Tag: ಸಿಎಸ್ ರವಿಕುಮಾರ್

  • ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

    ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

    ಬೆಂಗಳೂರು: ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಕಂದಾಯ ಸಚಿವ ಆರ್.ಆಶೋಕ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಬರಮಾಡಿಕೊಂಡರು.

    ಇದಕ್ಕೂ ಮುನ್ನ ಮಾತನಾಡಿದ ಸಚಿವ ಆರ್.ಅಶೋಕ್, ನೂತನ ರಾಜ್ಯಪಾಲರನ್ನು ನಾನು ಸಿಎಸ್ ರವಿಕುಮಾರ್ ಸರ್ಕಾರದ ಪರವಾಗಿ ಸ್ವಾಗತಿಸಲು ಬಂದಿದ್ದೇವೆ. ಗೆಹ್ಲೋಟ್ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡಿರುವುದು ಸಂತೋಷವಾಗಿದೆ. ಈ ಹಿಂದೆಯೇ ರಾಜ್ಯದ ಉಸ್ತುವಾರಿಗಳಾಗಿ ಗೆಹ್ಲೋಟ್ ರವರು ಕೆಲಸ ಮಾಡಿದ್ದಾರೆ. ಕರ್ನಾಟಕದ ಪರಿಚಯ ಮತ್ತು ಇತಿಹಾಸ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದರು.

    ಕೇಂದ್ರ ಸಚಿವರಾಗಿ ಕೆಲಸ ಮಾಡಿದ ಅನುಭವ ಗೆಹ್ಲೋಟ್ ಅವರಿಗಿದೆ. ತುಳಿತಕ್ಕೆ ಒಳಗಾದ ಸಮುದಾಯದಿಂದ ಬಂದವರಾಗಿದ್ದಾರೆ. ಅವರ ಸಲಹೆ ಸೂಚನೆ ಮತ್ತು ಒಳ್ಳೆಯ ಆಡಳಿತಕ್ಕೆ ಅವರ ಮಾರ್ಗದರ್ಶನ ಅಗತ್ಯವಾಗಿದೆ ಎಂದು ತಿಳಿಸಿದರು. ತಾವರ್ ಚಂದ್ ಗೆಹ್ಲೋಟ್ ಅವರು ನಾಳೆ ಕರ್ನಾಟಕದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

  • ನಿರ್ದಿಷ್ಟ ಇಲಾಖೆಯ ಸರ್ಕಾರಿ ಸಿಬ್ಬಂದಿ ಕೆಲಸಕ್ಕೆ ಹಾಜರಿರಬೇಕು: ಸಿಎಸ್

    ನಿರ್ದಿಷ್ಟ ಇಲಾಖೆಯ ಸರ್ಕಾರಿ ಸಿಬ್ಬಂದಿ ಕೆಲಸಕ್ಕೆ ಹಾಜರಿರಬೇಕು: ಸಿಎಸ್

    ಬೆಂಗಳೂರು: ನಾವು ಸೂಚಿಸಿದ ಇಲಾಖೆಯ ಸಿಬ್ಬಂದಿ ಕೆಲಸಕ್ಕೆ ಹಾಜರಿರಬೇಕು, ಕೆಲ ಇಲಾಖೆಗಳಲ್ಲಿ ಶೇ.100ರಷ್ಟು ಹಾಗೂ ಇನ್ನು ಕೆಲ ಇಲಾಖೆಗಳಲ್ಲಿ ಶೇ.50ರಷ್ಟು ಸಿಬ್ಬಂದಿ ರೊಟೇಷನ್ ಆಧಾರದಲ್ಲಿ ಕೆಲಸ ಮಾಡಬೇಕು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.

    ಈ ಕುರಿತು ಆದೇಶ ಹೊರಡಿಸಿರುವ ಅವರು, ಕಂದಾಯ, ಗೃಹ, ಆರೋಗ್ಯ, ವೈದಕೀಯ, ಒಳಾಡಳಿತ ಸಿಬ್ಬಂದಿ ಶೇ.100ರಷ್ಟು ಕರ್ತವ್ಯಕ್ಕೆ ಹಾಜರಿರಬೇಕು. ಪಂಚಾಯತ್ ರಾಜ್, ನಗರಾಭಿವೃದ್ಧಿ, ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ, ಆರ್ಥಿಕ, ಪಶುಸಂಗೋಪನೆ, ಕೃಷಿ, ಕಾರ್ಮಿಕ, ತೋಟಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗಳಲ್ಲಿ ಶೇ.50ರಷ್ಟು ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಿದ್ದಾರೆ.

    ಉಳಿದ ಇಲಾಖೆಗಳಿಗೆ ವಿನಾಯಿತಿ ನೀಡಲಾಗಿದ್ದು, ಅಗತ್ಯ ಇದ್ದಾಗ ಕಾರ್ಯದರ್ಶಿಯವರು ಸೂಚನೆ ನೀಡಿದ ತಕ್ಷಣ ಕೆಲಸಕ್ಕೆ ಹಾಜರಾಗಬೇಕು. ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು. ದೃಷ್ಟಿಹೀನ, ದೈಹಿಕ ಅಂಗವೈಕಲ್ಯ, ಗರ್ಭಿಣಿ ಮಹಿಳಾ ಸಿಬ್ಬಂದಿ ಕಚೇರಿ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ ಆದೇಶ ಮೇ 12ರ ವರೆಗೂ ಜಾರಿಯಲ್ಲಿ ಇರುತ್ತದೆ ಎಂದು ರವಿಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.