Tag: ಸಿನಿಮಾ ತಂಡ

  • ಏಪ್ರಿಲ್ 15ಕ್ಕೆ ಕಿಚ್ಚ ಸುದೀಪ್ ಕಡೆಯಿಂದ ಬಿಗ್ ಸರ್ಪ್ರೈಸ್

    ಏಪ್ರಿಲ್ 15ಕ್ಕೆ ಕಿಚ್ಚ ಸುದೀಪ್ ಕಡೆಯಿಂದ ಬಿಗ್ ಸರ್ಪ್ರೈಸ್

    ಬೆಂಗಳೂರು: ನಟ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರದ ಕಡೆಯಿಂದ ಶೀಘ್ರವೇ ಬಿಗ್ ಸರ್ಪ್ರೈಸ್ ಒಂದು ಕಾದಿದೆ ಎಂದು ಸ್ವತಃ ಸುದೀಪ್ ಅವರೇ ಸುಳಿವು ನೀಡಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಕಿಚ್ಚ, ಏಪ್ರಿಲ್ 15ಕ್ಕೆ ಸರ್ಪ್ರೈಸ್ ಕಾದಿದೆ ಎಂದು ಹೇಳುವ ಮೂಲಕ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಏಪ್ರಿಲ್ 15ಕ್ಕೆ ಬೆಳಗ್ಗೆ 11ಕ್ಕೆ ಸರ್ಪ್ರೈಸ್ ಕಾದಿದೆ ಎಂದು ಟ್ವೀಟ್ ಮಾಡಿ ವಿಕ್ರಾಂತ್ ರೋಣ ಸಿನಿಮಾದ ಪೋಸ್ಟರ್ ಅನ್ನು ಕಿಚ್ಚ ಟ್ವೀಟ್‍ರ್‍ನಲ್ಲಿ ಹಂಚಿಕೊಂಡಿದ್ದಾರೆ.

    ಕಿಚ್ಚ ಅವರ ಈ ಒಂದು ಟ್ವೀಟ್ ಅಭಿಮಾನಿಗಳಲ್ಲಿ ಸಾಕಷ್ಟು ಪ್ರಶ್ನೆಗಳನ್ನು ಮೂಡಿಸಿದೆ. ಸರ್ಪ್ರೈಸ್ ಏನು ಎನ್ನುವ ಕೂತೂಹಲ ಅಭಿಮಾನಿಗಳಲ್ಲಿ ಕಾಡುತ್ತಿದ್ದು, ಆ ದಿನಕ್ಕಾಗಿ ಕಾಯುತ್ತಿದ್ದಾರೆ. ಹಲವರು ಕಾಮೆಂಟ್ ಮಾಡುವ ಮೂಲಕವಾಗಿ ಕೇಳುತ್ತಿದ್ದಾರೆ.

    ವಿಕ್ರಾಂತ್ ರೋಣ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ಮುಖ್ಯ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ತೆರೆಕಾಣಲಿದೆ. ಈ ಸಿನಿಮಾ ಸಾಕಷ್ಟು ನೀರಿಕ್ಷೆಯನ್ನು ಮೂಡಿಸಿದೆ.

    ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್ ರೋಣ ಸಿನಿಮಾ ಹೆಸರನ್ನು ಪ್ರದರ್ಶಿಸುವ ಮೂಲಕವಾಗಿ ಕಿಚ್ಚನ ಟೀಂ ಬಹುಡೊಡ್ಡ ಮಟ್ಟದಲ್ಲಿ ಸಂಭ್ರಮಿಸಿತ್ತು. ಇದೀಗ ಯಾವ ಹೊಸ ಸರ್ಪ್ರೈಸ್ ಅನ್ನು ನೀಡಲಿದೆ. ಏನು ಎನ್ನುವುದು ಗೊತ್ತಾಗಬೇಕಾದರೆ ಏಪ್ರಿಲ್ 15ರವರೆಗೆ ಕಾಯಬೇಕಾಗಿದೆ.

  • ನವರಸ ನಾಯಕ ಜಗ್ಗೇಶ್ ಬರ್ತ್‍ಡೇಗೆ ಬಂತು ‘ತೋತಾಪುರಿ’  ಪೋಸ್ಟರ್

    ನವರಸ ನಾಯಕ ಜಗ್ಗೇಶ್ ಬರ್ತ್‍ಡೇಗೆ ಬಂತು ‘ತೋತಾಪುರಿ’  ಪೋಸ್ಟರ್

    ನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಖುಷಿಯಲ್ಲಿರುವ ಜಗ್ಗೇಶ್ ಅವರಿಗೆ ತೋತಾಪುರಿ ಸಿನಿಮಾ ಟೀಂನಿಂದ ವಿಶೇಷ ಉಡುಗೊರೆಯೊಂದು ಸಿಕ್ಕಿದೆ.

    ಜಗ್ಗೇಶ್ ಜನ್ಮದಿನದ ಪ್ರಯುಕ್ತ ತೋತಾಪುರಿ ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡುವ ಮೂಲಕ, ಇಂದಿನಿಂದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ವಿಭಿನ್ನ ಟೈಟಲ್ ಮೂಲಕ ಗಾಂಧಿನಗರದಲ್ಲಿ ನಿರೀಕ್ಷೆ ಹುಟ್ಟುಹಾಕಿರುವ ತೋತಾಪುರಿ ಸಿನಿಮಾದ ಶೂಟಿಂಗ್ ಇತ್ತೀಚೆಗಷ್ಟೇ ಕಂಪ್ಲೀಟ್ ಆಗಿದ್ದು, ಇದೀಗ ಜಗ್ಗೇಶ್ ಹುಟ್ಟುಹಬ್ಬಕ್ಕೆ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

    ಈ ಹಿಂದೆ ನೀರ್ ದೋಸ್ ಸಿನಿಮಾ ಮೂಲಕ ಪ್ರೇಕ್ಷಕರನ್ನು ಹೊಟ್ಟೆ ಉಣ್ಣಾಗುವಷ್ಟು ನಗಿಸಿದ್ದ ಜಗ್ಗೇಶ್ ಹಾಗೂ ನಿರ್ದೇಶಕ ವಿಜಯ್ ಪ್ರಸಾದ್ ಜೋಡಿ, ನಾಲ್ಕು ವರ್ಷಗಳ ಬಳಿಕ ತೋತಾಪುರಿ ಸಿನಿಮಾದ ಮೂಲಕ ಸಿನಿರಸಿಕರನ್ನು ಮತ್ತಷ್ಟು ರಂಜಿಸಲು ರೆಡಿಯಾಗಿದ್ದಾರೆ.

    ಅಂದಹಾಗೆ ತೋತಾಪುರಿ ಸಿನಿಮಾವನ್ನು ಎರಡು ಭಾಗಗಳಾಗಿ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಕೊರೋನಾ ಲಾಕ್‍ಡೌನ್‍ಗೂ ಮೊದಲೇ ಫಸ್ಟ್ ಶೆಡ್ಯುಲ್ಡ್ ಶೂಟಿಂಗ್ ಕಂಪ್ಲೀಟ್ ಮಾಡಿದ್ದ ಚಿತ್ರತಂಡ ಇತ್ತೀಚೆಗಷ್ಟೇ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಕಂಪ್ಲಿಟ್ ಮಾಡುವ ಮೂಲಕ ಎರಡೂ ಸೀಕ್ವೆಲ್‍ಗಳ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಮೊದಲ ಸಿನಿಮಾ ಎಂಬ ದಾಖಲೆ ಬರೆದಿದೆ ತೋತಾಪುರಿ ಸಿನಿಮಾ.

    ಜಗ್ಗೇಶ್ ರೈತನ ಪಾತ್ರದಲ್ಲಿ ಅಭಿನಯಿಸಿದ್ದು, ಹಿಂದೆಂದೂ ಕಾಣಿಸಿಕೊಳ್ಳದ ರೋಲ್‍ನಲ್ಲಿ ಪ್ರೇಕ್ಷಕರನ್ನು ನಕ್ಕು ನಲಿಸಲಿದ್ದಾರೆ. ಜಗ್ಗೇಶ್‍ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಉಳಿದಂತೆ ಡಾಲಿ ಧನಂಜಯ್, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿ ಇರಲಿದೆ.

    ಸುರೇಶ್  ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಶಿವಲಿಂಗ ಖ್ಯಾತಿಯ ನಿರ್ಮಾಪಕ ಸುರೇಶ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನೂಪ್ ಸೀಳೀನ್ ಮ್ಯೂಸಿಕ್, ನಿರಂಜನ್ ಬಾಬು ಕ್ಯಾಮೆರಾ ವರ್ಕ್, ಸುರೇಶ್ ಅರಸ್ ಸಂಕಲನ ಸಿನಿಮಾಕ್ಕಿರಲಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ತೋತಾಪುರಿ ಚಿತ್ರತಂಡ, ಏಪ್ರಿಲ್ ಅಥವಾ ಮೇ ವೇಳೆಗೆ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಹಾಕಿಕೊಂಡಿದೆ.