Tag: ಸಿದ್ಧಾರ್ಥ್ ಮಹೇಶ್

  • ಫೆ.10ರಂದು ‘ಗರುಡ’ ಚಿತ್ರದ ನಟ ಸಿದ್ಧಾರ್ಥ್ ಮಹೇಶ್ ಮದುವೆ

    ಫೆ.10ರಂದು ‘ಗರುಡ’ ಚಿತ್ರದ ನಟ ಸಿದ್ಧಾರ್ಥ್ ಮಹೇಶ್ ಮದುವೆ

    ‘ಸಿಪಾಯಿ’, ‘ಗರುಡ’ ಚಿತ್ರಗಳ ನಟ ಸಿದ್ಧಾರ್ಥ್ ಮಹೇಶ್ (Siddarth Mahesh) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ

    ನಟ ಕಮ್ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಸಿದ್ಧಾರ್ಥ್ ಮಹೇಶ್ ಇದೇ ಫೆ.10ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ವೈಷ್ಣವಿ ಜೊತೆ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಮೂಲತಃ ವೈಷ್ಣವಿ (Vaishnavi) ಅವರು ಆಂಧ್ರಪ್ರದೇಶದವರಾಗಿದ್ದು, ಇಂಜಿನಿಯರಿಂಗ್ ಓದಿದ್ದಾರೆ.

    ಸಿದ್ಧಾರ್ಥ್ ಮತ್ತು ವೈಷ್ಣವಿ ಅವರದ್ದು, ಗುರುಹಿರಿಯರು ನಿಶ್ಚಯಿಸಿದ ಅರೆಂಜ್ ಮ್ಯಾರೇಜ್ ಆಗಿದೆ. ಈ ಮದುವೆಗೆ ಸ್ಯಾಂಡಲ್‌ವುಡ್‌ನ ಕಲಾವಿದರು ಮತ್ತು ರಾಜಕೀಯ ಗಣ್ಯರು ಭಾಗಿಯಾಗಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿರುವ ನಟನಿಗೆ ಫ್ಯಾನ್ಸ್ ಶುಭಹಾರೈಸಿದ್ದಾರೆ.

  • ನಟನೆ ಜೊತೆಗೆ ನಿರ್ದೇಶನಕ್ಕಿಳಿದ ʼಗರುಡ’ ಖ್ಯಾತಿಯ ಸಿದ್ದಾರ್ಥ್ ಮಹೇಶ್

    ನಟನೆ ಜೊತೆಗೆ ನಿರ್ದೇಶನಕ್ಕಿಳಿದ ʼಗರುಡ’ ಖ್ಯಾತಿಯ ಸಿದ್ದಾರ್ಥ್ ಮಹೇಶ್

    ‘ನನ್ನ ಸಿಪಾಯಿ’ ಮತ್ತು ‘ಗರುಡ’ (Garudha) ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಟ ಸಿದ್ದಾರ್ಥ್ ಮಹೇಶ್ (Siddarth Mahesh) ಇಂದು (ಜುಲೈ 16)ರಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಸಂತಸದ ದಿನದಿಂದಲೇ ಸಿದ್ದಾರ್ಥ್ ಹೊಸ ಸಿನಿಮಾ ಘೋಷಣೆಯಾಗಿದೆ. ಹೊಸ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚುತ್ತಿರುವ ಸಿದ್ದಾರ್ಥ್ ಮಹೇಶ್ ನಿರ್ದೇಶಕರಾಗಿಯೂ ಹೊಸ ಹೆಜ್ಜೆ ಇಡುತ್ತಿದ್ದಾರೆ. ಇದನ್ನೂ ಓದಿ:ಮೊದಲ ಸಂಭಾವನೆಯನ್ನ ಚಾರಿಟಿಗೆ ನೀಡಿದ ಮಹೇಶ್ ಬಾಬು ಪುತ್ರಿ

    ಬಹಳ ವರ್ಷದಿಂದಲೂ ಸಿದ್ದಾರ್ಥ್ ಅವರಿಗೆ ಡೈರೆಕ್ಟರ್ (Director) ಕ್ಯಾಪ್ ತೊಡಬೇಕೆಂಬ ಕನಸು ಇತ್ತು. ಆದರೆ ಅದಕ್ಕೆ ಘಳಿಗೆ ಕೂಡಿ ಬಂದಿರಲಿಲ್ಲ. ಈಗ ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಹಿಂದೆ ‘ನನ್ನ ಸಿಪಾಯಿ’ ಸಿನಿಮಾದ ಕಥೆಯಲ್ಲಿ ಸಿದ್ಧಾರ್ಥ್ ಕೂಡ ಕೆಲಸ ಮಾಡಿದ್ದರು. ಅದೇ ಅನುಭವದ ಮೇಲೆ ಗರುಡ ಸಿನಿಮಾದ ಕಥೆಯನ್ನು ಬರೆದಿದ್ದರು. ಈಗ ಅವರ ನಿರ್ದೇಶನದ ಚಿತ್ರಕ್ಕೂ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

    ಅತಶ್ರೀ ಮೀಡಿಯಾ ಕ್ರಿಯೇಶನ್ಸ್ ಮತ್ತು ಆರೇಂಜ್ ಪಿಕ್ಸೆಲ್ಸ್ ನಡಿ ಸಿದ್ದಾರ್ಥ್ ಮಹೇಶ್ ಸ್ನೇಹಿತರಾಗಿರುವ ಎಸ್.ಚಂದನ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ತಮಿಳು ಸಿನಿಮಾ ನಿರ್ಮಿಸಿದ್ದ ಚಂದನ್ ಅವರಿಗೆ ಇದು ಚೊಚ್ಚಲ ನಿರ್ಮಾಣದ ಕನ್ನಡ ಚಿತ್ರ. ತಾನೇ ನಿರ್ದೇಶನ ಮಾಡಬೇಕೆಂದು ಸಿದ್ದಾರ್ಥ್ಗೆ ಪ್ರೋತ್ಸಾಹ ಕೊಟ್ಟು ಹಣ ಹಾಕುತ್ತಿದ್ದಾರೆ. ಕಥೆ ಕೊನೆ ಹಂತದಲ್ಲಿದ್ದು, ಶೀಘ್ರದಲ್ಲೇ ಮತ್ತಷ್ಟು ಅಪ್ ಡೇಟ್ ನೀಡಲು ಚಿತ್ರತಂಡ ಸಜ್ಜಾಗಿದೆ.

    ಅಂದಹಾಗೇ ಸಿದ್ದಾರ್ಥ್ ಮಹೇಶ್ ನಟಿಸಿ ನಿರ್ದೇಶನದ ಸಿನಿಮಾ ಪ್ರೇಮಕಥೆ ಆ್ಯಕ್ಷನ್ ಕಥಾಹಂದರ ಹೊಂದಿದೆ. ಮಲ್ಟಿಮೀಡಿಯಾ ಬಗ್ಗೆ ಶಿಕ್ಷಣ ಜ್ಞಾನ ಹೊಂದಿರುವ ಅವರು ನಿರ್ದೇಶನಕ್ಕೆ ಸಹಾಯಕಾರಿ ಎನ್ನುತ್ತಾರೆ. ಬಹಳ ವರ್ಷಗಳಿಂದ ನಿರ್ದೇಶಕನ ಆಗಬೇಕು ಎಂಬ ಸಿದ್ದಾರ್ಥ್ ಮಹೇಶ್ ಕನಸು ಈಗ ಸಹಕಾರವಾಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟ್ರೇಲರ್ ಮೂಲಕ ಗರಿಗೆದರಿದ ಗರುಡ : ಶಿವಣ್ಣ ಮೆಚ್ಚುಗೆ!

    ಟ್ರೇಲರ್ ಮೂಲಕ ಗರಿಗೆದರಿದ ಗರುಡ : ಶಿವಣ್ಣ ಮೆಚ್ಚುಗೆ!

    ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಸತತವಾಗಿ ಸಿದ್ಧಗೊಳ್ಳುತ್ತಿದ್ದ, ಸಿದ್ಧಾರ್ಥ್ ಮಹೇಶ್, ಶ್ರೀನಗರ ಕಿಟ್ಟಿ ಪ್ರಧಾನ ಪಾತ್ರದಲ್ಲಿ ನಟಿಸಿರುವ ‘ಗರುಡ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಟ್ರೇಲರ್ ನೋಡಿದವರಿಗೆ ಯಾಕೆ ಮೂರು ವರ್ಷ ಕಾಲಾವಧಿಯನ್ನು ಈ ಸಿನಿಮಾ ಪಡೆದುಕೊಂಡಿತು ಅನ್ನೋದರ ಸ್ಪಷ್ಟ ಚಿತ್ರಣ ಸಿಗುತ್ತದೆ. ಗರುಡ ಚಿತ್ರದ ಟ್ರೇಲರ್ ನೋಡಿದವರಿಗೆ ‘ಇದೇನಿದು ಹಾಲಿವುಡ್ ರೇಂಜಿಗೆ ರೂಪಿಸಿದ್ದಾರಲ್ಲಾ?’ ಎನ್ನುವ ಭಾವನೆ ಮೂಡುತ್ತದೆ. ಅಷ್ಟೊಂದು ದೃಶ್ಯ ಶ್ರೀಮಂತಿಕೆ ಹೊಂದಿರುವ ಈ ಚಿತ್ರ ದೊಡ್ಡ ಬಜೆಟ್ಟು, ಹಿರಿದಾದ ಕಲಾವಿದ, ತಂತ್ರಜ್ಞರನ್ನು ಒಳಗೊಂಡು ತಯಾರಾಗಿದೆ. ಆರೆಂಜ್ ಪಿಕ್ಸಲ್ಸ್ ಲಾಂಛನದಲ್ಲಿ, ಕಿಶೋರ್ ಎ ಅರ್ಪಿಸಿ, ಬಿ.ಕೆ. ರಾಜಾರೆಡ್ಡಿ ಮತ್ತು ಪ್ರಸಾದ್ ರೆಡ್ಡಿ ಎಸ್ ಅವರು ನಿರ್ಮಿಸುತ್ತಿರುವ ಚಿತ್ರ ‘ಗರುಡ’. ಈ ಹಿಂದೆ ‘ಸಿಪಾಯಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಿದ್ಧಾರ್ಥ್ ಮಹೇಶ್ ಅವರ ಎರಡನೇ ಚಿತ್ರ ಇದಾಗಿದೆ.

    ಈ ಚಿತ್ರದ ಟ್ರೇಲರ್ ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆಗೊಳಿಸಿದ್ದಾರೆ. ಜೊತೆಗೆ ಈ ಚಿತ್ರತಂಡ ಶ್ರಮವನ್ನು ಕಂಡು ಬೆರಗಾಗಿದ್ದಾರೆ. ಟ್ರೇಲರನ್ನು ಅಪಾರವಾಗಿ ಮೆಚ್ಚಿರುವ ಶಿವಣ್ಣ ಸಿದ್ಧಾರ್ಥ್ ಮಹೇಶ್ ಸೇರಿದಂತೆ ಗರುಡ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ.

    ಕುಟುಂಬದಲ್ಲಿ ಒಂದು ಘಟನೆ ನಡೆಯುತ್ತದೆ. ಅದು ನಾಯಕನ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ಕೌಟುಂಬಿಕವಾಗಿ ಶುರುವಾಗುವ ಚಿತ್ರ ಎಲ್ಲೆಲ್ಲಿ ಸಾಗುತ್ತದೆ ಅನ್ನೋದು ಗರುಡ ಚಿತ್ರದ ಪ್ರಧಾನ ಅಂಶ. ಸಿದ್ಧಾಥ್ ಮಹೇಶ್ ಈ ಚಿತ್ರದಲ್ಲಿ ಆ ಕುಟುಂಬದ ಹುಡುಗನಾಗಿ ನಟಿಸಿದ್ದಾರೆ. ನಟ ಶ್ರೀನಗರ ಕಿಟ್ಟಿ ಈ ವರೆಗೆ ಬೇರೆ ಬೇರೆ ರೀತಿಯ ಪಾತ್ರಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಆದರೆ, ಗರುಡ ಅವರ ವೃತ್ತಿ ಬದುಕಿಗೆ ಕಮರ್ಷಿಯಲ್ ಕಲರ್ ನೀಡಿ ನನ್ನ ಕೆರಿಯರ್‍ಗೆ ಬೇರೆ ದಾರಿ ನೀಡುತ್ತದೆ ಎನ್ನುವ ನಂಬಿಕೆ ಸ್ವತಃ ಕಿಟ್ಟಿ ಅವರದ್ದು. ಕಿಟ್ಟಿ ಮತ್ತು ರಂಗಾಯಣ ರಘು ಕಾಂಬಿನೇಷನ್ ಸಾಕಷ್ಟು ಸಿನಿಮಾಗಳಲ್ಲಿ ವರ್ಕೌಟ್ ಆಗಿದೆ. ಈ ಚಿತ್ರದಲ್ಲೂ ಅದು ಮುಂದುವರೆಯಲಿದೆ. ಈ ಚಿತ್ರದಲ್ಲಿ ಕಿಟ್ಟಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ನಾಯಕನಟಿ ಆಶಿಕಾ ರಂಗನಾಥ್ ಅವರದ್ದು ಈ ಸಿನಿಮಾದಲ್ಲಿ ನನ್ನದು ಕಾಲೇಜ್ ಹುಡುಗಿ ಪಾತ್ರ. ಮನಸಲ್ಲಿ ಉಳಿಯೋ ಕ್ಯಾರೆಕ್ಟರ್ ಅಂತೆ. ಐಂದ್ರಿತಾ ರೇ ದೊಡ್ಡ ಗ್ಯಾಪ್ ನಂತ ನಬಟಿಸಿದ ಸಿನಿಮಾ ಗರುಡ. ಈ ಚಿತ್ರದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದ್ದಾಗ ಐಂದ್ರಿತಾ ತಮ್ಮ ಮದುವೆಯ ವಿಚಾರವನ್ನು ಅನೌನ್ಸ್ ಮಾಡಿದ್ದರು. ಗರುಡ ಚಿತ್ರದಿಂದ ಐಂದ್ರಿತಾ-ದಿಗಂತ್ ಮದುವೆ ಓಡಾಟಗಳಿಗೆ ಸ್ವಲ್ಪ ಅಡೆತಡೆಯಾಗಿತ್ತಂತೆ ಆದರೆ ಗರುಡ ಸಿನಿಮಾಗೆ ಮೊದಲ ಆದ್ಯತೆ ನೀಡಿದ್ದರಂತೆ!

    ನಟ ಆದಿ ಲೋಕೇಶ್ ಅವರಿಗಿದು ಪರ್ಸನಲ್ಲಾಗಿ, ಮನಸ್ಸಿಗೆ ತುಂಬಾ ಹತ್ರಿತವಾದ ಸಿನಿಮಾವಂತೆ. “ರಿಲೀಸ್ ಆದ ಮೇಲೆ ಹೆಣ್ಮಕ್ಕಳು ನನ್ನನ್ನು ನೋಡಿದರೆ ಚಪ್ಪಲಿ ತಗೊಂಡು ಹೊಡೀತಾರೆ” ಎಂದು ಸ್ವತಃ ಅವರೇ ಹೇಳಿಕೊಳ್ಳುವ ಮಟ್ಟಿಗೆ ಈ ಚಿತ್ರದ ಕಾಳಿಂಗನ ಪಾತ್ರ ಕ್ರೂರವಾಗಿದೆಯಂತೆ. ಗಾಯಕ ರಘು ದೀಕ್ಷಿತ್ ಈ ಚಿತ್ರದಲ್ಲಿ ಸಂಗೀತ ನಿರ್ದೇಶನದ ಜೊತೆಗೆ ನಟನೆಯನ್ನೂ ಮಾಡಿರೋದು ವಿಶೇಷ.

    ಕಳೆದ ಹನ್ನೆರಡು ವರ್ಷಗಳಿಂದ ಸ್ವತಂತ್ರ ನೃತ್ಯನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿರುವ ಧನಕುಮಾರ್ ‘ಗರುಡ’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಗರುಡ ಚಿತ್ರದ ಟ್ರೇಲರ್ ಅನ್ನು ರಘು ದೀಕ್ಷಿತ್ ಅವರ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸದ್ಯದಲ್ಲೇ ಗರುಡ ತೆರೆಗೆ ಬರುವ ಎಲ್ಲ ಯೋಜನೆ ರೂಪಿಸಿಕೊಂಡಿದೆ. ಧನಕುಮಾರ್ ನಿರ್ದೇಶನದ ಗರುಡ ಚಿತ್ರಕ್ಕೆ ರಘುದೀಕ್ಷಿತ್ ಸಂಗೀತ, ಜೈ ಆನಂದ್ ಛಾಯಾಗ್ರಹಣ, ದೀಪು ಎಸ್‍ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನದ ಈ ಚಿತ್ರದಲ್ಲಿಸಿದ್ಧಾರ್ಥ್ ಮಹೇಶ್, ಶ್ರೀನಗರ ಕಿಟ್ಟಿ, ಐಂದ್ರಿತಾ ರೇ, ಆಶಿಕಾ ರಂಗನಾಥ್, ಕಾಮ್ನಾ ಜೇಟ್ಮಲಾನಿ, ರಂಗಾಯಣ ರಘು, ಆದಿಲೋಕೇಶ್, ರಾಜೇಶ್‍ನಟರಂಗ, ರವಿಶಂಕರ್ ಗೌಡ, ರಘುದೀಕ್ಷಿತ್ ಮುಂತಾದವರ ತಾರಾಬಳಗವಿದೆ.

    https://www.youtube.com/watch?v=zbS1-dxwKe0