Tag: ಸಿನಿಮಾ ನ್ಯೂಸ್

  • ರಣಬೀರ್ ಮತ್ತು ಆಲಿಯಾ ಮದ್ವೆ ಡೇಟ್ ಮತ್ತೆ ಬದಲು: ಪ್ರಣಯ ಹಕ್ಕಿಗಳ ಪ್ರಲಾಪ

    ರಣಬೀರ್ ಮತ್ತು ಆಲಿಯಾ ಮದ್ವೆ ಡೇಟ್ ಮತ್ತೆ ಬದಲು: ಪ್ರಣಯ ಹಕ್ಕಿಗಳ ಪ್ರಲಾಪ

    ಬಾಲಿವುಡ್ ತಾರೆಯರಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆ ವಿಚಾರ ಪದೇ ಪದೇ ಟ್ವಿಸ್ಟು, ಟರ್ನು ತಗೆದುಕೊಳ್ಳುತ್ತಿದೆ. ಇವರು ಮದುವೆ ಆಗುತ್ತಾರೋ, ಇಲ್ಲವೋ ಎಂದು ಕೋಪ ಬರುವಷ್ಟು ದಿನಾಂಕಗಳು ಬದಲಾಗಿವೆ. ಆದರೂ, ಇವತ್ತಿನವರೆಗೂ ಅವರು ಇಂತಹ ಡೇಟ್ ನಲ್ಲೇ ಮದುವೆ ಆಗುತ್ತೇವೆ ಎಂದು ಹೇಳದೇ ಇದ್ದರೂ, ಬಿಟೌನ್ ಅಂಗಳದಲ್ಲಿ ಮಾತ್ರ ಡೇಟ್ ಗಳು ಗಿರಿಕಿ ಹೊಡೆಯುತ್ತಲೇ ಇರುತ್ತದೆ. ಇದನ್ನೂ ಓದಿ : ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ಈವರೆಗೂ ಆಲಿಯಾ ಮತ್ತು ರಣಬೀರ್ ಡಿಸೆಂಬರ್ 2022ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆಂದು ಹೇಳಲಾಗಿತ್ತು. ಇದೀಗ ಬಂದಿರುವ ನಯಾ ಡೇಟ್ ಅಂದರೆ ಅಕ್ಟೋಬರ್ ನಲ್ಲಿ ಮದುವೆ ಆಗುತ್ತಾರಂತೆ ಎಂಬ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್

    ರಣಬೀರ್ ಮತ್ತು ಆಲಿಯಾ ಎಲ್ಲ ಸಿದ್ಧತೆ ಮಾಡಿಕೊಂಡೇ ಸಪ್ತಪದಿ ತುಳಿಯಲಿದ್ದಾರೆ. ಹಾಗಾಗಿ ತಾವು ಇರಬೇಕಾದ ಮನೆಯ ಕೆಲಸ ಶುರು ಮಾಡಿಸಿದ್ದಾರೆ. ಮದುವೆ ನಂತರ ಅವರು ಮುಂಬಯಿನ ಪಾಲಿಹಿನ್ ನಲ್ಲಿರುವ ಕೃಷ್ಣ ರಾಜ್ ನಲ್ಲಿ ಉಳಿದುಕೊಳ್ಳಲಿದ್ದಾರೆ. ಆ ಮನೆಯ ನವೀಕರಣ ನಡೆಯುತ್ತಿದೆಯಂತೆ. ಜತೆಗೆ ಕೈಯಲ್ಲಿರುವ ಸಿನಿಮಾಗಳನ್ನು ಮುಗಿಸಿಯೇ ಹೊಸಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾತೂ ಕೇಳಿ ಬರುತ್ತಿದೆ.  ಇದನ್ನೂ ಓದಿ: ಎಂಟು ವರ್ಷಗಳ ನಂತರ ಒಂದಾದ ನೀನಾಸಂ ಸತೀಶ್ ಮತ್ತು ಸಿಂಧು

    ಹೀಗೆ ಪದೇ ಪದೇ ಮದುವೆ ದಿನಾಂಕಗಳು ಬದಲಾಗುತ್ತಿರುವ ಬೆನ್ನಲ್ಲೆ, ನೀವು ಯಾವತ್ತು ಮದುವೆ ಆಗ್ತೀರಾ ಹೇಳಿ ಎಂದು ಸ್ವತಃ ಅಭಿಮಾನಿಗಳೇ ಕೇಳುವಂತಾಗಿದೆ. ಸದ್ಯ ಅಕ್ಟೋಬರ್ ಎರಡನೇ ವಾರದಲ್ಲಿ ಈ ಜೋಡಿ ಮದುವೆ ಆಗಲಿದೆ ಎಂದು ಹೇಳಲಾಗುತ್ತದೆ. ಅಷ್ಟರಲ್ಲಿ ಇನ್ನೆಷ್ಟು ದಿನಾಂಕಗಳು ಬದಲಾಗಲಿವೆಯೋ ಯಾರಿಗೆ ಗೊತ್ತು?

  • ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪುನೀತ್, ಸಂಚಾರಿ ವಿಜಯ್

    ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪುನೀತ್, ಸಂಚಾರಿ ವಿಜಯ್

    ಮಾರ್ಚ್ 3 ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಗಲಿದ ಇಬ್ಬರು ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದರಿಗೆ ಗೌರವ ಸಲ್ಲಿಸುವ ಕಾರ್ಯ ನಡೆಯಲಿದೆ. ಇದನ್ನೂ ಓದಿ : ಹೊಸ ಮುಖಗಳ ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್

    ಇತ್ತೀಚೆಗಷ್ಟೇ ನಿಧನರಾದ ಪುನೀತ್ ರಾಜ್ ಕುಮಾರ್ ಮತ್ತು ಕಳೆದ ವರ್ಷ ಅಗಲಿರುವ ಸಂಚಾರಿ ವಿಜಯ್ ಅವರ ನೆನಪಿಗಾಗಿ ಚಿತ್ರೋತ್ಸವದಲ್ಲಿ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ ಕರ್ನಾಟಕ ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್.
    ಪುನೀತ್ ಮತ್ತು ಸಂಚಾರಿ ವಿಜಯ್ ನಟನೆಯ ಚಿತ್ರಗಳ ಪ್ರದರ್ಶನ, ಅವರ ಸಾಧನೆ ಅವಲೋಕನ ಹಾಗೂ ಪುನೀತ್ ಮತ್ತು ವಿಜಯ್ ಕುರಿತಾಗಿ ಗಣ್ಯರು ಈ ಸಂದರ್ಭದಲ್ಲಿ ಮಾತನಾಡಲಿದ್ದಾರೆ. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್

    ಪುನೀತ್ ಬಾಲ್ಯದಲ್ಲಿಯೇ ‘ಬೆಟ್ಟದ ಹೂವು’ ಚಿತ್ರಕ್ಕಾಗಿ ಅತ್ಯುತ್ತಮ ಬಾಲ ನಟ ರಾಷ್ಟ್ರ ಪ್ರಶಸ್ತಿ ಪಡೆದರೆ, ಸಂಚಾರಿ ವಿಜಯ್ ‘ನಾನು ಅವನಲ್ಲ ಅವಳು’ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದವರು. ಹೀಗಾಗಿ ಇಬ್ಬರೂ ಕಲಾವಿದರನ್ನು ಸಿನಿಮೋತ್ಸವದಲ್ಲಿ ಸ್ಮರಿಸಿಕೊಳ್ಳಲಾಗುತ್ತಿದೆ. ಇದನ್ನೂ ಓದಿ :ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು

     

    ಈಗಾಗಲೇ ಸಿನಿಮೋತ್ಸವಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ ಚಲನಚಿತ್ರ ಅಕಾಡಮಿ. ಸಿನಿಮಾಗಳ ಪ್ರದರ್ಶನ, ಸಿನಿಮಾಗಳ ಕುರಿತಾದ ಚರ್ಚೆ, ಅಂತಾರಾಷ್ಟ್ರೀಯ ನಿರ್ದೇಶಕರುಗಳ ಜತೆ ಸಂವಾದ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜನೆ ಮಾಡಲಾಗಿದೆ.