Tag: ಸಿಡಿ ಯುವತಿ

  • ರಮೇಶ್ ಜಾರಕಿಹೊಳಿಗೆ ಇಂದು ಬಿಗ್ ಡೇ – ಅತ್ಯಾಚಾರ ಪ್ರಕರಣ CBIಗೆ ವರ್ಗಾವಣೆ ಆಗುತ್ತಾ..?

    ರಮೇಶ್ ಜಾರಕಿಹೊಳಿಗೆ ಇಂದು ಬಿಗ್ ಡೇ – ಅತ್ಯಾಚಾರ ಪ್ರಕರಣ CBIಗೆ ವರ್ಗಾವಣೆ ಆಗುತ್ತಾ..?

    ಬೆಂಗಳೂರು: ಮಾಜಿ ಸಚಿವರ ರಮೇಶ್ ಜಾರಕಿಹೊಳಿಗೆ ಇಂದು ಬಿಗ್ ಡೇ ಆಗಿದ್ದು, ರಾಸಲೀಲೆ ಪ್ರಕರಣ ಸಂಬಂಧ ಇಂದು ಹೈಕೋರ್ಟ್‍ನಲ್ಲಿ ಭವಿಷ್ಯ ನಿರ್ಧಾರವಾಗುತ್ತದೆ.

    ಪ್ರಕರಣ ಸಂಬಂಧ ಹೈಕೋರ್ಟ್ ತನಿಖಾ ಪ್ರಗತಿ ವರದಿ ಕೇಳಿದೆ. ಈ ಹಿನ್ನೆಲೆಯಲ್ಲಿ ಎಸ್‍ಐಟಿ (Special Investigation Team) ಇಂದು ತನಿಖಾ ಪ್ರಗತಿ ವರದಿ ಸಲ್ಲಿಸಲಿದೆ. ವರದಿ ನೋಡಿದ ಬಳಿಕ ಹೈಕೋರ್ಟ್ ಎಸ್ ಐಟಿಯೇ ತನಿಖಾ ಮುಂದುವರೆಸಬೇಕಾ..? ಬೇರೆ ತನಿಖಾ ಸಂಸ್ಥೆಗೆ ವರ್ಗಾವಣೆ ಆಗ್ಬೇಕಾ..? ಎಂದು ತನಿಖಾ ಪ್ರಗತಿ ವರದಿ ನೋಡಿ ನ್ಯಾಯಾಲಯ ವಾದ ಪ್ರತಿವಾದ ಆಲಿಸಲಿದೆ.

    ಬಳಿಕ ತನಿಖೆಯನ್ನು ಯಾರು ಮುಂದುವರಿಸಬೇಕು ಎಂದು ಆದೇಶ ಮಾಡಲಿದೆ. ವಿಶೇಷ ಅಂದರೆ ಯುವತಿಯ ಪರ ಹಿರಿಯ ವಕೀಲೆ ವಾದ ಮಂಡಿಸುತ್ತಾ ಇದ್ದಾರೆ. ಸುಪ್ರಿಂಕೋರ್ಟ್ ಹಿರಿಯ ವಕೀಲೆ ಇಂದ್ರ ಜೈಸಿಂಗ್ ವಾದ ಮಾಡ್ತಾ ಇದ್ದಾರೆ. ಬಹುತೇಕ ಇಂದು ರಮೇಶ್ ಜಾರಕಿಹೊಳಿ ಭವಿಷ್ಯ ನಿರ್ಧಾರ ಆಗಲಿದೆ.

    ಏನಿದು ಪ್ರಕರಣ..?
    ಮಾರ್ಚ್ 2ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು. ಆ ಬಳಿಕದಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಂತರ ಸ್ವತಃ ಸುದ್ದಿಗೋಷ್ಠಿ ಕರೆದು ಮಾಧ್ಯಮಗಳ ಮುಂದೆ ಭಾವುಕರಾಗಿದ್ದರು. ಇಷ್ಟೆಲ್ಲಾ ಆದ ನಂತರ ಮಾಜಿ ಸಚಿವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಗೋಕಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಪಿಪಿಇ ಕಿಟ್ ಧರಿಸಿ ಉಪಚುನಾವಣೆಗೆ ಮತದಾನ ಮಾಡಿದ್ದರು.

    ಕೆಲ ದಿನಗಳ ಹಿಂದೆಯಷ್ಟೇ ಎಸ್‍ಐಟಿ ಮುಂದೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ, ಯುವತಿ ಸಮ್ಮತಿಯ ಮೇರೆಗೆ ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದು, ಬಳಿಕ ಆಕೆಯೇ ವಿಡಿಯೋ ಮಾಡಿಕೊಂಡು ಈ ರೀತಿ ನಡೆದುಕೊಳ್ಳುತ್ತಾ ಇದ್ದಾಳೆ ಎಂದು ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದರು. ಆದರೆ ಈ ಮಾಹಿತಿಯನ್ನು ಎಸ್‍ಐಟಿ ಅಧಿಕಾರಿಗಳು ಅಲ್ಲಗೆಳೆದಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಯಾವುದೇ ಬೆಳವಣಿಗೆಯೂ ನಡೆದಿಲ್ಲ. ತನಿಖೆಯ ಬಳಿಕ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ ಅಂತ ಈ ಸುದ್ದಿಗೆ ಎಸ್‍ಐಟಿ ಮೂಲಗಳು ಸ್ಪಷ್ಟಪಡಿಸಿತ್ತು.

  • ಹೇಳಿಕೆ ನೀಡಲು ಸಮಯಾವಕಾಶ ಕೇಳಿದ ಸಿಡಿ ಯುವತಿ..!

    ಹೇಳಿಕೆ ನೀಡಲು ಸಮಯಾವಕಾಶ ಕೇಳಿದ ಸಿಡಿ ಯುವತಿ..!

    – ಹೇಳಿಕೆ ಕೊಡದಂತೆ ವಕೀಲರಿಂದ ಒತ್ತಡ

    ಬೆಂಗಳೂರು: ಇಂದು ಎಸ್‍ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಲು ಮುಂದಾದ ಸಿಡಿ ಯುವತಿ ಇದೀಗ ಮತ್ತೆ ಸಮಯಾವಕಾಶ ಕೇಳಿದ್ದಾರೆ.

    ಹೌದು. ಇದ್ದಕ್ಕಿದ್ದಂತೆ ಇಂದು ಸಿಡಿ ಯುವತಿ ಎಸ್‍ಐಟಿ ಅಧಿಕಾರಿಗಳ ಮುಂದೆ ಬಂದು, ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಹೇಳಿಕೆ ನೀಡಲು ಕೂಡ ಸಮಯವನ್ನು ಸಿಡಿ ಯುವತಿ ಕೇಳಿದ್ದಾರೆ.

    ವಕೀಲರು ಬಂದು ಹೇಳಿಕೆ ಕೊಡದಂತೆ ಒತ್ತಾಯ ಹೇರಿದ್ದಾರೆ. ಹೀಗಾಗಿ ನಾನು ಇಂದು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲ್ಲ ಎಂದು ಹೇಳುವ ಮೂಲಕ ಯುವತಿ ಮತ್ತೆ ಸಮಯಾವಕಾಶ ಕೇಳಿದ್ದಾರೆ.

    ಎಸ್‍ಐಟಿ ಮುಂದೆ ಯುವತಿ ಹೇಳಿದ್ದೇನು?:
    ನಾನು ಮಾಡದ ತಪ್ಪಿಗೆ ನಾನು ಶಿಕ್ಷೆ ಅನುಭವಿಸಿದ್ದು, ಒತ್ತಾಯ ಪೂರ್ವಕವಾಗಿ ಹೇಳಿಕೆ ಕೊಡಿಸಿದರು. ನಂಬಿದವರಿಂದಲೇ ನಾನು ಮೋಸ ಹೋಗಿದ್ದೇನೆ. ನನ್ನ ಮರ್ಯಾದೆ ಹಾಳಾಗಿದ್ದು, ಪ್ರಕರಣ ಇಷ್ಟರ ಮಟ್ಟಿಗೆ ಆಗುತ್ತೆ ಅಂತ ನಾನು ಅಂದುಕೊಂಡಿರಲಿಲ್ಲ. ನ್ಯಾಯ ಸಿಗುವ ನಿರೀಕ್ಷೆ ಇತ್ತು, ಆದ್ರೆ ನನಗೆ ಗೊತ್ತಿಲ್ಲದೆ ಕೆಲವೊಂದು ವಿಚಾರಗಳು ನಡೆಯಿತು. ನನ್ನ ಬೆನ್ನ ಹಿಂದೆ ನಡೆದ ವಿಚಾರ ತಿಳಿದುಕೊಳ್ಳೋದಕ್ಕೆ ಸಾಕಷ್ಟು ದಿನಗಳೇ ಆಯಿತು. ನನ್ನ ಸ್ನೇಹಿತ ಆಕಾಶ್ ಗೆ ಕೂಡ ಕೆಲವೊಂದು ವಿಚಾರ ಮುಚ್ಚು ಮರೆ ಮಾಡಿದ್ದಾರೆ ಎಂದು ಯುವತಿ ಹೇಳಿದ್ದಾರೆ ಎನ್ನಲಾಗಿದೆ.

    ಅಪ್ಪ-ಅಮ್ಮನಿಗೂ ಕೂಡ ನಾನು ನೋವು ನೀಡಿದ್ದೇನು. ಒಳ್ಳೆಯ ಮಗಳಾಗಬೇಕು ಅಂತ ನನ್ನ ಅಪ್ಪ ನಿರೀಕ್ಷೆ ಮಾಡಿದ್ದರು. ನನ್ನನ್ನು ಕೂಡ ಕೆಲವೊಮ್ಮೆ ದೂರ ಇಟ್ಟು ಮಾತುಕತೆ ಮಾಡಿರುವ ಬಗ್ಗೆ ಅನುಮಾನ ಇದೆ. ಆದರೆ ನಿಜವಾಗಲೂ ಅನ್ಯಾಯಕ್ಕೆ ಒಳಗಾದವಳು ನಾನು ಮಾತ್ರ. ನಾನು ಸತ್ಯವನ್ನು ಮಾತ್ರ ಹೇಳಬೇಕೆಂದು ಬಯಸಿದ್ದೀನಿ. ನನ್ನ ಈ ಹೇಳಿಕೆಗಳಿಗೆ ನಾನು ಬದ್ಧವಾಗಿರ್ತೀನಿ ಎಂದು ಯುವತಿ ಎಸ್‍ಐಟಿ ಮುಂದೆ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

  • ಬಾರ್ ಕೌನ್ಸಿಲ್‍ನಿಂದ ವಕೀಲ ಮಂಜುನಾಥ್ ಅಮಾನತು

    ಬಾರ್ ಕೌನ್ಸಿಲ್‍ನಿಂದ ವಕೀಲ ಮಂಜುನಾಥ್ ಅಮಾನತು

    ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಧಿಸಿದಂತೆ ಸಂತ್ರಸ್ತ ಯುವತಿ ಪರ ವಕೀಲರ ಆಪ್ತ ಲಾಯರ್ ನನ್ನು ಬಾರ್ ಕೌನ್ಸಿಲ್ ನಿಂದ ಅಮಾನತು ಮಾಡಲಾಗಿದೆ.

    ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್ ಆಪ್ತ ಮಂಜುನಾಥ್ ಅವರೇ ಅಮಾನತಾದ ವಕೀಲ. ಬಾರ್ ಕೌನ್ಸಿಲ್ ವಿರುದ್ಧ ಮಂಜುನಾಥ್ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಅವರನ್ನು ವಜಾ ಮಾಡಲಾಗಿದೆ.

    ಬಾರ್ ಕೌನ್ಸಿಲ್ ಫೆಲ್‍ಫೇರ್ ಸ್ಟ್ಯಾಂಪ್ ಬಗ್ಗೆ ಮಂಜುನಾಥ್ ಆರೋಪ ಮಾಡಿದ್ದರು. ಹೀಗಾಗಿ ಮಂಜುನಾಥ್ ವಿರುದ್ಧ ವಿಚಾರಣೆಗೆ ತೀರ್ಮಾನ ಮಾಡಲಾಗಿದ್ದು, ವಿಚಾರಣೆ ಮುಗಿಯುವವರೆಗೆ ವಕಾಲತ್ತು ವಹಿಸುವಂತಿಲ್ಲ. ಹೀಗಂತ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‍ನಿಂದ ಮಂಜುನಾಥ್ ಅವರಿಗೆ ನೋಟಿಸ್ ನೀಡಿದೆ.

    ಸಿಡಿ ಯುವತಿ ಪರ ವಕೀಲ ಜಗದೀಶ್ ಹಾಗೂ ಮಂಜುನಾಥ್ ಬಾರ್ ಕೌನ್ಸಿಲ್‍ಗೆ ಸವಾಲೆಸೆದಿದ್ದರು. ತಾಕತ್ತಿದ್ದರೆ ಕ್ರಮಕೈಗೊಳ್ಳಿ ಎಂದು ಚಾಲೆಂಜ್ ಹಾಕಿದ್ದರು. ಜಗದೀಶ್ ದೆಹಲಿ ಬಾರ್ ಕೌನ್ಸಿಲ್‍ನಲ್ಲಿ ನೋಂದಣಿ ಹಿನ್ನೆಲೆಯಲ್ಲಿ ಜಗದೀಶ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎನ್ನಲಾಗಿದೆ.

  • ಮನೆಯವರ ಒತ್ತಡದಿಂದ ಆಕಾಶ್ ನನ್ನನ್ನು ಅರ್ಧದಲ್ಲೇ ಬಿಟ್ಟೋದ: ಸಂತ್ರಸ್ತ ಯುವತಿ

    ಮನೆಯವರ ಒತ್ತಡದಿಂದ ಆಕಾಶ್ ನನ್ನನ್ನು ಅರ್ಧದಲ್ಲೇ ಬಿಟ್ಟೋದ: ಸಂತ್ರಸ್ತ ಯುವತಿ

    – ಮನೆಯವರೂ ನನ್ನ ವಿರುದ್ಧ ತಿರುಗಿ ಬಿದ್ದಿದ್ದಾರೆ

    ಬೆಂಗಳೂರು: ಮನೆಯವರ ಒತ್ತಡದಿಂದ ಆಕಾಶ್ ನನ್ನನ್ನು ಅರ್ಧದಲ್ಲಿಯೇ ಬಿಟ್ಟು ಹೋದ. ನಾನು, ಆಕಾಶ್ ಈಗ ಬೇರೆ ಬೇರೆಯಾಗಿದ್ದೀವಿ. ಈಗ ನನ್ನ ಹಾಗೂ ಆಕಾಶ್ ನಡುವೆ ಏನೂ ಇಲ್ಲ ಎಂದು ಸಿಡಿ ಯುವತಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ನಾಲ್ಕನೇ ದಿನವಾದ ಇಂದು ಕೂಡ ಯುವತಿಯನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತು. ಆರ್.ಟಿ.ನಗರ ಕೇಸ್ ಸಂಬಂಧ ವಿಚಾರಣೆಯ ವೇಳೆ ಯುವತಿ ಸಾಕಷ್ಟು ವಿಚಾರಗಳನ್ನು ಬಯಲು ಮಾಡಿದರು. ಯಾರಾದರೂ ನಿಮ್ಮನ್ನು ಕಿಡ್ನಾಪ್ ಮಾಡಿದ್ರಾ..?, ಇಷ್ಟು ದಿನ ಯಾಕೆ ನೀವು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ವಿಡಿಯೋ ಮಾತ್ರ ರೆಕಾರ್ಡ್ ಮಾಡಿ ಬಿಡುಗಡೆ ಮಾಡ್ತಿದ್ರಿ. ರೆಕಾರ್ಡ್ ಮಾಡ್ತಾ ಇದ್ದಿದ್ದು ಯಾರು…? ನಿಮಗೆ ಯಾರಾದ್ರೂ ಆಶ್ರಯ ಕೊಟ್ಟಿದ್ರಾ..?, ದೆಹಲಿಯಿಂದ ಬಂದಿರೋದಾಗಿ ಮಾಹಿತಿ ಇದೆ, ದೆಹಲಿಗೆ ಯಾಕೆ ಹೋಗಿದ್ದು…?, ಸಿಡಿ ಬಿಡುಗಡೆ ಬಳಿಕ ಎಲ್ಲೆಲ್ಲಿ ಸುತ್ತಾಡಿದ್ರಿ, ನಿಮ್ಮ ಜೊತೆಯಲ್ಲಿ ಇದ್ದವರು ಯಾರು ಅಂತೆಲ್ಲ ಎಸ್‍ಐಟಿ ಪ್ರಶ್ನಿಸಿದೆ. ಈ ವೇಳೆ ಉತ್ತರಿಸಿದ ಯುವತಿ, ನನ್ನನ್ನು ಯಾರು ಕಿಡ್ನಾಪ್ ಮಾಡಿಲ್ಲ, ನಾನಾಗಿಯೇ ಹೋಗಿದ್ದು. ಸಿಡಿ ಬಿಡುಗಡೆಯಿಂದ ಮನಸ್ಸಿಗೆ ತುಂಬಾನೇ ನೋವಾಯ್ತು ಆದ ಕಾರಣಕ್ಕೆ ಯಾರ ಕಣ್ಣಿಗೂ ಬಿದ್ದಿಲ್ಲ. ನನ್ನ ಮೇಲೆಯೇ ಆರೋಪ ಬಂದ ಕಾರಣಕ್ಕೆ ನಾನು ವೀಡಿಯೋ ಹೇಳಿಕೆ ಮಾಡಬೇಕಾಯ್ತು ಎಂದು ಹೇಳಿಕೊಂಡಿದ್ದಾರೆ.

    ನನ್ನ ವೀಡಿಯೋ ಹೊರಗೆ ಬಂದ ಬಳಿಕ ನನಗೆ ತುಂಬಾನೇ ಭಯ ಕೂಡ ಆಗಿತ್ತು. ಆ ಹಿನ್ನೆಲೆಯಲ್ಲಿ ನಾನು ಆಕಾಶ್ ಹೊರಗೆ ಹೋಗಿದ್ವಿ. ಆದರೆ ಆಕಾಶ್ ಮನೆಯವರ ಒತ್ತಡದಿಂದ ನನ್ನನ್ನ ಅರ್ಧದಲ್ಲಿಯೇ ಬಿಟ್ಟು ಹೋದ. ನಾನು, ಆಕಾಶ್ ಈಗ ಬೇರೆ ಬೇರೆಯಾಗಿದ್ದೀವಿ. ಈಗ ನನ್ನ-ಆಕಾಶ್ ನಡುವೆ ಏನೂ ಇಲ್ಲ. ಕಷ್ಟದಲ್ಲಿ ಅವನು ಸಹಾಯ ಮಾಡಲಿಲ್ಲ. ನನ್ನ ಉಳಿದ ಸ್ನೇಹಿತರು ನಮಗೆ ಸಹಾಯ ಮಾಡಿದ್ರು. ಜೀವ ಭಯದಿಂದ ಹೊರಗೆ ಉಳಿದುಕೊಂಡಿದ್ದೆ. ಅದನ್ನು ಹೊರತುಪಡಿಸಿ ನಾನು ಎಲ್ಲೂ ನಾಪತ್ತೆ ಆಗಿಲ್ಲ ಎಂದಿದ್ದಾರೆ.

    ನನ್ನ ಅಪ್ಪ-ಅಮ್ಮ ನನ್ನ ವಿರುದ್ದವೇ ಹೇಳಿಕೆ ನೋಡಿ ಬೇಸರ ಆಗಿದೆ. ನಾನು ಈ ಪ್ರಕರಣ ಮುಗಿಯೋ ತನಕ ಅವರನ್ನು ಭೇಟಿ ಮಾಡೋದಿಲ್ಲ. ನನಗೆ ಅನ್ಯಾಯ ಮಾಡಿದವರ ಪರವಾಗಿ ಮಾತನಾಡಿದ್ದು, ನನಗೆ ಹಿಂಸೆ ಆಗಿದೆ. ಪ್ರಕರಣ ಮುಗಿದ ಬಳಿಕ ಅಷ್ಟೇ ನಾನು ನನ್ನ ಅಪ್ಪ-ಅಮ್ಮನ ಭೇಟಿ ಮಾಡ್ತೀನಿ ಎಂದು ಸಂತ್ರಸ್ತೆ ಹೇಳಿದ್ದಾರೆ. ವಿಚಾರಣೆಯ ಬಳಿಕ ಯುವತಿಯನ್ನು ಎಸ್‍ಐಟಿ ಅಧಿಕಾರಿಗಳು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

  • ಸಿಡಿ ಯುವತಿ ವಿಚಾರದಲ್ಲಿ ಮುಂದುವರಿದ ಕೆಸರೆರಚಾಟ- ಡಿಕೆಶಿಗೆ ಎಚ್ಚರಿಕೆ

    ಸಿಡಿ ಯುವತಿ ವಿಚಾರದಲ್ಲಿ ಮುಂದುವರಿದ ಕೆಸರೆರಚಾಟ- ಡಿಕೆಶಿಗೆ ಎಚ್ಚರಿಕೆ

    – ಇತ್ತ ಕಾಂಗ್ರೆಸ್, ಬಿಜೆಪಿ ಟ್ವೀಟ್ ಸಮರ

    ಬೆಂಗಳೂರು: ಸಿಡಿ ಯುವತಿಯ ವಿಚಾರದಲ್ಲಿ ಕೆಸರೆರಾಚಾಟ ಮುಂದುವರೆದಿದೆ. ಇಷ್ಟಕ್ಕೆಲ್ಲಾ ಡಿಕೆಶಿ ಕಾರಣವಾಗಿದ್ದು, ಸದ್ಯದಲ್ಲೇ ಇನ್ನಷ್ಟು ಆಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು ಅಂತ ಯುವತಿ ಸಹೋದರ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

    ನಮ್ಮ ಅಕ್ಕನನ್ನು ಈಗಲೂ ಡಿಕೆಶಿಯೇ ಹಿಡಿದಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ಮೇಲೆ ಮತ್ತೆ ಆರೋಪ ಮಾಡ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನನಗೂ ಇದಕ್ಕೂ ಸಂಬಂಧವಿಲ್ಲ. ಕೆಲವರಿಗೆ ನನ್ನ ಹೆಸರು ಹೇಳದಿದ್ರೆ ಮಾರ್ಕೆಟ್ ಇಲ್ಲ.. ಅದಕ್ಕೆ ಮಾತಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ ಇದು ಕಾಂಗ್ರೆಸ್ ಷಡ್ಯಂತ್ರವಾಗಿದ್ದು, ಇದ್ರಲ್ಲಿ ಡಿಕೆಶಿ ಪಾತ್ರ ಇದೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆರೋಪಿಸಿದ್ದಾರೆ. ರಮೇಶ್ ಜಾರಕಿಹೊಳಿ ಬಂಧನ ಆಗದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಈ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಎಂದಿನಂತೆ ಟ್ವೀಟ್ ವಾರ್ ಮುಂದುವರೆದಿದೆ. ರೇಪಿಸ್ಟ್ ಜನತಾ ಪಾರ್ಟಿಯ ಹೊಸ ನೀತಿಯ ಪ್ರಕಾರ ಸಂತ್ರಸ್ತೆಯ ಸಹಾಯಕ್ಕೆ ನಿಲ್ಲುವವರು ತಪ್ಪಿತಸ್ಥರು. ಆರೋಪಿಯ ರಕ್ಷಣೆಗೆ ನಿಲ್ಲುವ ಬಿಜೆಪಿಗರು ಸುಭಗರು.. ರೇಪಿಸ್ಟ್ ರಮೇಶ್ ಎಲ್ಲಿದ್ದಿಯಪ್ಪಾ…? ಎಂದು ಹ್ಯಾಷ್ ಟ್ಯಾಗ್ ಬಳಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

    ಈ ಬಗ್ಗೆ ಬಿಜೆಪಿ ಪ್ರತಿಕ್ರಿಯಿಸಿ, ದಲಿತ ಶಾಸಕ ಅಖಂಡ ಅವರು ಎಷ್ಟು ನೆರವು ಬೇಡಿದರೂ ಕಾಂಗ್ರೆಸ್ ಪಕ್ಷ ಅವರ ನೆರವಿಗೆ ಧಾವಿಸಲಿಲ್ಲ. ಸಿಡಿ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಬಳಸಿಕೊಳ್ತಿದೆ. ಹಣಕಾಸಿನ ನೆರವು, ಕಾನೂನು ಸಲಹೆ, ವಾಹನ ವ್ಯವಸ್ಥೆ ಎಲ್ಲವೂ ಕೆಪಿಸಿಸಿ ಕಚೇರಿಯಿಂದಲೇ ಆಗ್ತಿದೆ. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿ ಡಿಕೆಶಿಮಸ್ಟ್ ರಿಸೈನ್ ಎಂದು ಹ್ಯಾಷ್ ಟ್ಯಾಗ್ ಬಳಸಿದೆ.

    ಇನ್ನೊಂದು ಟ್ವೀಟ್ ಮಾಡಿ, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರೇ, ಸಂತ್ರಸ್ತೆ ನೇರವಾಗಿ ನಿಮ್ಮ ಹೇಳಿದ್ದಾರೆ. ಸಂತ್ರಸ್ತೆಯ ಪೋಷಕರೂ ನಿಮ್ಮ ಮೇಲೆ ಬೊಟ್ಟು ಮಾಡಿದ್ದಾರೆ. ಈಗ ನಿಮ್ಮದೇ ಪಕ್ಷದ ಲಖನ್ ನಿಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನೀವು ಮಾಡಿರುವ ಷಡ್ಯಂತ್ರ್ಯಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

  • ಬೌರಿಂಗ್ ಆಸ್ಪತ್ರೆಯಲ್ಲಿ ಸಿಡಿ ಯುವತಿಗೆ 3 ಗಂಟೆ ವೈದ್ಯಕೀಯ ಪರೀಕ್ಷೆ

    ಬೌರಿಂಗ್ ಆಸ್ಪತ್ರೆಯಲ್ಲಿ ಸಿಡಿ ಯುವತಿಗೆ 3 ಗಂಟೆ ವೈದ್ಯಕೀಯ ಪರೀಕ್ಷೆ

    – ಯುವತಿಗೆ ಕೊರೊನಾ ನೆಗೆಟಿವ್
    – ಧ್ವನಿ ಪರೀಕ್ಷೆ ವೇಳೆ ಯುವತಿ ಹೇಳಿದ್ದೇನು..?

    ಬೆಂಗಳೂರು: ಸಿಡಿ ರಾಡಿ ಎಪಿಸೋಡ್ ಮುಂದುವರಿದಿದೆ. ಸಿಡಿ ಯುವತಿಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

    ಮುಕ್ತ ಅನ್ನೋ ಮೆಡಿಕಲ್ ಟೀಂ 3 ಗಂಟೆಗಳ ಕಾಲ ತಪಾಸಣೆ ನಡೆಸ್ತು. ಅತ್ಯಾಚಾರ, ಹಲ್ಲೆ, ದೇಹದ ಪರಿಶೀಲನೆ, ಮಾಸಿಕ ಖಿನ್ನತೆ ಸೇರಿದಂತೆ ಬೇರೆ ಖಾಯಿಲೆ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಮುಕ್ತ ತಂಡದಲ್ಲಿ ಸ್ತ್ರೀ ರೋಗ ತಜೆ, ತುರ್ತ ಚಿಕಿತ್ಸಾ ವಿಭಾಗ ವೈದ್ಯರು, ಮಾನಸಿಕ ರೋಗ ತಜ್ಞರು ಮತ್ತು ಮೆಡಿಸನ್ ವಿಭಾಗದ ವೈದ್ಯರು, ದಾದಿಯರು ಇದ್ದರು.

    ಕೌನ್ಸಿಂಗ್ ಮಾಡುವುದಕ್ಕೂ ಯುವತಿಯಿಂದ 3 ಫಾರಂಗಳಿಗೆ ಸಹಿ ಮಾಡಿಕೊಳ್ಳಲಾಯ್ತು. ಕೊರೊನಾ ಆಂಟಿಜೆನ್ ಟೆಸ್ಟ್‍ನಲ್ಲಿ ಯುವತಿಗೆ ನೆಗೆಟಿವ್ ಬಂದಿದೆ. ಯುವತಿಗೆ ಆಸ್ಪತ್ರೆ ಒಳಗೆ ಟೆಸ್ಟ್ ನಡೀತಿದ್ರೆ.. ಆಸ್ಪತ್ರೆ ಹೊರಗಡೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಟೆಸ್ಟ್ ಬಳಿಕ ಆಕೆಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗ್ತಾರಾ ಅನ್ನೋ ಚರ್ಚೆ ಎದ್ದಿತ್ತು. ಆದರೆ ಪೊಲೀಸರು ನೇರವಾಗಿ ಆಡುಗೋಡಿಯ ಟೆಕ್ನಿಕಲ್ ಸೆಲ್‍ಗೆ ಕರೆದುಕೊಂಡು ಹೋಗಲಾಯಿತು.

    ಈ ವೇಳೆ ಧ್ವನಿ ಪರೀಕ್ಷೆಗೆ ಒಳಪಡಿಲಾಯಿತು. ಆಗ ಕೂಡ ಸಂತ್ರಸ್ತೆ ನನಗೆ ನಂಬಿಕೆ ದ್ರೋಹವಾಯ್ತು ಅಂದಿದ್ದಾರೆ. ನಾಳೆ ಸ್ಥಳ ಮಹಜರು ನಡೆಸುವ ಬಗ್ಗೆ ಎಸ್‍ಐಟಿ ನೊಟೀಸ್ ಕೊಟ್ಟಿದೆ. ಈ ಮಧ್ಯೆ, ಸಂತ್ರಸ್ತೆ ಪರ ವಕೀಲ ಜಗದೀಶ್ ಮಾತನಾಡಿ, ಮೆಡಿಕಲ್ ಟೆಸ್ಟ್ ಆಗಿದೆ. ಈಗ ವಾಯ್ಸ್ ಟೆಸ್ಟ್ ಆಗಲಿದೆ. ಇದು ಕಬ್ಬನ್ ಪಾರ್ಕ್ ಠಾಣೆಯ ಪ್ರಕರಣ ಸಂಬಂಧ ಮಾತ್ರ ಆಗ್ತಿದೆ. ಬೇರೆ ಪ್ರಕರಣಗಳ ತನಿಖೆ ಬಗ್ಗೆ ಮಾಹಿತಿ ಇಲ್ಲ ಅಂದ್ರು. ಅಲ್ಲದೆ ಸದಾಶಿವನಗರ ಕೇಸಲ್ಲಿ ದೂರುದಾರ ನಮ್ಮ ಸಂತ್ರಸ್ತೆ ಹೆಸರು ದಾಖಲಿಸಿಲ್ಲ ಅಂದ್ರು.

  • ಸಹಾಯ ಕೇಳಿ ಡಿಕೆಶಿ ಮನೆ ಹತ್ರ ಹೋಗಿದ್ದು ನಿಜ: ಸಿಡಿ ಯುವತಿಯ ಹೇಳಿಕೆ

    ಸಹಾಯ ಕೇಳಿ ಡಿಕೆಶಿ ಮನೆ ಹತ್ರ ಹೋಗಿದ್ದು ನಿಜ: ಸಿಡಿ ಯುವತಿಯ ಹೇಳಿಕೆ

    – ನರೇಶ್ ನನಗೆ ಪರಿಚಯ, ನನ್ನನ್ನ ಯಾರೂ ಅಪಹರಿಸಿಲ್ಲ
    – ಲೀಕ್ ಆಗಿರುವ ಆಡಿಯೋ ಕ್ಲಿಪ್ ನಿಜ

    ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ವೀಡಿಯೋದಲ್ಲಿರುವ ಎನ್ನಲಾಗಿರುವ ಯುವತಿ ಮತ್ತೊಂದು ವೀಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ಸಂಜೆ ಲೀಕ್ ಆಗಿದ್ದ ಆಡಿಯೋ ಕ್ಲಿಪ್ ತಮ್ಮದೇ ಎಂದು ಒಪ್ಪಿಕೊಂಡಿರುವ ಯುವತಿ, ಸಹಾಯ ಕೇಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಹೋಗಿದ್ದು ನಿಜ ಎಂದಿದ್ದಾರೆ.

    ಮಾರ್ಚ್ 2ರಂದು ನನ್ನ ಸಿಡಿ ರಿಲೀಸ್ ಆದಾಗ ಭಯ ಆಗಿತ್ತು. ಮಾಧ್ಯಮಗಳಲ್ಲಿ ಸುದ್ದಿ ನೋಡಿ ಆತಂಕವಾಗಿತ್ತು. ಮಾಧ್ಯಮಗಳಲ್ಲಿ ನನಗೆ ನರೇಶ್ ಒಬ್ಬರೇ ಪರಿಚಯ. ಹಾಗಾಗಿ ನರೇಶಣ್ಣನಿಗೆ ಫೋನ್ ಮಾಡಿ ಸಹಾಯ ಕೇಳಿದೆ. ಅದಕ್ಕೆ ನರೇಶ್ ಇದು ದೊಡ್ಡ ಪ್ರಕರಣ. ಇದಕ್ಕೆ ರಾಜಕೀಯ ಮುಖಂಡರ ಸಹಾಯ ಬೇಕಾಗುತ್ತೆ. ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯರನ್ನ ಸಂಪರ್ಕಿಸಿ ಸಹಾಯ ಕೇಳೋಣ ಎಂದು ನರೇಶ್ ಹೇಳಿದ್ರು.

    ನಾನಿರುವ ಸ್ಥಳಕ್ಕೆ ಬಂದ ನರೇಶ್ ನನ್ನನ್ನು ಪಿಕ್ ಮಾಡಿದರು. ಡಿ.ಕೆ.ಶಿವಕುಮಾರ್ ಮನೆ ಬಳಿ ಬಂದಾಗ ನನ್ನ ಕುಟುಂಬಸ್ಥರು ಪದೇ ಪದೇ ಫೋನ್ ಮಾಡುತ್ತಿದ್ದರು. ಅಮ್ಮ ಅಳುತ್ತಿದ್ದಾಗ ಸಮಾಧಾನ ಮಾಡೋಕೆ ಮುಂದಾದೆ. ಅವರು ಅಳೋದು ನೋಡಿ ನಾನು ಏನು ಮಾಡಿಲ್ಲ. ಕುಟುಂಬಸ್ಥರ ಆತಂಕ ನೋಡಿ ಭಯ ಆಗಿದ್ದರಿಂದ ಅವರ ಸಮಾಧಾನಕ್ಕೆ ಮುಂದಾಗಿ, ಡಿ.ಕೆ.ಶಿವಕುಮಾರ್ ಮನೆ ಬಳಿ ಬಂದಿದ್ದೇನೆ. ಅವರನ್ನ ಭೇಟಿಯಾಗಿ ಎಲ್ಲ ಹೇಳುತ್ತೇನೆ ಎಂದು ಹೇಳಿದೆ. ಆದ್ರೆ ನಮಗೆ ಡಿ.ಕೆ.ಶಿವಕುಮಾರ್ ಸಿಗದ ಕಾರಣ ವಾಪಸ್ ಅಲ್ಲಿಂದ ಹೊರಡಬೇಕಾಯ್ತು.  ಇದನ್ನೂ ಓದಿ: ಸರ್ಕಾರವನ್ನೇ ಬೀಳಿಸಿದ್ದೀನಿ ಇದೇನು ಮಹಾ – ರಮೇಶ್ ಜಾರಕಿಹೊಳಿ

    ನಮ್ಮ ಅಪ್ಪ-ಅಮ್ಮ ಎಲ್ಲಿದ್ದಾರೆ ಅನ್ನೋದು ನನಗೆ ಗೊತ್ತಾಗುತ್ತಿಲ್ಲ. ಎಸ್‍ಐಟಿ ರಕ್ಷಣೆ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದ್ರೆ ಅವರ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಅಪ್ಪ-ಅಮ್ಮ, ಅಜ್ಜಿ ಹಾಗೂ ತಮ್ಮಂದಿರನ್ನ ಬೆಂಗಳೂರಿಗೆ ಕರೆದುಕೊಂಡು ಬನ್ನಿ. ನನ್ನನ್ನು ಯಾರು ಅಪಹರಿಸಿಲ್ಲ, ಸುರಕ್ಷಿತವಾಗಿದ್ದೇನೆ. ಕಳೆದ 24 ದಿನಗಳಿಂದ ಏನು ಮಾಡಬೇಕು ಅನ್ನೋದು ಗೊತ್ತಾಗುತ್ತಿಲ್ಲ. ಎಸ್‍ಐಟಿ ತನಿಖೆಯಿಂದ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ಇದನ್ನೂ ಓದಿ: ನಾನು ಡಿ.ಕೆ.ಶಿವಕುಮಾರ್ ಮನೆ ಬಳಿಯೇ ಇದ್ದೇನೆ, ಯಾವುದೇ ಕಾರಣಕ್ಕೂ ಹೆದರಬೇಡಿ- ಯುವತಿಯ ಫೋನ್‌ ಕಾಲ್‌ ಲೀಕ್‌

    ಒಂದು ದಿನದಲ್ಲಿ ಸರ್ಕಾರ ಬೀಳಿಸಿಬಲ್ಲೆ. ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ. ಅವರನ್ನ ಜೈಲಿಗೆ ಹಾಕಿಸುತ್ತೇನೆ ಎಂದು ಬಹಿರಂಗವಾಗಿಯೇ ಬೆದರಿಕೆ ಹಾಕುತ್ತಾರೆ. ಎಷ್ಟೇ ಹಣ ಖರ್ಚಾಗಲಿ ಅಂದ್ರೆ ಏನರ್ಥ ಅನ್ನೋದನ ಜನರು ಅರ್ಥ ಮಾಡಿಕೊಳ್ಳಬೇಕು. ನಾಳೆ ನನ್ನನ್ನೇ ಕೊಲ್ಲಬಹುದು ಅಥವಾ ಅಪ್ಪ-ಅಮ್ಮನ ಜೀವಕ್ಕೆ ಅಪಾಯ ಉಂಟು ಮಾಡಬಹುದು. ದಯವಿಟ್ಟು ಅಪ್ಪ-ಅಮ್ಮನ ಬೆಂಗಳೂರಿಗೆ ಕರೆ ತಂದು ರಕ್ಷಣೆ ಕೊಡಿ ಎಂದು ಯುವತಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಒಳ್ಳೆಯವರು, ರಾಜೀನಾಮೆ ನೀಡಬಾರದು: ರಮೇಶ್ ಜಾರಕಿಹೊಳಿ

  • ಸಿಡಿ ಯುವತಿ ಮನೆಯಲ್ಲಿ 23 ಲಕ್ಷ ಹಣ ಪತ್ತೆ

    ಸಿಡಿ ಯುವತಿ ಮನೆಯಲ್ಲಿ 23 ಲಕ್ಷ ಹಣ ಪತ್ತೆ

    ಬೆಂಗಳೂರು: ಸಿಡಿ ಪ್ರಕರಣದಲ್ಲಿ ಕೇಳಿ ಬಂದಿರುವ ಯುವತಿಯ ಮನೆ ಮೇಲೆ ನಿನ್ನೆ ವಿಶೇಷ ತನಿಖಾ ತಂಡ(ಎಸ್‌ಐಟಿ) ದಾಳಿ ನಡೆಸಿದ್ದು ಈ ವೇಳೆ 23 ಲಕ್ಷ ರೂ. ಹಣ ಪತ್ತೆಯಾಗಿದೆ.

    ಆರ್‌ಟಿ ನಗರದಲ್ಲಿ ನೆಲೆಸಿದ್ದ ಯುವತಿಯ ಮನೆಯ ಮೇಲೆ ನಿನ್ನೆ ದಾಳಿ ನಡೆದಿತ್ತು. ದಾಳಿಯ ವೇಳೆ ಒಟ್ಟು 23 ಲಕ್ಷ ರೂ. ಹಣ ಮತ್ತು ಮಹತ್ವದ ದಾಖಲೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಪೊಲೀಸ್‌ ಮೂಲಗಳಿಂದ ಲಭ್ಯವಾಗಿದೆ.

    ಎಸ್‌ಐಟಿ ಕಳೆದ ವಾರವೇ ಯುವತಿಯ ಮನೆಗೆ ನೋಟಿಸ್‌ ಅಂಟಿಸಿ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ. ಆದರೆ ವಿಚಾರಣೆ ಗೈರು ಹಾಜರಿಯಾದ ಹಿನ್ನೆಲೆಯಲ್ಲಿ ಮತ್ತೊಮ್ಮೆ ನೋಟಿಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ.

    ಸಿಡಿಯಲ್ಲಿ ಇರುವ ಯುವತಿ ಈಗ ಎಲ್ಲಿದ್ದಾಳೆ ಎಂಬುದರ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ ಈಕೆ ಮಾರ್ಚ್ 2ರ ರಾತ್ರಿ 9:30ಕ್ಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು.

    ಮಾರ್ಚ್‌ 2ರ ಸಂಜೆ ಸ್ಫೋಟಕ ಸಿಡಿ ರಿಲೀಸ್‌ ಆಗಿತ್ತು. ಸಿಡಿ ರಿಲೀಸ್ ಆಗಿ 4 ಗಂಟೆ ಬಳಿಕ ಸಂತ್ರಸ್ತೆ ಮನೆಯಿಂದ ಹೊರಗಡೆ ಬಂದಿದ್ದಾಳೆ. ಬ್ಯಾಗ್ ಇಟ್ಟುಕೊಂಡು ಮನೆಯಿಂದ ಏಕಾಂಗಿಯಾಗಿ ಹೊರಗೆ ಬಂದ ಯುವತಿ ನಡೆದುಕೊಂಡೇ ಮುಖ್ಯ ರಸ್ತೆಗೆ ತಲುಪಿದ್ದಳು.

    ಮನೆಯಿಂದ ಹೊರಬಂದ ಬಳಿಕ ಮೊಬೈಲ್ ಸ್ವಿಚ್‍ಆಫ್ ಮಾಡಿ ಸಿಮ್ ಡಿಆಕ್ಟಿವೇಟ್ ಮಾಡಿದ್ದಾಳೆ. ಮೊಬೈಲ್ ಸ್ವಿಚ್‍ ಆಫ್‌ ಮಾಡಿರುವ ವಿಚಾರ ತಾಂತ್ರಿಕ ದಾಖಲೆಗಳಿಂದ ಲಭ್ಯವಾಗಿದೆ.

    ಆರಂಭದಲ್ಲಿ ಯುವತಿ ಆರ್‌ಟಿ ನಗರದ ಪಿಜಿಯಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಈಗ ಆಕೆ ‌ಪಿಜಿಯಲ್ಲಿ ಇರಲಿಲ್ಲ. ಆರ್‌ಟಿ ನಗರದ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ಒಬ್ಬಳೇ ವಾಸವಾಗಿದ್ದ ವಿಚಾರ ಲಭ್ಯವಾಗಿತ್ತು.

    ಯುವತಿಯ ಬಗ್ಗೆ ಪಬ್ಲಿಕ್‌ ಟಿವಿ ಮನೆ ಮಾಲೀಕರನ್ನು ಮಾತನಾಡಿಸಿದೆ. ಈ ವೇಳೆ ಅವರು, ಇದು ಪಿಜಿಯಲ್ಲ. ಅವರಿಗೆ ಬಾಡಿಗೆ ನೀಡಿದ್ದೆ. ಬಾಡಿಗೆಯಲ್ಲಿ ನಾಲ್ಕು ಜನ ಸೇರಿ ಮನೆ ತೆಗೆದುಕೊಂಡಿದ್ದಾರೆ. 2018ರಿಂದ ಅವರು ಇಲ್ಲಿ ನೆಲೆಸಿದ್ದರು. ರೂಮಿನಲ್ಲ ಆಕೆ ಒಬ್ಬಳೇ ಇದ್ದಳು. ಸೋಮವಾರ ಇಲ್ಲಿಂದ ತೆರಳಿದ್ದಾಳೆ ಎಂದು ತಿಳಿಸಿದ್ದಾರೆ.

  • ದೂರು ಕೊಟ್ಟು ಸಿಡಿ ಯುವತಿ ಪೋಷಕರು ನಾಪತ್ತೆ..!

    ದೂರು ಕೊಟ್ಟು ಸಿಡಿ ಯುವತಿ ಪೋಷಕರು ನಾಪತ್ತೆ..!

    ಬೆಳಗಾವಿ: ಮಾಜಿ ಸಚಿವರ ರಾಸಲೀಲೆ ಸಿಡಿ ಕೇಸ್ ದಿನದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ನಿನ್ನೆ ತಾನೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಿಡಿ ಯುವತಿ ಪೋಷಕರು ನಾಪತ್ತೆಯಾಗಿದ್ದಾರೆ.

    ಹೌದು. ಮಂಗಳವಾರ ರಾತ್ರಿ ದೂರು ಕೊಟ್ಟ ಬಳಿಕ ಪೋಷಕರು ನಾಪತ್ತೆಯಾಗಿದ್ದಾರೆ. ಇದಕ್ಕೂ ಮೊದಲು 2 ದಿನಗಳ ಹಿಂದೆಯೇ ಮನೆ ಮಾಲೀಕನಿಗೆ ಬಾಡಿಗೆ ನೀಡಿರುವ ಯುವತಿ ಪೋಷಕರು ಮನೆ ಖಾಲಿ ಮಾಡಿದ್ದಾರೆ.

    ನಿನ್ನೆ ಸಿಡಿಯಲ್ಲಿದ್ದ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವತಿಯ ತಂದೆ, ತಾಯಿ ಮತ್ತು ಇಬ್ಬರು ಸಹೋದರರು, ಓರ್ವ ವಕೀಲರೊಂದಿಗೆ ಆಗಮಿಸಿ ನಿನ್ನೆ ದೂರು ನೀಡಿದ್ದಾರೆ. ಆದರೆ ದೂರಿನ ಪ್ರತಿಯಲ್ಲಿ ನೀಡಿದ ವಿಳಾಸದಲ್ಲಿದ್ದ ಮನೆಯಿಂದ ಎರಡು ದಿನಗಳ ಹಿಂದೆಯೇ ಯುವತಿ ತಂದೆ ತೆರಳಿದ್ದಾರೆ.

    ಯುವತಿ ಕುಟುಂಬ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಾಸವಿತ್ತು. ಆದರೆ ನಿನ್ನೆ ದೂರು ನೀಡಿ ಕುಟುಂಬ ಅಜ್ಞಾತವಾಗಿದೆ. ಇತ್ತ ಪೋಷಕರ ದೂರಿನಂತೆ ಯುವತಿ ಕಿಡ್ನ್ಯಾಪ್ ಕೇಸ್ ತನಿಖೆ ನಡೆಸಲು ವಿಶೇಷ ತಂಡ ರಚನೆ ಮಾಡಲಾಗಿದೆ. ಎಪಿಎಂಸಿ ಠಾಣೆ ಸಿಪಿಐ ಜಾವೇದ್ ಮುಷಾಪುರಿ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದ್ದು, ಯುವತಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಳ್ಳಲಿದ್ದಾರೆ.

    ಸದ್ಯ ಪೊಲೀಸರು ಅಪರಿಚಿತನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಯುವತಿ ಪೋಷಕರಿಗೆ ಯಾರ ಮೇಲೆ ಸಂಶಯವಿದೆ ಎಂಬ ಬಗ್ಗೆ ವಿಚಾರಣೆ ನಡೆಸಲಿದ್ದಾರೆ. ಮಾರ್ಚ್ 2ರಂದು ರಾತ್ರಿ 12 ರಿಂದ 1 ಗಂಟೆ ಮಧ್ಯೆ ಮಗಳನ್ನು ಬೆಂಗಳೂರಿನ ಹಾಸ್ಟೆಲ್‍ನಿಂದ ಕಿಡ್ನಾಪ್ ಮಾಡಿದ್ದಾರೆ. ಅಕ್ರಮ ಬಂಧನದಲ್ಲಿಟ್ಟು ಹೆದರಿಸಿ ಅಶ್ಲೀಲ ಸಿಡಿ ಮಾಡಿ ಹರಿಬಿಟ್ಟ ಆರೋಪಿಸಿ ಯುವತಿ ತಂದೆ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅಪರಿಚಿತರ ವಿರುದ್ಧ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.