Tag: ಸುಖವಿಂದರ್ ಸಿಂಗ್ ಸುಖು

  • ಪಕ್ಷಾಂತರ ಮಾಡುವ ಶಾಸಕರಿಗೆ ಪಿಂಚಣಿ ಇಲ್ಲ: ಹಿಮಾಚಲ ವಿಧಾನಸಭೆಯಲ್ಲಿ ಹೊಸ ಮಸೂದೆ ಅಂಗೀಕಾರ

    ಪಕ್ಷಾಂತರ ಮಾಡುವ ಶಾಸಕರಿಗೆ ಪಿಂಚಣಿ ಇಲ್ಲ: ಹಿಮಾಚಲ ವಿಧಾನಸಭೆಯಲ್ಲಿ ಹೊಸ ಮಸೂದೆ ಅಂಗೀಕಾರ

    ಶಿಮ್ಲಾ: ಪಕ್ಷಾಂತರ ಮಾಡುವ ಶಾಸಕರಿಗೆ ಯಾವುದೇ ಪಿಂಚಣಿ (Pension) ಇರುವುದಿಲ್ಲ ಎಂಬ ಹೊಸ ಮಸೂದೆಯನ್ನು ಹಿಮಾಚಲ ಪ್ರದೇಶದ (Himachal Pradesh) ಕಾಂಗ್ರೆಸ್‌ (Congress) ಸರ್ಕಾರ ಅಂಗೀಕರಿಸಿದೆ.

    ಹಿಮಾಚಲ ಪ್ರದೇಶ ಸರ್ಕಾರ ಅಭೂತಪೂರ್ವ ಕ್ರಮವೊಂದನ್ನು ಕೈಗೊಂಡಿದ್ದು, ಪಕ್ಷಾಂತರಿಗಳಿಗೆ ಪಿಂಚಣಿ ನಿಲ್ಲಿಸುವ ಹೊಸ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ಅಂಗೀಕಾರ ಮಾಡಿದೆ. ಇದನ್ನೂ ಓದಿ: ಚುನಾವಣೆಗೂ ಮುನ್ನ ಮಹಾ ವಿಕಾಸ್ ಅಘಾಡಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ: ಶರದ್ ಪವಾರ್

    ಪಕ್ಷಾಂತರ ಮಾಡಿದ ಶಾಸಕರಿಗೆ ಪಿಂಚಣಿ ನೀಡುವುದನ್ನು ನಿಲ್ಲಿಸುವ ಮಸೂದೆಯನ್ನು ಮಂಗಳವಾರ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಅನರ್ಹಗೊಂಡಿರುವ ಶಾಸಕರಿಗೆ ಇದು ಅನ್ವಯಿಸುತ್ತದೆ.

    ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ವಿಧಾನಸಭೆ (ಸದಸ್ಯರ ಭತ್ಯೆ ಮತ್ತು ಪಿಂಚಣಿ) ತಿದ್ದುಪಡಿ ಮಸೂದೆ 2024 ಎಂಬ ಶೀರ್ಷಿಕೆಯ ಮಸೂದೆಯನ್ನು ಮಂಡಿಸಿದರು. ಇದನ್ನೂ ಓದಿ: ಹರಿಯಾಣ ವಿಧಾನಸಭೆ ಚುನಾವಣೆ – ಆಪ್, ಕಾಂಗ್ರೆಸ್‌ ಮೈತ್ರಿ ಹಿಂದಿನ ಲೆಕ್ಕಾಚಾರ ಏನು?

    ಸಂವಿಧಾನದ 10 ನೇ ಶೆಡ್ಯೂಲ್ ಅಡಿಯಲ್ಲಿ ಯಾವುದೇ ಹಂತದಲ್ಲಿ ವ್ಯಕ್ತಿಯನ್ನು ಅನರ್ಹಗೊಳಿಸಿದ್ದರೆ, ಕಾಯಿದೆಯಡಿಯಲ್ಲಿ ಪಿಂಚಣಿಗೆ ಅರ್ಹರಾಗಿರುವುದಿಲ್ಲ ಎಂದು ಮಸೂದೆಯು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲೇಖಿಸುತ್ತದೆ.

  • ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

    ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಆರ್ಥಿಕ ಸಂಕಷ್ಟ ಶುರುವಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ ತಿಂಗಳ ವೇತನ ಜಮೆಯಾಗಿಲ್ಲ. ಆಗಸ್ಟ್ ತಿಂಗಳ ವೇತನವನ್ನು ಇನ್ನೂ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ತಿಳಿದು ಬಂದಿದೆ. ವೇತನ ವಿಳಂಬದಿಂದ ಎರಡು ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.

    ವೇತನ ವಿಳಂಬವಾಗಿದ್ದರೂ, ವೇತನವನ್ನು ಯಾವಾಗ ವಿತರಿಸಲಾಗುವುದು ಎಂಬ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಪ್ರಸ್ತುತ ಆರ್ಥಿಕ ಸ್ಥಿತಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ಆರೋಪಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಭಾಷಣ ಮಾಡಿದ ಸುಖು ಅವರು ಆರ್ಥಿಕ ಅವ್ಯವಸ್ಥೆಗೆ ಬಿಜೆಪಿ ಪ್ರಾರಂಭಿಸಿದ ಉಚಿತ ಕೊಡುಗೆಗಳ ಸಂಸ್ಕೃತಿ ಕಾರಣ ಎಂದು ದೂಷಿಸಿದರು. ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

    ಆರ್ಥಿಕ ಪರಿಸ್ಥಿತಿ ಹಾಳಾದ ಬೆನ್ನಲ್ಲೇ‌ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸುಖವಿಂದರ್ ಸಿಂಗ್ ಸುಖು, ತಮ್ಮ ಸರ್ಕಾರವು ರಾಜ್ಯದ ಆರ್ಥಿಕ ಆರೋಗ್ಯವನ್ನು ಸುಧಾರಿಸಲು ವಿವಿಧ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ನನ್ನ ಎಲ್ಲಾ ಕೆಲಸಗಳು 2027 ರ ವೇಳೆಗೆ ಹಿಮಾಚಲ ಪ್ರದೇಶವನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಲು ಮತ್ತು 2032 ರ ವೇಳೆಗೆ ದೇಶದ ಅತ್ಯಂತ ಶ್ರೀಮಂತ ರಾಜ್ಯವಾಗಿಸಲು ಕೇಂದ್ರೀಕೃತವಾಗಿವೆ ಎಂದು ಹೇಳಿದರು.

    ರಾಜ್ಯದಲ್ಲಿ ಯಾವುದೇ ಆರ್ಥಿಕ ಅವ್ಯವಸ್ಥೆ ಇಲ್ಲ. ನೌಕರರು ಮತ್ತು ಪಿಂಚಣಿದಾರರು ತಮ್ಮ ಬಾಕಿಯನ್ನು ಪಡೆಯುತ್ತಿದ್ದಾರೆ. 75 ವರ್ಷಕ್ಕಿಂತ ಮೇಲ್ಪಟ್ಟ 28,000 ಪಿಂಚಣಿದಾರರ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ ಮತ್ತು ಸರ್ಕಾರವು ವಿವಿಧ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಜೈಲಿನಲ್ಲಿ ಕೊನೆಗೂ ದರ್ಶನ್ ಗೆ ಸಿಕ್ತು ಸರ್ಜಿಕಲ್ ಚೇರ್ ಭಾಗ್ಯ

    ಮದ್ಯ ಮಾರಾಟದ ಹರಾಜಿನಲ್ಲಿನ ಅಕ್ರಮಗಳ ಆರೋಪಗಳು ಸುಳ್ಳು. ಬಿಜೆಪಿ ನಾಯಕರು ಸತ್ಯವನ್ನು ಪರಿಶೀಲಿಸುವಂತೆ ಆಗ್ರಹಿಸಿದರು. ವಿದ್ಯುತ್ ಮತ್ತು ನೀರಿನ ಬಿಲ್ ಪಾವತಿಸಲು ಶಕ್ತರಾಗಿರುವ ಜನರು ಸಬ್ಸಿಡಿ ತೆಗೆದುಕೊಳ್ಳಬಾರದು. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೆಲಸ‌ ಮಾಡುತ್ತಿದೆ. ಹೆಚ್ಚುವರಿಯಾಗಿ, ರೈತರು, ಕಾರ್ಮಿಕರು, ತೋಟಗಾರರು, ಮಹಿಳೆಯರು ಮತ್ತು ಸಣ್ಣ ಅಂಗಡಿಕಾರರು ಸೇರಿದಂತೆ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

  • ಸರ್ಕಾರಿ ನೌಕರರಿಗೆ ಸರಿಯಾಗಿ ವೇತನ ಸಿಗ್ತಿದೆ: ವದಂತಿಗೆ ಹಿಮಾಚಲಪ್ರದೇಶ ಸಿಎಂ ಸ್ಪಷ್ಟನೆ

    ಸರ್ಕಾರಿ ನೌಕರರಿಗೆ ಸರಿಯಾಗಿ ವೇತನ ಸಿಗ್ತಿದೆ: ವದಂತಿಗೆ ಹಿಮಾಚಲಪ್ರದೇಶ ಸಿಎಂ ಸ್ಪಷ್ಟನೆ

    ಶಿಮ್ಲಾ: ಹಿಮಾಚಲ ಪ್ರದೇಶದ ಎಲ್ಲಾ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ಸಿಗುತ್ತಿದೆ. ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹಿಮಾಚಲ ಪ್ರದೇಶದ (Himachal Pradesh) ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ಟ್ವಿಟ್ಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

    ರಾಜ್ಯದ ವರ್ಚಸ್ಸನ್ನು ಹಾಳುಗೆಡವಲು ದೆಹಲಿಯಲ್ಲಿ (Delhi) ಈ ಬಗ್ಗೆ ಸುಳ್ಳು ಅಭಿಯಾನ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ಸಿಗುತ್ತಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅವರು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – 15 ಸಾವಿರ ಮಂದಿಗೆ ಇನ್ನೂ ಪಾವತಿಯಾಗಿಲ್ಲ ಸಂಬಳ

    ಹಿಮಾಚಲದ ಯಾವುದೇ ಸುದ್ದಿ ವಾಹಿನಿಗಳಿಗೆ ಅಂತಹ ಮಾಹಿತಿ ತಿಳಿದಿಲ್ಲ. ಆದರೆ ದೆಹಲಿಯಲ್ಲಿ ಈ ವದಂತಿಗಳು ಹರಡುತ್ತಿರುವುದು ಅಚ್ಚರಿ ತಂದಿದೆ ಎಂದು ಅವರು ಬರೆದುಕೊಂಡಿದ್ದಾರೆ. ಇದಕ್ಕೆ ಅನೇಕರು ಪ್ರತಿಕ್ರಿಯಿಸಿದ್ದು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ಹಿಮಾಚಲ ಪ್ರದೇಶದಲ್ಲಿ ಕನಿಷ್ಠ 15 ಸಾವಿರ ಸರ್ಕಾರಿ ನೌಕರರಿಗೆ ಇನ್ನೂ ಮಾಸಿಕ ವೇತನ ಪಾವತಿಯಾಗಿಲ್ಲ ಎಂಬ ಸುದ್ದಿ ಹರಿದಾಡಿತ್ತು. ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ಸಂಬಳ ಪಾವತಿಯಾಗುತ್ತಿತ್ತು. ಆದರೆ ಅರ್ಧ ತಿಂಗಳು ಕಳೆದರೂ ವೇತನ ಪಾವತಿಯಾಗಿಲ್ಲ ಎಂದು ವರದಿಯಾಗಿತ್ತು. ಇದನ್ನೂ ಓದಿ: ಯುವಕರ ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತಿದ್ದ ಪಿಎಫ್‍ಐ ಮುಖಂಡ ಬಳ್ಳಾರಿಯಲ್ಲಿ ಅರೆಸ್ಟ್