Tag: ಸಿದ್ದರಾಮಯ್ಯ ಬಜೆಟ್ 2023

  • Karnataka Budget 2023- ನೀರಾವರಿಗೆ ಯೋಜನೆಗೆ ಸಿಕ್ಕಿದ್ದು ಏನು?

    Karnataka Budget 2023- ನೀರಾವರಿಗೆ ಯೋಜನೆಗೆ ಸಿಕ್ಕಿದ್ದು ಏನು?

    ಬೆಂಗಳೂರು: ಬಹುನಿರೀಕ್ಷಿತ ಬಜೆಟ್ (Karnataka Budget 2023) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದು, ಈ ಬಾರಿಯ ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಒಟ್ಟು ನೀರಾವರಿ ಯೋಜನೆಗಳಿಗೆ 19 ಸಾವಿರ ಕೋಟಿ ರೂ. ಅನುದಾನವನ್ನು ಸಿದ್ದರಾಮಯ್ಯ (Siddaramaiah) ನೀಡಿದ್ದಾರೆ.

    ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.  770 ಕೋಟಿ ರೂ. ವೆಚ್ಚದಲ್ಲಿ 899  ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

    ಎತ್ತಿನಹೊಳೆ ಯೋಜನೆ (Yettina Hole Project) ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕಮ ಕೈಗೊಳ್ಳಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಬಿಡುಗಡೆಗೆ ಹಾಗೂ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಅಗತ್ಯ ತೀರುವಳಿ ಪಡೆಯಲು ಕ್ರಮವಹಿಸಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಭೂಸ್ವಾಧೀನ ಹಾಗೂ ಪುನರ್ ವಸತಿ ಮತ್ತು ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ಇದನ್ನೂ ಓದಿ: Karnataka Budget 2023 – NEP ರದ್ದು, ಬರಲಿದೆ ರಾಜ್ಯದ್ದೇ ಹೊಸ ಶಿಕ್ಷಣ ನೀತಿ

    ಕೆ.ಸಿ. ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆಗಳ ಎರಡನೇ ಹಂತದಲ್ಲಿ 529 ಕೋಟಿ ರೂ. ವೆಚ್ಚದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 296 ಕೆರೆ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸಿಎಂ ಹೇಳಿದರು.

    ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ., ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಅನುದಾನ ನೀಡಲಾಗುವುದು. ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು, ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಬಜೆಟ್‍ನಲ್ಲಿ ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023: ವಕ್ಫ್ ಆಸ್ತಿ ರಕ್ಷಣೆ, ಅಭಿವೃದ್ಧಿಗೆ 50 ಕೋಟಿ

    Karnataka Budget 2023: ವಕ್ಫ್ ಆಸ್ತಿ ರಕ್ಷಣೆ, ಅಭಿವೃದ್ಧಿಗೆ 50 ಕೋಟಿ

    ಬೆಂಗಳೂರು: ರಾಜ್ಯದಲ್ಲಿರುವ 40 ಸಾವಿರಕ್ಕೂ ಅಧಿಕ ವಕ್ಫ್ (Waqf Property) ಆಸ್ತಿಗಳ ರಕ್ಷಣೆ ಹಾಗೂ ಅಭಿವೃದ್ಧಿಗೆ 50 ಕೋಟಿ ರೂ. ಹಣವನ್ನು ಸಿದ್ದರಾಮಯ್ಯ ಬಜೆಟ್‍ನಲ್ಲಿ (Karnataka Budget 2023) ಮೀಸಲಿಟ್ಟಿದ್ದಾರೆ.

    ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು (1 ರಿಂದ 8ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುತ್ತದೆ. ಇದರಿಂದ ಅಲ್ಪಸಂಖ್ಯಾತ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದನ್ನು ಮನಗಂಡು ಈ ಯೋಜನೆಯನ್ನು ಮುಂದುವರಿಸಲು 60 ಕೋಟಿ ರೂ. ಅನುದಾನವನ್ನು ಒದಗಿಸಲಿದೆ ಎಂದು ಸಿಎಂ ಹೇಳಿದರು.

    ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್, ಜೆಇಇ, ಸಿಇಟಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ 2 ವರ್ಷಗಳ ತರಬೇತಿಯನ್ನು ನೀಡಲು 8 ಕೋಟಿ ರೂ. ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?

    ಬೆಂಗಳೂರು ನಗರದಲ್ಲಿರುವ ಹಜ್ ಭವನದಲ್ಲಿ (Haj Bhavan) ಐಎಎಸ್ (IAS) ಹಾಗೂ ಕೆಎಎಸ್ (KAS) ಮತ್ತು ಇತರೆ ಸ್ಪರ್ದಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭ ಮಾಡಲಾಗುವುದು. ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿಯಲ್ಲಿ 20 ಲಕ್ಷ ಸಾಲ ನೀಡಲಾಗುವುದಾಗಿ ಇದೇ ವೇಳೆ ತಿಳಿಸಿದರು.

    126 ಶಾದಿ ಮಹಲ್ (Shaadi Mahal) ಮತ್ತು ಸಮುದಾಯ ಭವನ ನಿರ್ಮಾಣಕ್ಕೆ 54 ಕೋಟಿ ಮೀಸಲಿಡಲಾಗುವುದು. ಅಲ್ಪಸಂಖ್ಯಾತ 10 ಸಾವಿರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಸಲುವಾಗಿ 20% ರಷ್ಟು ಅಥವಾ ಗರಿಷ್ಠ 1 ಲಕ್ಷದವರೆಗೆ ಸಹಾಯಧನ ನೀಡಲಾಗುವುದು ಎಂದು ಸಿಎಂ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023: ಬೆಂಗಳೂರಿಗೆ ಸಿಂಹಪಾಲು ಸಾಧ್ಯತೆ- ಗರಿಗೆದರಿದ ಹಲವು ನಿರೀಕ್ಷೆಗಳು

    Karnataka Budget 2023: ಬೆಂಗಳೂರಿಗೆ ಸಿಂಹಪಾಲು ಸಾಧ್ಯತೆ- ಗರಿಗೆದರಿದ ಹಲವು ನಿರೀಕ್ಷೆಗಳು

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 14ನೇಯ ಇಂದು ಬಜೆಟ್ ಮಂಡನೆ (Karnataka Budget 2023) ಮಾಡುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗರಲ್ಲಿ ಹಲವು ನಿರೀಕ್ಷೆಗಳು ಹುಟ್ಟಿಕೊಂಡಿವೆ.

    ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು `ಬ್ರ್ಯಾಂಡ್ ಬೆಂಗಳೂರು’ ಬಿಲ್ಡ್ ಗೆ ಉತ್ಸುಕತೆ ತೋರಿದ್ದಾರೆ. ಡಿಕೆಶಿ ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿರೋ ಹಿನ್ನಲೆಯಲ್ಲಿ ಡಿಸಿಎಂ ಹೊಸ ಮೆಟ್ರೋ (Metro) ಮಾರ್ಗಗಳ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಹೀಗಾಗಿ ಮೆಟ್ರೋ ನಿಗಮವು ಮೂರು ಮಾರ್ಗಗಳ ಬಗ್ಗೆ ಬೇಡಿಕೆ ಇಟ್ಟಿದ್ದು, ಹೀಗಾಗಿ ಹೊಸ ಮೆಟ್ರೋ ಮಾರ್ಗವನ್ನು ಸಿಎಂ ಇಂದು ಘೋಷಣೆ ಮಾಡ್ತಾರಾ ಎಂಬ ಕುತೂಹಲ ಹುಟ್ಟಿದೆ. ವೈಟ್ ಫೀಲ್ಡ್ – ಹೊಸಕೋಟೆ 17 ಕಿ.ಮೀ ಮೆಟ್ರೋ ಮಾರ್ಗ, ಒಳ ವರ್ತುಲ ರಸ್ತೆಯಲ್ಲಿ 35 ಕಿ.ಮೀ ಮೆಟ್ರೋ ಮಾರ್ಗ ಹಾಗೂ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಕಾಡುಗೋಡಿ ವರೆಗೆ 25 ಕಿ.ಮೀ ಮಾರ್ಗ ವಿಸ್ತರಣೆ ಮಾಡುವ ನಿರೀಕ್ಷೆ ಇದೆ.

    ಬೆಂಗಳೂರು ನಗರಕ್ಕೆ‌ (Bengaluru) ಹೊಸ ಫ್ಲೈಓವರ್ ಗಳ ನಿರೀಕ್ಷೆಯೂ ಇದೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಹೊಸ ಫ್ಲೈಓವರ್ (New Flyover) ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿಂದಿನ ಸರ್ಕಾರ 17 ಹೊಸ ಫ್ಲೈಓವರ್ ಒಪ್ಪಿಗೆ ಸೂಚಿಸಿತ್ತು. ಹೀಗಾಗಿ ಇಂದಿನ ಬಜೆಟ್‍ನಲ್ಲಿ ಈ ಬಗ್ಗೆ ಘೋಷಣೆ ಆಗೋ ಸಾಧ್ಯತೆ ಹೆಚ್ಚಿದೆ.

    ಇಂದಿನ ಬಜೆಟ್ ನಲ್ಲಿ ಸುರಂಗ ಮಾರ್ಗ (Subway)  ಘೋಷಣೆ ಮಾಡುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ 100 ಕಿ.ಮೀ ಸುರಂಗ ನಿರ್ಮಾಣದ ಚರ್ಚೆ ಮಾಡಲಾಗಿದೆ. 100 ರಲ್ಲಿ ಅರ್ಧದಷ್ಟಾದ್ರೂ ಮೊದಲ ಭಾಗವಾಗಿ ಘೋಷಣೆ ಸಾಧ್ಯತೆ ಇದೆ. ಈಗಾಗಲೇ ಸುರಂಗ ಮಾರ್ಗ ನಿರ್ಮಾಣ ಸಂಸ್ಥೆಗಳ ಜೊತೆಗೆ ಡಿಸಿಎಂ ಚರ್ಚೆ ಮಾಡಿದ್ದಾರೆ. ಬೆಂಗಳೂರನ್ನು ಟ್ರಾಫಿಕ್ (Bengaluru Traffic) ಮುಕ್ತ ಮಾಡಲು ಡಿಕೆಶಿ ಪಣತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ಣಪ್ರಮಾಣದಲ್ಲಿ ಘೋಷಣೆ ಆಗದಿದ್ರೂ 50 ಕಿ.ಮೀ ಘೋಷಣೆ ಮಾಡಬಹುದು ಎನ್ನಲಾಗಿದ್ದು, ಈ ಬಗ್ಗೆ ಈಗಾಗಲೇ ಸಿಎಂ ಬಳಿ ಡಿಸಿಎಂ ಮನವಿ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳ ಜಾರಿ ನಡುವೆ ಹೊಸ ಭರವಸೆ ಹುಟ್ಟಿಸುತ್ತಾ ರಾಜ್ಯ ಸರ್ಕಾರದ ಬಜೆಟ್?

    ಇತ್ತ ಬಿಬಿಎಂಪಿ (BBMP) ಕೂಡ ಇಂದಿನ ಬಜೆಟ್ ಬಗ್ಗೆ ಬಾರಿ ನಿರೀಕ್ಷೆಯಲ್ಲಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚುವರಿ ಅನುದಾನಕ್ಕೆ ಪಾಲಿಕೆ ಆಡಳಿತ ವರ್ಗ ಪ್ರಸ್ತಾವನೆ ಸಲ್ಲಿಸಿದೆ. ಈ ಬಾರಿ 7,500ಕೋಟಿ ಅನುದಾನದ ಬಿಡುಗಡೆಗೆ ಬೇಡಿಕೆ ಇಟ್ಟಿದೆ. ಬಿಜೆಪಿ ಸರ್ಕಾರದಲ್ಲಿ (BJP Govt) ನಿರೀಕ್ಷಿತ ಪ್ರಮಾಣದ ಅನುದಾನ ಸಿಗದೇ ನಿರಾಸೆಗೊಂಡಿದ್ದ ಬಿಬಿಎಂಪಿ, ಈ ಬಾರಿಯ ಸಿದ್ದರಾಮಯ್ಯ ಬಜೆಟ್‍ನಲ್ಲಿ ಬಿಬಿಎಂಪಿ ಜಾಕ್ ಪಾಟ್ ಹೊಡೆಯುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಕಳೆದ ಬಾರಿ ಕೇವಲ 3,500 ಕೋಟಿ ಬಿಬಿಎಂಪಿ ಗೆ ಅನುದಾನ ಬಿಡುಗಡೆಯಾಗಿತ್ತು. ಆದರೆ ಅನೇಕ ಕಾಮಗಾರಿ ಹಾಗೂ ಯೋಜನೆಗೆ 3,500 ಕೋಟಿಗೂ ಅಧಿಕ ಹಣ ವೆಚ್ಚವಾಗಿತ್ತು. ಹೀಗಾಗಿ ಈ ಬಾರಿ 7,500ಕೋಟಿ ಅನುದಾನದ ನಿರೀಕ್ಷೆಯ ಬೇಡಿಕೆಯನ್ನು ಬಿಬಿಎಂಪಿ ಇಟ್ಟಿದೆ. ಇನ್ನು ಇಂದಿರಾ ಕ್ಯಾಂಟೀನ್ (Indira Canteen) ರೀ ಲಾಂಚ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಜೊತೆಗೆ ಹೆಚ್ಚುವರಿ 200 ಕೋಟಿ ಅನುದಾನದ ನಿರೀಕ್ಷೆ ಇದ್ದು, ಹೊಸ ವಾರ್ಡ್ ಗಳಿಗೆ ಹೊಸ ಕ್ಯಾಂಟೀನ್ ಘೋಷಣೆಯಾಗುವನಿರೀಕ್ಷೆಗಳಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]