Tag: ಸಿಡಿ ಕೇಸ್

  • ಡಿಕೆಶಿ ಸಹ ಲಿಮಿಟ್ ಮೀರಬಾರದು, ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ – ಸತೀಶ್ ಜಾರಕಿಹೋಳಿ

    ಡಿಕೆಶಿ ಸಹ ಲಿಮಿಟ್ ಮೀರಬಾರದು, ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ – ಸತೀಶ್ ಜಾರಕಿಹೋಳಿ

    ಬೆಂಗಳೂರು: ರಮೇಶ್ ಜಾರಕಿಹೋಳಿ (Ramesh Jarkiholi) ಮತ್ತು ಡಿಕೆ ಶಿವಕುಮಾರ್ (DK Shivakumar) ಇಬ್ಬರು ಯಾವುದೇ ವಿಚಾರದಲ್ಲಿ ಲಿಮಿಟ್ ಮೀರಿ ಹೋಗಬಾರದು ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ (Satish Jarkiholi) ಸಲಹೆ ನೀಡಿದ್ದಾರೆ.

    `ವಿಷಕನ್ಯೆ'ಯಿಂದ ಕಾಂಗ್ರೆಸ್ ಹಾಳಾಗ್ತಿದೆ, ಡಿಕೆಶಿ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಿದ ಆಡಿಯೋ ಇದೆ: ಜಾರಕಿಹೊಳಿ

    ಡಿಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ನಡುವಿನ ಸಿಡಿ ಕದನ (CD Case) ವಿಚಾರವಾಗಿ ಮಾತನಾಡಿದ ಅವರು, ಯಾರೂ ಕೂಡ ವೈಯಕ್ತಿಕ ಟೀಕೆ ಮಾಡಬಾರದು. ರಮೇಶ್ ಇರಬಹುದು, ಡಿಕೆಶಿ ಇರಬಹುದು ಯಾರೇ ಆಗಲಿ. ಒಂದು ಲಿಮಿಟ್ ನಲ್ಲಿ ಹೇಳಿಕೆ ನೀಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ನನಗೆ ಸಚಿವ ಸ್ಥಾನ ಬೇಡ, ನನ್ನನ್ನ ಮಂತ್ರಿ ಮಾಡುವ ಅವಶ್ಯಕತೆ ಇಲ್ಲ – ಈಶ್ವರಪ್ಪ

    ಹೇಳಿಕೆ ನೀಡುವುದು ಆರೋಪ ಮಾಡುವುದು ದೊಡ್ಡದಲ್ಲ. ಆದರೆ ಅದರಿಂದ ವೈಯಕ್ತಿಕವಾಗಿ ಪಕ್ಷಕ್ಕೂ ಡ್ಯಾಮೇಜ್ ಆಗುತ್ತದೆ. ವೈಯಕ್ತಿಕವಾಗಿಯೂ ನಷ್ಟವಾಗುತ್ತದೆ. ರಮೇಶ್ ದೆಹಲಿ ಭೇಟಿ ಬಗ್ಗೆ ಪತ್ರಿಕೆಯಲ್ಲಿ ನೋಡಿದೆ. ನಾನೂ ಮಾಧ್ಯಮಗಳ ಮೂಲಕ ರಮೇಶ್‌ಗೆ ಕಿವಿಮಾತು ಹೇಳ್ತೇನೆ. ಯಾವುದೂ ಲಿಮಿಟ್ ಮೀರಿ ಹೋಗುವುದು ಬೇಡ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿಯೇ ಇರಬೇಕು. ಕಾನೂನು ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಅವಕಾಶ ಇದೆ ಅಂತಾ ತಿಳಿಸಿದರು. ಇದನ್ನೂ ಓದಿ: ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಡಿಗಳು ಇದ್ರೆ ಕೋವಿಡ್, ಅತಿವೃಷ್ಟಿ ಬರಲ್ಲ ದರಿದ್ರ ಬರುತ್ತದೆ: ಸಿ.ಎಂ ಇಬ್ರಾಹಿಂ

    ಸಿಡಿಗಳು ಇದ್ರೆ ಕೋವಿಡ್, ಅತಿವೃಷ್ಟಿ ಬರಲ್ಲ ದರಿದ್ರ ಬರುತ್ತದೆ: ಸಿ.ಎಂ ಇಬ್ರಾಹಿಂ

    ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಪಾಪ ಸತ್ಯ ಒಪ್ಪಿಕೊಂಡಿದ್ದಾನೆ. ಅವನಿಗೆ ತಪ್ಪಿನ ಅರಿವಾಗಿದೆ. ಇಂತಹ ಸಿಡಿಗಳು ಇದ್ರೆ ಕೋವಿಡ್ (Covid-19) ಬರಲ್ಲ, ಅತಿವೃಷ್ಟಿ ಬರಲ್ಲ, ದರಿದ್ರ ಬರುತ್ತದೆ ಎಂದು ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸಿಎಂ.ಇಬ್ರಾಹಿಂ (CM Ibrahim) ಎರಡೂ ಪಕ್ಷಗಳಿಗೆ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

    ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಮಧ್ಯೆ ಸಿಡಿ ವಾರ್ ವಿಚಾರಕ್ಕೆ ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವು ರಾಷ್ಟ್ರೀಯ ಪಕ್ಷಗಳಾ? ನನಗೆ ಮಕ್ಕಳು ಕೇಳುತ್ತಿದ್ದಾರೆ ಸಿಡಿ ಅಂದ್ರೆ ಏನು? ಅದರಲ್ಲೇನಿದೆ ಅಂತಾ? ನಾನು ಏನು ಹೇಳಲಿ ಮಕ್ಕಳಿಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅಂದು ಶಂಕುಸ್ಥಾಪನೆ, ಫೆ.6ಕ್ಕೆ ಮೋದಿಯಿಂದ ಉದ್ಘಾಟನೆ – ತುಮಕೂರು HAL ಹೆಲಿಕಾಪ್ಟರ್‌ ಘಟಕದ ವಿಶೇಷತೆ ಏನು?

    ಇವು ರಾಷ್ಟ್ರೀಯ ಪಕ್ಷಗಳಾ? ಮೇಲೆ ಇರೋರಿಗೆ ಮರ್ಯಾದೆ, ಬುದ್ಧಿ ಇಲ್ವಾ? ಅವನು ಹೇಳ್ತಾನೆ ವಿಷಕನ್ಯೆ, ಇವನು ಹೇಳ್ತಾನೆ ನಾಗಕನ್ಯೆ. ಇದು ಏನ್ರಿ ಇದು? ಡಿಕೆಶಿ ಹೇಳೋದು ಸತ್ಯನಾ? ರಮೇಶ್ ಹೇಳೋದು ಸತ್ಯನಾ? ಸಿಬಿಐ (CBI) ತನಿಖೆ ಆಗಲಿ ಅಂತಾ ಜನ ಕೇಳುತ್ತಿದ್ದಾರೆ. ಕುಂದನಗರಿ, ಬಸವಾದಿ ಶರಣರಿಗೆ ಸೂಫಿ ಸಂತರಿಗೆ ಜನ್ಮ ಕೊಟ್ಟ ಬೆಳಗಾವಿ ಜಿಲ್ಲೆ ಸಜ್ಜನರು, ಮರ್ಯಾದಸ್ಥ ನಾಯಕರನ್ನು ಕೊಟ್ಟ ಊರಾಗಿದೆ. ಈ ರಾಜ್ಯದಲ್ಲಿ ಸಿಡಿ ಬಗ್ಗೆ ಚರ್ಚೆ ಆಗುತ್ತಿದೆ. ಮತದಾರರಿಗೆ ಕೈ ಮುಗಿದು ಹೇಳ್ತೇನೆ ಮರ್ಯಾದೆ ಉಳಿಸಬೇಕು. ಸಂಸ್ಕೃತಿ ಉಳಿಸಿಕೊಳ್ಳಿ ಇವರನ್ನು ಹೊರಗೆ ಹಾಕಬೇಕು ಎಂದು ಮನವಿ ಮಾಡಿಕೊಂಡರು.

    ಸಿಡಿ ಪ್ರಕರಣ (CD Case) ಸಿಬಿಐ (CBI) ತನಿಖೆಗೆ ನೀವೂ ಆಗ್ರಹಿಸುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಒತ್ತಾಯ ಮಾಡೋದು ಏನ್ರಿ ಇವರಿಗೆ ಮರ್ಯಾದೆ ಇದ್ರೆ ಮಾಡಲಿ. ಇಲ್ಲ ಜನರೇ ಇವರನ್ನು ಹೊರಗೆ ಹಾಕ್ತಾರೆ. ಕೋರ್ಟ್‍ನಲ್ಲಿ ಹೋಗಿ ಸಿಡಿ ತೋರಿಸಬಾರದು ಅಂತಾ ಸ್ಟೇ ತಂದಿದ್ದಾರೆ. ಸದಾನಂದಗೌಡರು ಸೇರಿ 12 ಜನ ಮಂತ್ರಿಗಳು ಸ್ಟೇ ತಂದಿದ್ದಾರೆ. ಇಂತಹ ಮಂತ್ರಿಗಳು, ಇಂತಹ ಸಿಡಿಗಳು ಇದ್ರೆ ಕೋವಿಡ್ ಬರಲ್ಲ, ಅತಿವೃಷ್ಟಿ ಬರಲ್ಲ, ದರಿದ್ರ ಬರುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬಳ್ಳಾರಿ‌ ನೆಲದಲ್ಲಿ ರೆಡ್ಡಿ ಬ್ರದರ್ಸ್ ಬ್ಯಾಟಲ್ – ರಿಯಲ್ಲಾ?ಗೇಮ್ ಪ್ಲಾನಾ?

     

    ಸಿಡಿ ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ರಾಜಕಾರಣ ಎಷ್ಟರ ಮಟ್ಟಿಗೆ ಸರಿ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಪಾಪ ರಮೇಶ್ ಜಾರಕಿಹೊಳಿ ಸತ್ಯ ಹೇಳಿದ್ದಾನೆ. ಡಿ.ಕೆ.ಶಿವಕುಮಾರ್‌ರದ್ದು ಒಬ್ಬರದ್ದೇ ಏಕೆ ಹೇಳ್ತೀರಿ ಇನ್ನೂ ಅನೇಕರಿದ್ದಾರೆ. ಇವರು ಅದೇ ಕೆಟಗರಿಯಿಂದ ಬಂದಿದ್ದಾರೆ. ರಮೇಶ್ ಪಾಪ ಸತ್ಯ ಒಪ್ಪಿಕೊಂಡಿದಾನೆ. ತಪ್ಪಿನ ಅರಿವಾಗಿದೆ. ಅವನಿಗೆ ಧನ್ಯವಾದ. ಕಿತ್ತೂರು ಚೆನ್ನಮ್ಮ ಪರಂಪರೆ ಕುಟುಂಬ ಅಂತಾ ಹೇಳುವ ಅರ್ಹತೆ ಯಾರಿಗೂ ಇಲ್ಲ. ಆ ನನ್ನ ತಾಯಿ ಕಿತ್ತೂರು ಚೆನ್ನಮ್ಮರನ್ನು ಪೂಜ್ಯತಾ ಭಾವದಿಂದ ಕಾಣುತ್ತೇವೆ. ದಯವಿಟ್ಟು ಆ ತಾಯಿಯ ಹೆಸರು ದುರುಪಯೋಗ ಪಡಿಸಿಕೊಳ್ಳಬೇಡಿ. ದುರುಪಯೋಗ ಪಡಿಸಿಕೊಂಡರೇ ನಾನೇ ಕೋರ್ಟ್‍ಗೆ ಹಾಕಬೇಕಾಗುತ್ತದೆ ಎಂದು ಕಿಡಿಕಾರಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಮೇಶ್ ಜಾರಕಿಹೊಳಿಗೆ ಕಾಮನ್ ಸೆನ್ಸ್ ಇಲ್ಲ – `ವಿಷಕನ್ಯೆ’ ಪದ ಬಳಕೆಗೆ ಹೆಬ್ಬಾಳ್ಕರ್ ಸಹೋದರ ಖಂಡನೆ

    ರಮೇಶ್ ಜಾರಕಿಹೊಳಿಗೆ ಕಾಮನ್ ಸೆನ್ಸ್ ಇಲ್ಲ – `ವಿಷಕನ್ಯೆ’ ಪದ ಬಳಕೆಗೆ ಹೆಬ್ಬಾಳ್ಕರ್ ಸಹೋದರ ಖಂಡನೆ

    ಬೆಳಗಾವಿ: ರಮೇಶ್ ಜಾರಕಿಹೊಳಿಗೆ (Ramesh Jarkiholi) ಕಾಮನ್‌ಸೆನ್ಸ್ ಇಲ್ಲ, ಅವರಂತಹ ನೀಚ ಮನಸ್ಥಿತಿಯೂ ನಮ್ಮದಲ್ಲ. ಈಗ ಅವರ ಪರಿಸ್ಥಿತಿ ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡಂತೆ ಆಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಹೋದರ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ (Channaraj Hattiholi) ತಿರುಗೇಟು ನೀಡಿದ್ದಾರೆ.

    `ವಿಷಕನ್ಯೆ'ಯಿಂದ ಕಾಂಗ್ರೆಸ್ ಹಾಳಾಗ್ತಿದೆ, ಡಿಕೆಶಿ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಿದ ಆಡಿಯೋ ಇದೆ: ಜಾರಕಿಹೊಳಿ

    ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ `ವಿಷಕನ್ಯೆ’ ಪದ ಬಳಸಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಚನ್ನರಾಜ್ ಹಟ್ಟಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇದನ್ನೂ ಓದಿ:`ವಿಷಕನ್ಯೆ’ಯಿಂದ ಕಾಂಗ್ರೆಸ್ ಹಾಳಾಗ್ತಿದೆ, ಡಿಕೆಶಿ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಿದ ಆಡಿಯೋ ಇದೆ: ಜಾರಕಿಹೊಳಿ

    ನನ್ನ ಮೇಲೆ ಷಡ್ಯಂತ್ರ, ಷಂಡರಂತೆ ರಾಜಕೀಯ ಮಾಡಿದ್ದಾನೆ - ಮಹಾನಾಯಕನ ವಿರುದ್ಧ ಜಾರಕಿಹೊಳಿ ಕಿಡಿ

    ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ `ವಿಷ ಕನ್ಯೆ’ ಪದ ಬಳಕೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ. ನಾವು ಅವರ ರೀತಿ ಹೇಳಿಕೆ ಕೊಟ್ಟರೆ ಜನ ನೋಡುತ್ತಾರೆ. ಇಂಥ ಪದ ಬಳಸಲು ಅವರಿಗೆ ಕಾಮನ್ ಸೆನ್ಸ್ ಇಲ್ಲ. ಗೋಕಾಕ್‌ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಮಾನಿಗಳಿದ್ದಾರೆ. ಅಲ್ಲಿನ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಟ ನಂದಮೂರಿ ತಾರಕರತ್ನ ಆರೋಗ್ಯ ಹೇಗಿದೆ?: ಹೆಲ್ತ್ ಬುಲೆಟಿನ್ ಗಾಗಿ ಕಾದ ಅಭಿಮಾನಿಗಳು

    ಬೆಳಗಾವಿ (Belagavi) ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಹೆಬ್ಬಾಳ್ಕರ್ ಅವರು ಟಿಕೆಟ್ ಪಡೆಯುವಾಗ ಜಿ. ಪರಮೇಶ್ವರ ಅವರು ಅಧ್ಯಕ್ಷರಾಗಿದ್ದರು. ಆದರೆ ಡಿಕೆಶಿ (DK Shivakumar) ಅವರು ಅಧ್ಯಕ್ಷರಾಗಿದ್ದು ಈಗ. ಇದರಿಂದ ಅವರು ಹೇಳೋದೆಲ್ಲಾ ಶುದ್ಧ ಸುಳ್ಳು ಅನ್ನೋದು ಗೊತ್ತಾಗುತ್ತೆ. ರಮೇಶ್ ಜಾರಕಿಹೊಳಿ ರೀತಿ ಅನ್ ಅಕೌಂಟೆಡ್ ದುಡ್ಡು ನಮ್ಮ ಬಳಿ ಇಲ್ಲ. ಅವರಂತಹ ನೀಚ ಮನಸ್ಥಿತಿಯೂ ನಮ್ಮದಲ್ಲ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡುವುದೂ ಇಲ್ಲ ಎಂದು ಹೇಳಿದ್ದಾರೆ.

    ಈಗ ಯಾಕೆ ಸಿಡಿ ಕೇಸ್?
    ನಿಮಗೆ ಅನ್ಯಾಯ ಆಗಿದ್ದರೆ, ಒಂದೂವರೆ ವರ್ಷದಿಂದ ಯಾಕೆ ಸಿಬಿಐಗೆ ಸಿಡಿ ಪ್ರಕರಣ ದಾಖಲಿಸಿಲ್ಲ? ತಮ್ಮ ಮೇಲೆ ಆರೋಪ ಮಾಡಿದಾಗ ಕಟ್ ಪೇಸ್ಟ್ ಆಡಿಯೋ ಕ್ಲಿಪ್ ಅಂತಾರೆ. ಅವರ ಬಳಿ ಇರುವುದೆಲ್ಲವೂ ಸತ್ಯವಾ? ಚುನಾವಣೆ ಸಮಯದಲ್ಲಿ ಇಡಿ, ಸಿಬಿಐ, ಐಟಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಿಬಿಐನಿಂದ ಅರೆಸ್ಟ್ ಮಾಡಿಸುತ್ತೇವೆ ಎಂದರೆ ಅವರ ಮಾತನ್ನ ಸಿಬಿಐ ಕೇಳುತ್ತದೆ ಎಂದರ್ಥ. ಅವರ ಹೇಳಿಕೆಯಿಂದ ಸಿಬಿಐ ಅವರ ಕಪಿಮುಷ್ಟಿಯಲ್ಲಿ ಇರುವುದು ಸ್ಪಷ್ಟವಾಗುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್

    ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್

    ಬೆಂಗಳೂರು: ಸಂಪುಟ ಪುನಾರಚನೆ ಸುದ್ದಿ ಹರಿದಾಡುತ್ತಿರುವ ಸಂದರ್ಭದಲ್ಲಿಯೇ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಡಿ ಕೇಸಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

    ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಯುವತಿ ಪರ ವಕೀಲರ ಆಕ್ಷೇಪದ ನಡುವೆಯೂ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪ್ರಕರಣದ ಅಂತಿಮ ವರದಿ ಸಲ್ಲಿಸಲು ಎಸ್‍ಐಟಿಗೆ ಗ್ರೀನ್ ಸಿಗ್ನಲ್ ನೀಡಿತು. ಇದುವರೆಗೆ ಇದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವು ಮಾಡಿತು. ಈ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಎಸ್‍ಐಟಿ ಕ್ಲೀನ್ ಚಿಟ್ ಕೊಟ್ಟಿದೆ. ಇದು ಸಮ್ಮತಿಯ ಸೆಕ್ಸ್ ಪ್ರಕರಣ, ಇಲ್ಲಿ ಲೈಂಗಿಕ ದೌರ್ಜನ್ಯ ನಡೆದಿಲ್ಲ. ಇಲ್ಲಿ ಅತ್ಯಾಚಾರ ನಡೆದಿದೆ ಎಂಬ ಅಂಶ ಬೆಳಕಿಗೆ ಬಂದಿಲ್ಲ. ಇದನ್ನು ಯುವತಿಯೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಪೂರಕವಾದ ತಾಂತ್ರಿಕ ಸಾಕ್ಷ್ಯಗಳು ಕೂಡ ಇವೆ ಎಂದು ಹೇಳಲಾಗಿದೆ.

    ನಾಳೆ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಹಾಕಲು ಎಸ್‍ಐಟಿ ತಯಾರಿ ಮಾಡಿಕೊಂಡಿದೆ. ಆದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಯುವತಿ ಪರ ವಕೀಲರು ತೀರ್ಮಾನಿಸಿದ್ದಾರೆ. ಎಸ್‍ಐಟಿ ರಚನೆಯ ನ್ಯಾಯಬದ್ಧತೆ ವಿಚಾರ ಹೈಕೋರ್ಟಿನಲ್ಲಿ ವಿಲೇವಾರಿ ಬಾಕಿ ಇದ್ದಾಗ್ಯೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‍ಐಟಿ ತನಿಖಾ ವರದಿ ಸಲ್ಲಿಸಲು ಅವಕಾಶ ನೀಡಿರೋದನ್ನು ಪ್ರಶ್ನಿಸಲಾಗುತ್ತದೆ ಎಂದು ಯುವತಿ ಪರ ವಕೀಲರು ತಿಳಿಸಿದ್ದಾರೆ. ಇದನ್ನೂ ಓದಿ: ದೇವೇಂದ್ರ ಫಡ್ನವೀಸ್ ಮೂಲಕ ಮಂತ್ರಿಗಿರಿಗೆ ರಮೇಶ್ ಜಾರಕಿಹೊಳಿ ಲಾಬಿ

    ಈ ಬೆಳವಣಿಗೆ ಮಧ್ಯೆಯೇ ಪಣಜಿಯಲ್ಲಿ ತಮ್ಮ ರಾಜಕೀಯ ಗುರು, ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನಾವೀಸ್‍ರನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಫಡ್ನಾವೀಸ್ ಮೂಲಕ ಮತ್ತೆ ಮಂತ್ರಿ ಸ್ಥಾನ ಗಿಟ್ಟಿಸಲು ಲಾಬಿ ನಡೆಸಿದ್ದಾರೆ. ಅಲ್ಲದೇ ಪಕ್ಷದಲ್ಲಿ ಕೆಲವರು ತಮ್ಮ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

  • ಜಾರಕಿಹೊಳಿ ಸಿಡಿ ಕೇಸ್‍ಗೆ ಟ್ವಿಸ್ಟ್ – ಹೈಕೋರ್ಟ್ ಅಸಮಾಧಾನ

    ಜಾರಕಿಹೊಳಿ ಸಿಡಿ ಕೇಸ್‍ಗೆ ಟ್ವಿಸ್ಟ್ – ಹೈಕೋರ್ಟ್ ಅಸಮಾಧಾನ

    ಬೆಂಗಳೂರು: ಸಿಡಿ ಕೇಸ್ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್‍ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಅವರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

    ರಮೇಶ್ ಜಾರಕಿಹೊಳಿ ಪ್ರಕರಣ ಇತ್ಯರ್ಥ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ತನಿಖೆ ಮುಗಿದು ಕೋರ್ಟ್ ಸುಪರ್ದಿಯಲ್ಲಿ ಅಂತಿಮ ವರದಿ ಇದ್ದರೂ ಅದನ್ನು ಕೆಳಹಂತದ ನ್ಯಾಯಾಲಯ ಸಲ್ಲಿಸುವುದಾಗಲಿ, ಜಾರಕಿಹೊಳಿಗೆ ಮುಕ್ತಿ ಕೊಡಿಸುವುದಾಗಲಿ ಆಗುತ್ತಿಲ್ಲ.

    ಇಂದು ರಮೇಶ್ ಜಾರಕಿಹೊಳಿ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಅವರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು. ಎಸ್‍ಐಟಿ ಮುಖ್ಯಸ್ಥರು ಮೂರು ತಿಂಗಳು ರಜೆ ಪಡೆದುಕೊಂಡಿದ್ದರು. ಆ ಸಂದರ್ಭದಲ್ಲಿ ಇಡೀ ಪ್ರಕರಣದ ತನಿಖೆ ನಡೆದಿದೆ. ಈ ಬಗ್ಗೆ ಹೈಕೋರ್ಟ್‍ಗೆ ಕೂಡ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ. ಆದರೆ ಎಸ್‍ಐಟಿ ಮುಖ್ಯಸ್ಥರ ಗಮನದಲ್ಲಿ ಇಲ್ಲದೇ ತನಿಖೆ ಮುಕ್ತಾಯ ಆಗಿದೆ. ಹಾಗಾದರೆ ಎಸ್‍ಐಟಿ ಮುಖ್ಯಸ್ಥರನ್ನು ನೇಮಕ ಮಾಡೋದು ಯಾಕೆ ಎಂದು ಕೋರ್ಟ್ ಪ್ರಶ್ನೆ ಮಾಡಿದೆ.  ಇದನ್ನೂ ಓದಿ: ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ, ನನಗೂ ಒಳ್ಳೆಯ ಕಾಲ ಬರಲಿದೆ: ರಮೇಶ್ ಜಾರಕಿಹೊಳಿ

    ರಜೆ ಮುಗಿಸಿಕೊಂಡು ವಾಪಸ್ ಬಂದಿರುವ ಸೌಮೆಂದು ಮುಖರ್ಜಿ ಎಸ್‍ಐಟಿ ಅಧಿಕಾರಗಳ ಜೊತೆ ಕೇಸ್ ಬಗ್ಗೆ ರಿವ್ಯೂ ಮೀಟಿಂಗ್ ಕೂಡ ಮಾಡಿಲ್ಲ. ರಿವ್ಯೂ ಮೀಟಿಂಗ್ ಮಾಡದೆ ಇದ್ದರೆ ವರದಿಯ ಬಗ್ಗೆ ಅನುಮತಿ ಇದ್ಯಾ, ಇಲ್ಲವೇ ಎಂಬ ನಿಲುವು ತಿಳಿಸುವಂತೆ 20 ನಿಮಿಷಗಳ ಕಾಲ ಹೈಕೋರ್ಟ್ ಅವಕಾಶ ನೀಡಿತ್ತು.

    ಈ ನಡುವೆ ಹೈಕೋರ್ಟ್‍ಗೆ ಸೌಮೆಂದು ಮುಖರ್ಜಿ ಯಾವ ನಿಲುವನ್ನು ಸ್ಪಷ್ಟಪಡಿಸಲಿಲ್ಲ. ಹಾಗಾಗಿ, ಮುಂದಿನ ವಿಚಾರಣೆಯಲ್ಲಿ ಪ್ರಮಾಣಪತ್ರ ನೀಡುವಂತೆ ಎಸ್‍ಐಟಿ ಮುಖ್ಯಸ್ಥರಿಗೆ ಹೈಕೋರ್ಟ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಸೆ.2ಕ್ಕೆ ಮುಂದೂಡಿದೆ.

  • ಜಾರಕಿಹೊಳಿ ಸಿಡಿ ಕೇಸ್ – ನರೇಶ್ ಗೌಡಗೆ ಯುವ ಕಾಂಗ್ರೆಸ್ ಮುಖಂಡ ಪಟ್ಟ

    ಜಾರಕಿಹೊಳಿ ಸಿಡಿ ಕೇಸ್ – ನರೇಶ್ ಗೌಡಗೆ ಯುವ ಕಾಂಗ್ರೆಸ್ ಮುಖಂಡ ಪಟ್ಟ

    ತುಮಕೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಪ್ರಕರಣದಲ್ಲಿ ಕೇಳಿಬಂದಿದ್ದ ನರೇಶ್ ಗೌಡಗೆ ಯುವ ಕಾಂಗ್ರೆಸ್ ಮುಖಂಡ ಎಂಬ ಪಟ್ಟಕಟ್ಟಿ ಹೂವಿನ ಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

    ಶಿರಾದ ಭುವನಳ್ಳಿ ನರೇಶ್ ಗೌಡ ಹುಟ್ಟೂರು. ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದ ನರೇಶ್ ಗೌಡ ತಲೆಮರೆಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಸ್ವಗ್ರಾಮಕ್ಕೆ ಬಂದಿದ್ದಾರೆ. ನರೇಶ್ ಗೌಡ ಗ್ರಾಮಕ್ಕೆ ಎಂಟ್ರಿಯಾಗುತ್ತಿದ್ದಂತೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ದೊರೆತಿದೆ. ಇದನ್ನೂ ಓದಿ: ಸಿಡಿ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಯಾವುದೇ ದುಡ್ಡು ತೆಗೆದುಕೊಂಡಿಲ್ಲ – ನರೇಶ್‌ ಗೌಡ

    ಭುವನಹಳ್ಳಿಯಲ್ಲಿ ತಳಿರು ತೋರಟ ಕಟ್ಟಿ, ಪಟಾಕಿ ಸಿಡಿಸಿ, ಯುವ ಕಾಂಗ್ರೆಸ್ ಮುಖಂಡ ಎಂದು ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್ ನಲ್ಲಿ ಕಾಂಗ್ರೆಸ್ ಚಿಹ್ನೆ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖರ ಭಾವಚಿತ್ರ ಬಳಸಿಕೊಳ್ಳಲಾಗಿದೆ.

  • ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ: ಸಚಿವ ಮಾಧುಸ್ವಾಮಿ

    ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ: ಸಚಿವ ಮಾಧುಸ್ವಾಮಿ

    – ಜಾರಕಿಹೊಳಿ ರಾಜೀನಾಮೆ ಕೊಡಬೇಕಾಗಿಲ್ಲ

    ಉಡುಪಿ: ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ ಅಂತ ಸುಪ್ರೀಂಕೋರ್ಟ್ ಹೇಳಿದೆ. ಜಾರಕಿಹೊಳಿ ಪ್ರಕರಣದಲ್ಲಿ ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನೋ ಭಾವನೆ ಬರುತ್ತದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

    ಉಡುಪಿಯ 2000 ಎಕ್ರೆ ಜಮೀನು ಪುನರುಜ್ಜೀವನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭ ಅವರು ಮಾಧ್ಯಮದ ಜೊತೆ ಮಾತನಾಡಿದರು. ನಾನು ತಿಳಿದ ಸಾಮಾನ್ಯ ಜ್ಞಾನದ ಪ್ರಕಾರ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಅನಿಸುತ್ತದೆ.

    ಜಾರಕಿಹೊಳಿ ಅವರಿಗೆ ಸರ್ಕಾರ ಮತ್ತು ಪಕ್ಷದ ಕಡೆಯಿಂದ ಏನು ತೊಂದರೆ ಮಾಡಿಲ್ಲ. ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಅಷ್ಟೇ. ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ. ಇದೊಂದು ಕಾನೂನಾತ್ಮಕ ಮತ್ತು ನೈತಿಕ ವಿಚಾರ. ನೈತಿಕವಾಗಿ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿಯೂ ಯಾವುದೇ ಸಮಸ್ಯೆ ಇದೆ ಅನಿಸಲ್ಲ. ಎಲ್ಲವನ್ನು ಎದುರಿಸಲೇಬೇಕು ಎಂದರು. ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಯಾರನ್ನು ದೂರ ಸಾಧ್ಯವಿಲ್ಲ. ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದರು. ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಸಾಹುಕಾರ್ ಬಚಾವ್ ಆಗ್ತಾರಾ? ಒಪ್ಪಿತ ಸೆಕ್ಸ್ ಅಂತ ಬಿ ರಿಪೋರ್ಟ್ ಹಾಕ್ತಾರಾ?

    ಬಿಜೆಪಿಗೆ ಬರೋದಾದ್ರೆ ಬನ್ನಿ:
    ಪಕ್ಷ ವಿಸ್ತರಣೆ ಮಾಡುವುದು ಪ್ರತಿ ರಾಜಕೀಯ ಪಕ್ಷದ ಧ್ಯೇಯ. ಬಿಜೆಪಿಗೆ ಜೆಡಿಎಸ್ ಕಾಂಗ್ರೆಸ್ ಪಕ್ಷದಿಂದ ಯಾರಾದರೂ ಬರುವುದಾದರೆ ಬನ್ನಿ. ನಿಮಗೆ ಭಾರತೀಯ ಜನತಾ ಪಾರ್ಟಿಗೆ ಸ್ವಾಗತ ಎಂದು ಸಚಿವ ಮಾಧುಸ್ವಾಮಿ ಕರೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ನಾಯಕರು ಕಾಂಗ್ರೆಸ್‍ಗೆ ಬರಬಹುದು ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಮಾತನ್ನಾಡಿದ್ದಾರೆ.

    ಡಿಕೆಶಿ ಪಾಪದ ಮಾತು:
    ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ 2000 ಕೋಟಿ ರೂಪಾಯಿ ತೆಗೆದಿಟ್ಟಿದೆ. ಡಿಕೆಶಿ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಟೀಕೆ ಮಾಡುವುದನ್ನು ಮಾಡಿ ಅದು ನಿಮ್ಮ ಡ್ಯೂಟಿ, ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ ಎಂದರು.

  • ರಮೇಶ್ ಜಾರಕಿಹೊಳಿ ಸಿಡಿ ಕೇಸ್‍ನಿಂದ ಮುಕ್ತರಾದ್ರೆ ಸಚಿವರಾಗ್ತಾರೆ: ಜೆ.ಸಿ.ಮಾಧುಸ್ವಾಮಿ

    ರಮೇಶ್ ಜಾರಕಿಹೊಳಿ ಸಿಡಿ ಕೇಸ್‍ನಿಂದ ಮುಕ್ತರಾದ್ರೆ ಸಚಿವರಾಗ್ತಾರೆ: ಜೆ.ಸಿ.ಮಾಧುಸ್ವಾಮಿ

    ಚಿತ್ರದುರ್ಗ: ಸಿಡಿ ಪ್ರಕರಣದಿಂದ ರಮೇಶ್ ಜಾರಕಿಹೊಳಿ ಮುಕ್ತರಾದರೆ ಮತ್ತೆ ಮಂತ್ರಿ ಆಗುತ್ತಾರೆ, ಇದರಲ್ಲಿ ಗೊಂದಲ ಇಲ್ಲ. ಕೇಸ್ ನಿಂದ ಮುಕ್ತರಾದರೆ ಮುಗಿಯಿತು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

    ಚಿತ್ರದುರ್ಗ ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಕೇಸ್ ತನಿಖೆಯಲ್ಲಿದ್ದು, ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ತಿಳಿಸಿದರು. ಮಹಾರಾಷ್ಟ್ರ ಮಾಜಿ ಸಿಎಂ ಫಡ್ನವೀಸ್ ಭೇಟಿ ಮಾಡುವುದರಿಂದ ತಪ್ಪೇನು ಇಲ್ಲ. ಬೆಳಗಾವಿ ಹಾಗೂ ಮುಂಬೈ ನಿಕಟವಾಗಿರುವ ಜಾಗಗಳು, ಹಾಗಾಗಿ ಭೇಟಿ ಮಾಡಿರುತ್ತಾರೆ ಎಂದು ತಿಳಿಸಿದರು.

    ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ವಿಷಯದ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅವರ ಪಕ್ಷ ಗೆದ್ದು ಬಂದರೆ ಸಿಎಂ ಆಗೋದು? ಈಗ ಹೇಗೆ ಸಿಎಂ ಆಗ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಮಾಧುಸ್ವಾಮಿ ವ್ಯಂಗ್ಯವಾಡಿದರು. ಅವರು ಯಾವಾಗ ಸಿಎಂ ಆಗ್ತಾರೆ. ಚುನಾವಣೆ ಆಗಬೇಕು, ಚುನಾಯಿತ ಎಂಎಲ್‍ಎ ಗಳು ಆಯ್ಕೆ ಮಾಡಬೇಕು. ಆಗ ಸಿಎಂ ಅಭ್ಯರ್ಥಿ ವಿಚಾರ ಬರುತ್ತದೆ ಎಂದರು. ಅಲ್ಲದೇ ಕಳೆದ ಬಾರಿ ಕುಮಾರಸ್ವಾಮಿ ಸಿಎಂ ಆಗ್ತಾರೆ ಅಂತ ಯಾರಿಗೆ ಗೊತ್ತಿತ್ತು? ರಾಜಕಾರಣ ಹೇಗೆ ತಿರುಗುತ್ತದೆ ಯಾರಿಗೆ ಗೊತ್ತು ಎಂದು ಹೇಳಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುವಂತದ್ದು ಏನೂ ಆಗಿಲ್ಲ: ಸಚಿವ ಬಿ.ಸಿ.ಪಾಟೀಲ್

    ವಿದ್ಯಾಗಮದಿಂದಲೇ ಶಿಕ್ಷಕರು ಸಾವು ಅಂತ ಪ್ರಚಾರ ಬೇಡ. ರಾಜ್ಯದಲ್ಲಿ ಮೂರನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ ಅಂತ ನೋಡುತ್ತಿದ್ದೇವೆ. ಡೆಲ್ಟಾ ವೈರಸ್ ಹರಡುವ ಸಾಧ್ಯತೆ ಇದೆ. ಇದನ್ನು ನೋಡಿಕೊಂಡು ಇನ್ನೊಂದು ತಿಂಗಳು ನೋಡಿ ವಾಚ್ ಮಾಡಲಾಗುತ್ತದೆ ಎಂದು ತಿಳಿಸಿದರು. ಇದೇ ವೇಳೆ ಸರ್ಕಾರ ಡೆತ್ ರೇಟ್ ಮೆರೆಮಾಡಚುತ್ತಿದೆ ಅಂತ ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ ಸಚಿವರು, ಕೊವಿಡ್ ಡೆತ್ ರಿಪೋರ್ಟ್ ಮರೆ ಮಾಚುವ ಸ್ಥಿತಿ ನಮಗೆ ಬಂದಿಲ್ಲ. ಕೊಮಾರ್ಬಿಡ್ ಡೆತ್, ಕ್ರಾನಿಕ್ ಡಿಸೇಸ್ ಡೆತ್ ಆಗ್ತಿದೆ. ಅಕಾಸ್ಮಾತ್ ರಿಪೋರ್ಟ್ ಆಗದೆ ಡೆತ್ ಆಗಿದ್ದರೆ ನಾವೇನು ಮಾಡೋಕಾಗದಿಲ್ಲ ಎಂದು ಕೈ ನಾಯಕರ ವಿರುದ್ಧ ಕಿಡಿ ಕಾರಿದರು. ಇದನ್ನೂ ಓದಿ: ಹತ್ತು ದಿನಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಣಯ: ರಮೇಶ್ ಜಾರಕಿಹೊಳಿ

    ಕೊರೊನಾ 3ನೇ ಅಲೆ, ಡೆಲ್ಟಾ ಪ್ಲಸ್ ಬಗ್ಗೆ ಪರಿಶೀಲಿಸಿ ವಿದ್ಯಾಗಮ ಸಾಧ್ಯತೆ ಇದ್ದು, ಇನ್ನೊಂದು ತಿಂಗಳು ಕಾದು ನೋಡಿ ವಿದ್ಯಾಗಮ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಕಳೆದ ಸಲ ವಿದ್ಯಾಗಮ ವೇಳೆ ಶಿಕ್ಷಕರ ಸಾವು ವಿಚಾರವಾಗಿ ಸಾವಿಗೆ ಬೇಕಾದಷ್ಟು ಕಾರಣ ಇರುತ್ತವೆ. ಡೆತ್ ಆಡಿಟ್ ನಿಂದ ಗೊತ್ತಾಗುತ್ತದೆ. ದೈಹಿಕ ಅಂತರ ಕಾಯ್ದುಕೊಂಡು ವಿದ್ಯಾಗಮ ಮಾಡಿದ್ರೆ ತೊಂದರೆ ಇಲ್ಲ, ಸಾವಿಗೆ ವಿದ್ಯಾಗಮವೇ ಕಾರಣ ಎಂಬ ಪ್ರಚಾರ ಬೇಡ ಎಂದು ಸಚಿವರು ಮನವಿ ಮಾಡಿದರು. ಇದನ್ನೂ ಓದಿ:  ಸರ್ಕಾರ ಬೀಳಿಸಿ, ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ: ರಮೇಶ್ ಜಾರಕಿಹೊಳಿ

  • ರಮೇಶ್ ಜಾರಕಿಹೊಳಿ, ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್

    ರಮೇಶ್ ಜಾರಕಿಹೊಳಿ, ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್

    ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎಸ್‍ಐಟಿ ತನಿಖೆಯನ್ನು ರದ್ದು ಮಾಡುವಂತೆ ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇವತ್ತು ಉಚ್ಛ ನ್ಯಾಯಾಲಯದಲ್ಲಿ ನಡೆಯಿತು.

    ಎಸ್‍ಐಟಿಯ ಬದ್ಧತೆ ಮತ್ತು ತನಿಖೆಯ ವೈಖರಿಯನ್ನು ಪ್ರಶ್ನಿಸಿ ಸಂತ್ರಸ್ತ ಯುವತಿ ಅರ್ಜಿ ಸಲ್ಲಿಸಿದ್ದರು. ಎಸ್‍ಐಟಿ ಅತ್ಯಾಚಾರ ಕೇಸ್ ಮರೆಮಾಚಿ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡೋಕೆ ಹೊರಟಿದೆ. ಹೀಗಾಗಿಯೇ ಸದಾಶಿವನಗರದ ಕ್ರೈಂ ನಂ. 21 /2021 ನಮೂದಿಸಲಾಗಿದೆ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದರು. ಎಸ್‍ಐಟಿ ತನಿಖೆಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಎಸ್‍ಐಟಿ ತನಿಖೆ ರದ್ದು ಮಾಡಬೇಕು ಎಂದು ಯುವತಿ ಅರ್ಜಿ ಸಲ್ಲಿಸಿದ್ದರು. ಇಂದು ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಘನ ಉಚ್ಚ ನ್ಯಾಯಾಲಯ, ಎಸ್‍ಐಟಿಗೆ ಹಾಗೂ ರಮೇಶ್ ಜಾರಕಿಹೊಳಿಗೆ ತುರ್ತು ಹಾಜರಾಗಲು ನೋಟಿಸ್ ಗೆ ಆದೇಶಿಸಿದೆ.

    ಸಂತ್ರಸ್ತೆಯ ಅರ್ಜಿಯ ಮುಂದಿನ ವಿಚಾರಣೆ ಜೂನ್ 21ಕ್ಕೆ ನ್ಯಾಯಾಲಯ ಮುಂದೂಡಿದೆ. ಸಂತ್ರಸ್ತೆಯ ಪರ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಸಂಕೇತ್ ಏಣಗಿ ವಾದ ಮಂಡಿಸಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

    ಎಸ್‍ಐಟಿ ಮುಂದೆ ಹಾಜರಾದ ನರೇಶ್, ಶ್ರವಣ್: ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್‍ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ವೀಡಿಯೋ ಜಾರಕಿಹೊಳಿ ಮೊಬೈಲ್ ನಲ್ಲಿ ಇದೆಯಾ?
    ಸ್ಟಿಂಗ್ ಆದ ನಂತರ ಯುವತಿ ನನಗೆ ಕಾಲ್ ಮಾಡಿದ್ದು ನಿಜ. ಸ್ಟಿಂಗ್ ಕ್ಯಾಮೆರಾದಲ್ಲಿ ವೀಡಿಯೋ ಆಗುವ ಮೊದಲೆ ರಾಸಲೀಲೆ ವಿಡಿಯೋ ಆಗಿತ್ತಂತೆ. ಸದ್ಯ ವೈರಲ್ ವೀಡಿಯೋದಲ್ಲೂ ಜಾರಕಿಹೊಳಿ ಯುವತಿಗೆ ವಿಡಿಯೋ ಮಾಡುವಂತೆ ಹೇಳ್ತಾರೆ ಕೇಳಿ ಎಂದು ಎಸ್‍ಐಟಿಗೆ ಹೇಳಿದ್ದಾನೆ. ಆ ವೀಡಿಯೋ ಜಾರಕಿಹೊಳಿ ಮೊಬೈಲ್ ನಲ್ಲಿದೆ, ಬೇಕಿದ್ರೆ ಚೆಕ್ ಮಾಡಿ. ಯುವತಿಗೆ ಬಲವಂತವಾಗಿ ಮತ್ತು ಬೆದರಸಿ ಲೈಂಗಿಕ ಸಂಪರ್ಕ ಬೆಳಸಿದ್ದಾರೆ. ವೈರಲ್ ಆಗಿರೋ ವೀಡಿಯೋ ಬಿಟ್ಟು ಬೇರೆ ಯುವತಿಯರ ಜೊತೆಗಿರೋ ವಿಡಿಯೋ ಸಹ ಸಾಹುಕಾರ್ ಮೊಬೈಲ್ ನಲ್ಲಿದೆ. ಈ ವಿಚಾರವನ್ನು ಯುವತಿಯೇ ನಮಗೆ ಹೇಳಿದ್ದಾಳೆ. ಆಕೆಗೆ ಅವಾಚ್ಯವಾಗಿ ಬೈದು ಕಿರುಕುಳ ಕೊಡ್ತಿದ್ದಾಗಿ ಯುವತಿ ಹೇಳಿದ್ರಿಂದ ಸ್ಟಿಂಗ್ ಮಾಡೋಕೆ ಹೇಳಿದ್ದೀವಿ. ಆದ್ರೆ ವೀಡಿಯೋ ಆದ್ಮೇಲೆ ನಾವು ನೋಡಿಲ್ಲ. ಇದರ ರಾ ಫುಟೇಜ್ ಎಲ್ಲವೂ ಯುವತಿ ಮನೆಯಲ್ಲಿತ್ತು. ಯುವತಿ ಮನೆಗೂ ಜಾರಕಿಹೊಳಿ ಕಡೆಯವರು ಬಂದು ಹೋಗಿದ್ದಾರೆ ಎಂದು ಶ್ರವಣ್ ವಿಚಾರಣೆಯಲ್ಲಿ ಹೇಳಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಕೇಸಲ್ಲಿ ಕೋರ್ಟಿಗೆ 3 ಪ್ರತ್ಯೇಕ ವರದಿ 

    ಕೊಲೆ ಬೆದರಿಕೆ:
    ವೀಡಿಯೋ ನಂತರ ಯುವತಿಗೆ ಅವರ ಮನೆಯವರಿಗೆ ತಿಳಿಸುವುದಾಗಿ ಹೇಳಲಾಗಿತ್ತು. ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿ ಎಂದು ತಿಳಿಸಲಾಗಿತ್ತು. ಆದ್ರೆ ಯುವತಿ ಹೆದರಿ ದೂರು ನೀಡಲು ಹಿಂದೇಟು ಹಾಕಿದರು. ಸಿಡಿ ವೈರಲ್ ಆದ ದಿನ ಕೂಡ ಯುವತಿಗೆ ಜಾರಕಿಹೊಳಿ ಕಡೆಯವರು ಕರೆ ಮಾಡಿ ಧಮ್ಕಿ ಹಾಕಿದ್ರು. ನಿನ್ನ ಹಾಗೂ ನಿನಗೆ ಸಪೋರ್ಟ್ ಮಾಡಿದವರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಶ್ರವಣ್ ಹೇಳಿರುವ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಸಾಹುಕಾರ್ ಬಚಾವ್ ಆಗ್ತಾರಾ? ಒಪ್ಪಿತ ಸೆಕ್ಸ್ ಅಂತ ಬಿ ರಿಪೋರ್ಟ್ ಹಾಕ್ತಾರಾ?

    ಜೀವ ಭಯದಿಂದ ನಾವೂ ಊರು ಬಿಡಬೇಕಾಯ್ತು. ಹೆಚ್ಚಾಗಿ ರೈಲು, ಬಸ್ ಪ್ರಯಾಣ ಮಾಡಿದ್ದೀವಿ. ಜಾರಕಿಹೊಳಿ ಪಿಎ ನಾಗರಾಜ್ ಅವರ ಬಿಎಸ್‍ಎನ್‍ಎಲ್ ನಂಬರ್ ನಿಂದ ಯುವತಿಗೆ ಕರೆ ಬರುತ್ತಿತ್ತು. ಇದೇ ನಾಗರಾಜ್ ಮೊದಲು ಜಾರಕಿಹೊಳಿ ಅಪಾರ್ಟ್ ರ್ಮೆಂಟ್ ಗೆ ಕರೆದೊಕೊಂಡು ಹೋಗಿದ್ದರು ಎಂದು ಶ್ರವಣ್ ಎಸಿಪಿ ಧರ್ಮೇಂದ್ರ ಮುಂದೆ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ:ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

  • ಸಾಹುಕಾರ್ ಸಿಡಿ ಪ್ರಕರಣ – ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ಒಪ್ಪಿಕೊಂಡ ಶಂಕಿತರು!

    ಸಾಹುಕಾರ್ ಸಿಡಿ ಪ್ರಕರಣ – ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ಒಪ್ಪಿಕೊಂಡ ಶಂಕಿತರು!

    ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್‍ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸ್ಟಿಂಗ್ ಆದ ನಂತರ ಯುವತಿ ನನಗೆ ಕಾಲ್ ಮಾಡಿದ್ದು ನಿಜ. ಸ್ಟಿಂಗ್ ಕ್ಯಾಮೆರಾದಲ್ಲಿ ವೀಡಿಯೋ ಆಗುವ ಮೊದಲೆ ರಾಸಲೀಲೆ ವಿಡಿಯೋ ಆಗಿತ್ತಂತೆ. ಸದ್ಯ ವೈರಲ್ ವೀಡಿಯೋದಲ್ಲೂ ಜಾರಕಿಹೊಳಿ ಯುವತಿಗೆ ವಿಡಿಯೋ ಮಾಡುವಂತೆ ಹೇಳ್ತಾರೆ ಕೇಳಿ ಎಂದು ಎಸ್‍ಐಟಿಗೆ ಹೇಳಿದ್ದಾನೆ. ಆ ವೀಡಿಯೋ ಜಾರಕಿಹೊಳಿ ಮೊಬೈಲ್ ನಲ್ಲಿದೆ, ಬೇಕಿದ್ರೆ ಚೆಕ್ ಮಾಡಿ. ಯುವತಿಗೆ ಬಲವಂತವಾಗಿ ಮತ್ತು ಬೆದರಸಿ ಲೈಂಗಿಕ ಸಂಪರ್ಕ ಬೆಳಸಿದ್ದಾರೆ. ವೈರಲ್ ಆಗಿರೋ ವೀಡಿಯೋ ಬಿಟ್ಟು ಬೇರೆ ಯುವತಿಯರ ಜೊತೆಗಿರೋ ವಿಡಿಯೋ ಸಹ ಸಾಹುಕಾರ್ ಮೊಬೈಲ್ ನಲ್ಲಿದೆ. ಈ ವಿಚಾರವನ್ನು ಯುವತಿಯೇ ನಮಗೆ ಹೇಳಿದ್ದಾಳೆ. ಆಕೆಗೆ ಅವಾಚ್ಯವಾಗಿ ಬೈದು ಕಿರುಕುಳ ಕೊಡ್ತಿದ್ದಾಗಿ ಯುವತಿ ಹೇಳಿದ್ರಿಂದ ಸ್ಟಿಂಗ್ ಮಾಡೋಕೆ ಹೇಳಿದ್ದೀವಿ. ಆದ್ರೆ ವೀಡಿಯೋ ಆದ್ಮೇಲೆ ನಾವು ನೋಡಿಲ್ಲ. ಇದರ ರಾ ಫುಟೇಜ್ ಎಲ್ಲವೂ ಯುವತಿ ಮನೆಯಲ್ಲಿತ್ತು. ಯುವತಿ ಮನೆಗೂ ಜಾರಕಿಹೊಳಿ ಕಡೆಯವರು ಬಂದು ಹೋಗಿದ್ದಾರೆ ಎಂದು ಶ್ರವಣ್ ವಿಚಾರಣೆಯಲ್ಲಿ ಹೇಳಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ:ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

    ವೀಡಿಯೋ ನಂತರ ಯುವತಿಗೆ ಅವರ ಮನೆಯವರಿಗೆ ತಿಳಿಸುವುದಾಗಿ ಹೇಳಲಾಗಿತ್ತು. ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿ ಎಂದು ತಿಳಿಸಲಾಗಿತ್ತು. ಆದ್ರೆ ಯುವತಿ ಹೆದರಿ ದೂರು ನೀಡಲು ಹಿಂದೇಟು ಹಾಕಿದರು. ಸಿಡಿ ವೈರಲ್ ಆದ ದಿನ ಕೂಡ ಯುವತಿಗೆ ಜಾರಕಿಹೊಳಿ ಕಡೆಯವರು ಕರೆ ಮಾಡಿ ಧಮ್ಕಿ ಹಾಕಿದ್ರು. ನಿನ್ನ ಹಾಗೂ ನಿನಗೆ ಸಪೋರ್ಟ್ ಮಾಡಿದವರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಶ್ರವಣ್ ಹೇಳಿರುವ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಸಾಹುಕಾರ್ ಬಚಾವ್ ಆಗ್ತಾರಾ? ಒಪ್ಪಿತ ಸೆಕ್ಸ್ ಅಂತ ಬಿ ರಿಪೋರ್ಟ್ ಹಾಕ್ತಾರಾ?

    ಜೀವ ಭಯದಿಂದ ನಾವೂ ಊರು ಬಿಡಬೇಕಾಯ್ತು. ಹೆಚ್ಚಾಗಿ ರೈಲು, ಬಸ್ ಪ್ರಯಾಣ ಮಾಡಿದ್ದೀವಿ. ಜಾರಕಿಹೊಳಿ ಪಿಎ ನಾಗರಾಜ್ ಅವರ ಬಿಎಸ್‍ಎನ್‍ಎಲ್ ನಂಬರ್ ನಿಂದ ಯುವತಿಗೆ ಕರೆ ಬರುತ್ತಿತ್ತು. ಇದೇ ನಾಗರಾಜ್ ಮೊದಲು ಜಾರಕಿಹೊಳಿ ಅಪಾರ್ಟ್ ರ್ಮೆಂಟ್ ಗೆ ಕರೆದೊಕೊಂಡು ಹೋಗಿದ್ದರು ಎಂದು ಶ್ರವಣ್ ಎಸಿಪಿ ಧರ್ಮೇಂದ್ರ ಮುಂದೆ ಹೇಳಿಕೆ ನೀಡಿದ್ದಾನೆ. ಸದ್ಯ ಸೋಮವಾರ 11 ಗಂಟೆ ವಿಚಾರಣೆಗೆ ಹಾಜರಾಗುವಂತೆ ನರೇಶ್ ಗೆ ನೋಟಿಸ್ ನೀಡಿದ್ರೆ, ಮಂಗಳವಾರ 11 ಗಂಟೆಗೆ ಹಾಜರಾಗುವಂತೆ ಶ್ರವಣ್ ಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?