Tag: ಸಿ.ಸಿ.ಪಾಟೀಲ್

  • ಜಿಲ್ಲೆಗಳಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸೂಚನೆ: ಸಿ.ಸಿ.ಪಾಟೀಲ್

    ಜಿಲ್ಲೆಗಳಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸೂಚನೆ: ಸಿ.ಸಿ.ಪಾಟೀಲ್

    ಬೆಂಗಳೂರು: ಕೈಗಾರಿಕೆಗಳ ಅಭಿವೃದ್ಧಿ ಬೆಂಗಳೂರಿನಲ್ಲಿ ಮಾತ್ರ ಆದರೆ ಸಾಲದು, ಜಿಲ್ಲೆಗಳಲ್ಲಿಯೂ ಸಹ ಕೈಗಾರಿಕೆಗಳು ಅಭಿವೃದ್ಧಿಯಾದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರು ತಿಳಿಸಿದರು. ಇದನ್ನೂ ಓದಿ: EFD ಸಂಸ್ಥೆಯಿಂದ ಪಬ್ಲಿಕ್ ಟಿವಿ ಜ್ಞಾನದೀವಿಗೆ ಟ್ಯಾಬ್ ವಿತರಣೆ

    ಇಂದು ವಿಕಾಸಸೌಧದಲ್ಲಿ ಹಮ್ಮಿಕೊಂಡಿದ್ದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗಾಗಿ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ಕೈಗಾರಿಕೆಗಳ ಅಭಿವೃದ್ಧಿಗಾಗಿ ಸರ್ಕಾರ ನೀಡುವ ಹಣ ಸದುಪಯೋಗವಾಗಬೇಕು. ವಿವಿಧ ಯೋಜನೆಯಡಿ ನೀಡಲಾದ ಪ್ರೋತ್ಸಾಹ ಧನ ಮತ್ತು ರಿಯಾಯಿತಿಗಳು ಸಮರ್ಪಕವಾಗಿ ಬಳಕೆಯಾಗಿದೆಯೇ ಅಥವಾ ಇಲ್ಲವೇ ಎಂಬುವುದರ ಬಗ್ಗೆ ಅಧಿಕಾರಿಗಳು ಕೈಗಾರಿಕೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ತೆಂಗು ರಫ್ತಿಗೆ ಅವಕಾಶ, ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರ: ಶೋಭಾ ಕರಂದ್ಲಾಜೆ

    ಸಹಾಯ ಧನ ಪಡೆದ ನಂತರ ಕೈಗಾರಿಕೆಗಳು ಸಮರ್ಪಕವಾಗಿ ನಡೆಯುತ್ತಿವೆಯೇ ಎಂಬುದರ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಕೇವಲ ಸಹಾಯಧನ ಪಡೆಯುವ ಸಲುವಾಗಿ ಅಥವಾ ಬೇನಾಮಿಯಾಗಿ ಅರ್ಜಿ ಸಲ್ಲಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಮೂರನೇ ಅಲೆ ಆತಂಕ ಆಮ್ಲಜನಕ ಉತ್ಪಾದನೆ ಪೂರೈಕೆ ಕುರಿತಂತೆ ಪ್ರಧಾನಿ ಸಭೆ

    ಎಂಎಸ್‍ಎಂಇ ಕೈಗಾರಿಕಾ ಘಟಕಗಳಿಗೆ ಕಳೆದ ಸಾಲಿನಲ್ಲಿ ಕೈಗಾರಿಕಾ ನೀತಿಯಡಿ ರೂ 114 ಕೋಟಿ ಸಹಾಯಧನ ಮತ್ತು ಕೃಷಿ ನೀತಿಯಡಿ ರೂ 165 ಕೋಟಿ ಸಹಾಯಧನ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಎಂಎಸ್‍ಇ ಸಿಡಿಪಿ ಕ್ಲಸ್ಟರ್ ಯೋಜನೆಗೆ ರೂ. 3.08 ಕೋಟಿ, ಕೆ.ಎಸ್.ಸಿ.ಸಿ.ಎಫ್.ಎಲ್, ಕೆ.ಎಸ್.ಸಿ.ಡಿಸಿ ಕಿಲ್ಟ್ ಕೃಪುಡ್ಸ್ ತರಬೇತಿ ವಿಚಾರ ಸಂಕಿರಣ ವೆಚ್ಚಕ್ಕೆ ರೂ 7.00 ಕೋಟಿ, ಮುಖ್ಯಮಂತ್ರಿಯವರ ಸ್ವಯಂ ಉದ್ಯೋಗ ಯೋಜನೆ ಸಹಾಯಧನ, ಕೆ.ಎಸ್.ಎಫ್.ಸಿ ಶೇಕಡ 6ರ ಬಡ್ಡಿ ಸಹಾಯಧನ, ಕೈಗಾರಿಕಾ ನೀತಿಯಡಿ ಪ್ರೋತ್ಸಹ ಮತ್ತು ರಿಯಾಯಿತಿಗಾಗಿ ರೂ 114.04 ಕೋಟಿ, ಖಾದಿ ಮತ್ತು ಗ್ರಾಮೋದ್ಯೋಗ ಸಣ್ಣ ಕೈಗಾರಿಕೆಗಳ ಉತ್ಪನ್ನಗಳ ಮೇಲಿನ ರಿಯಾಯಿತಿ ಎಂ.ಡಿ.ಎ ಮತ್ತು ಪ್ರೋತ್ಸಾಹ ಮಜೂರಿ ಸಹಾಯಧನಕ್ಕಾಗಿ ರೂ. 105.84 ಕೋಟಿ, ತೆಂಗಿನ ನಾರಿನ ವಲಯಕ್ಕೆ ನೆರವು ಕಲ್ಪಿಸಲು ತೆಂಗು ಭಾಗ್ಯ ಯೋಜನೆಯಡಿ ರೂ 10.00 ಕೋಟಿ, ಕರಕುಶಲ ಕಲೆಗೆ ಬೆಂಬಲ ನೀಡಲು ರಿಯಾಯಿತಿ ಸಹಾಯಧನಕ್ಕಾಗಿ ರೂ 1.00 ಕೋಟಿ ಕ್ಲಿಸ್ಟಕರ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ. 53.49 ಕೋಟಿ, ಅವೇಕ್ ಮುಂದುವರೆದ ಕಾಮಗಾರಿಗಳಿಗಾಗಿ ರೂ 2.00 ಕೋಟಿ, ರಾಯಚೂರು ಮತ್ತು ಗುಲ್ಬರ್ಗ ಜಿಲ್ಲೆಗಳಲ್ಲಿನ ಕಟ್ಟಡ ಕಾಮಗಾರಿಗಳ ವೆಚ್ಚಕ್ಕಾಗಿ ರೂ. 1.50 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟ – ಬಿಜೆಪಿ ಟೀಕೆ

    ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವರು ಕೆಲವು ಜಿಲ್ಲೆಗಳಲ್ಲಿ ಯೋಜನಾ ಪ್ರಗತಿ ಕುಟಿಂತವಾಗಿದ್ದು, ಮುಂದಿನ ದಿನಗಳಲ್ಲಿ ನಿಗಧಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ (ಎಂ.ಎಸ್.ಎಂಇ) ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, ನಿರ್ದೇಶಕರು (ಎಂಎಸ್‍ಎಂಇ) ಶ್ರೀಮತಿ ವಿನೋದ್ ಪ್ರಿಯ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಎಲ್ಲಾ ಜಿಲ್ಲೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಗುಟ್ಟಾಗಿ ಎರಡನೇ ಪುತ್ರನಿಗೆ ನಾಮಕರಣ ಮಾಡಿದ್ರಾ ಸ್ಟಾರ್ ದಂಪತಿ?

  • ಮುಂದಿನ ಸಿಎಂ ಬಗ್ಗೆ ಕಾಂಗ್ರೆಸ್ ಕಾಣುತ್ತಿರುವುದು ಹಗಲು ಕನಸು: ಸಚಿವ ಸಿ.ಸಿ.ಪಾಟೀಲ್

    ಮುಂದಿನ ಸಿಎಂ ಬಗ್ಗೆ ಕಾಂಗ್ರೆಸ್ ಕಾಣುತ್ತಿರುವುದು ಹಗಲು ಕನಸು: ಸಚಿವ ಸಿ.ಸಿ.ಪಾಟೀಲ್

    – ಹಗಲು ಬೀಳುವ ಕನಸು ತುಂಬಾನೇ ಡೇಂಜರ್

    ಗದಗ: ಮುಂದಿನ ಸಿಎಂ ನಾನೇ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಹಗಲು ಕನಸು ಕಾಣುತ್ತಿದ್ದಾರೆ. ಹಗಲು ಬೀಳುವ ಕನಸು ತುಂಬಾನೇ ಡೇಂಜರ್ ಎಂದು ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಇಲಾಖೆ ಸಚಿವ ಸಿ.ಸಿ ಪಾಟೀಲ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.

    ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದು ಕಡೆ ಸಿದ್ದರಾಮಯ್ಯ ಮತ್ತೊಂದು ಕಡೆ ಡಿಕೆಶಿ ನಾನೇ ಸಿಎಂ ಅಂತಿದ್ದಾರೆ. ರಾಜ್ಯದಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ. ಚುನಾವಣೆಗೆ ಇನ್ನೂ ಸಮಯ ಇದೆ. ಈಗಲೇ ಅವರಲ್ಲೆ ಕುಸ್ತಿ ಹಿಡದಿದ್ದು ನೋಡಿದರೆ ನಗಬೇಕೋ ಅಳಬೇಕೋ ತಿಳಿಯುತ್ತಿಲ್ಲ ಎಂದರು. ಸಿಎಂ ಆಗಬೇಕು ಅಂದರೆ ಬಿಜೆಪಿಯಲ್ಲಿ ಒಂದು ಸಿಸ್ಟಮ್ ಇದೆ. ಕಾಂಗ್ರೆಸ್ ನಲ್ಲಿ ಮತ್ತೊಂದು ಸಿಸ್ಟಮ್ ಇದೆ. ಬಿಜೆಪಿಯಲ್ಲಿ ಶಾಸಕರು ಒಟ್ಟಾಗಿ ಮುಖ್ಯಮಂತ್ರಿ ಆರಿಸುತ್ತೇವೆ. ಆದರೆ ಕಾಂಗ್ರೆಸ್ ನಲ್ಲಿ ಹಾಗಿಲ್ಲ. ಎದುರಾಳಿಯಿಂದ ಸಿಎಂ ಹೆಸರಿನ ಚೀಟಿ ಬರುತ್ತೆ. ಆ ಚೀಟಿಯಲ್ಲಿ ಯಾರ ಹೆಸರು ಇರುತ್ತದೆ ಎಂಬುವುದು ಯಾರಿಗೂ ಗೊತ್ತಿರಲ್ಲ. ಕನಸು ಕಾಣಬೇಕು, ಆದರೆ ಹಗಲು ಕನಸು ಭಾರೀ ಡೇಂಜರ್ ಎಂದರು.

    ಗದಗನ ಮಿರ್ಚಿ ಕಥೆ ಹೇಳಿ ಕಾಂಗ್ರೆಸ್ ನಾಯಕರಿಗೆ ಅಪಹಾಸ್ಯ ಮಾಡಿದರು. ತೋಂಟದಾರ್ಯ ಮಠದ ಸ್ವಾಮೀಜಿ ಈ ಹಿಂದೆ ಕಥೆಯೊಂದನ್ನು ಹೇಳುತ್ತಿದ್ದರು. ಅದೇನೆಂದರೆ, ಮಠದ ಎದುರಿಗೆ ಒಬ್ಬ ವ್ಯಕ್ತಿ ಕೂತು ಏನೋ ತಿಂದ ಹಾಗೆ ಮಾಡುತ್ತಿದ್ದನಂತೆ. ಸಾಕಾಗಿ ಒಂದೊಮ್ಮೆ ಸ್ವಾಮಿಗಳು ಆ ವ್ಯಕ್ತಿ ಕೇಳಿದರೆ, ಗದುಗಿನ ಮಿರ್ಚಿ ತಿಂದ ಹಾಗೇ ಸುಮ್ನೆ ಕಲ್ಪನೆ ಮಾಡುತ್ತಿದ್ದೇನೆ ಎಂದಿದ್ದನಂತೆ. ಆಗ ಸ್ವಾಮಿಜಿ ಹೇಳಿದರಂತೆ ತಿಂದ ಹಾಗೆ ಮಾಡುವುದಾದರೆ ಮಿರ್ಚಿ ಜೊತೆಗೆ ಧಾರವಾಡ ಪೇಡಾ ತಿನ್ನು. ಗೋಕಾಕ್ ಕರದಂಟು ತಿನ್ನು, ಬೆಳಗಾವಿ ಕುಂದಾ ತಿನ್ನು ಇಲ್ಲದಿರುವುದನ್ನು ಯಾಕೆ ಕಲ್ಪನೆ ಮಾಡಿಕೊತಿಯಾ ಅಂದರಂತೆ. ಹಾಗೇ ಕನಸು ಕಾಣೋದಾದರೆ ಪ್ರಧಾನ ಮಂತ್ರಿಯಾಗುವುದನ್ನು ಕಾಣಲಿ, ವಲ್ರ್ಡ್ ಬ್ಯಾಂಕ್ ಅಧ್ಯಕ್ಷ ಆಗುವುದನ್ನ ಕಾಣಲಿ, ಅದನ್ನು ಬಿಟ್ಟು ಮುಂದಿನ ಸಿಎಂಗಾಗಿ ಕಾಂಗ್ರೆಸ್ ಕಂಡ ಕನಸು, ಹಗಲು ಕನಸು ಎಂದು ಕಥೆಯ ಮೂಲಕ ಅಪಹಾಸ್ಯ ಮಾಡಿದರು.

    ನಂತರ ಪಂಚಮಸಾಲಿ ಸ್ವಾಮಿಗಳ ಪರ್ಯಾಯ ಒಕ್ಕೂಟದ ರಚನೆ ಕುರಿತು, ಸ್ವಾಮೀಜಿಗಳು, ಜಗದ್ಗುರು ಬಗ್ಗೆ ಕಾಮೆಂಟ್ ಮಾಡುವುದು ಸರಿಯಲ್ಲ. ಏಕೆಂದರೆ ಧರ್ಮೊಪದೇಶ ಮಾಡುವ ಕಾವಿ ಧಾರಿಗಳು ತಮ್ಮಷ್ಟಕ್ಕೆ ತಾವೇ ಯೋಚಿಸಬೇಕು. ಸಮಾಜದ ಜಾಗೃತಿ ಮೂಡಿಸಬೇಕು. ಅದನ್ನು ಬಿಟ್ಟು ಗ್ರೂಪಿಸಮ್ ಮಾಡಬಾರದು. ಗ್ರೂಪ್ ಮಾಡುವುದಾದರೆ ಸ್ವಾಮಿಗಳು ಹಾಗೂ ರಾಜಕಾರಣಿಗಳ ಮಧ್ಯೆ ವ್ಯತ್ಯಾಸ ಏನುಳಿತು ಎಂದು ಮಠಾಧೀಶರ ವಿರುದ್ಧ ಬೇಸರ ವ್ಯಕ್ತಪಡಿಸಿದರು.

  • ಸಿ.ಸಿ.ಪಾಟೀಲ್ ಬೆಂಗಾವಲು ವಾಹನ ಅಪಘಾತ- ಪ್ರಾಣಾಪಾಯವಿಲ್ಲ

    ಸಿ.ಸಿ.ಪಾಟೀಲ್ ಬೆಂಗಾವಲು ವಾಹನ ಅಪಘಾತ- ಪ್ರಾಣಾಪಾಯವಿಲ್ಲ

    ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಸಮೀಪದ ಆತಿಥ್ಯ ಹೋಟೆಲ್ ಬಳಿ ನಡೆದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಮಾರ್ಗಮಧ್ಯೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಸಮೀಪ ಸಚಿವರ ಬೆಂಗಾವಲು ವಾಹನಕ್ಕೆ ಲಾರಿ ಅಡ್ಡ ಬಂದಿದ್ದು, ಬೆಂಗಾವಲು ವಾಹನದ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ವಾಹನವನ್ನು ನಿಯಂತ್ರಿಸಿದ್ದರಿಂದ ಬಾನೆಟ್ ಮಾತ್ರ ಜಖಂ ಆಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ ಚಾಲಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಅಪಘಾತವಾದ ಹಿನ್ನಲೆಯಲ್ಲಿ ಇನ್ನೊಂದು ಬೆಂಗಾವಲು ವಾಹನದ ವ್ಯವಸ್ಥೆ ಮಾಡಿ, ಸಚಿವರನ್ನು ಕಳುಹಿಸಿಕೊಡಲಾಯಿತು. ಈ ಕುರಿತು ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

  • ಗದಗ ಜಿಲ್ಲೆ 5 ದಿನ ಸಂಪೂರ್ಣ ಲಾಕ್‍ಡೌನ್

    ಗದಗ ಜಿಲ್ಲೆ 5 ದಿನ ಸಂಪೂರ್ಣ ಲಾಕ್‍ಡೌನ್

    ಗದಗ: ಜಿಲ್ಲೆಯನ್ನು 5 ದಿನ ಸಂಪೂರ್ಣ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ ಅಂತ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.

    ಈ ಕುರಿತು ಜಿಲ್ಲಾಡಳಿತ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 27 ಬೆಳಗ್ಗೆ 10 ಗಂಟೆಯಿಂದ ಜೂನ್ 1 ರವರೆಗೆ ಕಠಿಣ ಲಾಕ್‍ಡೌನ್ ಮಾಡಲಾಗುವುದು ಎಂದರು. ಈ ಅವಧಿಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗದಿದ್ದಲ್ಲಿ ಮತ್ತೆ ಲಾಕ್‍ಡೌನ್ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

    ಕಠಿಣ ಲಾಕ್‍ಡೌನ್ ಸಂದರ್ಭದಲ್ಲಿ ತರಕಾರಿ, ಹಣ್ಣು, ಹೂವು ವ್ಯಾಪಾರಸ್ಥರು ತಳ್ಳುಗಾಡಿಗಳಲ್ಲಿ ವ್ಯಾಪಾರ ಮಾಡಬೇಕು. ಎಲ್ಲಾ ಬಗೆಯ ಮಾರುಕಟ್ಟೆಗಳ ಬಂದ್ ಇರಲಿವೆ. ತಳ್ಳು ಗಾಡಿಯವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ವ್ಯಾಪಾರ ಮಾಡಬೇಕು. ಹಾಲು ಮಾರಾಟ ಪ್ರತಿದಿನ ಬೆಳಿಗ್ಗೆ 8 ಗಂಟೆ ವರೆಗೆ ಅವಕಾಶವಿದ್ದು, ಕಿರಾಣಿ, ದಿನಸಿ ಸಾಮಗ್ರಿಗಳಿಗೆ ಹೋಮ್ ಡಿಲೆವರಿಗೆ ಮಾತ್ರ ಅವಕಾಶ. ರೈತರು ಕೃಷಿ ವಸ್ತುಗಳನ್ನು ಖರೀದಿ ಮಾಡಲು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಅವಕಾಶವಿದೆ. ಆದ್ರೆ ಕೃಷಿ ಚಟುವಟಿಕೆಗಳ ನೆಪದಲ್ಲಿ ಸುಖಾಸುಮ್ಮನೆ ಓಡಾಡಿದ್ರೆ ಅವರ ಮೇಲು ಸೂಕ್ತ ಕ್ರಮ ಜರುಗುವುದು. ನಗರ ಹಾಗೂ ಹಳ್ಳಿಗಳಲ್ಲಿಯೂ ಸಹ ಎಲ್ಲಾ ಬಗೆಯ ಹೋಟೆಲ್, ಅಂಗಡಿಗಳು ಬಂದ್. ಗ್ರಾಮೀಣ ಭಾಗದ ಅನೇಕ ಕಡೆಗಳಲ್ಲಿ ಸರ್ಕಾರದ ನಿಯಮಗಳು ಪಾಲನೆ ಆಗುತ್ತಿಲ್ಲ. ಆದ್ರೆ 27 ರ ನಂತರ ಪಾಲನೆ ಆಗದಿದ್ರೆ ಆ ಭಾಗದ ಅಧಿಕಾರಿಗಳು ಹೊಣೆಗಾರಿಕೆ ಮಾಡಲಾಗುತ್ತದೆ ಎಂದರು.

    ಇನ್ನು ಬಾರ್ ಹಾಗೂ ವೈನ್ ಶಾಪ್, ಮಾಂಸದಂಗಡಿ ಸಹ ಓಪನ್ ಹಾಗೂ ಪಾರ್ಸೆಲ್ ಗೆ ಅವಕಾಶ ಇರುವುದಿಲ್ಲ. ಎಲ್ಲಾ ಬಂದ್ ಇರಲಿವೆ. ಬ್ಯಾಂಕ್ ಹಾಗೂ ಅಂಚೆ ಕಚೇರಿಯ ಸಿಬ್ಬಂದಿ ಕಚೇರಿಯ ಹಾಗೂ ಬ್ಯಾಂಕ್ ನಲ್ಲಿ ಜನ ಸೇರಿಸುವಂತಿಲ್ಲ. ಕಚೇರಿ ಬಾಗಿಲು ಹಾಕಿಕೊಂಡು ಒಳಗಡೆ ಕಚೇರಿ ಕೆಲಸ ಮಾಡಬೇಕು ಎಂದು ಸಚಿವ ಸಿ.ಸಿ ಪಾಟೀಲ್ ಹೇಳಿದರು. ಈ ಸುದ್ದಿಗೋಷ್ಠಿನಲ್ಲಿ ಜಿಲ್ಲಾಧಿಕಾರಿ ಸುಂದರೇಶ್ ಬಾಬು, ಸಿ.ಇ.ಓ, ಭರತ್, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

  • 18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ಸಿಗೋಲ್ಲ – ವಾರ್ತಾ ಸಚಿವ ಸಿ.ಸಿ ಪಾಟೀಲ್

    18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ಸಿಗೋಲ್ಲ – ವಾರ್ತಾ ಸಚಿವ ಸಿ.ಸಿ ಪಾಟೀಲ್

    ಗದಗ: 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ಹಾಕಲ್ಲ. ಒಂದು ವಾರ ಮುಂದೂಡುವ ಸಾಧ್ಯತೆ ಇದೆ ಎಂದು ವಾರ್ತಾ ಇಲಾಖೆ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.

    ಗದಗ ಜಿಲ್ಲಾಡಳಿತ ಭವನದಲ್ಲಿ ಸಿಎಂ ವೀಡಿಯೋ ಕಾನ್ಫರೆನ್ಸ್ ಹಾಗೂ ಅಧಿಕಾರಿಗಳ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದು ತಡವಾಗಲಿದೆ. 1 ಮತ್ತು 2ನೇ ಹಂತದ ಲಸಿಕೆ ಮುಗಿಯಬೇಕಿದೆ. ನೋಂದಣಿ ಮಾಡಲಾಗುತ್ತಿದೆ. ಮೇ 18 ರಿಂದ 20ರವರೆಗೆ ಹೋಗಬಹುದು. ಅಷ್ಟರಲ್ಲಿ ಇನ್ನಷ್ಟು ಡೋಸ್ ಸಂಗ್ರಹಿಸಿ ಮುಂದೆ ದಿನಾಂಕ ನಿಗದಿಯಾದ ನಂತರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಹೇಳಿದರು. ನಂತರ ಪಾಸಿಟಿವ್ ಬಂದ ಎಲ್ಲರಿಗೂ ರೆಮ್‍ಡಿಸಿವರ್ ಇಂಜೆಕ್ಷನ್ ಕೊಡುವುದಿಲ್ಲ. ಅವಶ್ಯಕತೆ ಇದ್ದವರಿಗೆ ಮಾತ್ರ ರೆಮ್‍ಡಿಸಿವರ್ ಕೊಡಿ ಅಂತ ವೈದ್ಯರಿಗೆ ಸೂಚಿಸಿದರು.

    ಗದಗ ಜಿಲ್ಲೆ ಸರ್ಕಾರಿ ಆಸ್ಪತ್ರೆಯಲ್ಲಿ ರೆಮ್‍ಡಿಸಿವಿರ್ ಕೊರತೆ ಇಲ್ಲ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಕೊರತೆ ಇದೆ. ಜಿಲ್ಲೆಯಲ್ಲಿ 650 ಕೋವಿಡ್ ಸೋಂಕಿತರಿದ್ದಾರೆ. 182 ಜನ ಜಿಮ್ಸ್ ಸೇರಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 72 ಜನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 467 ಜನ ಹೋಮ್ ಐಸುಲೇಶನ್ ನಲ್ಲಿದ್ದಾರೆ. ಗದಗ ಜಿಲ್ಲೆಯಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಇಲ್ಲ.

    ಕೋವಿಡ್ ಕೇರ್ ಕೇಂದ್ರದಲ್ಲಿ 700 ಹಾಸಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ 500 ಹಾಸಿಗೆ ವ್ಯವಸ್ಥೆ ಇದ್ದು, 200 ಹೆಚ್ಚುವರಿ ಹಾಸಿಗೆ ವ್ಯವಸ್ಥೆಗೆ ಸಿದ್ದತೆ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ 150 ಹಾಸಿಗೆ ವ್ಯವಸ್ಥೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡುಕೊಳ್ಳಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಎಮ್.ಎಲ್.ಸಿ ಎಸ್.ವಿ ಸಂಕನೂರ, ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು, ಎಸ್.ಪಿ ಯತೀಶ್ ಹಾಗೂ ಜಿ.ಪಂ ಮುಖ್ಯಾಧಿಕಾರಿ ಉಪಸ್ಥಿತರಿದ್ದರು.

  • ಮಾಸಾಶನದ ವಿಚಾರವಾಗಿ ಪೈಲ್ವಾನರು, ಸಚಿವ ಸಿ.ಸಿ.ಪಾಟೀಲ್ ಮಧ್ಯೆ ಜಂಗಿಕುಸ್ತಿ

    ಮಾಸಾಶನದ ವಿಚಾರವಾಗಿ ಪೈಲ್ವಾನರು, ಸಚಿವ ಸಿ.ಸಿ.ಪಾಟೀಲ್ ಮಧ್ಯೆ ಜಂಗಿಕುಸ್ತಿ

    ಗದಗ: ಪೈಲ್ವಾನರು ಮಾಶಾಸನ ಬಿಡುಗಡೆ ಮಾಡುವಂತೆ ಸಚಿವ ಸಿ.ಸಿ.ಪಾಟೀಲ್ ಗೆ ಮನವಿ ನೀಡುವ ವೇಳೆ ಜಟಾಪಟಿ ನಡೆದಿದೆ. ಜಿಲ್ಲೆಯ ಅನೇಕ ಪೈಲ್ವಾನರು ಒಟ್ಟಾಗಿ ಸ್ಥಗಿತಗೊಂಡ ಮಸಾಶನ ನೀಡುವಂತೆ ಸಚಿವರಿಗೆ ಮನವಿ ನೀಡಲು ಮುಂದಾದರು. ಈ ವೇಳೆ ಸಚಿವರು ಯಾರನ್ನೂ ಹತ್ತಿರ ಬಿಟ್ಟುಕೊಳ್ಳದೆ ಅಂತರ ಕಾಯ್ದುಕೊಂಡರು.

    ನಗರದಲ್ಲಿ ಇಂದು ಘಟನೆ ನಡೆದಿದ್ದು, ನಮ್ಮ ಸರ್ಕಾರ ಮಾಶಾಸನ ಹೆಚ್ಚಿಸಿದೆ. ಇನ್ನೂ ಏನುಬೇಕು ಎಂದು ಸಚಿವ ಸಿ.ಸಿ.ಪಾಟೀಲ್ ಪ್ರಶ್ನಿಸಿದರು. ನಿಮ್ಮ ಸರ್ಕಾರ ಏನೂ ಮಾಡಿಲ್ಲ. ಮೊದಲು ಕೊಡುತ್ತಿರುವುದನ್ನು ನಿಲ್ಲಿಸಿದೆ ಎಂದು ಸಚಿವರ ಮಾತಿಗೆ ಪೈಲ್ವಾನರು ತಿರುಗೇಟು ನೀಡಿದರು. ಇದರಿಂದ ಕೋಪಗೊಂಡ ಸಚಿವರು, ಪೈಲ್ವಾನರ ವಿರುದ್ಧ ಗರಂ ಆದರು. ಯಾರನ್ನೂ ಹತ್ತಿರಕ್ಕೆ ಬಿಟ್ಟುಕೊಳ್ಳದೇ ಅಂತರ ಕಾಯ್ದುಕೊಂಡರು. ಮನವಿಗೆ ಸಚಿವರು ಸರಿಯಾಗಿ ಸ್ಪಂದಿಸದಕ್ಕೆ, ಬಿಜೆಪಿ ಸರ್ಕಾರದ ವಿರುದ್ಧ ಪೈಲ್ವಾನರು ಧಿಕ್ಕಾರ ಕೂಗಿದರು. ಸಚಿವರು, ಸಂಸದರ ಎದುರೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ನಂತರ ಅಲ್ಲೇ ಇದ್ದ ಸಂಸದ ಶಿವಕುಮಾರ್ ಉದಾಸಿ, ಪೈಲ್ವಾನರನ್ನು ಸಮಾಧಾನ ಪಡಿಸಲು ಮುಂದಾದರು. ಕೋವಿಡ್ ನಿಂದ ಎಲ್ಲ ಕಡೆ ತಡವಾಗಿದೆ ಕೊಡಿಸುತ್ತೇನೆ. ಈ ಬಗ್ಗೆ ಡಿಸಿ ಹಾಗೂ ಸಚಿವರ ಜೊತೆಗೆ ಮಾತನಾಡಿ, ಮಾಶಾಸನ ಕೊಡಿಸುತ್ತೇನೆ ಎಂದು ಸಂಸದ ಉದಾಸಿ ಬರವಸೆ ನೀಡಿದರು. ಆದರೆ ಸಚಿವರು ಇದಕ್ಕೆ ಉತ್ತರ ನೀಡಬೇಕು ಎಂದು ಪೈಲ್ವಾನರು ಪಟ್ಟುಹಿಡಿದು ಕೂತರು. ನಂತರ ಕೈ ಮುಗಿದು ವಿನಂತಿಕೊಳ್ಳುವ ಮೂಲಕ ಪೈಲ್ವಾನರ ಮನವೊಲಿಸಲು ಉದಾಸಿ ಮುಂದಾದರು.

    ಕೊರೊನಾ ಕೈಮೀರುವ ಸಾಧ್ಯತೆ
    ಕೊರೊನಾ 2ನೇ ಅಲೆ ವೇಗವಾಗಿ ಹರಡುತ್ತಿದೆ. ಸಾರ್ವಜನಿಕರು ಸರ್ಕಾರದ ರೂಲ್ಸ್ ಪಾಲನೆ ಮಾಡಿ, ಸರ್ಕಾರದ ಜೊತೆ ಕೈಜೋಡಿಸಿ ಎಂದು ಸಚಿವ ಸಿ.ಸಿ.ಪಾಟೀಲ್ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು. ಭಯ ಪಡದೇ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ. ಮದುವೆ, ಶುಭ ಸಮಾರಂಭಗಳಲ್ಲಿ ಜನ ನಿಯಂತ್ರಣದ ಬಗ್ಗೆ ಕಠಿಣ ಕ್ರಮ ಜಾರಿಗೊಳಿಸಲಾಗಿದೆ. ಸದ್ಯ ಜಾತ್ರೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದೂಡಿ. ಜನರು ಜವಾಬ್ದಾರಿಯಿಂದ ವರ್ತನೆ ಮಾಡಬೇಕು. ಕುಟುಂಬದ ಸುರಕ್ಷತೆ ಕಾಪಾಡಿಕೊಳ್ಳಿ, ಅಗತ್ಯವಿದ್ದರೆ ಮಾತ್ರ ಹೊರಬನ್ನಿ, ಅನಾವಶ್ಯಕವಾಗಿ ಮನೆಯಿಂದ ಹೊರಬರಬೇಡಿ ಎಂದು ಸಚಿವ ಸಿ.ಸಿ ಪಾಟೀಲ್ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು.

    ಜಿಲ್ಲೆಯಲ್ಲಿ ನಿತ್ಯ 18 ರಿಂದ 20 ಕೇಸ್ ಬರುತ್ತಿವೆ. ಇದು ಹೀಗೆ ಮುಂದುವರಿದರೆ ಕೈಮೀರುವ ಸಾಧ್ಯತೆ ಇದೆ. ಇದನ್ನು ಅರಿತು ಜನರು ಸುರಕ್ಷಿತವಾಗಿರಿ ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಂಸದ ಶಿವಕುಮಾರ್ ಉದಾಸಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

  • ಸಿ.ಸಿ.ಪಾಟೀಲ್, ಎಚ್.ಕೆ.ಪಾಟೀಲ್ ನಡುವೆ ತಾರಕಕ್ಕೇರಿದ ವಾಕ್ ಸಮರ

    ಸಿ.ಸಿ.ಪಾಟೀಲ್, ಎಚ್.ಕೆ.ಪಾಟೀಲ್ ನಡುವೆ ತಾರಕಕ್ಕೇರಿದ ವಾಕ್ ಸಮರ

    – ಟ್ರ್ಯಾಕ್ಟರ್  ರ‍್ಯಾಲಿ ಬಗ್ಗೆ ನಾಯಕರ ನಡುವೆ ಮಾತಿನ ಚಕಮಕಿ

    ಗದಗ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹಾಗೂ ಕಾಂಗ್ರೆಸ್ ನಾಯಕ ಎಚ್.ಕೆ.ಪಾಟೀಲ್ ನಡುವಿನ ವಾಕ್ ಸಮರ ತಾರಕಕ್ಕೇರಿದೆ.

    ಟ್ರ್ಯಾಕ್ಟರ್ ರ‍್ಯಾಲಿಯೊಂದಿಗೆ ಡಿಸಿ ಕಚೇರಿಗೆ ನುಗ್ಗಿರುವ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದರು. ಇಬ್ಬರೂ ಉತ್ತರಕ್ಕೆ, ಪ್ರತ್ಯುತ್ತರ ನೀಡುವುದು ಜೋರಾಗಿಯೇ ನಡೆಯುತ್ತಿತ್ತು. ಸಿ.ಸಿ.ಪಾಟೀಲ್ ಅವರಿಂದ ಹೆದರಿಸುವ ಪ್ರವೃತ್ತಿ ಆರಂಭವಾಗಿದೆ. ದೆಹಲಿಯಲ್ಲಿ ರೈತರನ್ನು ಪಾಕಿಸ್ತಾನಿ, ಖಲಿಕಿಸ್ತಾನಿ ಅಂದರು. ಅದೇ ಆರೋಪವನ್ನು ಇಲ್ಲಿ ಮಾಡುವ ಪ್ರಯತ್ನವನ್ನು ಸರ್ಕಾರದ ಸಚಿವರು ಮಾಡುತ್ತಿದ್ದಾರೆ ಎಂದು ಎಚ್.ಕೆ.ಪಾಟೀಲ್ ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಟ್ರ್ಯಾಕ್ಟರ್ ರ‍್ಯಾಲಿಯಿಂದ ಗದಗವನ್ನು ದೆಹಲಿ ಆಗಲು ಬಿಡಲ್ಲ: ಸಿ.ಸಿ ಪಾಟೀಲ್

    ಮನವಿ ನೀಡಲು ಬಂದ ವೇಳೆ ಡಿಸಿ ಇರಲಿಲ್ಲ. ಆ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು, ಪೊಲೀಸರಿಗೆ, ಪ್ರತಿಭಟನಾ ನಿರತ ರೈತರನ್ನು ಹೆದರಿಸುತ್ತಿದ್ದಾರೆ. ನಾವು ರೈತರು ಹೆದರಲ್ಲ. ಗದಗಿನ ಗಂಡು ಭೂಮಿಯಿಂದ ಬಂದವರು ಹೆದರಿ ಓಡಿ ಹೋಗುತ್ತಾರೆ ಎಂದುಕೊಂಡಿದ್ದೀರಾ? ಟ್ರ್ಯಾಕ್ಟರ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದರೆ ತಪ್ಪಾ? ಮರಳು ದಂಧೆಕೋರರು, ಮದ್ಯ ಮಾರಾಟಗಾರರು, ಇನ್ಯಾರೋ ಕಾರ್ ತೆಗೆದುಕೊಂಡು ಡಿಸಿ ಕಚೇರಿ ಒಳಗೆ ಬರುತ್ತಾರೆ. ಅದೇ ರೈತರು ಡಿಸಿ ಕಚೇರಿಗೆ ಬರುವುದು ತಪ್ಪಾ ಎಂದು ತಿರುಗೇಟು ನೀಡಿದರು.

    ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಸಹ ಹರಿಹಾಯ್ದು, ನನ್ನ ಟೀಕೆಗೆ ಸ್ಪಂದಿಸಿದ್ದಾರೆ ಎಂಬ ಸಮಾಧಾನವಿದೆ. ಆದರೆ ಅರ್ಧ ಟೀಕೆಗೆ ಸ್ಪಂದಿಸುವುದು, ಇನ್ನು ಅರ್ಧ ಟೀಕೆಗೆ ಸ್ಪಂದಿಸದೇ ಇರುವುದು ಸರಿಯಲ್ಲ. ನಿಮ್ಮ ಸರ್ಕಾರ ನುಡಿದಂತೆ ನಡೆಯಲಿಲ್ಲಾ, ಮೋದಿ ಅವರು ವಚನ ಭ್ರಷ್ಠರು ಎಂಬ ಆರೋಪದ ಬಗ್ಗೆ ಸ್ಪಷ್ಟನೆ ನೀಡಲಿಲ್ಲ. ಇದನ್ನು ನೋಡಿದರೆ ನಿಮ್ಮ ಸರ್ಕಾರ ಮಾತು ತಪ್ಪಿದ ಭ್ರಷ್ಠ ಸರ್ಕಾರ ಎಂದು ಒಪ್ಪಿಕೊಂಡಂತೆ ಎಂದು ಹರಿಹಾಯ್ದರು.

  • ಬಿಜೆಪಿಯಲ್ಲಿ 3 ಮನೆ ಸೇರಿ ಒಂದು ಬಾಗಿಲು, ಸಿದ್ದರಾಮಯ್ಯಗೆ ಸಹಿಸಿಕೊಳ್ಳಲಾಗ್ತಿಲ್ಲ- ಸಿ.ಸಿ ಪಾಟೀಲ್

    ಬಿಜೆಪಿಯಲ್ಲಿ 3 ಮನೆ ಸೇರಿ ಒಂದು ಬಾಗಿಲು, ಸಿದ್ದರಾಮಯ್ಯಗೆ ಸಹಿಸಿಕೊಳ್ಳಲಾಗ್ತಿಲ್ಲ- ಸಿ.ಸಿ ಪಾಟೀಲ್

    – ಪರಮೇಶ್ವರ ಇತ್ತೀಚೆಗೆ ಕಾಣೆಯಾಗಿದ್ದಾರೆ

    ಗದಗ: ಬಿಜೆಪಿ ಮನೆಯೊಂದು 3 ಬಾಗಿಲು ಅಲ್ಲ, 3 ಮನೆ ಸೇರಿ ಒಂದು ಬಾಗಿಲು ಆಗಿದೆ. ಸಿದ್ದರಾಮಯ್ಯಗೆ ಸಹಿಸಿಕೊಳ್ಳಲಾಗ್ತಿಲ್ಲ. ಮೀಸಲಾತಿ ವಿಷಯದಲ್ಲಿ ಮಾಜಿ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಸಿ.ಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಮನೆಯೊಂದು 3 ಬಾಗಿಲು ಇಲ್ಲ. 3 ಮನೆ ಸೇರಿ ಒಂದು ದೊಡ್ಡಮನೆ ಮಾಡುತ್ತಿದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ಅನುಭವವನ್ನು ನಮ್ಮ ಪಕ್ಷದ ಮೇಲೆ ಹಾಕುತ್ತಿದ್ದಾರೆ. ಅವರ ಪಕ್ಷದ ಡಿ.ಕೆ ಶಿವಕುಮಾರ್ ಯಾವ ಕಡೆ ಇದ್ದಾರೆ ಮತ್ತು ಉಳಿದವರು ಯಾವ ಕಡೆ ಇದ್ದಾರೆ ಎನ್ನುವುದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲ. ಪರಮೇಶ್ವರ ಇತ್ತೀಚೆಗೆ ಎಲ್ಲೂ ಕಾಳಿಸುತ್ತಿಲ್ಲ. ಕಾಣೆಯಾಗಿದ್ದಾರೆ ಅದನ್ನು ಸ್ಪಷ್ಟಪಡಿಸಲಿ ಎಂದು ಟಾಂಗ್ ಕೊಟ್ಟಿದ್ದಾರೆ.

    ಮೀಸಲಾತಿ ವಿಷಯದಲ್ಲಿ ಸಿದ್ದರಾಮಯ್ಯನವರ ಹಾಗೆ ಸಮಾಜ ಒಡೆಯಲು ಬಿಜೆಪಿ ಹೊರಟಿಲ್ಲ. ಪಂಚಮಸಾಲಿ 2ಂ ಮೀಸಲಾತಿ ಹೋರಾಟಕ್ಕೆ ಸ್ವಾಮಿಜಿಗಳು ಡೆಡ್ ಲೈನ್ ಕೊಡೋದು ಬೇಡ. ಕ್ಲಿಷ್ಟಕರ ಸಮಸ್ಯೆಯನ್ನು ಬಗೆ ಹರಿಸಲು ಕಾಲಾವಕಾಶ ಬೇಕಾಗುತ್ತದೆ. ಈ ಬಗ್ಗೆ ಸಿಎಂ ಯಡಿಯೂರಪ್ಪನವರು ಪೂರಕವಾಗಿ ಸ್ಪಂದನೆ ಮಾಡಿದ್ದು, ನನಗೆ ಹಾಗೂ ಸಚಿವ ಮುರಗೇಶ್ ನಿರಾಣಿಯವರಿಗೆ ಸ್ವಾಮೀಜಿ ಅವರೊಂದಿಗೆ ಮಾತುಕತೆ ಮಾಡುವಂತೆ ಹೇಳಿದ್ದರು. ಈಗಾಗಲೇ ಮಾತುಕತೆ ನಡೆಸಿದ್ದೆವೆ. ಸ್ವಾಮೀಜಿಗಳಿಗೆ ಮನವರಿಕೆ ಮಾಡಿಕೊಂಡಿದ್ದೆವೆ. ಕಾನೂನಾತ್ಮಕ ಪ್ರಕ್ರಿಯೆ ನಡೆಯುತ್ತಿದೆ ಸ್ವಾಮೀಜಿಗಳು ತಾಳ್ಮೆಯಿಂದ ಇರಬೇಕು. ಸ್ವಾಮೀಜಿಗಳು ಹಾಗೂ ನಮ್ಮ ಸಮಾಜದ ಹಿರಿಯರು ಹೋರಾಟ ಮಾಡುವವರು ಅರ್ಥೈಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.


    ಈ ವೇಳೆ ವಿಜಯಾನಂದ ಕಾಶಪ್ಪನವರ ವಿರುದ್ಧ ಸಹ ಹರಿಹಾಯ್ದರು. ವಿಜಯಾನಂದ ಕಾಶಪ್ಪನವರಿಗಿಂತ ವಿಜಯೇಂದ್ರ ನಮಗೆ ತುಂಬಾ ಹತ್ತವಾಗಿದ್ದವರು. ವಿಜಯೇಂದ್ರ ನಡೆ ಏನು ಎಂಬುದು ನಮಗೆ ಗೊತ್ತಿದೆ. ಅವರು ಸಮಾಜದ ಹೋರಾಟ ಹತ್ತಿಕ್ಕುತ್ತಿಲ್ಲ. ವಿಜಯಾನಂದ ಕಾಶಪ್ಪನವರು ಸುಖಾಸುಮ್ಮನೆ ಆರೋಪ ಸರಿಯಲ್ಲ ಅಂತ ವಿಜಯಾನಂದಗೆ ಸಿ.ಸಿ ಪಾಟೀಲ್ ಟಕ್ಕರ್ ಕೊಟ್ಟಿದ್ದಾರೆ.

  • ಫ್ಲೈಓವರ್‌ಗೆ ಸಾವರ್ಕರ್ ಹೆಸರಿಡದೇ ರಾಹುಲ್, ಸೋನಿಯಾ ಗಾಂಧಿ ಹೆಸರಿಡಬೇಕಾ?- ಸಿಸಿ ಪಾಟೀಲ್

    ಫ್ಲೈಓವರ್‌ಗೆ ಸಾವರ್ಕರ್ ಹೆಸರಿಡದೇ ರಾಹುಲ್, ಸೋನಿಯಾ ಗಾಂಧಿ ಹೆಸರಿಡಬೇಕಾ?- ಸಿಸಿ ಪಾಟೀಲ್

    ಗದಗ: ಬೆಂಗಳೂರಿನ ಯಲಹಂಕ ಫ್ಲೈಓವರ್‌ಗೆ ವೀರ ಸಾವರ್ಕರ್ ಅವರ ಹೆಸರಿಡಲು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದಕ್ಕೆ ಸಚಿವ ಸಿ.ಸಿ.ಪಾಟೀಲ್ ಸಿಡಿಮಿಡಿಗೊಂಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸಚಿವರು, ಫ್ಲೈಓವರಿಗೆ ವೀರ ಸಾವರ್ಕರ್ ಹೆಸರಿಡದೇ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನಾಯಕಿ ಸೋನಿಯಾ ಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ, ಸೆಲ್ಯುಲಾರ್ ಜೈಲುವಾಸದ ಬಗ್ಗೆ ಕಾಂಗ್ರೆಸ್‍ನವರು ಮೊದಲು ತಿಳಿಯಲಿ. ಸಾವರ್ಕರ್ ಅವರ ಬಗ್ಗೆ ಮಾತಾಡುವಂತ ಯೋಗ್ಯತೆ ಯಾವೋಬ್ಬ ಕಾಂಗ್ರೆಸ್ಸಿಗರಿಗೂ ಇಲ್ಲಾ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ಸಿಗರಿಗೆ ತ್ಯಾಗ ಬಲಿದಾನ ಮಾಡಿದ ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್, ಸರ್ದಾರ್ ವಲ್ಲಭಬಾಯಿ ಪಟೇಲ್, ಲೋಕಮಾನ್ಯ ತಿಲಕ್ ಅವರು ಗೊತ್ತಿಲ್ಲಾ. ವೀರ ಸಾವರ್ಕರ್ ಬಿಜೆಪಿಯವರಾ? ಅವಾಗ ಬಿಜೆಪಿ ಇತ್ತಾ ಅಂತ ಪ್ರಶ್ನಿಸಿದರು.

    ರಾಜೀವ್ ಗಾಂಧಿ ಮೆಡಿಕಲ್ ಕಾಲೇಜ್, ರಾಜೀವ್ ಗಾಂಧಿ ರೋಡ್, ಇಂದಿರಾ ಗಾಂಧಿ ರೋಡ್, ಆಯೋಜನೆ ಈ ಯೋಜನೆ ಅಂತೆಲ್ಲಾ ಇದೆ. ಎಲ್ಲಾದರೂ ನರೇಂದ್ರ ಮೋದಿ ರೋಡ್, ಬಿ.ಎಸ್.ಯಡಿಯೂರಪ್ಪ ರೋಡ್ ಅಂತ ಇದೆಯಾ? ದೇಶವನ್ನು ಇವರೇ ಕಟ್ಟಿ ಬೆಳೆಸಿ ಉತ್ತುಂಗಕ್ಕೆ ತಂದ್ರಾ? ಕಾಂಗ್ರೆಸ್ಸಿಗರು ಹೇಳೋದು ಆಚಾರ ತಿನ್ನೋದು ಬದನೆಕಾಯಿ ಎಂದು ಗುಡುಗಿದರು.

    ಬಿಜೆಪಿ ಪಕ್ಷದಲ್ಲಿ ಎದ್ದಿರುವ ಬಂಡಾಯದ ವಿಚಾರವಾಗಿ ಮಾತನಾಡಿದ ಸಚಿವರು, ಸಿಎಂ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಬಾಧಿತ, ಸುಭದ್ರವಿದೆ. ಹಲವಾರು ಹಿರಿಯ ಶಾಸಕರು ನಮ್ಮಲ್ಲಿ ಭಿನ್ನಮತ ಇಲ್ಲಾ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ನಾಯಕರು ಸಹ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಹೊಗಳಿದ್ದಾರೆ. ನಮ್ಮ ಬಗ್ಗೆ ಯಾರು ಏನೂ ಚಿಂತೆ ಮಾಡುವ ಅಗತ್ಯವಿಲ್ಲ, ಸರ್ಕಾರ ಸುಭದ್ರವಾಗಿರುತ್ತದೆ. ಮುಂದಿನ ಅವಧಿಗೆ ಪಕ್ಷವನ್ನು ಬಿಎಸ್‍ವೈ ಮತ್ತೆ ಅಧಿಕಾರಕ್ಕೆ ತರುತ್ತಾರೆ ಎಂದು ಹೇಳಿದರು.

    ಕಪ್ಪತ್ತಗುಡ್ಡದಲ್ಲಿ ಸರ್ಕಾರ ಮೈನಿಂಗ್ ನಡೆಸುವ ಹುನ್ನಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಆರೋಪಕ್ಕೆ ಸಿ.ಸಿ.ಪಾಟೀಲ್ ತಿರುಗೇಟು ನೀಡಿದರು. ಕಪ್ಪತ್ತಗುಡ್ಡ ರಕ್ಷಣೆ ಸರ್ಕಾರದ ಹೊಣೆ. ನಾನು ಮೂಲತಃ ಬೆಳಗಾವಿ ಜಿಲ್ಲೆಯವನು. ಬೆಳಗಾವಿ ಜಿಲ್ಲಾ ಪಂಚಾಯತ್ ಸದಸ್ಯನಾಗಿ, ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಸತೀಶ್ ಜಾರಕಿಹೊಳಿ ಆಧಾರ ರಹಿತ ಆರೋಪ ಮಾಡಿದರೆ ಅವರ ಮೇಲೆ ಬ್ಲಾಕ್ ಆಂಡ್ ವೈಟ್ ಅಲಿಗೇಷನ್ ಸಾಕಷ್ಟಿವೆ. ಸಮಯ ಸಂದರ್ಭ ಬಂದಾಗ ಮುಂದಿನ ದಿನಗಳಲ್ಲಿ ಎಲ್ಲಾ ಪುಟಗಳನ್ನ ತೆರೆದಿಡುತ್ತೇನೆ ಎಂದು ಟಾಂಗ್ ಕೊಟ್ಟರು.

    ಮುಂಬೈ-ಗದಗ ಎಕ್ಸ್‍ಪ್ರೆಸ್ ರೈಲು ಬರಲಿದೆ. ರಾಜ್ಯದ ಜನ ಮುಂಬೈ ನಗರದಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದು ಮುಂಬೈ ಕನ್ನಡಿಗರನ್ನ ಅನಿವಾರ್ಯವಾಗಿ ಕರೆಸಿಕೊಳ್ಳಬೇಕಿದೆ. ಎಷ್ಟು ಜನ ಮುಂಬೈನಿಂದ ಬರುತ್ತಾರೆ ಎಂಬ ಸ್ಪಷ್ಟ ಮಾಹಿತಿ ಇನ್ನೂ ಬಂದಿಲ್ಲ. ಮಂಗಳವಾರ ಬೆಳಗ್ಗೆ 11 ಗಂಟೆ ನಂತರ ಗದಗ ನಿಲ್ದಾಣಕ್ಕೆ ಮುಂಬೈ ರೈಲು ಬರಲಿದೆ. ಗದಗ ರೈಲ್ವೆ ನಿಲ್ದಾಣದಲ್ಲಿ ಆರೋಗ್ಯ ತಪಾಸಣೆ ಮಾಡಿ ನಂತರ 7 ದಿನ ಸರ್ಕಾರದ ನಿಯಮಗಳ ಪ್ರಕಾರ ಕ್ವಾರಂಟೈನ್ ಮಾಡಲಾಗುತ್ತದೆ ಎಂದರು.

    ಮುಂಬೈನಿಂದ ಗದಗ ಜಿಲ್ಲೆಗೆ ನಿರೀಕ್ಷೆ ಮೀರಿ ಜನ ಬಂದರೂ ಕ್ವಾರಂಟೈನ್ ಮಾಡುತ್ತೇವೆ. ಪ್ರಯಾಣಿಕರಿಗೆ ಯಾವುದೇ ಅನಾನುಕೂಲ ಆಗದಂತೆ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ. ಜಿಲ್ಲಾ ಕೇಂದ್ರದಲ್ಲಿ ಕ್ವಾರಂಟೈನ್ ಸಾಲದಿದ್ದರೆ, ಕೊರತೆ ಕಂಡುಬಂದರೆ ಮುಂದೆ ತಾಲೂಕ ಕೇಂದ್ರಗಳಿಗೂ ಕಳಿಸುತ್ತೆವೆ ಎಂದು ತಿಳಿಸಿದರು.

  • ಸಚಿವರ ಅಭಿಮಾನಿಗಳಿಂದ ಸುಳ್ಳು ಸುದ್ದಿ- ಆತಂಕದಲ್ಲಿ ಜನ

    ಸಚಿವರ ಅಭಿಮಾನಿಗಳಿಂದ ಸುಳ್ಳು ಸುದ್ದಿ- ಆತಂಕದಲ್ಲಿ ಜನ

    – ಸರ್ಕಾರ ಪ್ರಕಟಿಸುವ ಮುನ್ನವೇ, ಮಾಹಿತಿ ಬಹಿರಂಗ

    ಗದಗ: ಬುಧವಾರ ಜಿಲ್ಲೆನಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಢಪಟ್ಟಿಲ್ಲ. ಆದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಫೇಸ್‌ಬುಕ್ ಫಾಲೋವರ್ಸ್ ಪಾಸಿಟಿವ್ ಕೇಸ್ ಇದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ.

    ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲೆಯ ಜನತೆ ತೀವ್ರ ಆತಂಕಕ್ಕೊಳಗಾಗಿದ್ದು, ಭಯಭೀತರಾಗಿದ್ದಾರೆ. ಕೊರೊನಾ ವೈರಸ್ ಪ್ರಕರಣದ ಕುರಿತು ಇಂದಿನ ಮೀಡಿಯಾ ಬುಲೆಟಿನ್ ನಲ್ಲಿಪ್ರಕಟವಾಗಿಲ್ಲ. ಆದರೆ ಫೇಸ್‌ಬುಕ್ ನಲ್ಲಿ ಹಾಕಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

    ಫೇಸ್‌ಬುಕ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಅವರನ್ನು ಟ್ಯಾಗ್ ಮಾಡಿ, ಕನಿಷ್ಠ 6 ಜನ ಅವರ ಅಭಿಮಾನಿಗಳು ಕೊರೊನಾ ಪಾಸಿಟಿವ್ ಪತ್ತೆ ಎಂದು ಬರೆದಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನರಗುಂದ ತಾಲೂಕಿನ ಕಲಕೇರಿ ವ್ಯಕ್ತಿಯೋರ್ವನಿಗೆ ಸೋಂಕು ಪತ್ತೆ ಆಗಿದೆ. ಸಚಿವರು ಹೋಗಿ ಪರಶೀಲಿಸಿ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ. ಇನ್ನಾದರೂ ತಾಲೂಕಿನ ಜನ ಅಲರ್ಟ್ ಆಗಿರಿ ಎಂದು ಸಚಿವರ ಹಿಂಬಾಲಕರು ಪೊಸ್ಟ್ ಮಾಡಿದ್ದಾರೆ.

    ಇದು ಕಲಕೇರಿ ಜನರಿಗೆ ಮಾತ್ರವಲ್ಲ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಯಾರಿಗೂ ಗೊತ್ತಾಗದ ಮಾಹಿತಿ ಸಚಿವ ಸಿ.ಸಿ.ಪಾಟೀಲ್ ಅವರ ಅಭಿಮಾನಿಗಳಿಗೆ ಹೇಗೆ ಗೊತ್ತಾಗುತ್ತದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

    ಈ ಕುರಿತು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಪ್ರತಿಕ್ರಿಯಿಸಿದ್ದು, ಕೊರೊನಾ ಕುರಿತು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಈ ಹಿಂದೆಯೇ ಸಾಕಷ್ಟು ಬಾರಿ ಈ ಕುರಿತು ಅರಿವು ಮೂಡಿಸಲಾಗಿದೆ. ಅದರೂ ಸಚಿವರ ಅಭಿಮಾನಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.