Tag: ಸಿದ್ಧಾರ್ಥ

  • ನಿಶ್ಚಿತಾರ್ಥ ಸುದ್ದಿ ಬಹಿರಂಗವಾಗಲು ಅಮ್ಮ ಕಾರಣ ಎಂದ ನಟಿ ಅದಿತಿ

    ನಿಶ್ಚಿತಾರ್ಥ ಸುದ್ದಿ ಬಹಿರಂಗವಾಗಲು ಅಮ್ಮ ಕಾರಣ ಎಂದ ನಟಿ ಅದಿತಿ

    ತ್ತೀಚೆಗಷ್ಟೇ ನಟಿ ಅದಿತಿ ರಾವ್ ಹೈದರ್ ಮತ್ತು ತೆಲುಗು ನಟ ಸಿದ್ಧಾರ್ಥ ಎಂಗೇಜ್ ಆದ ವಿಷಯ ಬಹಿರಂಗವಾಗಿತ್ತು. ಆಪ್ತರಿಗೂ ಈ ವಿಷಯ ತಿಳಿಸದೇ ಕೇವಲ ಕುಟುಂಬಸ್ಥರು ಸೇರಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು  ಮುಗಿಸಿದ್ದರು. ಇದು ಗಾಸಿಪ್ ರೀತಿಯಲ್ಲಿ ಹರಡಿತ್ತಾದರೂ, ಯಾರೂ ವಿಷಯವನ್ನು ಖಚಿತ ಪಡಿಸಿರಲಿಲ್ಲ. ನಂತರ ಅದಿತಿ ಅವರೇ ಈ ವಿಷಯ ಹಂಚಿದ್ದರು.

    ಹೌದು, ನಿಶ್ಚಿತಾರ್ಥದ ವಿಷಯವು ಬಹಿರಂಗವಾಗಲು ತಮ್ಮ ತಾಯಿಯೇ ಕಾರಣ ಎಂದಿದ್ದಾರೆ ನಟಿ. ನಾನು ಎಂಗೇಜ್ ಮೆಂಟ್ ಮಾಡಿಕೊಂಡ ವಿಷಯವನ್ನು ಯಾರಿಗೂ ಹೇಳಿರಲಿಲ್ಲ. ಆದರೂ, ಗೊತ್ತಾಗಿತ್ತು. ಅಮ್ಮನಿಗೆ ಪದೇ ಪದೇ ಕಾಲ್ ಮಾಡಿ ಕೇಳುತ್ತಿದ್ದರು. ಹಾಗಾಗಿ ಅವರೇ ಈ ವಿಷಯವನ್ನು ತಿಳಿಸಿ ಬಿಡು ಅಂದಿದ್ದರು ಎಂದಿದ್ದಾರೆ ಅದಿತಿ.

    ಆಗಿದ್ದು ನಿಶ್ಚಿತಾರ್ಥವಾದರೂ, ಸೋಷಿಯಲ್ ಮೀಡಿಯಾದಲ್ಲಿ ಅದಿತಿ ರಾವ್ ಹೈದರಿ(Aditi Rao Hydari) ಸಿದ್ಧಾರ್ಥ್  (Siddarth) ಸದ್ದಿಲ್ಲದೇ ಮದುವೆಯಾ ಆಗಿದ್ದಾರೆ ಎಂದು ಸುದ್ದಿ ಆಗಿತ್ತು. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎಂದು ಸುದ್ದಿ ಹಬ್ಬಿಸಿದ್ದರು.

    ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಅವರ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗಿತ್ತು. ಶೂಟಿಂಗ್ ಎಂದು ಸುಳ್ಳು ಹೇಳಿ ಇಬ್ಬರೂ ಮದುವೆ ಆಗಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಎಲ್ಲದಕ್ಕೂ ಅದಿತಿ ಉತ್ತರ ನೀಡಿದ್ದರು. ಹಿ ಸೇಡ್ ಎಸ್.. ಎಂಗೇಜ್ಡ್’ (Engaged) ಎಂದು ಸಿದ್ಧಾರ್ಥನ ಜೊತೆಗಿರುವ ಫೋಟೋ ಹಂಚಿಕೊಂಡಿದ್ದರು.

    ಈ  ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿತ್ತು. ಆದರೆ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ (Wedding) ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್.

     

    ನ್ಯೂ ಇಯರ್ ಸಂಭ್ರಮವನ್ನು ನಟಿ ಅದಿತಿ- ಸಿದ್ಧಾರ್ಥ್ ಜೋಡಿ ವಿದೇಶದಲ್ಲಿ ಸೆಲೆಬ್ರೇಟ್ ಮಾಡಿದ್ದರು. ಈ ಕುರಿತ ಇಬ್ಬರೂ ಕೂಡ ಚೆಂದದ ಫೋಟೋ ಶೇರ್ ಮಾಡಿ ಅಭಿಮಾನಿಗಳಿಗೆ ಶುಭಕೋರಿದ್ದರು. ಈ ಮೂಲಕ ಎಂಗೇಜ್ ಆಗಿರೋದು ಖಚಿತವಾಗಿತ್ತು. ಫೋಟೋ ಶೇರ್ ಮಾಡ್ತಿದ್ದಂತೆ ಮದುವೆ ಯಾವಾಗ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದರು.

  • ಶಿವರಾಜ್ ಕುಮಾರ್ ಕ್ಷಮೆಯನ್ನು ನಾನು ಸ್ವೀಕರಿಸಲಾರೆ : ನಟ ಸಿದ್ದಾರ್ಥ

    ಶಿವರಾಜ್ ಕುಮಾರ್ ಕ್ಷಮೆಯನ್ನು ನಾನು ಸ್ವೀಕರಿಸಲಾರೆ : ನಟ ಸಿದ್ದಾರ್ಥ

    ಮಿಳಿನ ಪ್ರತಿಭಾವಂತ ನಟ ಸಿದ್ದಾರ್ಥ ತಮ್ಮ ಸಿನಿಮಾದ ಪತ್ರಿಕಾಗೋಷ್ಠಿಗಾಗಿ ಬೆಂಗಳೂರಿಗೆ ಬಂದಾಗ ಕನ್ನಡಪರ ಕೆಲ ಹೋರಾಟಗಾರರು ಅವರನ್ನು ತಡೆದಿದ್ದರು. ಕಾವೇರಿ (Cauvery) ಹೋರಾಟ ನಡೆಯುತ್ತಿರುವಾಗ ತಮಿಳು ಚಿತ್ರವೊಂದರ ಪತ್ರಿಕಾಗೋಷ್ಠಿಯನ್ನು ನಡೆಸಬಾರದು ಎಂದು ಮನವಿ ಮಾಡಿಕೊಂಡಿದ್ದರು. ಆ ವಿಡಿಯೋ ವೈರಲ್ ಆಗಿತ್ತು. ಪರ ಮತ್ತುವಿರೋಧದ ಚರ್ಚೆಗೂ ಕಾರಣವಾಗಿತ್ತು.

    ಈ ಘಟನೆಗೆ ಸಂಬಂಧಿಸಿದಂತೆ ಹಿರಿಯ ನಟ ಶಿವರಾಜ್ ಕುಮಾರ್ ಮತ್ತು ಪ್ರಕಾಶ್ ರಾಜ್ ಇಬ್ಬರೂ ಸಿದ್ದಾರ್ಥಗೆ ಕ್ಷಮೆ ಕೇಳಿದ್ದರು. ಈ ಘಟನೆ ಆಗಬಾರದಿತ್ತು ಎಂದು ಪ್ರತಿಕ್ರಿಯಿಸಿದರು. ಈ ಕುರಿತಂತೆ ಇದೇ ಮೊದಲ ಬಾರಿಗೆ ಸಿದ್ದಾರ್ಥ (Siddhartha) ಮಾತನಾಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಪ್ರಕಾಶ್ ರಾಜ್ ಅವರ ಕ್ಷಮೆಯನ್ನು ನಾನು ಸ್ವೀಕಾರ ಮಾಡಲಾರೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಹಿರಿಯ ನಟರಿಗೆ ಗೌರವ ನೀಡಿದ್ದಾರೆ.ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ನಾನು ಹೋಗುತ್ತಿಲ್ಲ: ನಟಿ ರಂಜನಿ ರಾಘವನ್ ಸ್ಪಷ್ಟನೆ

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಿದ್ದಾರ್ಥ, ‘ಶಿವರಾಜ್ ಕುಮಾರ್ (Shivraj Kumar) ಮತ್ತು ಪ್ರಕಾಶ್ ರಾಜ್  (Prakash Raj)ಹಿರಿಯ ಕಲಾವಿದರು. ಅವರಿಗೂ ಮತ್ತು ನಡೆದ ಘಟನೆಗೂ ಸಂಬಂಧವೇ ಇರಲಿಲ್ಲ. ಆದರೂ, ಕಲಾವಿದರ ಮೇಲಿನ ಗೌರವಕ್ಕಾಗಿ ಅವರು ನನಗೆ ಕ್ಷಮೆ ಕೇಳಿದ್ದಾರೆ. ಅವರು ಮಾಡದೇ ಇರುವ ತಪ್ಪಿಗೆ ಕ್ಷಮೆ ಕೇಳಬಾರದಿತ್ತು. ಹಾಗಾಗಿ ನಾನು ಅವರ ಕ್ಷಮೆಯನ್ನು ಸ್ವೀಕರಿಸುವುದಿಲ್ಲ. ಆ ಇಬ್ಬರ ಕಲಾವಿದರ ಮೇಲೆ ನನಗೆ ಇನ್ನೂ ಗೌರವ ಹೆಚ್ಚಾಯಿತು’ ಎಂದಿದ್ದಾರೆ.

     

    ಕಾವೇರಿ ನದಿ ನೀರಿನ ಹಂಚಿಕೆಯ ಕುರಿತಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ್ದಾರೆ. ನಾನು ಒಬ್ಬ ನಟನಾಗಿ ನನ್ನ ಸಿನಿಮಾ ಬಗ್ಗೆ ಮಾತನಾಡುತ್ತೇನೆ. ಇದು ರಾಜಕೀಯದಲ್ಲಿ ನನ್ನನ್ನು ಎಳೆತರಬೇಡಿ. ಕಾವೇರಿ ವಿಚಾರದಲ್ಲಿ ನಾನು ಏನೂ ಸದ್ಯ ಮಾತನಾಡಲಾರೆ. ನನ್ನ ಸಿನಿಮಾ ಬಗ್ಗೆ ಪ್ರಚಾರ ಮಾಡಲು ನಾನು ಬಂದಿದ್ದೇನೆ ಎಂದಿದ್ದಾರೆ ಸಿದ್ದಾರ್ಥ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ನೆಲದಲ್ಲಿ ಹೀಗೆ ಆಗಬಾರದಿತ್ತು: ನಟ ಸಿದ್ದಾರ್ಥ

    ಕರ್ನಾಟಕ ನೆಲದಲ್ಲಿ ಹೀಗೆ ಆಗಬಾರದಿತ್ತು: ನಟ ಸಿದ್ದಾರ್ಥ

    ಕಾವೇರಿ (Cauvery) ಗಲಾಟೆಯ ಸಂದರ್ಭದಲ್ಲಿ ತಮಿಳು ನಟ ಸಿದ್ಧಾರ್ಥ (Siddharth), ತಮ್ಮ ಚಿಕ್ಕು ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕೆಲ ಕಾರ್ಯಕರ್ತರು ಸಿದ್ದಾರ್ಥ ನಡೆಸುತ್ತಿದ್ದ ಪತ್ರಿಕಾಗೋಷ್ಠಿಗೆ ಆಗಮಿಸಿ, ತಡೆದಿದ್ದರು. ಈ ಕುರಿತು ಕರ್ನಾಟಕದಲ್ಲೇ ಪರ ವಿರೋಧದ ಮಾತುಗಳೂ ಕೇಳಿ ಬಂದಿದ್ದವು.

    ಈ ಘಟನೆಗೆ ಸಂಬಂಧಿಸಿದಂತೆ ನಟ ಸಿದ್ಧಾರ್ಥ ಇದೀಗ ಪ್ರತಿಕ್ರಿಯೆಯನ್ನು (Response) ಕೊಟ್ಟಿದ್ದಾರೆ. ‘ನಾನು ನಟ. ಒಳ್ಳೆಯ ಸಿನಿಮಾ ಮಾಡಿದ್ದೇನೆ. ಸಾವಿರಾರು ಮಕ್ಕಳಿಗೆ ಈ ಸಿನಿಮಾವನ್ನು ಉಚಿತವಾಗಿ ತೋರಿಸುವ ಉದ್ದೇಶ ಹೊಂದಿದ್ದೇನೆ. ಕರ್ನಾಟಕದಲ್ಲೂ ಸಿನಿಮಾವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುತ್ತಾರೆ ಎನ್ನುವ ನಂಬಿಕೆ ಇತ್ತು. ಆದರೆ, ನನಗೆ ಆ ನೆಲದಲ್ಲಿ ಹಾಗೆ ಆಗಬಾರದಿತ್ತು. ಕಾವೇರಿ ಹೋರಾಟಕ್ಕೂ ಸಿನಿಮಾಗೂ ಸಂಬಂಧ ಕಲ್ಪಿಸಬಾರದು’ ಎಂದಿದ್ದಾರೆ. ಇದನ್ನೂ ಓದಿ:ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ಹನಿಮೂನ್ ಪ್ಲ್ಯಾನ್ ಕ್ಯಾನ್ಸಲ್ ಆಗಿದ್ದೇಕೆ?

    ಸಿದ್ಧಾರ್ಥ ಅವರ ಸುದ್ದಿಗೋಷ್ಠಿಗೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಿರೋದ್ದಕ್ಕೆ ನಟ ಶಿವಣ್ಣ (Shivarajkumar) ಈ ಹಿಂದೆಯೇ ಪ್ರತಿಕ್ರಿಯೆ ನೀಡಿದ್ದರು. ನಮ್ಮ ಇಂಡಸ್ಟ್ರಿ ಪರವಾಗಿ ಸಿದ್ಧಾರ್ಥಗೆ ಕ್ಷಮೆ ಕೇಳುತ್ತೇನೆ. ಇನ್ಮುಂದೆ ಈ ರೀತಿ ಆಗಲ್ಲ ಎಂದು ಶಿವಣ್ಣ ಹೇಳಿದ್ದರು. ಶಿವಣ್ಣ ಆಡಿದ ಈ ಮಾತಿಗೂ ಪರ ವಿರೋಧದ ಚರ್ಚೆ ಶುರುವಾಗಿದೆ.

     

    ನಾವು ಏನೇ ಮಾಡಿದರೂ ಬೇರೆಯವರಿಗೆ ಹರ್ಟ್ ಆಗಬಾರದು. ಆಗಿರುವ ಘಟನೆ ತಪ್ಪು. ಹೀಗೆಲ್ಲ ಮಾಡಬಾರದು ಎಂದು ಮಾತನಾಡಿದ್ದಾರೆ. ಕನ್ನಡಿಗರೆಂದರೆ ಎಲ್ಲರನ್ನೂ ಪ್ರೀತಿ, ವಿಶ್ವಾಸದಿಂದ ಕಾಣುವವರು. ಪ್ರತಿಯೊಬ್ಬರನ್ನು ಸ್ವಾಗತಿಸುವವರು ಎಂಬ ಭಾವನೆ ಇದೆ. ಅದಕ್ಕೆ ನಾವು ಚ್ಯುತಿ ತರಬಾರದು. ಸಿದ್ಧಾರ್ಥ್‌ಗೆ ಈ ಮೂಲಕ ನಾನು ಕ್ಷಮೆ ಕೇಳುತ್ತೇನೆ ಎಂದು ಶಿವಣ್ಣ ಮಾತನಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ವಿಚಾರದಲ್ಲಿ ಕಲಾವಿದರನ್ನು ಹಿಂಸಿಸುವುದು ತಪ್ಪು : ಪ್ರಕಾಶ್ ರಾಜ್

    ಕಾವೇರಿ ವಿಚಾರದಲ್ಲಿ ಕಲಾವಿದರನ್ನು ಹಿಂಸಿಸುವುದು ತಪ್ಪು : ಪ್ರಕಾಶ್ ರಾಜ್

    ನಿನ್ನೆಯಷ್ಟೇ ಬೆಂಗಳೂರಿನಲ್ಲಿ ತಮ್ಮ ಸಿನಿಮಾ ಪ್ರಚಾರಕ್ಕಾಗಿ ತಮಿಳು (Tamil) ನಟ ಸಿದ್ಧಾರ್ಥ (Siddhartha) ಬೆಂಗಳೂರಿಗೆ ಆಗಮಿಸಿದ್ದರು. ಇಂದು ಬಿಡುಗಡೆ ಆಗಲಿರುವ ಅವರ ಚಿತ್ರಕ್ಕೆ ಅವರು ಪ್ರಚಾರದಲ್ಲಿ ತೊಡಗಿದ್ದರು. ಈ ಮಾಹಿತಿಯನ್ನು ಪಡೆದಿದ್ದ ಕನ್ನಡಪರ ಕೆಲ ಕಾರ್ಯಕರ್ತರು ಪತ್ರಿಕಾಗೋಷ್ಠಿಗೆ ಆಗಮಿಸಿ, ಸಿನಿಮಾ ಪ್ರಚಾರ ಮಾಡದಂತೆ ತಡೆದರು. ಇಂತಹ ಸಂದರ್ಭದಲ್ಲಿ ಅನ್ಯ ಭಾಷಾ ಚಿತ್ರಗಳು ರಿಲೀಸ್ ಆಗುವುದನ್ನು ವಿರೋಧಿಸಿದರು.

    ಮಾಧ್ಯಮಗೋಷ್ಠಿಯ ಮಧ್ಯ ಆಗಮಿಸಿದ ಚಳವಳಿಗಾರರು ಸಿದ್ಧಾರ್ಥ ಅವರನ್ನು ಮಾತನಾಡದಂತೆ ತಡೆದರು. ಕೊನೆಗೆ ಧನ್ಯವಾದಗಳನ್ನು ತಿಳಿಸಿ, ಮಾಧ್ಯಮಗೋಷ್ಠಿಯಿಂದ ಹೊರ ನಡೆದರು ಸಿದ್ಧಾರ್ಥ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು. ಈ ಘಟನೆಗೆ ಪರ ವಿರೋಧ ಕೂಡ ವ್ಯಕ್ತವಾಯಿತು. ಇದನ್ನೂ ಓದಿ:ಟಾಲಿವುಡ್‌ನಲ್ಲಿ ರುಕ್ಮಿಣಿ ವಸಂತ್‌ಗೆ ಭರ್ಜರಿ ಡಿಮ್ಯಾಂಡ್

    ಈ ಘಟನೆಗೆ ಸಂಬಂಧಿಸಿದಂತೆ ಪ್ರಕಾಶ್ ರೈ (Prakash Raj)ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ‘ಕಾವೇರಿ ನಮ್ಮದು.  ಹೌದು.. ನಮ್ಮದೇ. ಆದರೆ, ದಶಕಗಳ ಈ ಸಮಸ್ಯೆಯನ್ನು ಪರಿಹರಿಸಲಾರದ ಎಲ್ಲಾ ಅಸಮರ್ಥ ರಾಜಕೀಯ ಪಕ್ಷಗಳನ್ನ,  ನಾಯಕರನ್ನು ಪ್ರಶ್ನಿಸದೆ,  ಕೇಂದ್ರ ಸರ್ಕಾರಕ್ಕೆ ಒತ್ತಡ ತರದ ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೆ, ಹೀಗೆ ಅಸಹಾಯಕ ಜನಸಾಮಾನ್ಯರನ್ನು, ಕಲಾವಿದರನ್ನು ಹಿಂಸಿಸುವುದು ತಪ್ಪು. ಒಬ್ಬ ಕನ್ನಡಿಗನಾಗಿ ಸಹೃದಯ ಕನ್ನಡಿಗರ ಪರವಾಗಿ ಕ್ಷಮಿಸಿ’ ಎಂದು ಬರೆದುಕೊಂಡಿದ್ದಾರೆ.

     

    ಕನ್ನಡ ಸಿನಿಮಾಗಳು ಇಂದು ಬೇರೆ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಆಗುತ್ತಿವೆ. ಕೆಜಿಎಫ್, ಕಾಂತಾರ ರೀತಿಯ ಚಿತ್ರಗಳನ್ನು ಬೇರೆ ಭಾಷಿಕರೂ ಗೆಲ್ಲಿಸಿದ್ದಾರೆ. ನಾಳೆ ಇದೇ ರೀತಿ ಬೇರೆ ರಾಜ್ಯಗಳಲ್ಲಿ ನಮ್ಮ ಕಲಾವಿದರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅದಿತಿ ರಾವ್ ಜೊತೆ ಸಮಂತಾ ಮಾಜಿ ಬಾಯ್ ಫ್ರೆಂಡ್ ಸಿದ್ದಾರ್ಥ ಡೇಟಿಂಗ್

    ಅದಿತಿ ರಾವ್ ಜೊತೆ ಸಮಂತಾ ಮಾಜಿ ಬಾಯ್ ಫ್ರೆಂಡ್ ಸಿದ್ದಾರ್ಥ ಡೇಟಿಂಗ್

    ಬಾಲಿವುಡ್ ನಟಿ ಅದಿತಿ ರಾವ್ ಜೊತೆ ತಮಿಳು ನಟ ಸಿದ್ದಾರ್ಥ ಡೇಟಿಂಗ್ ಮಾಡುತ್ತಿದ್ದಾರಂತೆ. ಈ ವಿಷಯ ಆಗಾಗಿ ಬಿಟೌನ್ ನಲ್ಲಿ ಗಾಸಿಪ್ ಆಗಿ ಹರಿದಾಡುತ್ತಿತ್ತು. ಆದರೆ, ನಿನ್ನೆ ಈ ಜೋಡಿ ತಡರಾತ್ರಿ ಹೋಟೆಲ್ ನಿಂದ ಬರುತ್ತಿರುವ ಸನ್ನಿವೇಶ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಾಗಾಗಿ ಇಬ್ಬರೂ ಡೇಟಿಂಗ್ ನಲ್ಲಿ ಇರುವ ವಿಚಾರ ಬಹಿರಂಗವಾಗಿದೆ.

    ಸಿದ್ದಾರ್ಥ ಈ ಮೊದಲು ಸಮಂತಾ ಜೊತೆ ಡೇಟಿಂಗ್ ನಲ್ಲಿದ್ದರು. ಕೆಲ ವರ್ಷಗಳ ಕಾಲ ಜೊತೆಯಾಗಿಯೇ ಸುತ್ತಾಡಿದರು. ಆನಂತರ ಇಬ್ಬರ ಲವ್ ಬ್ರೇಕ್ ಅಪ್ ಆಯಿತು. ಸಮಂತಾ ಮದುವೆ ಮಾಡಿಕೊಂಡರು. ಸಿದ್ದಾರ್ಥ ಹೋರಾಟ ಎನ್ನುತ್ತಾ ದಿನಗಳನ್ನು ದೂಡಿದರು. ಇತ್ತ ಸಮಂತಾ ಡಿವೋರ್ಸ್ ಪಡೆದುಕೊಂಡು ಒಂಟಿಯಾಗಿದ್ದಾರೆ. ಆ ಕಡೆ ಸಿದ್ಧಾರ್ಥ ಅದಿತಿ ರಾವ್ ಜೊತೆ ಜಂಟಿಯಾಗಿ ಸುತ್ತಾಡುತ್ತಿದ್ದಾರೆ. ಇದನ್ನೂ ಓದಿ:ಮಗನ ಜೊತೆ ಮೊದಲ ಬಾರಿಗೆ ರೀಲ್ಸ್ ಮಾಡಿದ ಸಂಜನಾ ಗಲ್ರಾನಿ

    ಅದಿತಿ ರಾವ್ ಮತ್ತು ಸಿದ್ದಾರ್ಥ ಅವರು ಇದೀಗ ಮುಂಬೈನಲ್ಲೇ ಬೀಡು ಬಿಟ್ಟಿದ್ದಾರೆ ಎನ್ನುವ ಸುದ್ದಿಯೂ ಇದೆ. ಅಲ್ಲದೇ, ಶೂಟಿಂಗ್ ಸ್ಥಳದಲ್ಲೂ ಒಟ್ಟಿಗೆ ಕಾಣಿಸಿಕೊಂಡಿದ್ದನ್ನೂ ನೋಡಿದವರು ಇದ್ದಾರೆ. ಹಾಗಾಗಿ ಈ ಜೋಡಿ ಡೇಟಿಂಗ್ ನಲ್ಲಿ ಇರುವುದು ಪಕ್ಕಾ ಎನ್ನುತ್ತಾರೆ ಆಪ್ತರು. ಈ ಕುರಿತಂತೆ ಇಬ್ಬರೂ ಯಾವುದೇ ರೀತಿಯಲ್ಲಿ ಮಾಹಿತಿಯನ್ನು ಹಂಚಿಕೊಂಡಿಲ್ಲ. ಹಾಗಾಗಿ ಇದು ಕೂಡ ಗಾಸಿಪ್ ಕಾಲಂನಲ್ಲಿ ಕಾಣಿಸಿಕೊಳ್ಳಬಹುದು.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾವಾಗಲಿದೆ ಕಾಫಿ ಡೇ ಸಂಸ್ಥಾಪಕ, ಕಾಫಿ ಕಿಂಗ್ ಸಿದ್ಧಾರ್ಥ್ ಬಯೋಪಿಕ್

    ಸಿನಿಮಾವಾಗಲಿದೆ ಕಾಫಿ ಡೇ ಸಂಸ್ಥಾಪಕ, ಕಾಫಿ ಕಿಂಗ್ ಸಿದ್ಧಾರ್ಥ್ ಬಯೋಪಿಕ್

    ಕಾಫಿ ಉದ್ಯಮದಿಂದಲೇ ಹೆಚ್ಚು ಫೇಮಸ್ ಆಗಿದ್ದ, ಪ್ರತಿ ವರ್ಷವೂ 160 ಕೋಟಿ ಕಪ್ ಕಾಫಿ ಮಾರುತ್ತಿದ್ದ ಕೆಫೆ ಕಾಫಿ ಡೇ ಸಂಸ್ಥಾಪಕ, ಕಾಫಿ ಕಿಂಗ್ ಎಂದೇ ಫೇಮಸ್ ಆಗಿದ್ದ ವಿ.ಜಿ ಸಿದ್ಧಾರ್ಥ್ ಅವರ ಬಯೋಪಿಕ್ ಸದ್ಯದಲ್ಲೇ ಸೆಟ್ಟೇರಲಿದೆ. ಕಾಫಿ ಉದ್ಯಮಕ್ಕೆ ಒಂದು ಘನತೆ ತಂದುಕೊಟ್ಟು, ರಾಷ್ಟ್ರೀಯ ಹೆದ್ದಾರಿ 66ನೇ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿನ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿ, ಆನಂತರ ಶವವಾಗಿ ಸಿಕ್ಕ ಸಿದ್ಧಾರ್ಥ ಅವರ ಬದುಕು ಮತ್ತು ಸಾವಿನ ನಿಗೂಢತೆ ಹೀಗೆ ಎಲ್ಲ ವಿಷಯವನ್ನು ಇದು ಒಳಗೊಂಡಿರಲಿದೆ.

    ಸಿದ್ದಾರ್ಥ ಅವರ ಜೀವನವೇ ರೋಚಕ. ತಮ್ಮ 24ನೇ ವಯಸ್ಸಿನಲ್ಲೇ ಮುಂಬೈನಲ್ಲಿ ಪೋರ್ಟ್ಪೊಲಿಯೋ ಮ್ಯಾನೇಜ್ ಮೆಂಟ್ ತರಬೇತಿ ಪಡೆದರು. ನಂತರ ತಂದೆಯ ಸಹಾಯ ಪಡೆದುಕೊಂಡು ಸ್ವಂತ ಉದ್ಯಮ ಆರಂಭಿಸಿದರು. ಟ್ರೆಡಿಂಗ್, ಮ್ಯೂಚುಯಲ್ ಫಂಡ್ಸ್, ರಿಯಲ್ ಎಸ್ಟೇಟ್, ಸ್ಟಾರ್ಟ್ ಅಪ್ ಕಂಪೆನಿ, ಹೀಗೆ ಒಂದೊಂದೆ ಉದ್ಯಮ ಆರಂಭಿಸಿದರು. ಎಲ್ಲದರಲ್ಲೂ ಗೆಲುವು ಕಂಡರು.

    1993ರಲ್ಲಿ ಕಾಫಿ ಉದ್ಯಮಕ್ಕೆ ಕಾಲಿಟ್ಟ ಸಿದ್ಧಾರ್ಥ ಅವರು, ಮೊದ ಮೊದಲು ಕಾಫಿ ಬೀಜಗಳ ವ್ಯಾಪಾರ ಮತ್ತು ರಫ್ತು ಆರಂಭಿಸಿದರು. ಕಾಫಿ ಕ್ಯೂರಿಂಗ್ ಘಟಕವನ್ನೂ ಶುರು ಮಾಡಿದರು. 1948ರಲ್ಲಿ ಹ್ಯಾಮ್ ಬರ್ಗ್ ನ ಚಿಬೊದಲ್ಲಿ ಚಿಕ್ಕದೊಂದು ಮಳಿಗೆಯಲ್ಲಿ ಕಾಫಿ ಉದ್ಯಮ ಪ್ರಾರಂಭ ಮಾಡಿ, 1996ರಲ್ಲಿ ಕಾಫಿ ಡೇ ಶುರು ಮಾಡಿದರು. ಕೇವಲ ಐದೇ ಐದು ವರ್ಷಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಕೆಫೆ ಕಾಡಿ ಡೇ ಸ್ಥಾಪಿಸಿ ಕಾಫಿ ಕಿಂಗ್ ಆದರು. ಇದನ್ನೂ ಓದಿ: ಶಿವಣ್ಣ – ತಲೈವಾ ಸಿನಿಮಾಗೆ `ಜೈಲರ್’ ಟೈಟಲ್ ಫಿಕ್ಸ್

    ನಂತರ ಹಲವು ಹಗರಣಗಳಲ್ಲಿ ಇವರ ಹೆಸರು ಕೇಳಿ ಬಂತು, ಅವುಗಳೇ ಇವರನ್ನು ಹೈರಾಣು ಮಾಡಿದವು. ಇವೆಲ್ಲವನ್ನೂ ಒಳಗೊಂಡಂತೆ ರುಕ್ಮಿನಿ ರಾವ್ ಮತ್ತು ದತ್ತ ಎನ್ನುವವರು ಜಂಟಿಯಾಗಿ ಸಿದ್ಧಾರ್ಥ ಕುರಿತು ಪುಸ್ತಕವೊಂದನ್ನು ಬರೆದಿದ್ದಾರೆ. ಆ ಪುಸ್ತಕವನ್ನು ಆಧರಿಸಿ ಟಿ ಸೀರಿಸ್ ಫಿಲ್ಮ್ಸ್ ಮತ್ತು ಕರ್ಮ ಮೀಡಿಯಾ ಎಂಟರ್ ಟ್ಮೇನೆಂಟ್ ಜಂಟಿಯಾಗಿ ಇವರ ಬಯೋಪಿಕ್ ಅನ್ನು ತೆರೆಗೆ ತರಲು ಹೊರಟಿದ್ದಾರೆ. ಸದ್ಯ ಸಿನಿಮಾ ಮಾಡಲು ಹಕ್ಕುಗಳನ್ನು ಪಡೆದಿದ್ದಾರೆ. ಸಿದ್ಧಾರ್ಥ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ.

    Live Tv

  • ಬಾಲಿವುಡ್ ಕೆಟ್ಟ ಮನಸ್ಥಿತಿ ಬಯಲು ಮಾಡಿದ ಖ್ಯಾತ ನಟ ಸಿದ್ದಾರ್ಥ

    ಬಾಲಿವುಡ್ ಕೆಟ್ಟ ಮನಸ್ಥಿತಿ ಬಯಲು ಮಾಡಿದ ಖ್ಯಾತ ನಟ ಸಿದ್ದಾರ್ಥ

    ಕ್ಷಿಣದ ಸಿನಿಮಾಗಳು ಹಿಂದಿ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಬಾಕ್ಸ್ ಆಫೀಸ್ ನಲ್ಲಿ ಗೆಲ್ಲುತ್ತಿವೆ. ಹೀಗಾಗಿ ಬಾಲಿವುಡ್ ಮಂದಿಗೆ ನಡುಕ ಶುರುವಾಗಿದೆ. ಕೇವಲ ಸಿನಿಮಾಗಳು ಮಾತ್ರವಲ್ಲ, ದಕ್ಷಿಣದ ಸ್ಟಾರ್ ಗಳು ಕೂಡ ಬಾಲಿವುಡ್ ಮಂದಿಯ ಮನಸ್ಥಿತಿಯನ್ನು ಒಬ್ಬೊಬ್ಬರಿ ಬಿಚ್ಚಿಡುತ್ತಿದ್ದಾರೆ. ಹೀಗಾಗಿ ಬಾಲಿವುಡ್ ಮಂದಿಯ ಬಣ್ಣ ಬಯಲಾಗುತ್ತಿದೆ. ಇದನ್ನೂ ಓದಿ : ಹೊಂಬಾಳೆ ಫಿಲ್ಮಸ್ ಬಘೀರನಿಗೆ ಮೇ 20ಕ್ಕೆ ಮುಹೂರ್ತ : ಶ್ರೀಮುರುಳಿ ನಾಯಕ

    ಹಿಂದಿ ಸಿನಿಮಾ ರಂಗದ ಕುರಿತು ಸ್ವತಃ ಕಂಗನಾ ರಣಾವತ್ ಅವರೇ ಆರೋಪದ ಮಾತುಗಳನ್ನು ಆಡಿದ್ದರು. ಬಾಲಿವುಡ್ ಕೆಲವರ ಕೈಯಲ್ಲಿ ಮಾತ್ರ ಇದೆ ಎಂದು ಹೇಳಿದ್ದರು. ಸ್ಟಾರ್ ನಟರ ಮಕ್ಕಳ  ಬಗ್ಗೆಯೂ ಮಾತನಾಡಿದ್ದರು. ಇದೀ ತೆಲುಗಿನ ಖ್ಯಾತ ನಟ ಸಿದ್ಧಾರ್ಥ ಕೂಡ ಬಾಲಿವುಡ್ ಚಿತ್ರಗಳ ಬಗ್ಗೆ ಮಾತನಾಡಿದ್ದಾರೆ. ದಕ್ಷಿಣದವರನ್ನು ಅವರು ಕೀಳು ಮಟ್ಟದಲ್ಲಿ ತೋರಿಸುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ : ಮನೆಗೆ ಕರೆಯಿಸಿಕೊಳ್ಳುವಂಥ ಅರ್ಹತೆ ಬಾಲಿವುಡ್ ನಲ್ಲಿ ಯಾರಿಗೂ ಇಲ್ಲ : ಕಂಗನಾ ರಣಾವತ್

    ಸದ್ಯ ಸಿದ್ಧಾರ್ಥ ನಟನೆಯ ಎಸ್ಕೇಪ್ ಪ್ಲಾನ್ ವೆಬ್ ಸೀರಿಸ್ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ಬಾಲಿವುಡ್ ಸಿನಿಮಾಗಳಲ್ಲಿ ದಕ್ಷಿಣದವರ ಪಾತ್ರವನ್ನು ಕೀಳಾಗಿ ಬಿಂಬಿಸಲಾಗುತ್ತಿತ್ತು. ದಕ್ಷಿಣದ ಪಾತ್ರಗಳು ಇದ್ದರೆ, ಅವುಗಳ ಡೈಲಾಗ್ ಕೂಡ ಅಷ್ಟೇ ಕೆಟ್ಟದ್ದಾಗಿ ಇರುತ್ತಿದ್ದವು ಎಂದು ಹಲವು ಉದಾಹರಣೆಗಳ ಸಮೇತ ಅವರು ವಿವರಿಸಿದ್ದಾರೆ. ಇದನ್ನೂ ಓದಿ : ಕಾನ್ ಫೆಸ್ಟಿವಲ್‌ನಲ್ಲಿ ತಾರೆಯರ ದಂಡು

    ದಕ್ಷಿಣದ ಹಲವು ಚಿತ್ರಗಳ ಬಗ್ಗೆಯೂ ಮಾತನಾಡಿರುವ ಅವರು, ಹೆಮ್ಮೆಯಿಂದ ಹೊಸ ರೀತಿಯ ಚಿತ್ರಗಳನ್ನು ದಕ್ಷಿಣ ಭಾರತದ ನಿರ್ದೇಶಕರು ಮಾಡುತ್ತಿದ್ದಾರೆ. ಈ ಮೂಲಕ ಅವಮಾನದ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದೂ ಸಿದ್ಧಾರ್ಥ ಮಾತನಾಡಿದ್ದಾರೆ.

  • ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ- ಬಳ್ಳಾರಿ ಐಜಿಯಿಂದ ಭಾವನಾತ್ಮಕ ಪತ್ರ

    ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ- ಬಳ್ಳಾರಿ ಐಜಿಯಿಂದ ಭಾವನಾತ್ಮಕ ಪತ್ರ

    ಬಳ್ಳಾರಿ: ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ್ ಎಂದು ಬಳ್ಳಾರಿ ವಲಯದ ಐಜಿ ನಂಜುಂಡಸ್ವಾಮಿ ಅಗಲಿದ ಗೆಳೆಯನಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದು ಸಂತಾಪ ಸೂಚಿಸಿದ್ದಾರೆ.

    ಈ ಪತ್ರದಲ್ಲಿ ಸಿದ್ಧಾರ್ಥ್ ಅವರನ್ನು ಭೇಟಿಯಾದ ದಿನಗಳು ಮತ್ತು ಅವರ ವ್ಯಕ್ತಿತ್ವದ ಬಗ್ಗೆ ಅಪಾರವಾಗಿ ಹೇಳಿಕೊಂಡಿರುವ ನಂಜುಂಡಸ್ವಾಮಿ ತನ್ನ ಗೆಳೆಯ ಆತ್ಮಹತ್ಯೆ ಮಾಡಿಕೊಳ್ಳವಂತಹ ವ್ಯಕ್ತಿಯಲ್ಲ ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.

    ಪತ್ರದಲ್ಲೇನಿದೆ?
    ಸಿದ್ಧಾರ್ಥ ಅವರನ್ನು ನಾನು ಮೊದಲು ನೋಡಿದ್ದು ಅವರ ಮೊದಲ ಕಾಫಿ ಡೇ ಅಂಗಡಿಯಲ್ಲಿ. ನನ್ನ ಗೆಳೆಯ ಶಶಿಕುಮಾರ್ ಮತ್ತು ನಾನು ಒಂದು ರಾತ್ರಿ ಊಟ ಮಾಡಿದ ನಂತರ ಕಾಫಿ ಡೇಗೆ ಹೋದಾಗ, ಆಗ ಅದೊಂದೆ ಕಾಫಿ ಡೇ ಆಗಿತ್ತು. ಶಶಿ ಮೋಹನ್ ನನಗೆ ಸಿದ್ಧಾರ್ಥ ಅವರನ್ನು ಪರಿಚಯ ಮಾಡಿಸಿದ.

    ನಾನು ಆಗ ತಾನೇ ಪೊಲೀಸ್ ಅಕಾಡೆಮಿಯಿಂದ ತರಬೇತಿ ಮುಗಿಸಿಕೊಂಡು ಬೆಂಗಳೂರಿಗೆ ಬಂದಿದ್ದೆ. ಆಗ ನನಗೆ ಬೆಂಗಳೂರು ಜೀವನ ಹೊಸದಾಗಿತ್ತು. ಸಿದ್ಧಾರ್ಥ್ ಅಂದು ಕೆಫೆ ಡೇಯಲ್ಲಿ ಕೆಲಸ ಮಾಡುವ ಹುಡುಗರಂತೆ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್, ಟೀ-ಶರ್ಟ್ ಧರಿಸಿದ್ದ. ಮೊದಲನೇ ಭೇಟಿಯಲ್ಲೇ ನಾವಿಬ್ಬರು ಬಹಳ ಮಾತನಾಡಿದ್ದೇವು. ಆಗ ಅವರ ಮಾವ ಎಸ್.ಎಂ ಕೃಷ್ಣ ಮುಖ್ಯಮಂತ್ರಿಯಾಗಿರಲಿಲ್ಲ. ಸಿದ್ಧಾರ್ಥ್ ಹಳೆಯ ಗೆಳೆಯನಂತೆ ನನ್ನ ಜೊತೆ ತುಂಬಾ ಹೊತ್ತು ಖುಷಿಯಾಗಿ ಮಾತನಾಡುತ್ತಿದ್ದರು. ಅವರು ತಮ್ಮ ಕಾಫಿ ಡೇಯನ್ನು ಪ್ರಪಂಚದ ಶ್ರೇಷ್ಠ ಕಾಫಿ ಅಂಗಡಿಯ ಸರಪಣಿ (chain of restaurant) ಮಾಡುವುದಾಗಿ ಹೇಳುತ್ತಿದ್ದರು. ಸಿದ್ಧಾರ್ಥ್ ಅಂದು ಕಂಡಿದ್ದ ಕನಸುಗಳ ನನಸು ಮಾಡುತ್ತಲೇ ಸಾಗಿದವರು. ಅವರು ಪರಿಚಯವಾದ ಮೇಲೆ ನಾವು ತುಂಬಾ ಸಲ ಬೇರೆ-ಬೇರೆ ಕಡೆ ಭೇಟಿ ಆಗಿದ್ದೇನೆ.

    ಸಿದ್ಧಾರ್ಥ್ ಒಂದು ಬಾರಿ ಅವರ ಸ್ವಂತ ಊರಾದ ಚೇತನಹಳ್ಳಿಯಲ್ಲಿ ಒಂದು ಭವ್ಯವಾದ ಡಿನ್ನರ್ ವ್ಯವಸ್ಥೆ ಮಾಡಿದ್ದರು. ಆಗ ನಾನು ಹಾಸನದಲ್ಲಿ ಎಸ್‍ಪಿ ಆಗಿದ್ದೆ. ಆಗ ಸನ್ಮಾನ್ಯ ಎಸ್.ಎಂ. ಕೃಷ್ಣ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಸಿದ್ಧಾರ್ಥ ಅವರು ಉತ್ತಮ ರೀತಿಯಲ್ಲಿ ತಮ್ಮ ಎಲ್ಲಾ ಅತಿಥಿಗಳನ್ನು ಸತ್ಕರಿಸುತ್ತಿದ್ದರು. ನನಗೆ ತಮ್ಮ ಹಳೆಯ ಭವ್ಯವಾದ ಬ್ರಿಟಿಷ್ ಕಾಲದ ಮನೆಯನ್ನು ಸುತ್ತಾಡಿಸಿ ತೋರಿಸಿದರು. ಬ್ರಿಟಿಷ್ ಕಾಫಿ ತೋಟ ಸ್ವಾತಂತ್ರ್ಯ ನಂತರ ತಮ್ಮ ಮನೆತನದ ಒಡೆತನಕ್ಕೆ ಹೇಗೆ ಬಂತು ಎಂದು ತಿಳಿಸಿದರು.

    ಸಿದ್ಧಾರ್ಥ್ ಅವರಲ್ಲಿ ಅದಮ್ಯ ಸಾಹಸದ ಮನೋಭಾವನೆ ಇತ್ತು. ಅವರ ಕಂಡಾಗಲೆಲ್ಲ ನಾನು ಇವರರಂತೆ ಆಗಬೇಕು ನಾನು ತುಂಬಾ ಆಕ್ಟೀವ್ ಆಗಿ ಚೇತನ ಶೀಲನಾಗಿರಬೇಕು ಎಂದುಕೊಳ್ಳುತ್ತಿದ್ದೆ. ಅಂತಹ ವ್ಯಕ್ತಿ ನನ್ನ ಭಾಷಣ-ಬರಹಗಳ ಅಭಿಮಾನಿಯಾಗಿದ್ದರು. ಅವರ ತಂದೆ ಮತ್ತು ನಾನು ಒಂದು ಬಾರಿ ಪೂರ್ಣ ಪ್ರಜ್ಞಾ ಶಾಲೆಯ ಸಮಾರಂಭದಲ್ಲಿ ಭಾಗವಹಿಸಿದ್ದೇವು. ನನ್ನ ಭಾಷಣ ಮುಗಿದ ಮೇಲೆ ಅವರ ತಂದೆ ನಿಮ್ಮ ಮಾತು ಕೇಳಿದರೆ ನಾನು ಒಮ್ಮೆ ದ.ರಾ ಬೇಂದ್ರೆ ಅವರ ಭಾಷಣ ಕೇಳಿದ್ದೆ ಅವರಂತೆ ನೀವು ಮಾತನಾಡುತ್ತೀರಿ. ನಮ್ಮ ಸಿದ್ಧಾರ್ಥ ನಿಮ್ಮ ಭಾಷಣಗಳ ಅಭಿಮಾನಿ ಎಂದಿದ್ದರು. ಆಗ ನಾನು ನಿಮ್ಮೊಡನೆ ಇಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಅದ್ದರಿಂದ ನನಗೆ ಒಳ್ಳೆಯ ಭಾಷಣ ಒಳ್ಳೆಯ ಮಾತುಗಾರರ ಕೇಳುವ ಭಾಗ್ಯ ಇವತ್ತು ನನಗಿದೆ ಎಂದಿದ್ದರು.

    ಸಿದ್ಧಾರ್ಥ್ ನಿಜವಾಗಿಯೂ ಬುದ್ಧನಾಗುವ ಮೊದಲು ಆ ಸಿದ್ಧಾರ್ಥನಂತೆ ಮಾನವೀಯತೆ ರಾಜಕಳೆಯಿಂದ ಬದುಕಿದ. ಆದರೆ ಇಂದು ಕಳೆಬರವಾಗಿದ್ದಾನೆ. ಈ ಸಿದ್ಧಾರ್ಥ ಬುದ್ಧನಾಗಲು ಹೊರಟ್ಟಿದ್ದ ಆತನಲ್ಲಿ ಈ ಪ್ರಪಂಚದ ಸಾವಿರಾರು ಸತ್ಯಗಳು ಉಳಿದು ಬಿಟ್ಟಿದ್ದವು. ಆತನು ಸಹ ಆ ಸತ್ಯಗಳನ್ನು ಈ ಪ್ರಪಂಚಕ್ಕೆ ತಿಳಿಸಲು ಹಪಹಪಿಸುತ್ತಿದ್ದ. ತನ್ನ ಅರಿವಿಗೆ ಬಂದ ಸತ್ಯಗಳ ತಿಳಿಸುವ ಮೊದಲೇ ಬುದ್ಧನಾಗುವ ದಾರಿಯಲ್ಲಿ ನಡೆದು ಬಿಟ್ಟ.

    ಆತನ ಮನದೊಳಗಿದ್ದ ಆ ಸತ್ಯಗಳೆಲ್ಲ ಹೊರಕ್ಕೆ ಬರಬೇಕು ಆತನ ಈ ಅಕಾಲಿಕ ಸಾವಿಗೆ ಕಾರಣಗಳ ಕಂಡುಹಿಡಿಯಲೇ ಬೇಕು ಯಾವ ವ್ಯಕ್ತಿ, ಸಂಘ, ಸಂಸ್ಥೆ, ಇಲಾಖೆಗಳಿಂದ ನೊಂದಿದ್ದ. ಆತ ಈ ನಿರ್ಧಾರ ತೆಗೆದುಕೊಳ್ಳಲು ಇದ್ದ ಕಾರಣ ಹೊರಬರಬೇಕಾಗಿದೆ. ನಮ್ಮ ಕಾಫಿ ಡೇ ಸಿದ್ಧಾರ್ಥ ಬುದ್ಧನಾಗಲೇ ಹೊರಟವನು. ತನ್ನ ತತ್ವ ಸಿದ್ಧಾಂತಗಳಿಗೆ ಅಂಟಿಕೊಂಡವನು. ಆತನೇ ಹೀಗಾದ ಎಂದರೆ ಆತನನ್ನು ನಂಬಿದ್ದವರಿಗೆ, ಆತನನ್ನು ಆದರ್ಶವಾಗಿ ಕಂಡವರಿಗೆ ನೋವಾಗಿದೆ. ಇದರ ಸಂಪೂರ್ಣ ತನಿಖೆ ಆಗಲಿ ಸತ್ಯ ಹೊರ ಬರಲಿ ಸಿದ್ಧಾರ್ಥ ಬುದ್ಧನಾಗಲು ಹೋದ ಆತ ನನಗೆ ಎಂದಿಗೂ ಬುದ್ಧನೇ.

  • ವಿಷಯ ಕೇಳಿ ನಂಗೆ ಶಾಕ್ ಆಯ್ತು: ಯು.ಟಿ ಖಾದರ್

    ವಿಷಯ ಕೇಳಿ ನಂಗೆ ಶಾಕ್ ಆಯ್ತು: ಯು.ಟಿ ಖಾದರ್

    – ಯಾರ ಮೇಲೂ ದರ್ಪ ತೋರಿದವರಲ್ಲ

    ಮಂಗಳೂರು: ಉದ್ಯಮಿ ಸಿದ್ಧಾರ್ಥ್ ಅವರು ನಡೆದುಕೊಂಡು ಬಂದು ಇಲ್ಲಿ ಕಾಣೆಯಾಗಿದ್ದಾರೆ. ಈ ವಿಷಯ ಕೇಳಿ ನಮಗೆ ಆಘಾತವಾಗಿದೆ. ಸಿದ್ಧಾರ್ಥ್ ಅವರು ಆಗರ್ಭ ಶ್ರೀಮಂತರಾಗಿದ್ದು, ಸಾವಿರಾರು ಮಂದಿಗೆ ಕೆಲಸ ನೀಡಿದ್ದಾರೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವಿಧಾನಸಭೆ ಮುಗಿಸಿ ರಾತ್ರಿ ಬರುವ ವೇಳೆ ನನಗೆ ಈ ಬಗ್ಗೆ ಮಾಹಿತಿ ತಿಳಿಯಿತು. ತಕ್ಷಣ ನಾನು ರಾತ್ರಿ ಸುಮಾರು 1.30ಕ್ಕೆ ಇಲ್ಲಿಗೆ ಬಂದೆ. ಇಲ್ಲಿ ಬಂದಾಗ ಪೊಲೀಸರು, ರೆವೆನ್ಯೂ ಡಿಪಾರ್ಟ್ ಮೆಂಟ್ ಮತ್ತು ಖಾಸಗಿ ತಜ್ಞರು ಈ ಪ್ರದೇಶಕ್ಕೆ ಬಂದಿದ್ದು, ಶೋಧಕಾರ್ಯ ಮುಂದುವರಿಸಿದ್ದರು. ಸಿದ್ಧಾರ್ಥ್ ಅವರು ಇಲ್ಲಿ ಕಾಲು ಜಾರಿ ಬಿದ್ದಿದ್ದಾರಾ ಅಥವಾ ಬೇರೆ ಕಡೆ ಹೋಗಿದ್ದಾರಾ ಎಂಬ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಸದ್ಯಕ್ಕೆ ಪೊಲೀಸರು ಮತ್ತು ಜಿಲ್ಲಾಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದರು.

    ಸಿದ್ಧಾರ್ಥ್ ಅವರು ಈವರೆಗೂ ಸಾವಿರಾರು ಮಂದಿಗೆ ಕೆಲಸ ನೀಡಿದ್ದಾರೆ. ಅವರಿಗೆ ಅಧಿಕಾರ ಇದ್ದರೂ ಯಾವತ್ತೂ ಯಾರ ಮೇಲೂ ದರ್ಪ ತೋರಲಿಲ್ಲ. ನಮಗೆ ಯಾವಾತ್ತಾದರೂ ಸಿಕ್ಕಿದ್ದಾಗ ತುಂಬಾ ಪ್ರೀತಿಯಿಂದ, ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು ಎಂದು ಸಿದ್ಧಾರ್ಥ್ ಬಗ್ಗೆ ಮಾತನಾಡಿದರು.

    ಏನಾಗಿದೆ ಎಂದು ನನಗೂ ಗೊತ್ತಿಲ್ಲ. ತನಿಖೆ ಮಾಡಿದ ನಂತರ ತಿಳಿಯ ಬೇಕು. ರಾತ್ರಿ ಎಸ್‍.ಎಂ ಕೃಷ್ಣ ಅವರು ಫೋನ್ ಮಾಡಿ ಮಾಹಿತಿ ತಿಳಿದುಕೊಂಡಿದ್ದಾರೆ. ಜೊತೆಗೆ ಡಿ.ಕೆ ಶಿವಕುಮಾರ್ ಅವರು ಕೂಡ ಫೋನ್ ಮಾಹಿತಿ ಪಡೆಯುತ್ತಿದ್ದಾರೆ. ಹೀಗಾಗಿ ಅವರು ಸುರಕ್ಷಿತವಾಗಿ ವಾಪಸ್ ಬಂದರೆ ಸಾಕು ಎಂದು ಖಾದರ್ ಹೇಳಿದರು.

  • ಮೋದಿ ಸ್ವಾತಂತ್ರ್ಯ ತಂದುಕೊಟ್ಟಿದ್ದನ್ನೇ ಟ್ರೈಲರ್‌ನಲ್ಲಿ ಬಿಟ್ಟಿದ್ದಾರೆ: ನಟ ಸಿದ್ಧಾರ್ಥ ಟಾಂಗ್

    ಮೋದಿ ಸ್ವಾತಂತ್ರ್ಯ ತಂದುಕೊಟ್ಟಿದ್ದನ್ನೇ ಟ್ರೈಲರ್‌ನಲ್ಲಿ ಬಿಟ್ಟಿದ್ದಾರೆ: ನಟ ಸಿದ್ಧಾರ್ಥ ಟಾಂಗ್

    ಬೆಂಗಳೂರು: ಎಲ್ಲವನ್ನೂ ತಾವೇ ಮಾಡಿದ್ದಾಗಿ ಹೇಳಿಕೊಳ್ಳುವ ಪ್ರಧಾನಿ ಮೋದಿ ಅವರೇ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆಂದು ‘ಪಿಎಂ ನರೇಂದ್ರ ಮೋದಿ’ ಸಿನಿಮಾದಲ್ಲಿ ತೋರಿಸಬೇಕಿತ್ತು ಎಂದು ತಮಿಳು ಭಾಷಾ ನಟ ಸಿದ್ಧಾರ್ಥ ವ್ಯಂಗ್ಯವಾಡಿದ್ದಾರೆ.

    ‘ರಂಗ್ ದೇ ಬಸಂತಿ’ ದೇಶಭಕ್ತಿ ಚಿತ್ರದಲ್ಲಿ ನಟಿಸಿದ್ದ ಸಿದ್ಧಾರ್ಥ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ಪಿಎಂ ನರೇಂದ್ರ ಮೋದಿ’ ಸಿನಿಮಾದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    https://twitter.com/Actor_Siddharth/status/1108529874669654016

    ಟ್ವೀಟ್‍ನಲ್ಲಿ ಏನಿದೆ?:
    ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಪ್ರಧಾನಿ ಮೋದಿ ಅವರು ಏಕಾಂಗಿಯಾಗಿ ಹೇಗೆ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟರೆಂದು ತೋರಿಸುವುದನ್ನು ಚಿತ್ರ ತಂಡ ಮರೆತಿದೆ. ಒಂದು ವೇಳೆ ಅದನ್ನು ತೋರಿಸಿದ್ದರೆ ಜಾತ್ಯಾತೀತತೆ, ಕಮ್ಯೂನಿಸ್ಟ್, ನಕ್ಸಲರ ಮತ್ತು ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಕಾಲೆಳೆಯಬಹುದಿತ್ತು ಎಂದು ಸಿದ್ಧಾರ್ಥ ವ್ಯಂಗ್ಯವಾಡಿದ್ದಾರೆ.

    https://twitter.com/Actor_Siddharth/status/1108534625423351808

    ‘ಪಿಎಂ ನರೇಂದ್ರ ಮೋದಿ’ ಸಿನಿಮಾಗಳಂತಹ ಬಯೋಪಿಕ್ ಮಾಡುವ ನಮ್ಮ ನಿರ್ಮಾಪಕರ ಪ್ರಾಮಾಣಿಕತೆ ನೋಡಿ. ಈ ಸಿನಿಮಾದ ಮೂಲಕ ನೀವು ಜನರ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸಬಹುದು. ಆದರೆ ನಿಮ್ಮ ಇತಿಹಾಸವನ್ನು ಮರೆಸಲು ಸಾಧ್ಯವಿಲ್ಲ ಎಂದು ಸಿದ್ಧಾರ್ಥ ಅಸಮಾಧಾನ ಹೊರಹಾಕಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಜೀವನಾಧರಿತ ಸಿನಿಮಾದ ಟ್ರೈಲರ್ ಬುಧವಾರ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ನಟ ವಿವೇಕ್ ಒಬೇರಾಯ್ ಅವರು ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರೀ ನಿರೀಕ್ಷೆಯಲ್ಲಿರುವ ‘ಪಿಎಂ ನರೇಂದ್ರ ಮೋದಿ’ ಸಿನಿಮಾ ಏಪ್ರಿಲ್ 12ಕ್ಕೆ ಬಿಡುಗಡೆಯಾಗಲಿದೆ.

    https://twitter.com/Actor_Siddharth/status/1108537225736654850