Tag: ಸಿ.ಸಿ.ಪಾಟೀಲ

  • ಜನರ ಆರೋಗ್ಯದ ಹಿತದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಅವಶ್ಯಕ: ಸಚಿವ ಸಿ.ಸಿ.ಪಾಟೀಲ್

    ಜನರ ಆರೋಗ್ಯದ ಹಿತದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಅವಶ್ಯಕ: ಸಚಿವ ಸಿ.ಸಿ.ಪಾಟೀಲ್

    ಗದಗ: ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು 10 ದಿನಗಳ ಕಾಲ ನೈಟ್‌ ಕರ್ಫ್ಯೂ ವಿಧಿಸಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

    night curfew

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾರ್ ಆ್ಯಂಡ್ ರೆಸ್ಟೋರೆಂಟ್, ಪಬ್, ಕ್ಲಬ್, ಹೋಟೆಲ್‌ಗಳಲ್ಲಿ ಜನಜಂಗುಳಿ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಸ್ಥಳವಕಾಶ ನೀಡಿ ಆದೇಶಿಸಿದ್ದಾರೆ. ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗದುಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

    ಕೋವಿಡ್ 1 ಮತ್ತು 2ನೇ ಅಲೆಯಲ್ಲಿ ಸ್ನೇಹಿತರು, ಹಿತೈಷಿಗಳು ಮತ್ತು ಕುಟುಂಬಕ್ಕೆ ಆಧಾರಸ್ತಂಭವಾಗಿದ್ದವರನ್ನು ಕಳೆದುಕೊಂಡ ದುಃಖದ ಪರಿಸ್ಥಿತಿಯನ್ನು ಕಣ್ಣಾರೆ‌ ಕಂಡಿದ್ದೇವೆ. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸಬಾರದು. ಹೀಗಾಗಿ ಮುಖ್ಯಮಂತ್ರಿಗಳು ಜಾರಿ ಮಾಡಿರುವ ಆದೇಶವನ್ನು ನಾವೆಲ್ಲರೂ ತಪ್ಪದೇ ಪಾಲಿಸೋಣ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸೋಣ. ಜನಜೀವನಕ್ಕೆ ಹಾನಿಯಾಗದಂತೆ 3ನೇ ಅಲೆ ನಿಯಂತ್ರಿಸುವಲ್ಲಿ ಯಶಸ್ವಿಯಾಗೋಣ. ಸಾರ್ವಜನಿಕರು ಸರ್ಕಾರದ ಆದೇಶ ಪಾಲಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ: ಹಂಸಲೇಖ

  • ಅಭಿನವ ಶ್ರೀ ನಮಗೆ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು: ಸಿಸಿ ಪಾಟೀಲ್

    ಅಭಿನವ ಶ್ರೀ ನಮಗೆ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು: ಸಿಸಿ ಪಾಟೀಲ್

    ಬೆಂಗಳೂರು: ನಮ್ಮ ನಾಡಿನ ಧಾರ್ಮಿಕ, ಶಿಕ್ಷಣ, ಸಾಮಾಜಿಕ ಸೇವೆ, ಸಾಹಿತ್ಯ, ಸಂಸ್ಕøತಿ ಮತ್ತು ಕೃಷಿ ಕ್ಷೇತ್ರಗಳಿಗೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಗದಗ ಜಿಲ್ಲೆಯ ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಶ್ರೀ ಸಂಗನಬಸವ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿರುವುದು ನನಗೆ ಮತ್ತು ನನ್ನಂತಹ ಅಪಾರ ಭಕ್ತರಿಗೆ ತೀವ್ರ ದುಃಖ ಉಂಟು ಮಾಡಿದೆ. ಅಗಲಿದ ಈ ಮಹಾನ್ ಚೇತನಕ್ಕೆ ಭಗವಂತನು ಚಿರಶಾಂತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದರು.

    ಇತ್ತೀಚೆಗಷ್ಟೇ ನಾನು ಹಾಲಕೆರೆ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಿ ಶ್ರೀಗಳ ಆಶೀರ್ವಾದವನ್ನು ಪಡೆದುಕೊಂಡು ಕೃತಾರ್ಥನಾಗಿದ್ದೆ. ಅನೇಕ ಸಂಕಷ್ಟದ ಸಂದರ್ಭಗಳಲ್ಲಿ ಅವರು ನಮಗೆಲ್ಲಾ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು. ಈಗ ಅವರಿಲ್ಲದಿದ್ದರೂ ಅವರು ಹಾಕಿಕೊಟ್ಟ ಮೇಲ್ಪಂಕ್ತಿ, ಆದರ್ಶ, ಮೌಲ್ಯ, ಜೀವನ ಸಿದ್ಧಾಂತಗಳೇ ನಮ್ಮ ಬಾಳಿಗೆ ಬೆಳಕಾಗಬಲ್ಲವು ಎಂದು ನಾನು ನಂಬುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

    ಶ್ರೀಗಳ ತತ್ವಾದರ್ಶಗಳನ್ನು ನಾವೆಲ್ಲ ನಮ್ಮ ನಡೆನುಡಿಗಳಲ್ಲಿ ಶ್ರದ್ಧೆಯಿಂದ ಪಾಲಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜವಾದ ಶ್ರದ್ಧಾಂಜಲಿ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

    ಹಾಲಕೆರೆ, ಅನ್ನದಾನೇಶ್ವರ ಮಠ, ಕೊಟ್ಟೂರು ಮಠ, ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆ ಮುಂತಾದ ಅನೇಕ ಧಾರ್ಮಿಕ ಕೇಂದ್ರಗಳನ್ನು ಮತ್ತು ಇತರ ಸಾಮಾಜಿಕ ಶೈಕ್ಷಣಿಕ ಸಂಸ್ಥೆಗಳನ್ನು ಬೆಳೆಸಿದ, ನಮ್ಮ ನಡುವಿನ ನಡೆದಾಡುವ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುತ್ತಿದ್ದ ಶ್ರೀಗಳು, ಹಲವಾರು ಮಾದರಿ ಕೃಷಿ ಜಾಗೃತಿ ಚಟುವಟಿಕೆಗಳನ್ನು ನಡೆಸಿ ರೈತಬಂಧು ಎಂದೇ ಖ್ಯಾತರಾಗಿದ್ದರು. ತಮ್ಮ ಜೀವನದುದ್ದಕ್ಕೂ ಬಸವ ತತ್ವವನ್ನು ಆರಾಧಿಸಿ, ಅನುಷ್ಠಾನಗೊಳಿಸುವ ಮೂಲಕ ಅವರು ಅಮರರಾಗಿದ್ದಾರೆ. ಇದನ್ನೂ ಓದಿ:  ಮದುವೆ ಫೋಟೋ ಜೊತೆಗೆ ಭಾವನಾತ್ಮಕ ಸಾಲು ಬರೆದು ಶೇರ್ ಮಾಡಿ ಶಿಲ್ಪಾ ಶೆಟ್ಟಿ