Tag: ಸೀಜರ್

  • ಸೀಜರ್ ಪ್ರಚಾರದಿಂದ ಪಾರೂಲ್ ಯಾದವ್ ಮಿಸ್ಸಿಂಗ್!

    ಸೀಜರ್ ಪ್ರಚಾರದಿಂದ ಪಾರೂಲ್ ಯಾದವ್ ಮಿಸ್ಸಿಂಗ್!

    ಬೆಂಗಳೂರು: ‘ಪ್ಯಾರ್ ಗೆ ಆಗ್ಬಿಟೈತೆ’ ಬೆಡಗಿ ಪಾರೂಲ್ ಯಾದವ್ ಸೀಜರ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಹಣ ಪಡೆಯದೇ ಚಿತ್ರದ ಪ್ರಚಾರಕ್ಕೂ ಬರದೇ ಕಾಣೆಯಾಗಿದ್ದಾರೆ ಎಂಬ ಸುದ್ದಿಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.

    ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ ಸೀಜರ್ ಸಿನಿಮಾದಲ್ಲಿ ಪಾರೂಲ್ ಯಾದವ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಇವರಿಗೆ ಚಿತ್ರತಂಡ 1.5 ಲಕ್ಷ ರೂ.ಕೊಡಬೇಕಿತ್ತು. ಬಾಕಿ ಉಳಿದಿರುವ ಹಣವನ್ನು ನೀಡಿ ಸಿನಿಮಾ ಪ್ರಮೋಶನ್ ಗೆ ಕರೆಯಬೇಕೆಂದರೂ ಸಂಪರ್ಕಕ್ಕೆ ಸಿಗ್ತಿಲ್ಲ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಖುದ್ದಾಗಿ ಹಣ ನೀಡಲು ನಿರ್ಧರಿಸಿದೆ ಅಂತಾ ಹೇಳಲಾಗಿದೆ.

    ವಿನಯ್ ಕೃಷ್ಣ ಸಾರಥ್ಯದ ಸೀಜರ್ ಸಿನಿಮಾ ಮುಹೂರ್ತ ಆಚರಿಸಿಕೊಂಡು ಬರೋಬ್ಬರಿ 4 ವರ್ಷ ಆಗಿದೆ. ಲಾಂಗ್‍ಜರ್ನಿ ಕಂಪ್ಲೀಟ್ ಮಾಡಿರೋ ಸೀಜರ್ ಎಲ್ಲಾ ಕೆಲಸ ಮುಗಿಸಿಕೊಂಡು ಥಿಯಟೇರ್ ಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಇದೇ ಶುಕ್ರವಾರ ರವಿಚಂದ್ರನ್, ಚಿರು ಕಾಂಬಿನೇಷನ್‍ನ ಸಿನಿಮಾ 230 ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ರಿಲೀಸ್ ಆಗ್ತಿದೆ.

    ನಾಲ್ಕು ವರ್ಷಗಳ ಹಿಂದೆ ಚಂದನ್ ಸೈನ್ ಮಾಡಿದ ಮೊದಲ ಸಿನಿಮಾ ಇದು. ಈ ಸೀಜರ್ ಗೆ ಟ್ಯೂನ್ಸ್ ಕಂಪೋಸ್ ಮಾಡುವ ಮೂಲಕ ಟಾಲಿವುಡ್, ಕಾಲಿವುಡ್ ಜೊತೆ ಮಾಲಿವುಡ್‍ಗೂ ಎಂಟ್ರಿ ಕೊಡ್ತಿದ್ದಾರೆ ಚಂದನ್ ಶೆಟ್ಟಿ. ನಾಲ್ಕು ಭಾಷೆಯಲ್ಲಿ ರೆಡಿಯಾಗಿರೋ ಸೀಜರ್ ಬೇರೆ ಬೇರೆ ಟೈಮ್‍ನಲ್ಲಿ ಪರಭಾಷೆಯಲ್ಲಿ ಮಿಂಚಲಿದೆ.

    ನಾಯಕಿ ಪಾರುಲ್ ಯಾದವ್ ಪ್ರಚಾರಕ್ಕೆ ಬರದೆ ಇರೋದರ ಬಗ್ಗೆ ಚಿತ್ರತಂಡ ಬೇಸರ ವ್ಯಕ್ತಪಡಿಸಿದೆ. 12 ರಿಂದ 13 ಕೋಟಿ ವೆಚ್ಚದಲ್ಲಿ ರೆಡಿಯಾಗಿರುವ ಅದ್ಧೂರಿ ಸೀಜರ್ ಸಿನಿಮಾ ಈ ಶುಕ್ರವಾರ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಸೀಜರ್ ಸಿನೆಮಾದ ತಂತ್ರಜ್ಞರು ಹೇಳೋದೇನು ಗೊತ್ತಾ..?

  • ಸೀಜರ್ ಸಿನೆಮಾದ ತಂತ್ರಜ್ಞರು ಹೇಳೋದೇನು ಗೊತ್ತಾ..?

    ಸೀಜರ್ ಸಿನೆಮಾದ ತಂತ್ರಜ್ಞರು ಹೇಳೋದೇನು ಗೊತ್ತಾ..?

    ಬೆಂಗಳೂರು: ಚಿತ್ರದ ಪತ್ರಿಕಾಗೋಷ್ಠಿ ಎಂದರೆ ನಾಯಕ, ನಾಯಕಿ, ಸಹಕಲಾವಿದರು, ತಂತ್ರಜ್ಞರು ಇರುವುದು ವಾಡಿಕೆಯಾಗಿದೆ. ಇದೇ ಮೊದಲ ಬಾರಿ ಎನ್ನುವಂತೆ ತೆರೆ ಹಿಂದೆ ಕೆಲಸ ಮಾಡಿದವರನ್ನು ಪರಿಚಯಿಸುವ ಸಲುವಾಗಿ ‘ಸೀಜರ್’ ಸಿನಿಮಾ ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ಮಾರ್ಚ್ 29ರಂದು ಸೀಜರ್ ತೆರೆಗೆ ಬರಲಿದೆ.

    ಮೊದಲ ಸರದಿಯಲ್ಲಿ ಮಾತನಾಡಿದ ಚಂದನ್ ಶೆಟ್ಟಿ, ಬಿಗ್ ಬಾಸ್ ನಂತರ ತಮ್ಮನ್ನು ಭೇಟಿ ಮಾಡುತ್ತಿರುವುದು ಖುಷಿ ತಂದಿದೆ. ನಾಲ್ಕು ವರ್ಷದ ಹಿಂದೆ ಏನೂ ಇಲ್ಲದ ಸಂದರ್ಭದಲ್ಲಿ ಸಂಗೀತ ಒದಗಿಸಲು ನಿರ್ದೇಶಕರು ಅವಕಾಶ ಮಾಡಿಕೊಟ್ಟರು. ಮೂರು ಹಾಡುಗಳಿಗೆ ಸಾಹಿತ್ಯ ಬರೆಯಲಾಗಿದೆ. ಒಂದನ್ನು ಚೇತನ್ ಕುಮಾರ್ ಬರೆದಿದ್ದಾರೆ. ಎಲ್ಲಾ ಗೀತೆಗಳಿಗೆ ಧ್ವನಿಯಾಗಿದ್ದೇನೆ. ಅಂದು ಟ್ಯೂನ್ ಮಾಡಿದ್ದರೂ ಇಂದಿನ ಟ್ರೆಂಡ್ ಗೆ ಸೂಟ್ ಆಗುವ ಹಾಗೆ ಸಂಯೋಜನೆ ಮಾಡಲಾಗಿದೆ. ರ‍್ಯಾಪ್ ಗೆ ಸೀಮಿತವಾಗಿದ್ದ ನಾನು ಮೆಲೋಡಿ ಹಾಡು ನೀಡಬಲ್ಲೆ ಎಂಬುದನ್ನು ಇದರಲ್ಲಿ ಸಾಬೀತುಪಡಿಸಿದ್ದೇನೆ. ಮಾಸ್ ಸಿನಿಮಾ, ರವಿಚಂದ್ರನ್, ಚಿರಂಜೀವಿ ಸರ್ಜಾ ಇರುವುದರಿಂದ ಹಿನ್ನೆಲೆ ಸಂಗೀತಕ್ಕೆ ಹೆಚ್ಚು ಸ್ಕೋಪ್ ನೀಡಲಾಗಿದೆ ಎಂದರು.

    ಚಿತ್ರಕ್ಕೆ ಪ್ರಾರಂಭದಲ್ಲಿ ಚಂದನ್ ಶೆಟ್ಟಿ ಅವರನ್ನು ಆಯ್ಕೆ ಮಾಡಿದಾಗ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಧೈರ್ಯ ಮಾಡಿ ಅವರಿಂದಲೇ ಕೆಲಸ ಮಾಡಿದ್ದಕ್ಕೆ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಚಿತ್ರ ಹಣಕಾಸು ವ್ಯವಹಾರ, ಕಾರು ಕುರಿತ ಕತೆಯಾಗಿದೆ. ನಿರ್ಮಾಪಕರುಗಳಿಗೆ ಚಿತ್ರ ತೋರಿಸಿದಾಗ ಕತೆಯು ಎಲ್ಲಾ ಭಾಗಕ್ಕೂ ಅನ್ವಯವಾಗುವುದರಿಂದ ತಮಿಳು, ತೆಲುಗು, ಮಲೆಯಾಳಂ ಭಾಷೆಯಲ್ಲಿ ಬಿಡುಗಡೆ ಮಾಡಲು ಸಲಹೆ ನೀಡಿದ್ದಾರೆ. ಅದರಂತೆ ಕನ್ನಡದಲ್ಲಿ ಬಿಡುಗಡೆಯಾದ ನಂತರದ ದಿನಗಳಲ್ಲಿ ಅಲ್ಲಿನ ಜನರಿಗೆ ತೋರಿಸುವ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ ಎಂದು ನಿರ್ದೇಶಕ ವಿನಯ್‍ಕೃಷ್ಣ ಹೇಳಿದರು.

    ಕೈಗಾರಿಕೋದ್ಯಮಿಯಾದ ನನಗೆ ಸಿನಿಮಾ ಮಾಡುವ ಬಯಕೆ ಇತ್ತು. ಒಳ್ಳೆ ಚಿತ್ರ ಕೊಡಬೇಕೆನ್ನುವ ಧ್ಯೇಯದಿಂದ, ಕಾರು ಕತೆ ಚೆನ್ನಾಗಿರುವ ಕಾರಣ ಇದಕ್ಕೆ ಹಣ ಹೂಡಿದ್ದೇನೆ ಎನ್ನುತ್ತಾರೆ ನಿರ್ಮಾಪಕ ತ್ರಿವಿಕ್ರಂ ಸಾಪಲ್ಯ. ಪ್ರಾರಂಭದಲ್ಲಿ ಚಿಕ್ಕ ಚಿತ್ರವೆಂದು ಕೊಂಡಿದ್ದ ನಮಗೆ ಕಾಲ ಕಳೆದಂತೆ ಎಲ್ಲವು ದೊಡ್ಡದಾಗುತ್ತಾ ಹೋಗಿದೆ. ಇದರಲ್ಲಿ ನನ್ನದು ಅಳಿಲು ಸೇವೆ ಅಂತ ಬಣ್ಣಿಸಿಕೊಂಡರು ಸಂಭಾಷಣೆಗಾರ ಶ್ರೀಕಾಂತ್. ಸಂಕಲನಕಾರ ಶ್ರೀಕಾಂತ್, ಛಾಯಗ್ರಾಹಕ ರಾಜೇಶ್‍ಕಟ್ಟ ಉಪಸ್ಥಿತರಿದ್ದು ತಮ್ಮ ಅನುಭವ ಹಂಚಿಕೊಂಡರು.