– ಯೋಗೇಶ್ವರ್ ವಿಚಾರದಲ್ಲಿ ನಾವು ದೊಡ್ಡ ಔದಾರ್ಯತೆ ತೋರಿದ್ದೇವೆ: ನಿಖಿಲ್
ಬೆಂಗಳೂರು: ವಿಧಾನ ಪರಿಷತ್ ಸದಸ್ಯ (MLC) ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇತ್ತ ಜೆಡಿಎಸ್ನಲ್ಲಿ ಅಭ್ಯರ್ಥಿ ಆಯ್ಕೆ ಚಟುವಟಿಕೆ ಚುರುಕುಗೊಂಡಿದೆ. ಈ ನಡುವೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿ ಮಾಡಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ನಿಲ್ಲುತ್ತೇನೆ ಅಂತ ಹೇಳಿಲ್ಲ. ಕಳೆದ ಎರಡೂ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಕುಮಾರಣ್ಣನನ್ನ (Channapatna) ಜನ ಗೆಲ್ಲಿಸಿದ್ದಾರೆ. ಇದು ಕುಮಾರಣ್ಣ ಅವರ ಸ್ವಕ್ಷೇತ್ರ. ದೆಹಲಿಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರಿಗೆ ಯಾವುದೇ ರೀತಿಯ ತೀರ್ಮಾನ ತಗೊಳ್ಳಿ ಅಂತ ಹೇಳಿದ್ದಾರೆ. ಆದರೂ ಮೈತ್ರಿಗೆ ಭಂಗವಾಗಬಾರದು ಅಂತ ನಾವಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ
ನಮ್ಮ ತೀರ್ಮಾನ ಏನೇ ಇದ್ರೂ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ತಗೋತೀವಿ. ನಮಗೆ ಸ್ವಾತಂತ್ರ್ಯ ಇದ್ದಾಗಿಯೂ ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಇದಕ್ಕೆ ಕಾರಣ ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಬೇಕು ಅಂತ. ಒಬ್ಬ ವ್ಯಕ್ತಿಯ ನಡವಳಿಕೆ ನೋಡಿ, ನಾವು ಯಾವುದೇ ರೀತಿಯ ಆತುರದ ನಿರ್ಧಾರ ಮಾಡಲ್ಲ. ಯೋಗೀಶ್ವರ್ ವಿಚಾರದಲ್ಲಿ ನಾವು ದೊಡ್ಡ ಔದಾರ್ಯತೆ ತೋರಿದ್ದೇವೆ. ನಮ್ಮ ನಾಯಕರು ಯೋಗೇಶ್ವರ್ ಅವರಿಗೆ ಆಹ್ವಾನ ಕೊಟ್ಟಿದ್ದಾರೆ. ಇನ್ನೇನು ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ಚಿತ್ರದುರ್ಗ: ಕೆಲವರು ಮಳೆ ಬಾರದಿರಲಿ ಎಂದು ಹೇಳಬಹುದು. ನಾವು ಮಳೆ ಬರಲಿ, ಕೆರೆ ತುಂಬಲಿ ಅನ್ನುವವರು. ಕಾವೇರಿ ನೀರು ತುಂಬಿ ತಮಿಳುನಾಡಿಗೆ (Tamil Nadu) ಜಾಸ್ತಿ ಹೋಗಲಿ. ಮೇಕೆದಾಟು ಯೋಜನೆ ಬರಲಿ ಎಂಬುದು ನನ್ನ ಪ್ರಾರ್ಥನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (D K Shivakumar) ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು (Bengaluru) ನಗರದಲ್ಲಿ ಮಳೆಯಿಂದ ಅವಾಂತರ ಆಗಿದೆ. ಕೆಲವರು ತಳಮಟ್ಟದಲ್ಲಿ ಮನೆ ಕಟ್ಟಿದ್ದು ಇದರಿಂದ ತೊಂದರೆಯಾಗಿದೆ. ಅಧ್ಯಯನಕ್ಕೆ ಸೂಚಿಸಿದ್ದೇನೆ, ಸಮಸ್ಯೆ ಸರಿಪಡಿಸೋಣ ಎಂದರು. ಇದನ್ನೂ ಓದಿ: ಚಿಕ್ಕೋಡಿ | ಜೂಜು ಅಡ್ಡೆ ಮೇಲೆ ದಾಳಿ – 20 ಮಂದಿ ಅರೆಸ್ಟ್
ಸಿ.ಪಿ ಯೋಗೇಶ್ವರ್ (C P Yogeshwar) ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂದು ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಯೋಗೇಶ್ವರ್ ನನ್ನ ಸಂಪರ್ಕದಲ್ಲಿ ಇಲ್ಲ. ಕುಮಾರಸ್ವಾಮಿಗೆ ಏನೇನೋ ಮಾಹಿತಿ ಇರಬಹುದು. ದಳದವರು, ಬೇರೆ ಪಕ್ಷದವರು ಸಂಪರ್ಕದಲ್ಲಿ ಇರಬಹುದು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ – ಸಿದ್ದರಾಮಯ್ಯ
ಡಿಕೆಶಿ ಕನ್ನಡಕ ಧರಿಸಿ ಬೆಂಗಳೂರಲ್ಲಿ ನೈಟ್ ರೌಂಡ್ಸ್ ಎಂದು ಆರ್ ಅಶೋಕ್ (R Ashok) ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರಾದ್ರೂ ರಾತ್ರಿ ಕನ್ನಡಕ ಹಾಕಿಕೊಂಡು ರೌಂಡ್ಸ್ ಮಾಡ್ತಾರಾ? ನಾನು ಬೆಳಗ್ಗೆ ಓದುವಾಗ ಕನ್ನಡಕ ಹಾಕಿಕೊಳ್ಳುತ್ತೇನೆ. ಅಶೋಕ್ ಯಾಕೆ ರಾತ್ರಿ ಕನ್ನಡಕ ಹಾಕಿಕೊಳ್ತಾರೆ ಗೊತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಗುಜರಾತ್ ವಿವಿ ಮಾನಹಾನಿ ಕೇಸ್ – ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ
ಧಾರವಾಡ: ಶಿಗ್ಗಾಂವಿ, ಸಂಡೂರು (Sandur) ಹಾಗೂ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಧಾರವಾಡದಲ್ಲಿ 9Dharawada) ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಭಾನುವಾರ ಸಿಎಂ ಅವರು ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇವತ್ತು ಅಥವಾ ನಾಳೆ ಹೈಕಮಾಂಡ್ನಿಂದ ಅಂತಿಮ ತೀರ್ಮಾನ ಬರಲಿದೆ. ಶಿಗ್ಗಾಂವಿ ಟಿಕೆಟ್ ಹಂಚಿಕೆಯಲ್ಲೂ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೊನೆಯದಾಗಿ ಹೈಕಮಾಂಡ್ನಿಂದ ಏನು ತೀರ್ಮಾನ ಬರುತ್ತದೋ ಅದುವೇ ಅಂತಿಮ ಎಂದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕ
ಸಿ.ಪಿ.ಯೋಗೇಶ್ವರ್ ( C P Yogeshwar) ಅವರನ್ನು ಕಾಂಗ್ರೆಸ್ಗೆ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆ ಭಾಗದಲ್ಲಿ ನನಗೆ ಜಾಸ್ತಿ ಮಾಹಿತಿ ಇಲ್ಲ. ನಮ್ಮ ಅಧ್ಯಕ್ಷರಿಗೆ ಹಾಗೂ ಸಿಎಂಗೆ ಅಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಹೈಕಮಾಂಡ್ ಜೊತೆ ಮಾತನಾಡಿ ಅವರೇ ಅಂತಿಮ ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನನಗೆ ಹೆಚ್ಚಿಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದ ರಾಹುಲ್ಗೆ ರಿಲೀಫ್ – ಅರ್ಜಿ ವಜಾ, 25 ಸಾವಿರ ದಂಡ
ಈ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಚನ್ನಪಟ್ಟಣದಲ್ಲಿ( Channapatna) ಪಾರ್ಲಿಮೆಂಟ್ ಚುನಾವಣೆಯಲ್ಲಿ ನಾವೇ ಲೀಡ್ ಆಗಿದ್ದೇವೆ. ಶಿಗ್ಗಾಂವಿಯಲ್ಲೂ ಲೀಡ್ ಆಗಿದ್ದೇವೆ. ಸಂಡೂರಿನಲ್ಲೂ ಸಹ ಎರಡು ಬಾರಿ ಲೀಡ್ ಆಗಿದ್ದೇವೆ. ಹೀಗಾಗಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಉಗ್ರದಾಳಿಯ ಹೊಣೆ ಹೊತ್ತ ಪಾಕ್ ಟಿಆರ್ಎಫ್ ಸಂಘಟನೆ
ಕಾಂಗ್ರೆಸ್ನಲ್ಲೂ ಟಿಕೆಟ್ ಕಗ್ಗಂಟು:
ಇನ್ನೂ ಮತ್ತೊಂದೆಡೆ ಚನ್ನಪಟ್ಟಣದಿಂದ ಅಭ್ಯರ್ಥಿಯಾಗಿ ಯಾರನ್ನ ಕಣಕ್ಕಿಳಿಸಬೇಕು ಅನ್ನೋ ಬಗ್ಗೆ ಕಾಂಗ್ರೆಸ್ ಕೂಡ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದೆ. ಈ ಕ್ಷೇತ್ರದ ವಿಚಾರದಲ್ಲಿ ಸ್ಪೆಷಲ್ ಇಂಟ್ರೆಸ್ಟ್ ತೋರಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಮೇಲಿಂದ ಮೇಲೆ ಸಭೆ ಮಾಡ್ತಿದ್ದು, ಅಭಿಪ್ರಾಯ ಸಂಗ್ರಹ ಮಾಡ್ತಿದ್ದಾರೆ. ಈ ಹೊತ್ತಲ್ಲೇ ಇಂಟ್ರೆಸ್ಟಿಂಗ್ ಬೆಳವಣಿಗೆ ನಡೆದಿದೆ. ನಿನ್ನೆಯವರೆಗೂ ನಾನು ಸ್ಪರ್ಧೆ ಮಾಡಲ್ಲ ಅಂತಿದ್ದ ಡಿಕೆ ಸುರೇಶ್ ಇದೀಗ ರಾಗ ಬದಲಿಸಿದ್ದಾರೆ. ಪಕ್ಷ ತೀರ್ಮಾನ ಮಾಡಿದ್ರೆ ಸ್ಪರ್ಧೆ ಮಾಡೋ ಸುಳಿವು ನೀಡಿದ್ದಾರೆ. ಜೊತೆಗೆ ರಘುನಂದನ್ ರಾಮಣ್ಣ, ಮಾಜಿ ಎಂಎಲ್ಎ ಅಶ್ವಥ್ ಹೆಸರು ಕೂಡ ಕೇಳಿಬರ್ತಿದೆ. ಆದ್ರೆ, ಮೈತ್ರಿ ಪಕ್ಷದ ಅಭ್ಯರ್ಥಿ ಯಾರಾಗ್ತಾರೆ ಎನ್ನುವುದರ ಮೇಲೆ ಯಾರನ್ನು ಅಭ್ಯರ್ಥಿ ಮಾಡ್ಬೇಕು ಎಂದು ಕಾಂಗ್ರೆಸ್ ತೀರ್ಮಾನ ತೆಗೆದುಕೊಳ್ಳಲಿದೆ. ಇನ್ನು ನಾವೇನು ಶಸ್ತ್ರ ಸನ್ಯಾಸ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳುವ ಮೂಲಕ ಡಿಸಿಎಂಗೆ ಕೌಂಟರ್ ಕೊಟ್ಟಿದ್ದಾರೆ.
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದೆ. ಕ್ಷೇತ್ರದಲ್ಲಿ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ ಮಾಡಿಕೊಂಡಿದ್ದಾರೆ.
ಗುರುವಾರ ಅಥವಾ ಶುಕ್ರವಾರ ನಾಮಪತ್ರ ಸಲ್ಲಿಸಲು ಯೋಗೇಶ್ವರ್ ತಯಾರಿದ್ದಾರೆ. ಅದಕ್ಕಾಗಿ ಎರಡು ಸೆಟ್ ಅಫಿಡವಿಟ್ ಸಿದ್ಧ ಮಾಡಿಕೊಂಡಿದ್ದಾರೆ. ಸಿಪಿವೈ ನಡೆಯಿಂದ ಎನ್ಡಿಎ ನಾಯಕರು ಕಂಗಾಲಾಗಿದ್ದಾರೆ.
ಒಂದು ಬಿಜೆಪಿ ಅಭ್ಯರ್ಥಿಯಾಗಿ, ಮತ್ತೊಂದು ಪಕ್ಷೇತರ ಅಭ್ಯರ್ಥಿಯಾಗಿ ಅಫಿಡವಿಟ್ ಸಿದ್ಧಪಡಿಸಿಕೊಂಡಿದ್ದಾರೆ. ಮೈತ್ರಿ ಟಿಕೆಟ್ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧೆ, ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಿಪಿವೈ ಮುಂದಾಗಿದ್ದಾರೆ.
ಇತ್ತ, ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ಗೆ ಬಹುತೇಕ ಫಿಕ್ಸ್ ಆದಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರಿಗೆ ಯಾರು ಅವರಿಗೆ ಟಿಕೆಟ್ ಘೋಷಣೆ ಮಾಡ್ತಾರೆ ಎಂದು ಬಿಎಸ್ವೈ ಪ್ರತಿಕ್ರಿಯಿಸಿದ್ದಾರೆ.
ಜೆಡಿಎಸ್ ಚಿಹ್ನೆಯಿಂದಲೇ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕೆಂದು ಸಿ.ಪಿ.ಯೋಗೇಶ್ವರ್ಗೆ ಆಹ್ವಾನ ನೀಡಲಾಗಿತ್ತು. ಆದರೆ ಸಿಪಿವೈ ಅದಕ್ಕೆ ಒಪ್ಪಿಲ್ಲ. ಬಿಜೆಪಿ ಚಿಹ್ನೆಯಿಂದ ಸ್ಪರ್ಧೆಗೆ ಬಿಗಿಪಟ್ಟು ಹಿಡಿದಿದ್ದಾರೆಂದು ಮೂಲಗಳು ತಿಳಿಸಿವೆ.
ಮಂಡ್ಯ: ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಚನ್ನಪಟ್ಟಣ (Channapatna) ಜೆಡಿಎಸ್ ಭದ್ರಕೋಟೆ ಅನ್ನೋದು ದೆಹಲಿ ಮಟ್ಟದಲ್ಲೂ ಗೊತ್ತಿದೆ. ನ್ಯಾಯಯುತವಾಗಿ ಚರ್ಚೆ ಮಾಡೋದಾದ್ರೆ ಚನ್ನಪಟ್ಟಣ ಟಿಕೆಟ್ ನಮಗೆ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದರು.
ಮಂಡ್ಯದ (Mandya) ಪಾಂಡವಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಗೊಂದಲ ಏನು ಇಲ್ಲ. ಯೋಗೇಶ್ವರ್ ಸಹ ನಿಲ್ಲಬೇಕು ಅಂತಾ ಹೇಳ್ತಾರೆ. ನ್ಯಾಯಯುತವಾಗಿ ಚರ್ಚೆ ಮಾಡೋದಾದ್ರೆ ಚನ್ನಪಟ್ಟಣ ನಮಗೆ ಬರಬೇಕು. ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ (BJP Candidate) ಘೋಷಣೆ ಮಾಡಿದ್ದಾರೆ. ಚನ್ನಪಟ್ಟಣ ವಿಚಾರದಲ್ಲಿ ನಮ್ಮ ಪಕ್ಷದ ಪರವಾಗಿ ನಿರ್ಧಾರ ಮಾಡಬೇಕು. ಅದೇ ನಿಟ್ಟಿನಲ್ಲಿ ಚರ್ಚೆಯಾಗುತ್ತಿದೆ. ಇಂದು ಈ ಬಗ್ಗೆ ಸಭೆ ಇದೆ. ಇಂದೇ ಅಭ್ಯರ್ಥಿ ಘೋಷಣೆ ಆಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಹಲವು ವರ್ಷಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ರೆಡ್ಡಿ-ರಾಮುಲು
ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ:
ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಟಿಕೆಟ್ ಸಮಸ್ಯೆ ಇಲ್ಲ. ಕಳೆದ ಎರಡು ಬಾರಿ ಚನ್ನಪಟ್ಟಣದಲ್ಲಿ ನಾನು ಪ್ರತಿನಿಧಿಸಿದ್ದೇನೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿ ಮಟ್ಟದಲ್ಲಿ ಗೊತ್ತಿದೆ. ಮೂರು ಉಪಚುನಾವಣೆ ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಪಡೆ ಇದೆ. ಗೆಲ್ಲುವ ದೃಷ್ಟಿಯಿಂದ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಟ್ಟುಕೊಟ್ಟೆವು. ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಆ ರೀತಿ ಔದಾರ್ಯ ಅವರ ಕಡೆಯಿಂದಲೂ ಬರಬೇಕು ಎನ್ನುತ್ತಾ ಪರೋಕ್ಷವಾಗಿ ಸಿಪಿವೈ ಜೆಡಿಎಸ್ ಚಿಹ್ನೆಯಡಿ ನಿಲ್ಲಲಿ ಎಂದು ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ಸರೋಜಕ್ಕ ಸಾಕ್ಷಾತ್ ಅನ್ನಪೂರ್ಣೇಶ್ವರಿ ಆಗಿದ್ದರು: ನಟ ಸುದೀಪ್ ತಾಯಿ ನಿಧನಕ್ಕೆ ಬೊಮ್ಮಾಯಿ ಸಂತಾಪ
ನಮ್ಮಲ್ಲಿ ಒಡಕು ಮೂಡಲಿ ಅಂತ ಕಾಂಗ್ರೆಸ್ ಭಕಪಕ್ಷಿ ರೀತಿ ಕಾಯ್ತಿದೆ:
ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸುತ್ತಿರುವ ವಿಚಾರ ಕುರಿತು ಮಾತನಾಡಿದ ಹೆಚ್ಡಿಕೆ, ನಾಮಪತ್ರ ಸಲ್ಲಿಸುವ ವಿಚಾರ ನನ್ನೊಂದಿಗೆ ಚರ್ಚೆಯಾಗಿಲ್ಲ. ನನ್ನ ಮುಂದೆ ಆ ಕುರಿತು ಪ್ರಸ್ತಾಪವೂ ಬಂದಿಲ್ಲ. ಮಾಧ್ಯಮಗಳಲ್ಲಿ ವರದಿ ಬಂದಿರುವುದನ್ನು ನೋಡಿದ್ದೇನೆ. ಕಾಂಗ್ರೆಸ್ ನಾಯಕರನ್ನ ಭೇಟಿ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗ್ತಾರೆ ಎಂಬ ವಿಚಾರ 15 ದಿವಸದಿಂದ ಓಡಾಡ್ತಿದೆ. ಕಾಂಗ್ರೆಸ್ ನವರು ತಮ್ಮ ಪಕ್ಷಕ್ಕೆ ಕರೆದುಕೊಂಡು ಹೋಗಿ ನಿಲ್ಲಿಸಲು ಕಾಯ್ತಿದ್ದಾರೆ. ನಮ್ಮಲ್ಲಿ ಒಡಕು ಮೂಡಲಿ ಎಂದು ಭಕಪಕ್ಷಿ ರೀತಿ ಕಾಯ್ತಿದ್ದಾರೆ. ಸ್ವತಂತ್ರವಾಗಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕ್ತಿದ್ದಾರೆ. ಅಂತಹ ಅವಕಾಶ ಕಲ್ಪಿಸಬಾರದೆಂದು ತಾಳ್ಮೆಯಲ್ಲಿದ್ದೇನೆ. ಇನ್ನೂ 4 ದಿನ ಇದೆ, ಕೂತು ಚರ್ಚೆ ಮಾಡ್ತೇವೆ ಎಂದು ತಿಳಿಸಿದ್ದಾರೆ.
ಮಾಜಿ ಸಂಸದ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುರೇಶ್ ಸಂಸ್ಕೃತಿಯ ಬಗ್ಗೆ ನಾನು ಮಾತಡಲ್ಲ. ಅವರು ಏನೇ ಚರ್ಚೆ ಮಾಡಿದ್ರೂ ನನಗೆ ಸಂಬಂಧ ಇಲ್ಲ. ಜನರು ಬಹುನಿರೀಕ್ಷೆ ಇಟ್ಟು ಕಾಂಗ್ರೆಸ್ಗೆ ಬಹುಮತ ನೀಡಿದ್ದಾರೆ. ಕಾಂಗ್ರೆಸ್ಗೆ 136 ಸೀಟ್ಗಳನ್ನು ಕೊಟ್ಟಿರೋದು ನಿಜ. ಈ ಕಾಂಗ್ರೆಸ್ ರಾಜ್ಯದಲ್ಲಿ ಯಾವ ರೀತಿ ಕೆಲಸ ಮಾಡ್ತಾ ಇದೆ. ದಿನವೂ ಒಂದೊಂದು ಅಕ್ರಮಗಳು ಬೆಳಕಿಗೆ ಬರ್ತಾ ಇವೆ. ಸಿಎಂ ನನಗೆ ಮಣ್ಣಿನ ಮೇಲೆ ಆಸೆ ಇಲ್ಲ ಅಂತಾ ಪದೇ ಪದೇ ಹೇಳ್ತಾರೆ. ಈಗ ಒಂದೊಂದೇ ಉದುರುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಮುಂದೆ ಏನು ಬೇಕಾದರೂ ಆಗಬಹುದಾಗಿದೆ ಎಂದು ಭವಿಷ್ಯ ನುಡಿದರು.
ನನಗೆ 5 ವರ್ಷದ ಪೂರ್ಣ ಬಹುಮತದ ಸರ್ಕಾರ ಜನರು ನೀಡಬಹುದು ಎಂಬ ವಿಶ್ವಾಸವಿದೆ. ನಾನು ವಿಶ್ವಾಸ ಇಟ್ಟುಕೊಳ್ಳಲು ಅವರ ಪರ್ಮಿಷನ್ ತಗೋ ಬೇಕಾ? 5 ವರ್ಷದ ಸರ್ಕಾರ ಬಂದ್ರೆ ನನದ್ದೇ ಆದ ಅಭಿವೃದ್ಧಿ ಕೆಲಸಗಳು ಇವೆ. ಜನರ ಸಮಸ್ಯೆ ಬಗೆಹರಿಸಲು ಕಾರ್ಯಕ್ರಮ ಹಾಕಿಕೊಂಡಿದ್ದೇನೆ. ನಮ್ಮ ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಕರ್ನಾಟಕ ಸಂಪದ್ಬರಿತವಾದ ರಾಜ್ಯ. ಆದ್ರೆ ಈಗ ಸರ್ಕಾರದ ದುಡ್ಡು ಪೋಲು ಮಾಡ್ತಾ ಇದ್ದಾರೆ. ಇದಕ್ಕೆ ಕಡಿವಾಣ ಹಾಕಿ ಜನರ ನೆಮ್ಮದಿ ಬದುಕಿಗಾಗಿ ನನಗೆ ಅವಕಾಶ ನೀಡುತ್ತಾರೆ ಎನ್ನೋದು ತಪ್ಪಾ? ನನ್ನ ಮಾತಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನನ್ನ ತೀರ್ಮಾನದಲ್ಲೂ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹುಬ್ಬಳ್ಳಿ: ಚುನಾವಣೆ ಸ್ಪರ್ಧೆ ಮುಖ್ಯವಲ್ಲ. ಗೆಲುವು ಮುಖ್ಯ. ಸಿ.ಪಿ ಯೋಗೇಶ್ವರ್ (C P Yogeshwar) ಚನ್ನಪಟ್ಟಣದಲ್ಲಿ ಗೆಲ್ಲುವ ಅಭ್ಯರ್ಥಿ. ಚನ್ನಪಟ್ಟಣದಲ್ಲಿ ಅವರಿಗೆ ಗೆಲುವಿನ ವಾತಾವರಣವಿದೆ ಅವರೇ ಎನ್ಡಿಎ ಅಭ್ಯರ್ಥಿಯಾಗಬೇಕು ಎನ್ನುವ ಮೂಲಕ ಸಿಪಿವೈ ಪರ ವಿಧಾನಸಭಾ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಮತ್ತೆ ಬ್ಯಾಟಿಂಗ್ ಮಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಯೋಗೇಶ್ವರ್ ಮೇಲೆ ಜನರ ಪ್ರೀತಿ, ಅನುಕಂಪವಿದೆ. ಕುಮಾರಸ್ವಾಮಿ ಅವರು ಅತ್ಯಂತ ಪ್ರಬುದ್ಧ ರಾಜಕಾರಣಿ. ಅವರು ಅತ್ಯುತ್ತಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕುಮಾರಸ್ವಾಮಿ ಬಳಿಕ ಅಲ್ಲಿ ಎನ್ಡಿಎಯಿಂದ ಹೊಸ ಅಭ್ಯರ್ಥಿ ಆಗಬೇಕು. ಈ ಹಿಂದೆ ಕುಮಾರಸ್ವಾಮಿ ಮತ್ತು ಡಾ. ಮಂಜುನಾಥ್ ಚುನಾವಣೆಯಲ್ಲಿ ಯೋಗೇಶ್ವರ್ ಒಳ್ಳೆಯ ಕಾರ್ಯ ಮಾಡಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸಿಪಿವೈಗೆ ಟಿಕೇಟ್ ನೀಡುವ ಭರವಸೆ ಇದೆ ಎಂದರು. ಇದನ್ನೂ ಓದಿ: ಸುದೀಪ್ ಸರ್ನ ನೋಡೋಕೆ ಆಗುತ್ತಿಲ್ಲ: ಲಹರಿ ವೇಲು
ಮುಡಾ ವಿಚಾರವಾಗಿ ಸಿಎಂ ಕುಣಿಕೆ ಗಟ್ಟಿಯಾಗುತ್ತಿದೆ ಇನ್ನೂ ಕೆಲವೇ ದಿನದಲ್ಲಿ ಸಿಎಂ ರಾಜಿನಾಮೆ ನೀಡುತ್ತಾರೆ. ಜಿ ಪರಮೇಶ್ವರ್ (G Parameshwar) ಅವರು ಸಿಎಂ ಅವರನ್ನು ಮೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಪರವಾಗಿ ಮಾತನಾಡಿ ಅವರ ಅನುಗ್ರಹದಿಂದ ಸಿಎಂ ಆಗುವ ಆಸೆಯಲ್ಲಿದ್ದಾರೆ. ಈಗಾಗಲೇ ಪರಮೇಶ್ವರ್ ಸಿಎಂ ಸೀಟ್ಗೆ ಟೆವಲ್ ಹಾಕಿದ್ದಾರೆ. ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಎಂಬಿ ಪಾಟೀಲ್, ಪರಮೇಶ್ವರ್, ಸತೀಶ್ ಜಾರಕಿಹೊಳಿ ಸಿಎಂ ರೇಸ್ನಲ್ಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ.. ಅವರಿಗೆ ಯಾರು ಬೇಕೋ ಹೆಸರು ಘೋಷಣೆ ಮಾಡ್ತಾರೆ: ಬಿಎಸ್ವೈ
ಭರತ್ ಬೊಮ್ಮಾಯಿ (Bharath Bommai) ಅವರಿಗೆ ಟಿಕೇಟ್ ನೀಡಿದ್ದು ಕುಟುಂಬ ರಾಜಕೀಯ ಅಲ್ಲಾ. ಸ್ಥಳೀಯ ಕಾರ್ಯಕರ್ತರೇ ಭರತ್ ಅವರನ್ನಾ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ರಾಜಾಭವನ ದಾಸ ಶಿಗ್ಗಾಂವಿಯಲ್ಲಿ ಪ್ರವಾಸ ಮಾಡಿ ಎಲ್ಲರ ಅಭಿಪ್ರಾಯ ಪಡೆದೇ ಭರತ್ ಹೆಸರು ಅಂತಿಮಗೊಳಿಸಿದ್ದಾರೆ. ಉಪಚುನಾವಣೆಯಲ್ಲಿ ಗೆಲುವು ಅವಶ್ಯಕತೆ ಇದೆ. ಹೀಗಾಗಿ ಜನರ ಅಭಿಪ್ರಾಯದಿಂದ ಅಭ್ಯರ್ಥಿ ಆಯ್ಕೆ ಅಂತಿಮವಾಗಿದೆ. ಆದರೆ ಕಾಂಗ್ರೆಸ್ನಲ್ಲಿ ತಮ್ಮ ಕುಟುಂಬದಲ್ಲೆ ನಾಮಿನೇಟ್ ಮಾಡುತ್ತಾರೆ. ಅದು ಕುಟುಂಬ ರಾಜಕೀಯ. ನಮ್ಮ ಪಕ್ಷದಲ್ಲಿ ಜನರ ಅಭಿಪ್ರಾಯ ಪಡೆಯತ್ತಾರೆ. ನಮ್ಮದು ಪ್ರಜಾಪ್ರಭುತ್ವ ಪಕ್ಷ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಲ್ಲಿ ರೈಲು ಹಳಿ ತಪ್ಪಿಸಲು ಸಂಚು? – ಹಳಿಗಳ ಮೇಲೆ ಕಲ್ಲುಗಳನ್ನಿಟ್ಟು ದುಷ್ಕರ್ಮಿಗಳು ಪರಾರಿ
ಹುಬ್ಬಳ್ಳಿ ಗಲಭೆ ಕೇಸ್ಗಳಲ್ಲಿ ವಿವಿಧ ನ್ಯಾಯಾಲಯದಲ್ಲಿ 17 ಬಾರಿ ಜಾಮೀನು ಅರ್ಜಿ ವಜಾ ಆಗಿತ್ತು. ಸಾಕಷ್ಟು ಬಾರಿ ಸುಪ್ರೀಂ ಕೋರ್ಟ್ನಲ್ಲಿ ಸಹ ಜಾಮೀನು ಅರ್ಜಿ ವಜಾ ಆಗಿತ್ತು. ಗಲಭೆಯಲ್ಲಿ ರಾಷ್ಟ್ರೀಯ ಭದ್ರತಾ ವಿಚಾರ ಸಹ ಕೇಳಿ ಬಂದಿತ್ತು. ಹೀಗಾಗಿ ಇದರಲ್ಲಿ ಎನ್ಐಎ ಪ್ರವೇಶ ಆಗಿತ್ತು. ಇಂತಹ ಕೇಸ್ಗಳನ್ನು ಸರ್ಕಾರ ವಾಪಸ್ ಪಡೆದು ಗಂಭೀರ ತಪ್ಪು ಮಾಡುತ್ತಿದೆ ಎಂದು ಹರಿಯಾಯ್ದರು. ಇದನ್ನೂ ಓದಿ: ಕಲಬುರಗಿ ಜೈಲಿನೊಳಗೆ ಗುಟ್ಕಾ, ಬೀಡಿ, ಪಾನ್ ಮಸಾಲಾ ಸಾಗಣೆ ಯತ್ನ
ಹುಬ್ಬಳ್ಳಿ: ನಾವು ಗೆಲ್ಲಬೇಕು ಅಂದ್ರೆ ಯೋಗೇಶ್ವರ್ ( C P Yogeshwar) ಅವರಿಗೆ ಟಿಕೆಟ್ ಕೊಡಬೇಕು. ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಮನಸ್ಸಿನಲ್ಲಿ ಯೋಗೇಶ್ವರ್ ಅಭ್ಯರ್ಥಿ ಆಗಬೇಕು ಅನ್ನೋ ಆಸೆ ಇದೆ. ಅವರೇ ಚನ್ನಪಟ್ಟಣ ಅಭ್ಯರ್ಥಿ ಆಗಬೇಕು. ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ ಆಗಬೇಕು. ನಮ್ಮೆಲ್ಲರಿಗೂ ಯೋಗೇಶ್ವರ್ ಅವರನ್ನೇ ಅಭ್ಯರ್ಥಿ ಮಾಡಬೇಕು ಅನ್ನೋ ಒತ್ತಾಯ ಇದೆ. ನಾವೆಲ್ಲ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡುತ್ತೇವೆ. ಅಂತಿಮವಾಗಿ ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ. ಹಾಗೇ ನೋಡಿದರೆ ಕುಮಾರಸ್ವಾಮಿ ಅವರೇ ಯೋಗಿಶ್ವರ್ ಅವರನ್ನು ಕರೆದು ಟಿಕೇಟ್ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಮುಡಾ ಕೇಸ್ನಲ್ಲಿ ಹಣಕಾಸು ವಹಿವಾಟು ನಡೆದಿಲ್ಲ, ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ: ಡಿ.ಕೆ.ಸುರೇಶ್
ನಾನು ಶಿಗ್ಗಾಂವಿ ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ (Basavaraj Bommai) ಕುಟುಂಬಕ್ಕೆ ಅವಕಾಶ ಕೊಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ಬೊಮ್ಮಾಯಿ ಬದ್ಧವಾಗಿರಬೇಕು. ಹೈಕಮಾಂಡ್ ಕೂಡಾ ಎಲ್ಲ ಆಯಾಮಗಳಲ್ಲಿ ಸರ್ವೆ ಮಾಡಿದೆ. ಕೋರ್ ಕಮಿಟಿಯಿಂದ ಮೂರ್ನಾಲ್ಕು ಹೆಸರು ಹೋಗಿರುವ ಬಗ್ಗೆ ಮಾಹಿತಿ ಇದೆ. ಪಕ್ಷ ಅಂದ ಮೇಲೆ ಭಿನ್ನಾಭಿಪ್ರಾಯ ಸಹಜ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ
ರಾಮನಗರ: ಚನ್ನಪಟ್ಟಣ ಟಿಕೆಟ್ ಗೊಂದಲ ಸದ್ಯಕ್ಕೆ ಬಗೆಹರಿಯುವುದು ಅನುಮಾನ. ‘ದೋಸ್ತಿ’ ಪಾಳಯದಲ್ಲಿನ ರಾಜಕೀಯ ಚಟುವಟಿಕೆ ಗಮನಿಸಿದರೆ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ (C.P.Yogeshwar) ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಗಟ್ಟಿಯಾಗಿದೆ. ಡಿ.ಕೆ.ಶಿವಕುಮಾರ್ ಜೊತೆಗಿನ ಮುನಿಸಿನಿಂದ ಕಾಂಗ್ರೆಸ್ ಸೇರ್ಪಡೆ ಹಾದಿ ಮತ್ತಷ್ಟು ಕಠಿಣವಾದಂತೆ ಭಾಸವಾಗುತ್ತಿದೆ.
ಮುಹೂರ್ತಕ್ಕೂ ಮುನ್ನ ಚನ್ನಪಟ್ಟಣ (Channapatna) ಉಪಚುನಾವಣಾ ಕಣ ರಂಗೇರಿದ್ದು, ದೋಸ್ತಿ ಪಾಳಯದಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಒಂದು ಕಡೆ ಹೆಚ್.ಡಿ.ಕುಮಾರಸ್ವಾಮಿ ವರ್ಸಸ್ ಸಿ.ಪಿ.ಯೋಗೇಶ್ವರ್ ಮಧ್ಯೆ ಜಟಾಪಟಿ ನಡೆಯುತ್ತಿದೆ. ಇನ್ನೊಂದು ಕಡೆ ಬಿಜೆಪಿಯಲ್ಲಿ ಯೋಗೇಶ್ವರ್ ಪರ-ವಿರೋಧಿ ಬಣ ಸೃಷ್ಟಿಯಾಗಿದೆ. ಇತ್ತ ಬಿಜೆಪಿ ಹೈಕಮಾಂಡ್ ಅಂಗಳದಲ್ಲಿ ಟಿಕೆಟ್ ಇತ್ಯರ್ಥ ಪೆಂಡಿಂಗ್ ಉಳಿದಿದೆ. ಟಿಕೆಟ್ ಕಾದಾಟಕ್ಕೆ ದೋಸ್ತಿ ಪಾಳಯ 3 ದಿಕ್ಕು 3 ಬಾಗಿಲು ಎಂಬಂತಾಗಿದೆ. ಇದನ್ನೂ ಓದಿ: ಚನ್ನಪಟ್ಟಣ ಕೈವಶಕ್ಕೆ ಡಿಸಿಎಂ ರಣತಂತ್ರ; ಒಂದೇ ವೇದಿಕೆಯಲ್ಲಿ ಡಿಕೆಶಿ-ಸಿಪಿವೈ ಸಮಾಗಮ
ಹೆಚ್ಡಿಕೆ ವಿಶ್ವಾಸಗಳಿಸಿ ಟಿಕೆಟ್ ಪಡೆಯಲು ಯೋಗೇಶ್ವರ್ ವಿಫಲರಾದರಾ ಎಂಬ ಮಾತು ಕೇಳಿಬರುತ್ತಿದೆ. ವರಿಷ್ಠರ ಮಟ್ಟದಲ್ಲಿ ಟಿಕೆಟ್ ಗಿಟ್ಟಿಸಲು ಸಿಪಿವೈ ಸಮರ ಶುರು ಮಾಡಿದ್ದಾರೆ. ಟಿಕೆಟ್ ಸಿಗದಿದ್ದರೆ ಬಂಡಾಯ ಸ್ಪರ್ಧೆಗೂ ಸೈ ಎಂಬ ಸಂದೇಶ ರವಾನೆ ಮಾಡಿದ್ದಾರೆ. ಎನ್ಡಿಎ ಅಭ್ಯರ್ಥಿ ಮಾಡಿ, ಇಲ್ಲ ಪಕ್ಷೇತರ ಅಭ್ಯರ್ಥಿಯಾಗ್ತೇನೆ ಎಂದಿದ್ದಾರೆ. ದೆಹಲಿಗೆ ಹೋಗಿ ಬಂದ ನಂತರ ನಿನ್ನೆ ಡಿಕೆಶಿ ಜತೆ ವೇದಿಕೆ ಹಂಚಿಕೊಂಡಿದ್ದರು. ಆ ಮೂಲಕ ಯಾವುದೇ ನಡೆಗೂ ರೆಡಿ ಎನ್ನುವ ಸಂದೇಶ ಕೊಟ್ಟಿದ್ದರು.
ಚನ್ನಪಟ್ಟಣ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ನಡೆ ಕುತೂಹಲ ಮೂಡಿಸಿದೆ. ಮೈತ್ರಿ ಧರ್ಮ ಪಾಲನೆ ಮಾಡುತ್ತಾ ಎಂಬ ಪ್ರಶ್ನೆ ಮೂಡಿದೆ. ಬಿಜೆಪಿಯಲ್ಲಿ ಸಿಪಿವೈ ಪರ ಒಂದು ಬಣದಿಂದ ಟಿಕೆಟ್ಗೆ ಒತ್ತಾಯ ಕೇಳಿಬರುತ್ತಿದೆ. ಸಿಪಿವೈಗೆ ಟಿಕೆಟ್ ಕೊಡುವಂತೆ ಬಿಜೆಪಿ ಉಪಚುನಾವಣೆ ಸಮಿತಿ ಶಿಫಾರಸು ಮಾಡಿದೆ. ಬಿ.ವೈ ವಿಜಯೇಂದ್ರ ಮಾತ್ರ ಸಿಪಿವೈಗೆ ಟಿಕೆಟ್ ವಿಚಾರದಲ್ಲಿ ಮೌನವಹಿಸಿದ್ದಾರೆ. ಹೆಚ್ಡಿಕೆ ಕಾರಣಕ್ಕೆ ಟಿಕೆಟ್ ವಿಚಾರದಲ್ಲಿ ಮೌನವಾಗಿದ್ದಾರೆ. ಮೈತ್ರಿ ಪಾಲನೆ ಹಿನ್ನೆಲೆ ಹೈಕಮಾಂಡ್ ತೀರ್ಮಾನಿಸಲಿ ಎಂಬ ನಿಲುವು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ: ಯೋಗೇಶ್ವರ್
ಚನ್ನಪಟ್ಟಣ ಟಿಕೆಟ್ ಪಡೆಯಬೇಕು ಎಂದು ಜೆಡಿಎಸ್ ನಾಯಕರು ಹಠ ಹಿಡಿದಿದ್ದಾರೆ. ಮುಖಂಡರ ಮಾತು ಧಿಕ್ಕರಿಸಿ ಕೇಂದ್ರ ಸಚಿವ ಹೆಚ್ಡಿಕೆ ಮೈತ್ರಿ ಪಾಲನೆ ಮಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ.
ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್ ಮತ್ತು ಸಿಪಿ ಯೋಗೇಶ್ವರ್ ಅಕ್ಕಪಕ್ಕ ಕುಳಿತಿದ್ದರೂ ಪರಸ್ಪರರು ಮಾತನಾಡಲಿಲ್ಲ. ತಮ್ಮನ ಸೋಲನ್ನು ಡಿಕೆಶಿ ಇನ್ನೂ ಮರೆತಿಲ್ಲವೇ ಎಂಬ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್ಗೆ ಬಂಡಾಯ ಸ್ಪರ್ಧೆಯೇ ಗಟ್ಟಿ ಎಂಬಂತಾಗಿದೆ. ಕಾಂಗ್ರೆಸ್ ಸೇರ್ಪಡೆ ಹಾದಿ ಮತ್ತಷ್ಟು ಕಠಿಣವಾಗಿದೆ.
ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ (channapatna ByElection) ಸ್ವತಂತ್ರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ ಯೋಗೇಶ್ವರ್ (CP Yogeshwar) ಬೆಂಬಲಿಗರು ಆಯೋಜಿಸಿದ್ದ ಸಮಾನ ಮನಸ್ಕರ ಸಮಾವೇಶ ಅಂತಿಮ ಕ್ಷಣದಲ್ಲಿ ರದ್ದಾಗಿದೆ.
ಯೋಗೇಶ್ವರ್ ಅಭಿಮಾನಿ ಬಳಗ ಮತ್ತು ಸಮಾನ ಮನಸ್ಕರ ವೇದಿಕೆ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ‘ನಮ್ಮ ಶಾಸಕ ನಮ್ಮ ಹಕ್ಕು’ ಹೆಸರಿನಲ್ಲಿ ಸಮಾವೇಶ ಹಮ್ಮಿಕೊಂಡಿತ್ತು. ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೇ, ಸ್ವತಂತ್ರ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಮುಂದಾಗಿದ್ದ ಸಿಪಿವೈಗೆ ಭಾನುವಾರ (ಇಂದು) ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಇದನ್ನೂ ಓದಿ: Tungabhadra Dam | 3 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ ಹರಿಸಿದ್ರೆ 4 ಜಿಲ್ಲೆಗಳಿಗೆ ಅಪಾಯ!
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ತದಲ್ಲಿ ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಯೋಗೇಶ್ವರ್ ರನ್ನ ದೆಹಲಿಗೆ ಕರೆಸಿರೋ ಬಿಜೆಪಿ ನಾಯಕರು ಟಿಕೆಟ್ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪೌರತ್ವ ತಿದ್ದುಪಡಿ ಕಾಯ್ದೆ | ರಾಜ್ಯದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ
ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಪಕ್ಷದಿಂದ ಕಣಕ್ಕಿಳಿಯಲು ಬಯಸಿದ್ದ ಯೋಗೇಶ್ವರ್ ಅವರಿಗೆ ಮೈತ್ರಿ ನಾಯಕರಿಂದ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುವ ಉದ್ದೇಶದಿಂದ ಬೃಹತ್ ಸಮಾವೇಶ ನಡೆಸಿ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದರು. ಇದೀಗ ಹೈಕಮಾಂಡ್ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ಯೋಗೇಶ್ವರ್ ದೆಹಲಿಗೆ ತೆರಳಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್ ಹಬ್ಬಕ್ಕಿಂದು ಅದ್ಧೂರಿ ತೆರೆ – ಭಾರತದ ಧ್ವಜಧಾರಿಯಾಗಲಿದ್ದಾರೆ ಮನು ಭಾಕರ್