Tag: ಸಿಬಿಐ

  • ಪಿಎಸ್‌ಐ ಪರಶುರಾಮ್ ಆತ್ಮಹತ್ಯೆ ಪ್ರಕರಣ – ಸಿಬಿಐ ತನಿಖೆಗೆ ಆಗ್ರಹಿಸಿ ಶೋಭಾ ಕರಂದ್ಲಾಜೆ ಪತ್ರ

    ಪಿಎಸ್‌ಐ ಪರಶುರಾಮ್ ಆತ್ಮಹತ್ಯೆ ಪ್ರಕರಣ – ಸಿಬಿಐ ತನಿಖೆಗೆ ಆಗ್ರಹಿಸಿ ಶೋಭಾ ಕರಂದ್ಲಾಜೆ ಪತ್ರ

    ನವದೆಹಲಿ: ಪಿಎಸ್‌ಐ ಪರಶುರಾಮ್ (PSI Parashuram) ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪತ್ರ ಬರೆದಿದ್ದಾರೆ.

    ಕೇಂದ್ರ ಸಚಿವರ ಪತ್ರದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ, ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಪ್ರಕರಣವನ್ನು ಪರಿಶೀಲಿಸಿ, ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಶಿಕ್ಷಕರ ವೃತ್ತಿ ಸಾಮಾಜಿಕ ಜವಾಬ್ದಾರಿ: ಸಿದ್ದರಾಮಯ್ಯ

    ಈಚೆಗೆ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ಪರಶುರಾಮ್‌ ಸಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಪ್ರಕರಣದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ ಮತ್ತು ಅವರ ಪುತ್ರ ಪಂಪನಗೌಡ ಪುತ್ರನ ಹೆಸರು ಕೇಳಿಬಂದಿತ್ತು. ಶಾಸಕರ ರಾಜೀನಾಮೆ ಮತ್ತು ಇಬ್ಬರ ಬಂಧನಕ್ಕೆ ಆಗ್ರಹಿಸಿ ಜನರು ಪ್ರತಿಭಟಿಸಿದ್ದರು.

    ಪೊಲೀಸ್‌ ಅಧಿಕಾರಿ ಪರಶುರಾಮ್‌ ಸಾವಿನ ಪ್ರಕರಣದಲ್ಲಿ ಲಂಚ ಬೇಡಿಕೆ ಮತ್ತು ಅಧಿಕಾರಿಗೆ ಮಾನಸಿಕ ಕಿರುಕುಳದ ಆರೋಪವನ್ನು ಶಾಸಕ ಚನ್ನಾರೆಡ್ಡಿ ಹೊತ್ತಿದ್ದರು. ಅವರ ರಾಜೀನಾಮೆಗೆ ಆಗ್ರಹಿಸಿ ಯಾದಗಿರಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಇದನ್ನೂ ಓದಿ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ – ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಯತ್ನಾಳ್

  • ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ಕೋಲ್ಕತ್ತಾ: ಸದ್ಯ ಜೈಲು ವಾಸಿಯಾಗಿರುವ ಕೋಲ್ಕತ್ತಾ ಅತ್ಯಾಚಾರ ಪ್ರಕರಣದ (Kolkata Horror) ರೇಪ್‌ ಆರೋಪಿ ಜೈಲಿನಲ್ಲಿ ನೀಡುತ್ತಿರುವ ಊಟದ ಬಗ್ಗೆ ಅಸಮಾಧಾನ ಹೊರಹಾಕಿದ್ದಾನೆ. ಅಲ್ಲದೇ ರೋಟಿ-ಸಬ್ಜಿಯಿಂದ ನನಗೆ ತೃಪ್ತಿಯಾಗ್ತಿಲ್ಲ. ಮೊಟ್ಟೆ ಚೌಮೆನ್‌ (ಮೊಟ್ಟೆ ಮಿಶ್ರಿತ ನೂಡಲ್ಸ್‌) (Egg Chowmein) ತಿನ್ನಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾನೆ.

    ಹೌದು. ಪ್ರೆಸಿಡೆನ್ಸಿ ಜೈಲಿನಲ್ಲಿರುವ ಅತ್ಯಾಚಾರ ಆರೋಪಿ ಸಂಜಯ್‌ ರಾಯ್‌ಗೆ (Sanjay Roy) ಸದ್ಯ ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ತಯಾರಿಸಿದ ಆಹಾರವನ್ನೇ ನೀಡಲಾಗುತ್ತಿದೆ. ಶನಿವಾರವೂ ಸಹ ಎಂದಿನಂತೆ ರೋಟಿ ಮತ್ತು ಸಬ್ಜಿಯನ್ನು ನೀಡಿದಾಗ ರಾಯ್‌ ಅಸಮಾಧಾನಗೊಂಡಿದ್ದಾನೆ. ಇದರಿಂದ ಜೈಲು ಸಿಬ್ಬಂದಿಯೇ ಆತನಿಗೆ ಬಿಸಿಮುಟ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

    ಆಗಾಗ್ಗೆ ಗೊಣಗುತ್ತಿದ್ದ:
    ಈ ಮೊದಲು ಸಂಜಯ್‌ ರಾಜ್‌ನನ್ನು ಸಿಬಿಐ ಕಸ್ಟಡಿಯಿಂದ ಪ್ರೆಸಿಡೆನ್ಸಿ ಕರೆಕ್ಷನಲ್ ಹೋಮ್‌ಗೆ (ಜೈಲು) ಕರೆ ತಂದಾಗ ಮಲಗಲು ಸ್ವಲ್ಪ ಜಾಗ ಕೊಡುವಂತೆ ಕೇಳಿದ್ದ. ನಂತರ ಆಗಾಗ್ಗೆ ಗೊಣಗುವುದನ್ನು ಶುರು ಮಾಡಿದ್ದ. ಕೆಲ ದಿನಗಳ ನಂತರ ರಾಯ್‌ ಸಹಜ ಸ್ಥಿತಿಗೆ ಮರಳಿದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    ಸದ್ಯ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನ ಸಿಬಿಐ ತಂಡ ಮತ್ತೆ ವಿಚಾರಣೆಗೊಳಪಡಿಸಿದೆ. ಬಳಿಕ ಕೋರ್ಟ್‌ಗೆ ಒಪ್ಪಿಸಿ 14 ದಿನ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ. ಈಗಾಗಲೇ 140 ಗಂಟೆಗಳಿಗೂ ಹೆಚ್ಚು ಕಾಲ ಅವರನ್ನ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ & ಮರ್ಡರ್‌ ಪ್ರಕರಣವನ್ನು ಕಳೆದ ಆಗಸ್ಟ್‌ 13ರಂದು ಹೈಕೋರ್ಟ್ ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಲು ಆದೇಶಿಸಿತು. ಆಗಸ್ಟ್‌ 14 ರಿಂದ ಸಿಬಿಐ ತನಿಖೆ ಆರಂಭಿಸಿದೆ. ಇದನ್ನೂ ಓದಿ: Kolkata Horror | ಕ್ರಿಮಿನಲ್‌ ಮನಸ್ಥಿತಿ ಬರೋದು ಏಕೆ? ಮನೋವಿಜ್ಞಾನಿಗಳು ಏನ್‌ ಹೇಳ್ತಾರೆ?

  • ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    – ಮೃತ ವೈದ್ಯೆ ದೇಹದಲ್ಲಿ 25ಕ್ಕೂ ಹೆಚ್ಚು ಗಾಯಗಳು ಪತ್ತೆ
    – ಕೊಲೆ ಮಾಡುವ ಮುನ್ನ ಕ್ರೂರವಾಗಿ ಹಿಂಸೆ

    ಬೆಂಗಳೂರು: ಕೋಲ್ಕತ್ತಾ ಅತ್ಯಾಚಾರ ಪ್ರಕರಣಕ್ಕೆ (Kolkata Horror) ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌ಗೆ ಮಾಡಿದ ಪಾಲಿಗ್ರಾಫ್ ಪರೀಕ್ಷೆಯ ವರದಿ ಹೊರಬಿದ್ದಿದೆ. ಕೃತ್ಯ ನಡೆದ ದಿನ ತಾನು ರೆಡ್‌ಲೈಟ್ ಏರಿಯಾಗೆ ಹೋಗಿದ್ದೆ. ಆಸ್ಪತ್ರೆಗೆ ಬರುವ ಹೊತ್ತಿಗೆ ಯುವ ವೈದ್ಯೆ ಸಾವನ್ನಪ್ಪಿದ್ರು ಎಂದು ಸಂಜಯ್ ರಾಯ್ (Sanjay Roy) ಹೇಳಿದ್ದಾನೆ ಎಂದು ವರದಿಯಾಗಿದೆ. ಇದರೊಂದಿಗೆ ಆರೋಪಿ ವಿಕೃತ ಮನಸ್ಥಿತಿಗೆ ಕನ್ನಡಿ ಹಿಡಿದಂತೆ ಇನ್ನಷ್ಟು ವಿಚಾರಗಳು ಬಯಲಾಗಿದೆ.

    ಸುಳ್ಳು ಪತ್ತೆ ಪರೀಕ್ಷೆ ವೇಳೆ ಸಂಜಯ್‌ ರಾಯ್‌ ಸಿಬಿಐ (CBI) ಅಧಿಕಾರಿಗಳ ಮುಂದೆ ವೈದ್ಯೆಯ ಕೊಲೆಯ ಮುನ್ನ ನಗರದ ಎರಡು ವೇಶ್ಯಾಗೃಹಗಳಿಗೆ (Red light area) ಭೇಟಿ ನೀಡಿರುವುದಾಗಿ ತಿಳಿಸಿದ್ದಾನೆ. ಆದರೆ ಈ ವೇಳೆ ಲೈಂಗಿಕ ಕ್ರಿಯೆ ನಡೆಸಿಲ್ಲ ಎಂದು ಹೇಳಿದ್ದಾನೆ. ಇದೇ ವೇಳೆ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಕಿರುಕುಳ ನೀಡಿರುವುದನ್ನೂ ಒಪ್ಪಿಕೊಂಡಿದ್ದಾನೆ. ಜೊತೆಗೆ ತನ್ನ ಗೆಳತಿಗೆ ಕರೆ ಮಾಡಿ ಆಕೆಯ ಗ್ನ ಫೋಟೊ ಕಳಿಸುವಂತೆ ಕೇಳಿದ್ದ ಎಂದು ಒಪ್ಪಿಕೊಂಡಿರುವುದಾಗಿ ವರದಿಗಳಲ್ಲಿ ಉಲ್ಲೇಖವಾಗಿದೆ.

    ಕರಾಳ ಮುಖ ಬಯಲು:
    ಅತ್ಯಾಚಾರ ಘಟನೆ ನಡೆದ ರಾತ್ರಿ ಸಂಜಯ್ ರಾಯ್ ತನ್ನ ಸ್ನೇಹಿತನೊಂದಿಗೆ ಮದ್ಯಪಾನ ಮಾಡಿದ್ದ. ನಂತರ ವೇಶ್ಯಾಗೃಹಕ್ಕೆ ತೆರಳಿದ್ದ. ಅಲ್ಲಿಂದ ಹೊರಬಂದ ಆತ ದಕ್ಷಿಣ ಕೋಲ್ಕತ್ತಾದ ಮತ್ತೊಂದು ರೆಡ್‌ಲೈಟ್‌ ಏರಿಯಾ ಚೆಟ್ಲಾಕ್ಕೆ ಭೇಟಿ ನೀಡಿದ್ದ. ಚೆಟ್ಲಾಕ್ಕೆ ತೆರಳುವ ಮಾರ್ಗಮಧ್ಯೆ ಆತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ್ದ. ಬಳಿಕ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಬಂದಿದ್ದ. ಮುಂಜಾನೆ 4 ಗಂಟೆ ಸುಮಾರಿಗೆ ಆತ ವೈದ್ಯೆ ಮೃತಪಟ್ಟ ಸೆಮಿನಾರ್‌ ಹಾಲ್‌ಗೆ ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದನ್ನೂ ಓದಿ: ಉಕ್ರೇನ್‌ ಮೇಲೆ ಮತ್ತೆ ರಷ್ಯಾ ವಾರ್‌ – 100 ಕ್ಷಿಪಣಿ, 100 ಅಟ್ಯಾಕಿಂಗ್‌ ಡ್ರೋನ್‌ಗಳಿಂದ ದಾಳಿ

    ಟ್ರೈನಿ ವೈದ್ಯೆಯ ಹತ್ಯೆಯ ಬಳಿಕ ಆತ ತನ್ನ ಸ್ನೇಹಿತ ಅನುಪಮ್‌ ದತ್ತ ಎಂಬಾತನ ಮನೆಗೆ ತೆರಳಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅದಾಗ್ಯೂ ಸುಳ್ಳು ಪತ್ತೆ ಪರೀಕ್ಷೆ ವೇಳೆ ಸಂಜಯ್‌ ರಾಯ್‌ ಅಧಿಕಾರಿಗಳ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾನೆ ಎಂದು ವರದಿಯೊಂದು ತಿಳಿಸಿದೆ.

    ಇದೇ ವೇಳೆ ಸಿಬಿಐ ಅಧಿಕಾರಿಗಳು ಆತನ ಹಿನ್ನೆಲೆ ಪರೀಶೀಲಿಸಿದ್ದು ಈ ವೇಳೆ ಆತ ಅಶ್ಲೀಲ ಚಿತ್ರಗಳ ವೀಕ್ಷಿಸುವ ಚಟ ಹೊಂದಿದ್ದ ಎನ್ನುವುದನ್ನು ಕಂಡುಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಆತನ ಮೊಬೈಲ್‌ ಫೋನ್‌ನಲ್ಲಿ ಹಲವು ಅಶ್ಲೀಲ ಚಿತ್ರಗಳ ತುಣಕುಗಳು ಸಿಕ್ಕಿವೆ. ಮೃತ ತರಬೇತಿ ವೈದ್ಯೆಯ ದೇಹದಲ್ಲಿ 25ಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿದ್ದು, ಕೊಲೆ ಮಾಡುವ ಮುನ್ನ ಕ್ರೂರವಾಗಿ ಹಿಂಸಸಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ಜೈಲಲ್ಲಿ ಪೋಸ್ ಕೊಟ್ಟ ರೌಡಿಶೀಟರ್ ನಾಗ ಧರಿಸಿದ್ದ ಟಿ-ಶರ್ಟ್ ಬೆಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ!

    ಆಗಸ್ಟ್‌ 9ರಂದು ಮುಂಜಾನೆ 4 ಗಂಟೆ ಸುಮಾರಿಗೆ ಟ್ರೈನಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಅಂದು ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಇಂಟರ್ನ್‌ಗಳೊಂದಿಗೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಉತ್ತರಗಳನ್ನು ಸಿಬಿಐ ಪರಿಶೀಲಿಸುತ್ತಿದೆ. ಸಂದೀಪ್ ಘೋಷ್ ಅವರನ್ನೂ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

  • ಕೇಜ್ರಿವಾಲ್ ಜಾಮೀನು ಅರ್ಜಿ ಸೆ. 5ಕ್ಕೆ ಮುಂದೂಡಿಕೆ

    ಕೇಜ್ರಿವಾಲ್ ಜಾಮೀನು ಅರ್ಜಿ ಸೆ. 5ಕ್ಕೆ ಮುಂದೂಡಿಕೆ

    – ಪ್ರಕರಣ ರಾಜಕೀಯಗೊಳಿಸಲು ಯತ್ನ, ಸಿಬಿಐ ಆರೋಪ

    ನವದೆಹಲಿ: ಸಿಬಿಐ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supremecourt) ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಿಬಿಐ ಸಮಯ ಕೇಳಿದ ಹಿನ್ನಲೆ ಒಂದು ವಾರದ ಕಾಲಾವಕಾಶ ನೀಡಿದೆ.

    ಇದಕ್ಕೂ ಮುನ್ನ ಸಿಬಿಐ(Central Bureau Of Investigation)  ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಂಟರ್ ಅಫಿಡವಿಟ್ ಸಲ್ಲಿಸಿದೆ. ಇದರಲ್ಲಿ ವಿವಾದಾತ್ಮಕ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ, ಕೇಜ್ರಿವಾಲ್ ಅವರ ಬಂಧನವು ಕಾನೂನುಬದ್ಧವಾಗಿದೆ, ದೆಹಲಿ ಹೈಕೋರ್ಟ್(Delhi Highcourt) ಈಗಾಗಲೇ ಕೇಜ್ರಿವಾಲ್ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ ಎಂದು ಹೇಳಿದೆ. ಇದನ್ನೂ ಓದಿ: ರಾಜಕೀಯ ಪ್ರವೇಶದ ಬಳಿಕವೂ ಯಶಸ್ವಿ ಆಪರೇಷನ್ – ಮಂಜುನಾಥ್ ಕೆಲಸಕ್ಕೆ ಮೆಚ್ಚುಗೆ

    ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಒಳಗೊಳ್ಳುವಿಕೆಯನ್ನು ಸೂಚಿಸುವ ಗಣನೀಯ ಪುರಾವೆಗಳನ್ನು ನೀಡಲಾಗಿದೆ. ಅವರ ಕ್ರಮಗಳು ಕಾನೂನುಬಾಹಿರ ಮಾತ್ರವಲ್ಲ, ಗಮನಾರ್ಹ. ಹಣಕಾಸಿನ ಅಕ್ರಮಗಳು ಮತ್ತು ಸಾರ್ವಜನಿಕ ಕಚೇರಿಯ ದುರುಪಯೋಗವನ್ನು ಒಳಗೊಂಡಿರುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಸಿಬಿಐ ಪ್ರತಿಪಾದಿಸಿದೆ. ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿ ವಿವಾದ: ತಮ್ಮಂದಿರಿಂದಲೇ ಅಣ್ಣನ ಕೊಲೆ

    ಕೇಜ್ರಿವಾಲ್ ಪ್ರಕರಣವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಅವರು ಅಪರಾಧಗಳ ಆಯೋಗದ ಬಗ್ಗೆ ಪ್ರಾಥಮಿಕವಾಗಿ ತೃಪ್ತರಾಗಿರುವ ವಿವಿಧ ನ್ಯಾಯಾಲಯಗಳು ಪದೇಪದೆ ಆದೇಶಗಳನ್ನು ನೀಡಿದ್ದರೂ ಈ ಗೌರವಾನ್ವಿತ ನ್ಯಾಯಾಲಯದ ಮುಂದೆ ಪ್ರಕರಣವನ್ನು ರಾಜಕೀಯವಾಗಿ ಸಂವೇದನಾಶೀಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಬಂಧನವು ಯಾವುದೇ ಸಮರ್ಥನೀಯವಲ್ಲ ಎಂದು ಹೇಳಲಾಗುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಮುಡಾ ಸೈಟ್ ಪಡೆಯಲು ಸಿಎಂ ಪತ್ನಿ ಡಿಮ್ಯಾಂಡ್ – ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

    ಆರೋಪಿಗಳ ಹಾರ್ಡ್ ಡ್ರೈವ್‌ಗಳು ಮತ್ತು ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವು ಕೇಜ್ರಿವಾಲ್ ಅವರ ಒಳಗೊಳ್ಳುವಿಕೆಯನ್ನು ದೃಢಪಡಿಸುತ್ತದೆ ಎಂದು ಅಫಿಡವಿಟ್ ಉಲ್ಲೇಖಿಸಿದೆ. ಇದರಲ್ಲಿ ವಾಟ್ಸಾಪ್ ಚಾಟ್‌ಗಳು, ಸ್ಕ್ರೀನ್‌ಶಾಟ್‌ಗಳು, ಕೇಜ್ರಿವಾಲ್ ಅವರನ್ನು ಹಣಕಾಸು ವಹಿವಾಟುಗಳಿಗೆ ಲಿಂಕ್ ಮಾಡುವ ಸಂಪರ್ಕ ವಿವರಗಳು ಮತ್ತು ಪರಿಶೀಲನೆಯಲ್ಲಿರುವ ನೀತಿ ನಿರ್ಧಾರಗಳು ಸೇರಿವೆ. ಈ ದಾಖಲೆಗಳು ಕೇಜ್ರಿವಾಲ್ ಮತ್ತು ಅಕ್ರಮ ಚಟುವಟಿಕೆಗಳ ನಡುವಿನ ನೇರ ಸಂಪರ್ಕವನ್ನು ಸೂಚಿಸುತ್ತವೆ ಎಂದು ಸಿಬಿಐ ಆರೋಪಿಸಿದೆ. ಇದನ್ನೂ ಓದಿ: ಮೋದಿ ಉತ್ತರಾಧಿಕಾರಿ ಯಾರು? ಅಮಿತ್‌ ಶಾ, ಗಡ್ಕರಿ, ಯೋಗಿ.. ಯಾರಿಗೆ ಹೆಚ್ಚು ಜನರ ಒಲವು?

  • Kolkata Horror | 36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ – ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು!

    Kolkata Horror | 36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ – ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು!

    36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ

    ನವದೆಹಲಿ/ಕೋಲ್ಕತ್ತಾ: ವೈದ್ಯರನ್ನು 36 ಗಂಟೆಗಳ ಕಾಲ ನಿರಂತರವಾಗಿ ದುಡಿಸಿಕೊಳ್ಳುವುದು ಅಮಾನವೀಯ ಎಂದು ಸುಪ್ರೀಂ ಕೋರ್ಟ್‌ (Supreme Court)  ಗುರುವಾರ ಹೇಳಿದೆ.

    ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣದ ವಿಚಾರನೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (DYChandrachud) ನೇತೃತ್ವದ ತ್ರಿಸದಸ್ಯ ಪೀಠ ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ಕಳವಳ ವ್ಯಕ್ತಪಡಿಸಿತು. ಅಲ್ಲದೇ ಈ ಬಗ್ಗೆ ಕ್ರಮ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತು.

    ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲ ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ನೇಮಕಗೊಂಡ 10 ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ (Kolkata Doctor) ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಪೀಠ ತಾಕೀತು ಮಾಡಿದೆ. ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

    ಅಲ್ಲದೇ ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಕೋಲ್ಕತ್ತಾ ಪೊಲೀಸರ ತನಿಖೆಯಲ್ಲಿನ ವಿಳಂಬ ಮತ್ತು ಸ್ಪಷ್ಟ ಅಕ್ರಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿರುವುದು ಅತ್ಯಂತ ಗೊಂದಲದ ಸಂಗತಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

    ಮೋದಿಗೆ ದೀದಿ ಪತ್ರ:
    ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಗುರುವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದಾರೆ. ಈ ಪತ್ರದ ಪ್ರತಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಈ ದಿನ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು:
    ಕೋಲ್ಕತ್ತಾ ಆರ್.ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರು ವೈದ್ಯರ ಮೇಲೆ ಪಾಲಿಗ್ರಾಫ್ ಪರೀಕ್ಷೆ (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಸುಪ್ರೀಂ ಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ. ಏತನ್ಮಧ್ಯೆ ಪ್ರಕರಣವನ್ನು ತಿರುಚಲು ಮತ್ತು ಮುಚ್ಚಿಹಾಕಲು ಕೋಲ್ಕತ್ತಾ ಪೊಲೀಸರು ಪ್ರಯತ್ನಿಸಿದ್ದಾರೆ ಎಂದು ಸಿಬಿಐ ಗಂಭೀರ ಆರೋಪ ಮಾಡಿದೆ. ಇದನ್ನೂ ಓದಿ: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

    ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಂದ ಮಾಹಿತಿ ಪಡೆಯಿತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿನ ಮಾಜಿ ಪ್ರಾಂಶುಪಾಲ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ಬಂಧಿಸಿ ಕಳೆದ ಒಂದು ವಾರದಿಂದ ವಿಚಾರಣೆ ನಡೆಸುತ್ತಿದೆ. ಆದರೆ ಅವರಿಂದ ಸರಿಯಾದ ಉತ್ತರ ಸಿಗದಿರುವ ಹಿನ್ನೆಲೆಯಲ್ಲಿ ಪಾಲಿಗ್ರಾಫ್ ಟೆಸ್ಟ್ ನಡೆಸಲು ಸುಪ್ರೀಂ ಕೋರ್ಟಿನ ಅನುಮತಿ ಕೋರಿದ್ದು ಕೋರ್ಟ್ ಅಸ್ತು ಎಂದಿದೆ.

  • Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

    ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Kolkata Doctor Case) ಸಂಬಂಧ ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ಮುಂದುವರಿಸಿದೆ. ಘಟನೆ ಖಂಡಿಸಿ ಕಳೆದ ಕೆಲ ದಿನಗಳಿಂದ ನಡೆಸ್ತಿರುವ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ವೈದ್ಯರಿಗೆ ಸೂಚನೆ ನೀಡಿದೆ.

    ಬಿಜೆಪಿ, ಟಿಎಂಸಿಗೆ ಬುದ್ಧಿವಾದ
    ವಿಚಾರಣೆ ವೇಳೆ ಘಟನೆಗೆ ಸಂಬಂಧಿಸಿದಂತೆ ಟಿಎಂಸಿ (TMC) ಮತ್ತು ಬಿಜೆಪಿಗೆ (BJP( ಬುದ್ಧಿವಾದ ಹೇಳಿದ ನ್ಯಾಯಾಲಯ ಇತ್ತ ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿರುವುದನ್ನು ಟೀಕಿಸಿದೆ. ʻಮಮತಾ ಬ್ಯಾನರ್ಜಿ ಕಡೆಗೆ ಕೈತೋರುವವರ ಬೆರಳು ಕತ್ತರಿಸಲಾಗುವುದುʼ ಎಂಬ ಬಂಗಾಳ ಸಚಿವರೊಬ್ಬರ ಹೇಳಿಕೆಯನ್ನು ಸಿಬಿಐ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ (SG) ತುಷಾರ್ ಮೆಹ್ತಾ ಪ್ರಸ್ತಾಪಿಸಿದರು.

    ಆಗ ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಗುಂಡು ಹಾರಿಸಲಾಗುವುದು ಅಂತ ಹೇಳಿರುವುದಾಗಿ ಕೋರ್ಟ್‌ ಗಮನಕ್ಕೆ ತಂದರು. ಆ ಸಂದರ್ಭದಲ್ಲಿ ನ್ಯಾಯಾಲಯ ಪರಿಸ್ಥಿತಿಯನ್ನು ರಾಜಕೀಯಗೊಳಿಸಬೇಡಿ ಕಾನೂನು ತನ್ನ ಹಾದಿಯನ್ನು ಕಂಡುಕೊಳ್ಳಲಿದೆ ಎಂಬುದಾಗಿ ತಿಳಿಸಿತು.

    ಕರ್ತವ್ಯ ಮಾಡುತ್ತಲೇ ಮುಷ್ಕರ ನಡೆಸ್ತಿರೋದಾಗಿ ವೈದ್ಯರ ಸಂಘ ತಿಳಿಸಿದೆ. ಇದೇ ವೇಳೆ ಯುವವೈದ್ಯೆಯ ಅತ್ಯಾಚಾರ ಪ್ರಕರಣದ ತನಿಖಾ ಪ್ರಗತಿಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಸಿಬಿಐ (CBI) ಸಲ್ಲಿಸಿದೆ. ಅತ್ಯಾಚಾರ & ಹತ್ಯೆ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಅಪ್ಪ-ಅಪ್ಪನಿಗೂ ಸರಿಯಾದ ಮಾಹಿತಿ ನೀಡದೇ ದಾರಿ ತಪ್ಪಿಸುವ ಪ್ರಯತ್ನವೂ ಆಗಿತ್ತು. ಶವ ದಹನದ ಬಳಿಕವೇ ಎಫ್‌ಐಆರ್ (FIR) ನಮೂದಿಸಿದ್ರು. ಘಟನಾ ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನ ಧ್ವಂಸ ಮಾಡುವ ಪ್ರಯತ್ನಗಳು ನಡೆದಿವೆ ಎಂದು ಸಿಬಿಐ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ  ಓದಿ: ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ಘಟನೆ ನಡೆದ 5ನೇ ದಿನ ತಮ್ಮ ಕೈಗೆ ತನಿಖಾ ವರದಿಯನ್ನು ಪೊಲೀಸರು ಸಲ್ಲಿಸಿದ್ರು. ಅಷ್ಟರೊಳಗೆ ಸಾಕಷ್ಟು ವರದಿಗಳನ್ನು ಬದಲಾಯಿಸಿದ್ರು ಎಂದು ಸಾಲಿಸಿಟರ್ ಜನರೆಲ್ ಆರೋಪಿಸಿದರು. ಆದ್ರೆ ಪ್ರತಿಯೊಂದರ ವಿಡಿಯೋ ಚಿತ್ರೀಕರಣ ನಡೆದಿದೆ ಎಂದು ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ರು. ವೈದ್ಯರು ಒತ್ತಡ ತಂದಿದ್ದಕ್ಕೆ ವೀಡಿಯೋ ಚಿತ್ರೀಕರಣ ನಡೆದಿದೆ ಎಂದು ತುಷಾರ್ ಮೆಹ್ತಾ ಟಾಂಗ್ ಕೊಟ್ರು. ಈ ಮಧ್ಯೆಯೇ, ಯುವವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ. ಒಬ್ಬನೇ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಇದನ್ನೂ  ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

    ಕೋಲ್ಕತ್ತಾ ಪ್ರಕರಣ ಏನು?
    ಇದೇ ತಿಂಗಳ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಈ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ದೂರು ದಾಖಳಿಸಿಕೊಂಡ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇದನ್ನೂ  ಓದಿ: J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ

  • ಲೋಕಾಯುಕ್ತ, ಸಿಬಿಐಗಿಂತ ಜಾಸ್ತಿ ಹಿಂಸೆ ಕೊಡ್ತಿದೆ – ಡಿಕೆಶಿ

    ಲೋಕಾಯುಕ್ತ, ಸಿಬಿಐಗಿಂತ ಜಾಸ್ತಿ ಹಿಂಸೆ ಕೊಡ್ತಿದೆ – ಡಿಕೆಶಿ

    – 2 ಗಂಟೆಗೂ ಹೆಚ್ಚು ಕಾಲ ಲೋಕಾಯುಕ್ತ ವಿಚಾರಣೆ ಎದುರಿಸಿದ ಡಿಸಿಎಂ

    ಬೆಂಗಳೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತ (Lokayukta) ಚುರುಕುಗೊಳಿಸಿದೆ. ಸಮನ್ಸ್ ಹಿನ್ನೆಲೆಯಲ್ಲಿ ಡಿಕೆಶಿ ಅವರಿಂದು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದರು. ಲೋಕಾಯುಕ್ತ ವಿಚಾರಣೆ ಸಲುವಾಗಿ ಸಂಪುಟ ಸಭೆ ಮಧ್ಯೆಯೇ ನಿರ್ಗಮಿಸಿದರು.

    ಗುರುವಾರ ಮಧ್ಯಾಹ್ನ 2 ಗಂಟೆಗೆ ಸುಮಾರಿಗೆ ಶುರುವಾದ ವಿಚಾರಣೆ ಸಂಜೆ ಸುಮಾರು 4:30 ಗಂಟೆ ವರೆಗೂ ನಡೀತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಲೋಕಾಯುಕ್ತ ಅಧಿಕಾರಿಗಳು ಬುಧವಾರ (ಆ.21) ಸಮನ್ಸ್ ಕೊಟ್ಟು, ವಿಚಾರಣೆಗೆ ಹಾಜರಾಗೋಕೆ ಹೇಳಿದ್ದರು. ಇವತ್ತು ಬಂದಿದ್ದೀನಿ, ಎರಡು ಗಂಟೆಗೂ ಹೆಚ್ಚು ಕಾಲ ವಿಚಾರಣೆ ಮಾಡಿದ್ರು. ಮತ್ತೆ ಕೆಲ ದಾಖಲೆಗಳೊಂದಿಗೆ ಬರೋಕೆ ಹೇಳಿದ್ದಾರೆ. ಯಾವತ್ತೂ ಬರಬೇಕು ಅನ್ನೋದನ್ನು ಇನ್ನೂ ಹೇಳಿಲ್ಲ ಎಂದರು.

    ಮುಂದುವರಿದು ಇವರಿಗಿಂತ ಸಿಬಿಐನವರೇ (CBI) ಪರವಾಗಿಲ್ಲ, ಒಂದಿನೂ ಕರೆದಿಲ್ಲ, ಏನೂ ಕೇಳಿಲ್ಲ. ಇವರು ನೋಡಿದ್ರೆ ಆಗಲೇ ಹಿಂಸೆ ಕೊಡೋಕೆ ಶುರು ಮಾಡಿದ್ದಾರೆ. ಯಾವೆಲ್ಲಾ ದಾಖಲೆಗಳು ಕೇಳಿದ್ದಾರೆ ಅನ್ನೋದನ್ನು ಹೇಳೋಕೆ ಆಗಲ್ಲ ಎಂದು ಹೇಳಿದ್ದರು.

    ಈ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಕಳೆದ ವರ್ಷ ಹಿಂಪಡೆದು, ಲೋಕಾಯುಕ್ತಕ್ಕೆ ವಹಿಸಿತ್ತು. ನಂತರ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಸಂಸ್ಥೆ ಎಫ್‌ಐಆರ್ ದಾಖಲಿಸಿತ್ತು.

  • ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

    ನವದೆಹಲಿ: ಕೋಲ್ಕತ್ತಾದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ (Kolkata Doctor Case) ಮೇಲೆ‌ ನಡೆದ ಅತ್ಯಾಚಾರ ಸಾಮೂಹಿಕ ಅತ್ಯಚಾರವಲ್ಲ. ಇದು ಓರ್ವ ವ್ಯಕ್ತಿಯಿಂದ ನಡೆದಿದೆ ಎಂದು ಸಿಬಿಐ (CBI) ಮೂಲಗಳು ಹೇಳಿವೆ.

    5 ದಿನಗಳ ಪ್ರಾಥಮಿಕ ತನಿಖೆಯಲ್ಲಿ ಈ ಮಾಹಿತಿ ಲಭ್ಯವಾಗಿದ್ದು ಆಸ್ಪತ್ರೆಯಲ್ಲಿದ್ದ ನಾಗರಿಕ ಸ್ವಯಂ ಸೇವಕ ಸಂಜೋಯ್ ರಾಯ್ ಎಂಬ ವ್ಯಕ್ತಿ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: Valmiki Scam | ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್‌ ಆತ್ಮಹತ್ಯೆ

    ನಾಗರಿಕ ಸ್ವಯಂ ಸೇವಕ ಸಂಜೋಯ್ ರಾಯ್ ಎಂಬಾತ ವೈದ್ಯರ ಮೇಲೆ ಅತ್ಯಾಚಾರ ಎಸಗಿ ಕೊಂದಿದ್ದಾನೆ ಎಂದು ವಿಧಿವಿಜ್ಞಾನ ವರದಿಯೂ ಸೂಚಿಸಿದೆ. ಒಬ್ಬ ವ್ಯಕ್ತಿಯ ಕೈವಾಡವನ್ನು ಡಿಎನ್‌ಎ ವರದಿಯೂ (DNA Report) ದೃಢಪಡಿಸಿದೆ. ವೈದ್ಯೆಯನ್ನು ಹತ್ಯೆಗೈದ ಕಟ್ಟಡಕ್ಕೆ ರಾಯ್ ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನ ಸಿಬಿಐ ಪರಿಶೀಲಿಸಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ಭುಗಿಲೆದ್ದ ಹಿಂಸಾಚಾರ; 72 ಮಂದಿ ಅರೆಸ್ಟ್‌!

    ಕೌಟುಂಬಿಕ ದೌರ್ಜನ್ಯದ ಇತಿಹಾಸ ಹೊಂದಿರುವ ಮತ್ತು ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ಪ್ರವೇಶವನ್ನು ಹೊಂದಿದ್ದ ರಾಯ್ ಅವರ ಬ್ಲೂಟೂತ್ ಹೆಡ್‌ಸೆಟ್ ಅಪರಾಧದ ಸ್ಥಳದಲ್ಲಿ ಪತ್ತೆಯಾದ ನಂತರ ಅವರನ್ನು ಬಂಧಿಸಲಾಯಿತು. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಕುರಿತು ಸಿಬಿಐ ತನಿಖೆಯನ್ನು ಇನ್ನೂ ಮುಕ್ತಾಯಗೊಳಿಸಿಲ್ಲ. ಅಂತಿಮ ಅಭಿಪ್ರಾಯ ಪಡೆಯಲು ಸ್ವತಂತ್ರ ತಜ್ಞರಿಗೆ ಫೊರೆನ್ಸಿಕ್ ವರದಿಯನ್ನು ಕಳುಹಿಸುವ ಸಾಧ್ಯತೆಯಿದೆ.

    ಈ ಹಿಂದೆ ಸಂತ್ರಸ್ಥೆಯ ಯೋನಿ ಸ್ವ್ಯಾಬ್ ಪರೀಕ್ಷೆಯಲ್ಲಿ 151 ಗ್ರಾಂ ದ್ರವ ಕಂಡು ಬಂದಿದ ಹಿನ್ನಲೆ ಸಾಮೂಹಿಕ ಅತ್ಯಾಚಾರ ನಡೆದಿರಬಹುದು ಎಂದು ವೈದ್ಯರು ಹೇಳಿದ್ದರು. ಸಂತ್ರಸ್ತೆಯ ಪೋಷಕರು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಇದೇ ಅಂಶವನ್ನು ಮುಖ್ಯವಾಗಿ ವಾದವನ್ನು ಮಂಡಿಸಿದ್ದರು. ಪ್ರಶಿಕ್ಷಣಾರ್ಥಿ ವೈದ್ಯರ ಮೇಲೆ ಉಂಟಾಗುವ ಗಾಯಗಳ ಸ್ವರೂಪವು ಒಬ್ಬ ವ್ಯಕ್ತಿಯ ಕೈಕೆಲಸವಾಗಿರಲು ಸಾಧ್ಯವಿಲ್ಲ ಎಂದು ಡಾ. ಸುವರ್ಣ ಗೋಸ್ವಾಮಿ ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: Bharat Bandh| ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು

  • ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    – ನಾವು ಹೇಗೆ ಬಟ್ಟೆ ಹಾಕ್ತೀವಿ? ನಡೆಯುತ್ತೇವೆ? ಮಾತಾಡ್ತೇವೆ? ಎಲ್ಲವನ್ನೂ ಕೇಳೋದೇಕೆ?

    ಮುಂಬೈ: ದಯವಿಟ್ಟು ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ ಎಂದು ಮಾದಕ ನಟಿ ಪೂನಂ ಪಾಂಡೆ (Poonam Pandey) ಭಾವುಕ ಸಂದೇಶವೊಂದನ್ನ ಹಂಚಿಕೊಂಡಿದ್ದಾರೆ.

    ಕೋಲ್ಕತ್ತಾದಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ (Kolkata Rape Murder Case) ಕುರಿತು ತಮ್ಮ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ ಸಂದೇಶವೊಂದನ್ನು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣ: ಆರೋಪಿಯ ಹೊಡೆತಕ್ಕೆ ಕನ್ನಡಕ ಒಡೆದು ಬಿದ್ದ ಗಾಜಿನಿಂದ ಕಣ್ಣಲ್ಲಿ ರಕ್ತ!

     

    View this post on Instagram

     

    A post shared by Poonam Pandey (@poonampandeyreal)

    ಪೂನಂ ಪಾಂಡೆ ಇನ್‌ಸ್ಟಾದಲ್ಲಿ ಏನಿದೆ?
    ನಾಚಿಕೆಯಾಗಬೇಕು ನಮಗೆ?…
    ಅತ್ಯಾಚಾರಿಗಳು ಮುಕ್ತವಾಗಿ ನಡೆಯುವ, ಹಿಂಬಾಲಕರು ಕತ್ತಲಲ್ಲಿ ಅಡಗಿರುವ ಹಾಗೂ ಮಹಿಳೆಯರು ನಿರಂತರವಾಗಿ ಅಸುರಕ್ಷಿತರಾಗಿರುವ ಈ ಜಗತ್ತಿನಲ್ಲಿ ನಾವು ಏಕೆ ವಾಸಿಸುತ್ತಿದ್ದೇವೆ? ನಾವು ಇದನ್ನ ಪ್ರತಿದಿನ ಸಹಿಸಿಕೊಳ್ಳಲು ಏಕೆ ಒತ್ತಾಯಿಸಲ್ಪಡುತ್ತೇವೆ? ಅಸುರಕ್ಷತೆ ನಮಗೆ ಸಂಭವಿಸುತ್ತಿದೆ ಅದಕ್ಕೆ ನಾವು ದೂಷಿಸುತ್ತೇವೆ? ಇದನ್ನೂ ಓದಿ: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

    ನಾವು ಹೇಗೆ ಬಟ್ಟೆ ಧರಿಸುತ್ತೇವೆ? ಹೇಗೆ ನಡೆಯುತ್ತೇವೆ? ಹೇಗೆ ಮಾತನಾಡುತ್ತೇವೆ ಎಂಬುದನ್ನು ಕೇಳುತ್ತಾರೆ? ಏನು ಮಾಡಬೇಕು ಎಂಬುದನ್ನು ಹೇಳುತ್ತಾರೆ? ಆದ್ರೆ ನಾವು ಭಯವಿಲ್ಲದೇ ಬದುಕುವುದಕ್ಕೆ ಏಕೆ ಸಾಧ್ಯವಿಲ್ಲ? ಕಿರುಕುಳ ಅನುಭವಿಸದೇ ಏಕೆ ಅಸ್ತಿತ್ವದಲ್ಲಿರಲು ಧ್ಯವಿಲ್ಲ? ನಾವು ಸುರಕ್ಷತೆ, ಘನತೆ ಮತ್ತು ಗೌರವ ಬಯಸಿದಾಗ ನಮ್ಮ ಧ್ವನಿಯನ್ನು ಏಕೆ ಮೌನಗೊಳಿಸುತ್ತಾರೆ? ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

    ನಾವು ಬೇಡುವುದು ಒಂದೇ.. ದಯವಿಟ್ಟು ಇನ್ನಾದರೂ ನಮ್ಮ ಮೇಲೆ ಅತ್ಯಾಚಾರ ಮಾಡುವುದನ್ನು ನಿಲ್ಲಿಸಬಹುದೇ? ನಮ್ಮನ್ನು ಹಿಂಬಾಲಿಸುವುದನ್ನ ನಿಲ್ಲಿಸಬಹುದೇ? ದಯವಿಟ್ಟು ನಮಗೆ ಕಿರುಕುಳ ನೀಡೋದನ್ನ ನಿಲ್ಲಿಸಬಹುದೇ? ನಾವು ಭಯದಿಂದ ಬದುಕಲು ಬೇಸತ್ತಿದ್ದೇವೆ, ನಮ್ಮ ವಿರುದ್ಧ ಹಿಂಸಾಚಾರ ನಡೆದರೂ ಅಂತ್ಯವಿಲ್ಲದ ಸಮರ್ಥನೆಗಳಿಂದ ಬೇಸತ್ತಿದ್ದೇವೆ. ಇದೆಲ್ಲವೂ ನಿಲ್ಲಬೇಕಾದ ಅಗತ್ಯವಿದೆ. ಏಕೆಂದರೆ ನಾವು ಸಹ ಎಲ್ಲರಂತೆ ಯಾವುದೇ ಬೆದರಿಕೆಯಿಲ್ಲದೇ ಸರಳವಾಗಿ ಬದುಕಲು ಅರ್ಹರಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

    ಕೋಲ್ಕತ್ತಾ ಪ್ರಕರಣ ಏನು?
    ಕಳೆದ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಹಿಂದೆ ಪೊಲೀಸ್ ಸ್ವಯಂಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ.

  • ಬೆಳಗಾವಿಯಲ್ಲಿ ನಕಲಿ ಸಿಬಿಐ ಅಧಿಕಾರಿಯನ್ನು ಬಂಧಿಸಿದ ಪೊಲೀಸರು

    ಬೆಳಗಾವಿಯಲ್ಲಿ ನಕಲಿ ಸಿಬಿಐ ಅಧಿಕಾರಿಯನ್ನು ಬಂಧಿಸಿದ ಪೊಲೀಸರು

    ಬೆಳಗಾವಿ: ಸಿಬಿಐ ಅಧಿಕಾರಿ (CBI Officer) ಎಂದು ನಂಬಿಸಿ, ಸಾರ್ವಜನಿಕರಿಂದ ಹಣ ವಂಚನೆ ಮಾಡುತ್ತಿದ್ದ ಆರೋಪದಡಿ‌ ವ್ಯಕ್ತಿಯೋರ್ವನನ್ನು ಬೆಳಗಾವಿಯ (Belagavi) ಮಾಳಮಾರುತಿ‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬೆಳಗಾವಿಯ ಆಂಜನೇಯ ನಗರದ ನಿವಾಸಿ, ಮೂಲತಃ ಹುಕ್ಕೇರಿ ತಾಲ್ಲೂಕಿನ ಇಸ್ಲಾಂಪುರದ ದಯಾನಂದ ರಾಮು ಜಿಂಡ್ರಾಳೆ(33) ಬಂಧಿತ ಆರೋಪಿ. ನನ್ನ ಗೆಳೆಯನಿಗೆ ಅಪಘಾತವಾಗಿದೆ. ಚಿಕಿತ್ಸೆಗೆ ಹಣದ ಅಗತ್ಯವಿದೆ ಎಂದು ದಯಾನಂದ ನನ್ನಿಂದ 5 ಲಕ್ಷ ರೂ. ಪಡೆದಿದ್ದ. ಅದನ್ನು ಮರಳಿಸದೇ ಬೇರೆ ಬೇರೆ ಸಹಿಯುಳ್ಳ 50 ಸಾವಿರ ರೂ. ಮತ್ತು 3 ಲಕ್ಷ ರೂ. ಎರಡು ಚೆಕ್‌ ಕೊಟ್ಟಿದ್ದ ಎಂದು ಆರೋಪಿಸಿ ಆಟೊ ನಗರದ ನಿವಾಸಿ ಅಫ್ಜಲ್‌ ಬೀಡಿ ಎಂಬುವವರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನೂ ಓದಿ: Karnataka Rain| ಜುಲೈನಲ್ಲಿ ವಾಡಿಕೆಗಿಂತಲೂ 48% ಜಾಸ್ತಿ ಮಳೆ

     

    ದೂರು ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆರೋಪಿ ದಯಾನಂದ ಸಿಬಿಐ, ಎಐಸಿ ಅಧಿಕಾರಿ ಎಂದು ಸುಳ್ಳು ಹೇಳಿ ನಿರುದ್ಯೋಗಿ ಯುವಕರಿಗೆ ಕೆಎಸ್ಆರ್ ಟಿಸಿ,‌ಅರಣ್ಯ ಇಲಾಖೆ, ಅಬಕಾರಿ ಇಲಾಖೆಗಳಲ್ಲಿ ನೌಕರಿ ಕೊಡಿಸುವುದಾಗಿ ಮೋಸ ಮಾಡಿದ್ದ. ನಿಪ್ಪಾಣಿ ರಾಯಬಾಗ, ಕಾಗವಾಡ, ಚಿಕ್ಕೋಡಿ, ಹಾರೂಗೇರಿ ಭಾಗದಲ್ಲಿ ಹಲವರಿಗೆ ಮೋಸ ಮಾಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. 10ರಿಂದ 12 ಎಟಿಎಂ ಕಾರ್ಡ್‌ ಮತ್ತು ಅರಣ್ಯ ಇಲಾಖೆ ಗುರುತಿನ ಚೀಟಿ ಹೊಂದಿದ್ದ. ಆರೋಪಿಯನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.