Tag: ಸಿದ್ದರಾಮಯ್ಯ

  • 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – ನಟ ಪ್ರಕಾಶ್‌ ರಾಜ್‌ ಸೇರಿ 70 ಸಾಧಕರಿಗೆ ಗೌರವ

    2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – ನಟ ಪ್ರಕಾಶ್‌ ರಾಜ್‌ ಸೇರಿ 70 ಸಾಧಕರಿಗೆ ಗೌರವ

    ಬೆಂಗಳೂರು: 70ನೇ ವರ್ಷದ ರಾಜ್ಯೋತ್ಸವ ಆಚರಣೆ ಅಂಗವಾಗಿ 70 ಮಂದಿ ಸಾಧಕರಿಗೆ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

    ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೇ ಒಟ್ಟು 70 ಮಂದಿ ಸಾಧಕರನ್ನ ಆಯ್ಕೆ ಮಾಡಲಾಗಿದೆ.‌ ನಟ ಪ್ರಕಾಶ್‌ ರಾಜ್‌ ಸೇರಿದಂತೆ ವಿವಿಧ ವಲಯಗಳ ಅರ್ಹರಿಗೆ ನಾಡಿನ ಅತ್ಯುನ್ನತ ಗೌರವ ನೀಡಲಾಗುತ್ತಿದೆ. ಸಾಹಿತ್ಯ, ಸಿನಿಮಾ, ರಂಗಭೂಮಿ, ಮಾಧ್ಯಮ, ವಿಜ್ಞಾನ ಸೇರಿದಂತೆ ಸುಮಾರು 13ಕ್ಕೂ ಹೆಚ್ಚು ವಲಯಗಳಲ್ಲಿ ಗಣನೀಯ ಸಾಧನೆ ಮಾಡಿದ 70 ಮಂದಿಯನ್ನ ಆಯ್ಕೆ ಮಾಡಲಾಗಿದೆ.

    ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ನಗದನ್ನ ಒಳಗೊಂಡಿದೆ. ನ.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

    ಯಾವ ಕ್ಷೇತ್ರದಿಂದ ಯಾರಿಗೆ ಪ್ರಶಸ್ತಿ?
    ಸಾಹಿತ್ಯ ಕ್ಷೇತ್ರ
    ಪ್ರೊ. ರಾಜೇಂದ್ರ ಚೆನ್ನಿ – ಶಿವಮೊಗ್ಗ
    ತುಂಬಾಡಿ ರಾಮಯ್ಯ – ತುಮಕೂರು
    ಪ್ರೊ ಅರ್ ಸುನಂದಮ್ಮ – ಚಿಕ್ಕಬಳ್ಳಾಪುರ
    ಡಾ.ಎಚ್.ಎಲ್ ಪುಷ್ಪ – ತುಮಕೂರು
    ರಹಮತ್ ತರೀಕೆರೆ – ಚಿಕ್ಕಮಗಳೂರು
    ಹ.ಮ. ಪೂಜಾರ – ವಿಜಯಪುರ

    ಜಾನಪದ
    ಬಸಪ್ಪ ಭರಮಪ್ಪ ಚೌಡ್ಕಿ – ಕೊಪ್ಪಳ
    ಬಿ. ಟಾಕಪ್ಪ ಕಣ್ಣೂರು – ಶಿವಮೊಗ್ಗ
    ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ – ಬೆಳಗಾವಿ
    ಹನುಮಂತಪ್ಪ, ಮಾರಪ್ಪ, ಚೀಳಂಗಿ – ಚಿತ್ರದುರ್ಗ
    ಎಂ. ತೋಪಣ್ಣ – ಕೋಲಾರ
    ಸೋಮಣ್ಣ ದುಂಡಪ್ಪ ಧನಗೊಂಡ – ವಿಜಯಪುರ
    ಸಿಂಧು ಗುಜರನ್‌ – ದಕ್ಷಿಣ ಕನ್ನಡ
    ಎಲ್. ಮಹದೇವಪ್ಪ ಉಡಿಗಾಲ – ಮೈಸೂರು

    ಸಂಗೀತ/ ನೃತ್ಯ ಕ್ಷೇತ್ರ
    ದೇವೆಂದ್ರಕುಮಾರ ಪತ್ತಾರ್ – ಕೊಪ್ಪಳ
    ಮಡಿವಾಳಯ್ಯ ಸಾಲಿ – ಬೀದರ್
    ಪ್ರೊ. ಕೆ. ರಾಮಮೂರ್ತಿ ರಾವ್ – ಮೈಸೂರು

    ಚಲನಚಿತ್ರ /ಕಿರುತೆರೆ
    ಪ್ರಕಾಶ್ ರಾಜ್ – ದಕ್ಷಿಣ ಕನ್ನಡ
    ವಿಜಯಲಕ್ಷ್ಮೀ ಸಿಂಗ್ -ಕೊಡಗು

    ಆಡಳಿತ/ ವೈದ್ಯಕೀಯ
    ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) – ಬೆಂಗಳೂರು ದಕ್ಷಿಣ (ರಾಮನಗರ)
    ಡಾ. ಆಲಮ್ಮ ಮಾರಣ್ಣ – ತುಮಕೂರು
    ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ

    ಸಮಾಜ ಸೇವೆ
    ಸೂಲಗಿತ್ತಿ ಈರಮ್ಮ – ವಿಜಯನಗರ
    ಫಕ್ಕೀರಿ – ಬೆಂಗಳೂರು ಗ್ರಾಮಾಂತರ
    ಕೋರಿನ್ ಆಂಟೊನಿಯಟ್ ರಸ್ಕೀನಾ – ದಕ್ಷಿಣ ಕನ್ನಡ
    ಡಾ. ಎನ್. ಸೀತಾರಾಮ ಶೆಟ್ಟಿ – ಉಡುಪಿ
    ಕೋಣಂದೂರು ಲಿಂಗಪ್ಪ – ಶಿವಮೊಗ್ಗ

    ಸಂಕೀರ್ಣ
    ಉಮೇಶ ಪಂಬದ – ದಕ್ಷಿಣ ಕನ್ನಡ
    ಡಾ. ರವೀಂದ್ರ ಕೋರಿಶೆಟ್ಟಿರ್ – ಧಾರವಾಡ
    ಕೆ.ದಿನೇಶ್ – ಬೆಂಗಳೂರು
    ಶಾಂತರಾಜು – ತುಮಕೂರು
    ಜಾಫರ್ ಮೊಹಿಯುದ್ದೀನ್ – ರಾಯಚೂರು
    ಪೆನ್ನ ಓಬಳಯ್ಯ – ಬೆಂಗಳೂರು ಗ್ರಾಮಾಂತರ
    ಶಾಂತಿ ಬಾಯಿ – ಬಳ್ಳಾರಿ
    ಪುಂಡಲೀಕ ಶಾಸ್ತ್ರೀ(ಬುಡಬುಡಕೆ) – ಬೆಳಗಾವಿ

    ಹೊರನಾಡು/ ಹೊರದೇಶ
    ಜಕರಿಯ ಬಜಪೆ (ಸೌದಿ)
    ಪಿ ವಿ ಶೆಟ್ಟಿ (ಮುಂಬೈ)

    ಪರಿಸರ
    ರಾಮೇಗೌಡ – ಚಾಮರಾಜನಗರ
    ಮಲ್ಲಿಕಾರ್ಜುನ ನಿಂಗಪ್ಪ – ಯಾದಗಿರಿ

    ಕೃಷಿ
    ಡಾ.ಎಸ್.ವಿ.ಹಿತ್ತಲಮನಿ – ಹಾವೇರಿ
    ಎಂ ಸಿ ರಂಗಸ್ವಾಮಿ – ಹಾಸನ

    ಮಾಧ್ಯಮ ಕ್ಷೇತ್ರ
    ಕೆ.ಸುಬ್ರಮಣ್ಯ – ಬೆಂಗಳೂರು
    ಅಂಶಿ ಪ್ರಸನ್ನಕುಮಾರ್ – ಮೈಸೂರು
    ಬಿ.ಎಂ ಹನೀಫ್ – ದಕ್ಷಿಣ ಕನ್ನಡ
    ಎಂ ಸಿದ್ಧರಾಜು – ಮಂಡ್ಯ

    ವಿಜ್ಞಾನ ತಂತ್ರಜ್ಞಾನ
    ರಾಮಯ್ಯ – ಚಿಕ್ಕಬಳ್ಳಾಪುರ
    ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ – ದಾವಣಗೆರೆ
    ಡಾ. ಆರ್. ವಿ ನಾಡಗೌಡ – ಗದಗ

    ಸಹಕಾರ
    ಶೇಖರಗೌಡ ವಿ ಮಾಲಿಪಾಟೀಲ್ – ಕೊಪ್ಪಳ

    ಯಕ್ಷಗಾನ/ ಬಯಲಾಟ/ ರಂಗಭೂಮಿ
    ಕೋಟ ಸುರೇಶ ಬಂಗೇರ- ಉಡುಪಿ
    ಐರಬೈಲ್‌ಆನಂದ ಶೆಟ್ಟಿ – ಉಡುಪಿ
    ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ) – ಉತ್ತರ ಕನ್ನಡ
    ಗುಂಡೂರಾಜ್ – ಹಾಸನ
    ಹೆಚ್.ಎಂ. ಪರಮಶಿವಯ್ಯ – ಬೆಂಗಳೂರು ದಕ್ಷಿಣ (ರಾಮನಗರ)
    ಎಲ್.ಬಿ.ಶೇಖ್ (ಮಾಸ್ತರ್) – ವಿಜಯಪುರ
    ಬಂಗಾರಪ್ಪ ಖುದಾನ್‌ಪುರ – ಬೆಂಗಳೂರು
    ಮೈಮ್ ರಮೇಶ್ – ದಕ್ಷಿಣ ಕನ್ನಡ
    ಡಿ.ರತ್ನಮ್ಮ ದೇಸಾಯಿ – ರಾಯಚೂರು

    ಶಿಕ್ಷಣ ಕ್ಷೇತ್ರ
    ಡಾ. ಎಂ.ಆರ್. ಜಯರಾಮ್ – ಬೆಂಗಳೂರು
    ಡಾ. ಎನ್ ಎಸ್ ರಾಮೇಗೌಡ -ಮೈಸೂರು
    ಎಸ್. ಬಿ. ಹೊಸಮನಿ – ಕಲಬುರಗಿ
    ನಾಗರಾಜು – ಬೆಳಗಾವಿ

    ಕ್ರೀಡೆ
    ಆಶೀಶ್ ಕುಮಾರ್ ಬಲ್ಲಾಳ್ – ಬೆಂಗಳೂರು
    ಎಂ ಯೋಗೇಂದ್ರ – ಮೈಸೂರು
    ಡಾ. ಬಬಿನಾ ಎನ್.ಎಂ (ಯೋಗ) – ಕೊಡಗು

    ನ್ಯಾಯಾಂಗ
    ನ್ಯಾ. ಪಿ.ಬಿ. ಭಜಂತ್ರಿ (ಪವನ್ಕುಮಾರ್ ಭಜಂತ್ರಿ ) – ಬಾಗಲಕೋಟೆ

    ಶಿಲ್ಪಕಲೆ/ ಚಿತ್ರಕಲೆ/ ಕರಕುಶಲ
    ಬಸಣ್ಣ ಮೋನಪ್ಪ ಬಡಿಗೇರ – ಯಾದಗಿರಿ
    ನಾಗಲಿಂಗಪ್ಪ ಜಿ ಗಂಗೂರ – ಬಾಗಲಕೋಟೆ
    ಬಿ. ಮಾರುತಿ – ವಿಜಯನಗರ
    ಎಲ್. ಹೇಮಾಶೇಖರ್ – ಮೈಸೂರು

  • ಉಡುಪಿ ಸೇರಿ ಹಲವೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು: ಕ್ಯಾಬಿನೆಟ್ ಅಸ್ತು

    ಉಡುಪಿ ಸೇರಿ ಹಲವೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು: ಕ್ಯಾಬಿನೆಟ್ ಅಸ್ತು

    – ಹಳೇ ಗುತ್ತಿಗೆದಾರರ ಅವಧಿ 2 ವರ್ಷ ವಿಸ್ತರಣೆಗೆ ಒಪ್ಪಿಗೆ
    – ಪೊಲೀಸ್ ಇಲಾಖೆಗೆ ವಾಹನ ಖರೀದಿಗೆ 34 ಕೋಟಿ

    ಬೆಂಗಳೂರು: ಕಾಂಗ್ರೆಸ್ ಭವನಗಳ (Congress Bhavan) ನಿರ್ಮಾಣಕ್ಕೆ ಸರ್ಕಾರಿ ಜಾಗ ಕೊಡುವುದನ್ನ ಸರ್ಕಾರ ಮುಂದುವರಿಸಿದೆ. ಇವತ್ತಿನ ಕ್ಯಾಬಿನೆಟ್‌ನಲ್ಲೂ ನಾಲ್ಕು ಕಡೆಗಳಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಲಾಗಿದೆ.

    ಮಂಡ್ಯದಲ್ಲಿ (Mandya ಕಾಂಗ್ರೆಸ್ ಭವನ ಕಟ್ಟಲು ನಗರಾಭಿವೃದ್ಧಿ ಪ್ರಾಧಿಕಾರದ ವಿವೇಕಾನಂದ ಬಡಾವಣೆಯಲ್ಲಿ ನಿವೇಶನ ಮಂಜೂರು ಮಾಡಿದ್ದು, 1,457 ಚಮೀ ವಿಸ್ತೀರ್ಣದ ಜಾಗವನ್ನ 30 ವರ್ಷ ಲೀಸ್‌ಗೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಉಡುಪಿಯ ಅಂಜಾರು ಗ್ರಾಮದಲ್ಲಿ 20 ಸೆಂಟ್ಸ್ ಜಾಗ, ಕುಂದಾಪುರದಲ್ಲಿ 11 ಸೆಂಟ್ಸ್ ಜಾಗ, ನೆಲಮಂಗಲದಲ್ಲಿ 00.08 ಗುಂಟೆ ಜಾಗವನ್ನ ಮಂಜೂರು ಮಾಡಿ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

    ಸಭೆಯ ಮುಖ್ಯಾಂಶಗಳೇನು?
    * ಗಂಗಾ ಕಲ್ಯಾಣ ಫಲಾನುಭವಿಗಳ ಆಯ್ಕೆ ಹೊನೆ ಉಸ್ತುವಾರಿ ಸಚಿವರ ಹೆಗಲಿಗೆ
    * ಹಳೇ ಗುತ್ತಿಗೆದಾರರ ಅವಧಿಯನ್ನ 2 ವರ್ಷ ವಿಸ್ತರಣೆ ಮಾಡಲು ಒಪ್ಪಿಗೆ
    * 20.47 ಕೋಟಿ ವೆಚ್ಚದಲ್ಲಿ ಕೆ-ಶೋರ್ ಯೋಜನೆಯಡಿ ಹಣ
    * ಅರಣ್ಯ ಇಲಾಖೆಯಲ್ಲಿ ತಾಂತ್ರಿಕ ಹಾಗೂ ನಿರ್ವಹಣೆ ಸೇವೆಗಳಿಗೆ ಒಪ್ಪಿಗೆ
    * 360 ಕೋಟಿ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಮಾಡಲು ಒಪ್ಪಿಗೆ
    * ಕರಾವಳಿಯಲ್ಲಿರುವ 4 ಹಾಲಿ ಬಂದರುಗಳ ಖಾಸಗಿ ಸಹಭಾಗಿತ್ವದಲ್ಲಿ ದುರಸ್ತಿ
    * 40.12 ಕೋಟಿ ವೆಚ್ಚದಲ್ಲಿ ಬಂದರುಗಳ ದುರಸ್ತಿಗೆ ಕ್ಯಾಬಿನೆಟ್ ಒಪ್ಪಿಗೆ
    * ಬನಶಂಕರಿಯಲ್ಲಿ ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ 602 ಚದುರ ಅಡಿ ನಿವೇಶನ
    * ಕೋಲಾರದಲ್ಲಿ 150 ಟನ್‌ಗಳ ಸಾಮರ್ಥ್ಯದ ಹಸಿ ತ್ಯಾಜ ಘಟಕಕ್ಕೆ ಒಪ್ಪಿಗೆ
    * ಗೇಲ್ ಸಂಸ್ಥೆಗೆ 9 ಎಕರೆ 38 ಗುಂಟೆ ಜಾಗ 25 ವರ್ಷಗಳ ಅವಧಿಗೆ ಲೀಸ್
    * ರಾಜ್ಯದಲ್ಲಿ 8 ಕಡೆಗಳಲ್ಲಿ ಟೆಕ್ನಾಲಜಿ ಬ್ಯುಸಿನೆಸ್ ಇನ್‌ಕ್ಯೂಬೇಟರ್ಸ್ ಸ್ಥಾಪನೆ
    * ಪೊಲೀಸ್ ಇಲಾಖೆಗೆ ವಾಹನ ಖರೀದಿಗೆ 34 ಕೋಟಿ
    * ಮಂಡ್ಯ ಕೃಷಿ ವಿವಿಗೆ 23 ಕೋಟಿ ಅನುದಾನ
    * ಶಹಾಪುರ ನಗರಸಭೆಯಲ್ಲಿ ಕನಕಭವನ ನಿರ್ಮಾಣಕ್ಕೆ 300 ಚಮೀ ಜಾಗ ಮಂಜೂರು.

  • ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು!

    ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು!

    ಬೆಂಗಳೂರು: ನಗರದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್‌ನಲ್ಲಿ (Cabinet) ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿಗೆ (Bengaluru) ಒಟ್ಟು 2,296 ಕೋಟಿ ಅನುದಾನಕ್ಕೆ ಒಪ್ಪಿಗೆ ಸಿಕ್ಕಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

    ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿನ ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಒಟ್ಟು 2,296 ಕೋಟಿ ಮಂಜೂರಿಗೆ ಅನುಮೋದನೆ ನೀಡಿದೆ. ಇದನ್ನೂ ಓದಿ: ಚಡ್ಡಿ ಹಾಕುತ್ತಿದ್ದಾಗ ಇದ್ದ RSS ಬಿಜೆಪಿ ಪುಡಾರಿಗಳು ಬಂದ ಮೇಲೆ ಬದಲಾವಣೆ ಆಗಿದೆ: ಬೇಳೂರು ಗೋಪಾಲಕೃಷ್ಣ

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದ್ದು, 1,055 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿಗಳನ್ನ ಕೈಗೊಳ್ಳುವ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಇನ್ನು ವಿಶೇಷ ಮೂಲಭೂತ ಸೌಕರ್ಯ ಬಂಡವಾಳ ಬೆಂಬಲ ಯೋಜನೆ ಅಡಿಯೂ ಹಣ ಮಂಜೂರು ಮಾಡಿದ್ದು, ಜಿಬಿಎ ವ್ಯಾಪ್ತಿಯಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಡಾಂಬರಿಕರಣ ಕಾಮಗಾರಿಗಳನ್ನು ಕೈಗೊಳ್ಳಲು 1,241 ಕೋಟಿ ಅಂದಾಜು ಮೊತ್ತದಲ್ಲಿ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.  ಇದನ್ನೂ ಓದಿ: ಕಿಡ್ನಿ ರೋಗಿಗಳ ನೆರವಿಗಾಗಿ ʻಬಿರಿಯಾನಿ ಚಾಲೆಂಜ್ʼ – ಕೊಡಗಿನ ಯುವಕರ ತಂಡದಿಂದ ವಿಭಿನ್ನ ಆಲೋಚನೆ!

    ಸಂಪುಟ ಸಭೆಯಲ್ಲಿ ಕೆಜೆ ಜಾರ್ಜ್‌, ಹೆಚ್.ಸಿ ಮಹದೇವಪ್ಪ, ಎಂ.ಬಿ ಪಾಟೀಲ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ವಿಳಂಬ ಮಾಡಿತ್ತು: ಅಮಿತ್ ಶಾ ಕಿಡಿ

  • ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ವಯನಾಡು ಪ್ರಮೋಷನ್: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

    ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ವಯನಾಡು ಪ್ರಮೋಷನ್: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

    – ವಯನಾಡು ಕರ್ನಾಟಕಕ್ಕೆ ಸೇರಿತೇ? ಕೆಎಸ್‌ಟಿಡಿಸಿ ಕೇರಳಕ್ಕೆ ಸೇರಿದ್ಯಾ ಅಂತ ತರಾಟೆ

    ಬೆಂಗಳೂರು: ಕೆಎಸ್‌ಟಿಡಿಸಿಯಿಂದ (KSTDC) ವಯನಾಡು (Wayanad) ಪ್ರವಾಸ ಪ್ಯಾಕೇಜ್ ಘೋಷಿಸಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

    ನಮ್ಮ KSTDC ಇರುವುದು ಕರ್ನಾಟಕಕ್ಕೋ, ಕೇರಳಕ್ಕೋ ತಿಳಿಯುತ್ತಿಲ್ಲ! ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಹೆಚ್.ಕೆ.ಪಾಟೀಲ್ ಅವರೇ, ನಮ್ಮ ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಕಾಣಲಿಲ್ಲವೇ? ನಿಮ್ಮ ಪ್ರಿಯಾಂಕಾ ಗಾಂಧಿಯನ್ನು ಮೆಚ್ಚಿಸಲು ನಮ್ಮ ಕರುನಾಡನ್ನೇ ಕಡೆಗಣಿಸುತ್ತಿದ್ದೀರಾ? ವಯನಾಡಿನ ಜನರಿಗೆ ಮನೆ, ಆನೆ ದಾಳಿಯಿಂದ ಸತ್ತವರಿಗೆ ಪರಿಹಾರ, ಇಷ್ಟೆಲ್ಲಾ ಮಾಡಿದ ಮೇಲೆ ಈಗ ವಯನಾಡನ್ನೇ ಕರ್ನಾಟಕಕ್ಕೆ ಸೇರಿಸಲು ಹೇಳಿ. ಏಕೆಂದರೆ ನಿಮ್ಮ ಆಡಳಿತ ಈಗ ಕರ್ನಾಟಕ ಸರ್ಕಾರಕ್ಕಿಂತಲೂ ವಯನಾಡು ಸೇವಾ ಕೇಂದ್ರದಂತಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಬಿಜೆಪಿಯವರಿಗೆ ದುರ್ಬುದ್ಧಿ – ವಯನಾಡ್ ಪ್ರಿಯಾಂಕಾ ಗಾಂಧಿ ಕ್ಷೇತ್ರ ಅಂತ ಆರೋಪ ಮಾಡ್ತಿದ್ದಾರೆ: ರಾಮಲಿಂಗಾರೆಡ್ಡಿ

    ಆರ್.ಅಶೋಕ್ ಎಕ್ಸ್ ಪೋಸ್ಟ್‌ನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ವಯನಾಡಿನ ಜಿಲ್ಲಾಧಿಕಾರಿ ಮತ್ತು ನಿಧಿ ಸಂಗ್ರಹಕಾರನಂತೆ ವರ್ತಿಸುವ ಮುಖ್ಯಮಂತ್ರಿಯನ್ನು ಕರ್ನಾಟಕ ಎಷ್ಟು ದಿನ ಸಹಿಸಿಕೊಳ್ಳುತ್ತದೆ. ನೀವು ಕರ್ನಾಟಕದ ತೆರಿಗೆದಾರರ 10 ಕೋಟಿ ಹಣವನ್ನು ವಯನಾಡಿಗೆ ಮಿಂಚಿನ ವೇಗದಲ್ಲಿ ಹಸ್ತಾಂತರಿಸಿದ್ದೀರಿ. ಆನೆಯಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ದಾನ ಮಾಡಿದ್ದೀರಿ. ಭೂಕುಸಿತದ ನಂತರ ವಯನಾಡಿನಲ್ಲಿ 100 ಮನೆಗಳನ್ನು ನಿರ್ಮಿಸುವುದಾಗಿ ನೀವು ಘೋಷಿಸಿದ್ದೀರಿ. ನೀವು ವಯನಾಡಿನ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕರ್ನಾಟಕದ ಸ್ವಂತ ಪ್ರವಾಸೋದ್ಯಮ ನಿಗಮವಾದ ಏSಖಿಆಅ ಅನ್ನು ಬಳಸಿದ್ದೀರಿ ಎಂದು ಕಿಡಿಕಾರಿದ್ದಾರೆ.

    ಉತ್ತರ ಕರ್ನಾಟಕ ಮುಳುಗುತ್ತಿದೆ, ರೈತರು ಬಳಲುತ್ತಿದ್ದಾರೆ, ಮನೆಗಳು ಕೊಚ್ಚಿ ಹೋಗಿವೆ, 12.5 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ, ಪರಿಹಾರವು ಇನ್ನೂ ಫೈಲ್‌ಗಳು, ಸಮೀಕ್ಷೆಗಳು, ನೆಪಗಳು, ಭಾಷಣಗಳು ಮತ್ತು ಫೋಟೋ-ಆಪ್‌ಗಳಲ್ಲಿ ಸಿಲುಕಿಕೊಂಡಿದೆ. ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿಗೆ ಪರಿಹಾರ ಮತ್ತು ಪ್ರವಾಹ ಪರಿಹಾರದ ಕೋಟಿ ಎಲ್ಲಿದೆ? ತುರ್ತು ಎಲ್ಲಿದೆ? ನಿಮ್ಮ ಆದ್ಯತೆಗಳೇನು? ಇದನ್ನೂ ಓದಿ: ನಾನು ಯಾವ್ದೇ ಭ್ರಷ್ಟಾಚಾರ ಮಾಡಿಲ್ಲ, ಬಿಜೆಪಿಯವರು ದಾಖಲೆ ಕೊಟ್ಟರೆ ಪರಿಶೀಲಿಸ್ತಿನಿ – ಯು.ಟಿ. ಖಾದರ್

    ನಮ್ಮ ಸ್ವಂತ ವಿಪತ್ತು ಪೀಡಿತ ರೈತರಿಗೆ ಹಣವನ್ನು ಸಾಗಿಸಿದ್ದಕ್ಕಿಂತ ವೇಗವಾಗಿ ನೀವು ಬೇರೆ ರಾಜ್ಯಕ್ಕೆ ಹಣವನ್ನು ಸಾಗಿಸಿದ್ದೀರಿ. ಇದು ದಾನವಲ್ಲ. ಇದು ಕುರ್ಚಿಯನ್ನು ಉಳಿಸಿಕೊಳ್ಳಲು ಹೈಕಮಾಂಡ್‌ನ ಸಮಾಧಾನ. ನಕಲಿ ಗಾಂಧಿ ಕುಟುಂಬಕ್ಕೆ ತಲೆಬಾಗುವ, ಹೈಕಮಾಂಡ್‌ನ ಎಟಿಎಂನಂತೆ ನಮ್ಮ ಖಜಾನೆಯನ್ನು ಖರ್ಚು ಮಾಡುವ ಮತ್ತು ತನ್ನ ಮೇಜಿನ ಮೇಲೆ ಆಹಾರವನ್ನು ಇಡುವ ತನ್ನದೇ ರಾಜ್ಯದ ರೈತರನ್ನು ಮರೆತುಬಿಡುವ ಮುಖ್ಯಮಂತ್ರಿ ಕರ್ನಾಟಕಕ್ಕೆ ಅಗತ್ಯವಿಲ್ಲ. ನಾವು ಕರ್ನಾಟಕದ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದೇವೆ. ದೆಹಲಿಯ ಕೈಗೊಂಬೆಯಲ್ಲ, ವಯನಾಡಿನ ಬ್ರಾಂಡ್ ಅಂಬಾಸಿಡರ್ ಅಲ್ಲ. ಈಗಲೇ ಪೂರ್ಣ ಪರಿಹಾರವನ್ನು ಬಿಡುಗಡೆ ಮಾಡಿ. ನಕಲಿ ಗಾಂಧಿ ಕುಟುಂಬವನ್ನು ಮೆಚ್ಚಿಸಲು ಕರ್ನಾಟಕದ ಹಣವನ್ನು ಲೂಟಿ ಮಾಡುವುದನ್ನು ನಿಲ್ಲಿಸಿ. ಕರ್ನಾಟಕ ಮೊದಲು. ವಯನಾಡ್ ಮೊದಲು ಅಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

    ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಾದ ಕೆಎಸ್‌ಟಿಡಿಸಿ ವಯನಾಡಿಗೆ ಕನ್ನಡಿಗರನ್ನು ಕರೆಯುತ್ತಿದೆ. ವಯನಾಡು ಕರ್ನಾಟಕಕ್ಕೆ ಸೇರಿತೇ? ಅಥವಾ ಕೆಎಸ್‌ಟಿಡಿಸಿ ಕೇರಳದ್ದಾಯಿತೇ? ತಮ್ಮ ಪಕ್ಷದ ಅಧಿನಾಯಕಿ ಪ್ರಿಯಾಂಕಾ ಗಾಂಧಿಯವರನ್ನು ಮೆಚ್ಚಿಸಲು ಕನ್ನಡ ನಾಡಿನ ಗೌರವವನ್ನು ಅಡವಿಡಲು ಹೊರಟಿದೆ ಕಾಂಗ್ರೆಸ್ ಸರ್ಕಾರ ಎಂದು ಸಿ.ಟಿ.ರವಿ ಆಕ್ರೋಶ ಹೊರಹಾಕಿದ್ದಾರೆ.

  • ದಲಿತ ಸಮಾವೇಶಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ – ʻಹಾಸನ ಮಾಡೆಲ್ʼ ಅನುಸರಿಸಲು ಸೂಚನೆ

    ದಲಿತ ಸಮಾವೇಶಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ – ʻಹಾಸನ ಮಾಡೆಲ್ʼ ಅನುಸರಿಸಲು ಸೂಚನೆ

    ಬೆಂಗಳೂರು/ನವದೆಹಲಿ: ಕಳೆದ ಒಂದೂವರೆ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ನವೆಂಬರ್ ಮಹಾಕ್ರಾಂತಿಯ ಚರ್ಚೆ ಆಗ್ತಲೇ ಇದೆ. ನವೆಂಬರ್ ಆರಂಭಕ್ಕೆ ಬಾಕಿ ಇರೋದು ಇನ್ನೆರಡೇ ದಿನ. ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯೋ? ಸಂಪುಟ ಪುನಾರಚನೆಯೋ? ಅನ್ನೋ ಕುತೂಹಲ ಹೆಚ್ಚುತ್ತಲೇ ಇದೆ. ಈ ನಡುವೆಯೇ ದಲಿತ ಸಮಾವೇಶ ಅಸ್ತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್‌ ಹಾಕಿದೆ.

    ಸಮಾವೇಶ ನಡೆಸುವುದಿದ್ದರೆ, ಹಾಸನ ಸಮಾವೇಶ ಮಾಡಲ್ ಅನುಸರಿಸುವಂತೆ ಎಐಸಿಸಿ ಸೂಚನೆ ನೀಡಿದೆ. ಜೊತೆಗೆ ದಲಿತ ಸಮಾವೇಶ ನಡೆಸುವುದಾದರೆ ನಡೆಸಿ, ಆದ್ರೆ ಪಕ್ಷದ ವೇದಿಕೆಯಲ್ಲಿ, ಪಕ್ಷದ ಬ್ಯಾನರ್ ನಲ್ಲೇ ನಡೆಸಿ ಅಂತ ಹೇಳಿದೆ. ಈ ಬಗ್ಗೆ ಪರಮೇಶ್ವರ್ ಸೇರಿದಂತೆ ದಲಿತ ಸಚಿವರಿಗೆ ಹೈಕಮಾಂಡ್ ನಿಂದ ನೇರ ಸಂದೇಶ ರವಾನೆ ಮಾಡಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಹಾಸನ ಸಮಾವೇಶವನ್ನ ಹೇಗೆ ಪಕ್ಷದ ವೇದಿಕೆಯಲ್ಲಿ ಮಾಡಲಾಯ್ತೋ ಅದೇ ರೀತಿ ದಲಿತ ಸಮಾವೇಶವೂ ಪಕ್ಷದ ವೇದಿಕೆಯಲ್ಲಿ ಆಯೋಜಿಸಿ. ಅಗತ್ಯವಿದ್ದರೆ ಎಐಸಿಸಿಯಿಂದಲೇ ಸಮಾವೇಶ ಆಯೋಜನೆಗೆ ಪದಾಧಿಕಾರಿಗಳನ್ನ ನೇಮಕ ಮಾಡುತ್ತೇವೆ ಎಂದು ಹೇಳಿದೆ. ಈ ಮೂಲಕ ಪ್ರತ್ಯೇಕ ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಸಚಿವರಿಗೆ ಹೈಕಮಾಂಡ್ ಮೂಗುದಾರ ಹಾಕಿದೆ.

  • ನವೆಂಬರ್ 14ರ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಸುರೇಶ್ ಗೌಡ

    ನವೆಂಬರ್ 14ರ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಸುರೇಶ್ ಗೌಡ

    – ಕಾಂಗ್ರೆಸ್ ಪಕ್ಷವನ್ನು ಅವರ ಶಾಸಕರೇ ಹಾದಿಬೀದಿಯಲ್ಲಿ ಟೀಕಿಸುತ್ತಿದ್ದಾರೆ
    – ಡಿಕೆಶಿ ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ

    ತುಮಕೂರು: ನವೆಂಬರ್ 14ಕ್ಕೆ ಬಿಹಾರ ಚುನಾವಣೆ (Bihar Election) ನಡೆಯುತ್ತದೆ. ಫಲಿತಾಂಶ ಬಂದ ನಂತರ ಕಾಂಗ್ರೆಸ್ (Congress) ಸರ್ಕಾರ ಪತನ ಆಗುತ್ತದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ (Suresh Gowda) ಹೇಳಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕಾಲಿಗೆ ಚಕ್ರಕಟ್ಟಿಕೊಂಡು ರಾಜ್ಯ ಸುತ್ತಾಡಿ, ಫಂಡಿಂಗ್ ಮಾಡಿ 138 ಸ್ಥಾನ ಗಳಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ವಾಡಿಕೆಯಂತೆ ಅವರೇ ಸಿಎಂ ಆಗಬೇಕಿತ್ತು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದರು. ಇದನ್ನೂ ಓದಿ: ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ಡಿಕೆಶಿ ಅವರ ತಾಖತ್‌ನಿಂದ ಫಂಡ್ ಮೊಬಿಲೈಜ್ ಮಾಡಿರೋದ್ರಿಂದ, ಪರಿಶ್ರಮ ಹಾಕಿರೋದ್ರಿಂದ ಸರ್ಕಾರ ಬಂದಿದೆ. ಆದರೆ ಸಿದ್ದರಾಮಯ್ಯ ಸಿಎಂ ಆದರು. ಸಿದ್ದರಾಮಯ್ಯ ಏನಾದರೂ ಫಂಡಿಂಗ್ ಮಾಡಿದ್ರಾ? ಹಣ ಕೊಟ್ಟರ‍್ಯಾರು ಡಿಕೆಶಿ ಅಲ್ಲವೇ? ಡಿಕೆ ಶಿವಕುಮಾರ್ ಪರಿಶ್ರಮಕ್ಕೆ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಈಗಲೂ ಸಿದ್ದರಾಮಯ್ಯ ಡಿಕೆಶಿಯನ್ನು ಸಿಎಂ ಮಾಡಬಾರದು ಎಂದು ತಂತ್ರ ರೂಪಿಸುತಿದ್ದಾರೆ. ಆದರೆ ಡಿಕೆ ಶಿವಕುಮಾರ್ ಮಾತ್ರ ತಾನು ನೂರಕ್ಕೆ ನೂರು ಸಿಎಂ ಆಗುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    ಆಗಾಗ ಕೊಕ್ಕೆ ಹಾಕುವ ಸಿದ್ದರಾಮಯ್ಯ, ಜಿ ಪರಮೇಶ್ವರ್, ಮಹಾದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ.ಪಾಟೀಲ್‌ಗೆ ನೀವುಗಳೇ ಸಿಎಂ ಆಗಿ ಎಂದು ಎತ್ತಿಕಟ್ಟುತ್ತಿದ್ದಾರೆ. ಸಿದ್ದರಾಮಯ್ಯರ ಎಲ್ಲಾ ಸ್ಟ್ರಾಟಜಿ ಡಿ.ಕೆ.ಶಿವಕುಮಾರ್‌ಗೆ ಗೊತ್ತಾಗಿದೆ. ಇಬ್ಬರು ಮೇಲ್ನೋಟಕ್ಕೆ ಚೆನ್ನಾಗಿದ್ದವರಂತೆ ಕಾಣುತ್ತಾರೆ. ಆದರೆ ಸಿದ್ದರಾಮಯ್ಯ ಡಿಕೆಶಿಯನ್ನು ಗೋಡೆಗೆ ತಳ್ಳಿ ಬಕಾ, ಬಕಾ ಎಂದು ದಿನಕ್ಕೊಬ್ಬರನ್ನು ಬಿಟ್ಟು ಬಾಕ್ಸಿಂಗ್ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಮಾತ್ರ ದೇವರ ಥರ ನಿಂತುಕೊಂಡಿದ್ದಾರೆ. ಏನೇ ಇದ್ದರೂ ನವೆಂಬರ್ 14ರ ಬಳಿಕ ಈ ಸರ್ಕಾರ ಪತನ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆಶಿ ಟಾಂಗ್‌

  • ಒಳಮೀಸಲಾತಿ ಜಾರಿಗೆ ಬಿಲ್ ತರಲು ಪ್ಲ್ಯಾನ್‌ – ಅಲೆಮಾರಿ ಸಮುದಾಯಕ್ಕೆ ನಾಳೆ 1,500 ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆ?

    ಒಳಮೀಸಲಾತಿ ಜಾರಿಗೆ ಬಿಲ್ ತರಲು ಪ್ಲ್ಯಾನ್‌ – ಅಲೆಮಾರಿ ಸಮುದಾಯಕ್ಕೆ ನಾಳೆ 1,500 ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆ?

    ಬೆಂಗಳೂರು: ಒಳ ಮೀಸಲಾತಿ ಅನುಷ್ಠಾನ ಸಂಬಂಧ ಕಾಯ್ದೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸಭೆ ಬಳಿಕ ಮಾತಾಡಿದ ಸಚಿವ ಹೆಚ್‌.ಕೆ ಪಾಟೀಲ್ (HK Patil), ಸರ್ಕಾರ ಈ ವರ್ಷ ಆ.25ರಂದು ಒಳ ಮೀಸಲಾತಿ ಸಂಬಂಧ ಹೊರಡಿಸಿರೋ ಆದೇಶದ ಅನ್ವಯ ಹೇಗೆ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.

    ಒಳ ಮೀಸಲಾತಿಯನ್ನ (Internal Reservation) ಸಮರ್ಪಕವಾಗಿ ಅನುಷ್ಠಾನ ಮಾಡಲು, ಸೂಕ್ತ ಪ್ರಾತಿನಿಧ್ಯ ಒದಗಿಸಲು ಕಾನೂನು ಮಾಡೋ ಅವಶ್ಯಕತೆ ಇದೆ. ಹೀಗಾಗಿ ಬಿಲ್ ತರಲು ಸರ್ಕಾರ ನಿರ್ಧಾರ ಮಾಡಿದೆ. ನಾಳೆಯ ಕ್ಯಾಬಿನೆಟ್ ನಲ್ಲಿ ಕರಡು ಮಸೂದೆ ಮಂಡಿಸುತ್ತೇವೆ ಅಂತ ತಿಳಿಸಿದರು. ಇದನ್ನೂ ಓದಿ: ಕ್ವಾಂಟಮ್‌ ಸಿಟಿ ಅಭಿವೃದ್ಧಿ, ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್‌ ಕಂಪನಿ, ಸಂಶೋಧನಾ ಸಂಸ್ಥೆಗಳ ಒಲವು: ಸಚಿವ ಬೋಸರಾಜು

    ಇನ್ನು ಅಲೆಮಾರಿ ಸಮುದಾಯ ಹೋರಾಟ ಹಿನ್ನೆಲೆಯಲ್ಲಿ ಆ ಸಮುದಾಯವನ್ನ ಸಮಾಧಾನ ಮಾಡಲು ವಿಶೇಷ ಪ್ಯಾಕೇಜ್ ಘೋಷಣೆಗೆ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ಕ್ಯಾಬಿನೆಟ್ ನಲ್ಲಿ ಅಲೆಮಾರಿ ಸಮುದಾಯಕ್ಕೆ ಒಂದೂವರೆ ಸಾವಿರದಿಂದ ಎರಡು ಸಾವಿರ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಪ್ಲ್ಯಾನ್ ಮಾಡಿದೆ.

    ಅಲೆಮಾರಿ ಸಮುದಾಯದ ಅಭಿವೃದ್ಧಿ ನಿಗಮದಡಿ ವಿಶೇಷ ಪ್ಯಾಕೇಜ್ ಮೂಲಕ ನೆರವು ನೀಡಲು ಸರ್ಕಾರ ಚಿಂತನೆ ಮಾಡಿದೆ ಎನ್ನಲಾಗಿದೆ. ಇದರ ನಡುವೆ ಅಲೆಮಾರಿ ಸಮುದಾಯಗಳ ಜೊತೆ ಅಕ್ಟೋಬರ್ 31 ರಂದು ಸರ್ಕಾರ ಸಭೆ ನಡೆಸಲಿದೆ. ಇದನ್ನೂ ಓದಿ: ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

  • ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

    ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

    – 2028 ಕ್ಕೆ ಸಿದ್ದರಾಮಯ್ಯ ಅವರ ಸ್ಪರ್ಧೆ ತಪ್ಪಿಲ್ಲ ಎಂದ ಮಾಜಿ ಸಂಸದ

    ಬೆಂಗಳೂರು: ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ಹೇಳಿದ್ದಾರೆ.

    ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು, ಸಹೋದರನ ರಾಜಕೀಯ ಭವಿಷ್ಯ ಬದಲಾಗಲಿದೆ ಹಾಗೂ ಅಣ್ಣನನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡುವ ಆಸೆಯಿದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, ಆಸೆಯಿದೆ ಎಂದು ಹೇಳಿದ್ದೆ. ಅವರ ಹಣೆಯಲ್ಲಿ ‌ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಡಿಸಿಎಂ ಆಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದರು. ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

    ಪಕ್ಷನಿಷ್ಠರಾಗಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತಿದ್ದಾರೆ. ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಅವರು ಗಮನ ಹರಿಸುತ್ತಿಲ್ಲವಲ್ಲ ಎಂದು ಕೇಳಿದಾಗ, ಪಕ್ಷದ ಅಧ್ಯಕ್ಷರಾಗಿ ಎಲ್ಲರನ್ನೂ ಸಮಾನವಾಗಿ ನೋಡಬೇಕಿರುವುದು ಅವರ ಕರ್ತವ್ಯ ಎಂದು ಹೇಳಿದರು.

    ನವೆಂಬರ್ 15 ರ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗೆ, ನನಗೆ ನವೆಂಬರ್ ಎಂದರೆ ಕನ್ನಡ ರಾಜ್ಯೋತ್ಸವ ನೆನಪಾಗುತ್ತದೆ. ನಾವು, ನೀವೆಲ್ಲರೂ ಸೇರಿ ಈ ಹಬ್ಬವನ್ನು ಆಚರಣೆ ಮಾಡೋಣ. ಮಿಕ್ಕ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಯವರು, ಎಐಸಿಸಿ ನಾಯಕರಿಗೆ ಕೇಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

    2028 ಕ್ಕೆ ಸಿದ್ದರಾಮಯ್ಯ ಅವರ ಸ್ಪರ್ಧೆ ತಪ್ಪಿಲ್ಲ
    ರಾಜಕೀಯದಲ್ಲಿ 95-98 ವರ್ಷ ಆದವರೂ ಇದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವ ತಪ್ಪೂ ಇಲ್ಲ.‌ ಅವರು ನಮ್ಮ ನಾಯಕರು. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ. ಒಬ್ಬ ನಾಯಕನಿಗೆ ಇರಬೇಕಾದ ಎಲ್ಲಾ ಅವಕಾಶಗಳು ಅವರಿಗಿದೆ. ಎಲ್ಲರಿಗಿಂತ ಗಟ್ಟಿಯಾಗಿ, ಚೆನ್ನಾಗಿ ಓಡಾಡುತ್ತಿದ್ದಾರೆ. ದಿನನಿತ್ಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉತ್ತಮವಾಗಿ ಆಡಳಿತ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ ಎಂದರು.

    2.5 ವರ್ಷದ ಬಗ್ಗೆ ಹೆಚ್ಚು ಮಾಹಿತಿಯಿಲ್ಲ. ಇದು ಎರಡೂವರೆ ವರ್ಷದ ವಿಚಾರವಲ್ಲ. ಐದು ವರ್ಷಗಳ ಕಾಲ ಕೆಲಸ ಮಾಡಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. 140 ಸ್ಥಾನಗಳನ್ನು ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಯಬೇಕು. ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ‌ ಮಾಡುತ್ತಿವೆ ಎಂದು ತಿಳಿಸಿದರು.

    ಆರ್‌ಎಸ್‌ಎಸ್ ತನ್ನ ಕೆಲವು ಬದಲಾವಣೆ ಮಾಡಿಕೊಳ್ಳಬೇಕು
    ಆರ್‌ಎಸ್‌ಎಸ್ ಪಥಸಂಚಲ‌ನಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ದೊಣ್ಣೆ ಹಿಡಿದುಕೊಂಡು ಮಾಡುವ ಪಥಸಂಚಲನಕ್ಕೆ ವಿರೋಧವಿದೆ. ದೊಣ್ಣೆ ಹಿಡಿದುಕೊಂಡು ಮಾಡುವ ಪಥಸಂಚಲನ ಹಿಂದಿನ ಕಾಲದಲ್ಲಿ ಸರಿ ಎನಿಸುತ್ತಿತ್ತು. ಬೇರೆಯವರು ಇದೇ ಸಂದರ್ಭದಲ್ಲಿ ಲಾಠಿ ಹಿಡಿದು ಓಡಾಡುವುದಕ್ಕೆ ಅವಕಾಶ ನೀಡುತ್ತೀರಾ ಎನ್ನುವುದು ಇಲ್ಲಿನ ಪ್ರಶ್ನೆ. ಇವರು ದೊಣ್ಣೆ ಹಿಡಿದು ಓಡಾಡುತ್ತಾರೆ. ಬೇರೆ ಸಮುದಾಯ, ಸಂಘಟನೆಗಳು ಇದೇ ಕೆಲಸ ಮಾಡಿದರೆ ಆಗ ಏನಾಗುತ್ತದೆ ಎನ್ನುವುದನ್ನು ಚಿಂತನೆ ಮಾಡಬೇಕಾದ ಕಾಲವಿದು. ಅದರ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಈ ಮೊದಲು ಆರ್‌ಎಸ್‌ಎಸ್ ನವರು ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಧರಿಸುತ್ತಿದ್ದಾರೆ. ಅಂದರೆ ಬದಲಾವಣೆಗಳನ್ನು ಅವರೂ ಸಹ ಮಾಡಿಕೊಳ್ಳಬೇಕು. ನಾನು ಅವರಿಗೆ ಹೇಳುವಷ್ಟು ದೊಡ್ಡವನಲ್ಲ. ಅವರೇ ಇದರ ಬಗ್ಗೆ ಅರಿತುಕೊಂಡರೆ ಒಳ್ಳೆಯದು ಎಂದರು.

  • ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    – ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯ

    ನವದೆಹಲಿ: ಆರ್‌ಎಸ್‌ಎಸ್ (RSS) ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಚಾಟಿ ಬೀಸಿದ್ದಾರೆ.

    ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ಯತೀಂದ್ರ ಸಿದ್ದರಾಮಯ್ಯ

    ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಖಂಡಿಸಿದರು. ಇದನ್ನೂ ಓದಿ: ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ. ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ: ಇಂದು ಏನಾಯ್ತು?

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಅಭಿಪ್ರಾಯಪಟ್ಟರು. ಇದನ್ನೂ ಓದಿ: ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

  • ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

    ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

    ಬೆಂಗಳೂರು: ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಅನುಮತಿ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಧಾರವಾಡ ಹೈಕೋರ್ಟ್ (Dharwad High Court) ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಡೆಯಾಜ್ಞೆ ತೆರವಿಗೆ ಕಾನೂನು ಹೋರಾಟ ನಡೆಸೋದಾಗಿ ಹೇಳಿದ್ದಾರೆ. ಇದನ್ನೂ ಓದಿ: ಬಿಹಾರ, ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಲ್ಲಿ ಹೆಸರು – ಚುನಾವಣಾ ಆಯೋಗದಿಂದ ಪ್ರಶಾಂತ್ ಕಿಶೋರ್‌ಗೆ ನೋಟಿಸ್

    ಇದೇ ವೇಳೆ ಮಾತನಾಡಿದ ಗೃಹಸಚಿವ ಪರಮೇಶ್ವರ್, ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದೆ. ಸಿಎಂ ಕೂಡಾ ಹೇಳಿದ್ದಾರೆ, ಇದು ಸರ್ಕಾರಕ್ಕೆ ಹಿನ್ನಡೆ ಅಲ್ಲ. ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೈಟೆನ್ಷನ್ ತಂತಿ ತಗುಲಿ ಹೊತ್ತಿ ಉರಿದ ಬಸ್ – ಮೂವರು ಕಾರ್ಮಿಕರು ಸಾವು