Tag: ಸುಖೋಯ್

  • Sukhoi, Mirage Fighter Jets Crash: ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮ

    Sukhoi, Mirage Fighter Jets Crash: ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮ

    ಬೆಳಗಾವಿ: ಮಧ್ಯಪ್ರದೇಶದ (Madhya Pradesh) ಮೊರೆನಾದಲ್ಲಿ ಭಾರತೀಯ ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮರಾದ ಘಟನೆ ನಡೆದಿದೆ.

    ನಗರದ ಗಣೇಶಪುರದ ಸಂಭಾಜೀ ನಗರದ ನಿವಾಸಿ, ವಿಂಗ್ ಕಮಾಂಡರ್‌ ಹನುಮಂತರಾವ್ (Hanumanth Rao Sarathi) ಹುತಾತ್ಮರಾಗಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿ ಭಾರತೀಯ ವಾಯು ಪಡೆ (IAF) ವಿಷಾದ ವ್ಯಕ್ತಪಡಿಸಿದೆ. ಇದನ್ನೂ ಓದಿ: Madhya Pradesh Plane Crash: ಮಿರಾಜ್ 2000 ಯುದ್ಧ ವಿಮಾನದ ಪೈಲಟ್ ದುರ್ಮರಣ

    ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಗಣೇಶಪುರದ ಹನುಮಂತರಾವ್ ಮನೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವಿಂಗ್ ಕಮಾಂಡರ್ ಸಾವಿನ‌ ಸುದ್ದಿ ತಿಳಿದ ಹನುಮಂತರಾವ್ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಮಧ್ಯಪ್ರದೇಶದ ಮೊರೆನಾ ಸಮೀಪ ಸುಖೋಯ್‌ 30 (Sukhoi) ಹಾಗೂ ಒಂದು ಮಿರಾಜ್‌ 2000 (Mirage) ಯುದ್ಧವಿಮಾನ ಪತನವಾಗಿತ್ತು. ಈ ಎರಡೂ ವಿಮಾನಗಳು ಗ್ವಾಲಿಯರ್‌ ವಾಯುನೆಲೆಯಿಂದ ಟೇಕಾಫ್‌ ಆಗಿದ್ದವು. ಘಟನೆಗೆ ಕಾರಣ ತಿಳಿಯಲು ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ಇದನ್ನೂ ಓದಿ: Plane Crash: ಬೆಂಕಿ ಕಾಣಿಸಿಕೊಂಡು ಪತನಗೊಂಡ ಚಾರ್ಟರ್ಡ್ ವಿಮಾನ – ಪೈಲಟ್‍ಗಾಗಿ ಹುಡುಕಾಟ

    ವಾಯು ಪಡೆಯ ವಿಮಾನ ಸ್ಥಳಕ್ಕೆ ಧಾವಿಸಿ ‍‍ಪರಿಶೀಲನೆ ನಡೆಸಿತು. ಘಟನೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚೀನಾದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ತೈವಾನ್‌?

    ಚೀನಾದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ತೈವಾನ್‌?

    ತೈಪೆ: ತಂಟೆಕೋರ ಚೀನಾಗೆ ಭಾರೀ ಹಿನ್ನಡೆಯಾಗಿದ್ದು‌, ತೈವಾನ್ ಭೂ ಪ್ರದೇಶದಲ್ಲಿ ಚೀನಾದ ಯುದ್ಧ ವಿಮಾನವೊಂದು ಪತನಗೊಂಡಿದೆ.

    ರಷ್ಯಾ ನಿರ್ಮಿತ ಸುಖೋಯ್‌ 35 ವಿಮಾನ ತೈವಾನ್‌ನ ಕರಾವಳಿ ಪ್ರದೇಶದ ಗುವಾಂಗ್ಸಿ ಎಂಬಲ್ಲಿ ಬಿದ್ದಿದೆ. ಈ ವಿಮಾನ ಯಾವ ಕಾರಣಕ್ಕೆ ಬಿದ್ದಿದೆ ಎಂಬುದಕ್ಕೆ ಅಧಿಕೃತವಾಗಿ ಯಾವುದೇ ಮಾಹಿತಿ ಸಿಕ್ಕಿಲ್ಲ.

    https://twitter.com/NewsLineIFE/status/1301775622658637826

    ಸಾಮಾಜಿಕ ಜಾಲತಾಣದಲ್ಲಿ ವಾಯುಗಡಿ ಉಲ್ಲಂಘಿಸಿ ತನ್ನ ಭೂ ಪ್ರದೇಶದಲ್ಲಿ ಹಾರಾಟ ಮಾಡಿದ್ದಕ್ಕೆ ತೈವಾನ್‌ನ ವಾಯು ರಕ್ಷಣಾ ವ್ಯವಸ್ಥೆಯು ಹೊಡೆದುರುಳಿಸಿದೆ ಎಂದು ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಯುದ್ಧ ವಿಮಾನ ಹೊತ್ತಿ ಉರಿಯುತ್ತಿರುವ ವಿಡಿಯೋ ಈಗ ವೈರಲ್‌ ಆಗಿದೆ.

    ತೈವಾನ್‌ ವಿಮಾನವನ್ನು ಹೊಡೆದು ಹಾಕಿದ್ಯಾ ಅಥವಾ ತಾಂತ್ರಿಕ ಕಾರಣದಿಂದ ವಿಮಾನ ಪತನಗೊಂಡಿದ್ಯಾ ಎಂಬುವುದು ಇನ್ನು ಸ್ಪಷ್ಟವಾಗಿಲ್ಲ. ಎರಡು ಸರ್ಕಾರಗಳು ಈ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಸಾಧಾರಣವಾಗಿ ಸುಖೋಯ್‌ ಅತ್ಯಾಧುನಿಕ ವಿಮಾನವಾಗಿದ್ದು ಮಿಗ್‌ ರೀತಿ ಪತನವಾಗುವ ಸಾಧ್ಯತೆ ಕಡಿಮೆ.

    https://twitter.com/AseemRuhel/status/1301783068869644288

    ಈ ಕುರಿತು ಟ್ವಿಟರ್‌ನಲ್ಲಿಯೂ ಭಾರಿ ಚರ್ಚೆಯಾಗುತ್ತಿದ್ದು, #Taiwan ಹಾಗೂ #Su-35 ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ.

  • ಮಧ್ಯಾಹ್ನ ಬೆಂಗ್ಳೂರಿನಲ್ಲಿ ಕೇಳಿಬಂದ ಶಬ್ಧ ಯುದ್ಧ ವಿಮಾನದ್ದು – ರಕ್ಷಣಾ ಇಲಾಖೆ

    ಮಧ್ಯಾಹ್ನ ಬೆಂಗ್ಳೂರಿನಲ್ಲಿ ಕೇಳಿಬಂದ ಶಬ್ಧ ಯುದ್ಧ ವಿಮಾನದ್ದು – ರಕ್ಷಣಾ ಇಲಾಖೆ

    ಬೆಂಗಳೂರು: ಮಧ್ಯಾಹ್ನ ಸಿಲಿಕಾನ್ ಸಿಟಿಯ ಹಲವು ಭಾಗದಲ್ಲಿ ಕೇಳಿ ಬಂದ ಶಬ್ಧ ಯುದ್ಧ ವಿಮಾನದ್ದು ಎನ್ನುವುದು ಈಗ ದೃಢಪಟ್ಟಿದೆ.

    ಈ ಸಂಬಂಧ ರಕ್ಷಣ ಇಲಾಖೆ ತಿಳಿಸಿದ್ದು, ಏರ್ ಕ್ರಾಫ್ಟ್ ಸಿಸ್ಟಂ ಆಂಡ್ ಟೆಸ್ಟಿಂಗ್ ಎಸ್ಟಾಬ್ಲಿಸ್ಟ್ ಮೆಂಟ್(ಎಎಸ್‍ಟಿಇ) ನ ವಿಮಾನ ಹಾರಾಡಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಸೂಪರ್ ಸೋನಿಕ್ ವಿಮಾನ ನಗರದಿಂದ ಹೊರಗಡೆ ಹಾರಾಟ ನಡೆಸಿತ್ತು ಎಂದು ತಿಳಿಸಿದೆ.

    ಪೈಲಟ್ ಗಳು ಮತ್ತು ಎಂಜಿನಿಯರುಗಳು ವಿಮಾನವನ್ನು ಪರೀಕ್ಷೆ ಮಾಡುತ್ತಿರುತ್ತಾರೆ. ಈ ಸಂದರ್ಭದಲ್ಲಿ 36 ಸಾವಿರ ಮತ್ತು 40 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸಿದಾಗ ಸೋನಿಕ್ ಬೂಮ್ ಕೇಳಿಸಿರಬಹುದು. ಸೋನಿಕ್ ಬೂಮ್ ನಡೆದ ಪ್ರದೇಶದಿಂದ ವ್ಯಕ್ತಿ 65 ರಿಂದ 85 ಕಿ.ಮೀ ದೂರದಲ್ಲಿದ್ದರೂ ಈ ಧ್ವನಿ ಕೇಳಿಸುತ್ತದೆ ಎಂದು ಟ್ವೀಟ್ ಸ್ಪಷ್ಟನೆ ನೀಡಿದೆ.

    ಮಧ್ಯಾಹ್ನ 1:25ರ ವೇಳೆಗೆ ಈ ಘಟನೆ ನಡೆದಿದ್ದರೂ ಇಷ್ಟು ತಡವಾಗಿ ಯಾಕೆ ಸ್ಪಷ್ಟನೆ ನೀಡಿದ್ದು ಎಂದು ಜನ ಈಗ ಪ್ರಶ್ನೆ ಮಾಡಿ ಕೇಳುತ್ತಿದ್ದಾರೆ.

    ಮಧ್ಯಾಹ್ನವೇ ಇದು ವಾಯುಸೇನೆಯ ವಿಮಾನದಿಂದ ಆಗಿರುವ ಶಬ್ಧ ಎನ್ನುವುದು ದೃಢಪಟ್ಟಿತ್ತು. ಆದರೆ ಅಧಿಕೃತವಾಗಿ ಎಲ್ಲಿಯೂ ಪ್ರಕಟವಾಗಿರಲಿಲ್ಲ. ಸಂಜೆಯ ವೇಳೆಗೆ ಭಾರತೀಯ ವಾಯುಸೇನೆ ಹೇಳಿಕೆ ಬಿಡುಗಡೆ ಮಾಡಿ, ಏರ್ ಕ್ರಾಫ್ಟ್ ಆಂಡ್ ಸಿಸ್ಟಂ ಟೆಸ್ಟಿಂಗ್ ಮತ್ತು ಎಚ್‍ಎಎಲ್ ವಿಮಾನಗಳು ಪರೀಕ್ಷಾರ್ಥ ಹಾರಾಟ ನಡೆಸಿರಬಹುದು ಎಂದು ತಿಳಿಸಿತ್ತು. ಆದರೆ ಹೇಳಿಕೆಯ ಶಬ್ಧದ ಮೂಲದ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಈಗ ಸ್ಪಷ್ಟನೆ ನೀಡುವ ಮೂಲಕ ಎದ್ದಿದ್ದ ಎಲ್ಲ ಗೊಂದಲಗಳಿಗೆ ರಕ್ಷಣಾ ಇಲಾಖೆ ತೆರೆ ಎಳೆದಿದೆ.

    ಮಧ್ಯಾಹ್ನ 1.20ರ ಸಮಯದಲ್ಲಿ ಬೆಂಗಳೂರಿನಲ್ಲಿ ಕೇಳಿಸಿಕೊಂಡದ್ದು ಸುಖೋಯ್ ವಿಮಾನದ ಸೋನಿಕ್ ಬೂಮ್. ಫೈಟರ್ ವಿಮಾನ 1,230 ಕಿ.ಮೀ ವೇಗ ತಲುಪಿ ಹೇಗೆ ಆಗಿತ್ತು ಎಂದು ವಿಂಗ್ ಕಮಾಂಡರ್ ಸುದರ್ಶನ್ ಅವರು ಫೇಸ್‍ಬುಕ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿದ್ದರು. ಜನಪ್ರಿಯ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ, ನೀವು ಕೇಳಿದ್ದು, ಸೂಪರ್ ಸೋನಿಕ್ ವಿಮಾನಗಳ ಪರೀಕ್ಷಾರ್ಥ ಹಾರಾಟದ ಸದ್ದು. ಗುಡುಗುಗಿಂತಲೂ ತೀವ್ರ ಎಂದು ಪೋಸ್ಟ್ ಹಾಕಿದ್ದರು.

    ನಡೆದಿದ್ದು ಏನು?
    ಮಧ್ಯಾಹ್ನ ಮಧ್ಯಾಹ್ನ 1.20ರ ಸುಮಾರಿಗೆ ಎದೆ ಝಲ್ ಎನ್ನಿಸುವ ದೊಡ್ಡ ಶಬ್ಧ ಕೇಳಿಬಂತು. ಇಂದಿರಾನಗರ, ಕಲ್ಯಾಣನಗರ, ಕೆಆರ್‍ಪುರ, ಟಿನ್‍ಫ್ಯಾಕ್ಟ್ರಿ, ರಾಮಮೂರ್ತಿನಗರ, ಮಾರತ್ತಹಳ್ಳಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಬನಶಂಕರಿ, ವಸಂತಪುರಕ್ಕೆ ಶಬ್ಧ ಕೇಳಿಸಿತ್ತು

    ಏನಿದು ಸೋನಿಕ್ ಬೂಮ್?
    ಸಮುದ್ರ ಮಟ್ಟದಲ್ಲಿ ಶಬ್ದಗಳ ತರಂಗಗಳ ವೇಗ ಸುಮಾರು ಗಂಟೆಗೆ 1,235 ಕಿಮೀ ಇರುತ್ತದೆ. ಮೇಲೆ ಮೇಲೆ ಹಾರುತ್ತಾ ಏರಿದಾಗ ಈ ವೇಗ ಕಡಿಮೆಯಾಗುತ್ತಾ ಹೋಗುತ್ತದೆ. ಈ ವೇಗವನ್ನು ಒಂದು ಮ್ಯಾಕ್ ಎನ್ನುತ್ತಾರೆ. ನಮ್ಮ ಫೈಟರ್ ವಿಮಾನಗಳು ಈ ವೇಗದ ಆಸುಪಾಸಿನಲ್ಲಿ ಹಾರಾಡುತ್ತಿರುವಾಗ ಗಾಳಿಯ ಹಲವಾರು ಪದರಗಳು ಒಂದರ ಮೇಲೆ ಒಂದರಂತೆ ಏರುತ್ತಾ ಹೋಗುತ್ತವೆ. ಈ ವಿಮಾನದ ವೇಗ ಒಂದು ಮ್ಯಾಕ್‍ಗಿಂತಾ ಹೆಚ್ಚಾದಾಗ ಈ ವಾಯು ಪದರಗಳನ್ನು ಸೀಳಿಕೊಂಡು ಮುನ್ನುಗ್ಗುತ್ತವೆ. ಆಗ ವಿಮಾನದ ಹಿಂದೆ ಉಂಟಾದ ನಿರ್ವಾತದಲ್ಲಿ ಅಪ್ಪಳಿಸಿದಾಗ ಉಂಟಾಗುವ ಶಬ್ಧವೇ ಸೂಪರ್ ಸೋನಿಕ್ ಬೂಮ್ ಎಂದು ವಿಂಗ್ ಕಮಾಂಡರ್ ಸುದರ್ಶನ್ ತಿಳಿಸಿದ್ದಾರೆ.

    ಸೂಪರ್ ಸೋನಿಕ್ ವೇಗವನ್ನು ಮ್ಯಾಕ್ ಸಂಖ್ಯೆಯಲ್ಲಿ ಹೇಳಲಾಗುತ್ತದೆ. ಮ್ಯಾಕ್ 1 ಎಂದರೆ ಧ್ವನಿಯ ವೇಗ, ಮ್ಯಾಕ್ 2 ಆ ವೇಗದ ಎರಡರಷ್ಟು. ವಿಮಾನದ ಎತ್ತರದಲ್ಲಿನ ಧ್ವನಿಯ ವೇಗದಿಂದ ವಿಮಾನದ ವೇಗವನ್ನು ವಿಭಜಿಸುವುದರಿಂದ ಮ್ಯಾಕ್ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ. ಯುದ್ಧ ವಿಮಾನಗಳ ವಾಯುನೆಲೆಯಲ್ಲಿ ಸೂಪರ್ ಸೋನಿಕ್ ಬೂಮ್ ಸಾಮಾನ್ಯ. ಬಹಳಷ್ಟು ಸಲ ಕಿಟಕಿಯ ಗಾಜುಗಳು ಒಡೆದು ಹೋಗುತ್ತದೆ.

  • ಇಂದು ಮಧ್ಯಾಹ್ನ ಬೆಂಗ್ಳೂರಿನಲ್ಲಿ ಯಾವುದೇ ವಿಮಾನ ಹಾರಿಸಿಲ್ಲ: ವಾಯುಸೇನೆ

    ಇಂದು ಮಧ್ಯಾಹ್ನ ಬೆಂಗ್ಳೂರಿನಲ್ಲಿ ಯಾವುದೇ ವಿಮಾನ ಹಾರಿಸಿಲ್ಲ: ವಾಯುಸೇನೆ

    ಬೆಂಗಳೂರು: ಇಂದು ಮಧ್ಯಾಹ್ನ ಟ್ರೈನಿಂಗ್ ಕಮಾಂಡ್ ಯಾವುದೇ ವಿಮಾನವನ್ನು ಹಾರಿಸಿಲ್ಲ ಎಂದು ಭಾರತೀಯ ವಾಯುಸೇನೆ ಸ್ಪಷ್ಟಪಡಿಸಿದೆ. ಹೀಗಾಗಿ ನಿಗೂಢ ಶಬ್ಧದ ಮೂಲದ ಬಗ್ಗೆ ಇನ್ನೂ ಗೊಂದಲ ಮುಂದುವರಿದಿದೆ.

    ಮಧ್ಯಾಹ್ನ ಆಕಾಶದಲ್ಲಿ ಕೇಳಿ ಬಂದ ನಿಗೂಢ ಶಬ್ಧಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಸೇನೆ ಹೇಳಿಕೆ ಬಿಡುಗಡೆ ಮಾಡಿದ್ದು, ಏರ್ ಕ್ರಾಫ್ಟ್ ಆಂಡ್ ಸಿಸ್ಟಂ ಟೆಸ್ಟಿಂಗ್ ಮತ್ತು ಎಚ್‍ಎಎಲ್ ವಿಮಾನಗಳು ಪರೀಕ್ಷಾರ್ಥ ಹಾರಾಟ ನಡೆಸಿರಬಹುದು. ಆದರೆ ಅದರಿಂದ ಈ ರೀತಿಯ ಶಬ್ಧ ಬರುವುದಿಲ್ಲ. ಅಲ್ಲದೆ ಈ ರೀತಿ ಶಬ್ಧ ಬರುವ ವಿಮಾನಗಳನ್ನ ನಗರದ ಹೊರಭಾಗದಲ್ಲಿ ಹಾರಿಸಲಾಗುತ್ತದೆ. ಒಂದು ವೇಳೆ ನಗರದಲ್ಲಿ ಹಾರಾಡಿದ್ದರೆ ಅದರ ಶಬ್ಧ ಗೊತ್ತಾಗುತ್ತದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ನಡೆದಿದ್ದು ಏನು?
    ಮಧ್ಯಾಹ್ನ ಮಧ್ಯಾಹ್ನ 1.20ರ ಸುಮಾರಿಗೆ ಎದೆ ಝಲ್ ಎನ್ನಿಸುವ ದೊಡ್ಡ ಶಬ್ಧ ಕೇಳಿಬಂತು. ಇಂದಿರಾನಗರ, ಕಲ್ಯಾಣನಗರ, ಕೆಆರ್‍ಪುರ, ಟಿನ್‍ಫ್ಯಾಕ್ಟ್ರಿ, ರಾಮಮೂರ್ತಿನಗರ, ಮಾರತ್ತಹಳ್ಳಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಬನಶಂಕರಿ, ವಸಂತಪುರದ ಜನ ಈ ಶಬ್ಧ ಕೇಳಿ ಬೆಚ್ಚಿಬಿದ್ದಿದ್ರು.

    ಶುರುವಿನಲ್ಲಿ ಏನಾಯ್ತು ಅಂತ ಯಾರಿಗೂ ಅರ್ಥ ಆಗಲೇ ಇಲ್ಲ. ಕೆಲವರು ಭೂಕಂಪ ಆಗಿರಬಹುದು ಎಂದರೆ, ಇನ್ನೂ ಕೆಲವರು ಏನೋ ಸ್ಫೋಟ ಆಗಿರಬಹುದು ಅಂತಾ ತಮಗನಿಸಿದ್ದನ್ನು ಹೇಳುತ್ತಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಥರಹೇವಾರಿ ವದಂತಿ ಹಬ್ಬಿತು. ಈ ಬೆನ್ನಲ್ಲೇ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್‍ಎನ್‍ಡಿಎಂಸಿ) ಎಲ್ಲೂ ಭೂಮಿ ಕಂಪಿಸಿಲ್ಲ ಎಂದು ಸ್ಪಷ್ಟಪಡಿಸಿತು. ಇದು ಆಂಫಾನ್ ಚಂಡಮಾರುತ ಪರಿಣಾಮದಿಂದ ಈ ಶಬ್ಧ ಎಂಬ ಅಭಿಪ್ರಾಯ ಕೇಳಿಬಂತು.

     

    ಈ ನಡುವೆ ಭಾರತೀಯ ವಾಯುಪಡೆಯ ಫೈಟರ್ ಜೆಟ್ ಸುಖೋಯ್ 30ನಿಂದ ಕೇಳಿಬಂದ ಸೋನಿಕ್ ಬೂಮ್ ಶಬ್ಧ ಇದಾಗಿದೆ ಎಂದು ವಿಂಗ್ ಕಮಾಂಡರ್ ಸುದರ್ಶನ್ ಅಭಿಪ್ರಾಯ ಹಂಚಿಕೊಂಡರು. ಒಬ್ಬೊಬ್ಬರು ಒಂದೊಂದು ಅಭಿಪ್ರಾಯ ಹೇಳಿದರೂ ಈ ಶಬ್ಧ ಬಂದಿದ್ದು ಹೇಗೆ ಎನ್ನುವುದು ಇನ್ನೂ ನಿಗೂಢವಾಗಿದೆ.

    ಏನಿದು ಸೋನಿಕ್ ಬೂಮ್?
    ಸಮುದ್ರ ಮಟ್ಟದಲ್ಲಿ ಶಬ್ದಗಳ ತರಂಗಗಳ ವೇಗ ಸುಮಾರು ಗಂಟೆಗೆ 1,235 ಕಿಮೀ ಇರುತ್ತದೆ. ಮೇಲೆ ಮೇಲೆ ಹಾರುತ್ತಾ ಏರಿದಾಗ ಈ ವೇಗ ಕಡಿಮೆಯಾಗುತ್ತಾ ಹೋಗುತ್ತದೆ. ಈ ವೇಗವನ್ನು ಒಂದು ಮ್ಯಾಕ್ ಎನ್ನುತ್ತಾರೆ. ನಮ್ಮ ಫೈಟರ್ ವಿಮಾನಗಳು ಈ ವೇಗದ ಆಸುಪಾಸಿನಲ್ಲಿ ಹಾರಾಡುತ್ತಿರುವಾಗ ಗಾಳಿಯ ಹಲವಾರು ಪದರಗಳು ಒಂದರ ಮೇಲೆ ಒಂದರಂತೆ ಏರುತ್ತಾ ಹೋಗುತ್ತವೆ. ಈ ವಿಮಾನದ ವೇಗ ಒಂದು ಮ್ಯಾಕ್‍ಗಿಂತಾ ಹೆಚ್ಚಾದಾಗ ಈ ವಾಯು ಪದರಗಳನ್ನು ಸೀಳಿಕೊಂಡು ಮುನ್ನುಗ್ಗುತ್ತವೆ. ಆಗ ವಿಮಾನದ ಹಿಂದೆ ಉಂಟಾದ ನಿರ್ವಾತದಲ್ಲಿ ಅಪ್ಪಳಿಸಿದಾಗ ಉಂಟಾಗುವ ಶಬ್ಧವೇ ಸೂಪರ್ ಸೋನಿಕ್ ಬೂಮ್ ಎಂದು ವಿಂಗ್ ಕಮಾಂಡರ್ ಸುದರ್ಶನ್ ತಿಳಿಸಿದ್ದಾರೆ.

    ಸೂಪರ್ ಸೋನಿಕ್ ವೇಗವನ್ನು ಮ್ಯಾಕ್ ಸಂಖ್ಯೆಯಲ್ಲಿ ಹೇಳಲಾಗುತ್ತದೆ. ಮ್ಯಾಕ್ 1 ಎಂದರೆ ಧ್ವನಿಯ ವೇಗ, ಮ್ಯಾಕ್ 2 ಆ ವೇಗದ ಎರಡರಷ್ಟು. ವಿಮಾನದ ಎತ್ತರದಲ್ಲಿನ ಧ್ವನಿಯ ವೇಗದಿಂದ ವಿಮಾನದ ವೇಗವನ್ನು ವಿಭಜಿಸುವುದರಿಂದ ಮ್ಯಾಕ್ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ. ಯುದ್ಧ ವಿಮಾನಗಳ ವಾಯುನೆಲೆಯಲ್ಲಿ ಸೂಪರ್ ಸೋನಿಕ್ ಬೂಮ್ ಸಾಮಾನ್ಯ. ಬಹಳಷ್ಟು ಸಲ ಕಿಟಕಿಯ ಗಾಜುಗಳು ಒಡೆದು ಹೋಗುತ್ತದೆ.

  • ಪಾಕಿನಿಂದ ಹಾರಿ ಬಂದ ವಿಮಾನವನ್ನು ಬಲವಂತವಾಗಿ ಇಳಿಸಿದ ವಾಯುಸೇನೆ

    ಪಾಕಿನಿಂದ ಹಾರಿ ಬಂದ ವಿಮಾನವನ್ನು ಬಲವಂತವಾಗಿ ಇಳಿಸಿದ ವಾಯುಸೇನೆ

    ನವದೆಹಲಿ: ಪಾಕಿಸ್ತಾನದಿಂದ ಹಾರಿ ಬಂದ ಜಾರ್ಜಿಯದ ಸರಕು ಸಾಗಾಣೆ ವಿಮಾನವನ್ನು ಭಾರತೀಯ ವಾಯುಸೇನೆ ಬಲವಂತವಾಗಿ ಇಳಿಸಿದ ಘಟನೆ ಜೈಪುರದಲ್ಲಿ ನಡೆದಿದೆ.

    ಜಾರ್ಜಿಯಾದ ಆಂಟೋನೋವ್ ಎಎನ್-12 ಹೆಸರಿನ ಬೃಹತ್ ಸರಕು ವಿಮಾನವು ಟಿಬಿಲಿಸಿಯಿಂದ ಕರಾಚಿ ಮಾರ್ಗವಾಗಿ ದೆಹಲಿಯಲ್ಲಿ ಇಳಿಯಬೇಕಿತ್ತು. ಆದರೆ ಏರ್ ಟ್ರಾಫಿಕ್ ಸರ್ವಿಸಸ್(ಎಟಿಎಸ್) ನೀಡಿದ್ದ ಅಧಿಕೃತ ಮಾರ್ಗವನ್ನು ಬದಲಾಯಿಸಿ ಶುಕ್ರವಾರ ಮಧ್ಯಾಹ್ನ 3:30 ವೇಳೆಗೆ ಗುಜರಾತಿನ ಕಛ್ ವಾಯು ನೆಲೆಯನ್ನು ವಿಮಾನ ಪ್ರವೇಶಿಸಿತ್ತು.

    70 ಕಿ.ಮೀ ದೂರದಲ್ಲಿ ಭಾರತದ ವಾಯುಗಡಿಯನ್ನು ಅಕ್ರಮವಾಗಿ ಪ್ರವೇಶಿಸಿದ ಕೂಡಲೇ ಭಾರತದ ವಾಯುಪಡೆ ಕೂಡಲೇ ಜಾಗೃತಗೊಂಡಿತ್ತು. ನಿಯಂತ್ರಣ ಕೊಠಡಿಗಳಿಂದ ರೇಡಿಯೊ ಕರೆಗಳನ್ನು ಮಾಡಿದರೂ ವಿಮಾನದ ಪೈಲಟ್ ಯಾವುದೇ ಪ್ರತಿಕ್ರಿಯೆ ನೀಡದೇ ಮುನ್ನುಗ್ಗಿಸುತ್ತಿದ್ದ.

    ವಿಮಾನದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಉತ್ತರ ಭಾರತದ್ಯಾಂತ ಅಲರ್ಟ್ ಘೋಷಿಸಲಾಯಿತು. ಕೂಡಲೇ ರಾಜಸ್ಥಾನ ಜೋಧ್‍ಪುರ ಮತ್ತು ಉತ್ತರ ಪ್ರದೇಶದಲ್ಲಿರುವ ರಾಯ್‍ಬರೇಲಿ ವಾಯು ನೆಲೆಯಿಂದ ಎರಡು ಸುಖೋಯ್ ಯುದ್ಧ ವಿಮಾನಗಳನ್ನು ಕಳುಹಿಸಿ 27 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ಕಾರ್ಗೋ ವಿಮಾನವನ್ನು ಬಲವಂತವಾಗಿ ಸಂಜೆ 4:30ಕ್ಕೆ ಜೈಪುರದಲ್ಲಿ ಇಳಿಸಲಾಯಿತು.

    ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಇಬ್ಬರು ಪೈಲಟ್, ಆರು ಸಿಬ್ಬಂದಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳು, ಗುಪ್ತಚರ ದಳದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  ವಿಮಾನ ವಾಯು ಮಾರ್ಗವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಲವಂತವಾಗಿ ಇಳಿಸಿಲಾಗಿತ್ತು. ಇದು ಗಂಭೀರವಾದ ಉಲ್ಲಂಘನೆ ಅಲ್ಲ. ವಿಚಾರಣೆ ಬಳಿಕ  ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಒಂದು ವೇಳೆ ವಿಮಾನ ಜೈಪುರದಲ್ಲಿ ಲ್ಯಾಂಡ್ ಆಗದೇ ಇದ್ದರೆ ಯುದ್ಧ ವಿಮಾನಗಳು ಸರಕು ವಿಮಾನವನ್ನು ಹೊಡೆದು ಉರುಳಿಸಲು ಮುಂದಾಗಿತ್ತು.

  • ಚೀನಾ ಗಡಿಯ ಬಳಿ ವಾಯುಸೇನೆಯ ಸುಖೋಯ್-30 ಯುದ್ಧ ವಿಮಾನ ನಾಪತ್ತೆ

    ಚೀನಾ ಗಡಿಯ ಬಳಿ ವಾಯುಸೇನೆಯ ಸುಖೋಯ್-30 ಯುದ್ಧ ವಿಮಾನ ನಾಪತ್ತೆ

    ನವದೆಹಲಿ: ಭಾರತೀಯ ವಾಯುಸೇನೆಗೆ ಸೇರಿದ ಯುದ್ಧ ವಿಮಾನ ಸುಖೋಯ್-30 ನಾಪತ್ತೆಯಾಗಿದೆ.

    ಇಂದು ಬೆಳಿಗ್ಗೆ ಅಸ್ಸಾಂನ ತೇಜ್‍ಪುರ್ ಬಳಿ ಚೀನಾ ಗಡಿಯ ಸಮೀಪ ಹಾರಾಟ ನಡೆಸುತ್ತಿದ್ದ ವೇಳೆ ವಿಮಾನ ನಾಪತ್ತೆಯಾಗಿದೆ. ಬೆಳಿಗ್ಗೆ 9.30ಕ್ಕೆ ಟೇಕ್ ಆಫ್ ಆದ ವಿಮಾನ ಅರುಣಾಚಲಪ್ರದೇಶದ ದೌಲಾಸಾಂಗ್ ಪ್ರದೇಶದ ಬಳಿ ವಿಮಾನ ಕಾಣೆಯಾಗಿದೆ. ವಿಮಾನ ಕೊನೆಯ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದು ಸುಮಾರು 11.30ರ ವೇಳೆಗೆ ತೇಜ್‍ಪುರ್‍ನಿಂದ 60 ಕಿ.ಮೀ ದೂರದಲ್ಲಿದ್ದಾಗ ಎಂದು ವರದಿಯಾಗಿದೆ.

    ವಿಮಾನದಲ್ಲಿ ಇಬ್ಬರು ಪೈಲಟ್‍ಗಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ತೇಜ್‍ಪುರ್ ವಾಯುಪಡೆ ನಿಲ್ದಾಣ ಚೀನಾ ಗಡಿಯಿಂದ ಸುಮಾರು 172 ಕಿ.ಮೀ ದೂರದಲ್ಲಿದೆ.

    ಇದೇ ವರ್ಷ ಮಾರ್ಚ್ ನಲ್ಲಿ ಸುಖೋಯ್-30 ಯುದ್ಧವಿಮಾನ ರಾಜಸ್ಥಾನದ ಬರ್ಮರ್ ವಾಯುನೆಲೆ ಬಳಿ ಅಪಘಾತಕ್ಕೀಡಾಗಿತ್ತು. ವಿಮಾನದಲ್ಲಿದ್ದ ಇಬ್ಬರು ಪೈಲೆಟ್‍ಗಳು ಪ್ರಾಣಾಪಾಯದಿಂದ ಪಾರಾಗಿದ್ದರು.

    ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.