Tag: ಸಿದ್ದಲಿಂಗಯ್ಯ

  • ಬಂಗಾರದ ಮನುಷ್ಯ ಚಿತ್ರಕ್ಕೆ 50 ವರ್ಷ : ಸಿನಿಮಾ ಆಗಿದ್ದು ಹೇಗೆ? ಕುತೂಹಲದ ಟಿಪ್ಪಣಿ

    ಬಂಗಾರದ ಮನುಷ್ಯ ಚಿತ್ರಕ್ಕೆ 50 ವರ್ಷ : ಸಿನಿಮಾ ಆಗಿದ್ದು ಹೇಗೆ? ಕುತೂಹಲದ ಟಿಪ್ಪಣಿ

    ಡಾ.ರಾಜ್ ಕುಮಾರ್ ಅಭಿನಯದ, ಸಿದ್ಧಲಿಂಗಯ್ಯ ನಿರ್ದೇಶನದ ‘ಬಂಗಾರದ ಮನುಷ್ಯ’ ಸಿನಿಮಾ ಬಿಡುಗಡೆ ಆಗಿದ್ದು 31.03. 1972ರಲ್ಲಿ. ಆ ಸಿನಿಮಾ ರಿಲೀಸ್ ಆಗಿ ಇಂದಿಗೆ 50 ವರ್ಷಗಳು ತುಂಬಿವೆ. ಈ ನೆಪದಲ್ಲಿ ಹಿರಿಯ ಪತ್ರಕರ್ತ ಮಹೇಶ್ ದೇವಶೆಟ್ಟಿ ಅವರು ಬರೆದ ‘ಮೇಕಿಂಗ್ ಆಫ್ ಬಂಗಾರದ ಮನುಷ್ಯ’ ಪುಸ್ತಕದ ಆಯ್ದ ಭಾಗ ಇಲ್ಲಿದೆ.

    ಕೆಲವರು ಮುಖ ಸ್ತುತಿಗೆ ಮತ್ತು ಗೌಡರನ್ನು ಓಲೈಸಲು ಎದುರಿಗೆ ಸಿನಿಮಾ ಚೆನ್ನಾಗಿದೆ ಎಂದು ಹೇಳಿದರು. ವರದಪ್ಪ ಹೆಚ್ಚು ಮಾತಾಡುತ್ತಿರಲಿಲ್ಲ. ‘ಚೆನ್ನಾಗಿದೆ…ಚೆನ್ನಾಗಿದೆ…’ ಎಂದು ಮಾತು ಮುಗಿಸಿದರು. ಆದರೆ ಯಾವಾಗ ರಾಜ್ ಕೂಡ ಇದು ಐದಾರು ವಾರದ ಸಿನಿಮಾ ಎಂದು ಹೇಳಿದರೋ ಗೌಡರಿಗೆ ನಿಜಕ್ಕೂ ಗೊಂದಲ ಮತ್ತು ಆತಂಕ ಶುರುವಾಯಿತು. ರಾಜ್ ಹಾಗೆ ಹೇಳಿದ್ದರಲ್ಲಿ ತಪ್ಪೇನೂ ಇರಲಿಲ್ಲ. ಅದಕ್ಕೆ ಕಾರಣ ಇಲ್ಲಿದೆ ಕೇಳಿ. ಅಲ್ಲಿವರೆಗೆ ರಾಜ್ ನಟಿಸಿದ್ದ ಚಿತ್ರಗಳಾದರೂ ಎಂಥದ್ದೆಂದು ನೀವೇ ನೋಡಿ. ಕಿಲಾಡಿ ರಂಗ, ಭೂಪತಿ ರಂಗ, ಭಲೇ ಹುಚ್ಚ, ಭಲೇ ಜೋಡಿ, ಎಮ್ಮೆ ತಮ್ಮಣ್ಣ , ಬೀದಿ ಬಸವಣ್ಣ, ಗೋವಾದಲ್ಲಿ ಸಿಐಡಿ 999…ಇದರಲ್ಲಿ ಎಂಥಾ ಕಿಕ್ ಇದೆ ಎಂದು ನಿಮಗೇ ಗೊತ್ತಾಗುತ್ತದೆ. ಅದರಲ್ಲೂ ಆ ಚಿತ್ರಗಳಲ್ಲಿ ರಾಜ್ ಸಕತ್ತಾಗಿ ಫೈಟ್ ಮಾಡಿ ವಿಲನ್‌ಗಳನ್ನು ಉರುಳಿಸುತ್ತಿದ್ದರು. ರೊಮ್ಯಾಂಟಿಕ್ ದೃಶ್ಯಗಳಲ್ಲಿ ಕಚಗುಳಿ ಇಡುತ್ತಿದ್ದರು, ನಾಯಕಿಗೆ ತರಲೆ ಮಾಡುವ ಮೂಲಕ ನಗಿಸುತ್ತಿದ್ದರು, ‘ ಭೂಪತಿ ರಂಗ ನಾನು…’ ಎಂದು ಹಾಡುತ್ತಾ ಬಂದರೆ ಸಾಕು ಜನರು ಎದ್ದು ನಿಂತು ಕೇಕೆ ಹಾಕುತ್ತಿದ್ದರು. ಆದರೆ ಬಂಗಾರದ ಮನುಷ್ಯದಲ್ಲಿ ಇಂಥದ್ದು ಏನೂ ಇರಲಿಲ್ಲ. ಗಂಭೀರವಾದ ರಾಜೀವಪ್ಪನ ಪಾತ್ರದಲ್ಲಿ ಹೆಚ್ಚು ಕಾಮಿಡಿ ತುರುಕಲು ಆಗುತ್ತಿರಲಿಲ್ಲ. ನಾಯಕಿಯೊಂದಿಗಿನ ರೊಮ್ಯಾನ್ಸ್ ದೃಶ್ಯಗಳೂ ಸರಳವಾಗಿದ್ದವು. ಕಲರ್ ಫುಲ್ ಡ್ರೆಸ್‌ನಲ್ಲಿ ರಾಜ್ ಮಿಂಚುತ್ತಾರೆಂದರೆ ಅದೂ ಇಲ್ಲ. ಹೆಚ್ಚು ಕಮ್ಮಿ ಲುಂಗಿ, ಪಂಚೆ, ಅಂಗಿಯಲ್ಲಿ ಕಾಣಿಸಿಕೊಂಡಿದ್ದರು. ಇದ್ದದ್ದು ಒಂದು ಗದ್ದೆ ಫೈಟು, ಇನ್ನು ಕತೆಯ ವಿಷಯಕ್ಕೆ ಬಂದರೆ ಅದೂ ಅಲ್ಲಿವರೆಗೆ ರಾಜ್ ಮಾಡಿದ ಚಿತ್ರಗಳ ಮಾದರಿಯಲ್ಲಿ ಇರಲಿಲ್ಲ. ಅಕ್ಕನ ಮಕ್ಕಳನ್ನು ಓದಿಸಲು, ಅದೇ ಊರಿನಲ್ಲಿ ನೆಲೆ ನಿಂತು, ಸಾಲ ಮಾಡಿ ತೋಟ ಮಾಡುತ್ತಾರೆ. ಕಲ್ಲು ಬಂಡೆಗಳನ್ನು ಕೊರೆದು ಅದೇ ಮಣ್ಣಲ್ಲಿ ಹಸಿರು ಬೆಳೆಯುತ್ತಾರೆ. ದಿನದಿನದಿಂದ ದಿನಕ್ಕೆ ಬೆಳೆಯುತ್ತಾ ಹೋಗುತ್ತಾರೆ. ಅಕ್ಕನ ಮಕ್ಕಳ ಸಹಿತ ಅವರ ಗೆಳೆಯನನ್ನು ಓದಿಸುತ್ತಾರೆ. ಇನ್ನೊಂದು ಕಡೆ ಅಕ್ಕನ ಗಂಡನಿಗೆ ಇದ್ದ ಇನ್ನೊಂದು ಸಂಬಂಧವನ್ನು ಗುಟ್ಟಾಗಿ ಕಾಪಾಡಿಕೊಂಡು ಬರುತ್ತಾ, ಆರತಿ ಮತ್ತು ಆಕೆಯ ಮಗನಿಗೂ ಹಣದ ಸಹಾಯ ಮಾಡುತ್ತಾರೆ. ಮೊದಲು ಅಕ್ಕನ ಮಕ್ಕಳ ಮದುವೆಯಾಗಲಿ ಆಮೇಲೆ ನನ್ನದು ಎಂದು ಅಲ್ಲಿಯೂ ತ್ಯಾಗವನ್ನು ಮೆರೆಯುತ್ತಾರೆ. ಮದುವೆಯ ಸುಖ ಅನುಭವಿಸುವ ಮುಂಚೆಯೇ ನಾಯಕಿ ಭಾರತಿ ಅಕಸ್ಮಿಕವಾಗಿ ಬಾವಿಗೆ ಬಿದ್ದು ಸಾಯುತ್ತಾರೆ. ಅದೇ ನೋವಿನಲ್ಲಿ ಇರುವಾಗ, ವಜ್ರಮುನಿ , ರಾಜ್‌ಗೆ ಇನ್ನೊಂದು ಅನೈತಿಕ ಸಂಬಂಧ ಇದೆ ಎಂದು ಅನುಮಾನ ಪಡುತ್ತಾರೆ. ವಜ್ರಮುನಿ ಎಂಥಾ ಒಳ್ಳೆಯ ಪಾತ್ರವನ್ನು ಮಾಡಿದರೂ ಕೊನೇ ಗಳಿಗೆಯಲ್ಲಿ ವಿಲನ್ ಆಗಲೇಬೇಕಿತ್ತಲ್ಲ….!

    ‘ನಿನ್ನ ತಮ್ಮನಿಗೆ ಇನ್ನೊಂದು ಸಂಬಂಧ ಇದೆ. ಆತನ ಒಳ್ಳೆತನ ಬೆಳಗಾವಿಯಲ್ಲಿ ಹೊಳೆಯುತ್ತಿದೆ…’ ಎನ್ನುತ್ತಾನೆ. ಅಷ್ಟೇ ಅಲ್ಲ, ನಮ್ಮ ಪಾಲು ಕೊಡು ಎನ್ನುತ್ತಾನೆ. ರಾಜ್ ಕೊಡುವುದಿಲ್ಲ ಎಂದಾಗ, ತಿನ್ನೋದು ನಮ್ಮ ಅನ್ನ , ಉಡೋದು ನಮ್ಮ ಬಟ್ಟೆ…’ ಎಂದು ಹೇಳಿಯೇ ಬಿಡುತ್ತಾನೆ. ಇನ್ನೇನು ಊಟದ ತಟ್ಟೆ ಮುಂದೆ ಕೂತ ರಾಜ್ ತುತ್ತನ್ನು ಬಾಯಿಗೆ ಇಡಬೇಕೆನ್ನಷ್ಟರಲ್ಲಿ ವಜ್ರಮುನಿ ಮಾತು ಎದೆಗೆ ತಿವಿಯುತ್ತದೆ. ತಟ್ಟೆಗೆ ನಮಸ್ಕಾರ ಮಾಡಿ, ಚಪ್ಪಲಿಯನ್ನೂ ಹಾಕಿಕೊಳ್ಳದೆ ರಾಜ್ ಮನೆಯಿಂದ ಹೊರಡುತ್ತಾರೆ. ತೋಟಕ್ಕೆ ಬಂದು ಮಣ್ಣನ್ನು ಕೈಗೆತ್ತಿಕೊಂಡು, ಕಣ್ಣಿಗೆ ಒತ್ತಿಕೊಂಡು ಹೇಳುತ್ತಾರೆ. ‘ ನೀನು ನಂಬಿದವರಿಗೆ ಎಂದೆಂದೂ ಕೈ ಬಿಡುವುದಿಲ್ಲ…ನನ್ನನ್ನು ಕಾಪಾಡಿದಂತೆ, ನಮ್ಮ ಅಕ್ಕ ಮತ್ತು ಮಕ್ಕಳನ್ನು ಕಾಪಾಡು ತಾಯೇ…’ ಎಂದು ಕೈ ಮುಗಿಯುತ್ತಾರೆ. ಮೈಮೇಲಿದ್ದ ಶಾಲ್ ಅನ್ನು ಗಿಡದ ಕೆಳಗೆ ಚಳಿಯಿಂದ ಮಲಗಿದ್ದ ಮುದುಕನಿಗೆ ಹೊದ್ದಿಸಿ….ಸೂರ್ಯಾಸ್ತ ಗುಂಟ ಒಂಟಿ…ಒಂಟಿಯಾಗಿ ಬಹು ದೂರ ದೂರ… ಇದನ್ನೂ ಓದಿ : ಸೆನ್ಸಾರ್ ಪಾಸ್ ಆದ ರಾಕಿಭಾಯ್ : ಕೆಜಿಎಫ್ 1 ಗಿಂತ ಕೆಜಿಎಫ್ 2 ಸಿನಿಮಾ 13 ನಿಮಿಷ ಉದ್ದ

    ಉಫ್…ರಾಜ್ ಈ ಹಿಂದೆ ಮಾಡಿದ ಮಾಸ್ ಎಲಿಮೆಂಟ್‌ಗಳೇ ಇಲ್ಲದ ಈ ಚಿತ್ರವನ್ನು ಜನರು ಒಪ್ಪುತ್ತಾರಾ ? ಹೀಗಾಗಿಯೇ ಎಲ್ಲರಿಗೂ ಇದು ಅನ್ನಿಸಿತ್ತು. ಕ್ಲೈಮ್ಯಾಕ್ಸ್ ಚೇಂಜ್ ಮಾಡಿದರೆ ಜನ ನೋಡಬಹುದು. ಇದಕ್ಕೆ ಸಿದ್ದಲಿಂಗಯ್ಯ ಬಿಲ್ ಕುಲ್ ಒಪ್ಪಲಿಲ್ಲ. ಚಿತ್ರ ಕತೆ ಮಾಡಿದ್ದು ನಾನು, ಜನರಿಗೆ ಇದರ ಮೂಲಕ ಹೊಸ ಸಂದೇಶವನ್ನೂ ಕೊಟ್ಟಿದ್ದೇನೆ. ಎಲ್ಲರನ್ನೂ ಹೊಡೆದು ಮತ್ತೆ ಅದೇ ಮನೆಯಲ್ಲಿ ರಾಜ್ ಇದ್ದರೆ ಇಡೀ ಪಾತ್ರವೇ ಬಿದ್ದು ಹೋಗುತ್ತದೆ. ನಾನಂತೂ ಏನೂ ಮಾಡಲ್ಲ. ಬೇಕಾದರೆ ಇನ್ನೊಬ್ಬರಿಂದ ಕ್ಲೈಮ್ಯಾಕ್ಸ್ ಬದಲಿಸಿ…’ ಎನ್ನುತ್ತಾ ಹೊರಟು ಹೋದರು. ಮುಂದೇನು ಮಾಡಬೇಕು? ಗೌಡರು ಮತ್ತೆ ಮತ್ತೆ ಯೋಚಿಸಿದರು. ಅಷ್ಟರಲ್ಲಿ ಸುದ್ದಿ ಹೊರಬಿದ್ದಾಗಿತ್ತು.‘ ಸಿನಿಮಾ ಅಷ್ಟಕ್ಕಷ್ಟೇ ಅಂತೆ….ಗೌಡರು ಅಂಗಡಿ ಮುಚ್ಚಿಕೊಂಡು ಹೋಗುತ್ತಾರೆ…ಮೊದಲೇ ಹೇಳಿದ್ದೇವು…ಕಲರ್ ಚಿತ್ರವನ್ನು ಮಾಡಬೇಡಿ ಅಂತ…’ ತಲೆಗೊಬ್ಬರು ಮಾತಾಡಿದರು. ನಿರ್ಮಾಪಕ ಚಂದೂಲಾಲ್ ಜೈನ್ ಕೂಡ, ಭಾರ್ಗವ ಬಳಿ ಇದೇ ಮಾತನ್ನು ಕೇಳಿದರು. ಆದರೆ ಭಾರ್ಗವ ಸಿನಿಮಾದ ಬಗ್ಗೆ ಪಕ್ಕಾ ಆಗಿದ್ದರು. ‘ ನೂರು ದಿನ ಓಡುವುದರಲ್ಲಿ ಅನುಮಾನ ಇಲ್ಲ…ಪಕ್ಕಾ…’ ಎಂದರು. ಗಾಂಧಿನಗರದಲ್ಲೂ ಇದೇ ವಿಷಯದ ಬಗ್ಗೆ ಚರ್ಚೆಗಳು ಶುರುವಾದವು. ಆದರೆ ಈಗೇನೂ ಮಾಡುವಂತಿರಲಿಲ್ಲ. ಇದನ್ನೂ ಓದಿ : ಏಪ್ರಿಲ್ 2ಕ್ಕೆ ಗಣೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ಲಾಂಚ್

    ಕೊನೆಗೂ ಗೌಡರು ಜನರ ಮೇಲೆ ಭಾರ ಚಿತ್ರವನ್ನು ತೆರೆ ಕಾಣಿಸಲು ರೆಡಿಯಾದರು. ನಮ್ಮ ಪ್ರಯತ್ನವನ್ನು ನಾವು ಮಾಡಿದ್ದೇವೆ. ದುಡ್ಡನ್ನು ನೀರಿನಂತೆ ಸುರಿದಿದ್ದೇವೆ. ರಾಜ್ ನಾಮಬಲವೂ ಚಿತ್ರಕ್ಕಿದೆ, ಈಸ್ಟ್ ಮನ್ ಕಲರ್ ಚಿತ್ರ ಎನ್ನುವುದು ಜನರನ್ನು ಖಂಡಿತ ಸೆಳೆಯುತ್ತದೆ, ರಾಜ್ ಭಾರತಿ ಜೋಡಿ ಅಂದರೆ ನಿಜ ಜೀವನದಲ್ಲೂ ಗಂಡ ಹೆಂಡತಿ ಎಂಬಂತೆ ಜನರು ಭಾವಿಸಿದ್ದಾರೆ…ಇದರಲ್ಲಿ ಒಂದಲ್ಲ ಒಂದು ವಿಷಯ ಜನರಿಗೆ ಕನೆಕ್ಟ್ ಆದರೆ ಸಾಕು. ನಮ್ಮ ಸಿನಿಮಾ ಹಿಟ್ ಆಗುವುದರಲ್ಲಿ ಅನುಮಾನ ಇಲ್ಲ….ಎಂದು ಗೌಡರು ತಮಗೇ ಹೇಳಿಕೊಂಡರು. ಆಗಿದ್ದು ಆಗೇ ಬಿಡಲಿ ಎಂದು ತಮ್ಮ ಸೋದರರಿಗೆ ಎಲ್ಲವನ್ನೂ ವಿವರಿಸಿ. ಚಿತ್ರದ ಬಿಡುಗಡೆ ತಯಾರಿ ಮಾಡಿಕೊಳ್ಳುವಂತೆ ಹೇಳಿದರು. ಅದಕ್ಕೂ ಮುನ್ನ ಸೆನ್ಸಾರ್ ಮಂಡಳಿಗೆ ಚಿತ್ರವನ್ನು ತೋರಿಸಬೇಕಿತ್ತು. ಅದಕ್ಕೂ ಒಂದು ದಿನ ನಿಗದಿಯಾಯಿತು. ಮಂಡಳಿ ಸದಸ್ಯರು ಸಿನಿಮಾ ನೋಡಿದ್ದೇ ತಡ, ಎಲ್ಲರ ಕಣ್ಣಲ್ಲಿ ಹೊಸ ಮಿಂಚು ಸುಳಿದಂತಾಯಿತು. ‘ಗೌಡರೇ…ಎಂಥಾ ಒಳ್ಳೆ ಸಿನ್ಮಾ ಮಾಡಿದೀರಿ…ನಮಗಂತೂ ಸಿಕ್ಕಾಪಟ್ಟೆ ಇಷ್ಟವಾಯಿತು. ಬರೀ ಮನರಂಜನೆ ಮಾತ್ರವಲ್ಲ…ಜನರಿಗೆ ಒಳ್ಳೆಯ ಸಂದೇಶವನ್ನೂ ಕೊಟ್ಟಿದ್ದೀರಿ. ಗ್ಯಾರಂಟಿ ಹಿಟ್ ಅಗುತ್ತೆ…ಯು ಸರ್ಟಿಫಿಕೇಟ್ ಕೊಡ್ತಿವಿ…’ ಎಂದು ಅವರ ಬಾಯಿಂದ ಮಾತು ಹೊರ ಬೀಳುತ್ತಿದ್ದಂತೆಯೇ…ಗೌಡರು ಒಮ್ಮೆ ಉಸಿರನ್ನು ಒಳಗೆ ಎಳೆದುಕೊಂಡು ಹೊರಗೆ ಬಿಟ್ಟರು. ಇದನ್ನೂ ಓದಿ : ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ಅದರಲ್ಲಿ ಅಲ್ಲಿವರೆಗೆ ಇದ್ದ ಆತಂಕ, ನೋವು, ಅಸಹನೆ ಎಲ್ಲವೂ ಕೊಚ್ಚಿ ಹೋಯಿತು…  ಬಂಗಾರದ ಮನುಷ್ಯನಿಗೆ ಮೊಟ್ಟ ಮೊದಲ ಗೆಲುವು ಸಿಕ್ಕಿತ್ತು…

  • ಸಿದ್ದಲಿಂಗಯ್ಯರನ್ನು ರಾಷ್ಟ್ರಕವಿಯಾಗಿ ಘೋಷಣೆ ವಿಚಾರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ: ಜೋಶಿ

    ಸಿದ್ದಲಿಂಗಯ್ಯರನ್ನು ರಾಷ್ಟ್ರಕವಿಯಾಗಿ ಘೋಷಣೆ ವಿಚಾರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ: ಜೋಶಿ

    ಬೆಂಗಳೂರು: ಜೂನ್ 11 ರಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಕವಿ ಸಿದ್ದಲಿಂಗಯ್ಯ ಅವರನ್ನು ರಾಷ್ಟ್ರಕವಿಯಾಗಿ ಘೋಷಣೆ ಮಾಡುವ ವಿಚಾರವಾಗಿ ನಾನು ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

    ಆರ್.ಆರ್ ನಗರದ ಸಿದ್ದಲಿಂಗಯ್ಯರ ಬನವಾಸಿ ನಿವಾಸಕ್ಕೆ ಶಾಸಕ ಮುನಿರತ್ನ ಅವರೊಂದಿಗೆ ಭೇಟಿ ನೀಡಿದ ಪ್ರಹ್ಲಾದ್ ಜೋಶಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಕುಟುಂಬದ ಜೊತೆ ಕೆಲ ಹೊತ್ತು ಕುಶಲೋಪರಿ ವಿಚಾರಿಸಿದರು. ಇದೇ ವೇಳೆ ಸಿದ್ದಲಿಂಗಯ್ಯ ಅಭಿಮಾನಿಗಳಿಂದ ಸಿದ್ದಲಿಂಗಯ್ಯರನ್ನು ರಾಷ್ಟ್ರಕವಿ ಎಂದು ಘೋಷಣೆ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಇದನ್ನೂ ಓದಿ: ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ, ಸಿದ್ದಲಿಂಗಯ್ಯನವರು ಬಹಳ ಸಂಕಷ್ಟದಿಂದ, ಬಡತನದ ಹಿನ್ನೆಲೆಯಿಂದ ಬಂದಿದ್ದರು ಸಹ ಸಮಾಜದ ಒಳಿತಿಗಾಗಿ ಶ್ರಮಿಸಿದ್ದರು. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಸಮುದಾಯವನ್ನು ಮೇಲೆತ್ತಲು ಸಿದ್ದಲಿಂಗಯ್ಯನವರು ಕಾರಣರಾಗಿದ್ದರು. ಸಮಾಜದಲ್ಲಿ ಎಲ್ಲ ವರ್ಗದವರ ಅಭಿಮಾನಗಳಿಸಿದ್ದರು. ಅವರ ನೆನಪಿನಲ್ಲಿ ಒಂದಷ್ಟು ಒಳ್ಳೆಯ ಕೆಲಸ ಮಾಡಲು ನಿರ್ಧಾರಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದಿಗೂ ಚರ್ಚೆಯಾಗಿದೆ. ಅವರ ನೆನಪಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆಗೆ ಸರ್ಕಾರದಿಂದ ಸ್ಥಳ ಸಹ ಮೀಸಲಿಡಲು ಚರ್ಚೆಯಾಗಿದೆ. ಅಭಿಮಾನಿಗಳ ಇಚ್ಚೆಯಂತೆ ರಾಷ್ಟ್ರ ಕವಿ ಎಂದು ಘೋಷಣೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದರು.

  • ದಲಿತ ಕವಿ ಸಿದ್ದಲಿಂಗಯ್ಯ ನಿಧನ – ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ

    ದಲಿತ ಕವಿ ಸಿದ್ದಲಿಂಗಯ್ಯ ನಿಧನ – ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ

    ಬೆಂಗಳೂರು: ದಲಿತ ಕವಿ, ಗೀತ ರಚನೆಕಾರ, ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯವರ ನಿಧನಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

    ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ಪ್ರಾಧ್ಯಾಪಕ, ವಿಧಾನಪರಿಷತ್ ನ ಮಾಜಿ ಸದಸ್ಯ ಹಾಗೂ ನನ್ನ ಬಹುಕಾಲದ ಮಿತ್ರ ಸಿದ್ದಲಿಂಗಯ್ಯನವರ ಸಾವು ನನ್ನ ಪಾಲಿಗೆ ಆಘಾತಕಾರಿಯಾದುದು ಮಾತ್ರವಲ್ಲ ಅನಿರೀಕ್ಷಿತವೂ ಹೌದು. 66 ಸಾಯುವ ವಯಸ್ಸಾಗಿರಲಿಲ್ಲ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯನವರ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ ಶೀಘ್ರ ಮನೆಗೆ ಹಿಂದಿರುಗುತ್ತಾರೆ ಎಂದು ಅವರು ಗೆಳೆಯರು ಹೇಳುತ್ತಿದ್ದರು. ಆದರೆ ಅವರ ಸಾವಿನ ಮನೆಗೆ ತೆರಳಿದ್ದಾರೆ.

    ಜನತಾ ಪಕ್ಷದ ಆಳ್ವಿಕೆಯ ಕಾಲದಲ್ಲಿ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಸಣ್ಣ ಪ್ರಾಯದ ಕವಿ ಸಿದ್ದಲಿಂಗಯ್ಯನವರನ್ನು ವಿಧಾನಪರಿಷತ್ ಗೆ ನಾಮನಿರ್ದೇಶನ ಮಾಡಿದ್ದರು. ಆ ಕಾಲದಿಂದ ಸಿದ್ದಲಿಂಗಯ್ಯನವರು ನನಗೆ ಪರಿಚಿತರು. ಹೊಲೆ ಮಾದಿಗರ ಹಾಡು ಕವನ ಸಂಕಲನದ ಮೂಲಕ ಆ ಕಾಲದಲ್ಲಿಯೇ ಮನೆಮಾತಾಗಿದ್ದ ಸಿದ್ದಲಿಂಗಯ್ಯನವರು ಸಾಹಿತ್ಯವನ್ನು ಸಾಮಾಜಿಕ ಬದಲಾವಣೆಯ ಅಸ್ತ್ರವನ್ನಾಗಿ ಮಾಡಿ ಸಮಾನತೆಯ ಹೋರಾಟವನ್ನು ಮುನ್ನಡೆಸಿದವರು. ಕನ್ನಡ ಸಾಹಿತ್ಯದಲ್ಲಿ ದಲಿತ ಲೋಕವೊಂದನ್ನು ಅನಾವರಣಗೊಳಿಸಿದ ಬಂಡಾಯ ಸಾಹಿತ್ಯ ಚಳುವಳಿಯ ಸಾಹಿತಿಗಳಲ್ಲಿ ಸಿದ್ದಲಿಂಗಯ್ಯ ಪ್ರಮುಖರು. ದಲಿತ ಸಂಘರ್ಷ ಸಮಿತಿಯ ಸ್ಥಾಪಕರಲ್ಲೊಬ್ಬರಾಗಿದ್ದರು.

    ಕೆಂಡದಂತಹ ಕವನಗಳನ್ನು ಬರೆಯುತ್ತಿದ್ದ ಸಿದ್ದಲಿಂಗಯ್ಯನವರು ವೈಯಕ್ತಿಕವಾಗಿ ಬಹಳ ಮೃದು ಸ್ವಭಾವದ ಮುಜುಗರದ ವ್ಯಕ್ತಿ. ತಾವಿದ್ದಲ್ಲಿ ತನ್ನ ಮಾತುಗಳ ಮೂಲಕವೇ ನಗು,ಸಂತೋಷ, ವಿನೋದದ ಲವಲವಿಕೆಯ ಲೋಕವನ್ನೇ ಅವರು ಸೃಷ್ಟಿಸುತ್ತಿದ್ದರು. ಸಿದ್ದಲಿಂಗಯ್ಯನವರು ಇನ್ನಿಲ್ಲವಾದರೂ ಅವರು ಬರೆದಿರುವ ಸಾಹಿತ್ಯದ ಮೂಲಕ ಸದಾ ನಮ್ಮ ನೆನಪಲ್ಲಿರುತ್ತಾರೆ. ಅವರ ಅಗಲಿಕೆಯ ದು:ಖದಲ್ಲಿರುವ ಕುಟುಂಬದ ಸದಸ್ಯರಿಗೆ ನನ್ನ ಸಂತಾಪಗಳು, ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

  • ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ

    ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ

    ಬೆಂಗಳೂರು: ಕನ್ನಡ ಸಾಹಿತ್ಯದ ಅಗ್ರಗಣ್ಯ ಲೇಖಕ, ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಕರುಣೆ ಇಲ್ಲದ ಕರೋನಾ ಕೈಗೆ ಸಿಕ್ಕು, ‘ಊರು ಕೇರಿ’ ತೊರೆದು ಹೋಗಿದ್ದಾರೆ. ಇದು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ದೊಡ್ಡ ಆಘಾತ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

    ಶೋಕ ಸಂದೇಶದಲ್ಲಿ ಏನಿದೆ?
    ಡಾ.ಸಿದ್ದಲಿಂಗಯ್ಯ ನನ್ನ ಅತ್ಯಂತ ಆತ್ಮೀಯ ಮಿತ್ರರಾಗಿದ್ದರು, ಸಾವಿರಾರು ಶಿಷ್ಯರ ಪಾಲಿಗೆ ಪ್ರೀತಿಯ ಮೇಷ್ಟ್ರು, ಅತ್ಯಂತ ಸರಳ, ನೇರ ನಡೆ, ಸದಾ ಹಾಸ್ಯಭರಿತ ಮಾತುಗಳಿಂದಲೇ ಎದುರಿಗಿದ್ದವರನ್ನು ಮೋಡಿ ಮಾಡುವ ಮಾತುಗಾರ, ಅವರ ಪಿ ಹೆಚ್ ಡಿ ಪ್ರಬಂಧ ಗ್ರಾಮದೇವತೆಗಳು ಮೂಲಕವೇ ಕನ್ನಡ ಸಾಹಿತ್ಯಾಸಕ್ತರ ಮನ ಗೆದ್ದವರು ಸಿದ್ದಲಿಂಗಯ್ಯ. ಅತ್ಯಂತ ಸಣ್ಣ ಗ್ರಾಮ ಒಂದರಿಂದ ಬಂದವರು ವಿದ್ಯೆ ವಂಚಿತ ಜನಾಂಗದ ಮೂಲಕ ಎಲ್ಲ ಜನಾಂಗಕ್ಕೂ ವಿದ್ಯೆ ಹಂಚುವ ಕೆಲಸಕ್ಕೆ ಅವರು ತೊಡಗಿಸಿಕೊಂಡಿದ್ದೆ ಒಂದು ಅದ್ಭುತ.

    ಕೇವಲ 34 ವರ್ಷದವರಾಗಿದ್ದಾಗಲೇ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದರು. ಸದನದಲ್ಲಿ ಅವರು ಮಂಡಿಸಿದ ವಿಷಯಗಳು ವೈವಿಧ್ಯಪೂರ್ಣವಾಗಿದ್ದವು ಜೊತೆಗೆ ಅತ್ಯಂತ ವಿಚಾರಪೂರ್ಣ ವಾಗಿದ್ದವು. ಅಲ್ಲಿ ಅವರು ವಿಷಯ ಮಂಡಿಸುತ್ತಿದ್ದ ರೀತಿ ಇಡೀ ಸದನವನ್ನು ಆಕರ್ಷಿಸಿ ಬಿಡುತ್ತಿತ್ತು.

    ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅವರು ಕನ್ನಡ ಕಟ್ಟಲು ಮಾಡಿದ ಕೆಲಸ ಅದ್ಭುತವಾದದ್ದು. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಅವರು ಮಾಡಿದ ಕೆಲಸ, ಆನಂತರ ಸಿಂಡಿಕೇಟ್ ಸದಸ್ಯರಾಗಿ ಅವರು ಮಾಡಿದ ಕೆಲಸ ಗಮನಾರ್ಹವಾದದ್ದು.

    https://twitter.com/ArvindLBJP/status/1403337280383635460

    ದಲಿತ ಕವಿ ಎಂದೇ ಪ್ರಸಿದ್ಧರಾಗಿ ಕೆಳವರ್ಗಗಳ ನೋವಿಗೆ ದನಿಯಾಗಿ ಮಿಡಿದ ಸಿದ್ದಲಿಂಗಯ್ಯ ಈಗ ನಮ್ಮನ್ನು ಅಗಲಿರುವುದು ದುರಾದೃಷ್ಟಕರ. ಗ್ರಾಮದೇವತೆಗಳು,  ಹೊಲೆಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಮುಂತಾದ ಕವನ ಸಂಕಲನಗಳು ಕನ್ನಡ ಸಾಹಿತ್ಯಕ್ಕೆ ಅವರು ಕೊಟ್ಟ ಅನನ್ಯ ಕೊಡುಗೆಗಳಾಗಿವೆ. ಅವರ ಆತ್ಮಕಥನ ಊರುಕೇರಿ ಯಿಂದ ಸ್ಪೂರ್ತಿಗೊಂಡವರು ಓದಿ ಆನಂದಿಸಿದವರು ಅಸಂಖ್ಯಾತ ಮಂದಿ.

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಗೌರವ,ಸತ್ಯಕಾಮ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಅಸಂಖ್ಯಾತ ಪ್ರಶಸ್ತಿ-ಪುರಸ್ಕಾರಗಳು ಅವರಿಗೆ ಸಂದಿವೆ.

    ಸಿದ್ದಲಿಂಗಯ್ಯ ಅವರ ಅಗಲಿಕೆ ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅದನ್ನು ತುಂಬುವುದು ಸುಲಭವಲ್ಲ. ಸಿದ್ದಲಿಂಗಯ್ಯ ಅವರ ಕುಟುಂಬಕ್ಕೆ ಅವರ ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಡಿಸಿಎಂ ಕಂಬನಿ
    ಸಿದ್ದಲಿಂಗಯ್ಯ ಅವರು ಕನ್ನಡದ ಅಗ್ರ ಲೇಖಕರಲ್ಲೊಬ್ಬರು. ‘ದಲಿತ ಕವಿ’ ಎಂದೇ ಪ್ರಸಿದ್ಧರು. ಸಾಮಾಜಿಕ ಸಮಾನತೆಯ ಆಶಯದೊಂದಿಗೆ ಅವರು ರಚಿಸಿದ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಆಧುನಿಕ ಸಾಹಿತ್ಯದಲ್ಲಿ ಅತ್ಯುನ್ನತ ಸ್ಥಾನ ಹೊಂದಿವೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಗುಣಗಾನ ಮಾಡಿದ್ದಾರೆ.

    ಮೂಲತಃ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಜನಿಸಿದ ಅವರು ನೆಲದ ಸೊಗಡನ್ನೂ ತಮ್ಮ ಸಾಹಿತ್ಯದಲ್ಲಿ ಸೊಗಸಾಗಿ ಕಟ್ಟಿಕೊಟ್ಟವರು. ಅಪ್ರತಿಮ ಭಾಷಣಕಾರರು ಆಗಿದ್ದ ಸಿದ್ದಲಿಂಗಯ್ಯ ಅವರು ವಿಧಾನ ಪರಿಷತ್ ಸದಸ್ಯರಾಗಿಯೂ ಚಿರಸ್ಮರಣೀಯ ಸೇವೆ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ, ಬಂಧುಗಳಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಡಿಸಿಎಂ ಪ್ರಾರ್ಥನೆ ಮಾಡಿದ್ದಾರೆ.

    ಶೆಟ್ಟರ್ ಸಂತಾಪ
    ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಗಿ ಜನಪ್ರತಿನಿಧಿಯಾಗಿ ರಾಜ್ಯಕ್ಕೆ ನೀಡಿರುವ ಕೊಡುಗೆ ಅಪಾರ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಗಿ ಕನ್ನಡ ನಾಡು ನುಡಿಯ ರಕ್ಷಣೆ ಮಾಡುವ ಕೆಲಸ ಮಾಡಿದ್ದರು. ನಾಡೋಜ ಡಾ ಸಿದ್ದಲಿಂಗಯ್ಯ ಅವರ ಅಗಲಿಕೆ ರಾಜ್ಯದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ. ಅವರ ಅಗಲಿಕೆ ಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬ ವರ್ಗದವರಿಗೂ ಹಾಗೂ ಅಭಿಮಾನಿಗಳಿಗೂ ನೀಡಲಿ ಎಂದು ಭಗವಂತನ ನಲ್ಲಿ ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶ ದಲ್ಲಿ ತಿಳಿಸಿದ್ದಾರೆ.

  • ಸಿದ್ದಲಿಂಗಯ್ಯ ಮನೆಗೆ ಶಾ – ಕುಡಿಯುವ ನೀರಿನ ಬಾಟಲಿಗೆ ಬಗ್ಗೆ ಫೇಸ್‍ಬುಕ್‍ನಲ್ಲಿ ಟೀಕೆ, ನಿಂದನೆ

    ಸಿದ್ದಲಿಂಗಯ್ಯ ಮನೆಗೆ ಶಾ – ಕುಡಿಯುವ ನೀರಿನ ಬಾಟಲಿಗೆ ಬಗ್ಗೆ ಫೇಸ್‍ಬುಕ್‍ನಲ್ಲಿ ಟೀಕೆ, ನಿಂದನೆ

    ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದಲಿತ ಕವಿ ಸಿದ್ದಲಿಂಗಯ್ಯ ಅವರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಟೀಕೆ ವ್ಯಕ್ತವಾಗಿದೆ.

    ಬುಧವಾರ ಅಮಿತ್ ಶಾ ಹಿರಿಯ ಸಾಹಿತಿ ಚಿದಾನಂದ ಮೂರ್ತಿ ಮತ್ತು ದಲಿತ ಕವಿ ಸಿದ್ದಲಿಂಗಯ್ಯ ಅವರನ್ನು ಭೇಟಿ ಮಾಡುವ ಮೂಲಕ ಪ್ರಣಾಳಿಕೆಗಾಗಿ ಸಲಹೆಗಳನ್ನು ಪಡೆದುಕೊಂಡಿದ್ದಾರೆ. ಈ ವಿಚಾರವನ್ನು ಇಟ್ಟುಕೊಂಡು ಸಿದ್ದಲಿಂಗನವರನ್ನು ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಜನರು ಟೀಕೆ ಮಾಡುತ್ತಿದ್ದಾರೆ.

    ಯಾರಿಗೆ ಬಂತು ಎಲ್ಲಿಗೆ ಬಂತು ಸ್ವಾತಂತ್ರ್ಯ ಅಂತಾ ಆಡಳಿತವನ್ನು ಪೆನ್ನಿನ ಮೂಲಕ ಟೀಕಿಸುತ್ತಿದ್ದ ಸಿದ್ದಲಿಂಗಯ್ಯ ಇವತ್ತು ಗೂಟದ ಕಾರಿನ ಮೋಹಕ್ಕೆ ಬಲಿಯಾದ್ರಾ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: ಮನೆಗೆ ಭೇಟಿ ನೀಡಿದ ಶಾಗೆ ಚಿದಾನಂದ ಮೂರ್ತಿ ನೀಡಿದ್ರು 5 ಸಲಹೆ

    ಈ ಟೀಕೆಯ ಜೊತೆಗೆ ಸಿದ್ದಲಿಂಗಯ್ಯರ ಮನೆಯಲ್ಲಿ ಅಮಿತ್ ಶಾ ಅವರಿಗೆ ಬಾಟಲ್ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿದ ಕೆಲವರು ಸಿದ್ದಲಿಂಗಯ್ಯ ದಲಿತ ವ್ಯಕ್ತಿಯೆಂದು ಅವರ ಮನೆಯಲ್ಲಿ ನೀರು ಕುಡಿಯಲಿಲ್ಲವೋ ಅಥವಾ ಸಿದ್ದಲಿಂಗಯ್ಯರ ಮನೆಯಲ್ಲಿ ಬಾಟಲ್ ನೀರನ್ನು ಕುಡಿಯುತ್ತಿರಬಹುದು ಎಂದು ಬರೆದುಕೊಂಡಿದ್ದಾರೆ.

    ಮಠಾಧೀಶರ ಬಳಿಕ ಅಮಿತ್ ಶಾ ಈಗ ಸಾಹಿತಿಗಳನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಈಗ ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ಆರಂಭವಾಗಿದೆ.