Tag: ಸಿಸಿಟಿವಿ ಕ್ಯಾಮೆರಾ

  • ಚಿಕ್ಕಬಳ್ಳಾಪುರ RTO ಕಚೇರಿಯಲ್ಲಿ ಕಂಪ್ಯೂಟರ್ ಕದ್ದೊಯ್ದ ಮುಸುಕುಧಾರಿ ಕಳ್ಳರು

    ಚಿಕ್ಕಬಳ್ಳಾಪುರ RTO ಕಚೇರಿಯಲ್ಲಿ ಕಂಪ್ಯೂಟರ್ ಕದ್ದೊಯ್ದ ಮುಸುಕುಧಾರಿ ಕಳ್ಳರು

    ಚಿಕ್ಕಬಳ್ಳಾಪುರ: ನಗರದ ಚಿತ್ರಾವತಿ ಬಳಿಯ ಆರ್‌ಟಿಒ ಕಚೇರಿಯ (Chikkaballapur RTO office) ಬೀಗ ಮುರಿದು ಒಳನುಗ್ಗಿರುವ ಕಳ್ಳರು ಕಚೇರಿಯಲ್ಲಿರೋ ಮೂರು ಕಂಪ್ಯೂಟರ್ (Computer) ಸಿಪಿಐ ಹಾಗೂ ಮಾನಿಟರ್‌ಗಳನ್ನ ಕದ್ದೊಯ್ದಿದ್ದಾರೆ.

    ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಚೇರಿ ಹಿಂಬಾಗಿಲಿನಿಂದ ಎಂಟ್ರಿ ಕೊಟ್ಟಿರೋ ಇಬ್ಬರು ಕಳ್ಳರು, ಕಚೇರಿಯ ಬೀಗ ಕಟ್ ಮುರಿದು, ಕಂಪ್ಯೂಟರ್ ಗಳನ್ನ ಕಳವು ಮಾಡಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೃತ ಸಚಿನ್‌ ವಿರುದ್ಧವೇ ಲಕ್ಷಾಂತರ ರೂಪಾಯಿ ವಂಚನೆ ಆರೋಪ

    ಇನ್ನೂ ಕಚೇರಿಯಲ್ಲಿ ಇಬ್ಬರು ಹೊಂ ಗಾರ್ಡ್‍ಗಳನ್ನ ಭದ್ರತೆಗೆ ನಿಯೋಜನೆ ಮಾಡಿದ್ರೂ ಹೋಂ ಗಾರ್ಡ್‍ಗಳು ನಿದ್ದೆಗೆ ಜಾರಿದ್ದಾರೆ. ಇದರಿಂದ ಕಳ್ಳರಿಗೆ ಹಾದಿ ಸುಗಮ ಮಾಡಿಕೊಟ್ಟಂತಾಗಿದೆ. ಬೆಳಗ್ಗೆ ಕಚೇರಿ ತೆರೆಯಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರ್‌ಟಿಓ ವಿವೇಕಾನಂದ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ.

    ಸಿಸಿಟಿವಿ ಪರಿಶೀಲನೆ ಮಾಡಲಾಗಿದ್ದು ಇಬ್ಬರು ಮುಸುಕುಧಾರಿಗಳು ಈ ಕೃತ್ಯ ನಡೆಸಿರೋದು ಗೊತ್ತಾಗಿದೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಕಲಬುರಗಿಯ ನಿಜಾಮ ಅಲ್ಲ, ಅನುಯಾಯಿಗಳು ರಜಾಕರಲ್ಲ, ರಾಜೀನಾಮೆ ಕೊಡಲಿ: ಅಶೋಕ್‌ 

  • ಸಂಪೂರ್ಣ ಬೆತ್ತಲಾಗಿ ಮನೆಗಳಿಗೆ ನುಗ್ಗೋ ಅಸಾಮಿ – ಬಟ್ಟೆ ಕದ್ದೊಯ್ಯುತ್ತಿದ್ದ

    ಸಂಪೂರ್ಣ ಬೆತ್ತಲಾಗಿ ಮನೆಗಳಿಗೆ ನುಗ್ಗೋ ಅಸಾಮಿ – ಬಟ್ಟೆ ಕದ್ದೊಯ್ಯುತ್ತಿದ್ದ

    ಚಿಕ್ಕಬಳ್ಳಾಪುರ: ಸಂಪೂರ್ಣ ಬೆತ್ತಲಾಗಿ ಮನೆಗಳಿಗೆ ನುಗ್ಗುವ ವ್ಯಕ್ತಿಯೋರ್ವ ಬಟ್ಟೆಗಳನ್ನು ಕದ್ದೊಯ್ಯುತ್ತಿದ್ದ ಘಟನೆ ಬೆಂಗಳೂರಿನ (Bengaluru) ಉತ್ತರ ತಾಲೂಕಿನ ಬೆಟ್ಟ ಹಲಸೂರು (Halasuru) ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಬೆಟ್ಟಹಲಸೂರು ಗ್ರಾಮದಲ್ಲಿ ರಾತ್ರಿ ವೇಳೆ ಸಂಪೂರ್ಣ ಬೆತ್ತಲಾಗಿ ತಲೆಗೆ ಟಾರ್ಚ್ ಹಾಕಿಕೊಂಡು ಎಂಟ್ರಿ ಕೊಡುವ 25 ವರ್ಷದ ಯುವಕ ಮನೆಗಳಿಗೆ ನುಗ್ಗಿ ಮನೆಯ ಮೇಲೆ ಮುಂಭಾಗ ಇರುವ ಬಟ್ಟೆಗಳನ್ನು ಕಳ್ಳತನ ಮಾಡುತ್ತಾನೆ. ಇನ್ನೂ ನಾಯಿಗಳ ಬೊಗಳುವ ಶಬ್ಧದಿಂದ ಎಚ್ಚೆತ್ತ ಜನ ಬೆತ್ತಲೆಯಾಗಿ ಓಡಾಡುತ್ತಿದ್ದ ಅಸಾಮಿಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಜನರೆಲ್ಲಾ ಜಮಾಯಿಸಿ ಬೆತ್ತಲೆ ಅಸಾಮಿಯನ್ನು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತೆಗೆ ಬೆಂಕಿಯಿಟ್ಟ ಆರೋಪಿ ತಾಯಿ, ಸಹೋದರಿ

    ಬಟ್ಟೆ ಕೊಡಿಸಿ ಮಾನ ಮುಚ್ಚಿಸಿ ಪೊಲೀಸರು ಆರೋಪಿಯನ್ನು ಕರೆದೊಯ್ದಿದ್ದು, ವಿಚಾರಣೆ ವೇಳೆ ಆರೋಪಿ ಅಸ್ಸಾಂ (Assam) ಮೂಲದವನು ಎಂದು ತಿಳಿದುಬಂದಿದೆ. ಸ್ಥಳೀಯವಾಗಿ ಕೆಲಸ ಮಾಡುತ್ತಿದ್ದ ಆರೋಪಿ ರಾತ್ರಿಯಾದರೆ, ಈ ರೀತಿ ಕೃತ್ಯ ಮಾಡುತ್ತಿದ್ದ ಹೇಳಲಾಗುತ್ತಿದ್ದು, ಅರೆ ಮಾನಸಿಕ ಅಸ್ವಸ್ಥ ಅಂತ ತಿಳಿದುಬಂದಿದೆ. ಹೀಗಾಗಿ ಪೊಲೀಸರು ಬುದ್ದಿವಾದ ಹೇಳಿ ಬಿಟ್ಟು ಕಳುಹಿಸಿದ್ದಾರೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಬೆತ್ತಲೆ ಅಸಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 8 ಜನರಿಗೆ ಅಂಗಾಂಗ ದಾನ – ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಡಗಿನ ಶಿಕ್ಷಕಿ

    Live Tv
    [brid partner=56869869 player=32851 video=960834 autoplay=true]

  • ಸುರಕ್ಷತೆ ಮರೆತ ಬಿಎಂಟಿಸಿ – ಕಳ್ಳರ ಅಡ್ಡವಾದ ಬಸ್‍ಗಳು

    ಸುರಕ್ಷತೆ ಮರೆತ ಬಿಎಂಟಿಸಿ – ಕಳ್ಳರ ಅಡ್ಡವಾದ ಬಸ್‍ಗಳು

    -ಮಹಿಳೆಯರಿಗೆ ನಿತ್ಯ ಕಿರುಕುಳ, ಸಂಚಾರಕ್ಕೆ ಹಿಂದೇಟು
    -5 ಸಾವಿರ ಬಸ್‍ಗಳಿಗೆ ಸಿಸಿಟಿವಿ ಅಳವಡಿಸಲು ಸಜ್ಜು

    ಬೆಂಗಳೂರು: ಬಿಎಂಟಿಸಿಯಲ್ಲಿ ಪ್ರಯಾಣಿಕರ ಸುರಕ್ಷತೆ, ಭದ್ರತೆಗೆ ಅಂತ ಇರಬೇಕಾದ ಸಿಸಿ ಕ್ಯಾಮರಾಗಳೇ ಬಸ್‍ಗಳಲ್ಲಿ ಇಲ್ಲ. ಇದರಿಂದ ನಿತ್ಯ ಮಹಿಳೆಯರು ಬಸ್‍ಗಳಲ್ಲಿ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ. ಮಾತ್ರವಲ್ಲ, ಪರ್ಸ್, ಮೊಬೈಲ್, ಹಣ ಇತರೆ ವಸ್ತುಗಳು ಕಳುವಾಗುತ್ತಿವೆ. ಪ್ರಯಾಣಿಕರ ಸೋಗಿನಲ್ಲಿ, ಬೆಲೆ ಬಾಳುವ ವಸ್ತುಗಳನ್ನ ಕಳ್ಳರು ದೋಚುತ್ತಿದ್ದಾರೆ.

    ಹೌದು, ಬಿಎಂಟಿಸಿ ಬಸ್‍ಗಳಲ್ಲಿ ಮಹಿಳೆಯರು ನಿತ್ಯ ಕಿರುಕುಳವನ್ನ ಅನುಭವಿಸುತ್ತಿದ್ದಾರೆ. ಸೀಟ್ ವಿಚಾರವಾಗಿ ಗಲಾಟೆಗಳು ಹಾಗೂ ಬಸ್ ರಶ್ ಇದ್ದಾಗ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವಂತಹ ಘಟನೆಗಳು ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲದೇ ಸಿಸಿಕ್ಯಾಮೆರಾ ಇಲ್ಲದಿರುವುದನ್ನೇ ಬಂಡವಾಳ ಮಾಡಿಕೊಂಡಿರೋ ಕಳ್ಳರು ಬಸ್‍ನಲ್ಲಿ ತಮ್ಮ ಕೈಚಳವನ್ನು ತೋರಿಸುತ್ತಿದ್ದಾರೆ. ಇದರಿಂದ ಹೆದರಿರುವ ಪ್ರಯಾಣಿಕರು, ಬಿಎಂಟಿಸಿಯಲ್ಲಿ ಸಂಚಾರ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಬಸ್‍ಗಳಲ್ಲಿ ಮೊಬೈಲ್ ಕಳೆದುಕೊಂಡ ಸಂತ್ರಸ್ಥರು ತ್ವರಿತಗತಿಯಲ್ಲಿ ಸಿಸಿಟಿವಿ ಅಳವಡಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಸದ ವಾಹನಗಳ ಮೇಲೆ BBMP ನಾಮಫಲಕ ಹಾಕುವಂತಿಲ್ಲ – ಹೆಸರು ಹಾಕಿದ ವಾಹನಗಳ ಮೇಲೆ ಕ್ರಿಮಿನಲ್ ಕೇಸ್

    ಸದ್ಯ ಪ್ರಯಾಣಿಕರ ಸುರಕ್ಷತೆಗೆ ಬಿಎಂಟಿಸಿ ಮುಂದಾಗಿದೆ. ನಾಲ್ಕು ವರ್ಷಕ್ಕೆ ಮೊಬೈಲ್ ಆಪ್ ವಿತ್ ವುಮೆನ್ ಸೇಫ್ಟಿ ಫೀಚರ್ ಅಂಡ್ ಸರ್ವೆಲೆನ್ಸ್ ಯೋಜನೆಯಡಿ, 5 ಸಾವಿರ ಬಸ್‍ಗಳಿಗೆ ಸಿಸಿಟಿವಿ ಅಳವಡಿಸಲು 37 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಇದು ನವೆಂಬರ್ ತಿಂಗಳೊಳಗೆ ಕಾರ್ಯರೂಪಕ್ಕೆ ಬರಲಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಆರೂವರೆ ಸಾವಿರ ಬಸ್‍ಗಳು, ನಗರದ ಹಲವು ಮಾರ್ಗಗಳಿಗೆ ಸಂಚರಿಸುತ್ತಿವೆ. ಈಗಾಗಲೇ ಹೊಸ ಬಸ್‍ಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿದ್ದು ಕೆಲವು ಕಾರ್ಯನಿರ್ವಹಿಸುತ್ತಿದ್ದರೆ, ಇನ್ನೂ ಕೆಲವು ಪ್ರದರ್ಶನಕ್ಕಿಟ್ಟಂತಿದೆ. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಗಳಿಂದ ರೈಲ್ವೇ ಇಲಾಖೆಗೆ 259 ಕೋಟಿ ಲಾಸ್

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಮಾಜಿ ಶಾಸಕನ ಸಹೋದರರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಬಿಜೆಪಿ ಮಾಜಿ ಶಾಸಕನ ಸಹೋದರರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಪಾಟ್ನಾ: ಗ್ಯಾಂಗ್ ವಾರ್‌ನಲ್ಲಿ ಬಿಜೆಪಿಯ ಮಾಜಿ ಶಾಸಕ ಚಿತ್ತರಂಜನ್ ಶರ್ಮಾ ಅವರ ಇಬ್ಬರು ಸಹೋದರರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ನಗರದ ವಿಜಯ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ನಡೆದಿದೆ.

    ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳು ನಡುರಸ್ತೆಯಲ್ಲೇ ಇಬ್ಬರನ್ನು ಹೇಗೆ ಕೊಂದಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಗೌತಮ್ ಮತ್ತು ಶಂಭು ಗುಂಡಿನ ದಾಳಿಗೊಳಗಾದ ಚಿತ್ತರಂಜನ್ ಶರ್ಮಾ ಅವರ ಇಬ್ಬರು ಸಹೋದರರು. ಆರೋಪಿಗಳು ಮತ್ತು ಸಂತ್ರಸ್ತರು ಮೋಟಾರ್ ಸೈಕಲ್ ಚೇಸ್‍ನಲ್ಲಿ ತೊಡಗಿದ್ದರು. ನಂತರ ಅವರು ಗೌತಮ್ ಮೇಲೆ ಗುಂಡು ಹಾರಿಸಿದ್ದಾರೆ. ಒಮ್ಮೆ ಬೈಕ್‍ನಿಂದ ಬಿದ್ದ ಆರೋಪಿಗಳು ಹತ್ತಿರದಿಂದಲೇ ಗೌತಮ್ ತಲೆಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

    ದುಷ್ಕರ್ಮಿಗಳು ಶಂಬು ಅವರ ಮೇಲೂ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದು, ಜನ ಗುಂಪು ಸೇರುತ್ತಿರುವುದನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಇತ್ತ ಮಾರುಕಟ್ಟೆಯಲ್ಲಿದ್ದ ಸಾರ್ವಜನಿಕರಲ್ಲಿ ಭಯ, ಗಾಬರಿ ಆವರಿಸಿತು. ಗಾಯಗೊಂಡ ಇಬ್ಬರ ಪೈಕಿ ಗೌತಮ್ ಸ್ಥಳದಲ್ಲೇ ಮೃತಪಟ್ಟರೆ, ಶಂಬು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ 

    ಘಟನಾ ಸ್ಥಳದಿಂದ ನಾವು ಅರ್ಧ ಡಜನ್ ಖಾಲಿ ಕಾಟ್ರ್ರಿಡ್ಜ್‍ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪಾಟ್ನಾದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‍ಎಸ್‍ಪಿ) ಮಾನವಜಿತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

    ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಎಟಿಎಂನಲ್ಲಿ ಹಣ ಕಳ್ಳತನ ಮಾಡಲು ಯತ್ನಿಸಿದವ ಅಂದರ್

    ಎಟಿಎಂನಲ್ಲಿ ಹಣ ಕಳ್ಳತನ ಮಾಡಲು ಯತ್ನಿಸಿದವ ಅಂದರ್

    ಹುಬ್ಬಳ್ಳಿ: ಹುಬ್ಬಳ್ಳಿಯ ನ್ಯೂ ಕಾಟನ್ ಮಾರ್ಕೆಟ್‍ನ ಆಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಕಳವಿಗೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

    ಅಕ್ಟೋಬರ್ 13 ರಂದು ತಡರಾತ್ರಿ ಎಕ್ಸಿಸ್ ಬ್ಯಾಂಕ್ ಎಟಿಎಂ ಒಳಗೆ ವ್ಯಕ್ತಿಯೊರ್ವ ರಾಡ್ ಹಿಡಿದು ನುಗ್ಗಿದ್ದ. ಎಟಿಎಂ ಮಷಿನ್‍ಗೆ ಅಳವಡಿಸಿದ್ದ ವೈರ್‌ಗಳನ್ನು ಕಿತ್ತು ಕಳವಿಗೆ ಮುಂದಾಗಿದ್ದ. ಇದನ್ನು ಯಾರೋ ಗಮನಿಸಿದ್ದರಿಂದ ಬಳಿಕ ಅದು ಸಾಧ್ಯವಾಗದೇ ಬರಿಗೈಲಿ ವಾಪಸಾಗಿದ್ದ. ಈ ಕುರಿತು ಬ್ಯಾಂಕ್ ಅಧಿಕಾರಿಗಳು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಅಸ್ವಸ್ಥ ಯುವಕನನ್ನು ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಇನ್ಸ್‌ಪೆಕ್ಟರ್‌!

    ಇನ್ಸ್‌ಸ್ಪೆಕ್ಟರ್‌ ರವಿಚಂದ್ರ ಡಿ.ಬಿ. ಹಾಗೂ ಸಿಬ್ಬಂದಿ ಎಟಿಎಂನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಆರೋಪಿಯ ಚಹರೆ ಆಧಾರದ ಮೇಲೆ ಹುಡುಕಾಟ ಆರಂಭಿಸಿದ್ದರು. ಬಳಿಕ ಬೆಳಗಾವಿ, ಬೈಲಹೊಂಗಲ, ಸಂಕೇಶ್ವರ, ಬೆಂಗಳೂರು ಸುತ್ತಮುತ್ತ ಓಡಾಡಿ ಮಾಹಿತಿ ಕಲೆ ಹಾಕಿ, ಆರೋಪಿಯನ್ನು ಬಂಧಿಸಿಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ:  ಕೋಚಿಂಗ್‍ಗೆ ಬರುವ ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

    ಪಿಎಸ್‍ಐಗಳಾದ ಬಿ.ಎಸ್.ಪಿ. ಅಶೋಕ್, ಯು.ಎಂ. ಪಾಟೀಲ್ ಹಾಗೂ ಸಿಬ್ಬಂದಿ ಕಾರ್ಯಕ್ಕೆ ಆಯುಕ್ತ ಲಾಭೂರಾಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಸಿಸಿಟಿವಿ ಕ್ಯಾಮೆರಾ ಹೊಡೆದು ಮಹಿಳೆಯಿಂದ ಕಳ್ಳತನಕ್ಕೆ ಯತ್ನ

    ಸಿಸಿಟಿವಿ ಕ್ಯಾಮೆರಾ ಹೊಡೆದು ಮಹಿಳೆಯಿಂದ ಕಳ್ಳತನಕ್ಕೆ ಯತ್ನ

    ಮಂಡ್ಯ: ಮಹಿಳೆಯೊಬ್ಬಳು ತೋಟದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ನಾಶ ಮಾಡಿ ಕಳ್ಳತನ ಮಾಡಲು ಮುಂದಾಗಿದ್ದ ಘಟನೆ ಮಂಡ್ಯ ಜಿಲ್ಲೆಯ  ಕೆಆರ್‌ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ಜರುಗಿದೆ. ಇದನ್ನೂ ಓದಿ:  ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

    Woman CCTV Camera

    ಬಂಡಿಹೊಳೆ ಗ್ರಾಮದ ರೈತ ಕೆ.ರಾಮೇಗೌಡ ಅವರು ತಮ್ಮ ತೋಟದಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ತಡೆಗಟ್ಟಲು ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದರು. ಶುಕ್ರವಾರ ತೋಟಕ್ಕೆ ಬಂದ ಮಹಿಳೆಯೊಬ್ಬಳು ಸಿಸಿಟಿವಿ ಕ್ಯಾಮೆರಾವನ್ನು ಕೋಲಿನಿಂದ ಹೊಡೆದು ಹಾಕಿರುವ ದೃಶ್ಯ ಅದೇ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳತನಕ್ಕೆ ಬಂದಿರುವ ಮಹಿಳೆ ಸಿಸಿಟಿವಿ ಕ್ಯಾಮೆರಾವನ್ನು ಹೊಡೆದು ಹಾಕಿ ಕಳ್ಳತನ ಮಾಡಿಕೊಂಡು ಹೋಗಿದ್ದಾಳೆ ಎಂದು ಕೂಡ ಆರೋಪಿಸಲಾಗಿದೆ. ಇದನ್ನೂ ಓದಿ:ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು

    ಸಿಸಿಟಿವಿ ಕ್ಯಾಮೆರಾವನ್ನು ಹೊಡೆದು ಹಾಕಿರುವ ಮಹಿಳೆ ಬಂಡಿಹೊಳೆ ಗ್ರಾಮದ ರಶ್ಮಿ ಎಂದು ಗುರುತಿಸಲಾಗಿದ್ದು, ಈ ಕುರಿತು ರಾಮೇಗೌಡರು ಕೆಆರ್‍ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಸದ್ಯ ಸಿಸಿಟಿವಿ ಕ್ಯಾಮೆರಾದಲ್ಲಿನ ದೃಶ್ಯದ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ನೋಡನೋಡುತ್ತಲೇ ಹಣ ಎಗರಿಸಿದ ಖತರ್ನಾಕ್ ಕಳ್ಳ – ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    ನೋಡನೋಡುತ್ತಲೇ ಹಣ ಎಗರಿಸಿದ ಖತರ್ನಾಕ್ ಕಳ್ಳ – ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    – ಬೈಕ್ ಸೈಡ್ ಬ್ಯಾಗ್ ನಲ್ಲಿದ್ದ 1 ಲಕ್ಷ ರೂ. ಹಣವನ್ನು ಎಗರಿಸಿ ಪರಾರಿ

    ಕೊಪ್ಪಳ: ಹಾಡ ಹಗಲೇ ಜನರ ಮಧ್ಯೆ ಪೆಟ್ರೋಲ್ ಬಂಕ್ ನಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ್ದಾನೆ. ಬೈಕಿನ ಸೈಡ್ ಬ್ಯಾಗ್ ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ಎಗರಿಸಿಕೊಂಡು ಪರಾರಿಯಾಗಿದ್ದಾನೆ.

    ಕೊಪ್ಪಳದ ಪೆಟ್ರೋಲ್ ಬಂಕ್‍ವೊಂದರಲ್ಲಿ ಈ ಘಟನೆ ನಡೆದಿದ್ದು, ಚಾಲಾಕಿ ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚನ್ನಪ್ಪ ಹನುಮಗೌಡ ಪೊಲೀಸ್ ಪಾಟೀಲ್ ಹಣ ಕಳೆದುಕೊಂಡವರಾಗಿದ್ದಾರೆ.

    ಲಾಚನಕೇರಿಯ ಚನ್ನಪ್ಪ ಬುಧವಾರ ಒಂದು ಲಕ್ಷ ರುಪಾಯಿ ಹಣವನ್ನು ಬೈಕ್ ನ ಸೈಡ್ ಬ್ಯಾಗ್ ನಲ್ಲಿಟ್ಟುಕೊಂಡು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದರು. ಬ್ಯಾಗ್ ನಲ್ಲಿ ಹಣವಿರುವುದನ್ನು ಆ ಕಳ್ಳ ಹಿಂಬಾಲಿಸಿಕೊಂಡು ಬಂದು ಬೈಕ್ ಸವಾರನಿಗೆ ಗೊತ್ತಾಗದ ರೀತಿಯಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಹಣ ಕದ್ದೊಯ್ದಿದ್ದಾನೆ.

    ಜನರ ನಡುವೆಯೇ ಕಳ್ಳ ಕೈಚಳಕ ತೋರಿಸಿದ್ದು, ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರು, ವಂಚಕರಿಂದ ಜಾಗರೂಕರಾಗಿರುವಂತೆ ಪೊಲೀಸರು ಎಚ್ಚರಿಕೆ ನೀಡಿದ ನಂತರವೂ ಜನ ಮೈ ಮರೆಯುತ್ತಿದ್ದಾರೆ ಎಂಬುದಕ್ಕೆ ಇಂತಹ ಘಟನೆ ಸಾಕ್ಷಿಯಾಗಿದೆ. ಸದ್ಯ ಈ ಸಂಬಂಧ ಕೊಪ್ಪಳ ನಗರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಕಿಡ್ನಿ ವೈಫಲ್ಯದ ನಡುವೆಯೂ SSLCಯಲ್ಲಿ ಟಾಪರ್ ಆದ ವಿದ್ಯಾರ್ಥಿನಿ

  • ಕಳ್ಳನಿಗೆ ಕೈ ಕೊಟ್ಟ ಬೈಕ್ – ಮರಳಿ ತಂದು ಮಾಲೀಕನ ಮನೆ ಮುಂದೆ ನಿಲ್ಲಿಸಿದ

    ಕಳ್ಳನಿಗೆ ಕೈ ಕೊಟ್ಟ ಬೈಕ್ – ಮರಳಿ ತಂದು ಮಾಲೀಕನ ಮನೆ ಮುಂದೆ ನಿಲ್ಲಿಸಿದ

    ಕಲಬುರಗಿ: ಕಳ್ಳತನ ಮಾಡಿದ ಬೈಕ್ ಸ್ಟಾರ್ಟ್ ಆಗದಿದ್ದಾಗ ಕಳ್ಳನೊಬ್ಬ ಅದನ್ನು ವಾಪಸ್ ತಂದು ನಿಲ್ಲಿಸಿ ಹೋಗಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಪಟ್ಟಣದ ಆಗ್ರೋ ರಸ್ತೆಯಲ್ಲಿ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಮಹಾದೇವ ಕಲಕೇರಿ ಎಂಬವರಿಗೆ ಸೇರಿದ ಬೈಕ್ ನಿನ್ನೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕಳ್ಳತನ ಆಗಿತ್ತು. ನಂತರ ಒಂದಿಷ್ಟು ಮುಂದಕ್ಕೆ ತಳ್ಳಿಕೊಂಡು ಹೋದ ಕಳ್ಳನೋರ್ವ ಬೈಕ್ ಚಾಲನೆ ಮಾಡಲು ಪ್ರಯತ್ನಿಸಿದ್ದಾನೆ. ಬೈಕ್ ಸ್ಟಾರ್ಟ್ ಆಗದಿದ್ದಾಗ ವಾಪಸ್ ಅದನ್ನು ಬೈಕ್ ಮಾಲೀಕನ ಮನೆ ಮುಂದೆಯೇ ತಂದು ನಿಲ್ಲಿಸಿ ಹೋಗಿದ್ದಾನೆ.

    ಕಳ್ಳನ ಕರಾಮತ್ತು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಕಳೆದ ಕೆಲ ದಿನಗಳಿಂದ ಅಫಜಲಪುರ ಪಟ್ಟಣದಲ್ಲಿ ಬೈಕ್ ಗಳ ಕಳ್ಳತನಗಳು ಮರುಕಳಿಸುತ್ತಿದ್ದು, ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಡ್ ಕೆಳಗೆ ಸುರಂಗ ಮಾರ್ಗ – ವೀಡಿಯೋ ವೈರಲ್

  • ಮಂಡ್ಯ ಜಿಲ್ಲೆಯಲ್ಲಿ ಆತಂಕ ಹುಟ್ಟಿಸುವ ನಿಗೂಢ ದೃಶ್ಯ – ಸಿಸಿಟಿವಿಯಲ್ಲಿ ಸೆರೆ

    ಮಂಡ್ಯ ಜಿಲ್ಲೆಯಲ್ಲಿ ಆತಂಕ ಹುಟ್ಟಿಸುವ ನಿಗೂಢ ದೃಶ್ಯ – ಸಿಸಿಟಿವಿಯಲ್ಲಿ ಸೆರೆ

    ಮಂಡ್ಯ: ಭೂಮಿಯ ಮೇಲೆ ಆತ್ಮಗಳು ಸಂಚಾರ ಮಾಡುತ್ತವೆ ಎಂದು ಕೆಲವರು ಹೇಳುತ್ತಾರೆ. ಇಲ್ಲ ಎನ್ನುವ ತರ್ಕಗಳು ಇಂದಿಗೂ ಸಹ ವೈಜ್ಞಾನಿಕವಾಗಿ ಹಾಗೂ ಧಾರ್ಮಿಕವಾಗಿ ನಡೆಯುತ್ತಿವೆ. ಇದರ ಮಧ್ಯೆ ಸಕ್ಕರೆ ನಾಡು ಮಂಡ್ಯದಲ್ಲಿ ಆತ್ಮ ಸಂಚಾರದ್ದು ಎನ್ನಲಾದ ದೃಶ್ಯವೊಂದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಇದನ್ನು ನೋಡಿ ಇದೀಗ ಜನರಲ್ಲಿ ಆತಂಕ ಮನೆ ಮಾಡಿದೆ.

    ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗವಿನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ ಇಂತಹದ್ದೆ ಒಂದು ನಿಗೂಢವಾದ ದೃಶ್ಯ ಕಾಣಿಸಿಕೊಂಡಿದ್ದು, ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ನಗುವಿನಹಳ್ಳಿ ಗ್ರಾಮದ ಗೋಪಾಲ್ ಎಂಬವರ ತೋಟದ ಮನೆಯಲ್ಲಿ ಜನವರಿ 31 ರಂದು ಇದ್ದಕ್ಕಿದ್ದ ಹಾಗೆ ಕಪ್ಪು ನೆರಳೊಂದು ಸಂಚಾರ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಕಂಡ ಜನರೆಲ್ಲಾ ಇದು ಆತ್ಮ ಸಂಚಾರ ಮಾಡುವ ದೃಶ್ಯ ಎಂದು ಹೇಳುತ್ತಿದ್ದಾರೆ.

    ಗೋಪಾಲ್ ಅವರ ತೋಟದ ಮನೆ ನಗುವಿನಹಳ್ಳಿ ಗ್ರಾಮದ ಹೊರ ಭಾಗದಲ್ಲಿದ್ದು, ಪಕ್ಕದಲ್ಲಿಯೇ ಒಂದು ಹಳ್ಳ ಹರಿಯುತ್ತಿದೆ. ಅಲ್ಲದೇ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಸಹ ಇದೆ. ಇಲ್ಲಿ ಹಲವು ವರ್ಷಗಳ ಹಿಂದೆ ಮಹಿಳೆ ಹಾಗೂ ಯುವಕ ಅಪಘಾತದಿಂದ ಮೃತಪಟ್ಟಿದ್ದರು. ಜೊತೆಗೆ ಓರ್ವ ಕುಡಿದ ಮತ್ತಿನಲ್ಲಿ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಗಳು ಈಗ ಕಂಡಿರುವ ದೃಶ್ಯಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    ಗೋಪಾಲ್ ಅವರು ಕಳ್ಳರ ಭಯದಿಂದ ಸಿಸಿಟಿವಿ ಕ್ಯಾಮೆರಾವನ್ನು ತಮ್ಮ ತೋಟದ ಮನೆಯಲ್ಲಿ ಹಾಕಿಸಿದ್ದರು. ಇದೀಗ ಅದೇ ಸಿಸಿಟಿವಿಯಲ್ಲಿ ಕಳ್ಳರ ಬದಲಿಗೆ ಆತಂಕ ಹುಟ್ಟಿಸುವ ದೃಶ್ಯವೊಂದು ಸೆರೆಯಾಗಿರುವುದನ್ನು ನೋಡಿ ಗ್ರಾಮಸ್ಥರಲ್ಲಿ ಒಂದಷ್ಟು ಆತಂಕ ಹುಟ್ಟಿದೆ.

  • ಚಿನ್ನದಂತ ಮಾತು ಹೇಳಿ ಚಿನ್ನಾಭರಣ ದೋಚಿದ್ರು

    ಚಿನ್ನದಂತ ಮಾತು ಹೇಳಿ ಚಿನ್ನಾಭರಣ ದೋಚಿದ್ರು

    ಹುಬ್ಬಳ್ಳಿ/ಧಾರವಾಡ: ಚಿನ್ನದ ಒಡೆವೆಗಳನ್ನು ತೊಳೆದುಕೊಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಕಳ್ಳರು ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ಚೆನ್ನಪೇಟೆಯ ಸರ್ಕಾರಿ ಶಾಲೆಯ ಹಿಂಬಾಗದಲ್ಲಿ ನಡೆದಿದೆ.

    ವಿಷ್ಣುಸಾ ಪವಾರ ಎಂಬವರ ಮನೆಯಲ್ಲಿ ಸರೋಜಾ ಹಾಗೂ ಸೊಸೆ ಅನಿತಾ ಮೋಸಕ್ಕೆ ಒಳಗಾಗಿದ್ದು, ಆರು ಬಳೆ ಮತ್ತು ಮಂಗಳಸೂತ್ರ ತೊಳೆಯುವುದಾಗಿ ಹೇಳಿದ್ದಾರೆ. ಕುಕ್ಕರಿನಲ್ಲಿ ಬಂಗಾರ ತೊಳೆಯುವ ನೆಪ ಮಾಡಿ, ಅತ್ತೆಯನ್ನು ಕುಕ್ಕರ್ ಮುಚ್ಚಳ ತೆಗೆಯಲು ಹೇಳಿ ಒಳಗಡೆ ಕಳಿಸಿದ್ದಾರೆ. ಇದೇ ವೇಳೆ ತಮ್ಮ ಕೈ ಚಳಕ ತೋರಿಸಲು ಕಳ್ಳರು ಮುಂದಾಗಿದ್ದಾರೆ.

    190 ಗ್ರಾಂ ಬಂಗಾರ ದೋಚುವುದು ಗೊತ್ತಾದ ತಕ್ಷಣವೇ ಮಹಿಳೆ ಬಾಗಿಲು ಹಾಕಲು ಪ್ರಯತ್ನಪಟ್ಟಿದ್ದಾರೆ. ಆದರೆ ವಂಚಕರಿಬ್ಬರು ಪರಾರಿಯಾಗಿದ್ದಾರೆ. ವಂಚಕರ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಹಳೇಹುಬ್ಬಳ್ಳಿ ಠಾಣೆ ಇನ್‍ಸ್ಪೆಕ್ಟರ್ ಶಿವಾನಂದ್ ಕಮತಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರದ ವಿವಿಧೆಡೆ ನಾಕಾಬಂದಿ ಹಾಕಲಾಗಿದೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.