Tag: ಸಿಕಂದರಾಬಾದ್

  • ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು

    ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಿಗೆ ಸಿಕ್ಕಿಕೊಂಡು 11ರ ಬಾಲಕ ಸಾವು

    ಹೈದರಾಬಾದ್: 11 ವರ್ಷದ ಬಾಲಕ ಪೂರಿ ತಿಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನ (Secunderabad) ಶಾಲೆಯೊಂದರಲ್ಲಿ ನಡೆದಿದೆ.

    ಮೃತ ಬಾಲಕನನ್ನು 6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ.

    ಸಿಕಂದರಾಬಾದ್‌ನ ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುವಾಗ ಈ ಘಟನೆ ಸಂಭವಿಸಿದೆ.ಇದನ್ನೂ ಓದಿ: ಡಾ ಹಗರಣದ ಲೋಕಾಯುಕ್ತ ವರದಿ ಇಂದು ಹೈಕೋರ್ಟ್‌ಗೆ ಸಲ್ಲಿಕೆ – ಸಿಬಿಐ ಅಂಗಳಕ್ಕೆ ತನಿಖೆ ಶಿಫ್ಟ್?

    ಸೋಮವಾರ (ನ.25) ಶಾಲೆಯಲ್ಲಿ ಮಧ್ಯಾಹ್ನ ಊಟದ ವೇಳೆ ಮೂರು ಪೂರಿ ಒಟ್ಟಿಗೆ ತಿಂದ ಪರಿಣಾಮ ಬಾಲಕನಿಗೆ ಉಸಿರುಗಟ್ಟಿ ನೆಲಕ್ಕೆ ಕುಸಿದಿದ್ದಾನೆ. ಎಷ್ಟೇ ಎಚ್ಚರಗೊಳಿಸಿದರೂ ಪ್ರಜ್ಞೆ ಬರದ ಕಾರಣ ಆತನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ವೈದ್ಯರು ತಪಾಸಣೆ ಮಾಡಿ ಸಾವನ್ನಪ್ಪಿರುವುದಾಗಿ ಧೃಡಪಡಿಸಿದ್ದಾರೆ.

    ಶಾಲಾ ಆಡಳಿತ ಮಂಡಳಿ ಬಾಲಕನ ಪೋಷಕರಿಗೆ ಕರೆ ಮಾಡಿ ನಿಮ್ಮ ಮಗ ಊಟದ ಸಮಯದಲ್ಲಿ ಒಟ್ಟಿಗೆ ಮೂರು ಪೂರಿ ತಿಂದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಸದ್ಯ ಪೊಲೀಸರು ಮೃತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇಲ್ಲಿಯವರೆಗೂ ಆಂಧ್ರಪ್ರದೇಶದಲ್ಲಿ (Andhrapradesh) ಈ ರೀತಿಯ ಮೂರು ಘಟನೆಗಳು ವರದಿಯಾಗಿವೆ. ಕಳೆದ ತಿಂಗಳು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದೋಸೆ ತಿಂದು ಉಸಿರುಗಟ್ಟಿಸಿ ಸಾವನ್ನಪ್ಪಿದ್ದ. ವೆಂಕಟಯ್ಯ (43) ಅವರು ಸ್ಥಳೀಯ ಉಪಾಹಾರ ಗೃಹದಲ್ಲಿ ದೋಸೆ ತಿನ್ನುತ್ತಿದ್ದಾಗ ಅವರ ಗಂಟಲಿಗೆ ಆಹಾರ ಸಿಕ್ಕಿಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

    ಜೂನ್‌ನಲ್ಲಿ ಹೈದರಾಬಾದ್‌ನಲ್ಲಿ (Hyderabad) 37 ವರ್ಷದ ವ್ಯಕ್ತಿಯೊಬ್ಬರು ಕೋಳಿಯ ಮೂಳೆಯ ತುಂಡು ಗಂಟಲಿಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದರು. ಜನವರಿಯಲ್ಲಿ ಮಹಬೂಬ್‌ನಗರ ಜಿಲ್ಲೆಯಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಊಟ ಮಾಡುವಾಗ ಕೋಳಿಯ ಮೂಳೆಯ ತುಂಡು ಗಂಟಲಿಗೆ ಸಿಲುಕಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದ.ಇದನ್ನೂ ಓದಿ: ಜೋಡಿ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಕಾಯಿಲೆ ಹುಷಾರಾಗ್ಲಿ ಅಂತ ಅಜ್ಜಿ ಮೇಲೆ ಮೊಮ್ಮಗನಿಂದಲೇ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ!

  • Secunderabad| ಮುತ್ಯಾಲಮ್ಮ ದೇವಸ್ಥಾನದ ವಿಗ್ರಹ ಧ್ವಂಸ – ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

    Secunderabad| ಮುತ್ಯಾಲಮ್ಮ ದೇವಸ್ಥಾನದ ವಿಗ್ರಹ ಧ್ವಂಸ – ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

    ಹೈದರಾಬಾದ್: ಸಿಕಂದರಾಬಾದ್‌ನ (Secunderabad) ಮುತ್ಯಾಲಮ್ಮ ದೇವಸ್ಥಾನದಲ್ಲಿನ (Muthyalamma Temple) ವಿಗ್ರಹವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ಒಬ್ಬ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆ ಬೆನ್ನಲ್ಲೇ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಿದರು. ಇದಕ್ಕೆ ಬಿಜೆಪಿ (BJP) ಮುಖಂಡರೂ ಕೈಜೋಡಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮಾಧವಿ ಲತಾ (Madhavi Latha) ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದುರ್ಗಾದೇವಿ ಮೂರ್ತಿ ವಿರ್ಸಜನೆ| ಮಸೀದಿ ಎದುರು ಹಾಡು ಹಾಕಿದ್ದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ

    ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಿದರು. ಇದೊಂದು ನಾಚಿಕೆಗೇಡಿನ ಘಟನೆ ಎಂದಿರುವ ಅವರು, ಕೆಲವರು ಉದ್ದೇಶಪೂರ್ವಕವಾಗಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಂಧಿತ ಆರೋಪಿ ಕಳ್ಳತನಕ್ಕಾಗಿ ಇಲ್ಲಿಗೆ ಬಂದಿಲ್ಲ. ಹಿಂದೂ ಸಮಾಜವನ್ನು ಅವಮಾನಿಸಲು ಬಂದಿದ್ದಾರೆ. ಹೈದರಾಬಾದ್‌ನ ವಿವಿಧೆಡೆ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕೆಲವರು ಹೈದರಾಬಾದ್‌ನಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಮತ್ತು ಹೈದರಾಬಾದ್‌ನಲ್ಲಿ ಕೋಮು ಗಲಭೆಗಳನ್ನು ಹೆಚ್ಚಿಸಲು ಉದ್ದೇಶಪೂರ್ವಕವಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಕಿಶನ್ ರೆಡ್ಡಿ ಹೇಳಿದರು. ಇದನ್ನೂ ಓದಿ: Uttar Pradesh | ದುರ್ಗಾದೇವಿ ಮೂರ್ತಿ ವಿರ್ಸಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ

    ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ಮತ್ತು ಅವರ ದೇವಾಲಯಗಳು ಸುರಕ್ಷಿತವಾಗಿಲ್ಲ. ಇಂತಹ ಘಟನೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ತೆಲಂಗಾಣದಲ್ಲಿ ಹಿಂದೂ ದೇವಾಲಯಗಳ ಮೇಲಿನ ಮತ್ತೊಂದು ದಾಳಿಯಾಗಿದೆ. ರೇವಂತ್ ರೆಡ್ಡಿ ಸರ್ಕಾರವು ಶೀಘ್ರವಾಗಿ ಕ್ರಮವಹಿಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ತೆಲಂಗಾಣ ಬಿಜೆಪಿ ವಕ್ತಾರ ತುಳ್ಳ ವೀರೇಂದ್ರ ಗೌಡ್ ಹೇಳಿದರು. ಮಾಜಿ ಸಚಿವ ಹಾಗೂ ಬಿಆರ್‌ಎಸ್ ಶಾಸಕ ತಲಸಾನಿ ಶ್ರೀನಿವಾಸ್ ಯಾದವ್ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಸ್ನೇಹಮಯಿ ಕೃಷ್ಣಗೆ ರಕ್ಷಣೆ ಕೊಡಲು ನಾವು ಬದ್ಧ – ಎಂ.ಬಿ ಪಾಟೀಲ

    ಅಕ್ಟೋಬರ್ 12 ರಂದು ಹೈದರಾಬಾದ್‌ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಹೈದರಾಬಾದ್‌ನ ಬೇಗಂ ಬಜಾರ್‌ನ ನಾಂಪಲ್ಲಿ ವಸ್ತು ಪ್ರದರ್ಶನ ಮೈದಾನದಲ್ಲಿ ಪೂಜಾ ಮಂಟಪದಲ್ಲಿ ದುರ್ಗಾ ಮಾತೆಯ ವಿಗ್ರಹಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಒಬ್ಬನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ವ್ಯಕ್ತಿಯು ಹಸಿವಿನಿಂದ ಬಳಲುತ್ತಿದ್ದ ನಿರಾಶ್ರಿತ ವ್ಯಕ್ತಿಯಾಗಿದ್ದು, ಆಹಾರಕ್ಕಾಗಿ ಹುಡುಕುತ್ತಿರುವಾಗ ವಿಗ್ರಹಕ್ಕೆ ಹಾನಿ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್, ಸಿದ್ದರಾಮಯ್ಯ ಮುಸಲ್ಮಾನರ ಬಿಗ್‌ ಬಾಸ್: ಅಶೋಕ್‌ ಲೇವಡಿ

  • `ಅಗ್ನಿಪಥ್’ ಪ್ರತಿಭಟನೆ – ಸಿಕಂದರಾಬಾದ್ ಹಿಂಸಾಚಾರದ ಮಾಸ್ಟರ್ ಮೈಂಡ್ ಅರೆಸ್ಟ್

    `ಅಗ್ನಿಪಥ್’ ಪ್ರತಿಭಟನೆ – ಸಿಕಂದರಾಬಾದ್ ಹಿಂಸಾಚಾರದ ಮಾಸ್ಟರ್ ಮೈಂಡ್ ಅರೆಸ್ಟ್

    ಹೈದರಾಬಾದ್: `ಅಗ್ನಿಪಥ್’ ನೇಮಕಾತಿ ಯೋಜನೆ ವಿರೋಧಿಸಿ ಶುಕ್ರವಾರ ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಹಲವಾರು ರೈಲುಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರ ಕೃತ್ಯವೆಸಗಿದ ಪ್ರತಿಭಟನಾಕಾರರ ಹಿಂದೆ ಮಾಸ್ಟರ್ ಮೈಂಡ್ ಆವುಲಾ ಸುಬ್ಬಾ ರಾವ್ ಇದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಪ್ರತಿಭಟನೆ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಪೊಲೀಸರು ಫೈರಿಂಗ್ ನಡೆಸಿದಾಗ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್

    ಪ್ರತಿಭಟನೆ ನಡೆಸಲು ಜನರನ್ನು ಸಜ್ಜುಗೊಳಿಸಲು ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಲಾಗಿತ್ತು. ಅಲ್ಲದೇ ಸಿಕಂದರಾಬಾದ್‍ನಲ್ಲಿ ರೈಲಿಗೆ ಬೆಂಕಿ ಹಚ್ಚಿ ಹಿಂಸಾಚಾರ ಕೃತ್ಯಗಳನ್ನು ಎಸಗಿದ್ದವರಲ್ಲಿ ಆವುಲಾ ಸುಬ್ಬಾ ರಾವ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಆವುಲಾ ಸುಬ್ಬಾ ರಾವ್ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ನರಸರಾವ್‍ಪೇಟೆ, ಹೈದರಾಬಾದ್ ಸೇರಿದಂತೆ ಸುಮಾರು ಏಳು ಸ್ಥಳಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಸೇನಾ ಆಕಾಂಕ್ಷಿಗಳಿಗಾಗಿ ತರಬೇತಿ ಅಕಾಡೆಮಿಯನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?

    ಶುಕ್ರವಾರ ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಪ್ರತಿಭಟನಾಕಾರರು ಜಮಾಯಿಸಿ ಮೂರು ಪ್ಯಾಸೆಂಜರ್ ರೈಲುಗಳಿಗೆ ಬೆಂಕಿ ಹಚ್ಚಿ ಕೋಚ್‍ಗಳನ್ನು ಸುಟ್ಟುಹಾಕಿ, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ನಾಶಪಡಿಸಿದರು. ಘಟನೆ ವೇಳೆ ವಾರಂಗಲ್‍ನ ರಾಜೇಶ್(19) ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೋನಿ, ಕರ್ನೂಲ್, ಗುಂಟೂರು, ನೆಲ್ಲೂರು, ಅಮದಾಲವಲಸ, ವಿಶಾಖಪಟ್ಟಣಂ ಮತ್ತು ಯಲಮಂಚಿಲಿಯ ಹಲವಾರು ಮಂದಿಯನ್ನು
    ಪೊಲೀಸರು ಬಂಧಿಸಿದ್ದಾರೆ.

    Live Tv

  • ಸಿಕಂದರಾಬಾದ್ ಕಂಟೋನ್ಮೆಂಟ್ ಮನೆಗಳಿಗೆ ಶೀಘ್ರದಲ್ಲೇ ಉಚಿತ ಕುಡಿಯುವ ನೀರು

    ಸಿಕಂದರಾಬಾದ್ ಕಂಟೋನ್ಮೆಂಟ್ ಮನೆಗಳಿಗೆ ಶೀಘ್ರದಲ್ಲೇ ಉಚಿತ ಕುಡಿಯುವ ನೀರು

    ಹೈದರಾಬಾದ್: ಸಿಕಂದರಾಬಾದ್ ಕಂಟೋನ್ಮೆಂಟ್ ಪ್ರದೇಶದ ಪ್ರತಿ ಮನೆಗೆ ತಿಂಗಳಿಗೆ 20 ಕಿಲೋ ಲೀಟರ್‌ಗಳವರೆಗೆ ಉಚಿತ ಕುಡಿಯುವ ನೀರನ್ನು ಪೂರೈಸಲು ಹೈದರಾಬಾದ್ ಮೆಟ್ರೋಪಾಲಿಟನ್ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಧರಿಸಿದೆ.

    ಕೊಳೆಗೇರಿಗಳು, ದೇಶೀಯ ಸಂಸ್ಥೆಗಳು ಮತ್ತು ದೇಶೀಯ ಸಂಪರ್ಕಗಳನ್ನು ಹೊಂದಿರುವ ಬಹುಮಹಡಿ ಕಟ್ಟಡಗಳಿಗೆ ಫೆಬ್ರವರಿ 1 ರಿಂದ ಪೂರ್ವಾನ್ವಯ ಪರಿಣಾಮದೊಂದಿಗೆ ಯೋಜನೆಯು ಅನ್ವಯಿಸುತ್ತದೆ. ಇದನ್ನೂ ಓದಿ: ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ತೆಲಂಗಾಣ ಸಚಿವ ಟಿ. ಶ್ರೀನಿವಾಸ್ ಯಾದವ್ ಅವರು, ರಾಜ್ಯ ಸರ್ಕಾರವು ಸುಮಾರು 16.8 ಕೋಟಿ ರೂಪಾಯಿ ವೆಚ್ಚವನ್ನು ಮಾಡಿ ಬಡ ಕುಟುಂಬಗಳಿಗೆ ಅನುಕೂಲವಾಗುವಂತೆ ಎಸ್‍ಸಿಬಿ ಮಿತಿಯಲ್ಲಿ ಉಚಿತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

  • ಪ್ರಿಯಾಂಕಾ ಗಾಂಧಿಗೆ ‘ಪಪ್ಪು ಕಿ ಪಪ್ಪಿ’ ಅಂದ್ರು ಮಹೇಶ್ ಶರ್ಮಾ!

    ಪ್ರಿಯಾಂಕಾ ಗಾಂಧಿಗೆ ‘ಪಪ್ಪು ಕಿ ಪಪ್ಪಿ’ ಅಂದ್ರು ಮಹೇಶ್ ಶರ್ಮಾ!

    ಸಿಕಂದರಾಬಾದ್: ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಮಹೇಶ್ ಶರ್ಮಾ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ‘ಪಪ್ಪು ಕಿ ಪಪ್ಪಿ’ ಎಂದು ಕರೆದು ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ಸಿಕಂದರಾಬಾದ್‍ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಶರ್ಮಾ, ಒಂದುವೇಳೆ ಮಮತಾ ಬ್ಯಾನರ್ಜಿ ಇಲ್ಲಿಗೆ ಬಂದು ಕಥಕ್ ಡ್ಯಾನ್ಸ್ ಮಾಡುತ್ತಿದ್ದರೆ, ಕರ್ನಾಟಕ ಸಿಎಂ ಹಾಡು ಹಾಡಿದರೆ ಕೇಳುವವರು ಯಾರು? ಪಪ್ಪು(ರಾಹುಲ್ ಗಾಂಧಿ) ತಾನು ಪ್ರಧಾನಿಯಾಗುತ್ತೇನೆ ಎಂದು ಹೇಳ್ತಾರೆ. ಅದಕ್ಕಾಗಿ ಪಪ್ಪು ಒಂದು ಪಪ್ಪಿಯನ್ನು (ಪ್ರಿಯಾಂಕಾ ಗಾಂಧಿ) ತಂದಿದ್ದಾರೆ. ಆದ್ರೆ ಇವರೆಲ್ಲರಿಗಿಂತ ಮೇಲಿರುವುದು ನಮ್ಮ ಹುಲಿ ಮೋದಿ ಅವರು ಎಂದು ಹೇಳಿದರು.

    ಇದೇ ವೇಳೆ ಕರ್ನಾಟಕದ ಸಿಎಂ ಎಚ್.ಡಿ ಕುಮಾರಸ್ವಾಮಿ ಹಾಗೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಾದೇಶಿಕ ನಾಯಕರಷ್ಟೇ. ಆದ್ರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ನಾಯಕರು ಎಂದು ಶರ್ಮಾ ಹೇಳಿದರು.

    ಈ ಹಿಂದೆ ಶುಕ್ರವಾರದಂದು, ಉದ್ಯೋಗಾವಕಾಶ, ಶಿಕ್ಷಣ ಮತ್ತು ಇತರ ಮೂಲ ಸೌಕರ್ಯಗಳ ಕುರಿತು ಮಾತನಾಡುತ್ತ, ದೇವರು ಕೂಡ ಎಲ್ಲ ನಿಮ್ಮ ಬೇಡಿಕೆಯನ್ನು ಈಡೇರಿಸಲ್ಲ, ಹಾಗಿದ್ದರೆ ಒಬ್ಬ ಸಂಸದ ಹೇಗೆ ತಾನೇ ಜನರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸಾಧ್ಯ ಎಂದು ಪ್ರಶ್ನಿಸಿದರು.

    ಈ ಮಧ್ಯೆ ಪ್ರಿಯಾಂಕಾ ಗಾಂಧಿ ವಾದ್ರ ಅವರು ಮೂರು ದಿನಗಳ ಕಾಲ ಗಂಗಾ ಯಾತ್ರೆ ಮಾಡುವ ಪ್ಲಾನ್ ಹಾಕಿದ್ದು, ಪ್ರಯಾಗ್‍ರಾಜ್‍ನಿಂದ ವಾರಾಣಸಿಗೆ ದೋಣಿಯ ಮೂಲಕ ಯಾತ್ರೆ ನಡೆಸುವ ಅವರು, ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ಗಂಗಾ ಯಾತ್ರೆ ನಡೆಸುವುದರಿಂದ ಈ ಭಾಗದ ಜನರ ಜೊತೆ ಬೆರೆಯುವ ಅವಕಾಶ ನನಗೆ ಸಿಗುತ್ತಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.