Tag: ಸಿದ್ದರಾಮಯ್ಯ ಸರ್ಕಾರ

  • ಬೃಹತ್ ಆಂಜನೇಯ ಪ್ರತಿಷ್ಠಾಪನೆ ವಿವಾದ- ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್

    ಬೃಹತ್ ಆಂಜನೇಯ ಪ್ರತಿಷ್ಠಾಪನೆ ವಿವಾದ- ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್

    ಬೆಂಗಳೂರು: ಅಂಜನೇಯನ ವಿಚಾರದಲ್ಲಿ ಭರ್ಜರಿ ರಾಜಕೀಯ ಶುರುವಾಗಿದೆ. ಬೃಹತ್ ಆಂಜನೆಯ ವಿಗ್ರಹ ಪ್ರತಿಷ್ಠಾಪನೆ ವಿವಾದ ಸಂಬಂಧ ಇದೀಗ ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದೆ.

    ಬೃಹತ್ ರೂಪಿ ಆಂಜನೇಯನಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಜಿಲ್ಲಾಡಳಿತ ವಿವಾದಿತ ಜಾಗದಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪಿಸಲಾಗುತ್ತಿದೆ ಎಂದು ಹೇಳಿದೆ. ಆದ್ದರಿಂದ ಸೋಮವಾರ ತಡರಾತ್ರಿ ಎಸಿ ಜಗದೀಶ್ ಎಂಬವರು ಡಿ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಪದ್ಮನಾಭರೆಡ್ಡಿ ಸೇರಿ 18 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

    ಜಿಲ್ಲಾಡಳಿತ ಸರ್ವೇ ನಂಬರ್ 153 ಕೆರೆ ಜಾಗವಾಗಿದ್ದು, ಇಲ್ಲಿ ಮೂರ್ತಿ ಪ್ರತಿಷ್ಠಾನೆಗೆ ಸಾಧ್ಯವಿಲ್ಲ. ಇದನ್ನು ಪ್ರಶ್ನಿಸಲು ಬಂದ ನನಗೆ ಬೆದರಿಕೆ ಹಾಕಿದ್ದಾರೆ ಅಂತ ಜಗದೀಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ.

    ಏನಿದು ವಿವಾದ?: ಬೆಂಗಳೂರಿನ ಎಚ್‍ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ 62 ಅಡಿ ಎತ್ತರದ ಬೃಹತ್ ಆಂಜನೇಯ ವಿಗೃಹವನ್ನು ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿದೆ. ಆದ್ರೆ ಮುಜರಾಯಿ ಇಲಾಖೆ ಹಾಗೂ ಶ್ರೀರಾಮ ದೇಗುಲದ ಟ್ರಸ್ಟಿಗಳ ಮಧ್ಯೆ ದೇಗುಲದ ಜಾಗಕ್ಕೆ ಸಂಬಂಧಪಟ್ಟ ವ್ಯಾಜ್ಯ ಕೋರ್ಟ್‍ನಲ್ಲಿ ಇರುವುದರಿಂದ ದೇಗುಲದ ಆವರಣದೊಳಗೆ ಆಂಜನೇಯ ವಿಗ್ರಹ ತರುವಂತಿಲ್ಲ ಎಂದು ತಹಶೀಲ್ದಾರ್ ಡಿಸಿ ತಡೆಯೊಡ್ಡಿದ್ದಾರೆ. ಆಗ ಭಕ್ತರು ಆಕ್ರೋಶಗೊಂಡು ದೇಗುಲದ ಆವರಣದಲ್ಲಿಯೇ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ. ಸಚಿವ ಜಾರ್ಜ್ ಇದಕ್ಕೆಲ್ಲ ಕುಮ್ಮಕ್ಕು ನೀಡುತ್ತಿದ್ದಾರೆ ಅಂತಾ ಆರೋಪಿಸಿ ಜಾರ್ಜ್ ವಿರುದ್ಧ ಬ್ಯಾನರ್ ಹಿಡಿದು ರಸ್ತೆಗಿಳಿದು ಜನ ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ವಾಹನಕ್ಕೆ ಅಡ್ಡಲಾಗಿ ಕಲ್ಲು ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇನ್ನು ಬಿಜೆಪಿಯ ಕೆಲ ನಾಯಕರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಸಾಥ್ ನೀಡಿದ್ದಾರೆ. ಕೆಜೆ ಜಾರ್ಜ್ ಈ ವಿಚಾರದಲ್ಲಿ ಕುಮ್ಮಕ್ಕು ನೀಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ, ಮುಂದಿನ ಚುನಾವಣೆಯಲ್ಲಿ ಜನರೆ ಉತ್ತರ ಕೊಡಲಿದ್ದಾರೆ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಹೇಳಿದ್ದಾರೆ.

    ರಸ್ತೆಯ ಡಿವೈಡರ್ ಅಡ್ಡ ಬಂದಿರೋದ್ರಿಂದ ಅದನ್ನು ನೆಲಸಮ ಮಾಡಲಾಗಿದೆ. ಎಷ್ಟೇ ಗಲಾಟೆಯಾದ್ರೂ ದೇವಾಲಯದ ಆವರಣದೊಳಗೆ ವಿಗ್ರಹ ಪ್ರವೇಶವಾಗುವಂತಿಲ್ಲ, ಪರ್ಯಾಯ ವ್ಯವಸ್ಥೆ ಏನ್ ಬೇಕಾದರೂ ಮಾಡಿಕೊಳ್ಳಲಿ ಎಂದು ಜಿಲ್ಲಾಧಿಕಾರಿ ದಯಾನಂದ ಹೇಳಿದ್ದಾರೆ.

  • ಬಡವರಿಗೆ ಅವಧಿ ಮುಗಿದ ತೊಗರಿ- ಯಾದಗಿರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

    ಬಡವರಿಗೆ ಅವಧಿ ಮುಗಿದ ತೊಗರಿ- ಯಾದಗಿರಿಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

    ಯಾದಗಿರಿ: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದು ರಾಜ್ಯವನ್ನು ಹಸಿವುಮುಕ್ತ ರಾಜ್ಯ ಮಾಡಲಾಗಿದೆ ಎಂದು ಹೇಳುತ್ತಿದೆ. ಇನ್ನು ಸಿಎಂ ಸಿದ್ದರಾಮಯ್ಯ ಚುನಾವಣೆ ಪ್ರಚಾರದಲ್ಲಿ ಕೂಡ ಅನ್ನಭಾಗ್ಯ ಯೋಜನೆ ಬಡ ಜನರ ಹೊಟ್ಟೆ ತುಂಬಿಸುತ್ತಿದೆ ಎಂದು ಭಾಷಣ ಮಾಡಿ ಜನರ ಮತ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಆದ್ರೆ ಅನ್ನಭಾಗ್ಯ ಯೋಜನೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಸಿವುಮುಕ್ತ ಕರ್ನಾಟಕ ಮಾಡಲು ಬಡವರಿಗೆ ಅವಧಿ ಮುಗಿದ ಬೇಳೆಕಾಳುಗಳ ಪ್ಯಾಕೆಟ್ ಕೊಟ್ಟಿದೆ. ಪ್ರತಿ ಕೆಜಿಗೆ 25 ರೂಪಾಯಿ ಪಡೆದು ಜಿಲ್ಲೆಯ ಸುಮಾರು 2 ಲಕ್ಷ ಬಿಪಿಎಲ್ ಕಾರ್ಡ್‍ದಾರರಿಗೆ ತೊಗರಿ ವಿತರಿಸಲಾಗಿದೆ.

    ಕಳೆದ ಆಗಸ್ಟ್‍ನಲ್ಲಿ ತೊಗರಿಕಾಳು ಪ್ಯಾಕಿಂಗ್ ಮಾಡಲಾಗಿದ್ದು, 3 ತಿಂಗಳೊಳಗೆ ಉಪಯೋಗಿಸಬೇಕೆಂದು ಮುದ್ರಿಸಲಾಗಿದೆ. ಆದ್ರೆ ತಡವಾಗಿ ಎಚ್ಚೆತ್ತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 6 ತಿಂಗಳುಗಳ ಬಳಿಕ ವಿತರಣೆ ಮಾಡುತ್ತಿದೆ. ಈ ಬಗ್ಗೆ ಕೇಳಿದ್ರೆ ತೊಗರಿಕಾಳು ಊಟಕ್ಕೆ ಬಳಸಬಹುದು. ಯಾವುದೇ ಸಮಸ್ಯೆಯಿಲ್ಲ ಅಂತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ನಾಗಭೂಷಣ ಹೇಳುತ್ತಿದ್ದಾರೆ.

    ಹಸಿವು ಮುಕ್ತ ಕರ್ನಾಟಕ ಮಾಡಲು ಬಡವರಿಗೆ ಹೀಗೆ ಅವಧಿ ಮುಗಿದ ತೊಗರಿ ಕಾಳು ವಿತರಿಸೋದು ಎಷ್ಟು ಸರಿ ಅನ್ನೋದು ಜನರ ಪ್ರಶ್ನೆಯಾಗಿದೆ.

  • ಸಿಎಂಗೆ ಆಸೆ ಹುಟ್ಟಿಸಿದ ಯುವಕನ ಕನಸು- ನಿಧಿ ಹುಡುಕುವಂತೆ ಸರ್ಕಾರದ ಆದೇಶ

    ಸಿಎಂಗೆ ಆಸೆ ಹುಟ್ಟಿಸಿದ ಯುವಕನ ಕನಸು- ನಿಧಿ ಹುಡುಕುವಂತೆ ಸರ್ಕಾರದ ಆದೇಶ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ನಿಗೂಢ ನಿಧಿ ಹಿಂದೆ ಬಿದ್ದಿದೆ. ಬಂಗಾರದ ನಾಣ್ಯ, ಬಂಗಾರ ಸೇರಿದಂತೆ ಅಪಾರ ಸಂಪತ್ತು ಸಿಗುತ್ತೆ ಎಂಬ ನಿರೀಕ್ಷೆಯಲ್ಲಿ ಸರ್ಕಾರ ಇದೆ. 29 ವರ್ಷದ ಯುವಕ ಹೇಳಿದ ಕನಸು ನಂಬಿ ಭೂಮಿ ಅಗೆಯಲು ಚಿಂತನೆ ನಡೆಸಿದೆ.

    ನನಗೆ ಕನಸು ಬಿದ್ದಿದೆ, ನನ್ನ ಕನಸಲ್ಲಿ ಅಪಾರ ಸಂಪತ್ತಿರುವ ಮಾಹಿತಿ ಸಿಕ್ಕಿದೆ. ಆ ರಹಸ್ಯ ಬಂಗಲೆಯಲ್ಲಿ ಶೋಧ ಕೈಗೊಂಡರೆ ಅಪಾರ ಪ್ರಮಾಣದ ನಿಧಿ ಸಿಗಲಿದೆ. ಆ ನಿಧಿಯನ್ನು ಈ ರಾಜ್ಯದ ಉದ್ಧಾರಕ್ಕೆ ಬಳಸಿಕೊಳ್ಳಬಹುದು ಎಂದು ತುಮಕೂರಿನ 29 ವರ್ಷದ ಪ್ರದ್ಯುಮ್ನ ಯಾದವ್ ಎಂಬ ವ್ಯಕ್ತಿ ಸಿಎಂಗೆ ಪತ್ರ ಬರೆದಿದ್ದಾರೆ.

    ಪ್ರದ್ಯುಮ್ನ ಅವರಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಪ್ರಾಚೀನ ಬಂಗಲೆಯಲ್ಲಿ ಅಪಾರ ನಿಧಿಯಿರುವ ಕನಸು ಬಿದ್ದಿದೆಯಂತೆ. 2 ಬಂಗಲೆ, 6 ರೂಂಗಳಲ್ಲಿ ಅಪಾರ ಚಿನ್ನಭಾರಣ, ಸಂಪತ್ತಿದೆಯಂತೆ. 300 ವರ್ಷಗಳ ಹಿಂದೆ ಈ ಪ್ರದೇಶವನ್ನು ಆಳುತ್ತಿದ್ದ ಯದುನಂದನ ಚಿತ್ರಭೂಪಾಲ ಸಾಮ್ರಾಟ, ಸಾಮ್ರಾಜ್ಯದ ಮೇಲೆ ದಾಳಿಯಾಗುವ ಭಯದಲ್ಲಿ ಸಂಪತ್ತನ್ನು 6 ಕೋಣೆಗಳಲ್ಲಿ ಬಚ್ಚಿಟ್ಟಿದ್ದನಂತೆ.

    ಪದ್ಯುಮ್ನ ಪತ್ರದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲನೆ ಮಾಡುವಂತೆ ಪ್ರಾಚ್ಯವಸ್ತು ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಸಿದ್ದರಾಮಯ್ಯ ಕಾರ್ಯದರ್ಶಿ ಎಲ್‍ಕೆ ಅತೀಕ್ ಪತ್ರ ಬರೆದಿದ್ದಾರೆ. ಅಲ್ಲದೆ ಈ ಬಗ್ಗೆ ಪರಿಶೀಲಿಸುವಂತೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಆಂಜನೇಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆದಿದ್ದಾರೆ.