Tag: ಸಿದ್ದಾರ್ಥ್

  • ಹೈದ್ರಾಬಾದ್‌ನಲ್ಲಿ ಅದಿತಿ-ಸಿದ್ದಾರ್ಥ್ ಮದುವೆ ತಯಾರಿ

    ಹೈದ್ರಾಬಾದ್‌ನಲ್ಲಿ ಅದಿತಿ-ಸಿದ್ದಾರ್ಥ್ ಮದುವೆ ತಯಾರಿ

    ಸೆನ್ಸೇಷನಲ್ ತಾರಾ ಜೋಡಿ, ಬಹುಭಾಷಾ ನಟಿ ಅದಿತಿ ರಾವ್ ಹೈದರಿ (Aditi Rao Hydari) ಹಾಗೂ ತಮಿಳು ನಟ ಸಿದ್ದಾರ್ಥ್ (Siddharth) ಶೀಘ್ರದಲ್ಲೇ ಮದುವೆಯಾಗಲಿದ್ದು (Marriage) ಪೂರ್ವ ತಯಾರಿ ಭರದಿಂದ ಸಾಗಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ಕಳೆದ ಮಾರ್ಚ್ ತಿಂಗಳಲ್ಲಿ ಗುಪ್ತವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅದೇ ಜಾಗದಲ್ಲೀಗ ಡೆಸ್ಟಿನೇಷನ್ ವೆಡ್ಡಿಂಗ್  ಪ್ಲ್ಯಾನ್ ಮಾಡಿದ್ದಾರೆ.

    400 ವರ್ಷಗಳ ಐತಿಹಾಸಿಕ ಹಿನ್ನಲೆಯುಳ್ಳ ದೇವಸ್ಥಾನದಲ್ಲೇ ಅದಿತಿ ತಾನು ಪ್ರೀತಿಸಿದ ಹುಡುಗ ಸಿದ್ದಾರ್ಥ್ ಜೊತೆ ಸಪ್ತಪದಿ ತುಳಿಯಲು ಸಿದ್ಧರಾಗಿದ್ದಾರೆ. ಹೈದ್ರಾಬಾದ್‌ನಿಂದ ನೂರೈವತ್ತು ಕಿಲೋಮೀಟರ್ ದೂರವಿರುವ ವಾನಪರ್ತಿಯ ಶ್ರೀರಂಗಪುರಂ ದೇವಸ್ಥಾನದಲ್ಲಿ ಅದಿತಿ-ಸಿದ್ದಾಥ್ ಮದುವೆಗೆ ಪ್ಲಾö್ಯನ್ ಆಗಿದೆ. ಈ ದೇವಸ್ಥಾನ ಅದಿತಿಗೆ ಭಾವನಾತ್ಮಕವಾಗಿ ಪ್ರಭಾವ ಬೀರಿರುವ ಜಾಗ ಎಂದು ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅಜ್ಜಿಯನ್ನ ಕಳೆದುಕೊಂಡಿದ್ದ ಅದಿತಿಗೆ ಅವರ ಆಶೀರ್ವಾದ ಇಲ್ಲಿ ಸಿಗುವ ಭಾವನೆಯಂತೆ. ಕಾರಣ ಅದಿತಿ ಪೂರ್ವಜರಿಗೆ ಈ ದೇವಾಲಯದ ಜೊತೆ ಇರುವ ನಂಟನ್ನ ಮದುವೆಯಲ್ಲಿ ಬೆಸೆಯುವ ಯೋಜನೆ.

     

    ತೆಲುಗಿನ `ಮಹಾ ಸಮುದ್ರಂ’ ಚಿತ್ರದಲ್ಲಿ ಅದಿತಿ ಸಿದ್ದಾರ್ಥ್ ತೆರೆಹಂಚಿಕೊಂಡಿದ್ದರು ಬಳಿಕ ಇಬ್ಬರೂ ಪ್ರೀತಿಯಲ್ಲಿ ಬಿದ್ದಿದ್ದರು. ಪ್ರೀತಿಯ ವಿಚಾರ ಗುಟ್ಟಾಗೇ ಇಟ್ಟಿದ್ದ ಜೋಡಿ ಎಂಗೇಜ್ಮೆಂಟ್ ಆದ್ಮೇಲೆ ಸಂಬಂಧವನ್ನ ಆಫಿಷಿಯಲ್ ಆಗಿ ಘೋಷಿಸಿದ್ದರು. ಇದೀಗ ಮದುವೆ ದಿನಾಂಕವೂ ನಿಗದಿಯಾಗಿದ್ದು ಅದ್ದೂರಿಯಾಗಿ ಪ್ರಕೃತಿ ಮಧ್ಯೆ ಸತಿಪತಿಯಾಗಲು ನಿರ್ಧರಿಸಿದ್ದಾರಂತೆ ಅದಿತಿ ಸಿದ್ದಾರ್ಥ್.

  • ಮದುವೆ ಆಗಿಲ್ಲ, ಎಂಗೇಜ್ಮೆಂಟ್ ಅಷ್ಟೇ ನಡೆದಿದ್ದು: ಅದಿತಿ ಸ್ಪಷ್ಟನೆ

    ಮದುವೆ ಆಗಿಲ್ಲ, ಎಂಗೇಜ್ಮೆಂಟ್ ಅಷ್ಟೇ ನಡೆದಿದ್ದು: ಅದಿತಿ ಸ್ಪಷ್ಟನೆ

    ಬಾಲಿವುಡ್ ನಟಿ ಅದಿತಿ ರಾವ್ ಹೈದರಿ(Aditi Rao Hydari) ಕಾಲಿವುಡ್ ನಟ ಸಿದ್ಧಾರ್ಥ್  (Siddarth) ಸದ್ದಿಲ್ಲದೇ ಮದುವೆಯಾ ಆಗಿದ್ದಾರೆ ಎಂದು ನಿನ್ನೆಯಷ್ಟೇ ಭರ್ಜರಿ ಸುದ್ದಿ ಆಗಿತ್ತು. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎಂದು ಹೇಳಲಾಗಿತ್ತು. ಈ ಮದುವೆಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿದ್ದವು.

    ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಅವರ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗಿತ್ತು. ಶೂಟಿಂಗ್ ಎಂದು ಸುಳ್ಳು ಹೇಳಿ ಇಬ್ಬರೂ ಮದುವೆ ಆಗಿದ್ದಾರೆ ಎಂದು ಆರೋಪಿಸಲಾಗಿತ್ತು. ಎಲ್ಲದಕ್ಕೂ ಅದಿತಿ ಉತ್ತರ ನೀಡಿದ್ದಾರೆ. ಹಿ ಸೇಡ್ ಎಸ್.. ಎಂಗೇಜ್ಡ್’ (Engaged) ಎಂದು ಸಿದ್ಧಾರ್ಥನ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ. ಇದೀಗ ತಾವು ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ಘೋಷಣೆ ನೀಡಿದ್ದಾರೆ.

    ಈ  ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿತ್ತು. ಆದರೆ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ (Wedding) ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್.

    ನ್ಯೂ ಇಯರ್ ಸಂಭ್ರಮವನ್ನು ನಟಿ ಅದಿತಿ- ಸಿದ್ಧಾರ್ಥ್ ಜೋಡಿ ವಿದೇಶದಲ್ಲಿ ಸೆಲೆಬ್ರೇಟ್ ಮಾಡಿದ್ದರು. ಈ ಕುರಿತ ಇಬ್ಬರೂ ಕೂಡ ಚೆಂದದ ಫೋಟೋ ಶೇರ್ ಮಾಡಿ ಅಭಿಮಾನಿಗಳಿಗೆ ಶುಭಕೋರಿದ್ದರು. ಈ ಮೂಲಕ ಎಂಗೇಜ್ ಆಗಿರೋದು ಖಚಿತವಾಗಿತ್ತು. ಫೋಟೋ ಶೇರ್ ಮಾಡ್ತಿದ್ದಂತೆ ಮದುವೆ ಯಾವಾಗ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದರು.

    2021ರಲ್ಲಿ ‘ಮಹಾ ಸಮುದ್ರಂ’ ಸಿನಿಮಾ ವೇಳೆ, ಅದಿತಿ- ಸಿದ್ಧಾರ್ಥ್ ಪರಿಚಿತರಾದರು. ಅಲ್ಲಿಂದ ಶುರುವಾದ ಸ್ನೇಹ ಪ್ರೀತಿಗೆ ತಿರುಗಿತ್ತು. ಸಾಕಷ್ಟು ಪಾರ್ಟಿ ಮತ್ತು ಸೆಲೆಬ್ರಿಟಿ ಮದುವೆ ಸಮಾರಂಭಗಳಲ್ಲಿ ಇಬ್ಬರೂ ಜೊತೆಯಾಗಿಯೇ ಹೋಗುವ ಮೂಲಕ ಹೈಲೆಟ್ ಆದರು.

     

    ಇಬ್ಬರೂ ಪ್ರೀತಿ ಬಗ್ಗೆ ಅಧಿಕೃತವಾಗಿ ಹೇಳದೇ ಇದ್ದರೂ ಹೊಸ ಫೋಟೋ ಶೇರ್ ಮಾಡಿ ಮದುವೆ ಬಗ್ಗೆ ಪರೋಕ್ಷವಾಗಿ ಹೇಳಿದ್ರಾ ಎಂಬ ಅನುಮಾನ ಅಭಿಮಾನಿಗಳನ್ನ ಕಾಡ್ತಿತ್ತು. ಇದೀಗ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದೆ ಜೋಡಿ.

  • ಅದಿತಿ ರಾವ್ ಜೊತೆ ಮದುವೆಯಾದ ನಟ ಸಿದ್ದಾರ್ಥ

    ಅದಿತಿ ರಾವ್ ಜೊತೆ ಮದುವೆಯಾದ ನಟ ಸಿದ್ದಾರ್ಥ

    ಬಾಲಿವುಡ್ ನಟಿ ಅದಿತಿ ರಾವ್ ಹೈದರಿ(Aditi Rao Hydari) ಕಾಲಿವುಡ್ ನಟ ಸಿದ್ಧಾರ್ಥ್  (Siddarth) ಸದ್ದಿಲ್ಲದೇ ಮದುವೆಯಾದ ವಿಚಾರ ಕಾಲಿವುಡ್ ಅಂಗಳದಿಂದ ಬಂದಿದೆ. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎನ್ನಲಾಗುತ್ತಿದೆ. ಅಧಿಕೃತವಾಗಿ ಈ ಕುರಿತಂತೆ ಜೋಡಿ ಹೇಳಿಕೊಳ್ಳದೇ ಇದ್ದರೂ, ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗುತ್ತಿದೆ.

    ಈ  ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿತ್ತು. ಆದರೆ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ (Wedding) ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್.

    ನ್ಯೂ ಇಯರ್ ಸಂಭ್ರಮವನ್ನು ನಟಿ ಅದಿತಿ- ಸಿದ್ಧಾರ್ಥ್ ಜೋಡಿ ವಿದೇಶದಲ್ಲಿ ಸೆಲೆಬ್ರೇಟ್ ಮಾಡಿದ್ದರು. ಈ ಕುರಿತ ಇಬ್ಬರೂ ಕೂಡ ಚೆಂದದ ಫೋಟೋ ಶೇರ್ ಮಾಡಿ ಅಭಿಮಾನಿಗಳಿಗೆ ಶುಭಕೋರಿದ್ದರು. ಈ ಮೂಲಕ ಎಂಗೇಜ್ ಆಗಿರೋದು ಖಚಿತವಾಗಿತ್ತು. ಫೋಟೋ ಶೇರ್ ಮಾಡ್ತಿದ್ದಂತೆ ಮದುವೆ ಯಾವಾಗ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದರು.

    2021ರಲ್ಲಿ ‘ಮಹಾ ಸಮುದ್ರಂ’ ಸಿನಿಮಾ ವೇಳೆ, ಅದಿತಿ- ಸಿದ್ಧಾರ್ಥ್ ಪರಿಚಿತರಾದರು. ಅಲ್ಲಿಂದ ಶುರುವಾದ ಸ್ನೇಹ ಪ್ರೀತಿಗೆ ತಿರುಗಿತ್ತು. ಸಾಕಷ್ಟು ಪಾರ್ಟಿ ಮತ್ತು ಸೆಲೆಬ್ರಿಟಿ ಮದುವೆ ಸಮಾರಂಭಗಳಲ್ಲಿ ಇಬ್ಬರೂ ಜೊತೆಯಾಗಿಯೇ ಹೋಗುವ ಮೂಲಕ ಹೈಲೆಟ್ ಆದರು.

     

    ಇಬ್ಬರೂ ಪ್ರೀತಿ ಬಗ್ಗೆ ಅಧಿಕೃತವಾಗಿ ಹೇಳದೇ ಇದ್ದರೂ ಹೊಸ ಫೋಟೋ ಶೇರ್ ಮಾಡಿ ಮದುವೆ ಬಗ್ಗೆ ಪರೋಕ್ಷವಾಗಿ ಹೇಳಿದ್ರಾ ಎಂಬ ಅನುಮಾನ ಅಭಿಮಾನಿಗಳನ್ನ ಕಾಡ್ತಿತ್ತು. ಇದೀಗ ಸದ್ದಿಲ್ಲದೇ ಮದುವೆ ಕೂಡ ಆಗಿದ್ದಾರೆ ಎನ್ನುವ ಮಾಹಿತಿ ಇದೆ.

  • ಕೈ ಸನ್ನೆ ಮೂಲಕ ಡೇಟಿಂಗ್ ಬಗ್ಗೆ ಉತ್ತರಿಸಿದ ನಟಿ ಅದಿತಿ ರಾವ್ ಹೈದರಿ

    ಕೈ ಸನ್ನೆ ಮೂಲಕ ಡೇಟಿಂಗ್ ಬಗ್ಗೆ ಉತ್ತರಿಸಿದ ನಟಿ ಅದಿತಿ ರಾವ್ ಹೈದರಿ

    ಬೊಮ್ಮರಿಲ್ಲು ಖ್ಯಾತಿಯ ನಟ ಸಿದ್ದಾರ್ಥ್ ಮತ್ತು ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಡೇಟಿಂಗ್ ವಿಚಾರ ಮತ್ತೆ ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡಿದೆ. ಇಬ್ಬರೂ ಒಟ್ಟಾಗಿ ಹಲವಾರು ಬಾರಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. ಸಿನಿಮಾವನ್ನೂ ಮಾಡಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಜಂಟಿಯಾಗಿಯೇ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಇಬ್ಬರೂ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿ ಅಲ್ಲಿ ಡೇಟಿಂಗ್ ವಿಚಾರವನ್ನು ಕೇಳಲಾಗುತ್ತದೆ. ಅವರು ಕೂಡ ಜಾಣ್ಮೆಯಿಂದಲೂ ಉತ್ತರಿಸುತ್ತಾರೆ.

    ಈವರೆಗೂ ಡೇಟಿಂಗ್ ವಿಚಾರವನ್ನು ಅಲ್ಲಗಳೆಯುತ್ತಲೇ ಬಂದಿರುವ ಈ ಜೋಡಿ ಇತ್ತೀಚೆಗೆ ಮಾತ್ರ ಸತ್ಯವನ್ನು ಒಪ್ಪಿಕೊಂಡಿದೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅದಿತಿ ರಾವ್ ಹೈದರಿ ಅವರಿಗೆ ಡೇಟಿಂಗ್ ಕುರಿತಾಗಿ ಪ್ರಶ್ನೆ ಮಾಡಿದಾಗ,  ಆ ಕುರಿತು ತಾವು ಏನೂ ಹೇಳುವುದಿಲ್ಲ ಎಂದು ಕೈ ಸನ್ನೆ ಮಾಡಿ ಹೇಳುವ ಮೂಲಕ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಅದರಲ್ಲೂ ಜಾಣ ನಡೆ ಪ್ರದರ್ಶನ ಮಾಡಿದ್ದಾರೆ.

    ಇತ್ತೀಚಿಗಷ್ಟೇ ತೆಲುಗು ನಟ ಶರ್ವಾನಂದ್ (Sharwanand) ಎಂಗೇಜ್‌ಮೆಂಟ್‌ಗೆ ಸಿದ್ಧಾರ್ಥ್- ಅದಿತಿ ಜೋಡಿಯಾಗಿ ಬಂದು ಶುಭಹಾರೈಸಿದ್ದರು. ಈ ಬೆನ್ನಲ್ಲೇ ಸಿದ್-ಅದಿತಿ ಡೇಟಿಂಗ್ ಸುದ್ದಿಗೆ ಸದ್ದು ಮಾಡಿತ್ತು. ಅಷ್ಟಕ್ಕೂ ಈ ಡೇಟಿಂಗ್ ಸುದ್ದಿ ನಿಜಾನಾ ಎಂಬುದಕ್ಕೆ ನಟಿ ಅದಿತಿ ರಾವ್ ಹೈದರಿ (Aditi Rao Hydari) ತಮ್ಮದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಲೇ ಬಂದಿದ್ದಾರೆ. ಇದನ್ನೂ ಓದಿ:ಮುದ್ದು ಮಗಳ ಜೊತೆಗಿನ ಚೆಂದದ ವೀಡಿಯೋ ಹಂಚಿಕೊಂಡ ಧ್ರುವ ಸರ್ಜಾ

    ನಟಿ ಅದಿತಿ- ಸಿದ್ಧಾರ್ಥ್ (Actor Siddarth) ಅವರು `ಮಹಾ ಸಮುದ್ರಂ’ ಎಂಬ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಚಿತ್ರದ ಸೆಟ್‌ನಲ್ಲಿ ಇಬ್ಬರಿಗೂ ಪ್ರೇಮಾಂಕುರವಾಗಿದೆ ಎನ್ನಲಾಗುತ್ತಿದೆ. 2021ರಿಂದ ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಂಬೈನಲ್ಲಿ ರೆಸ್ಟೋರೆಂಟ್‌ನಲ್ಲಿ ಸಾಕಷ್ಟು ಬಾರಿ ಈ ಜೋಡಿ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು ಇದೆ. ಸದ್ಯ ಟಿಟೌನ್ ಅಂಗಳದಲ್ಲಿ ಈ ವಿಚಾರ ಅನೇಕರ ಚರ್ಚೆಗೆ ಗ್ರಾಸವಾಗಿದೆ.

    ಈ ಹಿಂದೆಯೂ ಅದಿತಿ ನಟನೆಯ `ತಾಜ್’ (Taj) ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಅದಿತಿಗೆ ಸಿದ್ಧಾರ್ಥ್ ಜೊತೆಗಿನ ಡೇಟಿಂಗ್ (Dating) ಬಗ್ಗೆ ಕೇಳಲಾಗಿತ್ತು. ನನಗೆ ತುಂಬಾ ಹಸಿವಾಗುತ್ತಿದೆ. ಹಾಗಾಗಿ ನಾನು ಹೋಗಿ ತಿನ್ನುತ್ತೇನೆ ಎಂದು ನಟಿ ಏನೂ ಹೇಳಲದೇ ಹೊರಟಿದ್ದರು. ಈ ಪ್ರಶ್ನೆಗೆ ಊಟದ ನೆಪ ಹೇಳುವ ಮೂಲಕ ನಟಿ ಜಾರಿಕೊಂಡಿದ್ದರು.

  • ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು

    ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ – ಸಿದ್ದಾರ್ಥ್ ವಿರುದ್ಧ FIR ದಾಖಲು

    ಹೈದರಾಬಾದ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಟ್ವೀಟ್‍ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಕಾಲಿವುಡ್ ನಟ ಸಿದ್ಧಾರ್ಥ್ ವಿರುದ್ಧ ಹೈದರಾಬಾದ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಬಿಜೆಪಿ ನಾಯಕರಾದ ನೀಲಂ ಭಾರ್ಗವ ರಾಮ್ ಮತ್ತು ಪ್ರೇರಣಾ ಟಿ ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್ ಪೊಲೀಸರು ನಟ ಸಿದ್ಧಾರ್ಥ್ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಜನವರಿ 5ರಂದು ಪಂಜಾಬ್‍ನ ಫಿರೋಜ್‍ಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಂಟಾದ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಅವರು ಟ್ವೀಟ್ ಮಾಡಿದ್ದರು. ಈ ಟ್ವೀಟ್‍ಗೆ ಸಿದ್ದಾರ್ಥ್ ಅವರು ಅವಹೇಳಕಾರಿ ಕಾಮೆಂಟ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸೈನಾ ನೆಹ್ವಾಲ್ ಟ್ವೀಟ್‍ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ

    ಈ ಹಿನ್ನೆಲೆ ಸಿದ್ಧಾರ್ಥ್ ಅವರು, ಆತ್ಮೀಯ ಸೈನಾ, ಕೆಲವು ದಿನಗಳ ಹಿಂದೆ ನಿಮ್ಮ ಟ್ವೀಟ್‍ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ನನ್ನ ಅಸಭ್ಯ ಹಾಸ್ಯಕ್ಕಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ನಿಮ್ಮೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ಅಂದು ನಿಮ್ಮ ಟ್ವೀಟ್ ಅನ್ನು ನಾನು ಓದಿದಾಗ ನನಗೆ ಕೋಪವನ್ನು ತಡೆದುಕೊಳ್ಳಲಾಗಲಿಲ್ಲ. ಅದಕ್ಕೆ ಆ ರೀತಿ ಪ್ರತಿಕ್ರಿಯೆ ನೀಡಿದೆ.

    ಯಾವುದೇ ದುರುದ್ದೇಶದಿಂದ ನಾನು ಆ ರೀತಿ ಪ್ರತಿಕ್ರಿಯೆಯನ್ನು ನೀಡಲಿಲ್ಲ. ನಾನು ಸ್ತ್ರೀವಾದಿ ಮಿತ್ರ. ನನ್ನ ಟ್ವೀಟ್‍ನಲ್ಲಿ ಯಾವುದೇ ಲಿಂಗವನ್ನು ಸೂಚಿಸಿಲ್ಲ. ನಿಮ್ಮ ಮೇಲೆ ಯಾವುದೇ ದುರುದ್ದೇಶದಿಂದ ಆ ಪದಗಳನ್ನು ಬಳಸಲಿಲ್ಲ ಎಂಬ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ. ಈ ಪತ್ರವನ್ನು ನೀವು ಸಮ್ಮತಿಸುತ್ತೀರಾ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ ಎಂದು ಬರೆದು ಕ್ಷಮೆಯನ್ನು ಕೇಳಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

  • ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    ನವದೆಹಲಿ: ತಮಿಳು ನಟ ಸಿದ್ದಾರ್ಥ್ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಲೈಂಗಿನ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿಕೊಂಡಿದ್ದರು. ಈ ಹೇಳಿಕೆಯ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಈಗ ತನ್ನ ವರ್ತನೆಗೆ ನೆಹ್ವಾಲ್ ಅವರಿಗೆ ಪತ್ರ ಬರೆದು ಸೋಶಿಯಲ್ ಮೀಡಿಯಾದಲ್ಲೇ ಕ್ಷಮೆಯಾಚಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ಆತ್ಮೀಯ ಸೈನಾ, ಕೆಲವು ದಿನಗಳ ಹಿಂದೆ ನಿಮ್ಮ ಟ್ವೀಟ್‍ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ನನ್ನ ಅಸಭ್ಯ ಹಾಸ್ಯಕ್ಕಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ನಿಮ್ಮೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ಅಂದು ನಿಮ್ಮ ಟ್ವೀಟ್ ಅನ್ನು ನಾನು ಓದಿದಾಗ ನನಗೆ ಕೋಪವನ್ನು ತಡೆದುಕೊಳ್ಳಲಾಗಲಿಲ್ಲ. ಅದಕ್ಕೆ ಆ ರೀತಿ ಪ್ರತಿಕ್ರಿಯೆ ನೀಡಿದೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್‍ಗೆ ಕೋವಿಡ್ ಪಾಸಿಟಿವ್

    ಯಾವುದೇ ದುರುದ್ದೇಶದಿಂದ ನಾನು ಆ ರೀತಿ ಪ್ರತಿಕ್ರಿಯೆಯನ್ನು ನೀಡಲಿಲ್ಲ. ನಾನು ಸ್ತ್ರೀವಾದಿ ಮಿತ್ರ. ನನ್ನ ಟ್ವೀಟ್‍ನಲ್ಲಿ ಯಾವುದೇ ಲಿಂಗವನ್ನು ಸೂಚಿಸಿಲ್ಲ. ನಿಮ್ಮ ಮೇಲೆ ಯಾವುದೇ ದುರುದ್ದೇಶದಿಂದ ಆ ಪದಗಳನ್ನು ಬಳಸಲಿಲ್ಲ ಎಂಬ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ. ಈ ಪತ್ರವನ್ನು ನೀವು ಸಮ್ಮತಿಸುತ್ತೀರಾ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ ಎಂದು ಬರೆದು ಕ್ಷಮೆಯನ್ನು ಕೇಳಿದ್ದಾರೆ.

    ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು. ಯಾವುದೇ ರಾಷ್ಟ್ರ್ರದಲ್ಲಿ ಪ್ರಧಾನ ಮಂತ್ರಿಗೆ ಭದ್ರತೆ ಸಿಗದೇ ಇದ್ದರೆ, ಆ ದೇಶದಲ್ಲಿ ನಾವೂ ಸುರಕ್ಷಿತವಾಗಿದ್ದೇವೆ ಎಂದು ಹೇಳಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಅಜರೂಕತೆಯನ್ನು ನಾನು ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

    ಸೈನಾ ನೆಹ್ವಾಲ್ ಅವರ ಈ ಟ್ವೀಟ್ ಗೆ ಸಿದ್ದಾರ್ಥ್, ವಿಶ್ವದ ಸಟಲ್ ಕಾಕ್ ಚಾಂಪಿಯನ್. ದೇವರಿಗೆ ಧನ್ಯವಾದಗಳು ನಾವು ಭಾರತದ ರಕ್ಷಕರನ್ನು ಹೊಂದಿದ್ದೇವೆ. ರೆಹಾನ್ನಾ ನಿಮಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ:  ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

    ಪುರುಷನ ಮಮಾರ್ಂಗವನ್ನು ಗ್ರಾಮ್ಯವಾಗಿ ‘ಕಾಕ್’ ಎಂದು ಕರೆಯಲಾಗುತ್ತದೆ. ಈ ಟ್ವೀಟ್ ಮೂಲಕ ಸಿದ್ದಾರ್ಥ್ ಸೈನಾ ಅವರನ್ನು ಲೈಂಗಿಕವಾಗಿ ಅವಮಾನಿಸಿದ್ದಾರೆ  ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ ಗರಂ ಸಿದ್ದಾರ್ಥ್ ಖಾತೆಯನ್ನೇ ಬ್ಲಾಕ್ ಮಾಡುವಂತೆ ಟ್ವಿಟ್ಟರ್‌ಗೆ ಪತ್ರ ಬರೆದಿದೆ.

  • ಸೈನಾ ನೆಹ್ವಾಲ್ ಟ್ವೀಟ್‍ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ

    ಸೈನಾ ನೆಹ್ವಾಲ್ ಟ್ವೀಟ್‍ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ

    ನವದೆಹಲಿ: ತಮಿಳು ನಟ ಸಿದ್ದಾರ್ಥ್ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಲೈಂಗಿನ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

    ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು. ಯಾವುದೇ ರಾಷ್ಟ್ರದಲ್ಲಿ ಪ್ರಧಾನ ಮಂತ್ರಿಗೆ ಭದ್ರತೆ ಸಿಗದೇ ಇದ್ದರೆ, ಆ ದೇಶದಲ್ಲಿ ನಾವೂ ಸುರಕ್ಷಿತವಾಗಿದ್ದೇವೆ ಎಂದು ಹೇಳಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಅಜರೂಕತೆಯನ್ನು ನಾನು ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಟ್ವಿಸ್ಟ್- ಪಲ್ಸರ್ ಸುನಿಯ ವಕೀಲರೇ ಈಗ ಸಾಕ್ಷಿಧಾರ

    ಸೈನಾ ನೆಹ್ವಾಲ್ ಅವರ ಈ ಟ್ವೀಟ್‍ಗೆ ಕಾಲಿವುಡ್ ನಟ ಸಿದ್ದಾರ್ಥ್, ವಿಶ್ವದ ಸಟಲ್ ಕಾಕ್ ಚಾಂಪಿಯನ್. ದೇವರಿಗೆ ಧನ್ಯವಾದಗಳು ನಾವು ಭಾರತದ ರಕ್ಷಕರನ್ನು ಹೊಂದಿದ್ದೇವೆ. ರೆಹಾನ್ನಾ ನಿಮಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಪುರುಷನ ಮರ್ಮಾಂಗವನ್ನು ಗ್ರಾಮ್ಯವಾಗಿ ‘ಕಾಕ್’ ಎಂದು ಕರೆಯಲಾಗುತ್ತದೆ. ಈ ಟ್ವೀಟ್ ಮೂಲಕ ಸಿದ್ದಾರ್ಥ್ ಸೈನಾ ಅವರನ್ನು ಲೈಂಗಿಕವಾಗಿ ಅವಮಾನಿಸಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಧ್ವನಿಯನ್ನು ಅಡಗಿಸುವ ಅನೇಕ ಪ್ರಯತ್ನಗಳು ನಡೆದಿವೆ: ಭಾವನಾ ಮೆನನ್

    ಸಿದ್ದಾರ್ಥ್ ಅವರ ಈ ಟ್ವೀಟ್‍ಗೆ ಶಿವಸೇನೆಯ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು, ಈ ಟ್ವೀಟ್ ಅರ್ಥಪೂರ್ಣವಾದ್ದಲ್ಲ ಮತ್ತು ಇದು ಯಾರಿಗೂ ಬಳಸಲು ಯೋಗ್ಯವಲ್ಲದ ಭಾಷೆ. ಯಾವುದೇ ಭಿನ್ನಾಭಿಪ್ರಾಯ ಇರಲಿ, ಮಾತನಾಡುವಾಗ ಸಭ್ಯತೆ ಇರಬೇಕು. ಸೈನಾ ನೆಹ್ವಾಲ್ ನಮ್ಮ ದೇಶದ ಕ್ರೀಡಾ ಹೆಮ್ಮೆ, ಅವರಿಗೆ ರಾಜಕೀಯ ಮಾಡುವ ಹಕ್ಕಿದೆ. ರಾಷ್ಟ್ರದ ಉಳಿದವರ ಅಭಿಪ್ರಾಯ. ನೀವು ಅವರ ಹೇಳಿಕೆಯನ್ನು ಒಪ್ಪದಿದ್ದಲ್ಲಿ ಚರ್ಚೆ ಮಾಡಿ, ಆದರೆ ಅವರ ಆಲೋಚನೆ ಮತ್ತು ಚಿಂತನೆಗಳನ್ನು ಕೀಳಾಗಿ ಕಾಣುವುದಲ್ಲ. ಅವಹೇಳನಕಾರಿ ಟ್ವೀಟ್ ಮಾಡುವುದು ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ.

    ರಾಷ್ಟ್ರೀಯ ಮಹಿಳಾ ಆಯೋಗ ಗರಂ ಆಗಿದ್ದು ಸಿದ್ದಾರ್ಥ್ ಖಾತೆಯನ್ನೇ ಬ್ಲಾಕ್ ಮಾಡುವಂತೆ ಟ್ವಿಟ್ಟರ್‌ಗೆ ಪತ್ರ ಬರೆದಿದೆ.

  • ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದ್ರೆ, ಅದು ನಂಗೆ ಅಂದ್ರೆ ಜವಾಬ್ದಾರ ನಾನಲ್ಲ: ಸಿದ್ದಾರ್ಥ್

    ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದ್ರೆ, ಅದು ನಂಗೆ ಅಂದ್ರೆ ಜವಾಬ್ದಾರ ನಾನಲ್ಲ: ಸಿದ್ದಾರ್ಥ್

    ಚೆನ್ನೈ: ಟಾಲಿವುಡ್ ನಟ ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನ ಬಳಿಕ ಕಾಲಿವುಡ್ ನಟ ಸಿದ್ಧಾರ್ಥ್ ಮಾಡಿದ್ದ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಸದ್ಯ ಈ ಟ್ವೀಟ್ ಮಾಡಿದ್ದು ಯಾರಿಗೆ ಎಂಬುವುದರ ಬಗ್ಗೆ ಸಿದ್ದಾರ್ಥ್ ಸ್ಪಷ್ಟನೆ ನೀಡಿದ್ದಾರೆ.

    ಸಿದ್ದಾರ್ಥ್ ಹಾಗೂ ಸಮಂತಾ ಒಂದು ಕಾಲದಲ್ಲಿ ರಿಲೇಶನ್ ಶಿಪ್‍ನಲ್ಲಿದ್ದರು. ಆದರೆ ಕಾರಣಾಂತರಗಳಿಂದ ಇಬ್ಬರು ದೂರ ಆದರು. ಬಳಿಕ ಸಮಂತಾ, ನಾಗಚೈತನ್ಯರನ್ನು ಪ್ರೀತಿಸಿ ವಿವಾಹವಾದರು. ಆದ್ಯಾಗೂ ಕೆಲವು ಮನಸ್ತಾಪಗಳಿಂದ 4 ವರ್ಷಗಳ ನಂತರ ಇಬ್ಬರು ಇತ್ತೀಚೆಗಷ್ಟೇ ವಿಚ್ಛೇದನ ಪಡೆದುಕೊಂಡರು. ಈ ವೇಳೆ ಸಿದ್ದಾರ್ಥ್ ಮೋಸ ಮಾಡುವವರು ಎಂದಿಗೂ ಏಳಿಗೆಯಾಗುವುದಿಲ್ಲ, ಎನ್ನುವ ಪಾಠವನ್ನು ಬಾಲ್ಯದಲ್ಲಿ ನನ್ನ ಶಿಕ್ಷಕರಿಂದ ಕಲಿತೆ ಎಂದು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದರು.

    ಈ ಹಿನ್ನೆಲೆ ಸಿದ್ದಾರ್ಥ್ ಟ್ವೀಟ್‍ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಕೆಂಡಕಾರಿದ್ದಾರೆ. ಹೀಗೆ ಹೀನಾಯಾವಾಗಿ ಮಾತನಾಡಲು ಮನಸ್ಸಾದರೂ ಹೇಗೆ ಬರುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೋಸ ಮಾಡುವವರು ಎಂದಿಗೂ ಉದ್ಧಾರ ಆಗಲ್ಲ: ಸಿದ್ದಾರ್ಥ್

    ಹೀಗಾಗಿ ಈ ಕುರಿತಂತೆ ಸಿದ್ದಾರ್ಥ್ ತಮ್ಮ ಹಿಂದಿನ ಟ್ವೀಟ್ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ನಿತ್ಯ ನನ್ನ ಮನಸ್ಸಿಗೆ ಏನು ಬರುತ್ತದೆ ಅದನ್ನು ಟ್ವೀಟ್ ಮಾಡುತ್ತೇನೆ. ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದಾಗ ಅದು ನನಗೆ ಅಂದು ಕೊಂಡರೆ ನಾನು ಜವಾಬ್ದಾರನಲ್ಲ ಎಂದಿದ್ದಾರೆ. ಹೀಗೆ ಟ್ರೋಲ್ ಮಾಡುವವರಿಗೆ ಕಾರವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು: ಸಮಂತಾ

     

  • ಜಮ್ಮು-ಕಾಶ್ಮೀರ ವಿರುದ್ಧ ಭರ್ಜರಿ ಬ್ಯಾಟಿಂಗ್- ಸೆಮಿಯತ್ತ ಕರ್ನಾಟಕ?

    ಜಮ್ಮು-ಕಾಶ್ಮೀರ ವಿರುದ್ಧ ಭರ್ಜರಿ ಬ್ಯಾಟಿಂಗ್- ಸೆಮಿಯತ್ತ ಕರ್ನಾಟಕ?

    ಜಮ್ಮು: ಆರ್.ಸಿದ್ದಾರ್ಥ್, ಮನೀಶ್ ಪಾಂಡೆ ಹಾಗೂ ದೇವದತ್ತ ಪಡಿಕ್ಕಲ್ ಉತ್ತಮ ಬ್ಯಾಟಿಂಗ್‍ನಿಂದ ಕರ್ನಾಟಕ ತಂಡವು ಸೆಮಿ ಫೈನಲ್ ಪ್ರವೇಶದ ಭರವಸೆಯನ್ನು ಮೂಡಿಸಿದೆ.

    ರಣಜಿಯ ಟ್ರೋಫಿ 2019-20ರ ಭಾಗವಾಗಿ ಜಮ್ಮುವಿನ ಗಾಂಧಿ ಮೆಮೊರಿಯಲ್ ಸರ್ಕಾರಿ ಸೈನ್ಸ್ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಜಮ್ಮು-ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಉತ್ತಮ ಮುನ್ನಡೆ ಸಾಧಿಸಿದೆ.

    ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಕರ್ನಾಟಕ ತಂಡವು 69.1 ಓವರಿಗೆ 206 ರನ್ ಗಳಿಸಿ ಸರ್ವಪತನ ಕಂಡಿತ್ತು. ಈ ವೇಳೆ ಕರ್ನಾಟಕದ ಕೆ.ವಿ.ಸಿದ್ದಾರ್ಥ್ 76 ರನ್ (189 ಎಸೆತ, 9 ಬೌಂಡರಿ), ಮನೀಶ್ ಪಾಂಡೆ 37 ರನ್ (26 ಎಸೆತ, 7 ಬೌಂಡರಿ) ಗಳಿಸಿದ್ದರು.

    ಬಳಿಕ ಬ್ಯಾಟಿಂಗ್ ಆರಂಭಿಸಿದ ಜಮ್ಮು-ಕಾಶ್ಮೀರ ತಂಡವು ಆರಂಭದಲ್ಲೇ ಆಘಾತಕ್ಕೆ ತುತ್ತಾಗಿತ್ತು. ಪ್ರಮುಖ ಬ್ಯಾಟ್ಸ್‌ಮನ್‌ ಸೂರ್ಯಾಂಶ್ ರೈನಾ 12 ರನ್‍ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಬಳಿಕ ಬಂದ ಬ್ಯಾಟ್ಸ್‌ಮನ್‌ಗಳು ಬಹುಬೇಗ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆಗೆ ಪರೇಡ್ ನಡೆಸಿದರು. ಪರಿಣಾಮ ಜಮ್ಮು-ಕಾಶ್ಮೀರ 62.4 ಓವರ್‌ಗಳಲ್ಲಿ 192 ಆಲೌಟ್ ಆಯಿತು. ಈ ಮೂಲಕ ಕರ್ನಾಟಕ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 14 ರನ್ ಮುನ್ನಡೆ ಸಾಧಿಸಿತ್ತು.

    ಈ ಸಮಯದಲ್ಲಿ ಜಮ್ಮು-ಕಾಶ್ಮೀರದ ಪರ ಶುಭಂ ಖಜುರಿಯಾ 62 ರನ್ (155 ಎಸೆತ, 10 ಬೌಂಡರಿ) ಹಾಗೂ ಅಬ್ದುಲ್ ಸಾಮದ್ 43 ರನ್ (50 ಎಸೆತ, 6 ಬೌಂಡರಿ, 1 ಸಿಕ್ಸ್) ಗಳಿಸಿದ್ದರು. ಕರ್ನಾಟಕದ ಪರ ಪ್ರಸಿದ್ಧ ಕೃಷ್ಣ 4 ವಿಕೆಟ್ ಪಡೆದು ಮಿಂಚಿದರೆ, ರೋನಿತ್ ಮೊರೆ ಹಾಗೂ ಸುಚಿತ್ ಜಿ ತಲಾ ಎರಡು ವಿಕೆಟ್ ಕಿತ್ತಿದ್ದರು. ಉಳಿದಂತೆ ಗೌತಮ್ ಕೆ ಒಂದು ವಿಕೆಟ್ ಪಡೆದರೆ, ಅಭಿಮನ್ಯು ಮಿಥುನ್ ಯಾವುದೇ ವಿಕೆಟ್ ಪಡೆಯದಿದ್ದರೂ ಕನಿಷ್ಠ 25 ರನ್ ನೀಡಿದ್ದರು.

    ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ಉತ್ತಮ ಆರಂಭ ನೀಡಿತು. ಆರ್.ಸಮರ್ಥ್ ಹಾಗೂ ದೇವದತ್ತ ಪಡಿಕ್ಕಲ್ ಜೋಡಿಯು ಮೊದಲ ವಿಕೆಟ್‍ಗೆ 53 ರನ್‍ಗಳ ಕೊಡುಗೆ ನೀಡಿತು. ದೇವದತ್ತ 34 ರನ್ (33 ಎಸೆತ, 8 ಬೌಂಡರಿ) ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಮೈದಾನಕ್ಕಿಳಿ ನಾಯಕ ಕರುಣ್ ನಾಯರ್ 15 ರನ್ (33 ಎಸೆತ, 2 ಬೌಂಡರಿ) ದಾಖಲಿಸಿ ವಿಕೆಟ್ ಕಳೆದುಕೊಂಡರು. ಈ ಬೆನ್ನಲ್ಲೇ ಮೈದಾಕ್ಕಿಳಿದ ಸಿದ್ದಾರ್ಥ್ ಆರಂಭಿಕ ಬ್ಯಾಟ್ಸ್‌ಮನ್ ಸಮರ್ಥ್ ಜೊತೆ ಸೇರಿ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿಯು ಮೂರನೇ ವಿಕೆಟ್‍ಗೆ 98 ರನ್ ಕೊಡುಗೆ ನೀಡಿತು. ಸಮರ್ಥ್ 74 ರನ್ (133 ಎಸೆತ, 7 ಬೌಂಡರಿ) ಗಳಿಸಿ ವಿಕೆಟ್ ಒಪ್ಪಿಸಿದರು.

    5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಮನೀಶ್ ಪಾಂಡೆ 35 ರನ್ (35 ಎಸೆತ, 5 ಬೌಂಡರಿ, 1 ಸಿಕ್ಸ್) ಗಳಿಸಿ ವಿಕೆಟ್ ಒಪ್ಪಿಸಿದರು. 4ನೇ ದಿನದ ಮುಕ್ತಾಯದ ವೇಳೆಗೆ ಕರ್ನಾಟಕ ತಣಡವು 4 ವಿಕೆಟ್ ನಷ್ಟಕ್ಕೆ 245 ರನ್ ಪೇರಿಸಿದೆ. ಸಿದ್ದಾರ್ಥ್ 75 ರನ್ (136 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ಎಸ್.ಶರತ್ 9 ರನ್ (33 ಎಸೆತ) ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

    ಕರ್ನಾಟಕ ಈಗ 259 ರನ್ ಗಳ ಭರ್ಜರಿ ಮುನ್ನಡೆ ಸಾಧಿಸಿದೆ. ಮೊದಲ ಎರಡು ದಿನ ಆಟ ನಡೆಯದ ಕಾರಣ ಮತ್ತೆ ಮೂರು ದಿನ ಪಂದ್ಯ ನಡೆಯದೇ ಇದ್ದಲ್ಲಿ ಲೀಗ್ ಪಂದ್ಯ ಅಂಕದ ಆಧಾರದಲ್ಲಿ ಜಮ್ಮು ಕಾಶ್ಮೀರ ಸೆಮಿಫೈನಲ್ ಸುಲಭವಾಗಿ ಪ್ರವೇಶಿಸುತಿತ್ತು. ಆದರೆ ಈಗ ಕರ್ನಾಟಕ ಮೊದಲ ಇನ್ನಿಂಗ್ಸ್ ನಲ್ಲಿ 14 ರನ್ ಗಳ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಸೆಮಿ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಜಮ್ಮು ಕಾಶ್ಮೀರ ಸೆಮಿ ಪ್ರವೇಶಿಸಬೇಕಾದರೆ ಸೋಮವಾರ ಕರ್ನಾಟಕವನ್ನು ಬೇಗನೇ ಆಲ್ ಔಟ್ ಮಾಡಿ ಚೇಸಿಂಗ್ ಮಾಡಿ ಜಯಗಳಿಸುವ ಅನಿವಾರ್ಯತೆ ಎದುರಾಗಿದೆ.