Tag: ಸಿರಾಜ್

  • ಮ್ಯಾಂಚೆಸ್ಟರ್ ನಿಂದ ದುಬೈಗೆ ಹಾರಲಿರುವ ಕೊಹ್ಲಿ

    ಮ್ಯಾಂಚೆಸ್ಟರ್ ನಿಂದ ದುಬೈಗೆ ಹಾರಲಿರುವ ಕೊಹ್ಲಿ

    ಇಂಗ್ಲೆಂಡ್: ಯುಎಇನಲ್ಲಿ ನಡೆಯಲಿರುವ ಐಪಿಎಲ್ 14ನೇ ಅವೃತ್ತಿಯ ಟೂರ್ನಿಗಾಗಿ ನಾಯಕ ವಿರಾಟ್ ಕೊಹ್ಲಿ ಮ್ಯಾಂಚೆಸ್ಟರ್‍ನಿಂದ ದುಬೈಗೆ ಹಾರಲಿದ್ದಾರೆ.

    ನಾಯಕ ವಿರಾಟ್ ಕೊಹ್ಲಿಗಾಗಿ ಆರ್‍ಸಿಬಿಯ ಫ್ರಾಂಚೈಸಿ ಪ್ರತ್ಯೆಕ ವಿಮಾನವೊಂದನ್ನು ನಿಯೋಜನೆ ಮಾಡಿದೆ. ಕೊಹ್ಲಿಯ ಜೊತೆ ಮತ್ತೊಬ್ಬ ಆಟಗಾರ ಸಿರಾಜ್ ಕೂಡ ಯುಎಇಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ. ದುಬೈ ತಲುಪಿದ ಬಳಿಕ ಆಟಗಾರರು ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಪಡಲಿದ್ದಾರೆ. ಇದನ್ನೂ ಓದಿ: ಇದೇ ಧೋನಿಯ ಕೊನೆಯ ಐಪಿಎಲ್?

    ಕಳೆದ ಏಪ್ರಿಲ್ 9 ರಂದು 14ನೇ ಅವೃತ್ತಿಯ ಐಪಿಎಲ್ ಪಂದ್ಯಗಳು ಆರಂಭಗೊಂಡಿದ್ದವು. ಕೊರೊನಾ ಕಾರಣದಿಂದಾಗಿ ಭಾರತದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯಗಳನ್ನು ಬಿಸಿಸಿಐ ಅರ್ಧಕ್ಕೆ ಮೊಟಕುಗೊಳಿಸಿತ್ತು. ಉಳಿದ ಅರ್ಧ ಪಂದ್ಯಗಳನ್ನು ಬಿಸಿಸಿಐ ಯುಎಇ ನಲ್ಲಿ ನಡೆಸುವುದಾಗಿ ತಿಳಿಸಿತ್ತು. ಅದರಂತೆ ಇದೀಗ ಸೆಪ್ಟೆಂಬರ್ 19ರಿಂದ ಮತ್ತೆ ಟೂರ್ನಿಗೆ ಚಾಲನೆ ಸಿಗಲಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗಲಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ತಂಡದಲ್ಲಿ ಸ್ಟಾರ್ ಆಟಗಾರರಿಗಿಲ್ಲ ಸ್ಥಾನ

    ಮೊದಲಾರ್ಧ ನಡೆದ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಿ ಅಭಿಮಾನಿಗಳಲ್ಲಿ ಈ ಸಲ ಕಪ್ ನಮ್ಮದೆ ಎಂಬ ಭರವಸೆಯನ್ನು ಮೂಡಿಸಿತ್ತು. ಈಗ ಮತ್ತೆ ಐಪಿಎಲ್ ಪಂದ್ಯಾವಳಿಗಳು ಶುರುವಾಗಲಿದ್ದು, ನಾಯಕ ವಿರಾಟ್ ಕೊಹ್ಲಿ ಸಾರಥ್ಯದ ಬೆಂಗಳೂರು ತಂಡ ಅಭಿಮಾನಿಗಳಲ್ಲಿ ಕಾತರತೆಯನ್ನು ಹೆಚ್ಚಿಸಿದೆ.

  • 5 ವಿಕೆಟ್ ಪಡೆದು ಮಿಂಚಿದ ಸಿರಾಜ್- ಭಾರತಕ್ಕೆ 328 ರನ್‍ಗಳ ಗುರಿ

    5 ವಿಕೆಟ್ ಪಡೆದು ಮಿಂಚಿದ ಸಿರಾಜ್- ಭಾರತಕ್ಕೆ 328 ರನ್‍ಗಳ ಗುರಿ

    ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯಾಟದ ಎರಡನೇ ಇನ್ನಿಂಗ್ಸ್‍ನಲ್ಲಿ 5 ವಿಕೆಟ್ ಕಿತ್ತು ಸಿರಾಜ್ ಆಸ್ಟ್ರೇಲಿಯಾ ತಂಡಕ್ಕೆ ಕಡಿವಾಣ ಹಾಕಿದ್ದು, ಭಾರತಕ್ಕೆ 328 ರನ್‍ಗಳ ಗುರಿಯನ್ನು ಆಸೀಸ್ ನೀಡಿದೆ.

    ಭಾರತದ ಪರ ತನ್ನ ಮೊದಲ ಸರಣಿಯನ್ನು ಆಡಲು ಆಸ್ಟ್ರೇಲಿಯಾಗೆ ಬಂದಿದ್ದ ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಗಳು ಜನಾಂಗೀಯ ನಿಂದನೆ ಮಾಡಿ ಅವಮಾನಿಸಿದ್ದರು. ಆದರೆ ಅದನ್ನೆಲ್ಲ ಬದಿಗೊತ್ತಿ ತನ್ನ ಆಟದ ಮೂಲಕ ಇದೀಗ ಸಿರಾಜ್ ಆಸ್ಟ್ರೇಲಿಯಾ ತಂಡಕ್ಕೆ ಮತ್ತು ಅಲ್ಲಿನ ಪ್ರೇಕ್ಷಕರಿಗೆ ದಿಟ್ಟ ಉತ್ತರ ನೀಡಿದ್ದಾರೆ.

    ಕೊನೆಯ ಟೆಸ್ಟ್ ಪಂದ್ಯದ 4ನೇ ದಿನ ಬ್ಯಾಟಿಂಗ್ ಮುಂದುವರೆಸಿದ ಆಸ್ಟ್ರೇಲಿಯಾ ಭಾರತದ ನಿಖರ ದಾಳಿಯ ಎದುರು 75.5 ಓವರ್‍ಗಳಲ್ಲಿ 294 ರನ್‍ಗಳಿಗೆ ಆಲೌಟ್ ಆಯಿತು. ಭಾರತದ ಪರ ಮೊಹಮ್ಮದ್ ಸಿರಾಜ್ 73ರನ್ ನೀಡಿ 5 ವಿಕೆಟ್ ಪಡೆದರು. ಈ ಮೂಲಕ ಟೆಸ್ಟ್ ಕ್ರಿಕೆಟ್‍ನಲ್ಲಿ ಸಿರಾಜ್ ತನ್ನ ಜೀವನ ಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿದ್ದಾರೆ. ಇವರಿಗೆ ಉತ್ತಮ ಸಾತ್ ನೀಡಿದ ಶಾರ್ದೂಲ್ ಠಾಕೂರ್ 61ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಇನ್ನೊಂದು ವಿಕೆಟ್ ಡೆಬ್ಯು ಪ್ಲೇಯರ್ ವಾಷಿಂಗ್ಟನ್ ಸುಂದರ್ ಪಾಲಾಯಿತು.

    ಗೆಲ್ಲಲು 328 ರನ್‍ಗಳ ಗುರಿ ಪಡದ ಭಾರತ ಬ್ಯಾಟಿಂಗ್ ಆರಂಭಿಸಿದಾಗ ಮಳೆ ಅಡ್ಡಿ ಪಡಿಸಿದೆ. ದಿನದಾಟದ ಮುಕ್ತಾಯದ ವೇಳೆಗೆ ಭಾರತದ ಪರ ರೋಹಿತ್ ಶರ್ಮಾ 4ರನ್ (6 ಎಸೆತ) ಮತ್ತು ಶುಭಮನ್ ಗಿಲ್ 5 ಎಸೆತ ಎದುರಿಸಿ ಯಾವುದೇ ರನ್‍ಗಳಿಸದೆ ಐದನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇನ್ನೂ ಭಾರತಕ್ಕೆ ಗೆಲ್ಲಲು 324 ರನ್‍ಗಳ ಅವಶ್ಯಕತೆ ಇದ್ದು ಐದನೇ ದಿನದಾಟದಲ್ಲೂ ಮಳೆಯ ಅಡಚಣೆಯ ಭೀತಿ ಕಾಡುತ್ತಿದೆ.

  • ಮತ್ತೆ ಜನಾಂಗೀಯ ನಿಂದನೆ – ಭಾರತಕ್ಕೆ 407 ರನ್‍ಗಳ ಬೃಹತ್ ಟಾರ್ಗೆಟ್

    ಮತ್ತೆ ಜನಾಂಗೀಯ ನಿಂದನೆ – ಭಾರತಕ್ಕೆ 407 ರನ್‍ಗಳ ಬೃಹತ್ ಟಾರ್ಗೆಟ್

    ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯಾಟದ ನಾಲ್ಕನೇ ದಿನದಾಟದಲ್ಲೂ ಆಸ್ಟ್ರೇಲಿಯಾ ಅಭಿಮಾನಿಯ ಹುಚ್ಚಾಟ ಮುಂದುವರಿದಿದೆ. ಭಾರತೀಯ ಆಟಗಾರರಿಗೆ ಮೂರನೇ ದಿನದಾಟದಲ್ಲಿ ಜನಾಂಗೀಯ ನಿಂದನೆ ಮಾಡಿದ್ದ ಪ್ರೇಕ್ಷಕವರ್ಗ ಇಂದು ಮತ್ತೆ ಸಿರಾಜ್‍ಗೆ ನಿಂದನೆ ಮಾಡಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದೆ.

    ಪ್ರೇಕ್ಷಕರಿಂದ ಮತ್ತೆ ನಿಂದನೆ ಕೇಳಿ ಬರುತ್ತಿದ್ದಂತೆ ಭಾರತೀಯ ಆಟಗಾರರೊಂದಿಗೆ ಸಿಡ್ನಿ ಕ್ರಿಕೆಟ್ ಮಂಡಳಿ ಕ್ಷಮೆ ಕೇಳಿದೆ ಮತ್ತು ಪ್ರೇಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

    ಮೂರನೇ ಟೆಸ್ಟ್‍ನ ನಾಲ್ಕನೇ ದಿನದಾಟ ಮುಂದುವರಿಸಿದ ಆಸ್ಟ್ರೇಲಿಯಾ ಮಾರ್ನಸ್ ಲಬುಶೇನ್ 73ರನ್ (118 ಎಸೆತ, 4 ಬೌಂಡರಿ) ಸ್ಟೀವನ್ ಸ್ಮಿತ್ 81ರನ್ (167 ಎಸೆತ, 8 ಬೌಂಡರಿ, 1 ಸಿಕ್ಸರ್) ಮತ್ತು ಕ್ಯಾಮರಾನ್ ಗ್ರೀನ್ 84 ರನ್(132 ಎಸೆತ, 8 ಬೌಂಡರಿ, 4 ಸಿಕ್ಸರ್) ರನ್‍ಗಳ ನೆರವಿನಿಂದ ಎರಡನೇ ಇನ್ನಿಂಗ್ಸ್‍ನಲ್ಲಿ ಆಸ್ಟ್ರೇಲಿಯಾ ತಂಡ 406 ರನ್ ಮುನ್ನಡೆ ಸಾಧಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

    407 ರನ್‍ಗಳ ಗೆಲುವಿನ ಗುರಿ ಪಡೆದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ರೋಹಿತ್ ಶರ್ಮಾ ಅವರ 52 ರನ್(98 ಎಸೆತ, 4 ಬೌಂಡರಿ, 1 ಸಿಕ್ಸರ್) ಅರ್ಧಶತಕದ ನೆರವಿನಿಂದ 98 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡಿದೆ. ಗೆಲುವಿಗಾಗಿ ಇನ್ನೂ 309 ರನ್ ಬೇಕಾಗಿದ್ದು ಐದನೇ ದಿನದಾಟಕ್ಕಾಗಿ ಚೇತೇಶ್ವರ್ ಪೂಜಾರ 9 ರನ್ (29 ಎಸೆತ) ಮತ್ತು ಅಜಿಂಕ್ಯ ರಹಾನೆ 4 ರನ್(14 ಎಸೆತ) ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

  • ಬುಮ್ರಾ, ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಯಿಂದ ಜನಾಂಗೀಯ ನಿಂದನೆ

    ಬುಮ್ರಾ, ಸಿರಾಜ್‍ಗೆ ಆಸ್ಟ್ರೇಲಿಯಾ ಅಭಿಮಾನಿಯಿಂದ ಜನಾಂಗೀಯ ನಿಂದನೆ

    – ಐಸಿಸಿಗೆ ಬಿಸಿಸಿಐನಿಂದ ದೂರು

    ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯಾಟದ ಮೂರನೇ ದಿನದಾಟದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಇಬ್ಬರು ಆಟಗಾರರಿಗೆ ಪಂದ್ಯ ವಿಕ್ಷೀಸುತ್ತಿದ್ದ ಪ್ರೇಕ್ಷಕನೋರ್ವ ಹೀಯ್ಯಾಳಿಸಿದ್ದಾನೆ. ಇದನ್ನು ಖಂಡಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಅಂತಾರಾಷ್ಟ್ರೀಯಾ ಕ್ರಿಕೆಟ್ ಮಂಡಳಿಗೆ ದೂರು ನೀಡಿದೆ.

    ಬಿಸಿಸಿಐ ಪ್ರಕಾರ ಫೀಲ್ಡಿಂಗ್ ಮಾಡುತ್ತಿದ್ದ ಭಾರತೀಯ ಆಟಗಾರರನ್ನು ಕೆಲ ಪ್ರೇಕ್ಷಕರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ದೂರು ದಾಖಲಿಸಿತ್ತು. ಐಸಿಸಿ ಕ್ರಿಕೆಟ್ ಆಸ್ಟ್ರೇಲಿಯಾಗೆ ಎರಡು ವಾರಗಳಲ್ಲಿ ಈ ಪ್ರಕರಣವನ್ನು ಸರಿಪಡಿಸುವಂತೆ ಸೂಚಿಸಿದೆ.

    ಮದ್ಯದ ಅಮಲಿನಲ್ಲಿದ್ದ ಆಸ್ಟ್ರೇಲಿಯಾದ ಬೆಂಬಲಿಗನೊಬ್ಬ ಫೈನ್ ಲೆಗ್‍ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಬುಮ್ರಾ ಮತ್ತು ಸಿರಾಜ್ ಅವರನ್ನು ಹೀಯ್ಯಾಳಿಸಿದ್ದಾನೆ. ಇದಕ್ಕೆ ಟೀಂ ಇಂಡಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ದಿನದಾಟದ ಕೊನೆಯಲ್ಲಿ ಅಂಪೈರ್ ಜೊತೆ ಈ ಕುರಿತು ಮಾತಾನಾಡುತ್ತಿದ್ದಂತೆ ಬಿಸಿಸಿಐ ಮಧ್ಯ ಪ್ರವೇಶಿಸಿ ಪ್ರಕರಣವನ್ನು ಐಸಿಸಿ ಮುಂದಿಟ್ಟಿದೆ.

    ಮೊದಲ ಇನ್ನಿಂಗ್ಸ್‍ನಲ್ಲಿ 244 ರನ್‍ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡ ಭಾರತ ತಂಡ ಆಸೀಸ್‍ಗೆ 94 ರನ್‍ಗಳ ಮುನ್ನಡೆ ಬಿಟ್ಟುಕೊಟ್ಟಿತ್ತು. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ದಿನದಾಟದಂತ್ಯಕ್ಕೆ ಎರಡು ವಿಕೆಟ್ ಕಳೆದುಕೊಂಡು 103 ರನ್ ಗಳಿಸಿ 197 ರನ್‍ಗಳ ಮುನ್ನಡೆ ಪಡೆದುಕೊಂಡಿದೆ. 47(69) ರನ್ ಗಳಿಸಿರುವ ಲಬುಶೇನ್ ಮತ್ತು 29(63) ಗಳಿಸಿರುವ ಸ್ಟೀವನ್ ಸ್ಮಿತ್ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.