Tag: ಸಿತಾರ ವಾದಕ

  • ಸಿತಾರ್ ವಾದಕ ಪ್ರತೀಕ್ ಚೌಧರಿ ಕೋವಿಡ್‍ಗೆ ಬಲಿ

    ಸಿತಾರ್ ವಾದಕ ಪ್ರತೀಕ್ ಚೌಧರಿ ಕೋವಿಡ್‍ಗೆ ಬಲಿ

    ನವದೆಹಲಿ: ಖ್ಯಾತ ಸಿತಾರ್ ವಾದಕ ಪ್ರತಿಕ್ ಚೌಧರಿ(49) ಕೊರೊನಾಗೆ ಬಲಿಯಾಗಿದ್ದಾರೆ. ಪ್ರತಿಕ್ ಚೌಧರಿಯವರ ತಂದೆ ಪ್ರಸಿದ್ಧ ಪಂಡಿತ್ ದೇವಬ್ರತ ಚೌಧರಿ ಕಳೆದ ವಾರವಷ್ಟೇ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು.

    ಕೊರೊನಾ ಸೋಂಕಿಗೆ ಒಳಗಾಗಿದ್ದ ಪ್ರತೀಕ್ ಚೌಧರಿಯವರನ್ನು ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಗುರುವಾರ ಸಾವನ್ನಪ್ಪಿದ್ದಾರೆ.

    ಪ್ರತಿಕ್ ಚೌಧರಿಯವರು ನಿಧನರಾಗಿರುವ ಬಗ್ಗೆ ಭಾರತ ಸರ್ಕಾರ ಸಂಸ್ಕೃತಿ ಸಚಿವಾಲಯ, ತನ್ನ ಟ್ವಿಟ್ಟರ್ ಖಾತೆಯಲ್ಲಿ ಶುಕ್ರವಾರ ಮಾಹಿತಿ ಹಂಚಿಕೊಂಡಿದೆ. ಪ್ರಖ್ಯಾತ ಸಿತಾರ ವಾದಕ ಪ್ರತೀಕ್ ಚೌಧರಿಯವರ ಸಾವಿಗೆ ಸಂತಾಪ ಸೂಚಿಸುತ್ತೇವೆ. ಅವರು ದೆಹಲಿಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತಕಲಾ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಈ ಮುನ್ನ ಅವರ ತಂದೆ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರನ್ನು ದೆಹಲಿಯ ತೇಗ್ ಬಹದ್ದೂರ್ ಆಸ್ಪತ್ರೆಯ ಐಸಿಯುವಿನಲ್ಲಿ ದಾಖಲಿಸಲಾಗಿತ್ತು. ಆದರೆ ಉಸಿರಾಟದ ಸಮಸ್ಯೆಯುಂಟಾಗಿ ಚಿಕಿತ್ಸೆ ಫಲಾಕಾರಿಯಾಗದೇ ಕೊನೆಯುಸಿರೆಳೆದಿದ್ದರು.

     

  • ಕೊರೊನಾಗೆ ಸಿತಾರ ವಾದಕ ಪಂಡಿತ್ ದೇವಬ್ರತ ಚೌಧರಿ ಬಲಿ

    ಕೊರೊನಾಗೆ ಸಿತಾರ ವಾದಕ ಪಂಡಿತ್ ದೇವಬ್ರತ ಚೌಧರಿ ಬಲಿ

    ನವದೆಹಲಿ: ಸಿತಾರ ವಾದಕ ಪಂಡಿತ್ ದೇವಬ್ರತ ಚೌಧರಿ(85) ಕೊರೊನಾದಿಂದ ಶನಿವಾರ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಈ ಕುರಿತಂತೆ ಅವರ ಪುತ್ರ ಪ್ರತೀಕ್ ಚೌಧರಿ, ನನ್ನ ತಂದೆ, ದಿ ಲೆಜೆಂಡ್ ಆಫ್ ಸಿತಾರ ಪಂಡಿತ್ ದೇವಬ್ರತ ಚೌಧರಿ ಇನ್ನಿಲ್ಲ. ಮರೆಗುಳಿತನ ಸಮಸ್ಯೆ ಮತ್ತು ಕೋವಿಡ್‍ನಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಮಧ್ಯರಾತ್ರಿ ಅವರನ್ನು ಐಸಿಯುನ ವೆಂಟಿಲೇಟರ್‍ನಲ್ಲಿ ಇರಿಸಲಾಗಿತ್ತು. ನಂತರ ಅವರಿಗೆ ಹೃದಯಾಘಾತ ಸಂಭವಿಸಿದೆ. ಎಲ್ಲಾ ರೀತಿಯ ಪ್ರಾರ್ಥನೆ ಮತ್ತು ಪ್ರಯತ್ನಗಳ ಬಳಿಕವೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ನಂತರ ಪಂಡಿತ್ ಚೌಧರಿಯವರನ್ನು ವಾರದ ಆರಂಭದಲ್ಲಿ ದೆಹಲಿಯ ತೇಗ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಉಸಿರಾಟದ ಸಮಸ್ಯೆಯುಂಟಾಗಿ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತು. ಚಿಕಿತ್ಸೆ ಫಲಾಕಾರಿಯಾಗದೇ ಶನಿವಾರ ಮುಂಜಾನೆ ಕೊನೆಯುಸಿರೆಳೆದರು.

    ಪಂಡಿತ್ ದೇವಬ್ರತ ಚೌಧರಿಯವರು ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ ಜೊತೆಗೆ ಸಂಗೀತ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗೆ ಸಂಗೀತ ನಾಟಕ ಅಕಾಡೆಮಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ.