Tag: ಸುಖೋಯ್ ಫೈಟರ್ ಜೆಟ್

  • IAF Jets Crashː ವಾಯುಸೇನಾ ವಿಮಾನಗಳು ಪತನ – ಬ್ಲ್ಯಾಕ್‌ ಬಾಕ್ಸ್‌ ಪತ್ತೆ

    IAF Jets Crashː ವಾಯುಸೇನಾ ವಿಮಾನಗಳು ಪತನ – ಬ್ಲ್ಯಾಕ್‌ ಬಾಕ್ಸ್‌ ಪತ್ತೆ

    ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ತಾಲೀಮು ನಡೆಸುತ್ತಿದ್ದ ವೇಳೆ ಪತನಗೊಂಡಿದ್ದ ಸುಖೋಯ್-30 ಹಾಗೂ ಮಿರಾಜ್-2000 ಭಾರತೀಯ ಯುದ್ಧ ವಿಮಾನಗಳ (Fighter Jets) ಬ್ಲ್ಯಾಕ್‌ಬಾಕ್ಸ್ (ಡೇಟಾ ರೆಕಾರ್ಡರ್) (Black Box) ಭಾನುವಾರ ಪತ್ತೆಯಾಗಿದೆ.

    ಸುಖೋಯ್-30 (Sukhoi 30) ಹಾಗೂ ಮಿರಾಜ್-2000 (Mirage 2000) ಎರಡು ವಿಮಾನಗಳು ಮಧ್ಯಪ್ರದೇಶದ ಗ್ವಾಲಿಯರ್ ವಾಯು ನೆಲೆಯಿಂದ ಟೇಕಾಫ್ ಆಗಿ ತಾಲೀಮು ನಡೆಸುತ್ತಿದ್ದವು. ಬೆಳಗ್ಗೆ 5:30ರ ಸುಮಾರಿಗೆ ಆಗಸದಲ್ಲಿ ಹಾರಾಟ ನಡೆಸುತ್ತಿದ್ದಂತೆ ಮಧ್ಯಪ್ರದೇಶದ ಮೊರೆನಾ ಬಳಿ ಪರಸ್ಪರ ಡಿಕ್ಕಿ ಹೊಡೆದುಕೊಂಡು ಪತನಗೊಂಡಿದ್ದವು. ಪರಿಣಾಮ ಮಿರಾಜ್-2000 ಯುದ್ಧ ವಿಮಾನದಲ್ಲಿದ್ದ ಪೈಲಟ್ ಮೃತಪಟ್ಟಿದ್ದರು. ಇದನ್ನೂ ಓದಿ: ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಹೇಗೆ ಕೆಲಸ ಮಾಡುತ್ತೆ? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    Madhya Pradesh Plane Crash: ಮಿರಾಜ್ 2000 ಯುದ್ಧ ವಿಮಾನದ ಪೈಲಟ್ ದುರ್ಮರಣ

    ಘಟನೆ ಬಳಿಕ ಮಿರಾಜ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಸುಖೋಯ್ ವಿಮಾನದ ಬ್ಲ್ಯಾಕ್ ಬಾಕ್ಸ್‌ನ ಒಂದು ಭಾಗ ಪತ್ತೆಯಾಗಿದ್ದು, ಉಳಿದ ಭಾಗವು ಭರತ್ ಪುರದಲ್ಲಿ ಬಿದ್ದಿರಬಹುದು ಎಂದು ಮೊರೆನಾ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಬಗ್ರಿ ಹೇಳಿದ್ದಾರೆ. ಇದನ್ನೂ ಓದಿ: Madhya Pradesh Plane Crash: ಮಿರಾಜ್ 2000 ಯುದ್ಧ ವಿಮಾನದ ಪೈಲಟ್ ದುರ್ಮರಣ

    Madhya Pradesh Plane Crash: ಮಿರಾಜ್ 2000 ಯುದ್ಧ ವಿಮಾನದ ಪೈಲಟ್ ದುರ್ಮರಣ

    ವಿಮಾನಗಳು ತಾಲೀಮು ನಡೆಸುತ್ತಿದ್ದ ಸಂದರ್ಭದಲ್ಲಿ ಗಾಳಿಯಲ್ಲಿ ಡಿಕ್ಕಿ ಹೊಡೆದಿರುವ ಸಾಧ್ಯತೆಯಿದೆ ಎಂದು ರಕ್ಷಣಾ ತಜ್ಞರು ಹೇಳಿದ್ದಾರೆ. ಆದರೆ ಐಎಎಫ್‌ನಿಂದ (IAF) ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸುಖೋಯ್ ಫೈಟರ್ ಜೆಟ್ ಪತನ- ಇಬ್ಬರು ಪೈಲಟ್ ಪಾರು

    ಸುಖೋಯ್ ಫೈಟರ್ ಜೆಟ್ ಪತನ- ಇಬ್ಬರು ಪೈಲಟ್ ಪಾರು

    ದಿಸ್ಪುರ: ಭಾರತೀಯ ವಾಯು ಸೇನೆಗೆ ಸೇರಿದ್ದ ಸುಖೋಯ್ ಫೈಟರ್ ಜೆಟ್ ಅಸ್ಸಾಂನ ತೇಜ್ಪುರದ ಭತ್ತದ ಗದ್ದೆಯಲ್ಲಿ ಗುರುವಾರದಂದು ಪತನಗೊಂಡಿದೆ.

    ಗುರುವಾರ ಸುಖೋಯ್ ಫೈಟರ್ ಜೆಟ್(ಎಸ್‍ಯು-30 ಎಂಕೆಐ ಫೈಟರ್ ಜೆಟ್) ಎಂದಿನಂತೆ ತರಬೇತಿ ಮಿಷನ್ ನಲ್ಲಿ ತೊಡಗಿತ್ತು. ಈ ವೇಳೆ ತೇಜ್ಪುರದ ಮಿಲನ್‍ಪುರ ಪ್ರದೇಶದ ಭತ್ತದ ಗದ್ದೆಯಲ್ಲಿ ಪತನವಾಗಿದ್ದು, ವಿಮಾನ ಅಪಘಾತಕ್ಕೀಡಾದ ಕೆಲ ಸಮಯದ ಬಳಿಕ ರಾತ್ರಿ ಸುಮಾರು 8.30ರ ಹೊತ್ತಿಗೆ ಬೆಂಕಿ ಹೊತ್ತಿಕೊಂಡು ಸುಟ್ಟುಹೋಗಿದೆ. ಆದರೆ ಅದೃಷ್ಟವಶಾತ್ ಜೆಟ್‍ನಲ್ಲಿದ್ದ ಇಬ್ಬರು ಪೈಲಟ್‍ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರಲ್ಲಿ ಓರ್ವ ಪೈಲಟ್ ಕಾಲಿಗೆ ಗಂಭಿರವಾಗಿ ಪೆಟ್ಟಾಗಿದೆ ಎಂದು ಸೇನಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ ತಿಳಿಸಿದ್ದಾರೆ.

    ಈ ಅಪಘಾತದಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಯಾವುದೇ ನಷ್ಟವಾಗಿಲ್ಲ. ವಿಮಾನ ಪತನಗೊಂಡ ತಕ್ಷಣ ಸ್ಥಳೀಯರು ಇಬ್ಬರು ಪೈಲಟ್‍ಗಳನ್ನು ರಕ್ಷಿಸಿ, ತೇಜ್ಪುರದ ಸೇನಾ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿದ್ದಾರೆ. ಈ ಬಗ್ಗೆ ತಿಳಿದು ಸ್ಥಳಕ್ಕೆ ಆಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದರು ಎಂದು ಪಾಂಡೆ ಅವರು ಮಾಹಿತಿ ನೀಡಿದ್ದಾರೆ.

    ವಿಮಾನ ಪತನವಾಗಲು ಕಾರಣವೇನು ಎನ್ನುವುದನ್ನು ತಿಳಿಯಲು ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ ಎಂದು ಅಧಿಕಾರಿಗಳು ದೆಹಲಿಯಲ್ಲಿ ತಿಳಿಸಿದ್ದಾರೆ.