Tag: ಸಿ.ಕೆ ಅಚ್ಚುಕಟ್ಟು

  • ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

    ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

    – ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಆಶಾ, ಸಂಶುದ್ದೀನ್
    – ತಡರಾತ್ರಿ ಫೋನ್‌ನಲ್ಲಿ ಮಾತಾಡ್ತಿದ್ಳು, ಇದ್ರಿಂದ ಜಗಳವಾಗಿ ಹತ್ಯೆ

    ಬೆಂಗಳೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಸಂಗತಿಯೊಂದು ಬಯಲಾಗಿದೆ. ದಿನಾ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು, ಇದೇ ವಿಷಯಕ್ಕಾಗಿ ಸ್ನೇಹಿತ ಕೊಲೆ ಮಾಡಿದ ವಿಚಾರ ತನಿಖೆ ವೇಳೆ ತಿಳಿದುಬಂದಿದೆ.

    ಪ್ರಕರಣ ದಾಖಲಾದ 20 ಗಂಟೆಯೊಳಗಾಗಿ ಸಿ.ಕೆ.ಅಚ್ಚುಕಟ್ಟು (Chennamanakere Police Station) ಠಾಣಾ ಪೊಲೀಸರು ಅಸ್ಸಾಂ ಮೂಲದ ಸಂಶುದ್ದೀನ್‌ನನ್ನು ಬಂಧಿಸಿದ್ದರು.ಇದನ್ನೂ ಓದಿ: ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    ಪ್ರಾಥಮಿಕ ತನಿಖೆ ವೇಳೆ, ಹುಳಿಮಾವು ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಕೊಲೆಯಾದ ಪುಷ್ಪಾ @ ಆಶಾ ಹಾಗೂ ಆರೋಪಿ ಸಂಶುದ್ದೀನ್‌ಗೆ ಪರಿಚಯವಾಗಿತ್ತು. ಕಳೆದ ಎರಡು ವರ್ಷಗಳಿಂದ ಇಬ್ಬರು ಲಿವ್ ಇನ್ ರಿಲೇಷನ್‌ನಲ್ಲಿದ್ದರು. ಆದರೆ ಮೃತ ಮಹಿಳೆ ದಿನಾಲೂ ಮನೆಗೆ ಬರುವಾಗ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು. ಜೊತೆಗೆ ತಡರಾತ್ರಿವರೆಗೂ ಫೋನ್‌ನಲ್ಲಿ ಮಾತಾಡುತ್ತಿದ್ದಳು. ಇದೇ ಕಾರಣದಿಂದ ಇಬ್ಬರ ನಡುವೆ ಜಗಳವಾಗಿತ್ತು. ಜಗಳ ಅತಿರೇಕಕ್ಕೆ ಹೋಗಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಬಳಿಕ ಮೃತದೇಹವನ್ನು ಮೂಟೆಗೆ ಹಾಕಿ, ಬೈಕ್‌ನಲ್ಲಿ ತಂದು ಕಸದ ಲಾರಿಗೆ ಹಾಕಿ ಹೋಗಿದ್ದ ಎಂದು ತಿಳಿದುಬಂದಿದೆ.

    ಆಶಾಗೆ ಇದಕ್ಕೂ ಮೊದಲು ಮದುವೆಯಾಗಿದ್ದು, ಗಂಡ ಮೃತಪಟ್ಟಿದ್ದ. ಆಕೆಗೆ ಇಬ್ಬರು ಮಕ್ಕಳಿದ್ದರು. ಜೊತೆಗೆ ಆರೋಪಿ ಸಂಶುದ್ದೀನ್‌ಗೆ ಮದುವೆಯಾಗಿ ಹೆಂಡತಿ ಹಾಗೂ ಇಬ್ಬರು ಮಕ್ಕಳು ಅಸ್ಸಾಂನಲ್ಲಿದ್ದರು ಎಂದು ಬಯಲಾಗಿದೆ.

    ಏನಿದು ಘಟನೆ?
    ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ (Garbage Truck) ಲಾರಿಯಲ್ಲಿಡಲಾಗಿತ್ತು.

    ರಾತ್ರಿ 1:40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿತ್ತು. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

    ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಿದ್ದರು.ಇದನ್ನೂ ಓದಿ: ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

  • ಬೆಂಗಳೂರಿನಲ್ಲಿ ವೃದ್ಧ ದಂಪತಿ ನೇಣಿಗೆ ಶರಣು

    ಬೆಂಗಳೂರಿನಲ್ಲಿ ವೃದ್ಧ ದಂಪತಿ ನೇಣಿಗೆ ಶರಣು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೃದ್ಧ ದಂಪತಿ ನೇಣಿಗೆ ಶರಣಾದ ಘಟನೆ ನಡೆದಿದೆ.

    ಕೃಷ್ಣ ನಾಯ್ಡು (88) ಮತ್ತು ಸರೋಜಮ್ಮ (72) ಆತ್ಮಹತ್ಯೆ ಮಾಡಿಕೊಂಡ ವೃದ್ದ ದಂಪತಿ. ಬೆಳಗ್ಗೆ 5.30ರ ಸುಮಾರಿಗೆ ಸ್ಥಳೀಯರು ಬಂದು ಬಾಗಿಲು ಬಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ರಷ್ಯಾದ ಡೇಂಜರ್‌ ಸೇನೆಯಲ್ಲಿದ್ದಾರೆ ಕಲಬುರಗಿಯ ಮೂವರು – ನಮ್ಮನ್ನು ರಕ್ಷಿಸಿ ಎಂದ ಯುವಕರು

    ಮೂರು ಅಂತಸ್ತಿನ ಕಟ್ಟಡದಲ್ಲಿ ಮಗ ಮೊದಲ ಮಹಡಿಯಲ್ಲಿ ವಾಸವಿದ್ದು ಎರಡು ಮಹಡಿಯಲ್ಲಿರೋ ಮನೆಗಳು ಬಾಡಿಗೆ ಕೊಡಲಾಗಿದ್ದು, ಟೆರೇಸ್ ಮೇಲೆ ಸಣ್ಣ ಮನೆಯಲ್ಲಿ ವೃದ್ಧದಂಪತಿ ವಾಸವಾಗಿರುತ್ತಾರೆ. ಬುಧವಾರ ರಾತ್ರಿ ವೃದ್ಧದಂಪತಿ ಬಟ್ಟೆಗಳಿಂದ ಮನೆಯಲ್ಲಿರೋ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಮಗ ಅಶೋಕ್ ಮುಂಜಾನೆ 5.30 ಸುಮಾರಿಗೆ ಹೋಗಿ ಬಾಗಿಲು ಬಡಿದಾಗ ಬಾಗಿಲು ತಂದೆ ತಾಯಿ ತೆಗೆದಿಲ್ಲ. ಅನುಮಾನ ಬಂದು ಬಾಗಿಲು ಮುರಿದು ಒಳಗಡೆ ನೋಡಿದಾಗ ತಂದೆ- ತಾಯಿ ಇಬ್ಬರೂ ನೇಣು ಹಾಕಿಕೊಂಡಿರೋ ವಿಚಾರ ಬೆಳಕಿಗೆ ಬಂದಿದೆ.

    ಸದ್ಯ ಘಟನೆ ಬಗ್ಗೆ ದಂಪತಿ ಮಗ ಅಶೋಕ್ ಅವರಿಂದ ಪೊಲೀಸರು ಹೇಳಿಕೆ ಪಡೆದಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಂಪತಿ ಆತ್ಮಹತ್ಯೆ ವಿಚಾರದಲ್ಲಿ ಒಂದಷ್ಟು ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆಸ್ತಿ ವಿಚಾರಕ್ಕೆ ವೃದ್ಧದಂಪತಿ ಹಾಗೂ ಮಗನ ನಡುವೆ ಏನಾದರೂ ವೈಷಮ್ಯ ಇತ್ತಾ ಅನ್ನೋದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.