Tag: ಸಿಪಿಐಎಂ

  • ಕೇರಳದ ಹಿರಿಯ ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ

    ಕೇರಳದ ಹಿರಿಯ ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ನಿಧನ

    ಚೆನ್ನೈ: ಹಿರಿಯ ಸಿಪಿಎಂ (CPIM) ನಾಯಕ ಮತ್ತು ಪಕ್ಷದ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ (68) (Kodiyeri Balakrishnan) ನಿಧನರಾಗಿದ್ದಾರೆ.

    ಕೊಡಿಯೇರಿ ಬಾಲಕೃಷ್ಣನ್ ಅವರು ಹಲವು ದಿನಗಳಿಂದ ಕ್ಯಾನ್ಸರ್‌ಗೆ (Cancer) ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚೆನ್ನೈನಲ್ಲಿ (Chennai) ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ; ತ್ರಿಪಾಠಿ ನಾಮಪತ್ರ ತಿರಸ್ಕೃತ – ಖರ್ಗೆ, ಶಶಿ ತರೂರ್‌ ನಡುವೆ ಫೈಟ್

    ಕಣ್ಣೂರಿನ (Kannur) ತಲಶ್ಶೇರಿಯಿಂದ (Thalassery) ಐದು ಬಾರಿ ಶಾಸಕರಾಗಿದ್ದ ಕೊಡಿಯರಿ ಬಾಲಕೃಷ್ಣನ್ ಅವರು 2006 ರಿಂದ 2011 ರವರೆಗೆ ವಿಎಸ್ ಅಚ್ಯುತಾನಂದನ್ (Achuthanandan) ಅವರ ಸಂಪುಟದಲ್ಲಿ ಕೇರಳದ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಹೋಗ್ತಾರಲ್ಲ ಇದು ಚೈಲ್ಡಿಶ್ ತನ, ರಾಹುಲ್ ಗಾಂಧಿ ಫನ್ನಿಬಾಯ್ : ರೇಣುಕಾಚಾರ್ಯ ವ್ಯಂಗ್ಯ

    2021ರಲ್ಲಿ ಸಿಪಿಎಂ ಪಕ್ಷವನ್ನು ಎರಡನೇ ಬಾರಿಗೆ ಮುನ್ನಡೆಸುವಲ್ಲಿ ಕೊಡಿಯೇರಿ ಪ್ರಮುಖ ಪಾತ್ರ ವಹಿಸಿದ್ದರು. 2015 ರಿಂದ 2022 ರವರೆಗೆ ಕೇರಳ ಸಿಪಿಎಂನ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿದ್ದ ಕೊಡಿಯೇರಿ ಬಾಲಕೃಷ್ಣನ್ ಅವರು ಅನಾರೋಗ್ಯದ ಕಾರಣದಿಂದ ತಮ್ಮ ಸ್ಥಾನದಿಂದ ಹೊರ ನಡೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

    ಕೇರಳದಲ್ಲಿ ರಾಹುಲ್ ಗಾಂಧಿ ಕಚೇರಿ ಧ್ವಂಸ

    ತಿರುವನಂತಪುರಂ: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ.

    ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೂಕಂಪ – 280 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ 

    ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರರಿಗೂ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಪೇಪರ್‌ ಬಿಕ್ಕಟ್ಟು – ವಿದ್ಯಾರ್ಥಿಗಳಿಗೆ ಸಿಗ್ತಿಲ್ಲ ಪಠ್ಯ, ನೋಟ್‌ ಪುಸ್ತಕ

    ಸಿಪಿಐ(M) ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.

    Live Tv

  • ವಿಪರೀತ ಬೆಲೆ ಏರಿಕೆಯಿಂದ ಜನರ ಬದುಕು ತತ್ತರ- ಸಿಪಿಐಎಂ

    ವಿಪರೀತ ಬೆಲೆ ಏರಿಕೆಯಿಂದ ಜನರ ಬದುಕು ತತ್ತರ- ಸಿಪಿಐಎಂ

    ಮಂಗಳೂರು: ಲಾಕ್‍ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ, ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆ ಏರಿಕೆ ಮಾಡಿದೆ. ಇದರಿಂದಾಗಿ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು.

    ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಸಿಪಿಐಎಂ ಮಂಗಳೂರು ನಗರ ಸಮಿತಿಯಿಂದ ನಡೆಸುವ ವಾರಾಚರಣೆಯ ಉದ್ಘಾಟನೆಯ ಭಾಗವಾಗಿ ಮಂಗಳೂರಿನ ಬಜಾಲ್ ಪಕ್ಕಲಡ್ಕದಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದರೆ ಎಂದು ಕಿಡಿಕಾರಿದರು.

    ಪ್ರತಿಭಟನೆಯಲ್ಲಿ ಸಿಪಿಐಎಂ ಮುಖಂಡರು, ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಜಯಂತಿ.ಬಿ.ಶೆಟ್ಟಿ ಅವರು ಅಣಕು ಒಲೆಗೆ ಬೆಂಕಿ ಹಚ್ಚಿ, ಬಿಸಿ ನೀರು ಕಾಯಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಈ ವೇಳೆ ಡಿವೈಎಫ್‍ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಿಪಿಐಎಂ ಕಂಕನಾಡಿ ಬಿ ಶಾಖೆಯ ಕಾರ್ಯದರ್ಶಿ ಉದಯ್ ಕುಂಟಲಗುಡ್ಡೆ, ಸ್ಥಳೀಯ ಸಿಪಿಐಎಂ ಯುವ ನಾಯಕರಾದ ದೀಪಕ್ ಬಜಾಲ್, ಧೀರಾಜ್, ನೂರುದ್ದೀನ್, ಸೋನಿಲ್, ಅಶೋಕ್ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.

  • ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದ ಶೈಲಜಾರಿಗೆ ಕೊಕ್- ಕೇರಳ ಸಿಎಂ ಹೊಸ ಕ್ಯಾಬಿನೆಟ್

    ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದ ಶೈಲಜಾರಿಗೆ ಕೊಕ್- ಕೇರಳ ಸಿಎಂ ಹೊಸ ಕ್ಯಾಬಿನೆಟ್

    – ಕಳೆದ ಬಾರಿಯ ಎಲ್ಲ ಸಚಿವರು ಔಟ್, ಹೊಸಬರು, ಯುವಕರಿಗೆ ಆದ್ಯತೆ

    ತಿರುವನಂತಪುರಂ: ಕೇರಳದಲ್ಲಿ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್(ಎಲ್‍ಡಿಎಫ್) ಸರ್ಕಾರ ಪೂರ್ಣ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬಂದಿದ್ದು, ಎರಡನೇ ಬಾರಿ ಪಿಣರಾಯಿ ವಿಜಯನ್ ಮುಖ್ಯಮಂತ್ರಿಯಾಗುತ್ತಿದ್ದಾರೆ. ಆದರೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎರಡು ದಿನ ಇರುವಾಗಲೇ ಕ್ಯಾಬಿನೆಟ್ ಕುರಿತು ಅಚ್ಚರಿಯ ವಿಷಯ ಹೊರಗೆ ಬಿದ್ದಿದೆ. ಕೊರೊನಾ ಸಮರ್ಥವಾಗಿ ನಿರ್ವಹಿಸುವ ಮೂಲಕ ವಿಶ್ವಸಂಸ್ಥೆ ಸೇರಿದಂತೆ ವಿವಿಧ ಗಣ್ಯರ ಮೆಚ್ಚುಗೆಗೆ ಪಾತ್ರವಾಗಿದ್ದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರನ್ನು ಈ ಬಾರಿ ಕ್ಯಾಬಿನೆಟ್‍ನಿಂದ ಹೊರಗಿಡಲಾಗುತ್ತಿದೆ.

    ಕಳೆದ ಬಾರಿಯ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದಲ್ಲಿ ಆರೋಗ್ಯ ಸಚಿವೆಯಾಗಿದ್ದ ಕೆ.ಕೆ.ಶೈಲಜಾ ಅವರು 2021ರ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 60 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅಲ್ಲದೆ ಕಳೆದ ಬಾರಿ ಆರೋಗ್ಯ ಸಚಿವೆಯಾಗಿದ್ದಾಗ ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದರು. ಈ ಬಗ್ಗೆ ವಿಶ್ವಸಂಸ್ಥೆಯಾದಿಯಾಗಿ ಪ್ರಮುಖ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೂ ಈ ಬಾರಿಯ ಕ್ಯಾಬಿನೆಟ್‍ನಲ್ಲಿ ಇವರನ್ನು ಕೈ ಬಿಡಲಾಗಿದೆ.

    ಈ ಕುರಿತು ಸಿಪಿಐ(ಎಂ) ರಾಜ್ಯ ಸಮಿತಿ ಹೇಳಿಕೆ ನೀಡಿದ್ದು, ಆರೋಗ್ಯ ಸಚಿವೆ ಶೈಲಜಾ ಸೇರಿ ಪ್ರಸ್ತುತ ಈಗಿರುವ ಎಲ್ಲ ಮಂತ್ರಿಗಳನ್ನು ಕೈ ಬಿಡಲಾಗಿದೆ. ಪಕ್ಷವು ಎಂ.ಬಿ.ರಾಜೇಶ್ ಅವರನ್ನು ಸ್ಪೀಕರ್ ಅಭ್ಯರ್ಥಿಯಾಗಿ ಘೋಷಿಸಿದೆ. ಶೈಲಜಾ ಅವರನ್ನು ಸರ್ಕಾರದ ಮುಖ್ಯ ಸಚೇತಕರಾಗಿ (ವಿಪ್) ಮಾಡಲಾಗಿದೆ. ಟಿ.ಪಿ.ರಾಮಕೃಷ್ಣನ್ ಅವರನ್ನು ಪಕ್ಷದ ಶಾಸಕಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.

    ಪಿಣರಾಯಿ ವಿಜಯನ್ ಅವರನ್ನು ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ, ಎಂ.ವಿ.ಗೋವಿಂದನ್, ಕೆ.ರಾಧಾಕೃಷ್ಣನ್, ಕೆ.ಎನ್.ಬಾಲಗೋಪಾಲ್, ಪಿ.ರಾಜೀವ್, ವಿ.ಎನ್.ವಾಸವನ್, ಸಾಜಿ ಚೆರಿಯನ್, ವಿ.ಶಿವಂಕುಟ್ಟಿ, ಮೊಹಮ್ಮದ್ ರಿಯಾಜ್, ಡಾ.ಆರ್.ಬಿಂದು, ವೀಣಾ ಜಾರ್ಜ್ ಹಾಗೂ ವಿ.ಅಬ್ದುಲ್ ರೆಹ್ಮಾನ್ ಅವರನ್ನು ಸಚಿವರಾಗಿ ಘೋಷಿಸಲಾಗಿದೆ ಎಂದು ಸಿಪಿಐ(ಎಂ) ತಿಳಿಸಿದೆ.

    ಶೈಲಜಾ ಅವರನ್ನು ಕ್ಯಾಬಿನೆಟ್‍ನಿಂದ ಹೊರಗಿರಿಸಿದ್ದಕ್ಕೆ ಶಾಸಕ ಎ.ಎನ್.ಶಮ್ಸೀರ್ ಪ್ರತಿಕ್ರಿಯಿಸಿ, ಇದು ನಮ್ಮ ಪಕ್ಷದ ನಾಯಕರು ಕೈಗೊಂಡಿರುವ ಸಾಮೂಹಿಕ ನಿರ್ಧಾರವಾಗಿದೆ. ಒಬ್ಬ ವ್ಯಕ್ತಿಯನ್ನು ಪಕ್ಷದಿಂದ ಹೊರಗಿಟ್ಟು ನೋಡಬೇಡಿ, ಈ ಕುರಿತು ಪಕ್ಷದ ನಾಯಕರನ್ನೇ ಪ್ರಶ್ನಿಸಬೇಕು. ಹೊಸ ಕ್ಯಾಬಿನೆಟ್‍ನಲ್ಲಿ ಪಿಣರಾಯಿ ವಿಜಯನ್ ಹೊರತುಪಡಿಸಿ ಬೇರೆ ಯಾವ ಸಚಿವರೂ ಇಲ್ಲ. ಎಲ್ಲ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇದು ಯುವಕರ ಹಾಗೂ ಹಿರಿಯರ ಮಿಶ್ರಣವಾಗಿದೆ ಎಂದು ವಿವರಿಸಿದ್ದಾರೆ.

    ಎಲ್‍ಡಿಎಫ್ ವಕ್ತಾರ ಎ.ವಿಜಯರಾಘವನ್ ಈ ಕುರಿತು ಸೋಮವಾರವೇ ಮಾಹಿತಿ ನೀಡಿದ್ದು, ಮೇ 20ರಂದು ಪಿಣರಾಯಿ ವಿಜಯನ್ ಸೇರಿ 21 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ 12 ಜನ ಸಿಪಿಐ(ಎಂ), ನಾಲ್ವರು ಸಿಪಿಐ, ಕೇರಳ ಕಾಂಗ್ರೆಸ್(ಎಂ), ಜೆಡಿಎಸ್ ಹಾಗೂ ಎನ್‍ಸಿಪಿಯಿಂದ ತಲಾ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಳಿದಂತೆ ನಾಲ್ಕು ಏಕ ಶಾಸಕರ ಪಕ್ಷಗಳು ಎರಡು ಕ್ಯಾಬಿನೆಟ್ ಹುದ್ದೆಗಳನ್ನು ಹಂಚಿಕೊಳ್ಳಲಿದ್ದು, ಪ್ರತಿ ಪಕ್ಷವು ತಲಾ 2.5 ವರ್ಷಗಳ ಅವಧಿಯನ್ನು ಪಡೆಯುತ್ತದೆ ಎಂದು ತಿಳಿಸಿದ್ದರು.

  • ಸ್ಯಾಂಡಲ್‍ವುಡ್ ಡ್ರಗ್ಸ್‌ಗೆ ಕೇರಳ ರಾಜಕೀಯ ನಂಟು

    ಸ್ಯಾಂಡಲ್‍ವುಡ್ ಡ್ರಗ್ಸ್‌ಗೆ ಕೇರಳ ರಾಜಕೀಯ ನಂಟು

    – ಎನ್‍ಸಿಬಿ ಎದುರು ಅನೂಫ್ ಸ್ಫೋಟಕ ಹೇಳಿಕೆ

    ಬೆಂಗಳೂರು: ಭಾರೀ ಚರ್ಚೆಗೆ ಕಾರಣವಾಗಿರುವ ಡ್ರಗ್ಸ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಬಂಧಿತ ವಿಚಾರಣೆಯಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಕೇರಳ ರಾಜಕೀಯ ನಾಯಕರ ಪುತ್ರನ ಲಿಂಕ್ ಇರುವ ಬಗ್ಗೆ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕಿದ್ದಾನೆ ಎಂಬ ಮಾಹಿತಿ ಲಭಿಸಿದೆ.

    ಕೇರಳದಲ್ಲಿ ಬೆಂಗಳೂರಿನ ಡ್ರಗ್ ಪ್ರಕರಣ ತಲ್ಲಣವನ್ನು ಉಂಟು ಮಾಡಿದೆ. ಪೊಲೀಸರ ಎದುರು ಡ್ರಗ್ಸ್ ದಂಧೆಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿರುವ ಆರೋಪಿ ಅನೂಫ್, ದಂಧೆಯಲ್ಲಿ ಕೇರಳದ ಸಿಪಿಎಂ ಪಕ್ಷದ ಮಗನಿಂದ ಹಣ ಹೂಡಿಕೆ ಮಾಡಲಾಗಿದೆ. ಸಿಪಿಐ(ಎಂ) ಪಕ್ಷದ ಕೊಡಿಯೇರಿ ಬಾಲಕೃಷ್ಣನ್ ಅವರ ಮಗ ಬಿನೀಶ್ ಕೊಡಿಯೇರಿ ಹಣ ಹೂಡಿಕೆ ಮಾಡಿದ್ದ ಎಂದು ತಿಳಿಸಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಬಾಲಕೃಷ್ಣನ್ ಕೇರಳದ ಸಿಪಿಐ(ಎಂ) ಪಕ್ಷದ ಜನರಲ್ ಸೆಕ್ರೆಟರಿ ಆಗಿದ್ದಾರೆ. ಸದ್ಯ ಬಂಧಿತ ಅನೂಫ್ ಕೊರೊನಾ ಲಾಕ್‍ಡೌನ್‍ನಿಂದ ಕೊಚ್ಚಿಯಲ್ಲಿದ್ದ ಪಬ್ ಬಿಸಿನೆಸ್‍ನಲ್ಲಿ ಲಾಸ್ ಮಾಡಿಕೊಂಡು ಹಾಳಾಗಿದ್ದ ಜೀವನ್ನು ಸರಿ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಬೆಂಗಳೂರಿಗೆ ಆಗಮಿಸಿದ್ದ. ಅದಕ್ಕೂ ಮುನ್ನವೇ ಆತ ಬೆಂಗಳೂರಿನಲ್ಲಿ ಹಲವು ಬಿಸಿನೆಸ್ ನಡೆಸಿದ ಅನುಭವ ಹೊಂದಿದ್ದ. ಆದರೆ ಈ ಬಾರಿ ಬೆಂಗಳೂರಿಗೆ ಬಂದಿದ್ದ ಆತ, ಆರೋಪಿ ಅನಿಕಾಳಿಂದ ಡ್ರಗ್ಸ್ ಪಡೆದು ಲಾಕ್‍ಡೌನ್ ಅವಧಿಯಲ್ಲಿ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಸಂಪಾದನೆ ಮಾಡಿದ್ದ. 550 ರೂಪಾಯಿಗೆ ಒಂದು ಮಾತ್ರೆ ಎಂಬಂತೆ 1 ಲಕ್ಷದ 37 ಸಾವಿರ ರೂಪಾಯಿಗೆ ಡ್ರಗ್ಸ್ ಖರೀದಿ ಮಾಡಿದ್ದೆ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ.

    ಅನೂಫ್ ಕೇರಳದ ಸಿಪಿಎಂ ನಾಯಕ ಪುತ್ರನೊಂದಿಗೆ ಸಂಪರ್ಕ ಹೊಂದಿರುವುದನ್ನು ಒಪ್ಪಿಕೊಂಡಿದ್ದು, ಆತನ ಹಣದಿಂದಲೇ ಡ್ರಗ್ಸ್ ಖರೀದಿ ಮಾಡಿದ್ದೆ ಎಂದಿದ್ದಾನೆ. ಬೆಂಗಳೂರಿನಲ್ಲಿ ಪಬ್‍ವೊಂದನ್ನು ನೋಡಿಕೊಳ್ಳುತ್ತಿದ್ದ ಆರೋಪಿ ಅಲ್ಲಿಂದಲೇ ಡ್ರಗ್ ಮಾರಾಟ ಮಾಡುತ್ತಿದ್ದ. ಸದ್ಯ ಆರೋಪಿ ಸ್ಯಾಂಡಲ್‍ವುಡ್‍ನ ಯಾವ ನಟ, ನಟಿಯರು, ಗಣ್ಯರಿಗೆ ಸಪ್ಲೇ ಮಾಡಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬರಬೇಕಿದೆ.

    ಸದ್ಯ ಡ್ರಗ್ಸ್ ದಂಧೆಯ ಆರೋಪದ ಕುರಿತು ಪ್ರತಿಕ್ರಿಯೆ ನೀಡಿರುವ ಬಿನೀಶ್ ಕೊಡಿಯೇರಿ, ತನ್ನ ಸ್ನೇಹಿತ ಅನೂಫ್ ಡ್ರಗ್ಸ್ ವ್ಯವಹಾರದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಆತ ನನಗೆ 6 ರಿಂದ 7 ವರ್ಷಗಳಿಂದ ಪರಿಚಯ. ಬೆಂಗಳೂರಿನಲ್ಲಿ ರೆಸ್ಟೋರೆಂಟ್ ಬಿಸಿನೆಸ್ ಮಾಡುತ್ತಿದ್ದ. ಆದರೆ ಎನ್‍ಸಿಬಿ ಆತನನ್ನು ಬಂಧಿಸಿದ ಸುದ್ದಿ ಕೇಳಿ ಆಘಾತವಾಯಿತು. ಏಕೆಂದರೆ ನನಗೆ ಅಥವಾ ಆತನ ಪೋಷಕರಿಗೆ ಡ್ರಗ್ಸ್ ದಂಧೆಯ ಬಗ್ಗೆ ಯಾವುದೇ ಸುಳಿವು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ.

    ಇತ್ತ ನಿನ್ನೆಯೇ ಈ ಕುರಿತು ಹೇಳಿಕೆ ನೀಡಿದ್ದ ಐಯುಎಂಎಲ್ ಮುಖಂಡ ಕೆಎಫ್ ಫಿರೋಜ್, ಅನೂಫ್ ಹಾಗೂ ಬಿನೀಶ್ ಇಬ್ಬರು ಸ್ನೇಹಿತರು ಎಂದು ಮಾಧ್ಯಮಗಳ ಹೇಳಿದ್ದ. ಸದ್ಯದ ಮಾಹಿತಿ ಅನ್ವಯ ಆರೋಪವನ್ನು ಎದುರಿಸುತ್ತಿರುವ ಬಿನೀಶ್, ಹಲವು ವ್ಯವಹಾರ ನಡೆಸುತ್ತಿದ್ದ. ಅಲ್ಲದೇ ಚಿತ್ರರಂದ ಗಣ್ಯರೊಂದಿಗೂ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.

    ಬಿನೀಶ್ ಸಹೋದರ ಬಿನೊಯ್, ಮುಂಬೈ ಮೂಲದ 33 ವರ್ಷದ ಮಹಿಳೆಗೆ ಮದುವೆ ಹೆಸರಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಹಾಗೂ ವಂಚಿಸಿದ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾನೆ. ಈ ಪ್ರಕರಣದ ವಿಚಾರಣೆ ಮುಂಬೈನಲ್ಲಿ ನಡೆಯುತ್ತಿದ್ದು, ಡಿಎನ್‍ಎ ಪರೀಕ್ಷೆಯ ಫಲಿಶಾಂಶಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

  • ಕೇಂದ್ರ, ರಾಜ್ಯ ಸರ್ಕಾರದಿಂದಲೇ ಮಂಗ್ಳೂರು ಗೋಲಿಬಾರ್‌ಗೆ ಆದೇಶ: ಪ್ರತಿಭಟನಾಕಾರರ ಆಕ್ರೋಶ

    ಕೇಂದ್ರ, ರಾಜ್ಯ ಸರ್ಕಾರದಿಂದಲೇ ಮಂಗ್ಳೂರು ಗೋಲಿಬಾರ್‌ಗೆ ಆದೇಶ: ಪ್ರತಿಭಟನಾಕಾರರ ಆಕ್ರೋಶ

    – ಸಿಎಎ, ಗೋಲಿಬಾರ್ ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನಾ ಸಭೆ

    ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ವಿರೋಧಿಸಿ ಮಂಗಳೂರಿನಲ್ಲಿ ಗುರುವಾರ ಸಮಾನ ಮನಸ್ಕರು ನಗರದ ಪುರಭವನದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಎದುರು ಪ್ರತಿಭಟನಾ ಸಭೆ ನಡೆಸಿದರು.

    ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ ಸೇರಿದಂತೆ ವಿವಿಧ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನಾ ಸಭೆಯಲ್ಲಿ ನೂರಾರು ಜನ ಭಾಗವಹಿಸಿದ್ದರು. ಮಂಗಳೂರಿನಲ್ಲಿ ಹಿಂಸಾಚಾರ, ಗೋಲಿಬಾರ್, ಕರ್ಫ್ಯೂ ನಡೆದ ಬಳಿಕ ಇದೇ ಮೊದಲ ಬಾರಿಗೆ ವಿವಿಧ ಸಂಘಟನೆಗಳ ಧರಣಿ ನಡೆಸಲಾಯಿತು. ಇದನ್ನೂ ಓದಿ: ಸಿಎಎ ವಿರೋಧಿಸಿ ಮಂಗ್ಳೂರಿನಲ್ಲಿ ಜ.4ರಂದು ನಿಗದಿಯಾಗಿದ್ದ ಪ್ರತಿಭಟನೆ ರದ್ದು

    ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ ಜೈನ್, ಐವನ್ ಡಿಸೋಜ ಸೇರಿ ಕಾಂಗ್ರೆಸ್ ನಾಯಕರು, ಜೆಡಿಎಸ್, ಸಿಪಿಐಎಂ ನಾಯಕರು ಭಾಗಿಯಾದ ಈ ಧರಣಿ ಗುರುವಾರ ಬೆಳಗ್ಗೆಯಿಂದ ಸಂಜೆಯವರೆಗೂ ನಡೆದಿಯಿತು. ಈ ಸಭೆಯನ್ನು ಉದ್ದೇಶಿಸಿ ಅನೇಕ ಮುಖಂಡರು ಮಾತನಾಡಿದರು. ಡಿಸೆಂಬರ್ 19ರಂದು ನಡೆದ ಪ್ರತಿಭಟನೆ, ಹಿಂಸಾಚಾರದಲ್ಲಿ ಅಮಾಯಕರ ಬಂಧನವಾಗಿದೆ. ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು. ಅಷ್ಟೇ ಅಲ್ಲದೆ ಗೋಲಿಬಾರ್ ನಲ್ಲಿ ಮೃತರಪಟ್ಟ ಇಬ್ಬರ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯಿಸಲಾಯಿತು. ಜೊತೆಗೆ ಮ್ಯಾಜಿಸ್ಟ್ರೇಟ್ ತನಿಖೆ ಬೇಡ, ನ್ಯಾಯಾಂಗ ತನಿಖೆಯೇ ನಡೆಯಬೇಕು ಧರಣಿ ನಿರತ ಸಂಘಟನೆಗಳ ಮುಖಂಡರಿಂದ ಹಕ್ಕೊತ್ತಾಯ ನಡೆಯಿತು.

  • ಯೋಧನ ಪತ್ನಿಗೆ ಬಾಗಿನ ನೀಡಿ, ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಬಿಎಸ್‍ಪಿ ಅಭ್ಯರ್ಥಿ

    ಯೋಧನ ಪತ್ನಿಗೆ ಬಾಗಿನ ನೀಡಿ, ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಬಿಎಸ್‍ಪಿ ಅಭ್ಯರ್ಥಿ

    – ಸಿಪಿಐಎಂನಿಂದ ಕಣಕ್ಕಿಳಿದ ವರಲಕ್ಷ್ಮೀ

    ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದಿಂದ ಸಿಪಿಐಎಂ ಅರ್ಭರ್ಥಿಯಾಗಿ ಸಿಐಟಿಯು ಸಂಘಟನೆಗಳ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ರವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರೊಂದಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಚುನಾವಣಾಧಿಕಾರಿಗಳಲ್ಲಿ ನಾಮಪತ್ರ ಸಲ್ಲಿಸಿ ತದನಂತರ ಮಾತನಾಡಿದ ವರಲಕ್ಷೀ ಅವರು, ಸಿಪಿಐಎಂ ಪಕ್ಷ ಅಂದ್ರೆ ಹೋರಾಟದ ಸಂಕೇತ, ಹೀಗಾಗಿ ಜನರಿಗೆ ಹೋರಾಟಗಾರರ ಮೇಲೆ ನಂಬಿಕೆಯಿದ್ದು ತಮಗೆ ಮತ ನೀಡಲಿದ್ದಾರೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.

    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಎಸ್‍ಪಿ ಆಭ್ಯರ್ಥಿಯಾಗಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕಾನಾಥ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ದ್ವಾರಕಾನಾಥ್ ನಗರದ ಕರ್ತವ್ಯ ನಿರತ ಯೋಧ ನಾಗಾರ್ಜುನ್ ನಿವಾಸಕ್ಕೆ ಪತ್ನಿ ಸಮೇತ ಭೇಟಿ ನೀಡಿದರು. ಯೋಧನ ಪತ್ನಿ ಮೀನಾಕ್ಷಿ ಅವರಿಗೆ ಅರಿಶಿನ-ಕುಂಕುಮ ಇಟ್ಟು, ಬಾಗಿನ ಕೊಟ್ಟು ಗಮನ ಸೆಳೆದರು.

    ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಡಳಿತ ಭವನದವರೆಗೂ ಬಿಎಸ್‍ಪಿ ಪಕ್ಷದ ಚಿಹ್ನೆ ಆನೆ ಪ್ರತಿಮೆ ಮುಖಾಂತರ ಮೆರವಣಿಗೆ ನಡೆಸಿದ ದ್ವಾರಕನಾಥ್, ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಕೊಳ್ಳೆಗಾಲ ಶಾಸಕ ಎನ್ ಮಹೇಶ್ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ಸಿಎಸ್ ದ್ವಾರಕಾನಾಥ್, ದೇಶದಲ್ಲಿ ಯೋಧರನ್ನ ರಾಜಕೀಯವಾಗಿ ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಯೋಧರ ಪರ ದನಿಯಾಗಿ ಸಂಸತ್ ನಲ್ಲಿ ಧ್ವನಿ ಎತ್ತುವ ಸಲುವಾಗಿ ಸೇರಿದಂತೆ ಕ್ಷೇತ್ರದಲ್ಲಿನ ಗಂಭೀರ ಸಮಸ್ಯೆಯಾದ ನೀರಾವರಿ ಪರ ಮಾತನಾಡಲು ನಾನು ಈ ಬಾರಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು.

  • ಲೋಕಸಭಾ ಚುನಾವಣೆಗೆ ಹೆದರಿದ ಬಿಜೆಪಿಯಿಂದ ಯುದ್ಧದ ಗಿಮಿಕ್: ಸಿಪಿಐಎಂ

    ಲೋಕಸಭಾ ಚುನಾವಣೆಗೆ ಹೆದರಿದ ಬಿಜೆಪಿಯಿಂದ ಯುದ್ಧದ ಗಿಮಿಕ್: ಸಿಪಿಐಎಂ

    ತಿರುವನಂತಪುರಂ: ಪುಲ್ವಾಮಾ ದಾಳಿಗೆ ಭಾರತೀಯ ವಾಯು ಪಡೆ ಹಾಗೂ ಕೇಂದ್ರ ಸರ್ಕಾರ ಪ್ರತ್ಯುತ್ತರ ನೀಡಿದ್ದಕ್ಕೆ ಸೋಮವಾರ ದೇಶದಲ್ಲಿ ಸಂಭ್ರಮ ಮನೆ ಮಾಡಿತ್ತು. ಆದರೆ ಕೇರಳದ ಸಿಪಿಐ(ಎಂ) ಮುಖಂಡರೊಬ್ಬರು ಲೋಕಸಭಾ ಚುನಾವಣೆಗೆ ಹೆದರಿರುವ ಬಿಜೆಪಿಯು ಯುದ್ಧದ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿಕೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

    ಸಿಪಿಐಎಂ ಪಕ್ಷದಿಂದ ಇಡುಕ್ಕಿ ಜಿಲ್ಲೆಯ ನೆಡುಂಕಂಡಂನಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎನ್ನುವ ಭಯ ಬಿಜೆಪಿಯಲ್ಲಿದೆ. ಹೀಗಾಗಿ ಯುದ್ಧದ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾಶ್ಮೀರ ಜನತೆಯನ್ನು ದೇಶ ವಿರೋಧಿಗಳನ್ನಾಗಿ ಮಾಡುತ್ತಿದೆ. ಬಿಜೆಪಿಯವರು ದೇಶದ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸುತ್ತಿದ್ದಾರೆ. ದೇಶದಲ್ಲಿ ಕೋಮುಗಲಭೆ ಹೆಚ್ಚಿಸುವುದು ಆರ್‍ಎಸ್‍ಎಸ್ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.

    ಕೊಡಿಯೇರಿ ಬಾಲಕೃಷ್ಣನ್ ಅವರ ಹೇಳಿಕೆಯನ್ನು ದೇಶದ ಅನೇಕ ನಾಯಕರು ಖಂಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ಬಾಲಕೃಷ್ಣನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿ ಒಬ್ಬ `ನಮಕ್ ಹರಾಮ್’- ಜಿಗ್ನೇಶ್ ಮೇವಾನಿ

    ಪ್ರಧಾನಿ ಮೋದಿ ಒಬ್ಬ `ನಮಕ್ ಹರಾಮ್’- ಜಿಗ್ನೇಶ್ ಮೇವಾನಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಒಬ್ಬ ನಮಕ್ ಹರಾಮ್ ಎಂದು ಕರೆಯುವ ಮೂಲಕ ಗುಜರಾತ್ ಪಕ್ಷೇತರ ಶಾಸಕ, ದಲಿತ ಮುಖಂಡ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

    ಪಾಟ್ನಾದ ಗಾಂಧಿ ಮೈದಾನದಲ್ಲಿ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಹಮ್ಮಿಕೊಂಡಿದ್ದ ಬೃಹತ್ ರ‍್ಯಾಲಿಯೊಂದರಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಹೊರ ರಾಜ್ಯಗಳಿಂದ ಗುಜರಾತ್‍ಗೆ ವಲಸೆ ಬರುತ್ತಿರುವ ಕಾರ್ಮಿಕರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ಮೋದಿ ಜಾಣ ಮೌನವನ್ನು ವಹಿಸಿದ್ದಾರೆ ಎನ್ನುವ ಬರದಲ್ಲಿ ಅವರನ್ನು ನಮಕ್ ಹರಾಮ್ (ಅಪ್ರಾಮಾಣಿಕ) ಎಂದು ಹೇಳಿ ಟೀಕಿಸಿದ್ದಾರೆ.

    ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಗುಜರಾತಿನ ಅಹಮದಾಬಾದ್, ಸೂರತ್, ರಾಜ್‍ಕೋಟ್ ಮತ್ತು ಬರೋಡದಲ್ಲಿನ ರಸ್ತೆ, ಸೇತುವೆ ಹಾಗೂ ಫ್ಲೈ ಓವರ್ ಗಳ ಕಾಮಗಾರಿ ಕೆಲಸಗಳಲ್ಲಿ ಮಧ್ಯಪ್ರದೇಶ, ಜಾರ್ಖಂಡ್, ಉತ್ತರಪ್ರದೇಶ ಹಾಗೂ ಬಿಹಾರದಿಂದ ಅಪಾರ ಪ್ರಮಾಣದ ಕಾರ್ಮಿಕರು ವಲಸೆ ಬರುತ್ತಿದ್ದಾರೆ. ಕಳೆದ 12 ರಿಂದ 15 ದಿನಗಳಲ್ಲಿ ಇಂತಹ ವಲಸೆ ಬಂದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇದರ ಎಲ್ಲಾ ಮಾಹಿತಿ ಗೊತ್ತಿದ್ದರೂ, ನಮಕ್ ಹರಾಮ್ ಒಂದು ಸಣ್ಣ ಮಾತನ್ನು ಎತ್ತಿಲ್ಲ ಎಂದು ಹೇಳಿ ವಾಗ್ದಾಳಿ ನಡೆಸಿದರು.

    ಸಮಾವೇಶದಲ್ಲಿ ಮೇವಾನಿ `ಬಿಜೆಪಿ ಹಠಾವೋ, ದೇಶ್ ಬಚಾವೊ’ ಹಾಗೂ `ಶೇಮ್ ಆನ್ ಯು ನರೇಂದ್ರ ಮೋದಿ, ಶೇಮ್ ಆನ್ ಯೂ’ ಎಂದು ಆರು ಬಾರಿ ಕೂಗಿದ್ದರು. ಕೇಂದ್ರ ಸರ್ಕಾರದ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕತೆಯನ್ನು ಸುಧಾರಿಸಲು ಅಸಮರ್ಥವಾಗಿದೆ ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ

    ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ

    ತಿರುವನಂತಪುರಂ: ಕೇರಳದಲ್ಲಿ ರಾಜಕೀಯ ಸಂಘರ್ಷದ ಸರಣಿ ಕೊಲೆ ಮುಂದುವರೆದಿದ್ದು, ಇಂದು ಆರ್‍ಎಸ್‍ಎಸ್ ಸಂಘಟನೆಯ ಕಾರ್ಯಕರ್ತರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

    28 ವರ್ಷದ ವಾಡೆಕೆತಲಾ ಆನಂದನ್ ಕೊಲೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ. ಆನಂದನ್ ಸಿಪಿಐಎಂ ಪಕ್ಷದ ಸದಸ್ಯ ಮೊಹಮ್ಮದ್ ಕಾಸಿಮ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

    ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ವೇವಾಲಯ್ಡ್ ಪ್ರದೇಶದ ಗುರುವೂರು ದೇವಾಲಯ ಬಳಿ ಬೈಕ್ ನಲ್ಲಿ ಆನಂದ್ ಹೋಗುತ್ತಿದ್ದ ವೇಳೆ ಆನಂದನ್‍ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ ನಡೆದ ಸಿಪಿಐಎಂ ಕಾರ್ಯಕರ್ತರೊಬ್ಬರ ಕೊಲೆಯ ದ್ವೇಷದ ಹಿನ್ನೆಲೆಯಲ್ಲಿ ಅನಂದನ್ ಕೊಲೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅನಂದನ್ ಕೊಲೆಯನ್ನು ಖಂಡಿಸಿ ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆಯನ್ನು ನಡೆಸಲು ನಿರ್ಧಾರಿಸಿದ್ದಾರೆ. ಘಟನಾ ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ಹೇಳಿದ್ದಾರೆ.

    ರಾಜ್ಯ ವ್ಯಾಪಿ ನಡೆಯುತ್ತಿರುವ ಆರ್‍ಎಸ್‍ಎಸ್ ಹಾಗೂ ಬಿಜೆಪಿ ನಾಯಕರ ಕೊಲೆಗಳನ್ನು ಜಿಹಾದಿ ಭಯೋತ್ಪದನೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಕುಮ್ಮಮಾನಂ ರಾಜಶೇಖರನ್ ಅವರು ರಾಜ್ಯಾದ್ಯಂತ ಜನರಕ್ಷಾ ಯಾತ್ರೆಯನ್ನು ನಡೆಸಲಾಗಿತ್ತು. ಈ ಯಾತ್ರೆಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು. ಈ ಯಾತ್ರೆಯಲ್ಲಿ ಪಾಲ್ಗೊಂಡು ಅಮಿತಾ ಶಾ ದೇವರನಾಡಲ್ಲಿ ರಾಕ್ಷಸರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿದ್ದರು.