ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಎಫ್ಐಆರ್ ದಾಖಲಿಸಿದೆ.
ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ.
ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ
ಸದ್ಯ ವಿಶೇಷ ತನಿಖಾ ತಂಡ (SIT) ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್ಐಟಿ ವರ್ಗಾವಣೆ ಮಾಡಲು ನಿರಾಕರಿಸಿದ್ದೆ ಆದಲ್ಲಿ ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.
ಬೆಂಗಳೂರು: ವಾಲ್ಮೀಕಿ ನಿಗಮ (Valmiki Development Corporation) ಬಹುಕೋಟಿ ಅಕ್ರಮದಲ್ಲಿ ನಾವು ಯಾರ ರಕ್ಷಣೆ ಮಾಡೋದಿಲ್ಲ. ಬಿಜೆಪಿ ಅವಧಿಯಲ್ಲಿ ವಾಲ್ಮೀಕಿ ನಿಗಮದ ರೀತಿ ಅಕ್ರಮ ನಡೆದಿತ್ತು. ಸದ್ಯ ಸಿಬಿಐಗೆ ಕೇಸ್ ಕೊಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.
ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಚಿವ ನಾಗೇಂದ್ರ ತಲೆದಂಡಕ್ಕೆ ಬಿಜೆಪಿ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಯಾರನ್ನೂ ರಕ್ಷಣೆ ಮಾಡೋದಿಲ್ಲ. ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಿ. ಅವರ ರಾಜಕಾರಣ ಅವರು ಮಾಡ್ತಾರೆ. ಬೇಕಾದಷ್ಟು ವಿಚಾರಗಳಿವೆ. ನಾನು ಯಾವುದನ್ನು ಪ್ರಶ್ನೆ ಮಾಡೋದಿಲ್ಲ. ಬಿಜೆಪಿ ಸರ್ಕಾರದಲ್ಲೂ ಈ ರೀತಿ ವಿಚಾರಗಳು ನಡೆದಿವೆ. ಬಸವರಾಜ್ ಬೊಮ್ಮಾಯಿಗೂ ಗೊತ್ತಿದೆ ಎಲ್ಲರಿಗೂ ಗೊತ್ತಿದೆ. ಎಲ್ಲಾ ವಿಚಾರಣೆಗಳನ್ನು ಮಾಡಬೇಕಿದ್ದು, ನಾವು ಮಾಡ್ತೀವಿ ಎಂದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್ ಎಸ್ಐಟಿ ತನಿಖೆಗೆ – ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ತನಿಖಾ ತಂಡ
ನಾವು ಯಾರನ್ನೂ ರಕ್ಷಣೆ ಮಾಡಲ್ಲ. ಈಶ್ವರಪ್ಪ ಪ್ರಕರಣದಲ್ಲಿ ಅವರಿಗೆ ನೇರವಾಗಿ ಹೇಳಿದರು. ಇಂಥವರೇ ಎಂದು ಹೇಳಿದರು. ಆದರೆ ಈ ಪ್ರಕರಣದಲ್ಲಿ ಹೇಳಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ ಅಂತ ಹೇಳಿದ್ದಾರೆ. ನಮಗೇನಾದ್ರು ದಾಖಲೆ ಫ್ರೂಫ್ ಇನ್ವಾಲ್ಮೆಂಟ್ ಏನಾದರೂ ಇದ್ರೆ, ನಮ್ಮ ಸರ್ಕಾರ ಏನ್ ಮಾಡಬೇಕೋ ಪಾರದರ್ಶಕವಾಗಿ ತನಿಖೆ ಮಾಡಿಸುತ್ತೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲಿ ಬರೋದಿಲ್ಲ. ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಅಧಿಕಾರಿಗಳು ಎಲ್ಲೆಲ್ಲಿ ಹೋಗಿ ಏನ್ ಮಾಡಿದ್ದಾರೆ ಅನ್ನೋದನ್ನ ಟ್ರೇಸ್ ಮಾಡ್ತಿದ್ದಾರೆ. ನಮಗೂ ಒಂದರೆಡು ದಿನ ಟೈಂ ಬೇಕು. ಕೆಲವೊಬ್ಬರು ಅರೆಸ್ಟ್ ಆಗಿದ್ದಾರೆ. ಏನ್ ಆಕ್ಷನ್ ತಗೋಬೇಕು ಅಂತಾ ಕೂಡ ಆಗಿದೆ. ಹಿಂದೆಯೆಲ್ಲ ನಾವು ಮಾದರಿಯಾಗಿದ್ದೇವೆ. ಮಿನಿಸ್ಟರ್ ಸಹ ಸಿಎಂ ಜೊತೆ, ನನ್ನ ಜೊತೆ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: ಎಸ್ಟಿ ನಿಗಮ ಹಗರಣ – ವಾಲ್ಮೀಕಿ ನಿಗಮ ಎಂಡಿ, ಲೆಕ್ಕಾಧಿಕಾರಿ ಬಂಧನ
ಸಿಎಂ ಮೌಖಿಕ ಆದೇಶ ಮೇರೆಗೆ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರವಿ ಅಂತಾ ನನ್ನ ಮೇಲೆ ಆರೋಪ ಮಾಡಿದ್ದಾನೆ. ನಾನು ಅವನು ಇಬ್ಬರು ಪಾರ್ಟ್ನರ್ಸ್. ಇಬ್ಬರು ಆಗಿ ಹಂಚಿಕೊಂಡಿದ್ದೀವಿ ಎಂದು ಸಿ.ಟಿ. ರವಿ ವಿರುದ್ದ ವ್ಯಂಗ್ಯವಾಡಿದರು.
ಯೂನಿಯನ್ ಬ್ಯಾಂಕ್ನಿಂದ ಸಿಬಿಐ ತನಿಖೆಗೆ ಪತ್ರ ಬರೆದ ಬಗ್ಗೆ ಮಾತನಾಡಿ, ಇರ್ಲಿ ಇರಲಿ ತಪ್ಪಿಲ್ಲ. ಒಂದು ಪ್ರೊಸೀಜರ್ ಇದೆ. ಇಷ್ಟು ಕೋಟಿ ಇದ್ದಾಗ ನಾನು ಕೊಡ್ಲಿ ಅಥವಾ ನೀವು ಕೊಡದೇ ಇದ್ದರೂ ಕೂಡ ಅದು ಸಿಬಿಐಗೆ ಹೋಗುತ್ತೆ. ಅದು ಒಂದು ಪ್ರೋಸಿಜರ್. U also know that. ನಮ್ಗೆ ಗೊತ್ತಿಲ್ಲ ಅಂತಾ ತಿಳಿದುಕೊಳ್ಳಬೇಡಿ. ಒಂದಿಷ್ಟು ಅಮೌಂಟ್ ಆದ್ಮೇಕೆ ಯಾವುದಾದರೂ ಬ್ಯಾಂಕ್ನಲ್ಲಿ ಹೀಗೆ ಆದ್ರೆ ಯಾವ ಸರ್ಕಾರವೂ ಕೊಡಬೇಕು ಅಂತಿಲ್ಲ. ಅವರು ತಗೋಬೇಕು ಅಂತೇನು ಇಲ್ಲ. ನ್ಯಾಚುರಲ್ ಆಗಿ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಾವು ಸಹಕರಿಸಲು ಸಿದ್ಧರಿದ್ದೇವೆ. ಆದರೆ ರಾಜಕೀಯ ಇಲ್ಲದೇ ತನಿಖೆ ಮಾಡ್ಲಿ. ಸದ್ಯಕ್ಕೆ ಸಿಬಿಐಗೆ ಕೊಡುವ ಅವಶ್ಯಕತೆ ಇಲ್ಲ. ನಾವೇ ತನಿಖೆ ಮಾಡ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ಹೋಗಿದ್ದು ಎಲ್ಲಿಗೆ? – ಬೆಂಗಳೂರು ಕಂಪನಿಗಳೇ ಅಧಿಕ
ಬೆಂಗಳೂರು: ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಮಾತನಾಡುತ್ತಾ ಬ್ಯಾಂಕ್ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. ನೂರು ಕೋಟಿ ರೂ. ಅಧಿಕ ಅಕ್ರಮ ನಡೆದಿದೆಯೋ, ಏನಾಗಿದೆ ಎಂಬುದು ಸಿಐಡಿ ತನಿಖೆಯಿಂದ ಗೊತ್ತಾಗಲಿದೆ ಎಂದಿದ್ದಾರೆ.
ನೂರು ಕೋಟಿ ರೂ. ಮೇಲೂ ಅಕ್ರಮವಾಗಿದ್ದರೆ ಮುಂದೆ ಏನು ಆಗುತ್ತದೆ ಎಂಬುದನ್ನು ನೋಡೋಣ. ನಾವಾಗಿಯೇ ಸಿಬಿಐಗೆ ವರ್ಗಾವಣೆ ಮಾಡುವುದಿಲ್ಲ. ಅಂತಹ ಸಂದರ್ಭ ಬಂದಾಗ ಸಿಎಂ ಜೊತೆ ಚರ್ಚೆ ಮಾಡಲೇಬೇಕಾಗುತ್ತದೆ. ಪ್ರತಿಭಟನೆ ಮಾಡುವುದು ಗಡುವು ನೀಡುವುದು ವಿಪಕ್ಷದವರ ಹಕ್ಕು, ಮಾಡಲಿ. ಸರ್ಕಾರದಲ್ಲಿ ನಮಗೆ ಆದಂತಹ ಜವಾಬ್ದಾರಿಗಳಿವೆ. ನಾ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರದ ಹಗರಣವನ್ನು ಸಿಬಿಐ (CBI) ತನಿಖೆಗೆ ಒಪ್ಪಿಸಬೇಕು ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಅವರು ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 10 ಕೋಟಿಗಿಂತ ಹೆಚ್ಚು ಮೊತ್ತದ ಹಗರಣ ನಡೆದರೆ ಸ್ವಯಂಪ್ರೇರಿತವಾಗಿ ಸಿಬಿಐ ತನಿಖೆ ಕೈಗೆತ್ತಿಕೊಳ್ಳಲು ಅವಕಾಶವಿದೆ. ಇದು 10 ಲಕ್ಷ ರೂಪಾಯಿ ಹಗರಣವಲ್ಲ, 187 ಕೋಟಿ ರೂಪಾಯಿಯ ಹಗರಣ. ನಿಮಗೆ ಸಿಐಡಿ ಮೇಲೆ ನಂಬಿಕೆ ಇರಬಹುದು. ಬೇರೆ ರಾಜ್ಯಗಳಿಗೂ ಹಣದ ವರ್ಗಾವಣೆ, ಕಂಪನಿಗಳ ಖಾತೆಗೆ ವರ್ಗಾವಣೆ ಆಗಿದೆ ಎಂಬ ಪ್ರಾಥಮಿಕ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಕೊಡುವುದು ಸೂಕ್ತ ಎಂದು ನುಡಿದರು.
ಸಾಕ್ಷ್ಯಾಧಾರ ನಾಶಪಡಿಸಲು ಸರಕಾರ ಪ್ರಯತ್ನಿಸುತ್ತಿದೆಯೇ ಎಂಬ ಅನುಮಾನ ಮೂಡಿದೆ. ಇನ್ನೂ ನೀವು ಸಚಿವರ ರಾಜೀನಾಮೆ ಪಡೆಯದಿದ್ದರೆ, ಡೆತ್ ನೋಟಿನಲ್ಲಿ ಸಚಿವರ ಮೌಖಿಕ ಸೂಚನೆ ಎಂಬುದನ್ನು ಗಮನಿಸಿಯೂ ನೀವು ರಾಜೀನಾಮೆ ಪಡೆಯದೆ ಇರುವುದನ್ನು ನೋಡಿದಾಗ ಬಹಳ ದೊಡ್ಡ ವ್ಯಕ್ತಿಗಳು ಇದರ ಹಿಂದೆ ಇರಬಹುದು ಎಂಬ ಅನುಮಾನ ನಮಗೆ ಮೂಡಲು ಕಾರಣವಾಗಿದೆ ಎಂದು ವಿಶ್ಲೇಷಿಸಿದರು.
ಯೂನಿಯನ್ ಬ್ಯಾಂಕಿನ ಅಧಿಕಾರಿಗಳು ಈಗಾಗಲೇ ಸಿಬಿಐ ತನಿಖೆ ನಡೆಸಲು ಪತ್ರ ಬರೆದಿದ್ದಾರೆ. ನಾವು ಕೂಡ ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸುತ್ತೇವೆ ಎಂದು ಅವರು ತಿಳಿಸಿದರು. ಮುಖ್ಯಮಂತ್ರಿಯವರು ತಕ್ಷಣ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಬೇಕು ಎಂದು ಸಿ ಟಿ ರವಿ ಒತ್ತಾಯಿಸಿದರು.
ಬೆಂಗಳೂರು: ಬಿಜೆಪಿ (BJP) ಕೇಳಿದ ಕೂಡಲೇ ರಾಜೀನಾಮೆ ನೀಡಲು ಆಗುವುದಿಲ್ಲ ಎಂದು ಸಚಿವ ನಾಗೇಂದ್ರ (Nagendra) ಪರ ಸಂಸದ ಡಿಕೆ ಸುರೇಶ್ (DK Suresh) ಬ್ಯಾಟಿಂಗ್ ಮಾಡಿದ್ದಾರೆ.
ವಾಲ್ಮೀಕಿ ನಿಗಮದ ಅಕ್ರಮದ ಪ್ರಕರಣವನ್ನ ಸಿಬಿಐಗೆ (CBI) ಕೊಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕ ಪೊಲೀಸ್ (Karnataka Police) ಸಮರ್ಥವಾಗಿದೆ. ಕರ್ನಾಟಕ ಪೊಲೀಸ್ ಎಲ್ಲಾ ನಿಭಾಯಿಸುತ್ತದೆ. ಸಿಬಿಐ ಕೊಡಿ ಅನ್ನೋದು ಬಿಟ್ಟು ಬಿಜೆಪಿ ಬೇರೆ ಏನು ಇಲ್ಲ. ಸಿಬಿಐ ಮುಖ್ಯಸ್ಥರು ನಮ್ಮ ರಾಜ್ಯದವರೇ. ಕೇಂದ್ರದಲ್ಲಿ ಬಿಜೆಪಿ ಇದೆ. ನಮಗೆ ಅನುಕೂಲ ಆಗಲಿದೆ ಅಂತ ಕೇಳ್ತಾರೆ ಅಂತ ಆರೋಪ ಮಾಡಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಹಗರಣ – ಅಕ್ರಮದ ತನಿಖೆಗೆ ಇಳಿಯುತ್ತಾ ಸಿಬಿಐ?
ಈಗಾಗಲೇ ಕರ್ನಾಟಕದಿಂದ 4-5 ಕೇಸ್ ಸಿಬಿಐಗೆ ಕೊಟ್ಟಿದ್ದೇವೆ. ಅದರಲ್ಲಿ ಏನು ಪ್ರಯೋಜನ, ನ್ಯಾಯ ಸಿಗಲಿಲ್ಲ. ನಮ್ಮ ಪೊಲೀಸರು ನೀಡಿದ ವರದಿಯನ್ನೇ ನೀಡಿತ್ತು. ಹೀಗಾಗಿ ಸಿಬಿಐ ಏನು ವಿಶೇಷ ಅಲ್ಲ. ಆದರೆ ಬಿಜೆಪಿ ಅವರು ಎಲ್ಲದ್ದಕ್ಕೂ ರಾಜೀನಾಮೆ ಕೇಳುತ್ತಾರೆ. ಕೇಳಿದ ಕೂಡಲೇ ನೀಡಲು ಆಗುವುದಿಲ್ಲ, ಈಶ್ವರಪ್ಪ ಕೇಸ್ ಬೇರೆ. ಈ ಕೇಸ್ ಬೇರೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಸಿಐಡಿ (CID) ತನಿಖೆಗೆ ಆದೇಶ ಮಾಡಿದ್ದಾರೆ. ತಪ್ಪು ಯಾರೇ ಮಾಡಿದರೂ ಕ್ರಮ ಆಗುತ್ತದೆ. ನಾಗೇಂದ್ರ ಅಂತಹ ವ್ಯಕ್ತಿಯಲ್ಲ. ಸ್ಥಳೀಯ ರಾಜಕೀಯಕ್ಕಾಗಿ ಹೀಗೆ ಆರೋಪ ಮಾಡುತ್ತಿದ್ದಾರೆ. ತನಿಖೆ ನಡೆದಾಗ ಸತ್ಯಾಂಶ ಹೊರಬರಲಿದೆ ಎಂದರು.
ಬಿಜೆಪಿಯವರು ಪ್ರತಿಭಟನೆ ಮಾಡಲಿ. ಬೇಡ ಅಂದವರು ಯಾರು? ವಿಪಕ್ಷ ಯಾವಾಗಲು ಆಡಳಿತ ಪಕ್ಷವನ್ನು ಎಚ್ಚರಿಸಬೇಕು. ಅವರು ಎಚ್ಚರಿಸುವ ಕೆಲಸ ಮಾಡಲಿ ಎಂದು ಬಿಜೆಪಿ ಡೆಡ್ಲೈನ್ಗೆ ಡಿಕೆಸು ತಿರುಗೇಟು ನೀಡಿದರು.
ಬೆಂಗಳೂರು: ಪ್ರಜ್ವಲ್ ಕೇಸನ್ನ ಸಿಬಿಐಗೆ ಕೊಡಿ ಅಂತಾ ಬಿಜೆಪಿ-ಜೆಡಿಎಸ್ ಅವರು ಕೇಳ್ತಿರೋದಾ ಕ್ಲೀನ್ ಚಿಟ್ ಕೊಡೋಕಾ ಎಂದು ಸಚಿವ ಎಂ.ಬಿ.ಪಾಟೀಲ್ (M.B.Patil) ಕಿಡಿಕಾರಿದರು.
ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿಯಿಂದ ಸಿಬಿಐಗೆ ಕೊಡಬೇಕು ಅಂತಿದ್ದಾರೆ. ಸಿಬಿಐಗೆ (CBI) ಕೊಡೋದು ಕ್ಲೀನ್ ಚಿಟ್ ಕೊಡೋದಕ್ಕಾ? ಬಿಜೆಪಿ ಅದನ್ನ ವಾಷಿಂಗ್ ಮಿಷನ್ಗೆ ಹಾಕೋಕಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಬಿಎಸ್ವೈ
ಈಗಾಗಲೇ ಪ್ರಜ್ವಲ್ ಕೇಸ್ನಲ್ಲಿ SIT ತನಿಖೆ ಆಗುತ್ತಿದೆ. ಯಾರೇ ಇದ್ದರೂ, ಎಷ್ಟೇ ದೊಡ್ಡವರು ಇದ್ದರೂ ಅವರ ವಿರುದ್ಧ ತನಿಖೆ ಆಗುತ್ತದೆ. ನಾನು ಮಾಜಿ ಗೃಹ ಸಚಿವ ಆಗಿದ್ದವನು. ಹೀಗಾಗಿ ತನಿಖೆ ಹಂತದಲ್ಲಿ ನಾನು ಮಾತಾಡೋದಿಲ್ಲ. ಕಾನೂನು ಪ್ರಕಾರ ತನಿಖೆ ಆಗುತ್ತಿದೆ. ತನಿಖೆಯಿಂದ ಎಲ್ಲಾ ಹೊರಗೆ ಬರಲಿದೆ ಎಂದರು.
ಬಿಜೆಪಿಯವರು ಹಿಂದೆ ಸಿಬಿಐ ಕಾಂಗ್ರೆಸ್ ಇನ್ವೆಸ್ಟಿಗೇಷನ್ ಅಂತಿದ್ದರು. ಈಗ ಸಿಬಿಐಗೆ ಕೊಡಬೇಕು ಅಂತಾರೆ. SIT ತನಿಖೆ ಆಗುತ್ತಿದೆ. ಎಲ್ಲಾ ಸತ್ಯ ಹೊರಗೆ ಬರಲಿದೆ. ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಬಂದು ಶರಣಾಗಬೇಕು. ಕಾನೂನಿಗೆ ಬೆಲೆ ಕೊಡೋದಾದ್ರೆ ಬಂದು ಶರಣಾಗಬೇಕು.ಇಲ್ಲದೆ ಹೋದರೆ ಕೇಂದ್ರ ಸರ್ಕಾರ ಈ ಕೇಸನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಕರೆ ತರಬೇಕು ಎಂದು ಹೇಳಿದರು. ಇದನ್ನೂ ಓದಿ: ಇಂದು ನ್ಯಾಯಾಧೀಶರ ಮುಂದೆ ದೇವರಾಜೇಗೌಡ
ಬರ ಪರಿಹಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ನಾವು ಕೇಳಿದಷ್ಟು ಬರ ಪರಿಹಾರ ಕೊಡುವವರೆಗೂ ಸುಪ್ರೀಂ ಕೋರ್ಟ್ನಲ್ಲಿ ಹೋರಾಟ ಮಾಡಲಾಗುವುದು. ಕೇಂದ್ರದಿಂದ ಬಂದ ಬರ ಪರಿಹಾರದ ಹಣ ರೈತರಿಗೆ ಹಂಚಿಕೆ ಮಾಡುತ್ತಿದ್ದೇವೆ. ಪರಿಹಾರ ಹಾಕೋದು ಆಗುತ್ತೆ. ಆದರೆ ನಾವು ಬರ ಪರಿಹಾರ ಕೇಳಿದ್ದೆಷ್ಟು ಅವರು ಕೊಟ್ಟಿದ್ದು ಎಷ್ಟು ಎಂದು ಪ್ರಶ್ನಿಸಿದರು.
NDRF, SDRF ನಿಯಮಗಳು ಬದಲಾವಣೆ ಆಗಬೇಕು. ನಾವು ಕೇಳಿದ್ದು 18 ಸಾವಿರ ಕೋಟಿ. ಅವರು ಕೊಟ್ಟಿದ್ದು 3,500 ಕೋಟಿ. ಈ ಹಣದಿಂದ ರೈತರಿಗೆ ಬೀಜ, ಗೊಬ್ಬರ ತೆಗೆದುಕೊಳ್ಳಲು ಆಗುವುದಿಲ್ಲ. ಹೀಗಾಗಿ ನಾವು ಕೇಳಿದಷ್ಟು ಸಂಪೂರ್ಣ ಹಣ ಬಿಡುಗಡೆ ಆಗಬೇಕು. ಇಲ್ಲದೇ ಹೋದರೆ ನಾವು ಕೋರ್ಟ್ನಲ್ಲಿ ಹೋರಾಟ ಮಾಡ್ತೀವಿ. ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ನಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು.
– ಸಿಎಂ, ಪರಮೇಶ್ವರ್ ಅವರದ್ದೂ ಸಿಡಿ ಬರಬಹುದು – ಬಾಂಬ್ ಸಿಡಿಸಿದ ಮಾಜಿ ಸಚಿವ
ಬೆಳಗಾವಿ: ಪ್ರಜ್ವಲ್ ರೇವಣ್ಣ ಕೇಸ್ (Prajwal Revanna Case) ಯಾರು ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಅಸಮಾಧಾನ ಹೊರಹಾಕಿದ್ದಾರೆ.
ಮತ ಹಾಕುವ ಮುನ್ನ ಬೆಳಗಾವಿಯ (Belagavi) ಗೋಕಾಕ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಮಾತನಾಡಿದರು. ಪ್ರಜ್ವಲ್ ರೇವಣ್ಣ ಕೇಸ್ ಎಲ್ಲರೂ ತಲೆ ತಗ್ಗಿಸುವ ವಿಷಯ. ರೇವಣ್ಣ ಅವರು ಬೇಕಿದ್ದರೆ ಕಾನೂನು ರೀತಿ ಹೋರಾಟ ಮಾಡಲಿ ಎಂದು ನುಡಿದರು.
ಹೊಸ ಬಾಂಬ್ ಸಿಡಿಸಿದ ಜಾರಕಿಹೊಳಿ:
ಮುಂದುವರಿದು ಮಾತನಾಡಿ, ಸಿದ್ದರಾಮಯ್ಯ (Siddaramaiah) ಮತ್ತು ಪರಮೇಶ್ವರ್ ಅವರದ್ದೂ ಮುಂದೆ ಸಿಡಿ ಬರಬಹುದು. ಸಿಡಿ ವಿಚಾರವನ್ನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೆ, ಆಗ ಎಲ್ಲರೂ ನನ್ನನ್ನು ಕಡೆಗಣಿಸಿದರು, ನಗುತ್ತಾ ನೋಡ್ತಿದ್ದರು. ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ್ ಅವರಿಗೂ ಬರಬಹುದು ಎಂದು ಹೊಸ ಬಾಂಬ್ ಸಿಡಿಸಿದರು. ಜೊತೆಗೆ ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇದಕ್ಕೆ ಇತಿಶ್ರೀ ಹಾಡಬೇಕು. ಸಿಎಂ ಅವರ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದರು.
ಪ್ರಜ್ವಲ್ ರೇವಣ್ಣ ಕೇಸ್ನಲ್ಲಿ ಡಿಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಇದರಲ್ಲಿ ಡಿಕೆಶಿ ನೇರವಾಗಿ ಭಾಗಿಯಾಗಿರುವ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ. ನನ್ನ ಕೇಸ್ನಲ್ಲೂ ಡಿಕೆಶಿ ಮಾತನಾಡಿರುವ ಸಾಕ್ಷಿ ಇದೆ, ಅದನ್ನೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದಕ್ಕೆ ಸಾಕ್ಷಿಗಳೂ ಇವೆ ಎಂದು ಹೇಳಿದರು.
ನನ್ನ ಕೇಸ್ನಲ್ಲಿ ನಮ್ಮವರೂ ಇದ್ದಾರೆ:
ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ, ಇದು ನಿಲ್ಲಬೇಕು. ನನ್ನ ಕೇಸ್ನಲ್ಲಿ ಡಿಕೆಶಿ ಮಾತ್ರ ಭಾಗಿಯಾಗಿಲ್ಲ. ನಮ್ಮವರೂ ಇದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದು ಎಚ್ಚರಿಸಿದರು.
ಸಿಬಿಐಗೆ ಕೇಸ್ ಕೊಟ್ಟರೆ ಸಾಕ್ಷಿ ಕೊಡ್ತೀನಿ:
ನನ್ನ ಕೇಸ್ನಲ್ಲಿ ಎಸ್ಐಟಿ ತನಿಖೆ ಬಗ್ಗೆ ವಿಶ್ವಾಸ ಇಲ್ಲ. ಈ ಕೇಸ್ ಅನ್ನು ಸಿಬಿಐಗೆ ಕೊಟ್ಟರೆ ಸಾಕ್ಷಿ ಕೊಡುತ್ತೇನೆ ಎಂದರಲ್ಲದೇ, ಸಿಬಿಐಗೆ ಕೇಸ್ ಕೊಟ್ಟರೂ ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿ ಮಾಡಬೇಕು ಎಂದು ಆಗ್ರಹಿಸಿದರು.
ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (New Excise Policy) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರೀಯ ತನಿಖಾ ದಳ (CBI) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು (Bail) ನೀಡುವಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ದೆಹಲಿ ಹೈಕೋರ್ಟ್ಗೆ (Delhi Highcourt) ಅರ್ಜಿ ಸಲ್ಲಿಸಿದ್ದಾರೆ.
ಪಿಎಂಎಲ್ಎ ವಿಶೇಷ ನ್ಯಾಯಾಲಯ ರೋಸ್ ಅವೆನ್ಯೂ ಕೋರ್ಟ್ ಎರಡನೇ ಸಾಮಾನ್ಯ ಜಾಮೀನು ಅರ್ಜಿ ವಜಾ ಮಾಡಿದ ಹಿನ್ನೆಲೆ ಮೇಲ್ಮನವಿ ಸಲ್ಲಿಸಿರುವ ಅವರು ವಿಧಾನಸಭೆ ಸದಸ್ಯನಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ತುರ್ತು ವಿಚಾರಣೆ ನಡೆಸುವಂತೆ ಇಂದು ಮನವಿ ಮಾಡಿದರು. ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ಡಿವೈಎಸ್ಪಿ ವಿರುದ್ಧದ ಘೋಷಿತ ಆರೋಪಿ ಆದೇಶ ಕೈಬಿಟ್ಟ ಹೈಕೋರ್ಟ್
ರೋಸ್ ಅವೆನ್ಯೂ ಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ರಾಜಕೀಯ ಪ್ರಭಾವ ಹೊಂದಿರುವ ಪ್ರಬಲ ವ್ಯಕ್ತಿ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಸೋಡಿಯಾ ಇತರೇ ಆರೋಪಿಗಳ ಸಮಾನತೆಗೆ ಅರ್ಹರಲ್ಲ ಎಂದು ವಾದಿಸಿದರು. ಸಿಸೋಡಿಯಾ ಅವರು ಸಾಕ್ಷ್ಯ ನಾಶ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಳ್ಳಬಹುದು. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಗುಪ್ತಾ ಹೇಳಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ
ಇ.ಡಿ ಪರ ವಾದಿಸಿದ್ದ ಜೋಹೆಬ್ ಹೊಸೈನ್, ತನಿಖೆಯಲ್ಲಿ ಯಾವುದೇ ವಿಳಂಬವಾಗಿಲ್ಲ. ತನಿಖೆ ವಿಳಂಬ ಆರೋಪವನ್ನು ಒಪ್ಪಲು ಸಾಧ್ಯವಿಲ್ಲ. ಪ್ರಕರಣದ ಸಾಕ್ಷ್ಯಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಹಲವು ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಈ ಹಂತದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ತನಿಖಾ ಸಂಸ್ಥೆಗಳ ವಾದ ಪುರಸ್ಕರಿಸಿದ ಕೋರ್ಟ್, ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಎರಡನೇ ಸಾಮಾನ್ಯ ಅರ್ಜಿಯನ್ನು ವಜಾ ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್ ಇಲ್ಲಿ ಸಾಯ್ತಿದ್ರೆ ಪಾಕ್ ಅಲ್ಲಿ ಅಳುತ್ತಿದೆ: ಮೋದಿ
ಕಳೆದ ವರ್ಷ ಫೆಬ್ರವರಿ 26 ಮತ್ತು ಮಾರ್ಚ್ 9 ರಂದು ಮನೀಷ್ ಸಿಸೋಡಿಯಾ ಅವರನ್ನು ಕ್ರಮವಾಗಿ ಸಿಬಿಐ ಮತ್ತು ಇಡಿ ಮೊದಲ ಬಾರಿಗೆ ಬಂಧಿಸಿತ್ತು. ಸಿಬಿಐ ದಾಖಲಿಸಿದ ಎಫ್ಐಆರ್ನಲ್ಲಿ, ಸಿಸೋಡಿಯಾ ಮತ್ತು ಇತರರು 2021-22ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ‘ಶಿಫಾರಸು’ ಮತ್ತು ‘ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ’ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಒಂದು ಸುಳ್ಳನ್ನು ಸಾವಿರ ಬಾರಿ ಪುನರಾವರ್ತಿಸಿದರೂ ಅದು ಸತ್ಯವಾಗುವುದಿಲ್ಲ: ಖರ್ಗೆ
– ಉದ್ರಿಕ್ತರ ದಾಳಿ ಕಂಡು ಪೊಲೀಸರೇ ನಡುಗಿದರಾ? – ಸಿಬಿಐ ಚಾರ್ಜ್ಶೀಟ್ನಲ್ಲಿ ಏನಿದೆ?
ಇಂಫಾಲ್: ಸಂಘರ್ಷ ಪೀಡಿತ ಮಣಿಪುರದಲ್ಲಿ (Manipur Violence) ಕಳೆದ ವರ್ಷ ಮೇ 3ರಂದು ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪ ಪಟ್ಟಿ (CBI Chargesheet) ಸಲ್ಲಿಸಿದ್ದು, ಹಲವು ವಿಷಯಗಳನ್ನು ಉಲ್ಲೇಖಿಸಿದೆ. ಕೃತ್ಯಕ್ಕೆ ಪೊಲೀಸರು ಸಂತ್ರಸ್ತರಿಗೆ ನೆರವಾಗದೇ ಇರುವುದೇ ಕಾರಣ ಎಂದು ಮಾಡದಿರುವುದೇ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಅಂದು ಸಂತ್ರಸ್ತ ಮಹಿಳೆಯರು ನೆರವು ಕೋರಿ ಪೊಲೀಸರ (Manipur Police) ವಾಹನ ಏರಿದ್ದರು, ಆದ್ರೆ ಪೊಲೀಸರು ಕೀ ಇಲ್ಲ ಎನ್ನುವ ನೆಪ ಹೇಳಿ ನೆರವು ನೀಡಲು ನಿರಾಕರಿಸಿದ್ದಾರೆ. ಮಹಿಳೆಯರು ಮಾತ್ರವಲ್ಲ ಇಬ್ಬರು ಪುರುಷರೂ ಪೊಲೀಸರ ವಾಹನ ಏರಿದ್ದರು. ಆದ್ರೆ ಸಂಘರ್ಷನಿರತರು ಅವರನ್ನು ಕಾರಿನಿಂದ ಎಳೆದು ಥಳಿಸುತ್ತಿದ್ದಂತೆ ಸ್ಥಳದಿಂಧ ಕಾಲ್ಕಿತ್ತರು ಎಂದು ಕೇಂದ್ರೀಯ ತನಿಖಾ ದಳ ತನ್ನ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಯುವತಿಯರ ಮೇಲೆ ರೇಪ್, ಮರ್ಡರ್ ಆರೋಪ – ಮಣಿಪುರ ಧಗ ಧಗ
ಏನಿದು ಪ್ರಕರಣ – ಆ ಕರಾಳ ದಿನ ನಡೆದಿದ್ದೇನು?
2023ರ ಮೇ 3-4 ರಂದು ನಡೆದಿದ್ದ ಹಿಂಚಾಚಾರದ ವೇಳೆ ಸಾರ್ವಜನಿಕರ ಮೇಲೆ ಭಾರೀ ಹಲ್ಲೆ ನಡೆದಿತ್ತು. ಈ ವೇಳೆ ಸಂತ್ರಸ್ತರು ಕಿಡಿಗೇಡಿಗಳಿಂದ ತಪ್ಪಿಸಿಕೊಳ್ಳಲು ಕಾಡಿನತ್ತ ಓಡಿದ್ದರು. ಆದ್ರೆ ಅವರನ್ನು ಶಸ್ತ್ರಾಸ್ತ್ರ ಹಿಡಿದುಕೊಂಡೇ ಹಿಂಬಾಲಿಸಿದ್ದ ದಾಳಿಕೋರರು ಕಾಡಿನೊಳಗೆ ಹೊಕ್ಕಿದ್ದವರನ್ನೆಲ್ಲ ಬಲವಂತವಾಗಿ ರಸ್ತೆಗೆ ಎಳೆದುತಂದು ಥಳಿಸತೊಡಗಿದ್ದರು. ಅಷ್ಟೇ ಅಲ್ಲ ಸಂತ್ರಸ್ತೆಯರಿಬ್ಬರನ್ನು ಒಂದು ಕಡೆ. ಇನ್ನಿಬ್ಬರು ಮಹಿಳೆಯರು, ಅವರ ತಂದೆ ಹಾಗೂ ಗ್ರಾಮದ ಯಜಮಾನನನ್ನು ಇನ್ನೊಂದು ಕಡೆ ನಿಲ್ಲಿಸಿ ಕಿರುಕುಳ ನೀಡಲು ಶುರು ಮಾಡಿದ್ದರು ಎಂದು ಸಿಬಿಐ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: 2023ರಲ್ಲಿ ಏಷ್ಯಾ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ : WMO ವರದಿ
ಕಿರುಕುಳ ತಾಳಲಾರದೇ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಸಂತ್ರಸ್ತರು ರಕ್ಷಣೆಗಾಗಿ ಪೊಲೀಸ್ ವಾಹನಕ್ಕೆ ನುಗ್ಗಿದ್ದರು. ವಾಹನ ಚಾಲನೆ ಮಾಡುವಂತೆ, ಇಲ್ಲಿಂದ ಕರೆದೊಯ್ದು ರಕ್ಷಣೆ ಕೊಡುವಂತೆ ಬೇಡಿಕೊಂಡಿದ್ದರು. ಆದ್ರೆ ವಾಹನದ ಕೀ ಇಲ್ಲ ಎಂದು ಹೇಳಿ ಪೊಲೀಸರು ನೆರವಾಗಲು ನಿರಾಕರಿಸಿದ್ದರು. ಹೀಗೆ ಹೇಳಿದ ಕ್ಷಣಾರ್ಧದಲ್ಲೇ ಕಾರು ಚಾಲನೆ ಮಾಡಿದ ಚಾಲಕ, ಸಾವಿರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಸಮೀಪವೇ ವಾಹನ ನಿಲ್ಲಿಸಿದ್ದ. ಇದರಿಂದ ಭಯಗೊಂಡ ಸಂತ್ರಸ್ತರು, ಬೇರೆಡೆಗೆ ಕರೆದೊಯ್ಯುವಂತೆ ಅಂಗಲಾಚಿದ್ದರು. ಈ ಮಧ್ಯೆ, ಸಂತ್ರಸ್ತ ಮಹಿಳೆಯ ತಂದೆಯನ್ನು ಹತ್ಯೆ ಮಾಡಲಾಗಿತ್ತು. ಬಳಿಕ, ವಾಹನದಲ್ಲಿದ್ದವರನ್ನು ಉದ್ರಿಕ್ತರು ಹೊರಗೆಳೆದು ಮನಸ್ಸೋ ಇಚ್ಛೆ ಹಲ್ಲೆಗೈದರು. ಅಷ್ಟರಲ್ಲಿ ಪೊಲೀಸರು ಅಲ್ಲಿಂದ ಕಾಲ್ಕಿತ್ತು ದೌಡಾಯಿಸಿದ್ದರು. ನಂತರ ಉದ್ರಿಕ್ತರ ಗುಂಪು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ (Women Paraded) ನಡೆಸಿತ್ತು, ಇದೇ ವೇಳೆ ಅಲ್ಲಿದ್ದ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಿತ್ತು ಸಿಬಿಐ ಹೇಳಿದೆ.
ಮುಂದುವರಿದ ತನಿಖೆ:
ಇದರ ಬೆನ್ನಲ್ಲೇ ರಾಜ್ಯದಾದ್ಯಂತ ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು. ಕೃಷ್ಣ ಸಂಬಂಧ ಮಣಿಪುರ ಸರ್ಕಾರದ ಶಿಫಾರಸ್ಸು ಮತ್ತು ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಿಬಿಐ ತನಿಖೆ ಆರಂಭಿಸಿದೆ. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಕೊಲೆ, ಕೋಮುಗಲಭೆಗೆ ಸಂಚು ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.
ಜನಾಂಗೀಯ ಹಿಂಸಾಚಾರಕ್ಕೆ ಕಾರಣ ಏನು?
ಮಣಿಪುರದಲ್ಲಿ ಬಹುಸಂಖ್ಯೆಯಲ್ಲಿರುವ ಮೈತೇಯಿ ಸಮುದಾಯದವರು ತಮಗೆ ಎಸ್ಟಿ ಮೀಸಲಾತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ಇದನ್ನು ವಿರೋಧಿಸಿದ್ದವು. ಇದರಿಂದ ಸೃಷ್ಟಿಯಾದ ಬಿಕ್ಕಟ್ಟು ರಾಜ್ಯದಲ್ಲಿ ಭೀಕರ ಹಿಂಸಾಚಾರಕ್ಕೆ ಕಾರಣವಾಗಿತ್ತು.
ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Delhi Court) ವಜಾ ಮಾಡಿದೆ. ಏ.20 ರಂದು ಕಾಯ್ದಿರಿಸಿದ ತೀರ್ಪನ್ನು ನ್ಯಾ.ಕಾವೇರಿ ಬವೇಜಾ ಪ್ರಕಟಿಸಿದರು.
ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ರಾಜಕೀಯ ಪ್ರಭಾವ ಹೊಂದಿರುವ ಪ್ರಬಲ ವ್ಯಕ್ತಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಸೋಡಿಯಾ, ಇತರೆ ಆರೋಪಿಗಳ ಸಮಾನತೆಗೆ ಅರ್ಹರಲ್ಲ ಎಂದು ವಾದಿಸಿದರು. ಸಿಸೋಡಿಯಾ ಅವರು ಸಾಕ್ಷ್ಯ ನಾಶ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಳ್ಳಬಹುದು. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಗುಪ್ತಾ ಹೇಳಿದರು. ಇದನ್ನೂ ಓದಿ: ವಿದೇಶದ ಮತದಾರರಿಗೆ ಭಟ್ಕಳ ಜಮಾತ್ಗಳಿಂದ ಗಾಳ- ವಿಮಾನ ಟಿಕೆಟ್ ಆಫರ್
ಇಡಿ ಪರ ವಾದಿಸಿದ್ದ ಜೋಹೆಬ್ ಹೊಸೈನ್, ತನಿಖೆಯಲ್ಲಿ ಯಾವುದೇ ವಿಳಂಬವಾಗಿಲ್ಲ. ತನಿಖಾ ವಿಳಂಬ ಆರೋಪವನ್ನು ಒಪ್ಪಲು ಸಾಧ್ಯವಿಲ್ಲ. ಪ್ರಕರಣದ ಸಾಕ್ಷ್ಯಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಹಲವು ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಈ ಹಂತದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಪತಂಜಲಿ ಆಯುರ್ವೇದದ ವಿರುದ್ಧ ಕ್ರಮ ಕೈಗೊಳ್ಳದ ಉತ್ತರಾಖಂಡ್ ಸರ್ಕಾರಕ್ಕೆ ಸುಪ್ರೀಂ ಚಾಟಿ
ತನಿಖಾ ಸಂಸ್ಥೆಗಳ ವಾದ ಪುರಸ್ಕರಿಸಿದ ಕೋರ್ಟ್, ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಎರಡನೇ ಸಾಮಾನ್ಯ ಅರ್ಜಿಯನ್ನು ವಜಾ ಮಾಡಿದೆ. ಸಿಸೋಡಿಯಾ ಅವರು ಈಗ ದೆಹಲಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿದೆ. ಇದಕ್ಕೂ ಮುನ್ನ ಅವರು ಸಾಮಾನ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡಾ ವಜಾ ಮಾಡಿತ್ತು. ಇದನ್ನೂ ಓದಿ: ಛತ್ತೀಸ್ಗಢದಲ್ಲಿ ಎನ್ಕೌಂಟರ್ – ಇಬ್ಬರು ಮಹಿಳೆಯರು ಸೇರಿ 9 ಮಂದಿ ನಕ್ಸಲರ ಹತ್ಯೆ