Tag: ಸಿಎಎ

  • ಸಿಎಎ ವಿರೋಧಿಸಿ ರಕ್ತದಲ್ಲಿ ಪತ್ರ ಬರೆದು ಸಹಿ ಸಂಗ್ರಹ- ಸಿಂಧನೂರಿನಲ್ಲಿ ಬೃಹತ್ ಸಮಾವೇಶ

    ಸಿಎಎ ವಿರೋಧಿಸಿ ರಕ್ತದಲ್ಲಿ ಪತ್ರ ಬರೆದು ಸಹಿ ಸಂಗ್ರಹ- ಸಿಂಧನೂರಿನಲ್ಲಿ ಬೃಹತ್ ಸಮಾವೇಶ

    ರಾಯಚೂರು: ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರೋಧಿಸಿ ಜಿಲ್ಲೆಯ ಸಿಂಧನೂರು ನಗರದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು. ನಗರದ ಆರ್ ಜಿಎಂ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ನೂರಾರು ಯುವಕರು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ರವಾನೆ ಮಾಡಲಾಯಿತು.

    ಎನ್.ಆರ್.ಸಿ ಹಾಗೂ ಸಿಎಎ ವಿರೋಧಿಸಿ ನಡೆದ ರಕ್ತದ ಪತ್ರ ಚಳುವಳಿಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಬಂದ ಯುವಕರು ತಮ್ಮ ರಕ್ತದಲ್ಲಿ ಪತ್ರ ಬರೆದರು. ಈ ವೇಳೆ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಬಿಜೆಪಿ ಪಕ್ಷ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

    ಸೇವೆ ಮಾಡುತ್ತೇವೆ ಎಂದು ತಲೆ ಸವರಿದರೆ, ನೀವು ನಂಬಿಕೆಗೆ ಯೋಗ್ಯವಾದ ಜನ ಅಲ್ಲ. ಬಿಜೆಪಿ ಅಂದ್ರೆ ಬೇಡ ಅನ್ನಲ್ಲ, ಬಿಜೆಪಿಯನ್ನ ನಡೆಸುವ ಆಂತರಿಕ ಸಂಘಟನೆಗಳನ್ನ ನಾವು ಒಪ್ಪಲ್ಲ. ಬಸವಣ್ಣನನ್ನು ಕೊಂದವರು, ಅವತ್ತು ಗಾಂಧಿಯನ್ನ ಕೊಂದವರು, ಬುದ್ಧನನ್ನು ಕೊಂದವರು ನಮ್ಮನ್ನು ಉಳಿಸ್ತಾರಾ ಅಂತ ಪ್ರಶ್ನಿಸಿದರು. ಯಡಿಯೂರಪ್ಪ ಸ್ವತಂತ್ರವಾಗಿ ಸರ್ಕಾರ ನಡೆಸಲು ಆಗುತ್ತಿಲ್ಲ. ಯಡಿಯೂರಪ್ಪ ಮತ್ತು ಸಚಿವರಿಗೆ ಸ್ವತಂತ್ರ ಕೊಟ್ಟಿದ್ದೀರಾ? ಸರ್ಕಾರ ನಡಸೋದಿಕ್ಕೆ ಯಾವುದೇ ಸ್ವಾತಂತ್ರ್ಯ ಇಲ್ಲ ಅಂತ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

    ಇನ್ನೂ ಸಮಾವೇಶದಲ್ಲಿ ಮಹಿಳಾ ಹೋರಾಟಗಾರ್ತಿ ಕೆ.ನೀಲಾ, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ, ಸೇರಿದಂತೆ ಹಲವಾರು ಸಂಘಟನೆಗಳ ಮುಖಂಡರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಯುವಕರು, ವಿದ್ಯಾರ್ಥಿಗಳು ಸೇರಿದಂತೆ ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸಮಾವೇಶಕ್ಕೆ ಬಂದಿದ್ದರು.

  • ಸಿಎಎ ವಿರೋಧಿಸುವವರು ದಲಿತರ ವಿರೋಧಿಗಳು: ಅಮಿತ್ ಶಾ

    ಸಿಎಎ ವಿರೋಧಿಸುವವರು ದಲಿತರ ವಿರೋಧಿಗಳು: ಅಮಿತ್ ಶಾ

    – ಬಿಜೆಪಿ ವೋಟ್ ಬ್ಯಾಂಕ್ ನೀತಿಯ ಹಿಂದೆ ಬಿದ್ದಿಲ್ಲ

    ಹುಬ್ಬಳ್ಳಿ: ಬಿಜೆಪಿ ವೋಟ್ ಬ್ಯಾಂಕ್ ನೀತಿಯ ಹಿಂದೆ ಬಿದ್ದಿಲ್ಲ. ಇಂತಹ ನೀತಿಯ ಹಿಂದೆ ಬಿದ್ದಿರುವ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ಜೆಡಿಎಸ್ ಸೇರಿದಂತೆ ಅನೇಕ ವಿಕ್ಷಗಳು ಕೇಂದ್ರ ಸರ್ಕಾರ ಮಹತ್ವದ ಕಾರ್ಯಗಳನ್ನು ವಿರೋಧಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದರು.

    ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶವನ್ನು ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿರುವ ಮುಸ್ಲಿಂ, ಕ್ರೈಸ್ತರನ್ನು ಸೇರಿದಂತೆ ಎಲ್ಲರನ್ನೂ ನಾವು ಸಮನಾಗಿ ಕಾಣುತ್ತೇವೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ಹಿಂದೂಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಅಷ್ಟೇ ಅಲ್ಲದೆ ಆ ದೇಶಗಳಲ್ಲಿ ತಾಯಿ-ತಂದೆಯ ಮುಂದೆಯೇ ಮಗಳ ಅತ್ಯಾಚಾರ ಪ್ರಕರಣಗಳು ನಡೆದಿವೆ. ಹೀಗಾಗಿ ಅನೇಕ ಹಿಂದೂಗಳು ತಮ್ಮ ಮಕ್ಕಳನ್ನು ರಕ್ಷಿಸಲು ಭಾರತಕ್ಕೆ ಬಂದಿದ್ದಾರೆ. ಅವರ ರಕ್ಷಣೆ ನಮ್ಮ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ ತರಲಾಗಿದೆ ಎಂದು ಹೇಳಿದರು.

    ನೆರೆಯ ದೇಶಗಳಿಂದ ಬಂದು ಭಾರತದಲ್ಲಿ ನೆಲೆ ಕಂಡ ಸಂತ್ರಸ್ತರಿಗೆ ಆಶ್ರಯ ನೀಡಬೇಕು ಎಂದು ಮಹಾತ್ಮ ಗಾಂಧೀಜಿ ಅವರು 1946ರಲ್ಲಿ ಹೇಳಿದ್ದರು. ಅಷ್ಟೇ ಅಲ್ಲದೆ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಸೇರಿದಂತೆ ಅನೇಕ ನಾಯಕರ ಆಶಯ ಇದೇ ಆಗಿತ್ತು. ಅದನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಈಡೇರಿಸಿದೆ ಎಂದರು.

    ವೋಟ್ ಬ್ಯಾಕ್ ನೀತಿಯನ್ನು ಬಿಜೆಪಿ ಅನುಸರಿಸುತ್ತಿಲ್ಲ. ಸಿಎಎ ವಿಚಾರದಲ್ಲಿ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ಜೆಡಿಎಸ್ ಸೇರಿದಂತೆ ಅನೇಕ ಪಕ್ಷಗಳು ಮಹತ್ವ ಯೋಜನೆ, ನಿರ್ಧಾರಗಳಲ್ಲಿ ರಾಜಕೀಯ ಮಾಡುತ್ತಿವೆ. ಸಿಎಎ ವಿರೋಧಿಸುವವರು ದಲಿತರ ವಿರೋಧಿಗಳು. ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದಲ್ಲಿ ಶೋಷಣೆಗೆ ಒಳಗಾಗಿ ಭಾರತಕ್ಕೆ ಬಂದವರ ಸ್ಥಿತಿ ಕಣ್ಣೀರು ತರಿಸುತ್ತದೆ. ಅವರ ಪರಿಸ್ಥಿತಿಗೆ ಮರುಗಿ ನರೇಂದ್ರ ಮೋದಿ ಅವರು ಉತ್ತಮ ಜೀವನ ಕಟ್ಟಿಕೊಡಲು ಸಿಎಎ ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು.

    ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕೋ ಬೇಡವೋ ಎಂದು ಸಮಾವೇಶದಲ್ಲಿ ಸೇರಿದ್ದ ಜನರನ್ನು ಪ್ರಶ್ನಿಸಿದರು. ಆಗ ಜನರು ನಿರ್ಮಾಣ ಮಾಡಬೇಕು ಎಂದು ಉತ್ತರಿಸಿದರು. ಬಳಿಕ ಭಾಷಣ ಮುಂದುವರಿಸಿದ ಅಮಿತ್ ಶಾ ಅವರು, ಆದರೆ ನೋಡಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದು ಅವರ ಮೋಟ್ ಬ್ಯಾಂಕ್ ತಂತ್ರ ಎಂದು ವಾಗ್ದಾಳಿ ನಡೆಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ನಡೆಸಿ ಉಗ್ರರು ಹಾಗೂ ಪಾಕಿಸ್ತಾನಕ್ಕೆ ಉತ್ತರ ನೀಡಿದರು. ಆದರೆ ಈ ಹಿಂದೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಮೌನಿಯಾಗಿದ್ದರು. ರಾಹುಲ್ ಬಾಬಾ ಅವರು ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್, ಸಿಎಎ ಸೇರಿದಂತೆ ಅನೇಕ ವಿಚಾರಗಳಲ್ಲಿ ರಾಜಕೀಯ ಮಾಡಿದರು ಎಂದು ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದರು.

    ನಿಮ್ಮ ಬೆಂಬಲವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡುವುದಾದರೆ 88662 88862 ಮೊಬೈಲ್ ನಂಬರಿಗೆ ಮಿಸ್ ಕಾಲ್ ಕೊಡಿ ಎಂದು ಮನವಿ ಮಾಡಿಕೊಂಡರು. ಬಳಿಕ, ನೀವು ಸಿಎಎ ಹಾಗೂ ಪ್ರಧಾನಿ ಮೋದಿ ಅವರನ್ನು ಬೆಂಬಲಿಸುವುದಾದರೆ ಎರಡೂ ಕೈಗಳನ್ನು ಮೇಲೆತ್ತಿ ಎಂದು ಕೇಳಿಕೊಂಡರು. ಈ ವೇಳೆ ಸಭೆಯಲ್ಲಿದ್ದ ಎಲ್ಲರೂ ಎರಡು ಕೈಗಳನ್ನು ಎತ್ತಿ ಬೆಂಬಲ ಸೂಚಿಸಿದರು.

  • ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ದೇಶಭಕ್ತ, ಯುಗಪುರುಷರಲ್ಲ- ಹೆಚ್‍ಡಿಕೆ

    ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ದೇಶಭಕ್ತ, ಯುಗಪುರುಷರಲ್ಲ- ಹೆಚ್‍ಡಿಕೆ

    ಬೆಂಗಳೂರು: ಹಿಂದೂ ನಾಯಕರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಎಸ್.ಡಿ.ಪಿ.ಐ ಕಾರ್ಯಕರ್ತರು ಹಿಂದೂ ನಾಯಕರ ಕೊಲೆಗೆ ಸಂಚು ರೂಪಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿಡಿಗೇಡಿಗಳ ಕೃತ್ಯಕ್ಕೆ ಧರ್ಮದ ಲೇಪನ ಬೇಡ. ಉದ್ದೇಶ ಪೂರ್ವಕವಾಗಿ ಒಂದು ಧರ್ಮವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಅಂತ ಹೇಳಿದ್ದಾರೆ.

    ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಮಹಾನ್ ದೇಶಭಕ್ತರೇನೂ ಅಲ್ಲ. ಯುಗಪುರುಷರು ಕೂಡ ಅಲ್ಲ. ಹೀಗಿದ್ದರೂ ಅವರನ್ನು ಹುತಾತ್ಮ ಮಾಡಲು ಹೋರಟಿದ್ದೀರಾ ಅಂತ ಪ್ರಶ್ನೆ ಮಾಡಿದರು. ಸಂಸದ ತೇಜಸ್ವಿ ಸೂರ್ಯ ಬಗ್ಗೆ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ತೇಜಸ್ವಿ ಸೂರ್ಯ ಕೊಡುಗೆ ಬೆಂಗಳೂರಿಗೆ ಏನು?, ಏನ್ ಸಾಧನೆ ಮಾಡಿದ್ದಾರೆ ಅಂತ ಇವರನ್ನು ಕೊಲ್ಲೋಕೆ ಹೋಗುತ್ತಾರೆ ಎಂದು ಉಡಾಫೆಯಾಗಿ ಮಾತನಾಡಿದರು.

    ಯಾರೋ ತಪ್ಪು ಮಾಡಿದ್ರು ಅಂತ ಒಂದು ಸಮುದಾಯದ ಮೇಲೆ ತಪ್ಪು ಹೊರಿಸಬೇಡಿ. ಉದ್ದೇಶಪೂರ್ವಕವಾಗಿ ಒಂದು ಸಮುದಾಯ ಟಾರ್ಗೆಟ್ ಮಾಡಬೇಡಿ. ತನಿಖೆ ಮಾಡಿ ಸತ್ಯ ಇದ್ದರೆ ಯಾವುದೇ ಸಂಘಟನೆ ಕ್ರಮ ತೆಗೆದುಕೊಳ್ಳಿ ಎಂದು ಇದೇ ವೇಳೆ ಕುಮಾರಸ್ವಾಮಿ ಒತ್ತಾಯಿಸಿದರು. ಇದನ್ನೂ ಓದಿ: ಸಮಾಜದ್ರೋಹಿ ಶಕ್ತಿಗಳನ್ನು ಯಾರೂ ಬೆಂಬಲಿಸಲ್ಲ: ಯು.ಟಿ.ಖಾದರ್

    ಏನಿದು ಪ್ರಕರಣ?:
    ದೇಶಾದ್ಯಂತ ಪೌರತ್ವ ಕಾಯ್ದೆ ಜಾರಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಡಿಸೆಂಬರ್ 22ರಂದು ನಗರದ ಟೌನ್ ಹಾಲ್ ನಲ್ಲಿ ಸಿಎಎ ಪರ ಜನಜಾಗೃತಿ ಹೊರಟಿದ್ದ ವರುಣ್ ಮೇಲೆ ಎಸ್‍ಡಿಪಿಐ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಿಂಬದಿಯಿಂದ ಎರಡು ಬೈಕ್ ನಲ್ಲಿ ಬಂದಿದ್ದ ಆರೋಪಿಗಳು ರಾಡ್ ಹಾಗೂ ಲಾಂಗ್ ಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಆರು ಜನ ಆರೋಪಿಗಳನ್ನ ಬಂಧಿಸಿದ್ದರು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡ ಪೊಲೀಸರಿಗೆ ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ:  ಸಂಘಟನೆಗೂ ಕೊಲೆ ಸ್ಕೆಚ್ ಆರೋಪಿಗಳಿಗೂ ಸಂಬಂಧವಿಲ್ಲ- ಕಮಿಷನರ್ ವಿರುದ್ಧ ಕಾನೂನು ಹೋರಾಟ: ಎಸ್‍ಡಿಪಿಐ ಅಧ್ಯಕ್ಷ

    ಬಂಧಿತ ಎಸ್‍ಡಿ ಪಿಐ ಕಾರ್ಯಕರ್ತರಾದ ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ಧಿಕ್, ಅಕ್ಬರ್ ಪಾಷಾ, ಸನಾ ಹಾಗೂ ಸಾಧಿಕ್ ಉಲ್ ಅಮೀನ್ ವಿಚಾರಣೆ ನಡೆಸಿದಾಗ, ವರುಣ್ ಮೇಲೆ ಹಲ್ಲೆಗೆ ವೈಯಕ್ತಿಕ ಕಾರಣವೇ ಇಲ್ಲ. ಆರೋಪಿಗಳಿಗೂ ವರುಣ್ ಗೂ ಸಂಬಂಧವೇ ಇಲ್ಲ. ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಆತನ ಹತ್ಯೆಗೆ ಮುಂದಾಗಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಅಲ್ಲದೆ ಜನಜಾಗೃತಿ ರ್ಯಾಲಿ ವೇಳೆ ಕಲ್ಲು ಕೂಡ ತೂರಲಾಗಿತ್ತು. ಕಲ್ಲುಗಳನ್ನು ತೂರಿ ಗುಂಪು ಚದುರಿಸುವ ಪ್ಲಾನ್ ಮಾಡಲಾಗಿತ್ತು. ಜನ ಚದುರುತ್ತಿದ್ದಂತೆ ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಆಲೋಚಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

  • CAA, NRCಗೆ ಜೆಡಿಎಸ್ ಯಾವತ್ತೂ ವಿರೋಧ: ಹೆಚ್‍ಡಿಕೆ ಸ್ಪಷ್ಟನೆ

    CAA, NRCಗೆ ಜೆಡಿಎಸ್ ಯಾವತ್ತೂ ವಿರೋಧ: ಹೆಚ್‍ಡಿಕೆ ಸ್ಪಷ್ಟನೆ

    ಬೆಂಗಳೂರು : ಸಿಎಎ, ಎನ್.ಆರ್.ಸಿ. ಮತ್ತು ಎನ್.ಪಿ.ಆರ್.ಗೆ ಜೆಡಿಎಸ್ ಯಾವತ್ತು ವಿರೋಧ ಮಾಡುತ್ತೆ. ಕಾಯ್ದೆ ಜಾರಿಗೆ ಜೆಡಿಎಸ್ ಪ್ರಬಲ ವಿರೋಧ ಮಾಡುತ್ತೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನ ಖುದಾಸ್ ಸಾಹೇಬ್ ಈದ್ಗಾ ಹಾಲ್ ನಲ್ಲಿ ಜಾಯಿಂಟ್ ಆಕ್ಷನ್ ಕಮಿಟಿ ಕರ್ನಾಟಕ ಆಯೋಜನೆ ಮಾಡಿದ್ದ ಸಿಎಎ ವಿರೋಧಿ ಸಭೆಯಲ್ಲಿ, ಮುಸ್ಲಿಂ ಮುಖಂಡರು ಜೊತೆ ಸಭೆ ಬಳಿಕ ಅವರು ನಾವು ಕೊನೆವರೆಗೂ ಮುಸ್ಲಿಂ ಸಮುದಾಯದ ಜೊತೆ ಇರುತ್ತೇವೆ ಅಂತ ಹೇಳಿದರು.

    ಇಡೀ ಸಭೆಯಲ್ಲಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದರು. ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿ, ಆರ್.ಎಸ್.ಎಸ್ ಕೊಡುಗೆ ಏನು ಇಲ್ಲ. ಕೇವಲ ಹಿಂದುತ್ವ ಅಜೆಂಡಾ ಇಟ್ಟುಕೊಂಡು ಬಿಜೆಪಿ ಕೆಲಸ ಮಾಡ್ತಿದೆ. ಈಗ ಬಿಜೆಪಿ ಸಿಎಎ ಜಾರಿಗೆ ತರೋ ಮೂಲಕ ಮುಸ್ಲಿಂ ವಿರುದ್ಧ ಕೆಲಸ ಮಾಡುತ್ತಿದೆ ಅಂತ ಆಕ್ರೋಶ ಹೊರ ಹಾಕಿದ್ರು.

    ಈ ಕಾಯ್ದೆ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಮುಸ್ಲಿಂ ಸಮುದಾಯದ ಮೇಲೆ ಕೆಟ್ಟು ಹೆಸರು ತರುವ ಕೆಲಸ ಬಿಜೆಪಿ ಮಾಡುತ್ತಿದೆ. ಬಿಜೆಪಿ ಒಂದು ಸಮುದಾಯವನ್ನ ಟಾರ್ಗೆಟ್ ಮಾಡಲು ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

    ಪ್ರಧಾನಿ ಮೋದಿ ಅವರು ಜಿಯಾ ವುಲ್ಲಾ ಮಾದರಿಯಲ್ಲಿ ಕೆಲಸ ಮಾಡ್ತಿದ್ದಾರೆ. ಈ ಕಾಯ್ದೆ ಜಾರಿಯಾದ್ರೆ ದೇಶದಾದ್ಯಂತ 7.5 ಕೋಟಿ ಜನರಿಗೆ ಅನ್ಯಾಯ ಆಗುತ್ತೆ. ಸಂವಿಧಾನವನ್ನು ತಿರುಚುವ ಕೆಲಸ ಬಿಜೆಪಿ ಮಾಡುತ್ತಿದ್ದು, ಇದಕ್ಕೆ ಜೆಡಿಎಸ್ ಬೆಂಬಲ ಕೊಡಲ್ಲ. ಸಿಎಎ ವಿರೋಧಿ ಹೋರಾಟಕ್ಕೆ ಜೆಡಿಎಸ್ ಸದಾ ಬೆಂಬಲ ನೀಡುತ್ತೆ ಅಂತ ಭರವಸೆ ನೀಡಿದರು.

  • ಸಾವರ್ಕರ್ ಬದಲು ಗೋಡ್ಸೆಗೆ ಭಾರತರತ್ನ ಕೊಡಿ: ಹೆಚ್‍ಡಿಕೆ ವಿವಾದ

    ಸಾವರ್ಕರ್ ಬದಲು ಗೋಡ್ಸೆಗೆ ಭಾರತರತ್ನ ಕೊಡಿ: ಹೆಚ್‍ಡಿಕೆ ವಿವಾದ

    ಬೆಂಗಳೂರು : ಸಿಎಎ, ಎನ್‍ಆರ್ ಸಿ ವಿರೋಧ ಪ್ರತಿಭಟನೆಗಳು, ಸಭೆಗಳು ಹೊಸ ಹೊಸ ವಿವಾದಗಳಿಗೆ ಎಡೆ ಮಾಡಿಕೊಡುತ್ತಿದೆ. ನಿನ್ನೆ ಸಿಎಎ, ಎನ್‍ಆರ್ ಸಿ  ವಿರೋಧಿ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

    ಬೆಂಗಳೂರಿನ ಖುದಾಸ್ ಸಾಹೇಬ್ ಈದ್ಗಾ ಹಾಲ್ ನಲ್ಲಿ ಮುಸ್ಲಿಂ ಮುಖಂಡರು ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ನಿನ್ನೆ ಸಭೆ ನಡೆಸಿದ್ದರು. ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಗಾಂಧೀಜಿ ಹಂತಕನಿಗೆ ಭಾರತ ರತ್ನ ಕೊಡಿ ಅಂತ ವಿವಾದದ ಹೇಳಿಕೆ ನೀಡಿದರು.

    ಜಾಯಿಂಟ್ ಆಕ್ಷನ್ ಕಮಿಟಿ ಕರ್ನಾಟಕ ಆಯೋಜನೆ ಮಾಡಿದ್ದ ಸಭೆಯಲ್ಲಿ ಮಾತನಾಡಿ ಕುಮಾರಸ್ವಾಮಿ, ಬಿಜೆಪಿ ಒಂದು ಸಮುದಾಯ ತುಳಿಯಲು ಸಿಎಎ, ಎನ್‍ಆರ್ ಸಿ ಜಾರಿಗೆ ತಂದಿದೆ. ಮುಸ್ಲಿಮರ ಶಕ್ತಿ ಕುಂದಿಸುವ ಕೆಲಸ ಬಿಜೆಪಿ ಮಾಡ್ತಿದೆ. ಮುಸ್ಲಿಮರ ವಿರುದ್ಧ ಹಿಡನ್ ಅಜೆಂಡಾ ಇಟ್ಟುಕೊಂಡು ಬಿಜೆಪಿ ಕೆಲಸ ಮಾಡ್ತಿದೆ ಅಂತ ಕಿಡಿಕಾರಿದ್ರು. ಈ ವೇಳೆ ಸಾವರ್ಕರ್ ಬಗ್ಗೆ ಪ್ರಸ್ತಾಪಿಸಿದ ಕುಮಾರಸ್ವಾಮಿ ಸಾವರ್ಕರ್ ಭಾರತ ರತ್ನ ಕೊಡೋದಕ್ಕೆ ಬಿಜೆಪಿ ಮುಂದಾಗಿದೆ. ಸಾವರ್ಕರ್ ಗೆ ಭಾರತರತ್ನ ಕೊಡೋ ಬದಲು ನಾಥೂರಾಮ್ ಗೋಡ್ಸೆಗೆ ಬಿಜೆಪಿ ಅವರು ಭಾರತರತ್ನ ಕೊಡಲಿ ಅಂತ ವಿವಾದಾತ್ಮಕ ಹೇಳಿಕೆ ಕೊಟ್ಟರು.

  • ಸಿಎಎ ಗೊಂದಲವನ್ನು ರಾಜ್ಯ ಸರ್ಕಾರ ಬಗೆಹರಿಸಲಿ: ಯು.ಟಿ.ಖಾದರ್

    ಸಿಎಎ ಗೊಂದಲವನ್ನು ರಾಜ್ಯ ಸರ್ಕಾರ ಬಗೆಹರಿಸಲಿ: ಯು.ಟಿ.ಖಾದರ್

    ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ಬಗ್ಗೆ ಜನರು ಗೊಂದಲದಲ್ಲಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಈ ಗೊಂದಲವನ್ನು ಸರಿಪಡಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಆಶಾ ಕಾರ್ಯಕರ್ತೆಯರು ಮನೆ ಮನೆ ಹೋದಾಗ ಗೊಂದಲ ಸೃಷ್ಟಿಯಾಗುತ್ತಿದೆ. ಜನರು, ಅದರಲ್ಲೂ ಮುಸ್ಲಿಂ ಸಮುದಾಯದವರು ತಮ್ಮ ಮಾಹಿತಿಯನ್ನು ಯಾರಿಗೂ ನೀಡಲು ತಯಾರಿಲ್ಲದ ಸ್ಥಿತಿ ಇದೆ. ಹೀಗಾಗಿ ಸರ್ಕಾರ ಈ ಬಗ್ಗೆ ಸರಿಯಾದ ಸ್ಪಷ್ಟನೆ ಕೊಡಬೇಕು ಎಂದು ಕೇಳಿಕೊಂಡಿದ್ದಾರೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಯಾವುದೇ ಮಾಹಿತಿ ಕಲೆ ಹಾಕಲು ಆದೇಶ ಕೊಟ್ಟಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ರಾಜ್ಯದ ಜನತೆಗೆ ವಿಶ್ವಾಸ ಬರುವಂತೆ ಮಾಹಿತಿ ನೀಡಬೇಕು. ಯಾಕೆಂದರೆ ಸದ್ಯ ಜನರು ಗೊಂದಲಕ್ಕೆ ಒಳಗಾಗಬಾರದು. ಸಾರ್ವಜನಿಕರ ಗೊಂದಲ ನಮಗೆ ಅರ್ಥವಾಗುತ್ತದೆ. ವಿಶ್ವಾಸ ಕಡಿಮೆಯಾದಾಗ ಜನರಿಗೆ ಸಂಶಯ ಹೆಚ್ಚಾಗುತ್ತದೆ ಎಂದು ಹೇಳಿದರು.

    ಜನವರಿ 19ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಇದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಮಾಹಿತಿ ಪಡೆಯಲು ಬಂದಾಗ ಯಾರೂ ಗೊಂದಲಕ್ಕೀಡಾಗಬಾರದು. ಆಶಾ ಕಾರ್ಯಕರ್ತೆಯರು ಮನೆಮನೆ ಸಂಪರ್ಕ ಹೊಂದಿರುತ್ತಾರೆ. ಜನ ಇದಕ್ಕೆ ಸಹಕಾರ ಕೊಡಬೇಕು ಎಂದು ಯು.ಟಿ.ಖಾದರ್ ಮನವಿ ಮಾಡಿಕೊಂಡರು.

  • ಬೆಂಗ್ಳೂರಿನ ಸೃಷ್ಟಿ ಕಾಲೇಜಿನ ಗೋಡೆಬರಹಕ್ಕೀಗ ರಾಜಕೀಯ ಬಣ್ಣ

    ಬೆಂಗ್ಳೂರಿನ ಸೃಷ್ಟಿ ಕಾಲೇಜಿನ ಗೋಡೆಬರಹಕ್ಕೀಗ ರಾಜಕೀಯ ಬಣ್ಣ

    ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಗಳು ನಾನಾ ರೂಪದಲ್ಲಿ ನಡೆಯುತ್ತಲೇ ಇದೆ. ಯಲಹಂಕದ ಕಾಲೇಜು ವಿದ್ಯಾರ್ಥಿಗಳು ಗೋಡೆಬರಹಗಳ ಮೂಲಕ ಪ್ರಧಾನಿ ಮೋದಿ ಹಾಗೂ ಸಿಎಎ ಕಾಯ್ದೆಯನ್ನು ವಿರೋಧಿಸಿದ್ದು ಈಗ ಈ ಪ್ರಕರಣಕ್ಕೆ ರಾಜಕೀಯ ಟ್ವಿಸ್ಟ್ ಸಿಕ್ಕಿದೆ.

    ಪೌರತ್ವ ತಿದ್ದುಪಡಿ ಕಾಯ್ದೆಯನ್ನ ವಿರೋಧಿಸಿ ಕಾಲೇಜು ವಿದ್ಯಾರ್ಥಿಗಳು ಗೋಡೆಬಹರಗಳನ್ನ ಬರೆದಿದ್ದ ವಿಚಾರ ಹೊಸ ರೂಪ ಪಡೆದಿದೆ. ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿ, ವಿದ್ಯಾರ್ಥಿನಿಯರ ಡ್ರೆಸ್ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡಿದರು ಎಂದು ಕಾಲೇಜಿನ ವಿದ್ಯಾರ್ಥಿಗಳು ಪತ್ರಿಕಾ ಪ್ರಕಟಣೆ ಹೊರ ತಂದಿದ್ದರು. ಇದನ್ನೂ ಓದಿ: ಖಾಸಗಿ ಕಾಲೇಜಿನಲ್ಲಿ ಸಿಎಎ ವಿರೋಧಿಸಿ ಗೋಡೆ ಬರಹ

    ಇದಕ್ಕೆ ಸ್ಪಷ್ಟನೆ ನೀಡಿರುವ ಶಾಸಕ ಎಸ್. ಆರ್ ವಿಶ್ವನಾಥ್, ಕಾಲೇಜಿನ ಸುತ್ತಲೂ ರಸ್ತೆಗಳಿವೆ. ಆದರೆ ವಿದ್ಯಾರ್ಥಿಗಳು ಕಾಲೇಜಿನ ಒಳಗೆ ಪಾರ್ಕಿಂಗ್ ಮಾಡುವ ಬದಲು ಫುಟ್‍ಪಾತ್ ಮತ್ತು ರಸ್ತೆ ಮೇಲೆ ಪಾರ್ಕಿಂಗ್ ಮಾಡುತ್ತಾರೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆಯೆಂದು ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನೆಲೆ ಕಾಲೇಜಿಗೆ ಭೇಟಿ ನೀಡಿ ವಾಹನಗಳನ್ನು ಆವರಣದಲ್ಲಿ ನಿಲ್ಲಿಸಿಕೊಳ್ಳುವಂತೆ ಮನವಿ ಮಾಡಿದ್ದೇನೆ. ಮೋದಿ ಬಗ್ಗೆ ಆಕ್ಷೇಪಾರ್ಹ ಬರಹ ಮತ್ತು ಚಿತ್ರಗಳನ್ನು ಬರೆದಿದ್ದರು. ಅವುಗಳನ್ನು ಅಳಿಸಿ ಹಾಕಲಾಗಿದೆ. ಯಾರು ಆ ಚಿತ್ರಗಳನ್ನು ಬಿಡಿಸಿದ್ದರು ಎನ್ನುವ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ತೆಗೆಸಲಾಗುತ್ತದೆ ಎಂದು ತಿಳಿಸಿದರು. ಜೊತೆಗೆ ವಿದ್ಯಾರ್ಥಿನಿಯರ ಡ್ರೆಸ್ ವಿಚಾರವಾಗಿ ಪ್ರತಿಕ್ರಿಯಿಸಿ, ನಾನ್ಯಾಕೆ ಡ್ರೆಸ್ ಬಗ್ಗೆ ಮಾತನಾಡಲಿ ಎಂದು ಆರೋಪ ತಳ್ಳಿಹಾಕಿದ್ದಾರೆ.

    ಶಾಸಕರ ಭೇಟಿ ನಂತರ ಈ ಗೋಡೆ ಬರಹದ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಶಾಸಕರ ಗೂಂಡಾಗಿರಿ ವರ್ತನೆ ಎಂದು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದು ಗೂಂಡಾವರ್ತನೆ ಎಂದು ದೂರಿದ್ದಾರೆ.

    ಪ್ರಕರಣದ ವಿವಾದ ಹೆಚ್ಚಾಗುತ್ತಿದ್ದಂತೆ ಇಂದು ಕಾಲೇಜಿಗೆ ರಜೆ ನೀಡಲಾಗಿದ್ದು, ಶಾಸಕರ ವಿರುದ್ಧದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ವಿದ್ಯಾರ್ಥಿಗಳು ಇಡೀ ಪ್ರಕರಣದಿಂದ ಹಿಂದೆ ಉಳಿದಿದ್ದಾರೆ.

    ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಬಾರದೆಂದು ಕಾಲೇಜು ಆಡಳಿತ ಮಂಡಳಿ ಸೂಚಿಸಿದೆ. ಈ ಬಗ್ಗೆ ಕಾಲೇಜಿನ ಆಡಳಿತ ಸಿಬ್ಬಂದಿ ಮಾತಾನಾಡಿ, ಗೋಡೆ ಬರಹಕ್ಕೂ ನಮ್ಮ ವಿದ್ಯಾರ್ಥಿಗಳಿಗೂ ಸಂಬಂಧವಿಲ್ಲ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ರಕ್ಷಣೆಗೆ ನಮ್ಮ ಮೊದಲ ಆದ್ಯತೆ. ನಾವು ಸ್ಥಳೀಯರೊಂದಿಗೆ ಸೌರ್ಹದಯುತವಾಗಿ ಇರುತ್ತೇವೆ ಎಂದಿದ್ದಾರೆ.

    ಇತ್ತ ಸ್ಥಳೀಯರು ಮಾತ್ರ ಕಾಲೇಜಿನವರಿಗೆ ಎಷ್ಟೇ ಬಾರಿ ಹೇಳಿದರು ಕೇಳಿಲ್ಲ. ರಸ್ತೆನಲ್ಲೇ ಪಾರ್ಕಿಂಗ್ ಮಾಡುತ್ತಾರೆ. ಕಾಲೇಜಿನ ಸುತ್ತಮುತ್ತಲಿನ ವಾತಾವರಣದಲ್ಲೇ ಧೂಮಪಾನ ಮತ್ತು ಮದ್ಯಪಾನ ಮಾಡುತ್ತಾರೆ. ಇಲ್ಲಿನ ಮನೆಗಳಿಗೆ ಈ ವಿದ್ಯಾರ್ಥಿಗಳಿಂದ ಸಮಸ್ಯೆಗಳು ಆಗುತ್ತಿವೆ. ವಿದ್ಯಾರ್ಥಿಗಳ ವರ್ತನೆಯನ್ನ ಸರಿಮಾಡಿಕೊಳ್ಳುವಂತೆ ಕಾಲೇಜು ಮಂಡಳಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ದೆಹಲಿ ಚುನಾವಣೆ – ಸಿಎಎ, ಎನ್.ಆರ್.ಸಿ ವಿಚಾರದಲ್ಲಿ ಆಪ್ ಗಪ್ ಚುಪ್

    ದೆಹಲಿ ಚುನಾವಣೆ – ಸಿಎಎ, ಎನ್.ಆರ್.ಸಿ ವಿಚಾರದಲ್ಲಿ ಆಪ್ ಗಪ್ ಚುಪ್

    ನವದೆಹಲಿ: ದೇಶದ್ಯಾಂತ ವಿವಾದಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಅಂತರ ಕಾಯ್ದುಕೊಳ್ಳುತ್ತಿದೆ. ವಿಪಕ್ಷಗಳ ಸಭೆಯಿಂದ ದೂರ ಉಳಿದಿದ್ದ ಆಮ್ ಅದ್ಮಿ ಚುನಾವಣಾ ಪ್ರಚಾರಗಳಲ್ಲೂ ಈ ಬಗ್ಗೆ ಸೊಲ್ಲೇತ್ತುತ್ತಿಲ್ಲ.

    ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಆಪ್ ಎಚ್ಚರಿಕೆ ಹೆಜ್ಜೆ ಇಡಲು ಆರಂಭಿಸಿದೆ. ಸಿಎಎ ಮತ್ತು ಎನ್.ಆರ್.ಸಿ ವಿಚಾರದಲ್ಲಿ ತಟಸ್ಥವಾಗುವ ಮೂಲಕ ತನ್ನ ಮತಗಳನ್ನು ಕ್ರೋಡಿಕರಿಸುವ ಕೆಲಸಕ್ಕೆ ಮುಂದಾಗಿದೆ. ಬಿಜೆಪಿ ಸಿಎಎ ಎನ್.ಆರ್.ಸಿಯನ್ನೆ ಬಂಡವಾಳ ಮಾಡಿಕೊಂಡು ಮತ ಬೇಟೆಗೆ ಇಳಿದಿದೆ. ಇತ್ತ ಕಾಂಗ್ರೆಸ್ ಈ ಎರಡು ಅಂಶಗಳನ್ನು ತೀವ್ರವಾಗಿ ವಿರೋಧಿಸಿದೆ. ಆಪ್ ಮಾತ್ರ ತಟಸ್ಥ ನೀತಿ ಅನುಸರಿಸುವ ಮೂಲಕ ಎರಡು ಬದಿಯ ಮತಗಳನ್ನು ಸೆಳೆಯುವ ತಂತ್ರ ಮಾಡುತ್ತಿದೆ.

    ಸಿಎಎ ಮತ್ತು ಎನ್.ಆರ್.ಸಿ ವಿರೋಧದಿಂದ ದೆಹಲಿಯಲ್ಲಿರುವ ಹೆಚ್ಚಿನ ಸಂಖ್ಯೆಯ ಜಾಟ್, ಗುಜ್ಜರ್, ಪಂಜಾಬಿ ಮತ್ತು ಪೂರ್ವಾಂಚಲ ಮತಗಳಲ್ಲಾಗುವ ಬದಲಾವಣೆಗಳನ್ನು ಊಹಿಸಲು ಕ್ಲಿಷ್ಟವಾಗಿದ್ದರಿಂದ ಆಪ್ ಪಕ್ಷವು ಸಿಎಎ ಮತ್ತು ಎನ್.ಆರ್.ಸಿ ಕುರಿತು ಪರ-ವಿರೋಧದ ನಿಲುವು ತಾಳದೆ ತಟಸ್ಥವಾಗಿದೆ. ಸಿಎಎ ತಿದ್ದುಪಡಿ ಕಾಯ್ದೆ ಜಾರಿ ಆದ ನಂತರ ನಡೆದ ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡರು ಮತಗಳಿಕೆಯಲ್ಲಿ ಕಳೆದ ಬಾರಿಗಿಂತ ಈ ಚುನಾವಣೆಯಲ್ಲಿ ಏರಿಕೆ ಕಂಡಿದೆ. ಇದೇ ಕಾರಣದಿಂದ ಆಪ್ ಈ ನಿಲುವು ತಾಳಿದೆ ಎನ್ನಲಾಗಿದೆ.

    ಸಿಎಎ ಎನ್.ಆರ್.ಸಿ ತಟಸ್ಥ ನೀತಿಯಿಂದ ದೆಹಲಿಯಲ್ಲಿರುವ ಮುಸ್ಲಿಂ ಹಾಗೂ ಹಿಂದೂಳಿದ ವರ್ಗಗಳ ಮತಗಳನ್ನು ಸೆಳೆಯಬಹುದು. ಜೊತೆಗೆ ಆಪ್ ಸರ್ಕಾರವನ್ನು ಶ್ಲಾಘಿಸುವ ಮೇಲ್ವರ್ಗದ ವೋಟ್‍ಗಳು, ದೆಹಲಿ ಹೊರ ವಲಯದಲ್ಲಿರುವ ನಿರಾಶ್ರಿತರ ವೋಟ್‍ಗಳನ್ನು ಗಳಿಸಬಹುದು ಎಂಬುದು ಆಪ್ ಲೆಕ್ಕಾಚಾರ. ಸಿಎಎ ಅಥವಾ ಎನ್.ಆರ್.ಸಿ ವಿಚಾರದಲ್ಲಿ ಯಾವುದಾದರೂ ಒಂದು ನಿರ್ಧಾರಕ್ಕೆ ಬಂದಲ್ಲಿ ವೋಟ್ ಬ್ಯಾಂಕ್‍ಗೆ ಧಕ್ಕೆ ಆಗಬಹುದು ಎನ್ನುವ ಲೆಕ್ಕಾಚಾರದಲ್ಲಿ ಎಚ್ಚರಿಯ ಹೆಜ್ಜೆ ಇಡುತ್ತಿದೆ.

  • ಜನಸಾಗರದ ನಡುವೆ ಶಾಂತಿಯುತವಾಗಿ ನಡೀತು ಮುಸ್ಲಿಂ ಸಂಘಟನೆಗಳ ಬೃಹತ್ ಸಮಾವೇಶ

    ಜನಸಾಗರದ ನಡುವೆ ಶಾಂತಿಯುತವಾಗಿ ನಡೀತು ಮುಸ್ಲಿಂ ಸಂಘಟನೆಗಳ ಬೃಹತ್ ಸಮಾವೇಶ

    – ಒಂದು ಲಕ್ಷಕ್ಕೂ ಅಧಿಕ ಪ್ರತಿಭಟನಾಕಾರರು ಭಾಗಿ
    – ಐದು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ

    ಮಂಗಳೂರು: ಪೌರತ್ವ ಕಾಯಿದೆ ವಿರೋಧಿಸಿ, ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳು ನಡೆಸಿದ ಬೃಹತ್ ಪ್ರತಿಭಟನಾ ಸಭೆ ನಿರೀಕ್ಷೆಗೂ ಮೀರಿ ಶಾಂತಿಯುತವಾಗಿ ಯಶಸ್ಸು ಕಂಡಿದ್ದು,ಈ ಮೂಲಕ ಮುಸ್ಲಿಂ ಸಂಘಟನೆಗಳು ತಮ್ಮ ಶಕ್ತಿ ಪ್ರದರ್ಶನ ಮಾಡಿದೆ. ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಕೇಂದ್ರದ ವಿರುದ್ದ, ಪೌರತ್ವ ಕಾಯಿದೆಯ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

    ಸಮಾವೇಶ ನಡೆದ ಅಡ್ಯಾರ್ ಮೈದಾನದ ತುಂಬಾ ತ್ರಿವರ್ಣ ಧ್ವಜ ಹಾರಾಡಿದ್ದು,ಪೌರತ್ವ ಕಾಯಿದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ..ಮಂಗಳೂರು ಗೋಲಿಬಾರ್ ಪ್ರಕರಣದ ನಂತರ ಮೊದಲ ಬಾರಿಗೆ ಮಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆದಿದ್ದು, ಪೊಲೀಸರ ವಿರುದ್ಧವೂ ಫ್ಲೇ ಕಾರ್ಡ್ ಪ್ರದರ್ಶನ ಮಾಡಲಾಗಿದೆ..ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ.ಪಿ ಎಸ್ ಹರ್ಷ ವಿರುದ್ಧವೂ ಸಮಾವೇಶದಲ್ಲಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯಕ್ರಮ ನಡೆದಿದ್ದು. ಮಾಜಿ IAS ಅಧಿಕಾರಿಗಳಾದ ಹರ್ಷ ಮಂದರ್,ಕೇರಳದ ಕಣ್ಣನ್ ಗೋಪಿನಾಥನ್ ಸೇರಿದಂತೆ ಮುಸ್ಲಿಂ ಸಂಘಟನೆಗಳ ಪ್ರಮುಖರು ಭಾಷಣ ಮಾಡಿ ಜನಾಕ್ರೋಶ ವ್ಯಕ್ತಪಡಿಸಿದ್ದಾರೆ.

    ಮುಸ್ಲಿಂ ಸಂಘಟನೆಗಳ ಬೃಹತ್ ಸಮಾವೇಶದ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಕಾನೂನು ಸುವ್ಯವಸ್ಥೆ ವಿಭಾಗದ ADGP ಅಮರ್ ಕುಮಾರ್ ಪಾಂಡೆ ಮಂಗಳೂರಿನಲ್ಲೇ ಬೀಡು ಬಿಟ್ಟಿದ್ದು ಒಟ್ಟು 5 ಸಾವಿರ ಪೊಲೀಸರಿಂದ ಭಧ್ರತೆ ನೀಡಲಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ಕ್ಕೆ ತಾಗಿಕೊಂಡಿರುವ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು,ಮಧ್ಯಾಹ್ನದ ನಂತರ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧ ಮಾಡಲಾಗಿತ್ತು. ಕೇರಳದಿಂದ ಪ್ರತಿಭಟನಗೆ ಕಿಡಿಗೇಡಿಗಳು ಬರುವ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ,ರೈಲ್ವೇ ನಿಲ್ದಾಣ,ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.

    ಒಟ್ಟಿನಲ್ಲಿ ಪೊಲೀಸರಿಗೆ ತಲೆನೋವಾಗಿದ್ದ ಮುಸ್ಲಿಂ ಸಂಘಟನೆಗಳ ಪ್ರತಿಭಟನಾ ಸಮಾವೇಶ ಶಾಂತವಾಗಿ ನಡೆದಿದ್ದು ಪೊಲೀಸರು ನಿರಾಳರಾಗಿದ್ದಾರೆ..ಕೇಂದ್ರ ಸರ್ಕಾರದ ಮತ್ತು ಪೊಲೀಸರ ವಿರುದ್ಧ ಮುಸ್ಲಿಂ ಸಂಘಟನೆಗಳು ಶಕ್ತಿ ಪ್ರದರ್ಶನ ಮಾಡಿದ್ದು,ಮಂಗಳೂರಿನ ಕಾವು ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ.

  • ಖಾಸಗಿ ಕಾಲೇಜಿನಲ್ಲಿ ಸಿಎಎ ವಿರೋಧಿಸಿ ಗೋಡೆ ಬರಹ

    ಖಾಸಗಿ ಕಾಲೇಜಿನಲ್ಲಿ ಸಿಎಎ ವಿರೋಧಿಸಿ ಗೋಡೆ ಬರಹ

    ಬೆಂಗಳೂರು: ಯಲಹಂಕದ ಖಾಸಗಿ ಕಾಲೇಜಿನಲ್ಲಿ ಸಿಎಎ ವಿರೋಧಿಸಿ ಗೋಡೆ ಬರಹಗಳನ್ನು ಬರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಯಲಹಂಕದ 5ನೇ ಹಂತದಲ್ಲಿರುವ ಸೃಷ್ಟಿ ಇನ್ಸ್ ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ಎದುರಿನ ಪಾರ್ಕ್ ಹಾಗೂ ಮೈದಾನದ ಗೋಡೆಗಳ ಮೇಲೆ ಸಿಎಎ ಹಾಗೂ ಪ್ರಧಾನಿ ಮೋದಿ ಕುರಿತ ವ್ಯಂಗ್ಯ ಚಿತ್ರಗಳು ಬಿಡಿಸಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿದ್ದು, ಬುಧವಾರ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಅಧಿಕಾರಿಗಳು, ಆ ಚಿತ್ರ ಹಾಗೂ ಬರಹಗಳನ್ನು ತೆರೆವುಗೊಳಿಸಿದ್ದಾರೆ.

    ಈ ಘಟನೆ ಹಿನ್ನೆಲೆ ಬುಧವಾರ ಸ್ಥಳಕ್ಕೆ ಆಗಮಿಸಿದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಪಕ್ಷದ ಕಾರ್ಯಕರ್ತರು, ಬಿಬಿಎಂಪಿ ಅಧಿಕಾರಿಗಳೊಂದಿಗೆ ಕಾಲೇಜಿಗೆ ಭೇಟಿ ನೀಡಿದರು. ವಿಶ್ವನಾಥ್ ಭೇಟಿಗೆ ಕೆಲವು ವಿದ್ಯಾರ್ಥಿಗಳು ಹಾಗೂ ಸಿಎಎ ವಿರೋಧಿ ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಡ್ರೆಸ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

    ಈ ಘಟನೆ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಕಾಲೇಜಿನ ಸುತ್ತಲೂ ರಸ್ತೆಗಳಿವೆ. ಆದರೆ ವಿದ್ಯಾರ್ಥಿಗಳು ಕಾಲೇಜಿನೊಳಗೆ ಪಾರ್ಕಿಂಗ್ ಮಾಡುವ ಬದಲು ಫುಟ್‍ಪಾತ್ ಮತ್ತು ರಸ್ತೆ ಮೇಲೆ ಪಾರ್ಕಿಂಗ್ ಮಾಡುತ್ತಾರೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ದೂರು ನೀಡಿದರು. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ಭೇಟಿ ನೀಡಿ ವಾಹನಗಳನ್ನು ಆವರಣದಲ್ಲಿ ನಿಲ್ಲಿಸಿಕೊಳ್ಳುವಂತೆ ಮನವಿ ಮಾಡಿದ್ದೇನೆ ಎಂದರು.

    ಅಲ್ಲದೆ ಮೋದಿ ಬಗ್ಗೆ ಆಕ್ಷೇಪಾರ್ಹ ಬರಹ ಮತ್ತು ಚಿತ್ರಗಳನ್ನು ಬರೆದಿದ್ದು, ಅವುಗಳನ್ನು ಅಳಿಸಿ ಹಾಕಲಾಗಿದೆ. ಯಾರು ಆ ಚಿತ್ರಗಳನ್ನು ಬಿಡಿಸಿದ್ದರು ಎನ್ನುವ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ತೆಗೆಸಲಾಗುತ್ತೆ. ವಿದ್ಯಾರ್ಥಿಗಳ ಡ್ರೆಸ್ ವಿಚಾರವಾಗಿ ನಾನ್ಯಾಕೆ ಮಾತಾಡಲಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಸೃಷ್ಟಿ ಕಾಲೇಜಿನ ವಿದ್ಯಾರ್ಥಿಗಳು ಸಿಎಎ ವಿರೋಧಿಸಿ ಪ್ರತಿಭಟಿಸಿದ್ದರು. ಆಗ ಪೊಲೀಸರು ಅಕ್ರಮವಾಗಿ ವಿದ್ಯಾರ್ಥಿಗಳನ್ನು ಬಂಧಿಸಿ ಇಟ್ಟಿದ್ದರು. ಪೊಲೀಸರ ಕ್ರಮದ ಬಗ್ಗೆ ಸೃಷ್ಟಿ ಕಾಲೇಜು ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.