Tag: ಸಿಡಿ ಲೇಡಿ

  • ಜಾರಕಿಹೊಳಿ ಸಿಡಿ ಪ್ರಕರಣ – ಸಂತ್ರಸ್ತೆ ಪೋಷಕರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಜಾರಕಿಹೊಳಿ ಸಿಡಿ ಪ್ರಕರಣ – ಸಂತ್ರಸ್ತೆ ಪೋಷಕರ ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತ ಯುವತಿ ಸಿಆರ್ ಪಿಸಿ 164 ಅಡಿ ನೀಡಿರುವ ಸ್ವಇಚ್ಛಾ ಹೇಳಿಕೆಯನ್ನ ರದ್ದು ಮಾಡಬೇಕು ಅಂತಾ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

    ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ನೀಡಿದ್ದ ಕಲಂ 164ರ ಅಡಿಯಲ್ಲಿ ಹೇಳಿಕೆಯನ್ನು ಹಾಗೂ ಅದರ ನ್ಯಾಯಬದ್ಧತೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ಸಂತ್ರಸ್ತೆಯ ಪೋಷಕರು ಪ್ರಶ್ನಿಸಿದ್ರು. ಸಂತ್ರಸ್ತೆಯ ಹೇಳಿಕೆ ಅವಳ ಮನಸ್ಸಿಗೆ ವಿರುದ್ಧವಾಗಿ ಹಾಗೂ ಒತ್ತಾಯ ಪೂರ್ವಕವಾಗಿ ಪಡೆಯಲಾಗಿದೆ ಎಂದು ಆರೋಪಿಸಿದ್ದರು. ಕಲಂ 164 ಅಡಿಯಲ್ಲಿ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಪಡೆಯುವಾಗ ಸಂತ್ರಸ್ತೆಯ ಮನಸ್ಥಿತಿ ಸರಿ ಇರಲಿಲ್ಲ ಹಾಗೂ ಮಾನಸಿಕ ಒತ್ತಡದಲ್ಲಿದ್ದಳು ಎಂದು ಪೋಷಕರು ವಾದಿಸಿದ್ದರು.

    ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಈ ರಿಟ್ ಅರ್ಜಿಯಲ್ಲಿ ಸಂತ್ರಸ್ತೆಯ ಪರವಾಗಿ ತಮ್ಮ ವಾದವನ್ನೂ ಆಲಿಸಬೇಕೆಂದು ಸುಪ್ರೀಂಕೋರ್ಟ್ ವಕೀಲರಾದ ಸಂಕೇತ್ ಏಣಗಿ ಅರ್ಜಿ ಸಲ್ಲಿಸಿದ್ದರು. ವಕೀಲ ಸಂಕೇತ್ ಏಣಗಿ ಅವರ ವಾದ ಆಲಿಸಿದ ನ್ಯಾಯಾಲಯ ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ನೀಡಿದ್ದ ಕಲಂ 164 ಸಿಆರ್ ಪಿಸಿ ಅಡಿಯಲ್ಲಿ ಹೇಳಿಕೆ ನ್ಯಾಯಬದ್ಧವಾಗಿದ್ದು, ಸುಪ್ರೀಂಕೋರ್ಟಿನ ನಿರ್ಭಯ ಅತ್ಯಾಚಾರ ಪ್ರಕರಣದ ತೀರ್ಪಿನ ಅನುಸಾರವಾಗಿದೆ. ತದನಂತರ ಹೊಸದಾಗಿ 2013ರಲ್ಲಿ ಕಲಂ 164 ಅಡಿ ತಿದ್ದುಪಡಿಯಾಗಿ ಸೇರ್ಪಡೆಯಾದ ಹೊಸ ಕಲಂ 164(5) & (5ಂ) ಸಿಆರ್ ಪಿಸಿ ಅಡಿಯಲ್ಲಿ ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ಸ್ವಇಚ್ಛೆಯಿಂದ ಹಾಗೂ ಯಾವುದೇ ಒತ್ತಾಯವಿಲ್ಲದೆ ಹೇಳಿಕೆ ನೀಡಿದ್ದು ಅದು ನ್ಯಾಯಬದ್ಧವಾಗಿದೆ ಎಂದು ವಾದ ಮಂಡಿಸಿದ್ರು.  ಇದನ್ನೂ ಓದಿ: ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಎಸ್‍ಐಟಿ ಪರ ನ್ಯಾಯವಾದಿ ಪ್ರಸನ್ನಕುಮಾರ್ ವಾದ ಮಂಡನೆ ಮಾಡಿದ್ರು. ವಾದ ಪ್ರತಿವಾದ ಆಲಿಸಿದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠ, ಸಂತ್ರಸ್ತೆಯು 2013ರಲ್ಲಿ ಕಲಂ 164 ಸಿಆರ್ ಪಿಸಿಯ ತಿದ್ದುಪಡಿಯಾಗಿ ಸೇರ್ಪಡೆಯಾದ ಹೊಸ ಕಲಂ 164(5) & (5ಂ) ಅಡಿ ಸಿಆರ್ ಪಿಸಿಯರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಎದುರಿಗೆ ಸ್ವಇಚ್ಛೆಯಿಂದ ಹಾಗೂ ಯಾವುದೇ ಒತ್ತಾಯವಿಲ್ಲದೆ ಹೇಳಿಕೆ ನೀಡಿದ್ದು, ಅದು ನ್ಯಾಯಬದ್ಧವಾಗಿದೆ ಎಂದು ಮಹತ್ವದ ತೀರ್ಪು ನೀಡಿ ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದರು. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

    ಹೇಬಿಯಸ್ ಕಾರ್ಪಸ್ ಅರ್ಜಿ ಸಹ ವಜಾ:
    ಮೇ 27 ರಂದು ಸಿಡಿಯಲ್ಲಿದ್ದ ಯುವತಿ ತಂದೆ ಧಾರವಾಡ ಹೈಕೋರ್ಟ್ ನಲ್ಲಿ ನನ್ನ ಮಗಳನ್ನ ಹುಡುಕಿಕೊಡಿ ಎಂದು ಹೇಬಿಯಸ್ ಕಾರ್ಪಸ್ ಅರ್ಜಿಯನ್ನ ಸಲ್ಲಿಸಿದ್ದರು. ವೀಡಿಯೋ ವಿಚಾರಣೆ ವೇಳೆ, ನಾನು ಸುರಕ್ಷಿತವಾಗಿದ್ದೇನೆಂದು ಯುವತಿ ಹೇಳಿಕೆ ನೀಡಿದ್ದಾಳೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ವಿಳಾಸದಲ್ಲಿ ಪ್ರಸ್ತುತ ವಾಸವಾಗಿರುತ್ತೇನೆ. ನಾನು ಸ್ವಂತ ಇಚ್ಛೆ ಇಂದ ವಾಸವಾಗಿದ್ದು, ನನಗೆ ಇಲ್ಲಿ ಇರುವುದಕ್ಕೆ ಯಾರದೇ ಒತ್ತಡ ಇರುವುದಿಲ್ಲ ಮತ್ತು ನನ್ನ ರಕ್ಷಣೆಗಾಗಿ ಬೆಂಗಳೂರು ನಗರದ ಪೋಲೀಸರು ಭದ್ರತೆಯನ್ನು ಒದಗಿಸುತ್ತಾರೆ ಹಾಗೂ ನಾನು ಸುರಕ್ಷಿತವಾಗಿ ಇರುತ್ತೇನೆ. ನಾನು ಪ್ರಾಪ್ತ ವಯಸ್ಕಳಿದ್ದು ನಾನು ಸದ್ಯ ನಮ್ಮ ತಂದೆ ತಾಯಿ ಬಳಿ ಹೋಗಲು ಇಚ್ಛಿಸುವುದಿಲ್ಲ. ಈ ಪ್ರಕರಣಗಳು ಮುಗಿದ ನಂತರ ನಾನು ಅವರನ್ನು ಭೇಟಿ ಆಗುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಮಹಾನಾಯಕ ಗಾಂ…ನಾನು ಗಂಡಸು, ಡಿಕೆಶಿ ವಿರುದ್ಧ ದೂರು ಕೊಡ್ತೇನೆ- ರಮೇಶ್ ಜಾರಕಿಹೊಳಿ ಆಕ್ರೋಶ

    ಒಪ್ಪಿತ ಲೈಂಗಿಕ ಕ್ರಿಯೆನಾ?:
    ಪ್ರಕರಣದ ಆರಂಭದಲ್ಲಿ ಯುವತಿ ನನಗೆ ಗೊತ್ತೆ ಇಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಆ ಯುವತಿ ನನಗೆ ಗೊತ್ತು ಅಂತ ಹೇಳಿದ್ದಾರೆ ಎನ್ನಲಾಗುತ್ತಿದೆ. ಆ ಯುವತಿ ಪ್ರಾಜೆಕ್ಟ್ ವಿಚಾರದಲ್ಲಿ ನನಗೆ ಪರಿಚಯ ಆಗಿದ್ದು ನಿಜ. ಅವಾಗಾವಾಗ ನಾನು ವಾಸವಾಗಿದ್ದ ಅಪಾರ್ಟ್ ಮೆಂಟ್ ಗೆ ಬರುತ್ತಿದ್ದಳು. ಅವಾಗ ಇಬ್ಬರು ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದೀವಿ. ಅದು ಕೂಡ ಆಕೆಯ ಸಮ್ಮತಿಯ ಮೇರೆಗೆ ಎಂದು ಎಸ್‍ಐಟಿ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

  • ರಮೇಶ್ ಜಾರಕಿಹೊಳಿ, ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್

    ರಮೇಶ್ ಜಾರಕಿಹೊಳಿ, ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್

    ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಎಸ್‍ಐಟಿಗೆ ಹೈಕೋರ್ಟ್ ತುರ್ತು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎಸ್‍ಐಟಿ ತನಿಖೆಯನ್ನು ರದ್ದು ಮಾಡುವಂತೆ ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇವತ್ತು ಉಚ್ಛ ನ್ಯಾಯಾಲಯದಲ್ಲಿ ನಡೆಯಿತು.

    ಎಸ್‍ಐಟಿಯ ಬದ್ಧತೆ ಮತ್ತು ತನಿಖೆಯ ವೈಖರಿಯನ್ನು ಪ್ರಶ್ನಿಸಿ ಸಂತ್ರಸ್ತ ಯುವತಿ ಅರ್ಜಿ ಸಲ್ಲಿಸಿದ್ದರು. ಎಸ್‍ಐಟಿ ಅತ್ಯಾಚಾರ ಕೇಸ್ ಮರೆಮಾಚಿ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡೋಕೆ ಹೊರಟಿದೆ. ಹೀಗಾಗಿಯೇ ಸದಾಶಿವನಗರದ ಕ್ರೈಂ ನಂ. 21 /2021 ನಮೂದಿಸಲಾಗಿದೆ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದರು. ಎಸ್‍ಐಟಿ ತನಿಖೆಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಎಸ್‍ಐಟಿ ತನಿಖೆ ರದ್ದು ಮಾಡಬೇಕು ಎಂದು ಯುವತಿ ಅರ್ಜಿ ಸಲ್ಲಿಸಿದ್ದರು. ಇಂದು ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಘನ ಉಚ್ಚ ನ್ಯಾಯಾಲಯ, ಎಸ್‍ಐಟಿಗೆ ಹಾಗೂ ರಮೇಶ್ ಜಾರಕಿಹೊಳಿಗೆ ತುರ್ತು ಹಾಜರಾಗಲು ನೋಟಿಸ್ ಗೆ ಆದೇಶಿಸಿದೆ.

    ಸಂತ್ರಸ್ತೆಯ ಅರ್ಜಿಯ ಮುಂದಿನ ವಿಚಾರಣೆ ಜೂನ್ 21ಕ್ಕೆ ನ್ಯಾಯಾಲಯ ಮುಂದೂಡಿದೆ. ಸಂತ್ರಸ್ತೆಯ ಪರ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಸಂಕೇತ್ ಏಣಗಿ ವಾದ ಮಂಡಿಸಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

    ಎಸ್‍ಐಟಿ ಮುಂದೆ ಹಾಜರಾದ ನರೇಶ್, ಶ್ರವಣ್: ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್‍ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ವೀಡಿಯೋ ಜಾರಕಿಹೊಳಿ ಮೊಬೈಲ್ ನಲ್ಲಿ ಇದೆಯಾ?
    ಸ್ಟಿಂಗ್ ಆದ ನಂತರ ಯುವತಿ ನನಗೆ ಕಾಲ್ ಮಾಡಿದ್ದು ನಿಜ. ಸ್ಟಿಂಗ್ ಕ್ಯಾಮೆರಾದಲ್ಲಿ ವೀಡಿಯೋ ಆಗುವ ಮೊದಲೆ ರಾಸಲೀಲೆ ವಿಡಿಯೋ ಆಗಿತ್ತಂತೆ. ಸದ್ಯ ವೈರಲ್ ವೀಡಿಯೋದಲ್ಲೂ ಜಾರಕಿಹೊಳಿ ಯುವತಿಗೆ ವಿಡಿಯೋ ಮಾಡುವಂತೆ ಹೇಳ್ತಾರೆ ಕೇಳಿ ಎಂದು ಎಸ್‍ಐಟಿಗೆ ಹೇಳಿದ್ದಾನೆ. ಆ ವೀಡಿಯೋ ಜಾರಕಿಹೊಳಿ ಮೊಬೈಲ್ ನಲ್ಲಿದೆ, ಬೇಕಿದ್ರೆ ಚೆಕ್ ಮಾಡಿ. ಯುವತಿಗೆ ಬಲವಂತವಾಗಿ ಮತ್ತು ಬೆದರಸಿ ಲೈಂಗಿಕ ಸಂಪರ್ಕ ಬೆಳಸಿದ್ದಾರೆ. ವೈರಲ್ ಆಗಿರೋ ವೀಡಿಯೋ ಬಿಟ್ಟು ಬೇರೆ ಯುವತಿಯರ ಜೊತೆಗಿರೋ ವಿಡಿಯೋ ಸಹ ಸಾಹುಕಾರ್ ಮೊಬೈಲ್ ನಲ್ಲಿದೆ. ಈ ವಿಚಾರವನ್ನು ಯುವತಿಯೇ ನಮಗೆ ಹೇಳಿದ್ದಾಳೆ. ಆಕೆಗೆ ಅವಾಚ್ಯವಾಗಿ ಬೈದು ಕಿರುಕುಳ ಕೊಡ್ತಿದ್ದಾಗಿ ಯುವತಿ ಹೇಳಿದ್ರಿಂದ ಸ್ಟಿಂಗ್ ಮಾಡೋಕೆ ಹೇಳಿದ್ದೀವಿ. ಆದ್ರೆ ವೀಡಿಯೋ ಆದ್ಮೇಲೆ ನಾವು ನೋಡಿಲ್ಲ. ಇದರ ರಾ ಫುಟೇಜ್ ಎಲ್ಲವೂ ಯುವತಿ ಮನೆಯಲ್ಲಿತ್ತು. ಯುವತಿ ಮನೆಗೂ ಜಾರಕಿಹೊಳಿ ಕಡೆಯವರು ಬಂದು ಹೋಗಿದ್ದಾರೆ ಎಂದು ಶ್ರವಣ್ ವಿಚಾರಣೆಯಲ್ಲಿ ಹೇಳಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಕೇಸಲ್ಲಿ ಕೋರ್ಟಿಗೆ 3 ಪ್ರತ್ಯೇಕ ವರದಿ 

    ಕೊಲೆ ಬೆದರಿಕೆ:
    ವೀಡಿಯೋ ನಂತರ ಯುವತಿಗೆ ಅವರ ಮನೆಯವರಿಗೆ ತಿಳಿಸುವುದಾಗಿ ಹೇಳಲಾಗಿತ್ತು. ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿ ಎಂದು ತಿಳಿಸಲಾಗಿತ್ತು. ಆದ್ರೆ ಯುವತಿ ಹೆದರಿ ದೂರು ನೀಡಲು ಹಿಂದೇಟು ಹಾಕಿದರು. ಸಿಡಿ ವೈರಲ್ ಆದ ದಿನ ಕೂಡ ಯುವತಿಗೆ ಜಾರಕಿಹೊಳಿ ಕಡೆಯವರು ಕರೆ ಮಾಡಿ ಧಮ್ಕಿ ಹಾಕಿದ್ರು. ನಿನ್ನ ಹಾಗೂ ನಿನಗೆ ಸಪೋರ್ಟ್ ಮಾಡಿದವರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಶ್ರವಣ್ ಹೇಳಿರುವ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಸಾಹುಕಾರ್ ಬಚಾವ್ ಆಗ್ತಾರಾ? ಒಪ್ಪಿತ ಸೆಕ್ಸ್ ಅಂತ ಬಿ ರಿಪೋರ್ಟ್ ಹಾಕ್ತಾರಾ?

    ಜೀವ ಭಯದಿಂದ ನಾವೂ ಊರು ಬಿಡಬೇಕಾಯ್ತು. ಹೆಚ್ಚಾಗಿ ರೈಲು, ಬಸ್ ಪ್ರಯಾಣ ಮಾಡಿದ್ದೀವಿ. ಜಾರಕಿಹೊಳಿ ಪಿಎ ನಾಗರಾಜ್ ಅವರ ಬಿಎಸ್‍ಎನ್‍ಎಲ್ ನಂಬರ್ ನಿಂದ ಯುವತಿಗೆ ಕರೆ ಬರುತ್ತಿತ್ತು. ಇದೇ ನಾಗರಾಜ್ ಮೊದಲು ಜಾರಕಿಹೊಳಿ ಅಪಾರ್ಟ್ ರ್ಮೆಂಟ್ ಗೆ ಕರೆದೊಕೊಂಡು ಹೋಗಿದ್ದರು ಎಂದು ಶ್ರವಣ್ ಎಸಿಪಿ ಧರ್ಮೇಂದ್ರ ಮುಂದೆ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ:ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

  • ಸಾಹುಕಾರ್ ಸಿಡಿ ಪ್ರಕರಣ – ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ಒಪ್ಪಿಕೊಂಡ ಶಂಕಿತರು!

    ಸಾಹುಕಾರ್ ಸಿಡಿ ಪ್ರಕರಣ – ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ಒಪ್ಪಿಕೊಂಡ ಶಂಕಿತರು!

    ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್‍ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸ್ಟಿಂಗ್ ಆದ ನಂತರ ಯುವತಿ ನನಗೆ ಕಾಲ್ ಮಾಡಿದ್ದು ನಿಜ. ಸ್ಟಿಂಗ್ ಕ್ಯಾಮೆರಾದಲ್ಲಿ ವೀಡಿಯೋ ಆಗುವ ಮೊದಲೆ ರಾಸಲೀಲೆ ವಿಡಿಯೋ ಆಗಿತ್ತಂತೆ. ಸದ್ಯ ವೈರಲ್ ವೀಡಿಯೋದಲ್ಲೂ ಜಾರಕಿಹೊಳಿ ಯುವತಿಗೆ ವಿಡಿಯೋ ಮಾಡುವಂತೆ ಹೇಳ್ತಾರೆ ಕೇಳಿ ಎಂದು ಎಸ್‍ಐಟಿಗೆ ಹೇಳಿದ್ದಾನೆ. ಆ ವೀಡಿಯೋ ಜಾರಕಿಹೊಳಿ ಮೊಬೈಲ್ ನಲ್ಲಿದೆ, ಬೇಕಿದ್ರೆ ಚೆಕ್ ಮಾಡಿ. ಯುವತಿಗೆ ಬಲವಂತವಾಗಿ ಮತ್ತು ಬೆದರಸಿ ಲೈಂಗಿಕ ಸಂಪರ್ಕ ಬೆಳಸಿದ್ದಾರೆ. ವೈರಲ್ ಆಗಿರೋ ವೀಡಿಯೋ ಬಿಟ್ಟು ಬೇರೆ ಯುವತಿಯರ ಜೊತೆಗಿರೋ ವಿಡಿಯೋ ಸಹ ಸಾಹುಕಾರ್ ಮೊಬೈಲ್ ನಲ್ಲಿದೆ. ಈ ವಿಚಾರವನ್ನು ಯುವತಿಯೇ ನಮಗೆ ಹೇಳಿದ್ದಾಳೆ. ಆಕೆಗೆ ಅವಾಚ್ಯವಾಗಿ ಬೈದು ಕಿರುಕುಳ ಕೊಡ್ತಿದ್ದಾಗಿ ಯುವತಿ ಹೇಳಿದ್ರಿಂದ ಸ್ಟಿಂಗ್ ಮಾಡೋಕೆ ಹೇಳಿದ್ದೀವಿ. ಆದ್ರೆ ವೀಡಿಯೋ ಆದ್ಮೇಲೆ ನಾವು ನೋಡಿಲ್ಲ. ಇದರ ರಾ ಫುಟೇಜ್ ಎಲ್ಲವೂ ಯುವತಿ ಮನೆಯಲ್ಲಿತ್ತು. ಯುವತಿ ಮನೆಗೂ ಜಾರಕಿಹೊಳಿ ಕಡೆಯವರು ಬಂದು ಹೋಗಿದ್ದಾರೆ ಎಂದು ಶ್ರವಣ್ ವಿಚಾರಣೆಯಲ್ಲಿ ಹೇಳಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ:ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

    ವೀಡಿಯೋ ನಂತರ ಯುವತಿಗೆ ಅವರ ಮನೆಯವರಿಗೆ ತಿಳಿಸುವುದಾಗಿ ಹೇಳಲಾಗಿತ್ತು. ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿ ಎಂದು ತಿಳಿಸಲಾಗಿತ್ತು. ಆದ್ರೆ ಯುವತಿ ಹೆದರಿ ದೂರು ನೀಡಲು ಹಿಂದೇಟು ಹಾಕಿದರು. ಸಿಡಿ ವೈರಲ್ ಆದ ದಿನ ಕೂಡ ಯುವತಿಗೆ ಜಾರಕಿಹೊಳಿ ಕಡೆಯವರು ಕರೆ ಮಾಡಿ ಧಮ್ಕಿ ಹಾಕಿದ್ರು. ನಿನ್ನ ಹಾಗೂ ನಿನಗೆ ಸಪೋರ್ಟ್ ಮಾಡಿದವರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಶ್ರವಣ್ ಹೇಳಿರುವ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಸಾಹುಕಾರ್ ಬಚಾವ್ ಆಗ್ತಾರಾ? ಒಪ್ಪಿತ ಸೆಕ್ಸ್ ಅಂತ ಬಿ ರಿಪೋರ್ಟ್ ಹಾಕ್ತಾರಾ?

    ಜೀವ ಭಯದಿಂದ ನಾವೂ ಊರು ಬಿಡಬೇಕಾಯ್ತು. ಹೆಚ್ಚಾಗಿ ರೈಲು, ಬಸ್ ಪ್ರಯಾಣ ಮಾಡಿದ್ದೀವಿ. ಜಾರಕಿಹೊಳಿ ಪಿಎ ನಾಗರಾಜ್ ಅವರ ಬಿಎಸ್‍ಎನ್‍ಎಲ್ ನಂಬರ್ ನಿಂದ ಯುವತಿಗೆ ಕರೆ ಬರುತ್ತಿತ್ತು. ಇದೇ ನಾಗರಾಜ್ ಮೊದಲು ಜಾರಕಿಹೊಳಿ ಅಪಾರ್ಟ್ ರ್ಮೆಂಟ್ ಗೆ ಕರೆದೊಕೊಂಡು ಹೋಗಿದ್ದರು ಎಂದು ಶ್ರವಣ್ ಎಸಿಪಿ ಧರ್ಮೇಂದ್ರ ಮುಂದೆ ಹೇಳಿಕೆ ನೀಡಿದ್ದಾನೆ. ಸದ್ಯ ಸೋಮವಾರ 11 ಗಂಟೆ ವಿಚಾರಣೆಗೆ ಹಾಜರಾಗುವಂತೆ ನರೇಶ್ ಗೆ ನೋಟಿಸ್ ನೀಡಿದ್ರೆ, ಮಂಗಳವಾರ 11 ಗಂಟೆಗೆ ಹಾಜರಾಗುವಂತೆ ಶ್ರವಣ್ ಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

  • ಸಿಡಿ ಕೇಸ್ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ ಯುವತಿ

    ಸಿಡಿ ಕೇಸ್ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ ಯುವತಿ

    ಬೆಂಗಳೂರು: ಇನ್ನೇನೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ಸಿಗಲಿದೆ. ಎಸ್‍ಐಟಿ ಅತ್ಯಾಚಾರ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಗೆ ಮುಂದಾಗಿದೆ ಎಂಬ ಸುದ್ದಿ ಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿ ಮತ್ತೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಎಸ್‍ಐಟಿ ಈಗ ನಡೆಸುತ್ತಿರುವ ತನಿಖೆಯ ಮೇಲೆ ನಂಬಿಕೆ ಇಲ್ಲ. ಈಗ ಇರುವ ಅಧಿಕಾರಿಗಳು ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸುತ್ತಿದ್ದಾರೆ ಎಂಬ ಅನುಮಾನ ಇದೆ. ಅಲ್ಲದೇ ಆರೋಪಿ ಪ್ರಭಾವಿ ಆಗಿರೋದರಿಂದ ಸರಿಯಾಗಿ ವಿಚಾರಣೆಯೂ ನಡೆಯುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ ಮತ್ತು ಎಸ್‍ಐಟಿ ಮುಖ್ಯಸ್ಥರಿಗೆ ಉತ್ತರಿಸಲು ನೋಟಿಸ್ ನೀಡಿದೆ.

    ಪೋಷಕರ ಭೇಟಿಗೆ ಒಪ್ಪದ ಯುವತಿ:
    ಮೇ 27 ರಂದು ಸಿಡಿಯಲ್ಲಿದ್ದ ಯುವತಿ ತಂದೆ ಧಾರವಾಡ ಹೈಕೋರ್ಟ್ ನಲ್ಲಿ ನನ್ನ ಮಗಳನ್ನ ಹುಡುಕಿಕೊಡಿ ಎಂದು ಹೇಬಿಯಸ್ ಕಾರ್ಪಸ್ ಅರ್ಜಿಯನ್ನ ಸಲ್ಲಿಸಿದ್ದರು. ವೀಡಿಯೋ ವಿಚಾರಣೆ ವೇಳೆ, ನಾನು ಸುರಕ್ಷಿತವಾಗಿದ್ದೇನೆಂದು ಯುವತಿ ಹೇಳಿಕೆ ನೀಡಿದ್ದಾಳೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ವಿಳಾಸದಲ್ಲಿ ಪ್ರಸ್ತುತ ವಾಸವಾಗಿರುತ್ತೇನೆ. ನಾನು ಸ್ವಂತ ಇಚ್ಛೆ ಇಂದ ವಾಸವಾಗಿದ್ದು, ನನಗೆ ಇಲ್ಲಿ ಇರುವುದಕ್ಕೆ ಯಾರದೇ ಒತ್ತಡ ಇರುವುದಿಲ್ಲ ಮತ್ತು ನನ್ನ ರಕ್ಷಣೆಗಾಗಿ ಬೆಂಗಳೂರು ನಗರದ ಪೋಲೀಸರು ಭದ್ರತೆಯನ್ನು ಒದಗಿಸುತ್ತಾರೆ ಹಾಗೂ ನಾನು ಸುರಕ್ಷಿತವಾಗಿ ಇರುತ್ತೇನೆ. ನಾನು ಪ್ರಾಪ್ತ ವಯಸ್ಕಳಿದ್ದು ನಾನು ಸದ್ಯ ನಮ್ಮ ತಂದೆ ತಾಯಿ ಬಳಿ ಹೋಗಲು ಇಚ್ಛಿಸುವುದಿಲ್ಲ. ಈ ಪ್ರಕರಣಗಳು ಮುಗಿದ ನಂತರ ನಾನು ಅವರನ್ನು ಭೇಟಿ ಆಗುತ್ತೇನೆ ಎಂದು ಹೇಳಿದ್ದರು.

    ಒಪ್ಪಿತ ಲೈಂಗಿಕ ಕ್ರಿಯೆನಾ?: ಪ್ರಕರಣದ ಆರಂಭದಲ್ಲಿ ಯುವತಿ ನನಗೆ ಗೊತ್ತೆ ಇಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಆ ಯುವತಿ ನನಗೆ ಗೊತ್ತು ಅಂತ ಹೇಳಿದ್ದಾರೆ ಎನ್ನಲಾಗುತ್ತಿದೆ. ಆ ಯುವತಿ ಪ್ರಾಜೆಕ್ಟ್ ವಿಚಾರದಲ್ಲಿ ನನಗೆ ಪರಿಚಯ ಆಗಿದ್ದು ನಿಜ. ಅವಾಗಾವಾಗ ನಾನು ವಾಸವಾಗಿದ್ದ ಅಪಾರ್ಟ್ ಮೆಂಟ್ ಗೆ ಬರುತ್ತಿದ್ದಳು. ಅವಾಗ ಇಬ್ಬರು ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದೀವಿ. ಅದು ಕೂಡ ಆಕೆಯ ಸಮ್ಮತಿಯ ಮೇರೆಗೆ ಎಂದು ಎಸ್‍ಐಟಿ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಹಾನ್‌ ನಾಯಕ ಸೇರಿದಂತೆ 9 ಮಂದಿ ವಿರುದ್ಧ ಶೀಘ್ರವೇ ಕೇಸ್‌ – ಬಾಲಚಂದ್ರ ಜಾರಕಿಹೊಳಿ

    ನರೇಶ್ ಗೌಡ, ಶ್ರವಣ್‍ಗೆ ಜಾಮೀನು: ರಮೇಶ್ ಜಾರಕಿಹೊಳಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುವ ಮುನ್ನ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್‍ಮೇಲ್ ಕೇಸ್ ದಾಖಲು ಮಾಡಿದ್ರು. ಈ ಪ್ರಕರಣದ ಇಬ್ಬರು ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ಗೆ ಸಿಟಿ ಸಿವಿಲ್ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‍ಐಟಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡದಂತೆ ಆಕ್ಷೇಪಣೆ ಸಲ್ಲಿಸಿತ್ತು. ಆರೋಪಿಗಳು ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ ಎಂದು ವಾದ ಮಾಡಿದ್ದ ಎಸ್‍ಐಟಿಗೆ ಈ ಆದೇಶದಿಂದ ಹಿನ್ನಡೆಯಾಗಿದೆ. ಅಲ್ಲದೇ ಆದೇಶ ನೀಡಿದ ನ್ಯಾಯಾಲಯ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಕೇಸ್‍ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?

    ಏನಿದು ಪ್ರಕರಣ?
    ಮಾರ್ಚ್ 2ರಂದು ರಮೇಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು.  ಇದನ್ನೂ ಓದಿ: ಮಹಾನಾಯಕ ಗಾಂ…ನಾನು ಗಂಡಸು, ಡಿಕೆಶಿ ವಿರುದ್ಧ ದೂರು ಕೊಡ್ತೇನೆ- ರಮೇಶ್ ಜಾರಕಿಹೊಳಿ ಆಕ್ರೋಶ

    ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು. ಆ ಬಳಿಕದಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಂತರ ಸ್ವತಃ ಸುದ್ದಿಗೋಷ್ಠಿ ಕರೆದು ಮಾಧ್ಯಮಗಳ ಮುಂದೆ ಭಾವುಕರಾಗಿದ್ದರು. ಇಷ್ಟೆಲ್ಲಾ ಆದ ನಂತರ ಮಾಜಿ ಸಚಿವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಗೋಕಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಪಿಪಿಇ ಕಿಟ್ ಧರಿಸಿ ಉಪಚುನಾವಣೆಗೆ ಮತದಾನ ಮಾಡಿದ್ದರು. ಇದನ್ನೂ ಓದಿ:  ಸಿಡಿ ಕೇಸ್ – ಮಗಳನ್ನು ಹುಡುಕಿ ಕೊಡಿ ಎಂದು ತಂದೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

  • ಸಂತ್ರಸ್ತೆ ತನ್ನ ಹೇಳಿಕೆ ಬದಲಿಸಿಲ್ಲ- ಯುವತಿ ಪರ ವಕೀಲರ ಸ್ಪಷ್ಟನೆ

    ಸಂತ್ರಸ್ತೆ ತನ್ನ ಹೇಳಿಕೆ ಬದಲಿಸಿಲ್ಲ- ಯುವತಿ ಪರ ವಕೀಲರ ಸ್ಪಷ್ಟನೆ

    ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣದ ಸಂತ್ರಸ್ತೆ ತಮ್ಮ ಹೇಳಿಕೆ ಬದಲಿಸಿಲ್ಲ. ಎಸ್‍ಟಿಟಿ ನೋಟಿಸ್ ನೀಡಿದ್ದರಿಂದ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಯುವತಿ ಪರ ವಕೀಲರಾದ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

    ಇಂದು ನೋಟಿಸ್ ನೀಡದಿದ್ದರೂ ಯುವತಿ ಎಸ್‍ಐಟಿ ಮುಂದೆ ಹಾಜರಾಗಿ ತಮ್ಮ ಹೇಳಿಕೆ ಬದಲಿಸೋದಾಗಿ ಹೇಳಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು. ಸೆಕ್ಷನ್ 164ರ ಅಡಿ ಮತ್ತೊಮ್ಮೆ ಮರು ಹೇಳಿಕೆ ದಾಖಲಿಸಲು ವಕೀಲರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

    ಎಸ್‍ಐಟಿ ಮುಂದೆ ಯುವತಿ ಹೇಳಿದ್ದೇನು?: ನಾನು ಮಾಡದ ತಪ್ಪಿಗೆ ನಾನು ಶಿಕ್ಷೆ ಅನುಭವಿಸಿದ್ದು, ಒತ್ತಾಯ ಪೂರಕ ಹೇಳಿಕೆ ಕೊಡಿಸಿದರು. ನಂಬಿದವರಿಂದಲೇ ನಾನು ಮೋಸ ಹೋಗಿದ್ದೇನೆ. ನನ್ನ ಮರ್ಯಾದೆ ಹಾಳಾಗಿದ್ದು, ಪ್ರಕರಣ ಇಷ್ಟರ ಮಟ್ಟಿಗೆ ಆಗುತ್ತೆ ಅಂತ ನಾನು ಅಂದುಕೊಂಡಿರಲಿಲ್ಲ. ನ್ಯಾಯ ಸಿಗುವ ನಿರೀಕ್ಷೆ ಇತ್ತು, ಆದ್ರೆ ನನಗೆ ಗೊತ್ತಿಲ್ಲದೆ ಕೆಲವೊಂದು ವಿಚಾರಗಳು ನಡೆಯಿತು. ನನ್ನ ಬೆನ್ನ ಹಿಂದೆ ನಡೆದ ವಿಚಾರ ತಿಳಿದುಕೊಳ್ಳೋದಕ್ಕೆ ಸಾಕಷ್ಟು ದಿನಗಳೇ ಆಯಿತು. ನನ್ನ ಸ್ನೇಹಿತ ಆಕಾಶ್ ಗೆ ಕೂಡ ಕೆಲವೊಂದು ವಿಚಾರ ಮುಚ್ಚು ಮರೆ ಮಾಡಿದ್ದಾರೆ ಎಂದು ಯುವತಿ ಹೇಳಿದ್ದಾರೆ ಎನ್ನಲಾಗಿದೆ.

    ಅಪ್ಪ ಅಮ್ಮನಿಗೂ ಕೂಡ ನಾನು ನೋವು ನೀಡಿದ್ದೇನು. ಒಳ್ಳೆಯ ಮಗಳಾಗಬೇಕು ಅಂತ ನನ್ನ ಅಪ್ಪ ನಿರೀಕ್ಷೆ ಮಾಡಿದ್ದರು. ನನ್ನನ್ನು ಕೂಡ ಕೆಲವೊಮ್ಮೆ ದೂರ ಇಟ್ಟು ಮಾತಕತೆ ಮಾಡಿರುವ ಬಗ್ಗೆ ಅನುಮಾನ ಇದೆ. ಆದರೆ ನಿಜವಾಗಲೂ ಅನ್ಯಾಯಕ್ಕೆ ಒಳಗಾದವಳು ನಾನು ಮಾತ್ರ. ನಾನು ಸತ್ಯವನ್ನು ಮಾತ್ರ ಹೇಳಬೇಕದು ಬಯಸಿದ್ದೀನಿ. ನನ್ನ ಈ ಹೇಳಿಕೆಗೆ ನಾನು ಬದ್ಧವಾಗಿರ್ತೀನಿ ಎಂದು ಯುವತಿ ಎಸ್‍ಐಟಿ ಮುಂದೆ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಹಿನ್ನೆಲೆಯಲ್ಲಿ ಸೆಕ್ಷನ್ 164 ಅಡಿಯಲ್ಲಿ ಯುವತಿ ಮರು ಹೇಳಿಕೆ ಪಡೆಯುವ ಸಾಧ್ಯತೆಗಳಿವೆ. 164ರ ಅಡಿಯಲ್ಲಿ ಮರು ಹೇಳಿಕೆ ದಾಖಲಿಸಲು ನ್ಯಾಯಾಲಕ್ಕೆ ಮನವಿ ಸಲ್ಲಿಸಲು ಯುವತಿ ಮುಂದಾಗಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ನ್ಯಾಯಾಧೀಶರ ಮುಂದೆ ಯುವತಿ ಹಾಜರಾಗಿ ಹೇಳಿಕೆ ದಾಖಲಿಸು ಸಾಧ್ಯತೆಗಳು ದಟ್ಟವಾಗಿವೆ.

  • ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣ- ಸಿಡಿ ಲೇಡಿ ಯೂ ಟರ್ನ್

    ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣ- ಸಿಡಿ ಲೇಡಿ ಯೂ ಟರ್ನ್

    – ಎಸ್‍ಐಟಿ ಎದುರು ಯುವತಿ ಮರು ಹೇಳಿಕೆ

    ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇದೀಗ ಉಲ್ಟಾ ಹೊಡೆದಿದ್ದಾರೆ.

    ನೋಟಿಸ್ ನೀಡದೇ ಇದ್ದರೂ ಇದ್ದಕ್ಕಿದ್ದಂತೆ ಯುವತಿ ಇಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ಮೂಲಕ ಯುವತಿ ತೀವ್ರ ಕುತೂಹಲ ಹುಟ್ಟಿಸಿದರು. ಪ್ರಕರಣದಲ್ಲಿ ನನಗೆ ಅನ್ಯಾಯ ಆಗಿದೆ. ಹೀಗಾಗಿ ಮತ್ತೆ ಹೇಳಿಕೆ ನೀಡಲು ಅವಕಾಶ ಕೊಡುವಂತೆ ಯುವತಿ ಮುಂದಾಗಿದ್ದಾರೆ.

    ನನ್ನಿಂದ ಬಲವಂತದ ಹೇಳಿಕೆ ಕೊಡಿಸಿದ್ರು. ಈ ಕೇಸ್ ಈ ಮಟ್ಟಿಗೆ ಆಗುತ್ತೆ ಅಂತ ಅಂದುಕೊಂಡಿರಲಿಲ್ಲ. ನನ್ನ ಮರ್ಯಾದೆ ಹಾಳಾಗಿದೆ. ಇಷ್ಟರ ಮಟ್ಟಿಗೆ ಹಾಳಾಗುತ್ತೆ ಅಂದುಕೊಂಡಿರಲಿಲ್ಲ. ನಾನು ನಂಬಿದವರೇ ನನಗೆ ಮೋಸ ಮಾಡಿದ್ದಾರೆ ಎಂದು ಹೇಳುವ ಮೂಲಕ ಸಿಡಿ ಕಿಂಗ್ ಪಿನ್ ಗಳ ವಿರುದ್ಧವೇ ಯುವತಿ ಆರೋಪ ಮಾಡಿದ್ದಾರೆ. ಒಟ್ಟಿನಲ್ಲಿ ನನಗೆ ಅನ್ಯಾಯ ಆಗಿದೆ. ಹೀಗಾಗಿ ಮರು ಹೇಳಿಕೆಗೆ ಅವಕಾಶ ನೀಡಿ ಎಂದು ಯುವತಿ, ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾಳೆ.

    ಈ ಹಿನ್ನೆಲೆಯಲ್ಲಿ ಸೆಕ್ಷನ್ 164 ಅಡಿಯಲ್ಲಿ ಯುವತಿ ಮರು ಹೇಳಿಕೆ ಪಡೆಯುವ ಸಾಧ್ಯತೆಗಳಿವೆ. 164ರ ಅಡಿಯಲ್ಲಿ ಮರು ಹೇಳಿಕೆ ದಾಖಲಿಸಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಯುವತಿ ಮುಂದಾಗಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ನ್ಯಾಯಾಧೀಶರ ಮುಂದೆ ಯುವತಿ ಹಾಜರಾಗಿ ಹೇಳಿಕೆ ದಾಖಲಿಸುವ ಸಾಧ್ಯತೆಗಳು ದಟ್ಟವಾಗಿವೆ.

  • ಸಂತ್ರಸ್ತೆಯ ‘ದಶ’ ಪ್ರಶ್ನೆ, ಸಿಗುತ್ತಾ ಉತ್ತರ? -ಸೋಮವಾರ ಮುಖಾಮುಖಿ ಆಗ್ತಾರಾ ಜಾರಕಿಹೊಳಿ, ಸಂತ್ರಸ್ತೆ?

    ಸಂತ್ರಸ್ತೆಯ ‘ದಶ’ ಪ್ರಶ್ನೆ, ಸಿಗುತ್ತಾ ಉತ್ತರ? -ಸೋಮವಾರ ಮುಖಾಮುಖಿ ಆಗ್ತಾರಾ ಜಾರಕಿಹೊಳಿ, ಸಂತ್ರಸ್ತೆ?

    ಬೆಂಗಳೂರು: ಸಿಡಿ ಪ್ರಕರಣ ಇಂದು ಮತ್ತೊಂದು ತಿರುವು ಪಡೆದುಕೊಂಡಿದೆ. ಇಂದು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಸಂತ್ರಸ್ತೆ, ಎಸ್‍ಐಟಿ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ಸಂತ್ರಸ್ತೆ ಪ್ರಶ್ನೆಗಳನ್ನ ಕೇಳಿದ್ದಾರೆ.

    ಪ್ರಶ್ನೆ 1– ನಾನು ಸಂತ್ರಸ್ತೆಯೋ..? ಪ್ರಕರಣದ ಆರೋಪಿಯೋ..? (ತನಿಖಾ ಪ್ರಕ್ರಿಯೆ ನೋಡಿ ಸಂತ್ರಸ್ತೆಗೆ ಬಂದಿರುವ ಅನುಮಾನ)
    ಪ್ರಶ್ನೆ 2– ಇದುವರೆಗೂ ರಮೇಶ್ ಜಾರಕಿಹೊಳಿಯನ್ನು ಏಕೆ ಬಂಧಿಸಿಲ್ಲ?
    ಪ್ರಶ್ನೆ 3– ಆರೋಪಿಯನ್ನು ಹೊರಗೆ ಓಡಾಡಲು ಮುಕ್ತವಾಗಿ ಬಿಟ್ಟಿರುವುದು ಎಷ್ಟು ಸರಿ?
    ಪ್ರಶ್ನೆ 4– ಸಂತ್ರಸ್ತೆಯಾದ ನನ್ನನ್ನು ಸತತ 5 ದಿನ ವಿರಾಮ ನೀಡದೇ ವಿಚಾರಣೆ ನಡೆಸಿರುವುದು ಸರೀನಾ?
    ಪ್ರಶ್ನೆ 5– ಜಾರಕಿಹೊಳಿ ದೂರಿನಲ್ಲಿ ನನ್ನ ಹೆಸರಿಲ್ಲ.. ಆದರೂ ಪಿಜಿ ಮೇಲೆ ರೇಡ್.. ಸರೀನಾ?

    ಪ್ರಶ್ನೆ 5– ಪಿಜಿಯಲ್ಲಿನ ಸಾಕ್ಷ್ಯ ನಾಶ ಮಾಡಿ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಯತ್ನ, ಸರಿನಾ..?
    ಪ್ರಶ್ನೆ 6– ಜಾರಕಿಹೊಳಿ ಮತ್ತು ರಾಜ್ಯ ಸರ್ಕಾರದ ಒತ್ತಡಕ್ಕೆ ಎಸ್‍ಐಟಿ ಮಣಿದಿದೆ.. ಇದೆಷ್ಟು ಸರಿ..?
    ಪ್ರಶ್ನೆ 7- ಸಂತ್ರಸ್ತೆಯಾದ ನನ್ನ ಚಾರಿತ್ರ್ಯವಧೆಗೆ ಷಡ್ಯಂತ್ರ್ಯ, ಕಲ್ಪಿತ ಸುದ್ದಿ ಸೃಷ್ಟಿ.. ಎಷ್ಟು ಸರಿ..?
    ಪ್ರಶ್ನೆ 8– ನನ್ನ ಸಹಮತ ಇಲ್ಲದೇ ಗೃಹ ಇಲಾಖೆ ಎಸ್‍ಪಿಪಿ ನೇಮಕ ಮಾಡಿರುವುದು ಎಷ್ಟು ಸರಿ?
    ಪ್ರಶ್ನೆ 9– ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರುತ್ತಾರೆ ಎಂಬ ಸಿಎಂ ಮಾತು ಎಷ್ಟು ಸರಿ?
    ಪ್ರಶ್ನೆ 10– ಎಸ್‍ಐಟಿ ನ್ಯಾಯ ಸಮ್ಮತ, ನಿಸ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ.. ಏಕೆ..?

    ಸಂತ್ರಸ್ತೆಯ ಪರ ವಕೀಲ ಜಗದೀಶ್ ಸಹ ಎಸ್‍ಐಟಿ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ಸಂತ್ರಸ್ತೆಯ ಹೆಸರು ಉಲ್ಲೇಖ ಆಗಿರಲಿಲ್ಲ. ಆದರೂ ಸಂತ್ರಸ್ತೆಯಿದ್ದ ಪಿಜಿ ಮೇಲೆ ಎಸ್‍ಐಟಿ ರೇಡ್ ಮಾಡಿದ್ದೇಗೆ? ಯಾವ ಸಾಕ್ಷ್ಯದೊಂದಿಗೆ, ಯಾರ ಅನುಮತಿ ಪಡೆದು ರೇಡ್ ಮಾಡಿತು. ಪಿಜಿಯನ್ನು ಸೀಜ್ ಮಾಡಿ, ಕೋರ್ಟ್ ಸಮ್ಮತಿ ಪಡೆದು ರೇಡ್ ಏಕೆ ಮಾಡಲಿಲ್ಲ. ಪಿಜಿಯಲ್ಲಿ ಲಕ್ಷ ಲಕ್ಷ ಹಣ ಸಿಕ್ತು ಅಂತಾರೆ. ಸಂತ್ರಸ್ತೆಯನ್ನು ಪ್ರಕರಣದಲ್ಲಿ ಸಿಲುಕಿಸಲು ಇವರೇ ಏಕೆ ಆ ಹಣ ಇಟ್ಟಿರಬಾರದು ಎಂದು ಜಗದೀಶ್ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಎಸ್‍ಐಟಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಬಿಗ್ ಲೀಗಲ್ ಬ್ಯಾಟಲ್: ನಾಳೆಯಿಂದ ಬಿಗ್ ಲೀಗಲ್ ಬ್ಯಾಟಲ್ ನಡೆಸಲಾಗುವುದು ಎಂಬ ಹೊಸ ಬಾಂಬ್ ಸಿಡಿಸಿದ್ದಾರೆ. ಸಂತ್ರಸ್ತೆಯ ಪತ್ರದ ಕುರಿತು ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಯುವತಿಗೆ ಎಸ್‍ಐಟಿಗೆ ನಂಬಿಕೆ ಇಲ್ಲ ಅಂದ್ರೇ ಬೇರೆ ತನಿಖೆ ನಡೆಸಿ. ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಿ ಎಂದು ನಾನು ಸದನದಲ್ಲೂ ಪ್ರಸ್ತಾಪ ಮಾಡಿದ್ದೆ. ಸಿಜೆ ತನಿಖೆಯಿಂದ ಸರ್ಕಾರಕ್ಕೆ ಏನು ಕಷ್ಟ ಎಂದು ಪ್ರಶ್ನೆ ಮಾಡಿದ್ರು. ಇದಕ್ಕೆ ಸಚಿವ ಬಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಮೇಟಿ ಕೇಸಲ್ಲಿ ಸಿದ್ದರಾಮಯ್ಯ ಹೇಗೆ ನಡೆದುಕೊಂಡಿದ್ರು ಎನ್ನುವುದು ಗೊತ್ತಿದೆ. ತನಿಖೆಯಲ್ಲಿ ಜಾರಕಿಹೊಳಿ ಮೇಲಿನ ಆರೋಪ ಸಾಬೀತಾದ್ರೆ ಪೊಲೀಸ್ರು ಖಂಡಿತ ಅರೆಸ್ಟ್ ಮಾಡ್ತಾರೆ ಎಂದು ಹೇಳಿದ್ದಾರೆ.

    ಮುಖಾಮುಖಿ ಆಗ್ತಾರಾ?:
    ಮಾಜಿ ಸಚಿವ, ರೇಪ್ ಆರೋಪಿ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬನ್ನಿ ಎಂದು ರಮೇಶ್ ಜಾರಕಿಹೊಳಿಗೆ ಎಸ್‍ಐಟಿ ನಿನ್ನೆಯೇ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ಸಿಡಿ ಸಂತ್ರಸ್ತೆಗೂ ಮತ್ತೆ ನೋಟಿಸ್ ಜಾರಿ ಮಾಡಿರುವ ಎಸ್‍ಐಟಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಆಡುಗೋಡಿಯ ಟೆಕ್ನಿಕಲ್ ಸೆಲ್‍ಗೆ ಬರುವಂತೆ ಸೂಚಿಸಿದೆ. ಒಂದೇ ದಿನ ಆರೋಪಿ ಮತ್ತು ಸಂತ್ರಸ್ತೆಗೆಯನ್ನು ವಿಚಾರಣೆಗೆ ಕರೆದಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಅಸಲಿಗೆ ರಮೇಶ್ ಜಾರಕಿಹೊಳಿ ವಿಚಾರಣೆಗೆ ಬರ್ತಾರಾ? ಅಥ್ವಾ ಮತ್ತೆ ಅನಾರೋಗ್ಯದ ನೆಪ ಹೇಳಿ ವಿಚಾರಣೆಯಿಂದ ತಪ್ಪಿಸಿಕೊಳ್ತಾರಾ. ಅಥ್ವಾ ವಿಚಾರಣೆಗೆ ಬಂದ್ರೆ ಸಂತ್ರಸ್ತೆಯ ಮುಂದೆ ಮುಖಾಮುಖಿ ಕೂರಿಸಿ ಎಸ್‍ಐಟಿ ವಿಚಾರಣೆಗೆ ಒಳಪಡಿಸುತ್ತಾ? ಅಥ್ವಾ ಪ್ರತ್ಯೇಕ ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಾ? ರೇಪ್ ಆರೋಪಿ ರಮೇಶ್ ಜಾರಕಿಹೊಳಿ ಅರೆಸ್ಟ್ ಆಗ್ತಾರಾ ಎಂಬ ಕುತೂಹಲ ಎಲ್ಲರಲ್ಲಿದೆ.

  • ಸಿಡಿ ಗ್ಯಾಂಗ್‍ನ ಕಿಂಗ್‍ಪಿನ್‍ಗಳ ಬಗ್ಗೆ ಬಾಯ್ಬಿಡದ ಯುವತಿ

    ಸಿಡಿ ಗ್ಯಾಂಗ್‍ನ ಕಿಂಗ್‍ಪಿನ್‍ಗಳ ಬಗ್ಗೆ ಬಾಯ್ಬಿಡದ ಯುವತಿ

    ಬೆಂಗಳೂರು: ವಿಶೇಷ ತನಿಖಾ ತಂಡದ(ಎಸ್‍ಐಟಿ) ಪೊಲೀಸರ ವಿಚಾರಣೆಯ ಸಂದರ್ಭದಲ್ಲಿ ಸಿಡಿ ಲೇಡಿ ಸಿಡಿ ಗ್ಯಾಂಗ್‍ನ ಕಿಂಗ್ ಪಿನ್‍ಗಳ ಬಗ್ಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.

    ಹೌದು. ಬೆಂಗಳೂರನ್ನು ಸಿಡಿ ಗ್ಯಾಂಗ್ ಸದಸ್ಯರು ಒಟ್ಟಿಗೆ ತೊರೆದ ಬಳಿಕ ಬೇರೆ ಬೇರೆ ರಾಜ್ಯಗಳನ್ನು ಸುತ್ತಿದ್ದರು. ನರೇಶ್ ಗೌಡ ಮತ್ತು ಶ್ರವಣ್ ಜೊತೆ ಯುವತಿಯು ತೆರಳುತ್ತಿದ್ದ ಮಾಹಿತಿ ಎಸ್‍ಐಟಿಗೆ ಸಿಕ್ಕಿತ್ತು.

    ಎಸ್‍ಐಟಿಗೆ ಖಚಿತ ಮಾಹಿತಿ ಸಿಕ್ಕಿದ್ದರೂ ಪೊಲೀಸರು ಆ ಸ್ಥಳಕ್ಕೆ ತೆರಳಿದಾಗ ಸಿಡಿ ಗ್ಯಾಂಗ್ ಸದಸ್ಯರು ಪರಾರಿಯಾಗುತ್ತಿದ್ದರು. ಯುವತಿ, ಕಿಂಗ್‍ಪಿನ್‍ಗಳ ಮೊಬೈಲ್ ಟವರ್ ಲೋಕೇಷನ್ ಗಳು ಹಲವು ಸಂದರ್ಭದಲ್ಲಿ ಒಂದೇ ಕಡೆ ಇದ್ದ ಹಿನ್ನೆಲೆಯಲ್ಲಿ ಯುವತಿಗೆ ಪೊಲೀಸರು ಪ್ರಶ್ನೆ ಕೇಳಿದ್ದರು.

    ವಿಚಾರಣೆ ಸಂದರ್ಭದಲ್ಲಿ ಶ್ರವಣ್, ನರೇಶ್ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ. ಕೆಲವು ಪ್ರಶ್ನೆಗಳಿಗೆ ಹಾರಿಕೆಯ ಉತ್ತರ ನೀಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಸೂಚನೆ ನೀಡಿದ್ದಾರೆ.

    ಈ ಹಿಂದೆ ವಿಡಿಯೋ ಮೂಲಕ ಮಾತನಾಡಿದ್ದ ನರೇಶ್ ಗೌಡ ಯುವತಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾನು ಆಕೆಯ ಜೊತೆ ಸಂಪರ್ಕದಲ್ಲಿ ಇದ್ದೆ. ಎಸ್‍ಐಟಿ ವಿಚಾರಣೆಗೆ ಈಗ ಹಾಜರಾದರೆ ನನ್ನನ್ನು ಏನು ಮಾಡುತ್ತಾರೆ ಎನ್ನುವುದು ನನಗೆ ಚೆನ್ನಾಗಿ ತಿಳಿದಿದೆ. ಕೆಲ ದಿನಗಳ ಬಳಿಕ ನಾನೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು.

  • ಸದ್ಯಕ್ಕೆ ಯಾರನ್ನೂ ಭೇಟಿಯಾಗಲ್ಲ- ವಕೀಲರ ಮೂಲಕ ಪೋಷಕರಿಗೆ ಯುವತಿ ಮಾಹಿತಿ

    ಸದ್ಯಕ್ಕೆ ಯಾರನ್ನೂ ಭೇಟಿಯಾಗಲ್ಲ- ವಕೀಲರ ಮೂಲಕ ಪೋಷಕರಿಗೆ ಯುವತಿ ಮಾಹಿತಿ

    – ಪೋಷಕರಿಗೆ ಫೋನ್ ಮಾಡುವಂತೆ ಯುವತಿಗೆ ಪೊಲೀಸರಿಂದ ಒತ್ತಡ

    ಬೆಂಗಳೂರು: ಸಿಡಿ ಪ್ರಕರಣ ಒಂದು ಹಂತಕ್ಕೆ ಬಂದ ನಂತರವೇ ಯುವತಿ ಪೋಷಕರ ಬಳಿ ಹೋಗುವದಾಗಿ ಹೇಳಿದ್ದಾರೆ. ಸಂತ್ರಸ್ತೆ ಪೋಷಕರು ಆರೋಪಿಗಳ ಪರ ಇರೋದರಿಂದ ಯುವತಿ ಹೋಗುತ್ತಿಲ್ಲ ಎಂದು ವಕೀಲ ಜಗದೀಶ್ ಹೇಳಿದ್ದಾರೆ.

    ಸಂತ್ರಸ್ತೆ ಪೋಷಕರ ಬಳಿ ಹೋಗಲು ಒಪ್ಪುತ್ತಿಲ್ಲ. ಅಲ್ಲಿಗೆ ಹೋದ್ರೆ ನಾನು ಎಮೋಷನಲ್ ಆಗುತ್ತೆ ಅಂತ ಹೇಳುತ್ತಿದ್ದಾರೆ. ಅದು ಅವರ ಕೂಸು. ನಮ್ಮ ಆಶ್ರಯ ಕೇಳಿದಷ್ಟು ದಿನ ನಾವು ನೀಡುತ್ತೇವೆ. ಯಾಕೆ ಸ್ವಾವಲಂಬಿಯಾಗಿದ್ದು, ತನ್ನ ನಿರ್ಧಾರ ತೆಗೆದುಕೊಳ್ಳಲು ಶಕ್ತಳಿದ್ದಾಳೆ. ಪೋಷಕರು ಬಳಿ ಹೋಗುವುದು ಸಂತ್ರಸ್ತೆಯ ಇಚ್ಛೆ. ಆ ವಿಷಯದಲ್ಲಿ ನಾವು ತಲೆ ಹಾಕಲ್ಲ ಎಂದು ತಿಳಿಸಿದರು.

    ಸದ್ಯ ಯುವತಿ ಎಸ್‍ಐಟಿ ತನಿಖೆ ಎದುರಿಸುತ್ತಿದ್ದಾರೆ. ವಿಚಾರಣೆ ವೇಳೆ ಅಲ್ಲಿಯ ಕೆಲ ಪೊಲೀಸರು ಪೋಷಕರಿಗೆ ಫೋನ್ ಮಾಡುವಂತೆ ಒತ್ತಡ ಹಾಕುತ್ತಿರುವ ವಿಷಯವನ್ನ ಸಂತ್ರಸ್ತೆ ನಮ್ಮ ಬಳಿ ಹೇಳಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಪೋಷಕರ ಜೊತೆ ಮಾತನಾಡಲು ಮತ್ತು ಭೇಟಿಯಾಗಲು ಇಷ್ಟವಿಲ್ಲ ಎಂದು ಯುವತಿ ನಮ್ಮ ಮುಂದೆ ಹೇಳಿದ್ದಾರೆ ಎಂಬ ಮಾಹಿತಿ ನೀಡಿದರು.

  • ಇನ್ನೆರಡು ದಿನಗಳಲ್ಲಿ ಸಿಡಿ ಲೇಡಿ ಬಗ್ಗೆ ಸತ್ಯಾಂಶ ತಿಳಿಯಲಿದೆ: ನಾರಾಯಣಗೌಡ

    ಇನ್ನೆರಡು ದಿನಗಳಲ್ಲಿ ಸಿಡಿ ಲೇಡಿ ಬಗ್ಗೆ ಸತ್ಯಾಂಶ ತಿಳಿಯಲಿದೆ: ನಾರಾಯಣಗೌಡ

    ಕೋಲಾರ: ಸಿಡಿಲೇಡಿ ವಿಚಾರಕ್ಕೆ ಸಂಭಂದಿಸಿದಂತೆ ಸತ್ಯಾಂಶ ಇನ್ನೂ ಹೊರಗಡೆ ಬಂದಿಲ್ಲ, ಸತ್ಯಾಂಶ ಹೊರಬಂದರೆ ನನಗಿಂತ ಮೊದಲು ಮಾಧ್ಯಮದವರಿಗೇ ತಿಳಿಯುತ್ತದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿಲೇಡಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೆರಡು ದಿನದಲ್ಲಿ ಸತ್ಯಾಂಶ ತಿಳಿಯುತ್ತದೆ. ಆ ಯುವತಿ ಕಾಲಾವಕಾಶಬೇಕು, ಮೆಡಿಕಲ್ ಟೆಸ್ಟ್ ಅಗಬೇಕು ಎಂದು ಹೇಳುತ್ತಿದ್ದಾಳೆ. ಹೀಗಾಗಿ ಮೆಡಿಕಲ್ ಟೆಸ್ಟ್ ಆದ ನಂತರ ಸಂತ್ಯಾಂಶ ಗೊತ್ತಾಗುತ್ತದೆ. ಈ ವಿಚಾರದಲ್ಲಿ ಯಾರೂ ದೊಡ್ಡವರಲ್ಲ, ಯಾರೂ ದೊಡ್ಡವರು ಎನ್ನುವ ಪ್ರಶ್ನೆ ಇಲ್ಲ, ಯಾರೂ ಯಾರಿಗೂ ಹೆದುರುವುದಿಲ್ಲ ಎಂದರು.

    ಸಿಡಿಲೇಡಿ ಪ್ರಕರಣದಲ್ಲಿ ಕಾಂಗ್ರೇಸ್ ಮಹಾನಾಯಕನ ಹೆಸರು ಜೊತೆ ಬಿಜೆಪಿ ಯುವನಾಯಕನ ಹೆಸರು ಕೇಳಿ ಬರುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅದೆಲ್ಲಾ ಸುಳ್ಳು ಎಂದರು.

    ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಮತ್ತು ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ಸಿಡಿ ಕೇಸ್ ಬೆಳಗಾವಿ ಸೇರಿದಂತೆ ಯಾವುದೇ ಉಪ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.