Tag: ಸುಗ್ರೀವಾಜ್ಞೆ

  • ಬೆಂಗಳೂರಲ್ಲಿ ಅಕ್ರಮವಾಗಿ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್

    ಬೆಂಗಳೂರಲ್ಲಿ ಅಕ್ರಮವಾಗಿ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್

    ಬೆಂಗಳೂರು: ಮಹಾನಗರದಲ್ಲಿ ಬಿಡಿಎ ಕಾಯಿದೆ ಉಲ್ಲಂಘನೆ ಮಾಡಿ ಮನೆ ಕಟ್ಟಿಕೊಂಡಿರುವ ಮಂದಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಿಯಮ ಉಲ್ಲಂಘಿಸಿನೆ ಮನೆ ಕಟ್ಟಿದ್ದರೆ ದಂಡ ಕಟ್ಟಿಸಿಕೊಂಡು ಕಾನೂನು ಬದ್ಧ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

    ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೇ ಬಿಡಿಎ 38 ಜ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

    ತಿದ್ದುಪಡಿ ಅನ್ವಯ 12 ವರ್ಷದ ಹಿಂದೆ ಮನೆ ಕಟ್ಟಿಕೊಂಡಿದ್ದವರಿಗೆ ಮಾತ್ರ ಈ ಸೌಲಭ್ಯ ಲಭ್ಯವಾಗಲಿದೆ. 20*30 ನಿವೇಶನದಲ್ಲಿ ಮನೆ ಕಟ್ಟಿಕೊಂಡಿರುವವರು ಮಾರುಕಟ್ಟೆ ಮೌಲ್ಯದ ಶೇ.10ರಷ್ಟು ದಂಡ ಕಟ್ಟಬೇಕಿದೆ. 30*40 ನಿವೇಶನದಲ್ಲಿ ಮನೆ ಕಟ್ಟಿಕೊಂಡಿರುವವರು ಮಾರುಕಟ್ಟೆ ಮೌಲ್ಯದ ಶೇ.20ರಷ್ಟು ದಂಡ ಪಾವತಿಸಬೇಕು. 40*50 ಹಾಗೂ 50*80 ನಿವೇಶನದಲ್ಲಿ ಮನೆ ಕಟ್ಟಿಕೊಂಡಿರುವವರು ಶೇ.40 ರಷ್ಟು ಮಾರುಕಟ್ಟೆ ಮೌಲ್ಯದ ದಂಡ ಕಟ್ಟ ಬೇಕಿದೆ.

    ಉಳಿದಂತೆ 50*80 ನಂತರದ ಕಟ್ಟಡಗಳಿಗೆ ಯಾವುದೇ ಸಕ್ರಮ ಮಾಡಲ್ಲ. ಖಾಲಿ ನಿವೇಶನ ಮತ್ತು ಹೊಸದಾಗಿ ಮನೆ ಕಟ್ಟಿಕೊಂಡಿರುವವರಿಗೆ ಈ ಸೌಲಭ್ಯ ಅನ್ವಯ ಆಗುವುದಿಲ್ಲ. ಇದರಿಂದ ಅಂದಾಜು 50 ಸಾವಿರ ಮಂದಿಗೆ ಲಾಭ ಆಗಲಿದೆ.

  • ಕರ್ನಾಟಕದಲ್ಲಿ 1 ವರ್ಷ ಮಾಸ್ಕ್ ಬಳಕೆ ಕಡ್ಡಾಯ

    ಕರ್ನಾಟಕದಲ್ಲಿ 1 ವರ್ಷ ಮಾಸ್ಕ್ ಬಳಕೆ ಕಡ್ಡಾಯ

    ಬೆಂಗಳೂರು: ಕರ್ನಾಟಕದಲ್ಲಿ ಒಂದು ವರ್ಷ ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

    ‘ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ 2020’ ಹೆಸರಿನಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಈ ಆದೇಶ ಪ್ರಕಟವಾದ ದಿನದಿಂದ ಒಂದು ವರ್ಷದವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ.

     

    ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೇ ಇದ್ದಲ್ಲಿ ಕರವಸ್ತ್ರ, ಅಥವಾ ಬಾಯಿ ಮತ್ತು ಮೂಗನ್ನು ಬಿಗಿಯಾಗಿಲ್ಲದ ಬಟ್ಟೆಯಿಂದ ಮುಚ್ಚಬೇಕು. ಇಬ್ಬರ ವ್ಯಕ್ತಿಗಳ ನಡುವೆ ಕನಿಷ್ಠ 1 ಮೀಟರ್ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

    ಮಾಸ್ಕ್ ಧರಿಸದಿದ್ದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 200 ರೂ., ಮಹಾನಗರ ವ್ಯಾಪ್ತಿಯಲ್ಲದ ಪ್ರದೇಶಗಳಲ್ಲಿ 100 ರೂ. ದಂಡವನ್ನು ವಿಧಿಸಲಾಗುತ್ತದೆ.

    ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಮಹಾನಗರ ಪಾಲಿಕೆಯ ಆರೋಗ್ಯ ಇನ್ಸ್ ಪೆಕ್ಟರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಥವಾ ಸರ್ಕಾರದ ಯಾವುದೇ ಅಧಿಕಾರಿಗೆ ದಂಡ ವಿಧಿಸುವ ಅಧಿಕಾರವನ್ನು ಸುಗ್ರೀವಾಜ್ಞೆಯಲ್ಲಿ ನೀಡಲಾಗಿದೆ.

  • ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು

    ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು

    ಚೆನ್ನೈ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆಯಾಗಲಿದೆ.

    ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಿಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

    ಮಾರಣಾಂತಿಕ ಕೋವಿಡ್-19 ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.

    ತಮಿಳುನಾಡು ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಅಡ್ಡಿಪಡಿಸಿದರೆ ಕನಿಷ್ಟ 1 ವರ್ಷ ಜೈಲು ಅಥವಾ ಗರಿಷ್ಟ 3 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ವೃದ್ಧೆಯ ಶವ ಸಂಸ್ಕಾರಕ್ಕೆ ಬಿಜೆಪಿ ಶಾಸಕನಿಂದ ತಡೆ

    ಕೆಲ ದಿನಗಳ ಹಿಂದೆ ಚೆನ್ನೈನಲ್ಲಿ ಕೊರೊನಾ ಸೋಂಕಿಗೆ ಇಬ್ಬರು ವೈದ್ಯರು ಬಲಿಯಾಗಿದ್ದರು. ಈ ವೈದ್ಯರ ಅಂತ್ಯಸಂಸ್ಕಾರಕ್ಕೆ ಜನ ಅಡ್ಡಿ ಪಡಿಸಿದ್ದರು. ಅಷ್ಟೇ ಅಲ್ಲದೇ ಅಲ್ಲಿದ್ದ ಆರೋಗ್ಯ ಕಾರ್ಯಕರ್ತರ ಮೇಲೂ ಹಲ್ಲೆ ನಡೆಸಿದ್ದರು. ಕೊನೆಗೆ ಪೊಲೀಸರ ಸಹಕಾರದಿಂದ ಬೇರೆ ಪ್ರದೇಶದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು.

  • ಕೊರೊನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ್ರೆ ಹುಷಾರ್- ರಾಜ್ಯದಲ್ಲಿ 3 ವರ್ಷ ಜೈಲು, ಆಸ್ತಿ ಜಪ್ತಿ

    ಕೊರೊನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ್ರೆ ಹುಷಾರ್- ರಾಜ್ಯದಲ್ಲಿ 3 ವರ್ಷ ಜೈಲು, ಆಸ್ತಿ ಜಪ್ತಿ

    – ಕೇಂದ್ರದಿಂದಲೂ 7 ವರ್ಷ ಶಿಕ್ಷೆಗೆ ಸುಗ್ರೀವಾಜ್ಞೆ

    ಬೆಂಗಳೂರು: ನಗರದ ಪಾದರಾಯನಪುರ ಗಲಭೆ ಬೆನ್ನಲ್ಲೇ ಕೊರೊನಾ ವಾರಿಯರ್ಸ್ ಮೇಲಿನ ದಾಳಿ ತಡೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

    ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ಇನ್ಮೇಲೆ, ಸರ್ಕಾರಿ ಅಧಿಕಾರಿಗಳು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದರೆ ಅಂಥವರಿಗೆ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಕೂಡ 1897ರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬಂದಿದ್ದು, ಕೊರೋನಾ ವಾರಿಯರ್ಸ್ ಮೇಲೆ ನಡೆಯುತ್ತಿರುವ ಕೃತ್ಯಗಳು `ಸಹಿಸುವಂತ ಪ್ರಕರಣ’ಗಳೇ ಅಲ್ಲ ಅಂತ ಸ್ಪಷ್ಟಪಡಿಸಿದೆ. ಏಪ್ರಿಲ್ 27ರಂದು ಪ್ರಧಾನಿ ಮೋದಿ ಅವರು, ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಈ ನಡುವೆಯೂ ಇಂದು ಪಾದರಾಯನಪುರದ ಗಲಭೆಯಂತಹ ಘಟನೆ ಪಶ್ಚಿಮ ಬಂಗಾಳದ ಬದುರಿಯಾದಲ್ಲಿ ನಡೆದಿದೆ. ಲಾಕ್‍ಡೌನ್ ಕಾವಲಿಗೆ ಇದ್ದ ಪೊಲೀಸರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ.

    ರಾಜ್ಯದ ಸುಗ್ರೀವಾಜ್ಞೆಯಲ್ಲಿ ಏನಿದೆ?
    ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ್ರೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆಸ್ತಿ ನಷ್ಟ ಉಂಟುಮಾಡಿದರೆ ಆಸ್ತಿ ಮಟ್ಟುಗೋಲು ಹಾಕಲಾಗುತ್ತದೆ. ಆಸ್ತಿ ಇಲ್ಲದಿದ್ದರೆ ಆರೋಪಿಗಳು ಬಂಧನ, ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. ಜಿಲ್ಲಾ ದಂಡಾಧಿಕಾರಿಗಳಿಗೆ ಅಧಿಕಾರ ಚಲಾಯಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧನ ಮಾಡಬಹುದು. ಹಲ್ಲೆಗೊಳಗಾದ ಕೊರೊನಾ ವಾರಿಯರ್ಸ್ ದೂರು ದಾಖಲಿಸಬೇಕಿಲ್ಲ.

    ಕೇಂದ್ರದ ಸುಗ್ರೀವಾಜ್ಞೆಯಲ್ಲಿ ಏನಿರುತ್ತೆ?
    ಹೆಲ್ತ್ ವಾರಿಯರ್ಸ್ ಮೇಲಿನ ಹಲ್ಲೆಗೆ 6 ತಿಂಗಳಿಂದ 7 ವರ್ಷದವರೆಗೂ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 50 ಸಾವಿರ ರೂ.ದಿಂದ 5 ಲಕ್ಷ ರೂಪಾಯಿವರೆಗೂ ದಂಡ ವಿಧಿಸಲಾಗುವುದು. ವಾಹನಗಳು, ಆಸ್ಪತ್ರೆಗಳ ಮೇಲೆ ದಾಳಿ ನಡೆದು ಆಸ್ತಿ ನಷ್ಟ ಸಂಭವಿಸಿದರೆ ಅವುಗಳ ಮಾರುಕಟ್ಟೆ ಮೌಲ್ಯದ ದುಪ್ಪಟ್ಟು ದಂಡವನ್ನು ವಸೂಲಿ ಮಾಡಲಾಗುತ್ತದೆ. ಇಂತಹ ಪ್ರಕರಣವನ್ನು ಒಂದು ವರ್ಷದೊಳಗೆ ವಿಚಾರಣೆ ಮುಗಿಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗುತ್ತದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸಂಪೂರ್ಣ ಭದ್ರತೆ ನೀಡಲಾಗುತ್ತದೆ.

  • ರಾಮಮಂದಿರ ಸುಗ್ರೀವಾಜ್ಞೆಯ ಪ್ರಧಾನಿಗಳ ಹೇಳಿಕೆಗೆ ನಮ್ಮ ಸ್ವಾಗತವಿದೆ: ಪೇಜಾವರ ಶ್ರೀ

    ರಾಮಮಂದಿರ ಸುಗ್ರೀವಾಜ್ಞೆಯ ಪ್ರಧಾನಿಗಳ ಹೇಳಿಕೆಗೆ ನಮ್ಮ ಸ್ವಾಗತವಿದೆ: ಪೇಜಾವರ ಶ್ರೀ

    ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಗೆ ನಮ್ಮ ಸ್ವಾಗತವಿದೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

    ನಗರದಲ್ಲಿ ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಕಾನೂನು ಮೀರಿ ಯಾವುದನ್ನು ಮಾಡಬಾರದು. ಈ ಬಗ್ಗೆ ಮೋದಿ ಅವರ ಹೇಳಿಕೆಯ ಬಗ್ಗೆ ನಮ್ಮ ಸ್ವಾಗತ ಇದೆ. ಆದರೆ ಮಂದಿರದ ನಿರ್ಮಾಣದ ಬಗ್ಗೆ ಕಾನೂನು ತಜ್ಞರು ಸಲಹೆ ಪಡೆದು ಸುಗ್ರೀವಾಜ್ಞೆ ಹೊರಡಿಸಬಹುದು. ಈ ಕುರಿತು ನಮ್ಮ ಹಂತದಲ್ಲಿ ಮತ್ತೆ ಕಾನೂನು ತಜ್ಞರೊಂದಿಗೆ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಕಾನೂನನ್ನೂ ಮೀರಿ ಯಾವುದೂ ಮಾಡಬಾರದು ಎಂಬ ಕಾರಣಕ್ಕೆ ಪ್ರಧಾನಿಗಳು ಈ ರೀತಿ ಹೇಳಿರಬಹುದು ಎಂದರು.

    ಮೋದಿ ಅವರು ಸಂವಿಧಾನದ ಒಳಗೆ ನಿರ್ಧಾರ ಮಾಡುವುದು ಎಂದು ಹೇಳಿದ್ದಾರೆ. ಆದ್ದರಿಂದ ನಾನು ರಾಮಮಂದಿರ ಬಗ್ಗೆ ಕಾನೂನು ತಜ್ಞರು ಹಾಗೂ ಸಂಘಟನೆಗಳೊಂದಿಗೆ ಬಗ್ಗೆ ಚರ್ಚೆ ನಡೆಸುತ್ತೇನೆ. ಸುಗ್ರೀವಾಜ್ಞೆ ಹೊರಡಿಸುವುದು ಸಂವಿಧಾನ ವಿರೋಧವಲ್ಲ ಎಂಬ ಅಭಿಪ್ರಾಯ ಇದೆ. ಈ ತಿಂಗಳ ಕೊನೆಗೆ ಕುಂಭಮೇಳ ನಡೆಯಲಿದ್ದು, ಇಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ತಿಳಿಸುತ್ತೇವೆ. ಈ ಬಳಿಕವೇ ನನ್ನ ಖಚಿತ ಅಭಿಪ್ರಾಯವೂ ತಿಳಿಸುತ್ತೇನೆ ಎಂದರು.

    ಮೋದಿ ಹೇಳಿದ್ದೇನು?
    ಸುಪ್ರೀಂ ಕೋರ್ಟ್ ಅಯೋಧ್ಯೆ ಕುರಿತು ತೀರ್ಪು ನೀಡಿದ ಬಳಿಕ ಸರ್ಕಾರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ನ್ಯಾಯಾಲಯದಲ್ಲಿ ರಾಮಮಂದಿರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವಿಳಂಬವಾಗಲು ಕಾಂಗ್ರೆಸ್ ವಕೀಲರು ಕಾರಣ. ರಾಮಮಂದಿರ ಬಿಜೆಪಿ ಭಾವಾತ್ಮಕ ವಿಚಾರವಾಗಿದ್ದು ಅದನ್ನು ನಾವು ನಿರ್ಲಕ್ಷ್ಯ ವಹಿಸಿಲ್ಲ. ರಾಮಮಂದಿರವನ್ನು ಸಂವಿಧಾನದ ವ್ಯಾಪ್ತಿಯಲ್ಲಿ ಇತ್ಯರ್ಥ ಪಡಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ. ಹೀಗಾಗಿ ನಾವು ನ್ಯಾಯಾಂಗದಲ್ಲಿ ನಂಬಿಕೆ ಇಟ್ಟಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪಿನ ನಂತರವಷ್ಟೇ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆಯನ್ನು ಹೊರಡಿಸುವ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಪ್ರೀಂ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ನಿರ್ಧಾರ: ಮೋದಿ

    ಸುಪ್ರೀಂ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ನಿರ್ಧಾರ: ಮೋದಿ

    – ಕಾಂಗ್ರೆಸ್ ಚಿಂತನೆಯೇ ಒಂದು, ಸಂಸ್ಕೃತಿಯೇ ಒಂದು
    – ವರ್ಷದ ಮೊದಲ ದಿನವೇ ಮಾಧ್ಯಮಕ್ಕೆ ಸಂದರ್ಶನ
    – ಸಾಲಮನ್ನಾ ರಾಜಕೀಯ ನಾಟಕ
    – ಉರ್ಜಿತ್ ಪಟೇಲ್ 7-8 ತಿಂಗಳ ಮೊದಲೇ ರಾಜೀನಾಮೆ ನೀಡಿದ್ರು

    ನವದೆಹಲಿ: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ, ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಟೀಕೆಗೆ ಗುರಿಯಾಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಮೊದಲ ದಿನವೇ ಸಂದರ್ಶನ ನೀಡಿ ಸುದ್ದಿಯಾಗಿದ್ದಾರೆ. ತಮ್ಮ ಸಂದರ್ಶನಲ್ಲಿ ಕಾಂಗ್ರೆಸ್ ಸೇರಿದಂತೆ ಮಿತ್ರಪಕ್ಷಗಳ ಧೋರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಹೊಸ ವರ್ಷದಂದೆ ಎಎನ್‍ಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡುವ ಮೂಲಕ ಲೋಕಸಭಾ ಚುನಾವಣೆಗೆ ವೇದಿಕೆಯನ್ನು ಸಿದ್ಧಪಡಿಸಿಕೊಂಡಿದ್ದಾರೆ.

    95 ನಿಮಿಷದ ಸಂದರ್ಶನದಲ್ಲಿ ಮೋದಿ ಹೇಳಿದ ಪ್ರಮುಖ ವಿಚಾರಗಳು ಇಲ್ಲಿದೆ

    1. ಕಾಂಗ್ರೆಸ್ ವಿರುದ್ಧ ಟೀಕೆ:
    ದೇಶದ ಮೊದಲ ಕುಟುಂಬ ಎಂದು ಕರೆದುಕೊಂಡಿದ್ದ ಕುಟುಂಬ ಸದಸ್ಯರು ಇಂದು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಮೇಲೆ ಆರ್ಥಿಕ ಅಪರಾಧದ ಪ್ರಕರಣಗಳು ದಾಖಲಾಗಿದೆ. ಆದರೆ ಅವರಿಗೆ ಬೆಂಬಲವಾಗಿರುವ ಕೆಲವರು ಅದನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಸಂಸ್ಕೃತಿಯನ್ನು ತೊಲಗಿಸುವುದು ನಮ್ಮ ಗುರಿಯಾಗಿದ್ದು, ಇದಕ್ಕಾಗಿಯೇ ಕಾರ್ಯನಿರ್ವಸುತ್ತಿದ್ದೇವೆ. ದೇಶದಲ್ಲಿ ಕಾಂಗ್ರೆಸ್ ಸಂಸ್ಕೃತಿ ಇಲ್ಲವಾಗಿಸುವುದೇ ನಮ್ಮ ಉದ್ದೇಶ. ಕಾಂಗ್ರೆಸ್ ಚಿಂತನೆಯೇ ಒಂದು, ಸಂಸ್ಕೃತಿಯೇ ಒಂದು ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಎಂಬುವುದಕ್ಕೆ ಹೊಸ ಅರ್ಥ ನೀಡಿದರು.

    2. ಅಯೋಧ್ಯೆ ರಾಮಮಂದಿರ:
    ಸುಪ್ರೀಂ ಕೋರ್ಟ್ ಅಯೋಧ್ಯೆ ಕುರಿತು ತೀರ್ಪು ನೀಡಿದ ಬಳಿಕ ಸರ್ಕಾರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ನ್ಯಾಯಾಲಯದಲ್ಲಿ ರಾಮಮಂದಿರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವಿಳಂಬವಾಗಲು ಕಾಂಗ್ರೆಸ್ ವಕೀಲರು ಕಾರಣ. ರಾಮಮಂದಿರ ಬಿಜೆಪಿ ಭಾವಾತ್ಮಕ ವಿಚಾರವಾಗಿದ್ದು ಅದನ್ನು ನಾವು ನಿರ್ಲಕ್ಷ್ಯ ವಹಿಸಿಲ್ಲ. ರಾಮಮಂದಿರವನ್ನು ಸಂವಿಧಾನದ ವ್ಯಾಪ್ತಿಯಲ್ಲಿ ಇತ್ಯರ್ಥ ಪಡಿಸುವುದಾಗಿ ಬಿಜೆಪಿ ಪ್ರಾಣಾಳಿಕೆಯಲ್ಲಿ ತಿಳಿಸಿದೆ. ಹೀಗಾಗಿ ನಾವು ನ್ಯಾಯಾಂಗದಲ್ಲಿ ನಂಬಿಕೆ ಇಟ್ಟಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪಿನ ನಂತರವಷ್ಟೇ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆಯನ್ನು ಹೊರಡಿಸುವ ನಿರ್ಧಾರವನ್ನು ಕೈಗೊಳ್ಳಲಾಗುವುದು.

    3. ಪಂಚರಾಜ್ಯಗಳ ಚುನಾವಣೆ:
    ಪಂಚರಾಜ್ಯ ಚುನಾವಣೆಗಳು ಇಬ್ಬರ ಮೇಲೆ ಮಾತ್ರ ನಡೆದಿಲ್ಲ. ಬಿಜೆಪಿ ವಿಶ್ವದ ಅತೀ ದೊಡ್ಡ ಪಕ್ಷವಾಗಿದ್ದು, ಕಾರ್ಯಕರ್ತರ ಪಕ್ಷವಾಗಿದೆ. ಛತ್ತೀಸ್‍ಗಢದಲ್ಲಿ ಆಡಳಿತ ವಿರೋಧ ಅಲೆ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. 15 ವರ್ಷಗಳ ಆಡಳಿತ ವಿರೋಧಿ ಅಲೆಯೇ ನಮ್ಮ ಸೋಲಿಗೆ ಕಾರಣವಾಗಿದೆ. ಆದ್ದರಿಂದ ನಾವು ಆಡಳಿತ ವಿರೋಧಿ ಅಲೆ ವಿರುದ್ಧ ಹೋರಾಟ ನಡೆಸಿದ್ದೇವೆ. ಇನ್ನುಳಿದ ಎರಡು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಆಗಿದೆ. 2019 ಲೋಕಸಭಾ ಚುನಾವಣೆ ಜನತಾ ಹಾಗೂ ಮಹಾಘಟಬಂಧನ್ ನಡುವೆ ನಡೆಯುತ್ತದೆ.

    4. ಸಾಲಮನ್ನಾ ರಾಜಕೀಯ ನಾಟಕ:
    ಸಾಲಮನ್ನಾ ರಾಜಕೀಯ ನಾಟಕವಾಗಿದ್ದು, ರೈತರು ಹೆಚ್ಚು ಖಾಸಗಿ ಸಾಲ ಪಡೆಯುತ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲಾ ರೈತರ ಸಾಲಮನ್ನಾ ಮಾಡಿಲ್ಲ. ಕೇವಲ ಸುಳ್ಳನ್ನೇ ಪ್ರಚಾರ ಮಾಡುತ್ತಿದ್ದಾರೆ. ರೈತರಿಗೆ ನೀರು, ಉತ್ತಮ ಮಾರುಕಟ್ಟೆ, ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುವಂತೆ ಮಾಡಿ ಸಮಗ್ರ ಅಭಿವೃದ್ಧಿ ಆಗುವಂತೆ ಮಾಡುವತ್ತ ನಮ್ಮ ಕಾರ್ಯ ಮುಂದುವರಿದಿದೆ. ದೇಶದ ಸಂಚಾರ ವ್ಯವಸ್ಥೆಯಲ್ಲಿ ಹೊಸ ನಾಂದಿ ಹಾಡಿದ್ದೇವೆ. ಇದರಿಂದ ಉತ್ಪನ್ನಗಳ ಲಭ್ಯತೆಯ ವೇಗ ಹೆಚ್ಚಾಗುತ್ತದೆ. ರೈತರು ಸಾಲವೇ ಪಡೆಯದಂತೆ ಮಾಡುವುದು ನಮ್ಮ ಕಾರ್ಯದ ಉದ್ದೇಶ ಎಂದರು.

    5. ಆರ್ಥಿಕ ಅಪರಾಧಿಗಳು ಭಾರತಕ್ಕೆ ವಾಪಸ್:
    ದೇಶ ಬಿಟ್ಟು ತೆರಳಿದ ಎಲ್ಲಾ ಆರ್ಥಿಕ ಅಪರಾಧಿಗಳನ್ನು ವಾಪಸ್ ಕರೆತರಲಾಗುವುದು. ಈ ಸಂಬಂಧ ಕಾನೂನು ಪ್ರಕ್ರಿಯೆ ಮತ್ತು ರಾಜತಾಂತ್ರಿಕ ಪ್ರಕ್ರಿಯೆಗಳು ನಡೆಯುತ್ತಿದೆ. ಈಗಾಗಲೇ ತನಿಖಾ ಸಂಸ್ಥೆಗಳು ಅಕ್ರಮ ಎಸಗಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿವೆ. ಇಂದು ಬಾರದೇ ಇದ್ದರೂ ನಾಳೆ ಎಲ್ಲ ಆರ್ಥಿಕ ಅಪರಾಧಿಗಳನ್ನು ಕರೆತರಲಾಗುವುದು.

    ಭ್ರಷ್ಟಚಾರದ ವಿರುದ್ಧ ಬಿಜೆಪಿಯ ಹೋರಾಟ ಮುಂದುವರೆಯುತ್ತದೆ. ಜಿಎಸ್‍ಟಿ ತೆರಿಗೆ ವ್ಯವಸ್ಥೆಯನ್ನು ಸರಳಿಕೃತಗೊಳಿಸಿದೆ. ತೆರಿಗೆ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಿದೆ. ದೇಶದ ಮಧ್ಯಮ ವರ್ಗದ ಆಕಾಂಕ್ಷೆಗಳಿಗೆ ನಾವು ಈ ಮೂಲಕ ರೆಕ್ಕೆಗಳನ್ನು ನೀಡಿದ್ದೇವೆ. ಸರ್ಕಾರದ ಹೆಚ್ಚಿನ ಯೋಜನೆಗಳು ಮಧ್ಯಮ ವರ್ಗದ ಜನಕ್ಕೆ ಹೆಚ್ಚು ಲಾಭ ನೀಡಿದೆ.

    6. ತ್ರಿವಳಿ ತಲಾಖ್:
    ಹಲವು ಮುಸ್ಲಿಮ್ ರಾಷ್ಟ್ರಗಳು ತ್ರಿವಳಿ ತಲಾಖ್ ನಿಷೇಧಿಸಿವೆ. ಪಾಕಿಸ್ತಾನದಲ್ಲೂ ತಲಾಖ್ ನಿಷೇಧಗೊಂಡಿದೆ. ಇಲ್ಲಿ ಪ್ರಮುಖವಾಗಿ ಇರುವಂತಹದ್ದು ಲಿಂಗ ಸಮಾನತೆ ಮತ್ತು ಸಾಮಾಜಿಕ ನ್ಯಾಯ. ಇದರಲ್ಲಿ ಧಾರ್ಮಿಕ ನಂಬಿಕೆ ವಿಚಾರ ಬರುವುದಿಲ್ಲ. ಹೀಗಾಗಿ ಈ ವಿಚಾರವನ್ನು ಪ್ರತ್ಯೇಕವಾಗಿ ನೋಡಬೇಕು.

    7. ಶಬರಿಮಲೆ ವಿವಾದ:
    ಕೆಲವೊಂದು ದೇವಾಲಯಗಳು ತನ್ನದೇ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದೆ. ಕೆಲವು ದೇವಾಲಯಗಳಲ್ಲಿ ಪುರುಷರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಶಬರಿಮಲೆ ಪ್ರಕರಣ ಬಂದಾಗ ಮಹಿಳಾ ನ್ಯಾಯಾಧೀಶರು ಕೆಲವು ಅಭಿಪ್ರಾಯವನ್ನು ವ್ಯಕ್ತಪಡಿಸಿ ಸಲಹೆಯನ್ನು ನೀಡಿದ್ದಾರೆ. ಹೀಗಾಗಿ ಈ ವಿಚಾರ ಚರ್ಚೆಯಾಗಬೇಕು.

    8. ನೋಟು ನಿಷೇಧ:
    2016ರಲ್ಲಿ ನಮ್ಮ ಸರ್ಕಾರ ನೀಡಿದ ಶಾಕ್ ಎನ್ನುವ ಆರೋಪವನ್ನು ತಿರಸ್ಕರಿಸಿದ ಅವರು, ಇದು ಪೂರ್ವನಿರ್ಧಾರದಂತೆ ಹೇಳುವ ಜಾತಕವಲ್ಲ. ನಾವು ಎರಡು ವರ್ಷದ ಹಿಂದೆ ಜನರಿಗೆ ಎಚ್ಚರಿಕೆ ನೀಡುತ್ತಾ ಬಂದಿದ್ದೇವೆ. ಕಪ್ಪು ಹಣ ಇರುವ ಮಂದಿಗೆ ದಂಡವನ್ನು ಪಾವತಿಸಿ ಠೇವಣಿ ಇಡುವಂತೆ ಹೇಳಿದ್ದೇವು. ಹೀಗಾಗಿ ಹಲವು ಮಂದಿ ಸ್ವಯಂಪ್ರೇರಿತವಾಗಿ ದಂಡವನ್ನು ಪಾವತಿಸಿದ್ದಾರೆ.

    9. ಉರ್ಜಿತ್ ಪಟೇಲ್ ರಾಜೀನಾಮೆ:
    ಆರ್‌ಬಿಐ ಗವರ್ನರ್ ಅಗಿದ್ದ ಉರ್ಜಿತ್ ಪಟೇಲ್ ತನ್ನ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮೊದಲೇ ಹೇಳಿದ್ದರು. ಮೊದಲ ಬಾರಿಗೆ ಈ ವಿಚಾರವನ್ನು ನಾನು ಈಗ ಹೇಳುತ್ತಿದ್ದು, 7 -8 ತಿಂಗಳ ಹಿಂದೆಯೇ ಅವರು ರಾಜೀನಾಮೆ ನೀಡುತ್ತೇನೆ ಎಂದು ಹೇಳುತ್ತಾ ಬಂದಿದ್ದರು. ಅಷ್ಟೇ ಅಲ್ಲದೇ ಬರಹದಲ್ಲೇ ರಾಜೀನಾಮೆಯನ್ನು ನೀಡಿದ್ದರು. ಇದರಲ್ಲಿ ಯಾವುದೇ ರಾಜಕೀಯ ಒತ್ತಡ ಇಲ್ಲ. ಆರ್‌ಬಿಐ ಗವರ್ನರ್ ಆಗಿ ಉರ್ಜಿತ್ ಪಟೇಲ್ ಉತ್ತಮ ನಿರ್ವಹಣೆ ಮಾಡಿದ್ದಾರೆ.

    10. ಸರ್ಜಿಕಲ್ ಸ್ಟ್ರೈಕ್:
    ಪಾಕಿಸ್ತಾನದ ವಿರುದ್ಧ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಉರಿ ದಾಳಿಗೆ ತಿರುಗೇಟು ನೀಡಲು ನಡೆಸಿದ್ದು, ಈ ವೇಳೆ ಭಾರತೀಯ ಯೋಧರಿಗೆ ಬೆಳಗಾಗುವ ಮುನ್ನ ವಾಪಸ್ ಬನ್ನಿ ಎಂದು ಮಾತ್ರ ತಿಳಿಸಿದ್ದೆ. ಕಾರ್ಯಾಚರಣೆ ಯಶಸ್ವಿಯಾದರೂ, ವಿಫಲವಾದರೂ ದೇಶದ ಸೈನಿಕರಿಗೆ ಆಪಾಯ ಆಗಬಾರದು ಎಂಬುದು ನನ್ನ ಉದ್ದೇಶವಾಗಿತ್ತು. ಅಂದು ನಾನು ಇಡೀ ರಾತ್ರಿ ಪ್ರತಿ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೆ. ಬೆಳಗಾಗಿ 1 ಗಂಟೆಯಾದ ಬಳಿಕ ಸೈನ್ಯದಿಂದ ಸಂದೇಶ ಬಂತು. ಆ ವೇಳೆಗೆ ಎಲ್ಲಾ ಸೈನಿಕರು ಕ್ಯಾಪ್ ಸೇರಿದ್ದರು. ಬಳಿಕವೇ ನನಗೆ ಸಮಾಧಾನ ಆಗಿತ್ತು. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ದೇಶದ ಜನತೆಗೆ ತಿಳಿಸುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೇವು. ಆದರೆ ಈ ಬಗ್ಗೆ ದೇಶದ ಕೆಲ ಜನ ಸಂದೇಹ ವ್ಯಕ್ತಪಡಿಸಿದ್ದು ದುರಾದೃಷ್ಟಕರ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊದಲು ನಾನು ಶ್ರೀರಾಮ ಭಕ್ತೆ ನಂತರ ಸಂಸದೆ : ಶೋಭಾ ಕರಂದ್ಲಾಜೆ

    ಮೊದಲು ನಾನು ಶ್ರೀರಾಮ ಭಕ್ತೆ ನಂತರ ಸಂಸದೆ : ಶೋಭಾ ಕರಂದ್ಲಾಜೆ

    ಉಡುಪಿ: ಮೊದಲು ನಾನು ಶ್ರೀರಾಮ ಭಕ್ತೆ ನಂತರ ಸಂಸದೆ ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

    ಉಡುಪಿಯಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ದೇಶದಲ್ಲಿ ಜಾತ್ಯಾತೀತತೆಯ ಹೆಸರಿನಲ್ಲಿ ಬಂದ ಸರ್ಕಾರಗಳು ರಾಮಮಂದಿರ ನಿರ್ಮಾಣ ಮಾಡಿಲ್ಲ. ಆದರೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಮಮಂದಿರ ನಿರ್ಮಾಣಕ್ಕೆ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಸುಪ್ರೀಂ ಕೋರ್ಟ್ ನಲ್ಲೂ ಪ್ರಯತ್ನ ಮಾಡಿದ್ದೇವೆ. ಕೇಂದ್ರ ಸರ್ಕಾರ ಸುಪ್ರೀಂ ಆದೇಶಕ್ಕಾಗಿ ಕಾಯುತ್ತಿದೆ. ರಾಮಮಂದಿರ ನಿರ್ಮಾಣ ಕುರಿತು ಇಂದು ಇಲ್ಲಿ ಸೇರಿರುವ ನಿಮ್ಮ ಭಾವನೆಯನ್ನು ಪ್ರಧಾನಿ ಮೋದಿ ಅವರಿಗೆ ಮುಟ್ಟಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

    ಇದೇ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ ಕಪಿಲ್ ಸಿಬಲ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ಅಕ್ಟೋಬರ್ 29 ರಂದು ನೀಡಬೇಕಿದ್ದ ತೀರ್ಪಿಗಾಗಿ ಕಾಯುತ್ತಿದ್ದೆವು. ಆದರೆ ಕಪಿಲ್ ಸಿಬಲ್ ಅವರು 2019ರ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಮುಂದುಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಕಳೆದ 4 ವರ್ಷಗಳಿಂದಲೂ ಕಪಿಲ್ ಸಿಬಲ್ ನೇತೃತ್ವದ ವಕೀಲರ ತಂಡ ಇದೇ ಪ್ರಯತ್ನ ನಡೆಸಿದೆ. ಪ್ರಕರಣದ ವಿಚಾರಣೆ ಮತ್ತೆ ಜನವರಿ 29ಕ್ಕೆ ಬರಲಿದ್ದು, ಈ ಕುರಿತ ತೀರ್ಪು ಏನಾಗಲಿದೆ ಎಂಬ ಭಯ ನಮ್ಮಲಿದೆ. ಡಿಸೆಂಬರ್ 11 ರಿಂದ ಲೋಕಸಭಾ ಅಧಿವೇಶನ ಆರಂಭವಾಗಲಿದ್ದು, ಈ ವೇಳೆ ರಾಮಮಂದಿರ ನಿರ್ಮಾಣದ ಚರ್ಚೆಗೆ ಪ್ರಸ್ತಾಪ ಮಾಡಲಾಗುವುದು ಎಂದು ತಿಳಿಸಿದರು.

    ರಾಮಮಂದಿರ ನಿರ್ಮಾಣ ಮಾಡುವ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಇಂದು ಇಷ್ಟು ಮಂದಿ ಸೇರಿದ್ದೀರಾ. ಒಬ್ಬ ಜನಪ್ರತಿನಿಧಿಯಾಗಿ ನಾನು ಕೂಡ ಅಧಿವೇಶನದಲ್ಲಿ ಸುಗ್ರೀವಾಜ್ಞೆ ತರಲು ಪ್ರತ್ನಿಸುತ್ತೇನೆ. ನಿಮ್ಮ ಈ ಕಾರ್ಯಕ್ಕೆ ನಮ್ಮ ಬೆಂಬಲವೂ ಇದೆ. ದೇಶದಲ್ಲಿ ನಮ್ಮ ಸರ್ಕಾರ ಬರಲು ನಿಮ್ಮ ಬೆಂಬಲ ಕಾರಣ, ನಿಮ್ಮ ಆಗ್ರಹವನ್ನು ಪ್ರಧಾನಿಗಳಿಗೆ ನನ್ನ ಮೂಲಕ ಮುಟ್ಟಿಸುತ್ತೇನೆ ಎಂದು ತಿಳಿಸಿದರು. ಇದನ್ನು ಓದಿ : `ಮುಸಲ್ಮಾನರು ಕಲಿಯುಗದ ರಾಕ್ಷಸರು’: ರಾಘವಲು ಪ್ರಚೋದನಕಾರಿ ಭಾಷಣ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕೇಂದ್ರ ಸರ್ಕಾರ ಬಿದ್ದರೂ ಪರವಾಗಿಲ್ಲ, ಮಂದಿರ ಕಟ್ಟಿ: ಪೇಜಾವರಶ್ರೀ

    ಕೇಂದ್ರ ಸರ್ಕಾರ ಬಿದ್ದರೂ ಪರವಾಗಿಲ್ಲ, ಮಂದಿರ ಕಟ್ಟಿ: ಪೇಜಾವರಶ್ರೀ

    ಉಡುಪಿ: ಸರ್ಕಾರ ಬಿದ್ದರೂ ಪರವಾಗಿಲ್ಲ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖಡಕ್ ಸಂದೇಶ ರವಾನೆ ಮಾಡಿದ್ದಾರೆ.

    ಉಡುಪಿ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷ ಕಳೆದಿದೆ. ಇನ್ನೂ ರಾಮ ಮಂದಿರ ನಿರ್ಮಾಣ ಆಗಿಲ್ಲ. ನಾವು ಕಾದಿದ್ದೇವೆ, ಈಗ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.

    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದೃಢ ನಿರ್ಧಾರವು ಕೇಂದ್ರ ಸರ್ಕಾರಕ್ಕೆ ಅನುಕೂಲ ಆಗಲಿದೆ. ನ್ಯಾಯಾಲಯವನ್ನು ಕಾಯುವುದಕ್ಕೆ ಸಾಧ್ಯವಿಲ್ಲ. ಮೋದಿ ಸರ್ಕಾರಕ್ಕೆ ಸಂಪೂರ್ಣ ಬಹುಮತವಿದೆ. ಇದರಿಂದಾಗಿ ಮಾಜಿ ಪ್ರಧಾನಿ ವಾಜಪೇಯಿ ಸರ್ಕಾರಕ್ಕಿಂತ ಹೆಚ್ಚು ಅನುಕೂಲ ಮೋದಿ ಅವರಿಗಿದೆ ಎಂದು ತಿಳಿಸಿದರು.

    ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಈಗ ವಿರೋಧ ಮಾಡಲಿಕ್ಕಿಲ್ಲ, ಚುನಾವಣೆ ಹತ್ತಿರ ಇರುವುದರಿಂದ ಯಾರೂ ವಿರೋಧ ಮಾಡಲ್ಲ. ವಿರೋಧ ಮಾಡುವ ಧೈರ್ಯ ಯಾರಿಗೂ ಇಲ್ಲ. ರಾಮ ಮಂದಿರ ಸಮಸ್ಯೆ ಬಗೆಹರಿಸಲು ಮೂರು ಮಾರ್ಗಗಳಿವೆ, ಸಂಯುಕ್ತ ಅಧಿವೇಶನದ ಮೂಲಕ ಸಮಸ್ಯೆ ಬಗೆಹರಿಸಬಹುದು. ಲೋಕಸಭೆ- ರಾಜ್ಯಸಭೆ ಅಧಿವೇಶನದಲ್ಲಿ ತೀರ್ಮಾನಿಸಬಹುದು. ಇಲ್ಲವೇ ಮಂದಿರ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಲಿ ಎಂದು ಸಲಹೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರಾಮ ಮಂದಿರ ನಿರ್ಮಾಣ ಕುರಿತು ಬಿಜೆಪಿ ಸುಗ್ರೀವಾಜ್ಞೆ ಹೊರಡಿಸಲಿ – ಓವೈಸಿ ಸವಾಲು

    ರಾಮ ಮಂದಿರ ನಿರ್ಮಾಣ ಕುರಿತು ಬಿಜೆಪಿ ಸುಗ್ರೀವಾಜ್ಞೆ ಹೊರಡಿಸಲಿ – ಓವೈಸಿ ಸವಾಲು

    ನವದೆಹಲಿ: ರಾಮಮಂದಿರ ನಿರ್ಮಾಣದ ಕುರಿತು ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಯಾಕೆ ಸುಗ್ರೀವಾಜ್ಞೆ ಹೊರಡಿಸಬಾರದು ಎಂದು ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.

    ಆಯೋಧ್ಯೆ ಕುರಿತು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಿದ ಆದೇಶದ ಬಳಿಕ ಓವೈಸಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ಪ್ರತಿ ಬಾರಿಯೂ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೆಸರು ಹೇಳುವ ಮೂಲಕ ಹೆದರಿಸುವ ಕಾರ್ಯ ಮಾಡುತ್ತಿದೆ ಎಂದು ದೂಷಿಸಿದರು.

    ಬಿಜೆಪಿ, ಆರ್‍ಎಸ್‍ಎಸ್ ಮತ್ತು ವಿಶ್ವ ಹಿಂದೂ ಪರಿಷತ್ ಗಳನ್ನು ಕಾರ್ಟೂನ್ ಪಾತ್ರಗಳಾದ ಟಾಮ್, ಡಿಕ್ ಮತ್ತು ಹ್ಯಾರಿಗೆ ಹೋಲಿಕೆ ಮಾಡಿರುವ ಓವೈಸಿ, ಸದ್ಯ ನೀವು ಅಧಿಕಾರದಲ್ಲಿದ್ದು, ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ಹೊರಡಿಸಿ ಎಂದು ಸವಾಲು ಎಸೆದರು.

    ಪ್ರತಿ 5 ವರ್ಷಕ್ಕೆ ಒಮ್ಮೆ ರಾಮಮಂದಿರ ಕುರಿತ ಈ ಪ್ರಕ್ರಿಯೆ ಸಾಮಾನ್ಯವಾಗಿದೆ. ಬಿಜೆಪಿ ರಾಮಮಂದಿರ ನಿರ್ಮಾಣ ಕುರಿತು ಇರುವ ಜನರ ಭಾವನೆಗಳನ್ನು ಕೇಂದ್ರಿಕರಿಸಲು ಪ್ರಯತ್ನಿಸುತ್ತಿದೆ. ಆದರೆ ರಾಮಮಂದಿರ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಮುನ್ನವೇ ಕಾಂಗ್ರೆಸ್ ಪಕ್ಷ ವಿವಾದದ ಕುರಿತು ಸ್ಪಷ್ಟ ನಿರ್ಣಯ ಕೈಗೊಂಡಿತ್ತು. ಸದ್ಯ ಎಲ್ಲರೂ ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಯಬೇಕಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪ್ರಾಪ್ತ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ – ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಅಸ್ತು

    ಅಪ್ರಾಪ್ತ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ – ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಅಸ್ತು

    ನವದೆಹಲಿ: ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

    12 ವರ್ಷ ವಯಸ್ಸಿನ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ವಿಚಾರಣೆ ವೇಗವಾಗಿ ನಡೆಯಲು ವಿಶೇಷ ಕ್ರಮಗೊಳ್ಳಲಾಗಿದೆ. 16 ಕೆಳಗಿನ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು. ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾದಿ ಶಿಕ್ಷೆ ವಿಧಿಸಬಹುದಾಗಿದೆ.

    ಜಮ್ಮು ಕಾಶ್ಮೀರ ಕಥುವಾ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಆಶಿಫಾ ಮೇಲೆ ನಡೆದ ಅತ್ಯಾಚಾರ ಬಳಿಕ ದೇಶದೆಲ್ಲೆಡೆ ತೀವ್ರ ಪ್ರತಿಭಟನೆ ನಡೆದಿದ್ದವು. ಅಲ್ಲದೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಮನೇಕಾ ಗಾಂಧಿ ಘಟನೆ ಕುರಿತು ಪ್ರತಿಕ್ರಿಯೆ ನೀಡಿ, ಪೋಸ್ಕೋ ಕಾಯ್ದೆ ಅಡಿ ಗಲ್ಲು ಶಿಕ್ಷೆಗೆ ಅವಕಾಶ ಕಲ್ಪಿಸುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದರು.

    ಅಲ್ಲದೇ ಶುಕ್ರವಾರ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಕೇಂದ್ರ ಸರ್ಕಾರ ಗಲ್ಲು ಶಿಕ್ಷೆ ವಿಧಿಸುವ ಕುರಿತ ಪತ್ರವನ್ನು ಸಲ್ಲಿಸಿತ್ತು. ಸದ್ಯ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ನೀಡಿರುವ ಈ ತಿದ್ದುಪಡಿ ಮಸೂದೆ ಮುಂದಿನ ಜುಲೈ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಕಾನೂನು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

    2012ರ ನಿರ್ಭಯಾ ಪ್ರಕರಣದ ಬಳಿಕ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಅವಕಾಶ ನೀಡಲಾಗಿತ್ತು. ಆದರೆ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

    ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿ, ಮಕ್ಕಳ ಮೇಲಿನ ಅತ್ಯಾಚಾರ ನಡೆಸುವಂತಹ ಕೃತ್ಯಗಳನ್ನು ಸಹಿಸುವುದಿಲ್ಲ. ಇಂತಹ ಪ್ರಕರಣಗಳಲ್ಲಿ ನ್ಯಾಯ ನೀಡಲಾಗುತ್ತದೆ ಎಂದು ತಿಳಿಸಿದ್ದರು. ಅಲ್ಲದೇ ಕೇವಲ ಹೆಣ್ಣು ಮಕ್ಕಳ ಚಲನ ವಲನಗಳ ಕಣ್ಣಿಡುವ ಪೋಷಕರು ತಮ್ಮ ಗಂಡು ಮಕ್ಕಳನ್ನು ಈ ಕುರಿತು ಕೇಳಬೇಕಿದೆ ಎಂದು ಹೇಳಿದ್ದರು.