Tag: ಸಿ ಪುಟ್ಟರಂಗಶೆಟ್ಟಿ

  • ವರುಣಾ, ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ: ಪುಟ್ಟರಂಗಶೆಟ್ಟಿ

    ವರುಣಾ, ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ: ಪುಟ್ಟರಂಗಶೆಟ್ಟಿ

    ಚಾಮರಾಜನಗರ: ವರುಣಾ (Varuna) ಹಾಗೂ ಚಾಮರಾಜನಗರ (Chamarajanagar) ಎರಡೂ ಕಡೆ ನಾವೇ ಗೆಲ್ಲುತ್ತೇವೆ. ಅವರು ಏನೇ ತಂತ್ರಗಾರಿಕೆ ಮಾಡಿದರೂ ನಾವು ತಕ್ಕ ಉತ್ತರ ಕೊಡುತ್ತೇವೆ ಎಂದು ಚಾಮರಾಜನಗರ ಕಾಂಗ್ರೆಸ್ (Congress) ಅಭ್ಯರ್ಥಿ, ಶಾಸಕ ಪುಟ್ಟರಂಗಶೆಟ್ಟಿ (C.Puttarangashetty) ಹೇಳಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನವೇ ಪುಟ್ಟರಂಗಶೆಟ್ಟಿ ಬಿರುಸಿನ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಸೋಮಣ್ಣನವರಿಗೆ (V.Somanna) ಬಿಜೆಪಿ (BJP) ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಪುಲ್ ಆ್ಯಕ್ಟಿವ್ ಆಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಅಭಿವೃದ್ಧಿ, ಸೋಮಣ್ಣನವರದ್ದು ಬರೀ ಮಾತು. ಅವರು ಸುಳ್ಳು ಹೇಳಿಕೊಂಡು ರಾಜಕಾರಣ (Politics) ಮಾಡುತ್ತಾರೆ. ಸೋಮಣ್ಣ ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ? ಯಾವ ಮುಖ ಇಟ್ಟುಕೊಂಡು ವೋಟ್ ಕೇಳುತ್ತಾರೆ? ಎಂದು ಟೀಕಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೊಂದು ಬಿಜೆಪಿ ವಿಕೆಟ್ ಪತನ 

    ಚಾಮರಾಜನಗರ ಜಿಲ್ಲೆಯಲ್ಲಿ ಅತಿವೃಷ್ಟಿಯಾಯಿತು. ಉಸ್ತುವಾರಿ ಸಚಿವರಾಗಿ ಎಷ್ಟು ಅನುದಾನ ತಂದಿದ್ದಾರೆ ಎಂದು ಸೋಮಣ್ಣ ಹೇಳಲಿ ಎಂದು ಸವಾಲು ಹಾಕಿದರು. ಅಷ್ಟೇ ಅಲ್ಲದೇ ನಾಲ್ಕನೇ ಬಾರಿಯೂ ನಾನೇ ಆಯ್ಕೆಯಾಗುತ್ತೇನೆ. ಸರ್ಕಾರವೂ ನಮ್ಮದೇ ಬರುತ್ತದೆ. ಅದರಲ್ಲಿ ಎರಡನೇ ಮಾತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿ ಆಥಿತ್ಯ ಸ್ವೀಕರಿಸ್ತೀವಿ, ಮಿಲ್ಟ್ರಿ ಹೋಟೆಲ್ ಊಟಾನೂ ಮಾಡ್ತೀವಿ – ಅಶ್ವಥ್‌ ನಾರಾಯಣ್‌

  • ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಪುಟ್ಟರಂಗಶೆಟ್ಟಿ, ರಾಜು ಗೌಡಗೆ ಕೊರೊನಾ

    ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಪುಟ್ಟರಂಗಶೆಟ್ಟಿ, ರಾಜು ಗೌಡಗೆ ಕೊರೊನಾ

    ಚಾಮರಾಜನಗರ/ಯಾದಗಿರಿ: ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಮತ್ತು ಶಾಸಕ ರಾಜುಗೌಡ ಅವರಿಗೆ ಇಂದು ಕೊರೊನಾ ದೃಢವಾಗಿದೆ.

    ಕಳೆದ ಒಂದು ವಾರದಿಂದ ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಎರಡು ದಿನಗಳ ಹಿಂದೆಯಷ್ಟೇ ಸ್ವಕ್ಷೇತ್ರಕ್ಕೆ ಹಿಂತಿರುಗಿದ್ದರು. ನೆಗಡಿ ಹಾಗೂ ಮೈ-ಕೈ ನೋವಿನ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಇಂದು ಪರೀಕ್ಷೆ ಮಾಡಿಸಿಕೊಂಡ ವೇಳೆ ಕೋವಿಡ್ ದೃಢಪಟ್ಟಿದೆ. ಶಾಸಕರ ಚಾಲಕ ಹಾಗೂ ಗನ್ ಮ್ಯಾನ್ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬರಬೇಕಿದೆ.


    ಸುರಪುರ ಬಿಜೆಪಿ ಶಾಸಕ ರಾಜುಗೌಡ ಸಹ ಕಳೆದ ಹಲವು ದಿನಗಳಿಂದ ಮಸ್ಕಿಯ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಇಂದು ಸೋಂಕು ತಗುಲಿದ್ದು ಖಚಿತವಾಗಿದೆ. ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಕೆಲ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಚಿಕಿತ್ಸೆಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

    ಎರಡು ದಿನಗಳ ಹಿಂದೆ ಮಸ್ಕಿ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೂ ಸೋಂಕು ತಗುಲಿದ್ದು, ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಮಂಗಳವಾರ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಕಣ್ಣೇ ಅದಿರಿಂದಿ ಖ್ಯಾತಿಯ ಗಾಯಕಿ ಮಂಗ್ಲಿ ಪ್ರಚಾರ ನಡೆಸಿದ್ದರು.

    ಕೊರೊನಾ ಸೊಂಕು ಒಂದೆಡೆ ಹೆಚ್ಚಾಗುತ್ತಿದೆ. ರಾಜಕೀಯ ಅನೇಕ ನಾಯಕರುಗಳಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಇಂದು ಕಾಣಿಸಿಕೊಂಡಿದೆ. ಸಂಪರ್ಕದಲ್ಲಿ ಇರುವವರಿಗೆ ಕೊರೊನಾ ಪರೀಕ್ಷೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

  • ವಾರಕ್ಕೊಮ್ಮೆಯಾದ್ರೂ ಮದ್ಯದಂಗಡಿ ತೆರೆಯಿರಿ – ಶಾಸಕ ಪುಟ್ಟರಂಗಶೆಟ್ಟಿ ಒತ್ತಾಯ

    ವಾರಕ್ಕೊಮ್ಮೆಯಾದ್ರೂ ಮದ್ಯದಂಗಡಿ ತೆರೆಯಿರಿ – ಶಾಸಕ ಪುಟ್ಟರಂಗಶೆಟ್ಟಿ ಒತ್ತಾಯ

    – ಮಹಿಳೆಯರಿಂದಲೇ ಕಳ್ಳಭಟ್ಟಿ ದಂಧೆ

    ಚಾಮರಾಜನಗರ: ಲಾಕ್‍ಡೌನ್ ಹಿನ್ನೆಲೆಯಲ್ಲಿ ಮದ್ಯದಂಗಡಿಗಳನ್ನು ಮುಚ್ಚಿರುವುರದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಕಳ್ಳಭಟ್ಟಿ ದಂಧೆ ಹೆಚ್ಚಾಗುತ್ತಿದೆ ಎಂದು ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೆಡೆ ಮಹಿಳೆಯರೇ ಕಳ್ಳಭಟ್ಟಿ ತಯಾರಿಕೆಯಲ್ಲಿ ತೊಡಗಿದ್ದಾರೆ. ಹೀಗೆ ಬಿಟ್ಟರೆ ಅಪಾಯ ಎದುರಾಗಲಿದ್ದು, ಕಳ್ಳಭಟ್ಟಿ ದಂಧೆಗೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

    ಮದ್ಯದಂಗಡಿ ಮುಚ್ಚಿರುವುದರಿಂದ ಸರ್ಕಾರಕ್ಕೆ ಬರುವ ಆದಾಯದಲ್ಲಿ ಖೋತಾ ಆಗುತ್ತಿದೆ. ಅಲ್ಲದೆ ಮದ್ಯ ಮಾರಾಟದ ಕಳ್ಳದಂಧೆ ನಡೆಯುತ್ತಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಸರ್ಕಾರ ಹಸಿರು ವಲಯದಲ್ಲಿರುವ ಚಾಮರಾಜನಗರ ಜಿಲ್ಲೆಯಲ್ಲಿ ವಾರಕ್ಕೊಮ್ಮೆ ಮದ್ಯದಂಗಡಿ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಳ್ಳದಾರಿಗಳಲ್ಲಿ ಮದ್ಯ ಮಾರಾಟ ಆಗುತ್ತಿದೆ. ಮದ್ಯದಂಗಡಿಗಳು ಮುಚ್ಚಿದ್ದರೂ ಹೇಗೆ ಮದ್ಯ ಮಾರಾಟ ಆಗುತ್ತಿದೆ. ಒಂದಕ್ಕೆ ಹತ್ತು ಪಟ್ಟು ಹಣ ನೀಡಿ ಜನ ಮದ್ಯ ಸೇವಿಸುತ್ತಿದ್ದಾರೆ ಎಂದು ತಿಳಿಸಿದರು.

    ಕಾಳಸಂತೆಯಲ್ಲಿ ಲೋಕಲ್ ಮದ್ಯಕ್ಕೂ 500, 600 ರೂಪಾಯಿಗಳಾಗಿದೆ. ಮದ್ಯದಂಗಡಿಗಳನ್ನು ಬಂದ್ ಮಾಡಿದ್ದ ಮೇಲೆ ಕಾಳಸಂತೆಯಲ್ಲಿ ಹೇಗೆ ದೊರೆಯುತ್ತಿದೆ? ಬಂದ್ ಮಾಡುವಾಗ ವಿಡಿಯೋ ರೆಕಾರ್ಡ್ ಮಾಡಲಾಗಿದೆಯೇ? ನಿಯಮಾನುಸಾರ ಸೀಲ್ ಮಾಡಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲಿಸಬೇಕು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಆಗ್ರಹಿಸಿದ್ದಾರೆ.

  • ಪಬ್ಲಿಕ್ ಚಾಲೆಂಜ್ ಸ್ವೀಕರಿಸಿದ ಶಾಸಕ – 8 ಸಾವಿರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

    ಪಬ್ಲಿಕ್ ಚಾಲೆಂಜ್ ಸ್ವೀಕರಿಸಿದ ಶಾಸಕ – 8 ಸಾವಿರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

    ಚಾಮರಾಜನಗರ: ಲಾಕ್‍ಡೌನ್ ಸಂದರ್ಭದಲ್ಲಿ ಅನೇಕರು ಬಡವರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ಗಡಿ ಜಿಲ್ಲೆ ಚಾಮರಾಜನಗರ ಕ್ಷೇತ್ರದ ಶಾಸಕ, ಮಾಜಿ ಸಚಿವ ಪಬ್ಲಿಕ್ ಟಿವಿ ಚಾಲೆಂಜ್ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಲಾಕ್‍ಡೌನ್ ನಡುವೆ ಕ್ಷೇತ್ರದ ಜನತೆಗೆ ಸಹಾಯ ಹಸ್ತ ಚಾಚುವ ಕೆಲಸಕ್ಕೆ ಮುಂದಾಗಿದ್ದಾರೆ.

    ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಬಡವರು, ನಿರ್ಗತಿಕರಿಗೆ ಆಹಾರ ಸಮಸ್ಯೆ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಆಹಾರದ ಕಿಟ್ ವಿತರಿಸಿದ್ದಾರೆ. ಸುಮಾರು ಎಂಟು ಸಾವಿರ ಬಡ ಕುಟುಂಬಗಳಿಗೆ ವೈಯಕ್ತಿಕವಾಗಿ ಆಹಾರ ಧಾನ್ಯ ವಿತರಿಸಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಬಡವರಿಗೆ ಅಕ್ಕಿ ವಿತರಿಸುತ್ತಿದೆ. ಆದರೆ ಉಳಿದ ಪದಾರ್ಥಗಳಿಗೆ ಜನರು ಪರದಾಡುವಂತಾಗಿದೆ. ಇದನ್ನು ಮನಗಂಡ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಕ್ಕಿ, ಬೇಳೆ, ಅವರೆಕಾಳು, ಹುರುಳಿ ಕಾಳು, ಹಲಸಂದೆ, ಅಡುಗೆ ಎಣ್ಣೆ, ಸಕ್ಕರೆ, ಟೀ ಪುಡಿ, ಉಪ್ಪು ಸೇರಿದಂತೆ ಅತ್ಯಗತ್ಯ ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಿ ಬಡವರಿಗೆ ಹಂಚುತ್ತಿದ್ದಾರೆ.

    ಒಂದೂವರೆ ಸಾವಿರಕ್ಕೂ ಹೆಚ್ಚು ಬುಡಕಟ್ಟು ಸೋಲಿಗರು ಸೇರಿದಂತೆ ಎಂಟು ಸಾವಿರ ಬಡ ಕೂಲಿಕಾರ್ಮಿಕ ಕುಟುಂಬಗಳಿಗೆ ಅವರು ಆಹಾರ ಧಾನ್ಯ ವಿತರಿಸಿದ್ದಾರೆ. ನನಗೆ ಪ್ರಚಾರ ಬೇಡ, ಕ್ಷೇತ್ರದ ಜನರ ಹಿತ ಕಾಯವುದು ನನ್ನ ಧರ್ಮ. ಜನರ ಕಷ್ಟಸುಖಗಳಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

  • ಗ್ರಾಮೀಣ ಪ್ರದೇಶದ ರಸ್ತೆ ದೇಶದ ಅಭಿವೃದ್ಧಿಗೆ ಸೂಚಿಸುತ್ತದೆ: ಶಾಸಕ ಸಿ.ಪುಟ್ಟರಂಗಶೆಟ್ಟಿ

    ಗ್ರಾಮೀಣ ಪ್ರದೇಶದ ರಸ್ತೆ ದೇಶದ ಅಭಿವೃದ್ಧಿಗೆ ಸೂಚಿಸುತ್ತದೆ: ಶಾಸಕ ಸಿ.ಪುಟ್ಟರಂಗಶೆಟ್ಟಿ

    ಚಾಮರಾಜನಗರ: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ಧಿ ದೇಶದ ಪ್ರಗತಿಯನ್ನು ಸೂಚಿಸುತ್ತಿವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ವ್ಯಾಖ್ಯಾನಿಸಿದರು.

    ಚಾಮರಾಜನಗರ ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಎಸ್.ಇ.ಪಿ. ಹಾಗೂ ಟಿ.ಎಸ್.ಪಿ, ಯೋಜನೆಡಿಯಲ್ಲಿ, ಕಾವೇರಿ ನೀರಾವರಿ ನಿಗಮದಿಂದ ಮಲ್ಲಯ್ಯನಪುರ ಗ್ರಾಮದ ಪರಿಶಿಷ್ಟ ಜಾತಿ ಬಡಾವಣೆಯ ಬೀದಿಗೆ ಅಂದಾಜು ಮೊತ್ತ 7 ಲಕ್ಷ ರೂ., ಬಸವಾಪುರ ಗ್ರಾಮದ ಪರಿಶಿಷ್ಟ ಪಂಗಡದ ನಾಯಕರ ಬಡಾವಣೆಯ ಬೀದಿಗೆ 10 ಲಕ್ಷ ರೂ., ಹೊಂಗಲವಾಡಿ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ 10 ಲಕ್ಷ ರೂ., ಸಿದ್ದಯ್ಯನಪುರ ಗ್ರಾಮದ ಪರಿಶಿಷ್ಟ ಬಡಾವಣೆಯ ಬೀದಿಗೆ 20 ಲಕ್ಷ ರೂ.ಗಳಲ್ಲಿ ಸಿ.ಸಿ.ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

    ಭೂಮಿ ಪೂಜೆ ನಂತರ ಮಾತನಾಡಿದ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ಅಗತ್ಯವಾಗಿ ಬೇಕಾದ ರಸ್ತೆ, ಚರಂಡಿ, ಸಮುದಾಯ ಭವನ, ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲಾಗುತ್ತಿದೆ. ಇಂದು ಪರಿಶಿಷ್ಟ ಜಾತಿ ಬಡಾವಣೆ ಹಾಗೂ ಪರಿಶಿಷ್ಟ ಪಂಗಡದ ಬಡಾವಣೆಗೆಯ ಸಿ.ಸಿ.ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದರು. ಈ ವೇಳೆ ಕಾಮಗಾರಿ ನಿರ್ವಹಿಸುತ್ತಿರುವ ಇಂಜಿನಿಯರ್ ಗುತ್ತಿಗೆದಾರರು ಗುಣಮಟ್ಟದಿಂದ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

  • ಯಾವುದೇ ತನಿಖೆಗೂ ಸಿದ್ಧ, ನನ್ನ ವಿರುದ್ಧ ಷಡ್ಯಂತ್ರ: ಪುಟ್ಟರಂಗಶೆಟ್ಟಿ

    ಯಾವುದೇ ತನಿಖೆಗೂ ಸಿದ್ಧ, ನನ್ನ ವಿರುದ್ಧ ಷಡ್ಯಂತ್ರ: ಪುಟ್ಟರಂಗಶೆಟ್ಟಿ

    ಚಾಮರಾಜನಗರ: ವಿಧಾನದಸೌಧದ ತಮ್ಮ ಕಚೇರಿಯಲ್ಲಿ ಸಿಬ್ಬಂದಿ ಬಳಿ ಹಣ ಸಿಕ್ಕಿರುವ ಹಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ, ಈ ಪ್ರಕರಣದ ಬಗ್ಗೆ ಯಾವುದೇ ತನಿಖೆಗೂ ಸಿದ್ಧ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

    ಉಪ್ಪಿನಮೋಳೆಯ ನಿವಾಸದಲ್ಲಿ ಮಾತನಾಡಿದ ಅವರು, ಶುಕ್ರವಾರ ಸಂಜೆ ತನ್ನ ಕೊಠಡಿಯಿಂದ ಬಂದ ವ್ಯಕ್ತಿ ಬಳಿ ಹಣ ಪತ್ತೆಯಾದ ವಿಚಾರ ಗೊತ್ತಾಯಿತು. ಹಣದ ಸಮೇತ ಸಿಕ್ಕಿ ಬಿದ್ದರುವ ಮೋಹನ ಎಂಬಾತ ನನ್ನ ಪಿಎ ಅಲ್ಲ. ಆತ ಟೈಪಿಸ್ಟ್, ಆತನ ಮುಖವನ್ನು ನಾನು ನೋಡಿಲ್ಲ. ನನಗೆ ಈ ಹಿಂದೆ ಮಂಜುನಾಥ ಹಾಗೂ ಕೃಷ್ಣಪ್ಪ ಎಂಬ ಪಿಎಗಳಿದ್ದರು. ಮಂಜುನಾಥ್ ಎಂಬಾತ ನನ್ನ ಸಹಿಯನ್ನೇ ಫೋರ್ಜರಿ ಮಾಡಿದ್ದ. ಕೃಷ್ಣಪ್ಪನ ಮೇಲೂ ನನಗೆ ಅನುಮಾನವಿತ್ತು ಇವರಿಬ್ಬರನ್ನು ಬೆಳಗಾವಿ ಅಧಿವೇಶನದ ಬಳಿಕ ಕೆಲಸದಿಂದ ತೆಗೆದುಹಾಕಿದ್ದೆ. ಹಾಗಾಗಿ ಇವರಿಬ್ಬರ ಮೇಲೆ ನನಗೆ ಅನುಮಾನವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಧಾನಸೌಧದ ಪಶ್ಚಿಮ ಗೇಟ್‍ನಲ್ಲಿ ಸಿಕ್ತು ಕಂತೆ ಕಂತೆ ಹಣ – ಸಚಿವರ ಕಚೇರಿ ಟೈಪಿಸ್ಟ್ ಬಳಿಯೇ ಹಣ ಪತ್ತೆ!

    ಶುಕ್ರವಾರ ನನ್ನ ಕಚೇರಿಗೆ ಕೃಷ್ಣಪ್ಪ ಬಂದಿದ್ದ ಎಂಬ ಮಾಹಿತಿ ಇದೆ. ಅವನೇಕೆ ಬಂದಿದ್ದ ಎಂಬ ಅನುಮಾನ ಕಾಡುತ್ತಿದೆ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಯಾವುದೇ ತನಿಖೆ ಎದುರಿಸಲು ಸಿದ್ಧನಾಗಿದ್ದೇನೆ. ನನ್ನನ್ನು ಸಿಲುಕಿಸಲು ಪಿತೂರಿ ನಡೆದಿದೆ. ವಿಧಾನಸೌಧದಲ್ಲಿ ಅತ್ಯಂತ ಬಿಗಿ ಪೊಲೀಸ್ ಭದ್ರತೆಯಿದೆ. ಸಿಸಿಟಿವಿ ಇದೆ. ಹೀಗಿದ್ದರೂ ವಿಧಾನಸೌಧದ ಒಳಗಡೆ ಹಣ ಹೋಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

    ಕಳೆದ ದಿನ ವಿಧಾನ ಸೌಧದ ಪಶ್ಚಿಮ ಗೇಟ್ ಬಳಿ ಕಾರು ಪರಿಶೀಲನೆ ನಡೆಸುತ್ತಿದ್ದ ವೇಳೆ ಮೋಹನ್ ಎಂಬಾತನ ಬಳಿ ಸುಮಾರು 25.76 ಲಕ್ಷ ರೂ. ಹಣ ಪತ್ತೆಯಾಗಿತ್ತು. ಮೋಹನ್ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಟೈಪಿಸ್ಟ್ ಎನ್ನುವ ಪ್ರಾಥಮಿಕ ಮಾಹಿತಿ ಲಭಿಸಿತ್ತು. ಬಳಿಕ ಹಣ ಪತ್ತೆಯಾದ ಕೂಡಲೇ ಮೋಹನ್ ನನ್ನು ವಶಕ್ಕೆ ಪಡೆದು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದ್ದು, ಹಣದ ಮೂಲದ ಕುರಿತು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂಪುಟದ ನಾಲ್ವರು ಹಾಲಿ ಸಚಿವರಿಗೆ ಕೈ ನಾಯಕರಿಂದ ಕೋಕ್?

    ಸಂಪುಟದ ನಾಲ್ವರು ಹಾಲಿ ಸಚಿವರಿಗೆ ಕೈ ನಾಯಕರಿಂದ ಕೋಕ್?

    ಬೆಳಗಾವಿ: ಸಂಪುಟ ವಿಸ್ತರಣೆಯಲ್ಲಿ ನಮಗೂ ಸಚಿವ ಸ್ಥಾನ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿರುವುದರಿಂದ ನಾಲ್ವರು ಹಾಲಿ ಶಾಸಕರನ್ನು ಕೈ ಬಿಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಈ ಮೂಲಕ ಡಿಸೆಂಬರ್ 22ರಂದು ನಡೆಯುವುದು ಸಂಪುಟ ವಿಸ್ತರಣೆಯೋ? ಅಥವಾ ಪುನರಚನೆಯೋ ಎನ್ನುವ ಪ್ರಶ್ನೆ ಶುರುವಾಗಿದೆ. ಸಂಪುಟ ಪುನರ್ ರಚನೆ ಮಾಡುವಂತೆ ಕಾಂಗ್ರೆಸ್‍ನ ಕೆಲವು ಹಿರಿಯ ಶಾಸಕರ ಪಟ್ಟು ಹಿಡಿದಿದ್ದಾರಂತೆ. ಹೀಗಾಗಿ ಅವರ ಒತ್ತಡಕ್ಕೆ ಮಣಿದ ನಾಯಕರು, ನಾಲ್ವರು ಸಚಿವರ ಹೆಸರನ್ನು ಮಂತ್ರಿಗಿರಿಯಿಂದ ಕೈಬಿಡುವ ಪಟ್ಟಿಗೆ ಸೇರಿಸಿದ್ದಾರೆ ಎನ್ನಲಾಗಿದೆ.

    ಯಾರೆಲ್ಲ ಸಂಪುಟದಿಂದ ಔಟ್:
    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್.ಶಂಕರ್, ಕಾರ್ಮಿಕ ಸಚಿವ ವೆಂಕಟರಮಣಪ್ಪ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರನ್ನು ಸಂಪುಟದಿಂದ ಕೈಬಿಡುವ ನಿರ್ಧಾರವನ್ನು ಕೈ ನಾಯಕರು ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಮಂತ್ರಿಗಳ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಕಳುಹಿಸಲಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿ ಮಾಹಿತಿ ಲಭಿಸಿದೆ.

    ಸಂಪುಟ ಪುನಾರಚನೆಯ ಕುರಿತು ಡಿಸೆಂಬರ್ 21ರಂದು ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಚರ್ಚೆ ನಡೆಸಿ ಯಾರಿಗೆ ಮಂತ್ರಿಗಿರಿ ನೀಡಬೇಕು ಎನ್ನುವ ಕುರಿತು ಸುದೀರ್ಘ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

    ಸಂಪುಟ ವಿಸ್ತರಣೆ ವಿಚಾರ ಹೊರ ಬೀಳುತ್ತಿದ್ದಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಕೂಡ್ಲಿಗಿ ಶಾಸಕ ನಾಗೇಂದ್ರ ಸೇರಿದಂತೆ ಅನೇಕರು ಮಂತ್ರಿಗಿರಿಗಾಗಿ ಲಾಭಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಬಣದ ನಾಯಕರ ಮೂಲಕ ಹೈಕಮಾಂಡ್ ಮಟ್ಟದಲ್ಲಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೀವು ಹೀಗೆ ಮಾಡೋದ್ರಿಂದ ಜನ ನಮಗೆ ಬೈತಾರೆ: ಅಧಿಕಾರಿಗಳಿಗೆ ಪುಟ್ಟರಂಗಶೆಟ್ಟಿ ಕ್ಲಾಸ್

    ನೀವು ಹೀಗೆ ಮಾಡೋದ್ರಿಂದ ಜನ ನಮಗೆ ಬೈತಾರೆ: ಅಧಿಕಾರಿಗಳಿಗೆ ಪುಟ್ಟರಂಗಶೆಟ್ಟಿ ಕ್ಲಾಸ್

    ಚಾಮರಾಜನಗರ: ಹಾಸ್ಟೆಲ್‍ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಚಳಿ ಬಿಡಿಸಿದ್ದಾರೆ.

    ನಗರದ ಪಾಲಿಟೆಕ್ನಿಕ್ ಕಾಲೇಜು ಹಾಸ್ಟೆಲ್‍ಗೆ ಸಚಿವ ಪುಟ್ಟರಂಗಶೆಟ್ಟಿ ಇಂದು ದಿಢೀರನೆ ಭೇಟಿ ನೀಡಿದ್ದಾರೆ. ಅಲ್ಲಿನ ಅವ್ಯವಸ್ಥೆ ಕಣ್ಣಾರೆ ಕಂಡ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸುವಂತೆ ಸೂಚನೆ ನೀಡಿದರು.

    ಅಧಿಕಾರಿಗಳ ಸಭೆಗೆ ಹಾಜರಾಗುತ್ತಿದ್ದಂತೆ ಒಬ್ಬೊರನ್ನೇ ಕರೆದು ಫುಲ್ ಕ್ಲಾಸ್ ತೆಗೆದುಕೊಂಡರು. ಹಾಸ್ಟೆಲ್‍ಗಳನ್ನು ಸರಿಯಾಗಿ ಯಾಕೆ ನಿರ್ವಹಿಸುತ್ತಿಲ್ಲ? ಸರ್ಕಾರದಿಂದ ಲಕ್ಷಾಂತರ ರೂಪಾಯಿ ಅನುದಾನ ಬಂದಿರುತ್ತಿದೆ ಅಲ್ಲವೇ? ನೀವು ಹೀಗೆ ಮಾಡುವುದರಿಂದ ಜನ ನಮಗೆ ಬೈತಾರೆ. ನಿಮ್ಮ ಒಳ ಜಗಳದಿಂದ ವಿದ್ಯಾರ್ಥಿಗಳು ಎಲ್ಲಿಗೆ ಹೋಗಬೇಕು? ಕೂಡಲೇ ಸಮಸ್ಯೆಗಳನ್ನು ಸರಿಪಡಿಸಿ ಹಾಸ್ಟೆಲ್‍ಗಳಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಿಮಗೆ ಕೆಲಸ ನಿರ್ವಹಿಸಲು ಅಸಾಧ್ಯ ಎನ್ನುವುದಾದರೆ ನನಗೆ ಹೇಳಿ. ನಾವೇ ಜವಾಬ್ದಾರಿ ಹೊತ್ತುಕೊಳ್ಳುತ್ತೇವೆ. ಒಂದು ವೇಳೆ ಈ ಸಮಸ್ಯೆ ಹೀಗೆ ಮುಂದುವರಿದರೆ ನಿಮ್ಮ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

    ವಿವಿಧ ಹಾಸ್ಟೆಲ್‍ಗಳ ವಾರ್ಡನ್ ಗಳನ್ನು ಒಬ್ಬೊರನ್ನಾಗಿ ಕರೆದು ವಿಚಾರಿಸಿ ಕುಂದುಕೊರತೆ ಆಲಿಸಿದರು. ಇದೇ ವೇಳೆ ಅಧಿಕಾರಿಯೊಬ್ಬರಿಗೆ ತರಾಟೆ ತೆಗೆದುಕೊಂಡ ಸಚಿವರು, ನಿಮ್ಮಲ್ಲಿ ಇಂದಿಗೂ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡಿಲ್ಲ. ನೈಜ ಸಮಸ್ಯೆ ಏನು ಅಂತಾ ಪ್ರಶ್ನಿಸಿದರು. ಇದರಿಂದ ಎಚ್ಚೆತ್ತುಕೊಂಡ ಮಹಿಳೆ ಅಧಿಕಾರಿ, ವಿದ್ಯಾರ್ಥಿಗಳ ದಾಖಲಾತಿ ಪ್ರಾರಂಭಿಸುವುದಾಗಿ ತಿಳಿಸಿದರು. ಇದಕ್ಕೆ ಗುಡುಗಿದ ಪುಟ್ಟರಂಗಣಶೆಟ್ಟಿ ಅವರು, ಇನ್ನುಮುಂದೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿಡಿಯೋ: ಚಪ್ಪಲಿ ಹಾಕೋದ್ದಕ್ಕೂ ಪಿಎ ಇಟ್ಟುಕೊಂಡ ಸಚಿವ ಸಿ.ಪುಟ್ಟರಂಗಶೆಟ್ಟಿ!

    ವಿಡಿಯೋ: ಚಪ್ಪಲಿ ಹಾಕೋದ್ದಕ್ಕೂ ಪಿಎ ಇಟ್ಟುಕೊಂಡ ಸಚಿವ ಸಿ.ಪುಟ್ಟರಂಗಶೆಟ್ಟಿ!

    ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ತುಂಬಾ ಸರಳ ವ್ಯಕ್ತಿ ಎಂದೇ ಹೆಸರಾದವರು. ಆದರೆ ಯಾಕೋ ಸಚಿವರಾದ ನಂತರ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರಾ ಎನ್ನುವ ಅನುಮಾನ ಎದ್ದಿದೆ.

    ಇಂದು ಚಾಮರಾಜನಗರದಲ್ಲಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಸಿ. ಪುಟ್ಟರಂಗಶೆಟ್ಟಿಗೆ ಅವರು ತಮ್ಮ ಚಪ್ಪಲಿಯನ್ನು ಬಿಟ್ಟು ಎತ್ತಿನಗಾಡಿ ಏರಿದ್ದರು. ಎತ್ತಿನಗಾಡಿಯನ್ನು ಚಾಲನೆ ಮಾಡಿದ ನಂತರ ಅವರು ಕೆಳೆಗಿಳಿದು ನಡೆದು ಬರುತ್ತಿದ್ದಂತೆ ಅವರ ಆಪ್ತ ಸಹಾಯಕ ಪುಟ್ಟರಂಗಶೆಟ್ಟಿಗೆ ಚಪ್ಪಲಿ ತಂದು ತೊಡಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸಚಿವ ಸಿ. ಪುಟ್ಟರಂಗಶೆಟ್ಟಿ ಸೌಜನ್ಯಕ್ಕಾದರೂ ಚಪ್ಪಲಿ ತೊಡಿಸುವ ತಮ್ಮ ಆಪ್ತ ಸಹಾಯಕನಿಗೆ ಬೇಡ ಎನ್ನದೇ ಸರ್ವಾಧಿಕಾರಿಯಂತೆ ಚಪ್ಪಲಿ ತೊಡಿಸಿಕೊಂಡು ಏನೂ ಆಗಿಲ್ಲವಂತೆ ನಡೆದು ಮುಂದೆ ಸಾಗಿದ್ದಾರೆ.

    ಈ ದೃಶ್ಯವನ್ನು ನೋಡಿದ ಜನ ಶಾಸಕರಾಗಿದ್ದಾಗ ತುಂಬ ಸರಳವಾಗಿದ್ದ ಪುಟ್ಟರಂಗ ಶೆಟ್ಟಿ ಇದೀಗ ಸಚಿವರಾದ ಬಳಿಕ ಅಲ್ಪನಿಗೆ ಐಶ್ವರ್ಯ ಬಂದ ಹಾಗೆ ನಡೆದುಕೊಳ್ಳುತ್ತಿದ್ದಾರೆ ಎಂದು ಮಾತನಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=lPjIVJAvrF8&feature=youtu.be

  • ಒಂದು ಸಲ ಬಿಜೆಪಿಯವ್ರಿಗೆ ಬೈದಿದ್ದೆ, ಆಗಿಂದ ಅವರು ನನ್ನ ತಂಟೆಗೆ ಬರಲ್ಲ- ಸಿ ಪುಟ್ಟರಂಗಶೆಟ್ಟಿ

    ಒಂದು ಸಲ ಬಿಜೆಪಿಯವ್ರಿಗೆ ಬೈದಿದ್ದೆ, ಆಗಿಂದ ಅವರು ನನ್ನ ತಂಟೆಗೆ ಬರಲ್ಲ- ಸಿ ಪುಟ್ಟರಂಗಶೆಟ್ಟಿ

    ಚಾಮರಾಜನಗರ: ನಾನು ಸಚಿವನಾಗುವ ಮೊದಲು ಬಿಜೆಪಿಯವರು ನನ್ನನ್ನು ಬಾ ಎಂದು ಕರೆಯುತ್ತಿದ್ದರು. ಆಗ ನಾನು ಅವರಿಗೆ ಬೈದಿದ್ದೆ. ಆ ಬಳಿಕದಿಂದ ಬಿಜೆಪಿಯವರು ನನ್ನ ತಂಟೆಗೆ ಬರೋದನ್ನ ಬಿಟ್ಟು ಬಿಟ್ಟಿದ್ದಾರೆ ಎಂದು ಸಚಿವ ಸಿ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಅವರು ಮಾಡಿದ್ದ ಆಪರೇಷನ್ ಕಮಲದಿಂದ ಸಾಕಷ್ಟು ಶಾಸಕರು ಪಾಠ ಕಲಿತಿದ್ದಾರೆ. ಹೀಗಿರುವಾಗ ಮತ್ತೆ ಬಿಜೆಪಿ ಜೊತೆ ಯಾವೊಬ್ಬ ಶಾಸಕನೂ ಹೋಗಲ್ಲ. ವಿರೋಧ ಪಕ್ಷ ಇರುವುದೇ ಏನಾದ್ರು ಕೆದಕೋಕೆ ಹಾಗಾಗಿ ಕೆದಕುತ್ತಿದ್ದಾರೆ. ನಮ್ಮ ಈ ಸಮ್ಮಿಶ್ರ ಸರ್ಕಾರ ಯಾವುದೇ ಅಡೆತಡೆಗಳಿಲ್ಲದೇ ಐದು ವರ್ಷ ಸುಭದ್ರ ಸ್ಥಿತಿಯಲ್ಲಿ ಆಡಳಿತ ನಡೆಸುತ್ತದೆ ಎಂದು ತಿಳಿಸಿದರು.

    ಜಾರಕಿಹೊಳಿ ಬ್ರದರ್ಸ್ ಕೂಡ ದೊಡ್ಡ ಮುಖಂಡರು, ಎಲ್ಲರಿಗೂ ಇದ್ದ ಹಾಗೆ ಅವರಿಗೂ ಅಧಿಕಾರದ ದಾಹ ಇದೆ. ಅವರು ಡಿಸಿಎಂ ಕೊಡಿ ಎಂದು ಕೂತಿದ್ದಾರೆ. ಅವರು ಹಾಗಂತ ಹೇಳಿದ ಮಾತ್ರಕ್ಕೆ ಕೂಡಲೇ ಕೊಡುವುದಕ್ಕೆ ಆಗುವುದಿಲ್ಲ. ನಮ್ಮಲ್ಲಿ ಸಮನ್ವಯ ಸಮಿತಿ ಇದೆ ಹೈಕಮಾಂಡ್ ಇದೆ ಅವರೆಲ್ಲರೂ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಮ್ಮ ದೋಸ್ತಿ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ದಸರಾ ವಿಚಾರದಲ್ಲಿ ಇದ್ದ ಗೊಂದಲಗಳನ್ನು ಈಗಾಗಲೇ ಬಗೆಹರಿದಿದೆ. ಜಿಟಿ ದೇವೇಗೌಡ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವ ಪುಟ್ಟರಂಗಶೆಟ್ಟಿ ಮಾತನಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv