ್ ಪಾಕಿಸ್ತಾನಕ್ಕೆ ಹೋಗಲಿ – ರವಿ ತಿರುಗೇಟು

    ಮಂಗಳೂರು: ಹಿಂದೊಮ್ಮೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುತ್ತೇವೆ ಎಂದು ಹೇಳಿಕೆ ನೀಡಿ ಛೀಮಾರಿಗೆ ಒಳಗಾಗಿದ್ದರು. ಇದೀಗ ಮಾಜಿ ಸಚಿವ ಯು.ಟಿ.ಖಾದರ್ ಕೂಡ ಅದೇ ರೀತಿ ರಾಜ್ಯಕ್ಕೆ ಬೆಂಕಿ ಹಚ್ಚುವುದಾಗಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಸಿಲುಕಿದ್ದಾರೆ.

    ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪೌರತ್ವ ಮಸೂದೆ ವಿರೋಧಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಸೂದೆ ವಿರೋಧಿಸಿ ಆಕ್ರೋಶಭರಿತರಾಗಿ ಮಾತನಾಡಿದ್ದಾರೆ. ಮಸೂದೆ ವಿಚಾರದಲ್ಲಿ ಇಡೀ ದೇಶ ಹೊತ್ತಿ ಉರಿಯುತ್ತಿದ್ದರೂ, ಕರ್ನಾಟಕ ಮಾತ್ರ ಶಾಂತಿಯಿಂದಿದೆ. ಆದರೆ ರಾಜ್ಯದಲ್ಲಿ ಈ ಮಸೂದೆಯನ್ನು ಜಾರಿಗೆ ತರಲು ಪ್ರಯತ್ನಿಸಿದಲ್ಲಿ ಇಡೀ ರಾಜ್ಯವೇ ಹೊತ್ತಿ ಉರಿಯಬಹುದು. ಇದು ಮುಖ್ಯಮಂತ್ರಿಗೆ ನೀಡುತ್ತಿರುವ ಎಚ್ಚರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಖಾದರ್ ಮಾತು ಕರಾವಳಿಗರ ಆಕ್ರೋಶಕ್ಕೆ ಕಾರಣವಾಗಿದ್ದು. ರಾಜ್ಯಕ್ಕೆ ಬೆಂಕಿ ಹಚ್ಚಲು ಜನರನ್ನು ಪ್ರಚೋದಿಸುತ್ತಿದ್ದಾರೆ ಎಂಬ ನೆಲೆಯಲ್ಲಿ ಟೀಕೆ ಕೇಳಿಬರುತ್ತಿದೆ. ಅಲ್ಲದೆ ಪ್ರಚೋದನಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.

    ತಮ್ಮ ಹೇಳಿಕೆ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿ ಸ್ಪಷ್ಟಪಡಿಸಿದ ಖಾದರ್, ನಾನು ಯಾವುದೇ ಪ್ರಚೋದನಕಾರಿ ಹೇಳಿಕೆಯನ್ನು ನೀಡಿಲ್ಲ. ಪೌರತ್ವದ ವಿಚಾರದಲ್ಲಿ ದೇಶದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ನಮ್ಮ ರಾಜ್ಯದಲ್ಲಿಯೂ ನಡೆಯಬಹುದು ಈ ಕುರಿತು ಮುಖ್ಯಮಂತ್ರಿಗಳು ಎಚ್ಚರದಿಂದಿರಬೇಕು ಎಂದು ಹೇಳಿದ್ದೇನೆ. ಅಲ್ಲದೆ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಬಾರದು ಎಂದು ಎಚ್ಚರಿಸಿದ್ದಾಗಿ ಹೇಳಿದ್ದಾರೆ.

    ಖಾದರ್ ಹೇಳಿಕೆ ಕುರಿತು ಕನ್ನಡ ಮತ್ತು ಸಾಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿ, ಯು.ಟಿ.ಖಾದರ್ ಅವರ ಬೆದರಿಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಯಾಗಿದೆ. ಖಾದರ್ ನಮಗೆ ಬೆದರಿಸಲು ನಾವು ಕಾಂಗ್ರೆಸ್ ಹೈಕಮಾಂಡ್ ಅಲ್ಲ. ಹೊತ್ತಿ ಉರಿಸೋದರಲ್ಲಿ ಖಾದರ್ ನಿಸ್ಸೀಮರು. ಖಾದರ್ ಮನಸ್ಥಿತಿಯಂಥವರೇ ಗೋದ್ರಾಗೆ ಬೆಂಕಿ ಹಾಕಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಬಹುಸಂಖ್ಯಾತರು ತಾಳ್ಮೆ ವಹಿಸಿದ್ದಾರೆ ಅಂತ ಬೆಂಕಿ ಹಾಕುವ ಬಗ್ಗೆ ಮಾತನಾಡುತ್ತೀರಿ. ಬಹುಸಂಖ್ಯಾತರು ರೊಚ್ವಿಗೆದ್ದರೆ ಏನಾಗುತ್ತೆ ಅಂತ ಖಾದರ್ ಅರ್ಥ ಮಾಡಿಕೊಳ್ಳಲಿ. ನಮ್ಮ ಸಹನೆ ನಮ್ಮ ದೌರ್ಬಲ್ಯ ಅಲ್ಲ. ಕಾಂಗ್ರೆಸ್ಸಿನವರು ಪಾಕಿಸ್ತಾನದವರಿಗೂ ಪೌರತ್ವ ಕೊಡಿ ಅಂತಿದಾರೆ. ನಾವು ಪಾಕಿಸ್ತಾನೀಯರಿಗೂ ಪೌರತ್ವ ಕೊಡಲು ಸಿದ್ಧ, ಆದರೆ ಆಗ ಅಖಂಡ ಭಾರತ ಆಗಬೇಕು. ಅಖಂಡ ಭಾರತ ಆದಾಗ ಪಾಕ್ ನ ಮುಸ್ಲಿಮರಿಗೂ ಪೌರತ್ವ ಕೊಡುತ್ತೇವೆ ಎಂದರು.

    ಅಖಂಡ ಭಾರತವಾಗುವವರೆಗೆ ಅಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವ ಕೊಡುತ್ತಿದ್ದೇವೆ. ನಿರಾಶ್ರಿತರು ಬೇರೆ, ನುಸುಳು ಕೋರರು, ಆಕ್ರಮಣಕಾರರು ಬೇರೆ. ನಾವು ನಿರಾಶ್ರಿತರಿಗೆ ಪೌರತ್ವ ಕೊಡುತ್ತಿದ್ದೇವೆಯೇ ಹೊರತು ಖಾದರ್ ಹಕ್ಕನ್ನು ಕಿತ್ತುಕೊಂಡಿಲ್ಲ. ಪಾಕಿಸ್ತಾನದಿಂದ ಬಂದಿರುವ ಖಾದರ್ ನೆಂಟರಿಗೆ ಪೌರತ್ವ ಕೊಡಲ್ಲ. ಭಾರತವನ್ನು ಪಾಕಿಸ್ತಾನ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಪಾಕಿಸ್ತಾನಕ್ಕೇ ಹೋಗಲಿ ಎಂದು ತಿರುಗೇಟು ನೀಡಿದ್ದಾರೆ.

  • ಸಿಎಎ, ಎನ್‌ಆರ್‌ಸಿ ದೇಶದಲ್ಲಿನ ಮುಸ್ಲಿಮರ ಮೇಲೆ ಪರಿಣಾಮ ಬೀರಲ್ಲ- ಜಮಾ ಮಸೀದಿ ಮೌಲ್ವಿ

    ಸಿಎಎ, ಎನ್‌ಆರ್‌ಸಿ ದೇಶದಲ್ಲಿನ ಮುಸ್ಲಿಮರ ಮೇಲೆ ಪರಿಣಾಮ ಬೀರಲ್ಲ- ಜಮಾ ಮಸೀದಿ ಮೌಲ್ವಿ

    ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಹಾಗೂ ಎನ್‌ಆರ್‌ಸಿ ಕುರಿತು ದೇಶಾದ್ಯಂತ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ ದೆಹಲಿಯ ಜಮಾ ಮಸೀದಿಯ ಮೌಲ್ವಿ ಶಾಹಿ ಇಮಾಮ್ ಅಹ್ಮದ್ ಬುಖಾರಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಕಾಯ್ದೆಯ ಜಾರಿಯಿಂದ ದೇಶದಲ್ಲಿನ ಮುಸ್ಲಿಮರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ಜಾರಿಯಿಂದ ಭಾರತದಲ್ಲಿರುವ ಮುಸ್ಲಿಮರ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಆದರೆ ಪಾಕಿಸ್ತಾನ, ಅಫ್ಘಾನಿಸ್ಥಾನ ಹಾಗೂ ಬಾಂಗ್ಲಾದೇಶದ ಮುಸ್ಲಿಮರನ್ನು ತಿರಸ್ಕರಿಸಲಾಗುತ್ತದೆ ಎಂದರು.

    ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದ ಹಕ್ಕು. ಇದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಆದರೆ ಇದನ್ನು ಹತೋಟಿಯಲ್ಲಿಡುವುದು ಮುಖ್ಯ. ಹೀಗಾಗಿ ಭಾವನೆಗಳನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಸಿಎಎ ಮೂಲಕ ಪಾಕಿಸ್ತಾನ, ಅಫ್ಘಾನಿಸ್ಥಾನ ಹಾಗೂ ಬಾಂಗ್ಲಾದೇಶದ ಮುಸ್ಲಿಮರು ಭಾರತದ ನಾಗರಿಗತ್ವದಿಂದ ವಂಚಿತರಾಗಿದ್ದಾರೆ ಎಂದು ಶಾಹಿ ಇಮಾಮಿ ಸಯ್ಯದ್ ಅಹ್ಮದ್ ಬುಖಾರಿ ಬೇಸರ ವ್ಯಕ್ತಪಡಿಸಿದರು.

    ಇಮಾಮ್ ಅಹ್ಮದ್ ಬುಖಾರಿ ಅವರು ದೆಹಲಿ ಜಮಾ ಮಸೀದಿಯ ಮೌಲ್ವಿಯಾಗಿದ್ದಾರೆ. ದೇಶದ ಪ್ರತಿಷ್ಠಿತ ಮಸೀದಿಗಳ ಪೈಕಿ ಜಮಾ ಮಸೀದಿಯೂ ಒಂದು. ಜಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಈ ಹಿನ್ನೆಲೆ ಇಮಾಮ್ ಅಹ್ಮದ್ ಬುಖಾರಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

    ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದು, ಹಿಂಸಾಚಾರಕ್ಕೆ ತಿರುಗಿತ್ತು. ಹೀಗಾಗಿ ಪೊಲೀಸರು ಮೂವರು ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್‍ನ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಮಂಗಳವಾರ ನಡೆದ ತೀವ್ರ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ಪೊಲೀಸರ ಮೇಲೆ ಸಹ ಹಲ್ಲೆ ನಡೆಸಿದ್ದರು. ಹೀಗಾಗಿ ಪೊಲೀಸರು ಹಿಂಸಾತ್ಮಕ ಪ್ರತಿಭಟನಾಕಾರರ ವಿರುದ್ಧ ಗಲಭೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಿದ್ದಾರೆ.

    ವಿದ್ಯಾರ್ಥಿಗಳು ದೆಹಲಿ ನಗರ ಸಾರಿಗೆ ಬಸ್ಸುಗಳಿಗೆ ಬೆಂಕಿ ಹಚ್ಚಿದ್ದಾರೆ. ರಸ್ತೆ ಹಾಗೂ ಸಾರೈ ಜುಲೆನಾ ಪೊಲೀಸ್ ಬೂತ್‍ನಲ್ಲಿದ್ದ ಹಲವು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದಾಗ ಗುಂಪು ಚದುರಿಸಲು ಪೊಲೀಸರು ಗ್ಯಾಸ್ ಫಿರಂಗಿ ಬಳಸಿದ್ದಾರೆ. ಆದರೂ ಪ್ರತಿಭಟನಾಕಾರರು ಗೇಟ್ ನಂ.4.7 ಹಾಗೂ 8ರಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಆಗ ಪೊಲೀಸ್ ಸಿಬ್ಬಂದಿ ವಿಶ್ವವಿದ್ಯಾಲಯದೊಳಗೆ ಪ್ರವೇಶಿಸಿ ಹಿಂಸಾತ್ಮಕ ಪ್ರತಿಭನಾಕಾರರನ್ನು ಎಳೆತಂದು ಎಫ್‍ಐಆರ್ ದಾಖಲಿಸಿದ್ದಾರೆ.

    ಈ ಸಂದರ್ಭದಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ. ಇಷ್ಟಾದರೂ ಪ್ರತಿಭಟನಾಕಾರರು ಟಿಕೋನಾ ಪಾರ್ಕ್, ಝಾಕೀರ್ ನಗರ, ಧಲನ್ ಪೊಲೀಸ್ ಬೂತ್ ಬಳಿಯ ಸುಮಾರು 70 ರಿಂದ 80 ಬೈಕ್‍ಗಳನ್ನು ಧ್ವಂಸ ಮಾಡಿದ್ದರು.

  • ಜಾಮಿಯಾ ವಿವಿಯ 3 ವಿದ್ಯಾರ್ಥಿಗಳು, ಮಾಜಿ ಕೈ ಶಾಸಕನ ವಿರುದ್ಧ ಎಫ್‍ಐಆರ್

    ಜಾಮಿಯಾ ವಿವಿಯ 3 ವಿದ್ಯಾರ್ಥಿಗಳು, ಮಾಜಿ ಕೈ ಶಾಸಕನ ವಿರುದ್ಧ ಎಫ್‍ಐಆರ್

    – ಪೊಲೀಸರ ಮೇಲೆ ಕಲ್ಲು ತೂರಾಟ ಹಿನ್ನೆಲೆ ಎಫ್‍ಐಆರ್
    – ಬಸ್, ಕಾರು, ಬೈಕ್‍ಗಳಿಗೆ ಬೆಂಕಿ

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಬಹುತೇಕ ರಾಜ್ಯಗಳಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ದೆಹಲಿಯಲ್ಲಿಯೂ ಹಿಂಸಾಚಾರಕ್ಕೆ ತಿರುಗಿದೆ. ಈ ಪೈಕಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿ, ಹಿಂಸಾಚಾರ ನಡೆಸಿದ್ದರು. ಹೀಗಾಗಿ ಪೊಲೀಸರು ಮೂವರು ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್‍ನ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

    ಮಂಗಳವಾರ ನಡೆದ ತೀವ್ರ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ಪೊಲೀಸರ ಮೇಲೆ ಸಹ ಹಲ್ಲೆ ನಡೆಸಿದ್ದರು. ಹೀಗಾಗಿ ಪೊಲೀಸರು ಮೂವರು ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್‍ನ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಗಲಭೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿದೆ.

    ಒಟ್ಟು ಏಳು ಜನರ ವಿರುದ್ಧ ಎಫ್‍ಐಆರ್ ಹಾಕಲಾಗಿದ್ದು, ಕಾಂಗ್ರೆಸ್‍ನ ಮಾಜಿ ಶಾಸಕ ಆಸಿಫ್ ಖಾನ್ ಹಾಗೂ ಸ್ಥಳೀಯ ರಾಜಕಾರಣಿಗಳಾದ ಅಶು ಖಾನ್, ಮುಸ್ತಫಾ, ಹೈದರ್, ಎಐಎಸ್‍ಎ ಸದಸ್ಯ ಚಂದನ್ ಕುಮಾರ್, ಎಸ್‍ಐಓ ಸದಸ್ಯ ಆಸಿಫ್ ತನ್ಹಾ ಹಾಗೂ ಸಿವೈಎಸ್‍ಎಸ್ ಸದಸ್ಯ ಖಾಸಿಂ ಉಸ್ಮಾನಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವಾಗಿನಿಂದ ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕುವವರೆಗೆ ಸಾಕಷ್ಟು ಜನ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ವಿಶ್ವವಿದ್ಯಾಲಯದ ಸುತ್ತ ಸಾಕಷ್ಟು ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಈ ವೇಳೆ ಪ್ರತಿಭಟನೆ ನಡೆಸಲು ಪುರುಷರು, ಮಹಿಳೆಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಬಹುತೇಕರು ವಿಶ್ವವಿದ್ಯಾಲಯದ ಕಡೆಯಿಂದ ಬಂದರು ಎಂದು ಎಫ್‍ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

    ಹೊರ ಬರುತ್ತಿದ್ದಂತೆ ಆಸಿಫ್ ಹಾಗೂ ಅಶು ಪ್ರಚೋದನಾತ್ಮ ಹೇಳಿಕೆಗಳನ್ನು ನೀಡಿ ಪ್ರತಿಭಟನಾಕಾರರನ್ನು ಪ್ರಚೋದಿಸಿದರು. ಅಲ್ಲದೆ ಸಿಎಎ ಹಾಗೂ ಎನ್‍ಆರ್‍ಸಿ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ನಂತರ ಮಥುರಾ ರಸ್ತೆ ಮೂಲಕ ಜಾಥಾ ನಡೆಸಿದರು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸರ ಮೇಲೆ ಕಲ್ಲು ತೂರಾಟ ಆರಂಭವಾಯಿತು. ಅಲ್ಲದೆ ದೆಹಲಿ ನಗರ ಸಾರಿಗೆ ಬಸ್‍ಗಳಿಗೆ ಬೆಂಕಿ ಹಚ್ಚಲು ಪ್ರಾರಂಭಿಸಿದರು ಎಂದು ಎಫ್‍ಐಆರ್ ನಲ್ಲಿ ನಮೂದಿಸಲಾಗಿದೆ.

    ರಸ್ತೆ ಹಾಗೂ ಸಾರೈ ಜುಲೆನಾ ಪೊಲೀಸ್ ಬೂತ್‍ನಲ್ಲಿದ್ದ ಹಲವು ವಾಹನಗಳನ್ನು ಧ್ವಂಸ ಮಾಡಿದರು. ನಂತರ ವಿಶ್ವವಿದ್ಯಾಲಯದ ಕಡೆಗೆ ತೆರಳಿದರು. ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿದರೂ ಕೇಳಲಿಲ್ಲ. ಕೆಲವು ಅಂಬುಲೆನ್ಸ್ ಗಳಿಗೂ ಬೆಂಕಿ ಹಚ್ಚಿದರು ಎಂದು ಎಫ್‍ಐಆರ್ ನಲ್ಲಿ ತಿಳಿಸಲಾಗಿದೆ.

    ಪರಿಸ್ಥಿತಿ ಹತೋಟಿಗೆ ಬರದಿದ್ದಾಗ ಗುಂಪು ಚದುರಿಸಲು ಗ್ಯಾಸ್ ಫಿರಂಗಿ ಬಳಸಿದೆವು. ಆದರೂ ಪ್ರತಿಭಟನಾಕಾರರು ಗೇಟ್ ನಂ.4,7 ಹಾಗೂ 8ರಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರು. ಆಗ ಪೊಲೀಸ್ ಸಿಬ್ಬಂದಿ ವಿಶ್ವವಿದ್ಯಾಲಯದೊಳಗೆ ಪ್ರವೇಶಿಸಿ ಹಿಂಸಾತ್ಮಕ ಪ್ರತಿಭನಾಕಾರರನ್ನು ಎಳೆತಂದರು ಎಂದು ಎಫ್‍ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

    ಈ ಸಂದರ್ಭದಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ. ಇಷ್ಟಾದರೂ ಪ್ರತಿಭಟನಾಕಾರರು ಟಿಕೋನಾ ಪಾರ್ಕ್, ಝಾಕೀರ್ ನಗರ, ಧಲನ್ ಪೊಲೀಸ್ ಬೂತ್ ಬಳಿಯ ಸುಮಾರು 70 ರಿಂದ 80 ಬೈಕ್‍ಗಳನ್ನು ಧ್ವಂಸ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

    ಎಫ್‍ಐಆರ್ ದಾಖಲಿಸಿದ ಪೊಲೀಸರ ಕ್ರಮವನ್ನು ಅಖಿಲ ಭಾರತ ವಿದ್ಯಾರ್ಥಿ ಸಂಘ(ಎಐಎಸ್‍ಎ) ಖಂಡಿಸಿದ್ದು, ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ನಾವು ಸಂವಿಧಾನದ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ಭಾರತದ ಜಾತ್ಯಾತೀತತೆಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿಕೊಂಡಿದೆ.

    ಕಾಂಗ್ರೆಸ್‍ನ ಮಾಜಿ ಶಾಸಕ ಆಸಿಫ್ ಖಾನ್ ಪ್ರತಿಕ್ರಿಯಿಸಿ, ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಆದರೆ ಜಾಮಿಯಾ ನಗರದ ಎಸ್‍ಎಚ್‍ಒ ಈ ಕುರಿತು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಶಾಹೀನ್ ಬಾಗ್ ನಲ್ಲಿ ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದೇವೆ. ಆದರೆ ನ್ಯೂ ಫ್ರೆಂಡ್ಸ್ ಕಾಲೋನಿ ಹಾಗೂ ಜಾಮಿಯಾ ನಗರದಲ್ಲಿ ಏಕೆ ಪ್ರಕರಣ ದಾಖಲಿಸಿದ್ದಾರೆ ಎಂದು ಪ್ರಶ್ನಿಸಿದರು.

  • ಪಾಕಿಸ್ತಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ- ಮೋದಿ ವಾಗ್ದಾಳಿ

    ಪಾಕಿಸ್ತಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ- ಮೋದಿ ವಾಗ್ದಾಳಿ

    ರಾಂಚಿ: ಪಾಕಿಸ್ತಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮೊದಲ ಬಾರಿಗೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ಜಾರ್ಖಂಡ್‍ನ ಡುಮ್ಕಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್‍ನ ಭಾರತ್ ಬಚಾವೋ ರ್ಯಾಲಿ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಮೊದಲ ಬಾರಿಗೆ ಪಾಕಿಸ್ತಾನದಂತೆ ಮಾಡಿದೆ. ಈ ಹಿಂದೆ ಯಾರಾದರೂ ಭಾರತೀಯ ರಾಯಭಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಇತಿಹಾಸವಿದೆಯೇ ಎಂದು ಪ್ರಶ್ನಿಸಿದ್ದಾರೆ.

    ಭಾರತದಲ್ಲಿನ ನಿರುದ್ಯೋಗ, ಆರ್ಥಿಕತೆ ಕುಸಿತ ಹಾಗೂ ದೇಶದ ರೈತರ ಸ್ಥಿತಿಗತಿ ಕುರಿತು ವಿಶ್ವ ಮಟ್ಟದಲ್ಲಿ ಭಾರತ್ ಬಚಾವೋ ಶೀರ್ಷಿಕೆಯಡಿ ಕಾಂಗ್ರೆಸ್ ವಿಶ್ವಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಮೂಲಕ ವಿದೇಶಗಳಲ್ಲಿರುವ ಎಲ್ಲ ರಾಯಭಾರಿ ಕಚೇರಿಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ಮಾತನಾಡಿದ ಅವರು, ಈ ಕಾನೂನು ಲೋಕಸಭೆಯ ಎರಡೂ ಮನೆಗಳಲ್ಲಿ ಪಾಸ್ ಆಗಿದೆ. ಪಾಕಿಸ್ತಾನ, ಅಫ್ಘಾನಿಸ್ಥಾನ ಹಾಗೂ ಬಾಂಗ್ಲಾದೇಶದ ಅಲ್ಪಸಂಖ್ಯಾತರು ಭಾರತದಲ್ಲಿ ನಿರಾಶ್ರಿತರಾಗಿಯೇ ಉಳಿದಿದ್ದರು. ಇಂತಹವರಿಗೆ ಪೌರತ್ವ ನೀಡುವುದು ಇದರ ಉದ್ದೇಶವಾಗಿದೆ. ಆದರೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಈ ಕುರಿತು ಊಹಾಪೋಹಗಳನ್ನು ಸೃಷ್ಟಿಸುತ್ತಿವೆ. ಅಲ್ಲದೆ ನಾವೂ ಅವರಂತೆ ಮಾಡಿಲ್ಲವಲ್ಲ ಎಂಬ ಕಾರಣಕ್ಕೆ ಈ ಕುರಿತು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಈ ವಿಚಾರದಲ್ಲಿ ಹಿಂಸಾಚಾರ ನಡೆಸುತ್ತಿರುವವರು ಯಾರು ಎಂಬುದನ್ನು ಅವರ ಬಟ್ಟೆಗಳಿಂದಲೇ ಗುರುತಿಸಬಹುದು. ಇವರು ದೇಶದ ಅಭಿವೃದ್ಧಿ ಮಾರ್ಗಸೂಚಿಯನ್ನೇ ಹೊಂದಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಅತ್ತ ಈಶಾನ್ಯ ರಾಜ್ಯಗಳಲ್ಲಿಯೂ ಸಹ ವಿರೋಧದ ಹೋರಾಟ ಜೋರಾಗಿದೆ. ಇದೆಲ್ಲದರ ಮಧ್ಯೆ ಕಾಂಗ್ರೆಸ್ ನಾಯಕರು ಭಾರತ್ ಬಚಾವೋ ರ್ಯಾಲಿ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪೌರತ್ವ ಮಸೂದೆ ತಿದ್ದುಪಡಿ ಕುರಿತು ಮಾತನಾಡಿ, ಇದು ಭಾರತ ಆತ್ಮವನ್ನು ಬೇರ್ಪಡಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದರು.