Tag: ಸಿದ್ದು ನ್ಯಾಮಗೌಡ

  • ಭೂ ತಾಯಿಯ ಮಡಿಲಿನಲ್ಲಿ ಚಿರ ನಿದ್ರೆಗೆ ಜಾರಿದ  ಶಾಸಕ ಸಿದ್ದು ನ್ಯಾಮಗೌಡ

    ಭೂ ತಾಯಿಯ ಮಡಿಲಿನಲ್ಲಿ ಚಿರ ನಿದ್ರೆಗೆ ಜಾರಿದ ಶಾಸಕ ಸಿದ್ದು ನ್ಯಾಮಗೌಡ

    ಬಾಗಲಕೋಟೆ: ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅಂತ್ಯಕ್ರಿಯೆಯನ್ನು ಜಮಖಂಡಿ ತಾಲೂಕಿನ ನಾಗನೂರು ಗ್ರಾಮದ ಬಳಿ ಇರುವ ಜಮಖಂಡಿ ಶುಗರ್ಸ್ ಕಾರ್ಖಾನೆಯ ಆವರಣದಲ್ಲಿ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಮೂಲಕ ನೆರವೇರಿಸಲಾಯಿತು.

    ಮುಂದಿನ ದಿನಗಳಲ್ಲಿ ಸಿದ್ದು ನ್ಯಾಮಗೌಡರ ಪುತ್ಥಳಿ ನಿರ್ಮಿಸುವ ಉದ್ದೇಶದಿಂದ ಕಾರ್ಖಾನೆ ಮುಖ್ಯ ದ್ವಾರದ ಎದುರು ಸಮಾಧಿ ಮಾಡಲಾಗಿದೆ. ಗದಗಿನ ತೊಂಟದಾರ್ಯ ಶ್ರೀಗಳು, ಮುತ್ತಿನಕಂತಿಮಠದ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಧಾರ್ಮಿಕ ಕ್ರಿಯಾವಿಧಿಗಳು ನೆರವೇರಿಸಿದ್ರು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂಜಿ ಪರಮೇಶ್ವರ ಸೇರಿದಂತೆ ರಾಜ್ಯ ನಾಯಕರು ಅಂತ್ಯ ಕ್ರಿಯೆಯಲ್ಲಿ ಭಾಗಿಯಾದ್ರು.

    ಒಬ್ಬ ಪ್ರಾಮಾಣಿಕ ಸ್ನೇಹಿತ, ಒಡನಾಟಿಯನ್ನ ಕಳೆದುಕೊಂಡಿದ್ದೇನೆ. ದೆಹಲಿಯಲ್ಲಿ ನನ್ನನ್ನ ಭೇಟಿಯಾಗಿ ಮಂತ್ರಿ ಸ್ಥಾನದ ಬಗ್ಗೆ ವಿಚಾರ ಹಂಚಿಕೊಂಡಿದ್ರು. ಮಂತ್ರಿ ಸ್ಥಾನ ನೀಡುವ ಭರವಸೆಯನ್ನ ನೀಡಲಾಗಿತ್ತು. ದೆಹಲಿಯಿಂದ ಬೆಂಗಳೂರಿಗೆ ಬರುವ ಬದಲು, ಗೋವಾಗೆ ಹೋಗಿದ್ದು ವಿಧಿ ಲಿಖಿತ. ಸರಳ ಸಜ್ಜನಿಕೆಯ ವ್ಯಕ್ತಿಯನ್ನ ಕಳೆದುಕೊಂಡಿದ್ದು ನನಗೆ ಭಾರೀ ನೋವು ಉಂಟುಮಾಡಿದೆ. ರೈತಪರ ಕಾಳಜಿ ಹೊಂದಿದ್ದ ವ್ಯಕ್ತಿ ನ್ಯಾಮಗೌಡ. ಶಾಸಕರ ಸಾವಿನ ವಿಷಯ ತಿಳಿಯುತ್ತಿದ್ದಂತೆ ಸೋನಿಯಾ, ರಾಹುಲ್ ಗಾಂಧಿ ಸಂತಾಪವನ್ನು ನನ್ನ ಎದುರು ವ್ಯಕ್ತಪಡಿಸಿದ್ರು ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ರು.

    ಸೋಮವಾರ ಬೆಳಗಿನ ಜಾವ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದ ಬಳಿ ಶಾಸಕರ ಕಾರು ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದರಿಂದ ಮುಂಭಾಗದಲ್ಲಿ ಕುಳಿತಿದ್ದ ಶಾಸಕರು ಗಂಭೀರವಾಗಿ ಗಾಯಗೊಂಡಿದ್ರು. ಕೂಡಲೇ ಶಾಸಕರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶಾಸಕರು ಸಾವನ್ನಪ್ಪಿದ್ರು.

  • ಬಾಗಲಕೋಟೆಯಲ್ಲಿ ಬಂದ್ ಹಿಂಪಡೆದ ಬಿಜೆಪಿ

    ಬಾಗಲಕೋಟೆಯಲ್ಲಿ ಬಂದ್ ಹಿಂಪಡೆದ ಬಿಜೆಪಿ

    ಬಾಗಲಕೋಟೆ: ಇಂದು ನಸುಕಿನ ಜಾವ ಜಮಖಂಡಿ ಶಾಸಕ, ಹಿರಿಯ ರಾಜಕಾರಣಿ ಸಿದ್ದು ನ್ಯಾಮಗೌಡ ನಿಧನ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿದ್ದ ಬಂದ್‍ನ್ನು ಬಿಜೆಪಿ ಹಿಂಪಡೆದಿದೆ.

    ಹಿರಿಯ ರಾಜಕಾರಣಿಗಳು, ಅಪಾರ ಬೆಂಬಲಿಗರನ್ನು ಹೊಂದಿರುವ ಶಾಸಕರು ಇಂದು ಸಾವನ್ನಪ್ಪಿದ್ದು, ಕ್ಷೇತ್ರದ ಜನರು ತಮ್ಮ ನೆಚ್ಚಿನ ಜನನಾಯಕರ ಅಂತಿಮ ದರ್ಶನಕ್ಕೆ ಆಗಮಿಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಪಕ್ಷ ಕರೆ ನೀಡಿದ್ದ ಬಂದ್ ನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ತೇರದಾಳ ಕ್ಷೇತ್ರದ ಶಾಸಕ, ಬಿಜೆಪಿ ಮುಖಂಡ ಸಿದ್ದು ಸವದಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಇನ್ನಿಲ್ಲ

    ಈ ಬಾರಿ ಬಾಗಲಕೋಟೆ ಜಿಲ್ಲೆಯಲ್ಲಿ ಕೇವಲ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ಮಾತ್ರ ಗೆಲುವ ಸಾಧಿಸಿದ್ರು. ಬದಾಮಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಗೆಲುವು ಸಾಧಿಸಿದ್ರೆ, ಇತ್ತ ಜಮಖಂಡಿಯಲ್ಲಿ ಸಿದ್ದು ನ್ಯಾಮಗೌಡ ಗೆಲುವನ್ನು ಕಂಡಿದ್ರು. ಈ ಹಿನ್ನೆಲೆಯಲ್ಲಿ ತಮಗೆ ಸಚಿವ ಸ್ಥಾನ ನೀಡಬೇಕೆಂದು ದೆಹಲಿಗೆ ತೆರಳಿ ಹೈಕಮಾಂಡ್‍ಗೆ ಮನವಿ ಸಲ್ಲಿಸಿ ಹಿಂದಿರುವ ವೇಳೆ ಅಪಘಾತ ಸಂಭವಿಸಿದೆ.

  • ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಇನ್ನಿಲ್ಲ

    ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಇನ್ನಿಲ್ಲ

    -ಬಾಗಲಕೋಟೆ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವು

    ಬಾಗಲಕೋಟೆ: ಇಂದು ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಇಹಲೋಕ ತ್ಯಜಿಸಿದ್ದಾರೆ.

    ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದ ಬಳಿ ನಸುಕಿನ ಜಾವ 4.30ರ ಸುಮಾರಿಗೆ ಎದುರಿನಿಂದ ಬಂದ ಲಾರಿ ತಪ್ಪಿಸಲು ಹೋಗಿ ರಸ್ತೆ ಬದಿಯ ಪೂಲ್‍ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಸಿದ್ದುನ್ಯಾಮಗೌಡ ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ರು. ಕೂಡಲೇ ಎಲ್ಲರನ್ನು ನಗರದ ಕೆರೂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಶಾಸಕ 70 ವರ್ಷದ ಸಿದ್ದುನ್ಯಾಮಗೌಡ ಎದೆಗೆ ಗಂಭೀರ ಗಾಯವಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ರು. ಸಂಪುಟದಲ್ಲಿ ಸ್ಥಾನ ಪಡೆಯೋ ಸಲುವಾಗಿ ಲಾಬಿ ನಡೆಸಲು ದೆಹಲಿಗೆ ತೆರಳಿದ್ದ ಶಾಸಕ ಸಿದ್ದು ನ್ಯಾಮ ಗೌಡ, ಕಳೆದ ರಾತ್ರಿ ಗೋವಾಗೆ ವಿಮಾನದಲ್ಲಿ ಬಂದು ರಸ್ತೆ ಮಾರ್ಗವಾಗಿ ಜಮಖಂಡಿಗೆ ಮರಳುತ್ತಿದ್ರು. ದೆಹಲಿಯ ನಿಜಾಮುದ್ದಿನ್ ಔಲಿಯಾ ದರ್ಗಾಕ್ಕೆ ಹೋಗಿದ್ದ ಮೌಲಾನಾ ರಿಜ್ವಿ ಮತ್ತು ಅಬ್ದುಲ್ ರಶೀದ್‍ರನ್ನ ಶಾಸಕರಾದ ಸಿದ್ದು ನ್ಯಾಮಗೌಡ ತಮ್ಮದೇ ಕಾರಿನಲ್ಲಿ ಕೂರಿಸಿಕೊಂಡು ಜಮಖಂಡಿಗೆ ಮರಳುತ್ತಿದ್ರು. ಇವರಿಬ್ರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಅಪಘಾತದಲ್ಲಿ ಚಾಲಕ ಪರಮಾನಂದ್ ಅಂಬಿ ಮತ್ತು ಅನ್ವರ್ ಮೊಮಿನ್ ಕೂಡ ಗಾಯಗೊಂಡಿದ್ದು, ಅವರಿಗೂ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿದೆ. ಇದೀಗ ಶಾಸಕ ಸಿದ್ದುನ್ಯಾಮಗೌಡ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಲಾಗ್ತಿದೆ. ಶಾಸಕರ ಪುತ್ರ ಆನಂದ್ ನ್ಯಾಮಗೌಡ ಸೇರಿದಂತೆ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

     

  • ಮಹಿಳೆಯೊಬ್ಬರ ಜೊತೆ ಸರಸ ಸಲ್ಲಾಪ? ಶಾಸಕ ಸಿದ್ದು ನ್ಯಾಮಗೌಡಗೆ ಸೇರಿದ್ದು ಎನ್ನಲಾದ ಆಡಿಯೋ ವೈರಲ್!

    ಮಹಿಳೆಯೊಬ್ಬರ ಜೊತೆ ಸರಸ ಸಲ್ಲಾಪ? ಶಾಸಕ ಸಿದ್ದು ನ್ಯಾಮಗೌಡಗೆ ಸೇರಿದ್ದು ಎನ್ನಲಾದ ಆಡಿಯೋ ವೈರಲ್!

    ಬಾಗಲಕೋಟೆ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಮೊಬೈಲ್ ಆಡಿಯೋ ಒಂದು ಹೊರಬಿದ್ದಿದ್ದು, ಸಖತ್ ವೈರಲ್ ಆಗಿದೆ.

    ಈ ಆಡಿಯೋದಲ್ಲಿ ಇರುವ ವ್ಯಕ್ತಿಯ ಧ್ವನಿ ಶಾಸಕ ಸಿದ್ದು ನ್ಯಾಮಗೌಡ ಅವರ ಧ್ವನಿಗೆ ಹೋಲಿಕೆ ಇದ್ದು, ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಜೊತೆ ಮೊಬೈಲ್ ನಲ್ಲಿ ಸಂಭಾಷಣೆ ನಡೆಸಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಸಂಭಾಷಣೆಯಲ್ಲಿ ಮಹಿಳೆ ಹಾಗೂ ವ್ಯಕ್ತಿಯ ನಡುವೆ ನಿಕಟ ಪರಿಚಯ ಇರುವುದು ಸ್ಪಷ್ಟವಾಗುತ್ತದೆ.

    21 ನಿಮಿಷವಿರುವ ಆಡಿಯೋದಲ್ಲಿ ಮಹಿಳೆಯೊಂದಿಗೆ ಸರಸ ಸಲ್ಲಾಪ ನಡೆಸಿದ್ದಾರೆ. ಇನ್ನು ಮಹಿಳೆಗೆ ನಿನ್ನನ್ನು ನಗರಸಭೆ ಅಧ್ಯಕ್ಷೆಯನ್ನಾಗಿ ಮಾಡುತ್ತೇನೆ ಎಂದು ಪುಸಲಾಯಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಆಡಿಯೋ ಬಿಡುಗಡೆಯಾಗಿದ್ದು, ಕ್ಷೇತ್ರದ ಎಲ್ಲೆಡೆ ವೈರಲ್ ಆಗಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ನ್ಯಾಮಗೌಡ, ಚುನಾವಣೆ ಸಮೀಪವಾಗುತ್ತಿದಂತೆ ನನ್ನ ವಿರುದ್ಧ ಅಪಪ್ರಚಾರ ನಡೆಲು ಇಂತಹ ನಕಲಿ ಆಡಿಯೋ ಬಿಡುಗಡೆ ಮಾಡಲಾಗಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಎಸ್‍ಪಿ ಅವರಿಗೆ ಈಗಾಗಲೇ ದೂರು ನೀಡಿದ್ದೇನೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

    https://www.youtube.com/watch?v=9tl4el4G4-4

  • ರೈತನ ಹೆಸ್ರಲ್ಲಿ ಸಾಲ ಪಡೆದು ಮೋಸ- ಶಾಸಕ ಸಿದ್ದು ನ್ಯಾಮಗೌಡರ ಜಮಖಂಡಿ ಶುಗರ್ಸ್‍ನಿಂದ ಅಕ್ರಮ

    ರೈತನ ಹೆಸ್ರಲ್ಲಿ ಸಾಲ ಪಡೆದು ಮೋಸ- ಶಾಸಕ ಸಿದ್ದು ನ್ಯಾಮಗೌಡರ ಜಮಖಂಡಿ ಶುಗರ್ಸ್‍ನಿಂದ ಅಕ್ರಮ

    ಬಾಗಲಕೋಟೆ: ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡರ ಕಾರ್ಖಾನೆ ರೈತರೊಬ್ಬರಿಗೆ ನಾಮ ಹಾಕಿರೋದು ಗೊತ್ತಾಗಿದೆ.

    ಬ್ಯಾಂಕ್ ಅಕೌಂಟ್ ಮಾಡಿಕೊಡ್ತೀವಿ ಅಂತ ರೈತನಿಂದ ದಾಖಲೆ ಪಡೆದು ರೈತನ ಹೆಸರಲ್ಲೇ ಸಾಲ ತೆಗೆದುಕೊಂಡಿದ್ದಾರೆ. ತಮ್ಮ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಕಬ್ಬಿನ ಬಾಕಿ ಹಣ ನೀಡದೆ ಶಾಸಕರು ಸತಾಯಿಸುತ್ತಿದ್ದು, ರೈತನಿಗೆ ಗೊತ್ತಾಗದಂತೆ ಲಕ್ಷಾಂತರ ರೂಪಾಯಿ ಸಾಲ ಪಡೆಯಲಾಗಿದೆ. ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರಿಗೆ ಸೇರಿದ ಜಮಖಂಡಿ ಶುಗರ್ಸ್ ಕಾರ್ಖಾನೆ ಈ ರೀತಿ ರೈತನಿಗೆ ಮಕ್ಮಲ್ ಟೋಪಿ ಹಾಕಿದೆ.

    2012-13ರಲ್ಲಿ ಜಮಖಂಡಿ ತಾಲೂಕಿನ ತುಂಗಳ ಗ್ರಾಮದ ನಿವಾಸಿ ಪರಗೌಡ ಶೇಗುಣಶಿ ಹೆಸರಿನಲ್ಲಿ 10 ಲಕ್ಷ 95 ಸಾವಿರದ 63 ರೂಪಾಯಿ ಸಾಲ ಪಡೆಯಲಾಗಿದೆ. ಎರಡು ದಿನದ ಹಿಂದೆ ಬೆಳೆ ಸಾಲ ಪಡೆಯಲು ಸಿಂಡಿಕೇಟ್ ಬ್ಯಾಂಕ್‍ಗೆ ಹೋದಾಗ ಪರಗೌಡ ಅವರ ಹೆಸರಲ್ಲಿ ಸಾಲ ಇರುವ ವಿಷಯ ಗೊತ್ತಾಗಿದೆ. ಓರ್ವ ಶಾಸಕರಿಗೆ ಸೇರಿದ ಫ್ಯಾಕ್ಟರಿಯಿಂದಲೇ ಇಂತಹ ವಂಚನೆಯಾಗಿದೆ ಅಂದ್ರೆ ಬೇರೆಯವರ ಮಾಲೀಕತ್ವದ ಕಂಪನಿಗಳಲ್ಲಿ ಕಥೆ ಏನು ಅನ್ನೋದು ಪ್ರಶ್ನೆಯಾಗಿದೆ.