Tag: ಸಿದ್ದರಾಮಯ್ಯ

  • ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ – ಸಿದ್ದರಾಮಯ್ಯ ತಿರುಗೇಟು

    ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ – ಸಿದ್ದರಾಮಯ್ಯ ತಿರುಗೇಟು

    ಮಂಗಳೂರು: ಬಿಹಾರ ಚುನಾವಣೆಗೆ (Bihar Election 2025) ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ. ಅವರು ಮಾಡುವ ಕೆಲಸವನ್ನು ನಮ್ಮ ಮೇಲೆ ಹೇಳ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

    ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಗೆ ಕರ್ನಾಟಕವನ್ನು ಎಟಿಎಂ ಆಗಿ ಬಳಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ, ಅವರು ಮಾಡಿದ್ದನ್ನು ನಮ್ಮ ಮೇಲೆ ಹೇಳ್ತಿದ್ದಾರೆ ಎಂದರು. ಇದನ್ನೂ ಓದಿ: ಬೇಗ ಮದ್ವೆ ಆಗಿ, ನಾವು ಕಾಯ್ತಿದ್ದೇವೆ – ರಾಹುಲ್‌ ಗಾಂಧಿಗೆ ಅಂಗಡಿ ಮಾಲೀಕ ಮನವಿ

    ಇನ್ನೂ ಸರ್ಕಾರಿ ಜಾಗ, ಸಂಸ್ಥೆಗಳ ಆವರಣದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ಅವರು 2013ರಲ್ಲಿ ಈ ಸುತ್ತೋಲೆ ಹೊರಡಿಸಿದ್ದರು. ಶಿಕ್ಷಣ ಇಲಾಖೆ ಮುಖಾಂತರ ಈ ಸುತ್ತೋಲೆ ಹೊರಡಿಸಲಾಗಿತ್ತು. ಯಾಕೆ ಸುತ್ತೋಲೆ ಹೊರಡಿಸಿದ್ದು? ನಾವು ಯಾವುದೇ ಆರ್ಗನೈಸೇಷನ್ ಹೆಸರು ಹೇಳಿಲ್ಲ. ನಾವು ಯಾವ ಆರ್ಗನೈಜೇಷನ್ ಹೆಸರು ಹೇಳಿದ್ದೇವೆ? ನಾವು ಆರ್‌ಎಸ್‌ಎಸ್‌ ಹೆಸರು ಹೇಳಿಲ್ಲ ಅವರು ಹೇಳಿದ್ದನ್ನೇ ನಾವು ರಿಪೀಟ್ ಮಾಡಿದ್ದೇವೆ ಎಂದು ಕುಟುಕಿದರು. ಇದನ್ನೂ ಓದಿ: ಸೈಟ್‌ ಕೊಟ್ರೆ ಮಾತ್ರ ಸಂಸಾರ, ಮಗು ಬೇಕಿದ್ರೆ ಮೈದುನನ ಜೊತೆ ಮಲಗು – ಗಂಡ, ಅತ್ತೆಯ ಟಾರ್ಚರ್‌ಗೆ ಉಪನ್ಯಾಸಕಿ ಆತ್ಮಹತ್ಯೆ

    ಎನಿ ಆರ್ಗನೈಸೇಷನ್ ಅಂತ ಜಗದೀಶ್ ಶೆಟ್ಟರ್ ನಿನ್ನೆ ಹೇಳಿದ್ದಾರೆ ಅದು ಶಿಕ್ಷಣ ಇಲಾಖೆ ಮಾಡಿದ್ದು ಅಂತ. ಹಾಗಾದ್ರೆ ಅವರು ಮುಖ್ಯಮಂತ್ರಿ ಆಗಿರ್ಲಿಲ್ವಾ? ನಾವು ಹೇಳಿರೋದು ಪರ್ಮಿಷನ್ ತಕ್ಕೊಂಡು ಮಾಡ್ಲಿ ಅಂತ. ಆದ್ರೆ ಪರ್ಮಿಷನ್ ಕೊಡಲೇಬೇಕು ಅಂತ ಏನಿಲ್ಲ. ಕಾನೂನು ಸುವ್ಯವಸ್ಥೆ ನೋಡಿ ಅನುಮತಿ ಕೊಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು – 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆರ್‌ಜೆಡಿ

  • ಜಾತಿ ಸಮೀಕ್ಷೆ ಹೆಸರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಧಮ್ಕಿ, ರೌಡಿಸಂ – ಅಶೋಕ್ ಕಿಡಿ

    ಜಾತಿ ಸಮೀಕ್ಷೆ ಹೆಸರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಧಮ್ಕಿ, ರೌಡಿಸಂ – ಅಶೋಕ್ ಕಿಡಿ

    – ರಸ್ತೆ ಡಾಂಬರೀಕರಣ ಮಾಡದೇ ಉದ್ಯಮಿಗಳ ಬಗ್ಗೆ ಟೀಕೆ

    ಬೆಂಗಳೂರು/ಹಾಸನ: ಜಾತಿ ಸಮೀಕ್ಷೆಗೆ (Caste Census) ಮಾಹಿತಿ ನೀಡದವರಿಗೆ ಕಾಂಗ್ರೆಸ್ (Congress) ಸರ್ಕಾರ ಧಮ್ಕಿ ಹಾಕುತ್ತಿದೆ. ಇದು ರೌಡಿಸಂ ಮಾಡುವ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದರು.

    ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಿಲ್ಲ. ಇನ್ಫೋಸಿಸ್ ಸುಧಾಮೂರ್ತಿ ಜಾತಿ ಸಮೀಕ್ಷೆಗೆ ಮಾಹಿತಿ ನೀಡಿಲ್ಲವೆಂದಾಕ್ಷಣ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಶಿವರಾಜ್ ತಂಗಡಗಿ ಧಮ್ಕಿ ಹಾಕಿದ್ದಾರೆ. ಸರ್ಕಾರವೇ ಇಲ್ಲಿ ರೌಡಿಸಂ ಮಾಡುತ್ತಿದೆ. ಮಾಹಿತಿ ನೀಡುವುದು ಜನರ ಇಚ್ಛೆ ಎಂದು ಹೈಕೋರ್ಟ್ ಹೇಳಿದ್ದರೂ ಸರ್ಕಾರ ಅದನ್ನು ಉಲ್ಲಂಘಿಸಿ ಗೂಂಡಾಗಿರಿ ತೋರುತ್ತಿದೆ. ಜಾತಿ ಸಮೀಕ್ಷೆ ಮಾಡುವುದೇ ಅಕ್ರಮವಾಗಿದ್ದು, ಈ ರೀತಿ ಬೆದರಿಕೆ ಹಾಕುವುದು ಮತ್ತೊಂದು ಅಕ್ರಮವಾಗಿದೆ ಎಂದರು.ಇದನ್ನೂ ಓದಿ: ದೀಪಾವಳಿ ಗಿಫ್ಟ್‌ – ದುಬಾರಿ ಕಾರುಗಳನ್ನೇ ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ

    ಸುಧಾಮೂರ್ತಿ ಬರೆದುಕೊಟ್ಟಿದ್ದನ್ನು ಬಹಿರಂಗ ಮಾಡಿರುವುದು ತಪ್ಪು. ಯಾರದ್ದೇ ಮಾಹಿತಿಯನ್ನು ಬಹಿರಂಗ ಮಾಡಬಾರದು, ಗೌಪ್ಯತೆ ಕಾಪಾಡಬೇಕು ಎಂದು ಹೈಕೋರ್ಟ್ ಹೇಳಿದೆ. ಇದರ ಜೊತೆಗೆ ಶಿಕ್ಷಕರು, ಅಧಿಕಾರಿಗಳನ್ನೂ ಬೆದರಿಸುತ್ತಿದ್ದಾರೆ ಎಂದರು.

    ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಯಮಿಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ರಸ್ತೆ ಸರಿ ಇಲ್ಲ ಎಂದರೆ ನೀತಿಪಾಠ ಹೇಳುತ್ತಾರೆ. ಮೋಹನ್ ದಾಸ್ ಪೈ ಹಾಗೂ ಕಿರಣ್ ಮಜುಮ್‌ದಾರ್ ಶಾ ಪ್ರಶ್ನೆ ಮಾಡಿದರೆ ಅದನ್ನು ಟೀಕೆ ಮಾಡಿದ್ದಾರೆ. ಬೆಂಗಳೂರಿಂದ ಎಲ್ಲವನ್ನೂ ಪಡೆದಿದ್ದಾರೆ ಎನ್ನಲು ಈ ನಗರವನ್ನು ಸಿಎಂ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಕಟ್ಟಿ ಬೆಳೆಸಿಲ್ಲ. ತೆರಿಗೆ ಕಟ್ಟುವವರಿಗೆ ಪ್ರಶ್ನೆ ಕೇಳುವ ಅಧಿಕಾರವೂ ಇದೆ. ಬಿಜೆಪಿ ಸರ್ಕಾರವಿದ್ದಾಗಲೂ ಇದೇ ಉದ್ಯಮಿಗಳು ಟ್ವೀಟ್ ಮಾಡಿ ಪ್ರಶ್ನೆ ಕೇಳಿದ್ದರು. ಆಗ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಕೂಡಲೇ ಹಣ ಬಿಡುಗಡೆ ಮಾಡಿ ರಸ್ತೆ ದುರಸ್ತಿ ಮಾಡಲಾಗಿತ್ತು. ಸಮಸ್ಯೆ ಬಂದಾಗ ತೆಗಳುವುದು ಬಿಟ್ಟು ಸಮಸ್ಯೆ ಬಗೆಹರಿಸಲಿ. ರಸ್ತೆಗುಂಡಿ ಮುಚ್ಚಲು 2,000 ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದರೂ ಅದರ ಫಲಿತಾಂಶ ಕಾಣುತ್ತಿಲ್ಲ. ಈ ಹಣ ಎಲ್ಲಿ ಹೋಗಿದೆ ಎಂದು ಸರ್ಕಾರ ನೋಡಬೇಕಿದೆ ಎಂದು ಆಕ್ರೋಶ ಹೊರಹಾಕಿದರು.

    ಗೂಗಲ್ ಕಂಪನಿ ಬೆಂಗಳೂರು ಬಿಟ್ಟು ಆಂಧ್ರಪ್ರದೇಶವನ್ನು ಆಯ್ಕೆ ಮಾಡಿಕೊಂಡಿದೆ. ಉದ್ಯಮಿಗಳನ್ನು ಓಡಿಸಿ ಇವರು ಯಾವ ರೀತಿಯ ಅಭಿವೃದ್ಧಿ ಮಾಡುತ್ತಾರೆ? ನಗರದಲ್ಲಿ ಮಳೆ ನಿಂತಿದೆ. ಆದರೂ ಮಳೆ ಬರುತ್ತಿದೆ ಎಂದು ಬೃಹಸ್ಪತಿ ಸಿದ್ದರಾಮಯ್ಯ ನೆಪ ಹೇಳುತ್ತಿದ್ದಾರೆ. ಮಳೆ ಬರುವ ಮುನ್ನವೇ ರಸ್ತೆ ಡಾಂಬರೀಕರಣ ಮಾಡಬೇಕಿತ್ತು. ಉದ್ಯಮಿಗಳೇ ರಸ್ತೆ ನಿರ್ಮಿಸುತ್ತೇವೆ ಎಂದಿದ್ದು, ಇದು ಸರ್ಕಾರಕ್ಕೆ ದೊರೆತ ಛೀಮಾರಿ ಎಂದು ಹೇಳಿದರು.

    ಪ್ರವಾಹ ಬಂದಾಗ ಸರ್ವಪಕ್ಷ ಸಭೆ ಕರೆಯಬೇಕಿತ್ತು. ಸಭೆ ನಡೆಸದೆ, ಕೇಂದ್ರ ಸರ್ಕಾರದ ಬಳಿ ಹೋಗದೆ ಪರಿಹಾರ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ನಿಯಮದ ಅನುಸಾರ ಪರಿಹಾರ ಬಿಡುಗಡೆ ಮಾಡಿದೆ ಎಂದರು.

    ಬಿಜೆಪಿ ಸರ್ಕಾರ ಆದೇಶ ಮಾಡಿಲ್ಲ:
    ಶಾಲಾ ಆವರಣದಲ್ಲಿ ಹೊರಗಿನ ಸಂಘಟನೆಗಳಿಂದ ಕಾರ್ಯಕ್ರಮ ಮಾಡುವುದನ್ನು ನಿಷೇಧಿಸುವ ಬಗ್ಗೆ ಆಗಿನ ಸಿಎಂ ಜಗದೀಶ್ ಶೆಟ್ಟರ್ ಆದೇಶ ಮಾಡಿರುವುದಕ್ಕೆ ಸಾಕ್ಷಿ ಇಲ್ಲ. ಇದು ಅಂದಿನ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಚರ್ಚೆಯಾಗಿರಲಿಲ್ಲ. ಚಾಮರಾಜಪೇಟೆಯ ಒಂದು ಶಾಲೆಗೆ ಸಂಬಂಧಿಸಿದಂತೆ ಒಂದು ಆದೇಶವಾಗಿದೆ. ಇದನ್ನು ಎಲ್ಲಕ್ಕೂ ಅನ್ವಯಿಸಿ ಈಗಿನ ಸರ್ಕಾರ ಆದೇಶ ಮಾಡಿದೆ. ಜಗದೀಶ್ ಶೆಟ್ಟರ್ ಅಥವಾ ಅಂದಿನ ಸಚಿವರ ಸಹಿ ಇರುವ ಆದೇಶವಿದ್ದರೆ ಅದನ್ನು ಬಹಿರಂಗ ಮಾಡಲಿ ಎಂದು ಹೇಳಿದರು.

    ಆರ್‌ಎಸ್‌ಎಸ್ ಆರಂಭವಾಗಿ 100 ವರ್ಷದ ಬಳಿಕ ಪಥಸಂಚಲನದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದೆ. ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಬಂದಿದೆ. ಪ್ರತಿ ಶುಕ್ರವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಸ್ತೆಯಲ್ಲಿ ನಮಾಜ್ ಮಾಡುತ್ತಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಆಗುವುದಿಲ್ಲವೇ? ರಂಜಾನ್, ಈದ್ ಮಿಲಾದ್ ವೇಳೆ ರಸ್ತೆ ಬಂದ್ ಮಾಡುತ್ತಾರೆ. ಆಗ ಯಾರೂ ಅನುಮತಿ ಪಡೆದಿರುವುದಿಲ್ಲ. ಕೆಲವು ಕಡೆ ಮೆರವಣಿಗೆಯಲ್ಲಿ ಕತ್ತಿ ಹಿಡಿದು ಆಚರಣೆ ಮಾಡುತ್ತಾರೆ. ಅದನ್ನು ಶಸ್ತ್ರಾಸ್ತ್ರಗಳು ಎಂದು ಪರಿಗಣಿಸುವುದಿಲ್ಲ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಎಂದೂ ಯಾರಿಗೂ ಹಾನಿಯಾಗಿಲ್ಲ ಎಂದರು.ಇದನ್ನೂ ಓದಿ: ರಾಜ್ಯದ ಹಲವೆಡೆ ವರುಣಾರ್ಭಟ – ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

  • ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು – 11ಕ್ಕೂ ಹೆಚ್ಚು ಜನ ಅಸ್ವಸ್ಥ

    ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು – 11ಕ್ಕೂ ಹೆಚ್ಚು ಜನ ಅಸ್ವಸ್ಥ

    ಮಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಭಾಗವಹಿಸಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಸಂಭವಿಸಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಹಿಳೆಯರು ಮಕ್ಕಳು ಸೇರಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

    ಹೌದು. ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದೀಪಾವಳಿ ಹಿನ್ನೆಲೆ ಸಾರ್ವಜನಿಕರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮ ಇದಾಗಿತ್ತು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಕ್ರೀಡಾಂಗಣದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾಗಿದ್ದ ಹಿನ್ನೆಲೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಕೆಲವರಿಗೆ ಉಸಿರಾಟದಲ್ಲಿ ಸಮಸ್ಯೆ ಉಂಟಾಗಿದ್ದು, ಅಸ್ವಸ್ಥರಾಗಿದ್ದಾರೆ. ಪುಟ್ಟ ಪುಟ್ಟ ಮಕ್ಕಳನ್ನು ಕಂಕುಳಲ್ಲಿ ಹೊತ್ತುಬಂದಿದ್ದ ಕೆಲವರು ನೀರು ಸಿಗದೇ ಪರದಾಡಿದ್ದಾರೆ. ಇದರಿಂದ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದೆ.

    ಸದ್ಯ ಅಸ್ವಸ್ಥರನ್ನ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.

  • ಜಾತಿ, ಧರ್ಮದ ಹೆಸರಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು; ಮಂಗಳೂರಲ್ಲಿ ಸಿದ್ರಾಮಯ್ಯ ಭಾಷಣ

    ಜಾತಿ, ಧರ್ಮದ ಹೆಸರಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು; ಮಂಗಳೂರಲ್ಲಿ ಸಿದ್ರಾಮಯ್ಯ ಭಾಷಣ

    – ಯಾವ ಧರ್ಮವೂ ಇನ್ನೊಬ್ಬರನ್ನ ದ್ವೇಷ ಮಾಡಿ ಅಂತ ಹೇಳಲ್ಲ
    – ಸೌಹಾರ್ದತೆಯ ಪಾಠ ಹೇಳಿದ ಸಿಎಂ

    ಮಂಗಳೂರು: ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು. ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ ಎಂದು ಪುತ್ತೂರು ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah,) ಹೇಳಿದರು.

    ಪುತ್ತೂರು ಶಾಸಕ ಅಶೋಕ್ ರೈ (Ashok Rai) ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ʻಅಶೋಕ ಜನಮನ -2025ʼ ಹಾಗೂ ದೀಪಾವಳಿ ಪ್ರಯುಕ್ತ ವಸ್ತ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಜನರಿಗೆ ಸೌಹಾರ್ದತೆಯ ಪಾಠ ಮಾಡಿದರು. ಇದನ್ನೂ ಓದಿ: ಮೊದಲ ದಿನ ಸಾಧ್ಯವಾಗದ ಹಾಸನಾಂಬೆ ದರ್ಶನ – ಇಂದು ಮತ್ತೆ ದೇವಾಲಯಕ್ಕೆ ಬಂದ ಸುಳ್ಯ ಶಾಸಕಿ

    ಕೆಲವರು 5 ಗ್ಯಾರಂಟಿ ಯೋಜನೆ (Guarantee Scheme) ಟೀಕೆ ಮಾಡ್ತಾರೆ. ಸರ್ಕಾರದ ಬಳಿ ದುಡ್ಡಿಲ್ಲ ಅಂತ, ದುಡ್ಡಿಲ್ಲದಿದ್ದರೆ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಕೊಡೋಕೆ ಆಗ್ತಿತ್ತಾ? ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂಬರ್ ವನ್ ಇತ್ತು. ಆದರೆ ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ. ಏಕೆಂದ್ರೆ ಎತ್ತಿಕಟ್ಟೋರ ಮಕ್ಕಳು ಯಾರೂ ಈ ಜಗಳದಲ್ಲಿ ಇರಲ್ಲ. ಮೇಲ್ಜಾತಿ, ಶ್ರೀಮಂತರ ಮಕ್ಕಳು ಯಾರೂ ಸಾಯಲ್ಲ. ನಾನು ಯಾರ ಮಾತನ್ನೂ ಕೇಳಿಲ್ಲ, ಕಮಿಷನರ್, ಎಸ್ಪಿ ದಕ್ಷರನ್ನ ನೇಮಕ ಮಾಡಿದೆ. ಈಗ ಸುಧಾರಣೆ ಆಗಿಲ್ವಾ? ದಕ್ಷ ಅಧಿಕಾರಿಗಳು ಇದ್ರೆ ಬದಲಾವಣೆ ಸಾಧ್ಯ. ಯಾವತ್ತಿಗೂ ನಾವು ಅಮಾಯಕರ ಮಕ್ಕಳನ್ನ ಸಾಯಿಸೋ ಕೆಲಸ ಮಾಡಬಾರದು. ಬೇರೆ ಧರ್ಮದವರನ್ನ ದ್ವೇಷ ಮಾಡೋ ಕೆಲಸ ಮಾಡಬಾರದು, ಹಾಗಾಗಿ ಪ್ರತಿಯೊಬ್ಬ ವ್ಯಕ್ತಿ ಮನುಷ್ಯರಾಗೋಕೆ ಪ್ರಯತ್ನ ಮಾಡಬೇಕು. ಕೋಮು ಸೌಹಾರ್ದತೆ ಇದ್ದರೆ ರಾಜ್ಯ, ಜಿಲ್ಲೆ ಅಭಿವೃದ್ಧಿಯಾಗುತ್ತೆ. ಅದಕ್ಕಾಗಿ ನಾವು ಕೋಮು ಸೌಹಾರ್ದ ಕಾಪಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೌಹಾರ್ದಕ್ಕೆ ವಿಶೇಷ ಗಮನ ಕೊಡಬೇಕು. ಸುಳ್ಳು ಹೇಳಿದ್ರೆ ಕಾನೂನು ತಂದು ಕೇಸ್ ಹಾಕ್ತೀವಿ. ಪ್ರಿಯಾಂಕ್ ಖರ್ಗೆ ಮತ್ತು ಹೆಚ್‌.ಕೆ ಪಾಟೀಲ್ ಆ ಕೆಲಸದಲ್ಲಿ ತೊಡಗಿದ್ದಾರೆ ಎಂದು ಎಚ್ಚರಿಕೆ ನೀಡಿದರು.

    ಅಶೋಕ್ ರೈ ಶಾಸಕರಾಗಿ ಬಹಳ ಉತ್ತಮ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದಾರೆ. ಜೊತೆಯಲ್ಲಿ ಟ್ರಸ್ಟ್ ವತಿಯಿಂದ ದೀಪಾವಳಿ ಸಂಧರ್ಭದಲ್ಲಿ ವಸ್ತ್ರದಾನ ಮಾಡ್ತಾ ಇದ್ದಾರೆ. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಇವತ್ತು ಒಂದು ಲಕ್ಷ ಜನರಿಗೆ ದಾನ ಮಾಡ್ತಾ ಇದ್ದಾರೆ. ಅಶೋಕ್ ರೈ ಸಮಾಜದ ಶ್ರೀಮಂತ ಜನರಿಗೆ ಮಾರ್ಗದರ್ಶಕರಾಗಲಿ, ಮನುಷ್ಯ ತಾನು ಗಳಿಸಿದ್ದನ್ನ ನಿರ್ಗತಿಕರಿಗೆ ಹಂಚುವುದು ಬಹಳ ಒಳ್ಳೆಯ ಕೆಲಸ. ಸಮಾಜದಲ್ಲಿ ಶ್ರೀಮಂತರು, ಬಡವರು, ಮೇಲ್ಜಾತಿ, ಕೆಳ ಜಾತಿ ಎಲ್ಲರೂ ಇದ್ದಾರೆ. ಸಮಾನತೆಯ ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದೇ ಇರೋರಿಗೆ ಸಹಾಯ ಮಾಡಬೇಕು. ಬಸವಣ್ಣ ಕೂಡ ಕಾಯಕ ಮತ್ತು ದಾಸೋಹದ ಬಗ್ಗೆ ಹೇಳಿದ್ದಾರೆ. ನಮ್ಮಲ್ಲಿ ಅಸಮಾನತೆ, ತಾರತಮ್ಯ ಇದೆ, ಇಲ್ಲಿ ಸಮ ಸಮಾಜ ನಿರ್ಮಾಣ ಆಗಬೇಕು. ನಾನು ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಿಸ್ತಾ ಇದ್ದೇನೆ. ಸಂವಿಧಾನ ಅರಿಯದೇ ಇದ್ದರೆ ಸಮ ಸಮಾಜ ನಿರ್ಮಾಣ ಅಸಾಧ್ಯ ಎಂದು ತಿಳಿಸಿದರು. ಇದನ್ನೂ ಓದಿ: ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತುತಂದ ಅಗ್ನಿಶಾಮಕ ಸಿಬ್ಬಂದಿ

    ಯಾವ ಧರ್ಮವೂ ದ್ವೇಷಿಸಿ ಅನ್ನಲ್ಲ
    ನಮ್ಮ ಸಮಾಜದಲ್ಲಿ ಅನೇಕ ಜಾತಿ ಮತ್ತು ಧರ್ಮಗಳಿವೆ. ಯಾವ ಧರ್ಮವೂ ದ್ವೇಷ ಮಾಡಿ ಅಂತ ಯಾರಿಗೂ ಹೇಳಲ್ಲ. ಪ್ರತಿಯೊಬ್ಬನ ಪ್ರೀತಿಸಿ ಅಂತ ಹೇಳುತ್ತೆ, ವೈವಿಧ್ಯತೆಯಲ್ಲಿ ಏಕತೆ ಮಾಡಿಕೊಳ್ಳಬೇಕು. ಧರ್ಮದ ತತ್ವ, ಆದರ್ಶ ಪಾಲನೆ ಮಾಡಲಿ, ಸರ್ವ ಜನಾಂಗದ ಶಾಂತಿಯ ತೋಟದ ಬದಲು ದ್ವೇಷ, ಕಚ್ಚಾಟ ಇರಬಾರದು ಎಂದು ಹೇಳಿದರು.

  • ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾ ಮೂರ್ತಿ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾ ಮೂರ್ತಿ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಬೆಂಗಳೂರು: ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ (Narayana Murthy), ಸುಧಾಮೂರ್ತಿ (Sudha Murty) ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ X ನಲ್ಲಿ ಕಿಡಿಕಾರಿರುವ ಜೆಡಿಎಸ್ ಸಿದ್ದರಾಮಯ್ಯ, ಡಿಕೆಶಿವಕುಮಾರ್, ಹರಿಪ್ರಸಾದ್ ವಿರುದ್ದ ಕಿಡಿಕಾರಿದೆ.

    X ಪೋಸ್ಟ್‌ನಲ್ಲಿ ಏನಿದೆ?
    ಕಾಂಗ್ರೆಸ್ ಸರ್ಕಾರ (Congress Government) ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆ ಮಾಹಿತಿಗಳು ಸೋರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆ. ಸಮೀಕ್ಷೆಯಲ್ಲಿ ಜನರಿಂದ ಸಂಗ್ರಹಿಸಿದ ಮಾಹಿತಿಗಳು ಎಷ್ಟು ಸುರಕ್ಷಿತ? ಇನ್ಫೋಸಿಸ್‌ ಸಂಸ್ಥೆಯ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ಅವರು ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ನೀಡಿದ್ದ ಸ್ವಯಂ ದೃಢೀಕರಣ ಪತ್ರವನ್ನು, ಸಾರ್ವಜನಿಕಗೊಳಿಸಿ ಮಾಹಿತಿ ಸೋರಿಕೆ ಮಾಡಲಾಗಿದೆ.

    ಇದು ನ್ಯಾಯಾಂಗ ನಿಂದನೆ ಆಗುವುದಿಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೇ. ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆಗೆ ಬಿಟ್ಟಿದ್ದು, ಇದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

    ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಗೌಪ್ಯವಾಗಿಡಬೇಕು ಮತ್ತು ಅದರ ದುರ್ಬಳಕೆಯನ್ನು ತಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ‌ ನೀಡಿದೆ. ಜಾತಿಗಣತಿಯಲ್ಲಿ ಭಾಗವಹಿಸದವರು “ದೇಶದ್ರೋಹಿಗಳು” ಎಂಬ ಹಣೆಪಟ್ಟಿಯನ್ನು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಕಟ್ಟಿದ್ದಾರೆ.

    ಮಾಹಿತಿ ಸೋರಿಕೆ ಮಾಡಿ ಸುಧಾಮೂರ್ತಿ ಮತ್ತು ಅವರ ಕುಟುಂಬದವರ ತೇಜೋವಧೆ ಮಾಡಲಾಗುತ್ತಿದೆ. ಈ‌ ದುಷ್ಕೃತ್ಯದಲ್ಲಿ ಕಾಂಗ್ರೆಸ್ಸಿನ ನಾಯಕರೇ ಮುಂಚೂಣಿಯಲ್ಲಿ ಇದ್ದಾರೆ. ಮಾಹಿತಿ ಸೋರಿಕೆ ಸರ್ಕಾರದ ಪ್ರಾಯೋಜಿತ ಕೃತ್ಯ ಎಂಬ ಶಂಕೆಗೆ ಇದು ಪುಷ್ಠಿ ನೀಡಿದೆ. ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯ ವಿಶ್ವಸಾರ್ಹತೆ ಬಗ್ಗೆ ಅನುಮಾನ ಪಡುವಂತಾಗಿದೆ. ಸಮೀಕ್ಷೆಯು ಪಾರದರ್ಶಕವಾಗಿಲ್ಲ. ಮಾಹಿತಿಯೂ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿ ಅಂತ ಕಿಡಿಕಾರಿದೆ.

  • ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, 1 ಗಂಟೆಗೂ ಹೆಚ್ಚುಕಾಲ ಮಾತುಕತೆ

    ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, 1 ಗಂಟೆಗೂ ಹೆಚ್ಚುಕಾಲ ಮಾತುಕತೆ

    – ತಡರಾತ್ರಿ ಎಐಸಿಸಿ ಅಧ್ಯಕ್ಷರನ್ನ ಭೇಟಿಯಾದ ಡಿಕೆಶಿ

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನ ಭೇಟಿಯಾಗಿದ್ದಾರೆ.

    ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ತಡರಾತ್ರಿ ಡಿಕೆಶಿ (DK Shivakumar) ಭೇಟಿಯಾಗಿದ್ದು, ಸುಮಾರು 1 ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ. ಹೀಗಾಗಿ ನವೆಂಬರ್‌ ಕ್ರಾಂತಿ ಬದಲಿಗೆ ಈ ಶಾಂತಿಯ ಬೆಳವಣಿಗೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: 24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ

    ಮಾತುಕತೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿಗೆ ಅಭಯ ನೀಡಿದ್ದಾರೆಂದು ತಿಳಿದುಬಂದಿದೆ. ಪಕ್ಷ‌ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಸಹಲಗೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ; ಸೇವೆ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

    ಹೈಕಮಾಂಡ್‌ ರಾಜ್ಯದ ಎಲ್ಲಾ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಬಿಹಾರ ಚುನಾವಣೆ ಮುಗಿದ ಬಳಿಕ ಎಲ್ಲರೂ ಕುಳಿತು ಮಾತನಾಡೋಣ. ಎಲ್ಲಾ ವಿಚಾರದ ಬಗ್ಗೆ ಒಂದು ಕ್ಲ್ಯಾರಿಟಿಗೆ ಬರೋಣ. ನಿಮ್ಮ ಪಕ್ಷ‌ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ. ಹೈಕಮಾಂಡ್ ಮನಸ್ಸಿನಲ್ಲೂ ಒಂದಷ್ಟು ವಿಚಾರಗಳಿವೆ ಎಲ್ಲವೂ ಬಿಹಾರ ಚುನಾವಣೆ ಬಳಿಕ ಮಾತನಾಡೋಣ ಎಂದು ಖರ್ಗೆ ಅವರು ಅಭಯ ನೀಡಿದ್ದಾರೆ.  ಇದನ್ನೂ ಓದಿ: ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ

    ಯೆಸ್‌. ಬಿಹಾರ ವಿಧಾನಸಭಾ ಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರಕ್ಕೆ ಮುಂದಾಗೋ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಬ್ಬರೂ ಒಪ್ಪಿದ ಪಕ್ಷದಲ್ಲಿ ಸಂಪುಟ ಪುನಾರಚನೆ ಮಾಡೋ ಸಾಧ್ಯತೆಗಳಿವೆ. ಸುಮಾರು 17ರಿಂದ 18 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪ್ರಾದೇಶಿಕ ಸಮಾನತೆ, ಶಾಸಕರ ಹಿರಿತನ, ಜಾತಿ ಲೆಕ್ಕಾಚಾರ, ಸ್ಥಳಿಯ ನಾಯಕತ್ವ ಎಲ್ಲವನ್ನೂ ಪರಿಗಣಿಸಿ ಹಿರಿಯ ಶಾಸಕರಿಗೆ ಆದ್ಯತೆ ಕೊಡೋ ಸಾಧ್ಯತೆಗಳಿವೆ.

  • ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ; ಸೇವೆ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

    ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ; ಸೇವೆ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು (Nephro Urology Institute) ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ.

    ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ ನೆಫ್ರೋ-ಯುರಾಲಜಿ ಸಂಸ್ಥೆ 160 ಹಾಸಿಗೆ ಸಾಮರ್ಥ್ಯದೊಂದಿಗೆ 2007ರಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಸಂಸ್ಥೆಯ ಘಟಕವನ್ನು ಸ್ಥಾಪಿಸಿ ಸೇವೆಯನ್ನು ನೀಡುತ್ತಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಬಾಂಬ್ – ಡಿಸೆಂಬರ್‌ ಒಳಗಡೆ ಬಿಡುಗಡೆಗೆ ಆಗ್ರಹ

    ಈ ಸಂಸ್ಥೆ ದೇಶದ ಅಗ್ರ 10 ವಿಶೇಷ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೀಗ ಸಂಸ್ಥೆಯು ಸುರಕ್ಷತೆ ಮತ್ತು ಅತ್ಯುತ್ತಮ ವೈದ್ಯಕೀಯ ಗುಣಮಟ್ಟಕ್ಕೆ ಎನ್ಎಬಿಎಚ್‌ ನೀಡುವ ಪ್ರಮಾಣ ಪತ್ರ ಪಡೆದುಕೊಂಡಿರುವುದು ಸಂಸ್ಥೆಯ ಗುಣಮಟ್ಟದ ಸೇವೆಗೆ ದೊರೆತಿರುವ ರಾಷ್ಟ್ರೀಯ ಮಾನ್ಯತೆಯಾಗಿದೆ.

    ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣ ಪತ್ರವನ್ನು ತಮ್ಮ ಗೃಹ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನೆಫ್ರೋ ಯೂರೋಲಜಿ ಸಂಸ್ಥೆಯ ನಿರ್ದೇಶಕ ಆರ್.ಎಂ. ಶಿವಲಿಂಗಯ್ಯ, ಸ್ಥಾಪಕ ನಿರ್ದೇಶಕ ಡಾ. ಜಿ.ಕೆ. ವೆಂಕಟೇಶ್ ಮತ್ತಿತರ ಗಣ್ಯರು ಹಾಜರಿದ್ದರು. ಇದನ್ನೂ ಓದಿ: ಇನ್ಫೋಸಿಸ್‌ನವ್ರು ಏನ್ ಬಹಳ ಬೃಹಸ್ಪತಿಗಳಾ?: ಜಾತಿಗಣತಿಯಲ್ಲಿ ಭಾಗವಹಿಸದ್ದಕ್ಕೆ ಸಿಎಂ ಟಾಂಗ್

    ಈ ಸಂದರ್ಭದಲ್ಲಿ ಸಂಸ್ಥೆಯ ಸೇವೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಅವರು, ಗುಣಮಟ್ಟದ ಆರೋಗ್ಯ ಸೇವೆಯನ್ನು ಪ್ರತಿಯೊಬ್ಬರಿಗೂ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ನೆಫ್ರೋ ಯುರಾಲಜಿಯಂತಹ ಸಂಸ್ಥೆಗಳು ರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.

    ಇಂತಹ ರಾಷ್ಟ್ರೀಯ ಮನ್ನಣೆಯ ಸಂಸ್ಥೆಗಳಲ್ಲಿ ಬಡ ಜನರು ಸಹ ಮೂತ್ರಾಂಗ ಚಿಕಿತ್ಸೆಯ ಅತ್ಯುನ್ನತ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಈ ಸಂಸ್ಥೆಯಲ್ಲಿ ಕಡು ಬಡವ/ನಿರ್ಗತಿಕ/ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

  • ಇನ್ಫೋಸಿಸ್‌ನವ್ರು ಏನ್ ಬಹಳ ಬೃಹಸ್ಪತಿಗಳಾ?: ಜಾತಿಗಣತಿಯಲ್ಲಿ ಭಾಗವಹಿಸದ್ದಕ್ಕೆ ಸಿಎಂ ಟಾಂಗ್

    ಇನ್ಫೋಸಿಸ್‌ನವ್ರು ಏನ್ ಬಹಳ ಬೃಹಸ್ಪತಿಗಳಾ?: ಜಾತಿಗಣತಿಯಲ್ಲಿ ಭಾಗವಹಿಸದ್ದಕ್ಕೆ ಸಿಎಂ ಟಾಂಗ್

    ಮೈಸೂರು: ಇನ್ಫೋಸಿಸ್‌ನವರು (Infosys) ಏನು ಬಹಳ ಬೃಹಸ್ಪತಿಗಳಾ ಎಂದು ಜಾತಿಗಣತಿ ಸಮೀಕ್ಷೆಗೆ ಒಪ್ಪದ ನಾರಾಯಣ ಮೂರ್ತಿ ದಂಪತಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಟಾಂಗ್ ಕೊಟ್ಟರು.

    ನಗರದಲ್ಲಿ ಮಾತನಾಡಿದ ಸಿಎಂ, ಇದು ಹಿಂದುಳಿದ ವರ್ಗದ ಜಾತಿ ಸಮೀಕ್ಷೆ ಅಲ್ಲ. ಎಲ್ಲಾ ಜಾತಿಗಳ ಸಮೀಕ್ಷೆ. ಇದನ್ನ ಅರ್ಥ ಮಾಡಿಕೊಳ್ಳದಿದ್ದರೆ ನಾವು ಏನು ಮಾಡುವುದು? ಇದು ಅಜ್ಞಾನವೋ ಉದ್ದೇಶಪೂರ್ವಕವೊ ಅವರಿಗೆ ಗೊತ್ತು. ಮೇಲ್ಜಾತಿಯವರು ಗೃಹಜ್ಯೋತಿ ಪಡೆಯುತ್ತಿಲ್ವಾ? ಮೇಲ್ಜಾತಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಓಡಾಡುತ್ತಿಲ್ವಾ? ಇದು ಕೂಡ ಅದೇ ರೀತಿ. ಎಲ್ಲಾ ಜಾತಿಯವರಿಗೆ ಮಾಡುತ್ತಿರುವ ಸಮೀಕ್ಷೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಬಾಂಬ್ – ಡಿಸೆಂಬರ್‌ ಒಳಗಡೆ ಬಿಡುಗಡೆಗೆ ಆಗ್ರಹ

    ಬಿಹಾರ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಯಾವ ಪರಿಣಾಮ ಬೀರುವುದಿಲ್ಲ. ಬಿಹಾರದಲ್ಲಿ ನಮ್ಮ ಮೈತ್ರಿ ಒಕ್ಕೂಟ ಗೆಲುವು ಪಡೆಯುವ ಸಾಧ್ಯತೆ ಇದೆ. ನನ್ನ ಪ್ರಚಾರದ ಅಗತ್ಯ ಇದ್ರೆ ನಾನು ಪ್ರಚಾರಕ್ಕೆ ಹೋಗುತ್ತೇನೆ. ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಬ್ರಾಂತಿಯೂ ಇಲ್ಲ. ಕ್ರಾಂತಿ ಕ್ರಾಂತಿ ಎಂದು ಹೇಳುವವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಸುಮ್ಮನೆ ಏನೇನೊ ಹೇಳುತ್ತಾರೆ. ಮಾಧ್ಯಮದವರು ಆ ಹೇಳಿಕೆಗಳಿಗೆ ಪ್ರಚಾರ ಕೊಡುವುದನ್ನ ನಿಲ್ಲಿಸಲಿ. ಆಗ ಅವರೇ ಸುಮ್ಮನಾಗುತ್ತಾರೆ ಎಂದು ತಿಳಿಸಿದರು.

    ಐಟಿ ಕಂಪನಿಗಳು ಆಂಧ್ರ ಪಾಲಾದ ಬಗ್ಗೆ ಮಾತನಾಡಿ, ಆಯಾ ಕಂಪನಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ರಾಜ್ಯಗಳನ್ನ ಆಯ್ಕೆ ಮಾಡಿಕೊಳ್ಳುತ್ತಾರೆ. ಒಂದು ಕಂಪನಿ ಬೇರೆ ರಾಜ್ಯಕ್ಕೆ ಹೋದ ಕೂಡಲೇ ಇಲ್ಲಿನ ವ್ಯವಸ್ಥೆ ಸರಿ ಇಲ್ಲ ಎಂದು ಹೇಳುವುದು ತಪ್ಪು. ಹೂಡಿಕೆಗಳ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಹಾಗಾದರೆ ಅವರೆಲ್ಲ ಯಾಕೆ ನಮ್ಮಲ್ಲಿ ಉಳಿದುಕೊಂಡರು? ಆಂಧ್ರ ಐಟಿ ಸಚಿವರು ಟ್ವೀಟ್ ಮಾಡಿದ್ದು ನಮಗೆ ಗೊತ್ತಿಲ್ಲ. ಇದನ್ನ ಯಾರೋ ಸೃಷ್ಟಿ ಮಾಡುತ್ತಿರಬಹುದು ಎಂದರು. ಇದನ್ನೂ ಓದಿ: ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್‌ ಪತ್ರ

    5 ವರ್ಷ ನಮ್ಮ ತಂದೆಯೇ ಸಿಎಂ ಆಗಿರುತ್ತಾರೆ ಎಂಬ ಪುತ್ರನ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅವನನ್ನೇ ಉಳಿದ ವಿಚಾರ ಕೇಳಿಕೊಳ್ಳಿ ಎಂದರು. ಗುತ್ತಿಗೆದಾರರ ಸಂಘದಿಂದ ಕಮಿಷನ್ ಆರೋಪ ಕುರಿತು ಮಾತನಾಡಿ, ಅದು ಸತ್ಯವಾಗಿದ್ರೆ ಅವರಿಗೆ ಕೋರ್ಟ್ಗೆ ಹೋಗುವುದಕ್ಕೆ ಹೇಳಿ. ಯಾರೋ ಇದನ್ನ ಅವರ ಬಳಿ ಹೇಳಿಸುತ್ತಿದ್ದಾರೆ ಎಂದರು.

    ಸರ್ಕಾರಿ ಶಾಲೆ, ಕಚೇರಿ ಜಾಗಗಳಲ್ಲಿ ನಿರ್ಬಂಧ ಹಾಕುತ್ತಿರುವುದು ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಅನ್ವಯ ಅಲ್ಲ. ಎಲ್ಲ ಖಾಸಗಿ ಸಂಘ-ಸಂಸ್ಥೆಗಳಿಗೂ ಅನ್ವಯ ಆಗುತ್ತದೆ. ಈ ಸುತ್ತೋಲೆ ಹೊರಡಿಸಿರೋದೆ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ. ಬಿಜೆಪಿಯವರೇ ಮಾಡಿ, ಈಗ ವಿರೋಧ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

  • ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್‌ ಪತ್ರ

    ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬೇಡಿ – ಸರ್ಕಾರಕ್ಕೆ ಯತ್ನಾಳ್‌ ಪತ್ರ

    ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಪತ್ರ ಬರೆದಿದ್ದಾರೆ.

    ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಯತ್ನಾಳ್‌ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ

    ಗುರುವಾರ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ಜಾಗಗಳಲ್ಲಿ ಸಂಘ, ಸಂಸ್ಥೆಗಳ ಚಟುವಟಿಕೆಯನ್ನು ನಿಷೇಧಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.

  • ಸಿದ್ದರಾಮಯ್ಯ ಜೊತೆ ಮುನಿರತ್ನ ಆಪ್ತ ಮಾತು – ಭಾಷಣದ ಆರಂಭದಲ್ಲೇ ನೆಚ್ಚಿನ ಸಿಎಂ ಎಂದ ಶಾಸಕ

    ಸಿದ್ದರಾಮಯ್ಯ ಜೊತೆ ಮುನಿರತ್ನ ಆಪ್ತ ಮಾತು – ಭಾಷಣದ ಆರಂಭದಲ್ಲೇ ನೆಚ್ಚಿನ ಸಿಎಂ ಎಂದ ಶಾಸಕ

    – ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮುನಿರತ್ನ; ವೇದಿಕೆಯಲ್ಲೇ ಕಿಚಾಯಿಸಿದ ಸಿದ್ರಾಮಯ್ಯ
    – ಗನ್‌ಮ್ಯಾನ್‌ ಕೊಡುವಂತೆ ಶಾಸಕರ ಬೇಡಿಕೆ

    ಬೆಂಗಳೂರು: ಇಲ್ಲಿನ ಮಲ್ಲತಹಳ್ಳಿಯ ಕಲಾಗ್ರಾಮದಲ್ಲಿ ನಡೆದ ʻಕನಕ ಕಾವ್ಯ ದೀವಿಗೆ ಕನ್ನಡ ನಾಡ ನುಡಿ ಉತ್ಸವʼ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ, ಸಿಎಂ ಸಿದ್ದರಾಮಯ್ಯ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಸಂತೋಷದಿಂದಲೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ, ಸಿಎಂ ಜೊತೆಗೆ ಆಪ್ತ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಆಗಮಿಸಿದಾಗ ಮುನಿರತ್ನ ಅವರು ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

    ಬಳಿಕ ವೇದಿಕೆಯಲ್ಲಿ ಮಾತನಾಡಿದ ಶಾಸಕರು, ಭಾಷಣದ ಆರಂಭದಲ್ಲಿ ನೆಚ್ಚಿನ ಸಿಎಂ ಸಿದ್ದರಾಮಯ್ಯ ಎಂದು ಸಂಬೋಧನೆ ಮಾಡಿದರು. ಅಣ್ಣನ ನೋಡಬೇಕು ಎಂದು 5 ಗಂಟೆಗೆ ಬಂದಿದ್ದೆ ಎಂದು ಸಿದ್ದರಾಮಯ್ಯ ಅವರನ್ನುದ್ದೇಶಿಸಿ ಮಾತನಾಡಿದ್ರು.

    ಗನ್‌ ಮ್ಯಾನ್‌ಗೆ ಬೇಡಿಕೆ
    ಮುಂದುವರಿದು… ಜ್ಯೋತಿ ಹೊರತಾಗಿ ಬೆಂಕಿಯ ಜೊತೆ ಬದುಕೊಕಾಗಲ್ಲ. ಇವತ್ತು ಜ್ಯೋತಿಗೆ ನಾವು ಎಣ್ಣೆ ಹಾಕ್ತೇವೆ. ಆದ್ರೆ ಬೆಂಕಿಗೆ ಫೈರ್ ಇಂಜಿನ್ ತರ್ತೇವೆ. ಸಿದ್ದರಾಮಯ್ಯನವಬರೇ ನೀವು ಜ್ಯೋತಿ ಇದ್ದಂತೆ ಯಾವಾಗಲೂ ಬೆಳಗುತ್ತಿರಬೇಕು, ಒಳ್ಳೆಯ ಕೆಲಸ ಮಾಡ್ತಿದ್ದೀರಿ. ನನಗೆ ಸಂತಾಪ ಸೂಚಿಸಿದಾಗ ಸಿದ್ದರಾಮಯ್ಯ ಜೊತೆ ಇದ್ರು ಎಂದು ಹೇಳ್ತಾರಲ್ಲ. ಅಂತಹ ಒಳ್ಳೆಯ ನಾಯಕರೊಂದಿಗೆ ಇದ್ದಿದ್ದಕ್ಕೆ ನನಗೆ ಸಂತೋಷ ಇದೆ. ಅಣ್ಣ ನಮ್ಮ ಕ್ಷೇತ್ರದಲ್ಲಿ ಹಲವು ಕೆಲಸ ನಿಂತೋಗಿದೆ. ನನ್ನ ಕ್ಷೇತ್ರದ ಕೆಲವು ಕೆಲಸ ನಿಂತು ಹೋಗಿದೆ. ನನ್ನ ಕ್ಷೇತ್ರಕ್ಕೆ ಸಹಾಯ ಮಾಡಿ, ನನ್ನ ಕ್ಷೇತ್ರಕ್ಕೆ ಅನುದಾನ ಕೊಡಿ. ಗನ್ ಮ್ಯಾನ್ ಕೊಟ್ಟಿಲ್ಲ ನನಗೆ, ನಾನು ಓಡಾಡಬಾರದು ಎಂದು ಗನ್ ಮ್ಯಾನ್ ಕೊಟ್ಟಿಲ್ಲ. ಮನೆಲಿ ಇರಲಿ, ಹೊರಗೆ ಬಂದ್ರೆ ಮೊಟ್ಟೆಯಲ್ಲಿ ಹೊಡಿಬಹುದು ಎಂದು ಹೀಗೆ ಮಾಡಿದ್ದಾರೆ. ಪ್ರಜಾಪ್ರಭುತ್ವ ರಾಜ್ಯ ಇದು ನನಗೆ ಗನ್ ಮ್ಯಾನ್ ಕೊಡಿ ಎಂದು ಬೇಡಿಕೆಯಿಟ್ಟರು.

    ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಏಯ್ ಮುನಿರತ್ನ, ವೃಷಭಾವತಿ ಪ್ರೊಡಕ್ಷನ್, ಮುನಿರತ್ನ 2013-18ರ ತನಕ ಒಳ್ಳೆಯವನಾಗಿದ್ದ ಎನ್ನುತ್ತಿದ್ದಂತೆ ಬೆಂಬಲಿಗರೂ ಈಗಲೂ ಒಳ್ಳೆಯವರೇ ಎಂದರು. ಅದಕ್ಕೆ ಸಿಎಂ ನಗುತ್ತಲೇ ಓಹೋ ಈಗಲೂ ಒಳ್ಳೆಯವನಾ..? ಆಯ್ತು. ಆಗ ನಾನು ಸಹಾಯ ಮಾಡಿದ್ದೆ.. ನೀನು ಅದನ್ನ ಹೇಳೋದೇ ಇಲ್ಲ. ನಮ್ಮನ್ನ ಬಿಟ್ಟು ಅಲ್ಲಿಗೆ ಹೋಗ್ಬಿಟ್ಟ ಎಂದು ಕಿಚಾಯಿಸಿದರು.