ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ 15 ನೇ ಬಜೆಟ್ (Karnataka Budget 2024) ಮಂಡನೆ ಮಾಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ. ಅನುದಾನ ನೀಡಲಾಗುವುದು. ಇನ್ನು ದುಸ್ಥಿತಿಯಲ್ಲಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುವ ಗುರಿ ಇದೆ ಎಂದು ಸಿಎಂ ತಿಳಿಸಿದರು.
ವಲಸೆ ಕುರಿಗಾರರ ಅಭ್ಯುದಯಕ್ಕೆ ಕ್ರಮ ಹಾಗೂ ಅವರ ಮೇಲಿನ ಶೋಷಣೆ ಮತ್ತು ದೌರ್ಜನ್ಯ ತಡೆಯಲು ‘ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ’ ಜಾರಿಗೊಳಿಸುವ ಯೋಜನೆಯಿಂದೆ ಎಂದರು.
ಬೆಂಗಳೂರು: ರಾಜ್ಯದಲ್ಲಿ ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ತಮ್ಮ ಬಜೆಟ್ (Karnataka Budget 2024) ಮಂಡನೆಯ ವೇಳೆ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ರೋಪ್ ವೇ ಸೌಲಭ್ಯ ಒದಗಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರಿಗೆ ವಾಟರ್ ಮೆಟ್ರೋ?
ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಗೋಕಾಕ್ ಜಲಪಾತ ಪ್ರೇಕ್ಷಣಿಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನ 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ, ಕೆಎಸ್ಟಿಡಿಸಿ ವತಿಯಿಂದ ಬಾಗಲಕೋಟೆ ಜಿಲ್ಲೆ ಐಹೊಳೆಯಲ್ಲಿ ಸುಸಜ್ಜಿತ ಹೋಟೆಲ್ ನಿರ್ಮಾಣ ಮಾಡುವ ಗುರಿ ಇದೆ ಎಂದು ತಿಳಿಸಿದರು.
ಬೀದರ್ ಮತ್ತು ವಿಜಯಪುರಲ್ಲಿ ಪುರಾತನ ನೀಡು ಸರಬರಾಜು ವ್ಯವಸ್ಥೆ ಪುನಶ್ಚೇತನಕ್ಕೆ 15 ಕೋಟಿ ಅನುದಾನ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಜೊತೆಗೆ ಬಂಡೀಪುರ, ದಾಂಡೇಲಿ, ಕಬಿನಿಯಲ್ಲಿ 25 ಕೋಟಿ ವೆಚ್ಚದಲ್ಲಿ ಇಂಟರ್ಪ್ರಿಟೇಷನ್ ಸೆಂಟರ್ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವರದ್ಧಿ ಮಂಡಳಿ ರಚನೆಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಹೇಳಿದರು.
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ 15ನೇ ಬಾರಿ ಬಜೆಟ್ ಮಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆ ಬರೆಯಲಿದ್ದಾರೆ. ಬೆಳಗ್ಗೆ 10.15ಕ್ಕೆ ಬಜೆಟ್ ಮಂಡನೆ ಶುರು ಮಾಡಲಿದ್ದಾರೆ.
ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ಸಚಿವರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲಾಗಿದೆ. ಬಜೆಟ್ ಮಂಡನೆಗೂ ಮುನ್ನವೇ ಸಂಪುಟ ಸಹೋದ್ಯೋಗಿಗಳ ಜೊತೆ ಕ್ಯಾಬಿನೆಟ್ ಮೀಟಿಂಗ್ ನಡೆಸುತ್ತಿರುವ ಸಿಎಂ ಕ್ಯಾಬಿನೆಟ್ನಲ್ಲಿ ಬಜೆಟ್ಗೆ ಒಪ್ಪಿಗೆ ಪಡೆಯಲಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಜೆಟ್ 2024 – Karnataka Budget 2024 LIVE UPDATES
ಕಾಂಗ್ರೆಸ್ ಶಾಲು ಧರಿಸಲು ಸೂಚನೆ:
ಸಿಎಂ ಸಿದ್ದರಾಮಯ್ಯ ಬಜೆಟ್ ಓದುವ ವೇಳೆ ಕಾಂಗ್ರೆಸ್ ಶಾಲು ಹಾಕಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಲಾಗಿದೆ. ಅದಕ್ಕಾಗಿ ಮುಖ್ಯಸಚೇತಕ ಅಶೋಕ್ ಪಟ್ಟಣ ವಿಧಾನಸಭೆ ಸಭಾಂಗಣ ಪ್ರವೇಶಿಸುವ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಶಾಲು ಹಾಕಿ ಕಳುಹಿಸುತ್ತಿದ್ದಾರೆ. ಇದನ್ನೂ ಓದಿ: Karnataka Budget: ರಾಜ್ಯದ ರಾಮ ಮಂದಿರಗಳ ಪುನರುಜ್ಜೀವಕ್ಕೆ ಬಜೆಟ್ನಲ್ಲಿ ಸಿಗುತ್ತಾ ಅನುದಾನ?
ಈಗಾಗಲೇ ವಿಧಾನಸೌಧಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ನೊಂದಿಗೆ ಬಜೆಟ್ ಪುಸ್ತಕ ತರಲಾಗಿದೆ. ಬೆಳಗ್ಗೆ 10:15 ರಿಂದ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ 3.75 ಲಕ್ಷ ಕೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎನ್ನಲಾಗಿದೆ.
ಸಿದ್ದರಾಮಯ್ಯ ಆರೋಪ ಮಾಡುತ್ತಿದ್ದ ಹಾಗೆ ಬಿಜೆಪಿ ಕೆಂಡಾಮಂಡಲ.
2 years agoFebruary 16, 2024 10:37 am
80 ವರ್ಷ ಮೇಲ್ಪಟ್ಟವರಿಗೆ ‘ಅನ್ನ ಸುವಿಧಾ’ ಯೋಜನೆ
‘ಅನ್ನ ಸುವಿಧಾ’ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲವರಿ ಆಪ್
80 ವರ್ಷ ದಾಟಿದ ಹಿರಿಯ ನಾಗರಿಕರು ಇರುವ ಮನೆಗೆ ಈ ಯೋಜನೆ
2 years agoFebruary 16, 2024 10:30 am
ಇಲಾಖಾವಾರು ಅನುದಾನ
ಶಿಕ್ಷಣ – 44,422 ಕೋಟಿ
ಮಹಿಳಾ ಮತ್ತು ಮಕ್ಕಳ ಇಲಾಖೆ – 34,406 ಕೋಟಿ
ಇಂಧನ – 23,159 ಕೋಟಿ
ಗ್ರಾಮೀಣಾಭಿವೃದ್ಧಿ – 21,160 ಕೋಟಿ
ಒಳಾಡಳಿತ/ಸಾರಿಗೆ – 19,777 ಕೋಟಿ
ನೀರಾವರಿ – 19,179 ಕೋಟಿ
ನಗರಾಭಿವೃದ್ಧಿ- 18,155 ಕೋಟಿ
ಕಂದಾಯ – 16,170 ಕೋಟಿ
ಆರೋಗ್ಯ – 15,145 ಕೋಟಿ
ಸಮಾಜಕಲ್ಯಾಣ – 13,334 ಕೋಟಿ
ಲೋಕೋಪಯೋಗಿ – 10,424 ಕೋಟಿ
ಆಹಾರ ಇಲಾಖೆ – 9963 ಕೋಟಿ
ಕೃಷಿ , ತೋಟಗಾರಿಕೆ – 6,688 ಕೋಟಿ
ಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿ
ಇತರೆ – 1,24,593 ಕೋಟಿ
2 years agoFebruary 16, 2024 10:27 am
ಬಿಯರ್ ಸ್ಲ್ಯಾಬ್ ದರ ಪರಿಷ್ಕರಣೆ
ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IMl ಬಿಯರ್ ಸ್ಲಾಬ್ ಪರಿಷ್ಕರಣೆ
2 years agoFebruary 16, 2024 10:25 am
ಬಜೆಟ್ ಗಾತ್ರ: 3.71 ಲಕ್ಷ ಕೋಟಿ ರೂ.
181 ಪುಟಗಳ ಬಜೆಟ್ ಪುಸ್ತಕ
ತೆರಿಗೆ ಅನ್ಯಾಯದ ಬಗ್ಗೆ ಪ್ರಸ್ತಾಪ
2 years agoFebruary 16, 2024 10:19 am
ತಮ್ಮ 15ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ.
2 years agoFebruary 16, 2024 10:17 am
ಬಜೆಟ್ ಮಂಡನೆ ಆರಂಭ
2 years agoFebruary 16, 2024 9:59 am
ಬಜೆಟ್ ಅಧಿವೇಶನದಲ್ಲೇ ಶ್ವೇತಪತ್ರ ಮಂಡನೆ
ಈ ಬಜೆಟ್ ಅಧಿವೇಶನದಲ್ಲೇ ರಾಜ್ಯದ ಕಳೆದ 5 ವರ್ಷಗಳ ಹಣಕಾಸು ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುವುದಾಗಿ ಸಚಿವರಿಗೆ ತಿಳಿಸಿದ ಸಿಎಂ ಸಿದ್ದರಾಮಯ್ಯ. ಮುಂದಿನ ವಾರ ಶ್ವೇತಪತ್ರ ಹೊರಡಿಸುವ ಸಾಧ್ಯತೆ.
ಜನರ ಗ್ಯಾರಂಟಿ + ಅಭಿವೃದ್ಧಿ ಗ್ಯಾರಂಟಿ ಬಜೆಟ್ ಎಂದು ಕ್ಯಾಬಿನೆಟ್ನಲ್ಲಿದ್ದ ಸಚಿವರಿಗೆ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
2 years agoFebruary 16, 2024 9:39 am
ಕಾಂಗ್ರೆಸ್ ಶಾಲು ಹಾಕಲು ಕೈ ಶಾಸಕರಿಗೆ ಸೂಚನೆ
ಸಿಎಂ ಸಿದ್ದರಾಮಯ್ಯ ಬಜೆಟ್ ಓದುವ ವೇಳೆ ಕಾಂಗ್ರೆಸ್ ಶಾಲು ಹಾಕಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ಸೂಚನೆ – ವಿಧಾನಸಭೆ ಸಭಾಂಗಣ ಪ್ರವೇಶಿಸುವ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಶಾಲು ಹಾಕಿ ಕಳುಹಿಸುತ್ತಿರುವ ಮುಖ್ಯಸಚೇತಕ ಅಶೋಕ್ ಪಟ್ಟಣ
2 years agoFebruary 16, 2024 9:37 am
ಕ್ಯಾಬಿನೆಟ್ ಮೀಟಿಂಗ್
ಸಂಪುಟ ಸಹೋದ್ಯೋಗಿಗಳ ಜೊತೆ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಮೀಟಿಂಗ್ – ಕ್ಯಾಬಿನೆಟ್ನಲ್ಲಿ ಬಜೆಟ್ಗೆ ಒಪ್ಪಿಗೆ ಪಡೆಯಲಿರುವ ಸಿಎಂ
2 years agoFebruary 16, 2024 9:31 am
ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ
ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಆಗಮನ, ಸಚಿವರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಾಗತ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದು ದಾಖಲೆಯ 15ನೇ ಬಜೆಟ್ ಮಂಡಿಸುತ್ತಿದ್ದು, ರಾಜ್ಯದಲ್ಲಿರುವ ಪುರಾತನ ರಾಮ ಮಂದಿರಗಳ ಪುನರುಜ್ಜೀವಕ್ಕೆ ಬಜೆಟ್ ನಲ್ಲಿ ಹಣ ಬಿಡುಗಡೆ ಆಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.
ಇಂದು (ಶುಕ್ರವಾರ) ಬೆಳಗ್ಗೆ 10:15 ರಿಂದ ಬಜೆಟ್ (Siddaramaiah Budget) ಮಂಡಿಸಲಿದ್ದಾರೆ. ಬಜೆಟ್ ಗಾತ್ರ 3.75 ಲಕ್ಷ ಕೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎನ್ನಲಾಗಿದೆ. ಬಜೆಟ್ ಮಂಡನೆಗೂ ಮುನ್ನ ಬೆಳಗ್ಗೆ 9:30ಕ್ಕೆ ಸಚಿವ ಸಂಪುಟ ಸಭೆಯನ್ನೂ ಸಿಎಂ ಕರೆದಿದ್ದಾರೆ.
ರಾಜ್ಯದ ಪುರಾತನ ರಾಮ ಮಂದಿರಗಳ ಪುನರುಜ್ಜೀವಕ್ಕೆ ಬಜೆಟ್ ನಲ್ಲಿ ಹಣ ಬಿಡುಗಡೆ ಆಗುತ್ತಾ? ಅಯೋಧ್ಯೆಯಲ್ಲಿ ರಾಜ್ಯದ ವಸತಿ ಸಮುಚ್ಚಯ ನಿರ್ಮಾಣ ಬಗ್ಗೆ ಬಜೆಟ್ನಲ್ಲಿ ಘೋಷಣೆಯಾಗುತ್ತಾ? ಕರ್ನಾಟಕದಲ್ಲಿ ಪುರಾತನ ರಾಮ ಮಂದಿರ ಪುನರು ಜ್ಜೀವನಕ್ಕೆ 100 ಕೋಟಿ ಮೀಸಲಿಡ್ತಾರಾ? ಅನ್ನೋದರ ಬಗ್ಗೆ ಕುತೂಹಲ ಹೆಚ್ಚಿಸಿದೆ. ಇದನ್ನೂ ಓದಿ: ಇಂದು ಸಿದ್ದರಾಮಯ್ಯರಿಂದ ದಾಖಲೆಯ 15ನೇ ಬಜೆಟ್ ಮಂಡನೆ – ಗ್ಯಾರಂಟಿ ಮಧ್ಯೆ ಬೆಟ್ಟದಷ್ಟು ನಿರೀಕ್ಷೆ
ಅಯೋಧ್ಯೆಯಲ್ಲಿ ರಾಜ್ಯದ ವಸತಿ ಸಂಕೀರ್ಣ ಕಟ್ಟಲು 100 ಕೋಟಿ ರೂ. ಮೀಸಲಿಡುತ್ತಾರೆ. ರಾಮ ರಾಜಕಾರಣದ ನಡುವೆ ಬಜೆಟ್ನಲ್ಲೇ ಘೋಷಿಸಿ ರಾಮ ಭಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಬಹುದು. ಶ್ರೀರಾಮನ ವಿಚಾರದಲ್ಲಿ ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಬಜೆಟ್ನಲ್ಲಿ ಸಿಎಂ ಉತ್ತರ ಕೊಡುವ ಸಾಧ್ಯತೆ ಇದೆ. ರಾಮ ಎಲ್ಲೆಲ್ಲೂ ಇದ್ದಾನೆ ಎಂದಿದ್ದ ಸಿಎಂ ರಾಜ್ಯದ ರಾಮ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಮುಂದಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಅಯೋಧ್ಯೆಯಲ್ಲಿ ಕರ್ನಾಟಕದ ವಸತಿ ಕಟ್ಟಡಕ್ಕೆ ಈ ಬಾರಿಯ ಬಜೆಟ್ನಲ್ಲೇ ಅನುದಾನ ಘೋಷಿಸಲು ಸಹ ಸಿದ್ಧತೆ ನಡೆದಿದೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಪೆನ್ಡ್ರೈವ್ ಪಾಲಿಟಿಕ್ಸ್ (Pendrive Politics) ಜೋರಾಗಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ವಿವಿಧ ಇಲಾಖೆಗಳ ಅಕ್ರಮದ ಬಗ್ಗೆ ಆರೋಪ ಮಾಡ್ತಿದ್ದಾರೆ.
ಇದರ ನಡುವೆ ಈವರೆಗೆ ಒಂದು ಲೆಕ್ಕ ಸೋಮವಾರದಿಂದ ಅಸಲಿ ಲೆಕ್ಕ ಶುರು ಎಂಬಂತಾಗಿದೆ. ಪೆನ್ಡ್ರೈವ್ ಮೂಲಕ ನೆಕ್ಸ್ಟ್ ಪಾಲಿಟಿಕ್ಸ್ ಡ್ರೈವ್ ಶುರುವಾದಂತಿದೆ. 4 ಇಲಾಖೆಗಳ ವರ್ಗಾವಣೆ ವಿಚಾರಗಳ ಬಗ್ಗೆ ಹೆಚ್ಡಿಕೆ ತಲಾಶ್ ಆರಂಭಿಸಿದ್ದಾರೆ. ಹುಡುಕಲು ಹೋದ ಹೆಚ್ಡಿಕೆಗೆ ಸಿಕ್ಕಿದ್ದೇನು..? ಬಿಟ್ಟಿದ್ದೇನು..? ಎಂಬ ಚರ್ಚೆಗಳು ಶುರುವಾಗಿದೆ. ಇದನ್ನೂ ಓದಿ: ಮಾನನಷ್ಟ ಪ್ರಕರಣದಲ್ಲಿ ರಾಹುಲ್ಗೆ ಹಿನ್ನಡೆ – ಮುಂದಿನ ರಾಜಕೀಯ ಭವಿಷ್ಯ ಏನು?
ಸದನದಲ್ಲಿ ಬಿಜೆಪಿ (BJP) ಸಹಕಾರದೊಂದಿಗೆ ಸಿದ್ದರಾಮಯ್ಯ (Siddaramaiah) ಟೀಂ ಟಾರ್ಗೆಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಹೆಚ್ಡಿಕೆ ನಂಬಿಕಸ್ಥ ಅಧಿಕಾರಿಗಳೇ ಪೆನ್ಡ್ರೈವ್ ಅಸಲಿಗೆ ಕಾರಣ ಎಂಬ ಚರ್ಚೆ ಶುರುವಾಗಿದೆ. 4 ಇಲಾಖೆಗಳಲ್ಲಿ ಮೂವರು ಪ್ರಭಾವಿಗಳ ಸಂಭಾಷಣೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ. ಪೆನ್ಡ್ರೈವ್ ಪ್ರಮುಖ ಅಧಿಕಾರಿಗಳ ವಿಚಾರದಲ್ಲಿ ಸಂಭಾಷಣೆ ನಡೆಸಿರುವ ಆಡಿಯೋ ಇದೆ ಎನ್ನಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಹಿನ್ನಡೆ- ಮಾನನಷ್ಟ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
ಈ ಆಡಿಯೋಗಳನ್ನೇ ಮುಂದಿಟ್ಟುಕೊಂಡು ಹೆಚ್ಡಿಕೆ ಪೆನ್ಡ್ರೈವ್ ಬ್ರಹ್ಮಾಸ್ತ್ರ ಹೂಡಲಿದ್ದಾರೆ. ಬಜೆಟ್ ಬಳಿಕ ಅಸಲಿ ಆಟ ಶುರುವಾಗಲಿದೆ ಅಂತಾ ಆಪ್ತರ ಬಳಿ ಕುಮಾರಸ್ವಾಮಿ ಹೇಳಿಕೊಂಡಿದ್ದಾರಂತೆ. ಹಾಗಾಗಿ ಮುಂದಿನವಾರ ರಾಜ್ಯ ರಾಜಕಾರಣದಲ್ಲಿ ರಣರೋಚಕ ಕದನ ಸಾಧ್ಯತೆ ಇದೆ.
– ಆ್ಯಸಿಡ್ ದಾಳಿಗೊಳಗಾದ ಮಹಿಳಾ ಸಂತ್ರಸ್ತರಿಗೆ 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲಕ್ಕೆ ಅಸ್ತು
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ನಲ್ಲಿ (Karnataka Budget 2023) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ಮಹಿಳೆಯರಿಗೆ ಬಂಪರ್ ಉಡುಗೊರೆ ನೀಡಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ರಾಜ್ಯದಲ್ಲಿನ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಅವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು 2 ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ., ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದ ಮಹಿಳೆಯರಿಗೆ ಬದುಕಿನ ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಮತ್ತು ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುವುದು. ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಲಿದೆ ಎಂದು ಹೇಳಿದ್ದಾರೆ.
ಇದರೊಂದಿಗೆ ವಿಶೇಷಚೇತನರಿಗೆ ಆರ್ಥಿಕ ಸದೃಢತೆ ಒದಗಿಸಲು ಸಾಮಾಜಿಕವಾಗಿ ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನ 30 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು. ಅಲ್ಲದೆ, ನೋಂದಣಿಯಾಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು. ಇದನ್ನೂ ಓದಿ: Karnataka Budget 2023: ಡಾ.ರಾಜ್ ಸ್ಮಾರಕದ ಬಳಿ ಸಿನಿ ವಸ್ತು ಸಂಗ್ರಹಾಲಯ
ಮಹಿಳಾ ಉದ್ಯಮಿಗಳು ಆತಿಥ್ಯ, ಆರೈಕೆ ಮತ್ತು ಪ್ರವಾಸೋದ್ಯಮದಂತಹ ಸೇವಾ ವಲಯದಲ್ಲಿ ಮಹಿಳೆಯರು ಹೆಚ್ಚಿನ ಅವಕಾಶ ಪಡೆಯುತ್ತಿದ್ದಾರೆ. ಆದ್ದರಿಂದ ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನ 2 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು. 2023-24ನೇ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನ 7 ಜಿಲ್ಲೆಗಳಲ್ಲಿ NGOಗಳ ಸಹಯೋಗದೊಂದಿಗೆ 2 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ