Tag: ಸುದರ್ಶನ್ ಪಟ್ನಾಯಕ್

  • ಪುರಿ ಬೀಚ್‍ನಲ್ಲಿ ಅರಳಿತು ‘ದಿ ಕಾಶ್ಮೀರ್ ಫೈಲ್ಸ್’

    ಪುರಿ ಬೀಚ್‍ನಲ್ಲಿ ಅರಳಿತು ‘ದಿ ಕಾಶ್ಮೀರ್ ಫೈಲ್ಸ್’

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಚಿತ್ರಮಂದಿರಕ್ಕೆ ಬಂದಾಗಿನಿಂದ ಇದರ ಬಗ್ಗೆ ಒಂದಲ್ಲ ಒಂದು ವಿವಾದ, ಸುದ್ದಿ ಕೇಳಿ ಬರುತ್ತಲೇ ಇದೆ. ಕಾಶ್ಮೀರದಲ್ಲಿ 1990ರ ಅವಧಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಖ್ಯಾತ ಸ್ಯಾಂಡ್ ಆರ್ಟಿಸ್ಟ್ ಸುದರ್ಶನ್ ಪಟ್ನಾಯಕ್ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.

    ಸುದರ್ಶನ್ ಟ್ವಿಟ್ಟರ್‌ನಲ್ಲಿ, ಪುರಿ ಬೀಚ್‍ನಲ್ಲಿ ನನ್ನ ಸ್ಯಾಂಡ್ಆರ್ಟ್ ಎಂದು ಬರೆದು ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಟ್ವೀಟ್ ಮಾಡಿದ್ದಾರೆ. ಸುದರ್ಶನ್ ಶೇರ್ ಮಾಡಿಕೊಂಡಿರುವ ಫೋಟೋದಲ್ಲಿ, ಕಾಶ್ಮೀರ ಮ್ಯಾಪ್‌ಗೆ ಕೆಂಪು ಬಣ್ಣ ಹಾಕಿದ್ದು, ‘ದಿ ಕಾಶ್ಮೀರ್ ಫೈಲ್ಸ್’ 30 ವರ್ಷಗಳ ನಂತರ ಎಂದು ಬರೆದಿದ್ದಾರೆ. ಅಲ್ಲದೇ ಮ್ಯಾಪ್ ಅಕ್ಕ-ಪಕ್ಕದಲ್ಲಿ ಕಾಶ್ಮೀರಿ ಹೋರಾಟದಲ್ಲಿ ಪ್ರಾಣ ಕೊಟ್ಟವರ ಭಾವಚಿತ್ರವನ್ನು ಬಿಡಿಸಿದ್ದಾರೆ. ಇದನ್ನೂ ಓದಿ: ಹೆಂಡತಿ, ಮೊಮ್ಮಗನ ಮುತ್ತಿಗೆ ಉಬ್ಬಿಹೋದ ಜಗ್ಗೇಶ್

    ಈ ಸ್ಯಾಂಡ್ ಆರ್ಟ್ ಮೂಲಕ ಸುದರ್ಶನ್ 30 ವರ್ಷಗಳ ಹಿಂದೆ ಗತಿಸಿದ್ದ ಕರಾಳದಿನವನ್ನು ನೆನಪಿಸಲು ಪ್ರಯತ್ನಿಸಿದ್ದಾರೆ. ಈ ಮೂಲಕ ‘ದಿ ಕಾಶ್ಮೀರ್ ಫೈಲ್ಸ್’ ಮೂವೀ ಜನರಲ್ಲಿ ಎಷ್ಟುರ ಮಟ್ಟಿಗೆ ಪರಿಣಾಮ ಬೀರಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು. ಸಿನಿಮಾವನ್ನು ಭಾರತೀಯರು ಕಡ್ಡಾಯವಾಗಿ ನೋಡಬೇಕು ಎಂದು ಸೆಲೆಬ್ರಿಟಿಗಳು ಸೇರಿ ರಾಜಕೀಯ ಮುಖಂಡರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕಾಶ್ಮೀರಿ ಪಂಡಿತರು ಹೇಗೆ ತಮ್ಮ ತನವನ್ನು ಉಳಿಸಿಕೊಳ್ಳಲು ಹೋರಾಡಿದರು. ಸಮುದಾಯವೊಂದು ಕಾಶ್ಮೀರಿ ಪಂಡಿತರನ್ನು ಹೇಗೆ ಅಮಾನೀಯವಾಗಿ ಕೊಲ್ಲುತ್ತಿದ್ದರು ಎಂಬುದನ್ನು ಸೂಕ್ಷ್ಮವಾಗಿ ಸಿನಿಮಾದಲ್ಲಿ ತೋರಿಸಲಾಗಿದೆ. ಕೆಲವರು ಈ ಸಿನಿಮಾ ನೋಡಿ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದು ನಿಜವೆಂಬುದನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣ

  • ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿ – ಕಲೆ ಮೂಲಕ ಸುದರ್ಶನ್ ಪಟ್ನಾಯಕ್ ಮನವಿ

    ಉಕ್ರೇನ್-ರಷ್ಯಾ ಯುದ್ಧ ನಿಲ್ಲಿಸಿ – ಕಲೆ ಮೂಲಕ ಸುದರ್ಶನ್ ಪಟ್ನಾಯಕ್ ಮನವಿ

    ಭುವನೇಶ್ವರ: ಒಡಿಶಾ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ತಮ್ಮ ಅದ್ಭುತ ಶಿಲ್ಪಕಲೆಗಳಿಂದ ನೆಟ್ಟಿಗರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ. ತಮ್ಮ ಕಲೆಯಿಂದಲೇ ಎಲ್ಲರ ಗಮನ ಸೆಳೆಯುವುದರ ಜೊತೆಗೆ ವಿಶೇಷ ಗೌರವಗಳನ್ನು ಸ್ವೀಕರಿಸಿದ್ದಾರೆ.

    ಸದ್ಯ ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿಹೋಗಿದೆ ಮತ್ತು ಅಲ್ಲಿನ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದು, ಉಕ್ರೇನ್‍ನಲ್ಲಿ ಅನೇಕ ಸಾವು-ನೋವುಗಳು ಸಂಭವಿಸಿವೆ. ಈ ನಡುವೆ ಸುದರ್ಶನ್ ಪಟ್ನಾಯಕ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಕ್ಸಿ ಅವರ ಭಾವಚಿತ್ರವನ್ನು ಮರಳಿನಲ್ಲಿ ರಚಿಸಿದ್ದಾರೆ. ಇದರ ಜೊತೆಗೆ ಯುದ್ಧ ನಿಲ್ಲಿಸಿ ಎಂಬ ಸಂದೇಶವನ್ನು ಬರೆದಿದ್ದಾರೆ.

    ಈ ಶಿಲ್ಪಕಲೆಯ ಫೋಟೋವನ್ನು ಸುದರ್ಶನ್ ಪಟ್ನಾಯಕ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಸ್ಟಾಪ್ ವಾರ್ ಎಂಬ ಸಂದೇಶದೊಂದಿಗೆ STOP WAR ಸಂದೇಶದೊಂದಿಗೆ ಪುರಿ ಬೀಚ್‍ನಲ್ಲಿರುವ ನನ್ನ ಸ್ಯಾಂಡ್‍ಆರ್ಟ್ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಲ್ಲಿಯವರೆಗೂ 4,000 ಕ್ಕೂ ಹೆಚ್ಚು ಲೈಕ್ಸ್ ಮತ್ತು ಕಾಮೆಂಟ್‍ಗಳು ಹರಿದುಬಂದಿದೆ. ಫೆಬ್ರವರಿ 24 ರಿಂದ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲು ಆರಂಭಿಸಿದ್ದು, ಇಲ್ಲಿಯವರೆಗೂ ಸುಮಾರು 28 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಯೂರೋಪ್‌ನಲ್ಲಿ ಸೈಬರ್ ಅಟ್ಯಾಕ್ – ಇಂಟರ್‌ನೆಟ್ ಇಲ್ಲದೇ ಸಾವಿರಾರು ಜನ ಪರದಾಟ

  • 23,000 ರುದ್ರಾಕ್ಷಿ ಬಳಸಿ ಶಿವನ ಶಿಲ್ಪಕಲೆ – ಕಲಾವಿದನ ಕೈಚಳಕಕ್ಕೆ ಮನಸೋತ ನೆಟ್ಟಿಗರು

    23,000 ರುದ್ರಾಕ್ಷಿ ಬಳಸಿ ಶಿವನ ಶಿಲ್ಪಕಲೆ – ಕಲಾವಿದನ ಕೈಚಳಕಕ್ಕೆ ಮನಸೋತ ನೆಟ್ಟಿಗರು

    ಭುವನೇಶ್ವರ: ದೇಶಾದ್ಯಂತ ಜನರು ಇಂದು ಮಹಾ ಶಿವರಾತ್ರಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಈ ನಡುವೆ ಕಲಾವಿದರೊಬ್ಬರು ಕಡಲತೀರದ ಮರಳಿನಲ್ಲಿ 23,436 ರುದ್ರಾಕ್ಷಿ ಮಣಿಗಳನ್ನು ಬಳಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ.

    ಜನಪ್ರಿಯ ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ 23,436 ರುದ್ರಾಕ್ಷಿ ಮಣಿಗಳಿಂದ ಅಲಂಕರಿಸಿ ಶಿವನ ಶಿಲ್ಪಕಲೆಯನ್ನು ರಚಿಸಿದ್ದಾರೆ. ಈ ಶಿಲ್ಪವನ್ನು ಬಿಡಿಸಲು ಸುದರ್ಶನ್ ಪಟ್ನಾಯಕ್ 12 ಟನ್ ಮರಳನ್ನು ಬಳಸಿದ್ದು, ಆರು ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ ಮತ್ತು ಮೊದಲ ಬಾರಿಗೆ ತಮ್ಮ ಮರಳಿನ ಕಲೆಯಲ್ಲಿ ರುದ್ರಾಕ್ಷಿಯನ್ನು ಬಳಸಿದ್ದಾರೆ. ಜೊತೆಗೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶಾಂತವಾಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದಿದ್ದಾರೆ. ಇದನ್ನೂ ಓದಿ: ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ

    ಪ್ರತಿ ಬಾರಿಯೂ ಸುದರ್ಶನ್ ಮರಳಿನ ಮೇಲೆ ಹೊಸ ರೀತಿಯದ್ದೇನಾದರೂ ಮಾಡಲು ಪ್ರಯತ್ನಿಸುತ್ತಾರೆ. ಕಳೆದ ಬಾರಿ ಶಿವರಾತ್ರಿ ಹಬ್ಬದಂದು ತರಕಾರಿ, ಕೆಂಪು ಗುಲಾಬಿ ಇತ್ಯಾದಿಗಳನ್ನು ಬಳಸಿದ್ದ ಅವರು ಈ ಬಾರಿ ಶಿವನ ಶಿಲ್ಪಕ್ಕೆ ರುದ್ರಾಕ್ಷಿಯನ್ನು ಬಳಸಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿರುವ ಸುದರ್ಶನ್ ಜಗತ್ತಿನಾದ್ಯಂತ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮರಳು ಶಿಲ್ಪಕಲಾ ಸ್ಪರ್ಧೆಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿ ದೇಶಕ್ಕೆ ಹಲವು ಬಹುಮಾನಗಳನ್ನು ಗಳಿಸಿದ್ದಾರೆ. ಕಲೆಯ ಮೂಲಕ ಆಗಾಗ ಜಾಗತಿಕ ಶಾಂತಿ, ಜಾಗತಿಕ ತಾಪಮಾನ, ಭಯೋತ್ಪಾದನೆಯನ್ನು ನಿಲ್ಲಿಸಿ, ಎಚ್‍ಐವಿ/ಏಡ್ಸ್ ಮತ್ತು ಕೋವಿಡ್ -19 ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಮರಳು ಶಿಲ್ಪಕಲೆಯ ಮೂಲಕ ಸಾಮಾಜಿಕ ಸಂದೇಶಗಳನ್ನು ಸಾರುತ್ತಿರುತ್ತಾರೆ. ಇದನ್ನೂ ಓದಿ: CBI ಎಂದು ಸುಳ್ಳು ಹೇಳಿ ಲಕ್ಷಾಂತರ ರೂ. ಹಣ, ಕೆಜಿಗಟ್ಟಲೆ ಚಿನ್ನದೋಚಿದರು!

  • ದಿ.ಲತಾ ಮಂಗೇಶ್ಕರ್‌ಗೆ ಮರಳು ಕಲಾಕೃತಿ ಅರ್ಪಿಸಿದ ಸುದರ್ಶನ್ ಪಟ್ನಾಯಕ್

    ದಿ.ಲತಾ ಮಂಗೇಶ್ಕರ್‌ಗೆ ಮರಳು ಕಲಾಕೃತಿ ಅರ್ಪಿಸಿದ ಸುದರ್ಶನ್ ಪಟ್ನಾಯಕ್

    ಮುಂಬೈ: ಖ್ಯಾತ ಮರಳು ಕಲಾಕೃತಿಗಾರ ಸುದರ್ಶನ್ ಪಟ್ನಾಯಕ್ ಅವರು ದಿವಂಗತ ಲತಾ ಮಂಗೇಶ್ಕರ್ ಅವರಿಗೆ ಸುಂದರವಾದ ಮರಳು ಕಲಾಕೃತಿಯನ್ನು ಅರ್ಪಿಸಿದ್ದಾರೆ.

    ಸಂಗೀತ ದಂತಕಥೆ ಲತಾ ಮಂಗೇಶ್ಕರ್ ಅವರ ಶಾಶ್ವತ ಸ್ಮರಣೆಯನ್ನು ಗೌರವಿಸಲು, ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್‍ನಲ್ಲಿ ದಿವಂಗತ ಗಾಯಕಿಯ ಸುಂದರವಾದ ಮರಳು ಕಲಾಕೃತಿಯನ್ನು ರಚಿಸಿದ್ದಾರೆ. ಕಲಾಕೃತಿಯಲ್ಲಿ ಲತಾ ಮಂಗೇಶ್ಕರ್‍ಗೆ ಪಟ್ನಾಯಕ್ ಅವರು ಬಿಳಿ ಸೀರೆಯನ್ನುಡಿಸಿ ಸೀರೆಯ ಬಾರ್ಡರ್‌ಗೆ ಚಿನ್ನದ ಬಣ್ಣವನ್ನು ಬಳಿದಿದ್ದಾರೆ. ಸಂಗೀತಕ್ಕೆ ಸಂಬಂಧಿಸಿದ ಅಕ್ಷರಗಳೊಂದಿಗೆ ಲತಾ ಅವರ ಮೇಲೆ ಭಾರತದ ಧ್ವಜವನ್ನು ಹಾರಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?

    ಕಲಾಕೃತಿಯ ಜೊತೆಗೆ, ಸುದರ್ಶನ್ ಅವರು “ಮೇರಿ ಆವಾಜ್ ಹೈ ಪೆಹೆಚಾನ್ ಹೈ” ಎಂದು ಬರೆದಿದ್ದು, ಇದು ಲತಾ ಅವರ ಧ್ವನಿಯ ಶಕ್ತಿಯನ್ನು ಸಂಕೇತಿಸುತ್ತದೆ. ಸುದರ್ಶನ್ ಪಟ್ನಾಯಕ್ ಅವರು 16 ವರ್ಷಗಳಿಂದ ತಮ್ಮ ಮರಳು ಕಲೆಯನ್ನು ರಚಿಸುತ್ತಿದ್ದಾರೆ. ಅವರ ಅನೇಕ ಮರಳು ಶಿಲ್ಪಗಳು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್‍ನಲ್ಲಿ ಸ್ಥಾನ ಪಡೆದಿವೆ. ಇದನ್ನೂ ಓದಿ: ಕನ್ನಡಕ್ಕೂ ದನಿಗೂಡಿಸಿದ್ದ ಲತಾ ಮಂಗೇಶ್ಕರ್

    ಭಾರತದ ಗಾನ ಕೋಗಿಲೆ ಎಂದೇ ಹೆಸರಾಗಿದ್ದ ಲತಾ ಮಂಗೇಶ್ಕರ್ ಅವರು ಜನವರಿಯಲ್ಲಿ ಕೋವಿಡ್ -19 ಮತ್ತು ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 8 ರಂದು, 92 ವರ್ಷ ವಯಸ್ಸಿನ ಗಾಯಕಿಯನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್‍ನಿಂದ ಚೇತರಿಸಿಕೊಂಡ ನಂತರವೂ, ಶನಿವಾರ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    ನಿನ್ನೆ ಮುಂಬೈನ ಶಿವಾಜಿ ಪಾರ್ಕ್‍ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕೂಡ ಮುಂಬೈಗೆ ತೆರಳಿದ್ದರು.

  • WORLD CANCER DAY : ಕ್ಯಾನ್ಸರ್ ವಿರುದ್ಧ ಒಟ್ಟಾಗಿ ಹೋರಾಡೋಣ – ಸ್ಫೂರ್ತಿದಾಯಕ ಮರಳು ಕಲಾಕೃತಿ

    WORLD CANCER DAY : ಕ್ಯಾನ್ಸರ್ ವಿರುದ್ಧ ಒಟ್ಟಾಗಿ ಹೋರಾಡೋಣ – ಸ್ಫೂರ್ತಿದಾಯಕ ಮರಳು ಕಲಾಕೃತಿ

    ನವದೆಹಲಿ: ವಿಶ್ವ ಕ್ಯಾನ್ಸರ್ ದಿನದಂದು, ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಬೀಚ್‍ನಲ್ಲಿ, ಕ್ಯಾನ್ಸರ್ ರೋಗಕ್ಕೆ ಹೆದರದೆ ಕೆಚ್ಚೆದೆಯಿಂದ ಬದುಕುಳಿದವರು ಮತ್ತು ರೋಗದ ವಿರುದ್ಧ ಹೋರಾಡುತ್ತಿರುವ ರೋಗಪಿಡೀತರಿಗೆ ಸಮರ್ಪಿತವಾದ ಉಸಿರು ತೆಗೆದುಕೊಳ್ಳುತ್ತಿರುವ ಆಕಾರದ ಕಲಾಕೃತಿಯನ್ನು ನಿರ್ಮಿಸಿ ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಫೋಟೋಗೆ ಅವರು ಟ್ಯಾಗ್ಸ್‍ಗಳನ್ನು ಹಾಕಿದ್ದು, #ವಿಶ್ವ ಕ್ಯಾನ್ಸರ್ ದಿನ #ಕ್ಯಾನ್ಸರ್ ನೋವು ಮತ್ತು ಸಂಕಟದಿಂದ ಜಗತ್ತನ್ನು ಮುಕ್ತಗೊಳಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನಾನು ಪುರಿ ಬೀಚ್‍ನಲ್ಲಿ ನನ್ನವೊಂದು ಸ್ಯಾಂಡ್ ಆರ್ಟ್ ಅನ್ನು ಹಂಚಿಕೊಳ್ಳುತ್ತಿದ್ದೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಚೀನಾ ಒಲಿಂಪಿಕ್ಸ್‌ಗೆ ಭಾರತ ಬಹಿಷ್ಕಾರ – ದಿಟ್ಟ ನಿರ್ಧಾರ ತೆಗೆದುಕೊಂಡ ಭಾರತೀಯ ವಿದೇಶಾಂಗ ಇಲಾಖೆ

    ಸುದರ್ಶನ್ ಪಟ್ನಾಯಕ್ ಅವರು ಸುಮಾರು 16 ವರ್ಷಗಳಿಂದ ಮರಳು ಕಲೆಯನ್ನು ಮಾಡುತ್ತಿದ್ದಾರೆ. ಅವರ ಅನೇಕ ಮರಳಿನ ಶಿಲ್ಪಗಳು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿವೆ.

    ರೋಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದರ ಬಗೆಯ ತಪ್ಪು ಮಾಹಿತಿಯ ವಿರುದ್ಧ ಹೋರಾಡಲು ಪ್ರತಿ ವರ್ಷ ಫೆಬ್ರವರಿ 4 ರಂದು ಅಂತರರಾಷ್ಟ್ರೀಯ ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು (ಯೂಐಸಿಸಿ) ಯೂನಿಯನ್ ಫಾರ್ ಇಂಟನ್ರ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ ಸಂಸ್ಥೆಯು ಇದರ ನೇತೃತ್ವವನ್ನು ವಹಿಸಿದೆ. ಇದನ್ನೂ ಓದಿ: ಹಿಜಬ್ ವಿವಾದ- ಹೈಕೋರ್ಟ್ ತೀರ್ಪಿನ ನಂತರ ಕ್ರಮ: ಬಿಸಿ ನಾಗೇಶ್

    ಈ ವರ್ಷದ – ಕ್ಲೋಸ್ ದಿ ಕೇರ್ ಗ್ಯಾಪ್ – ಇದು ರೋಗಿಗಳು ತಮ್ಮ ಆದಾಯ, ಲಿಂಗ, ಭೌಗೋಳಿಕ ಸ್ಥಳ, ವಯಸ್ಸು, ಲೈಂಗಿಕ ದೃಷ್ಟಿಕೋನ ಮತ್ತು ಜೀವನಶೈಲಿಗೆ ಸಂಬಂಧಿಸಿದಂತೆ ಅವರ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಎದುರಿಸುತ್ತಿರುವ ಅಡೆತಡೆಗಳ ಬಗ್ಗೆ ವ್ಯವಹರಿಸುತ್ತದೆ. ಕೆಲವೊಮ್ಮೆ, ಈ ಅಂಶಗಳು ರೋಗಿಗಳಿಗೆ ಸರಿಯಾದ ಆರೋಗ್ಯದ ಪ್ರವೇಶವನ್ನು ಪಡೆಯಲು ಅಡಚಣೆಯಾಗಬಹುದು.

    ‘ಕ್ಲೋಸ್ ದಿ ಕೇರ್ ಗ್ಯಾಪ್’ (ಆರೈಕೆ ಅವಧಿಯನ್ನು ನಿರ್ವಹಿಸುವುದು) ಈ ವರ್ಷದ ಕ್ಯಾನ್ಸರ್ ದಿನದ ಘೋಷ ವಾಕ್ಯ. ಕ್ಯಾನ್ಸರ್ ಪೀಡಿತ ಎಷ್ಟೋ ಮಂದಿ ತಮ್ಮ ಆದಾಯ, ಲಿಂಗ, ಭೌಗೋಳಿಕ ವಲಯ, ವಯಸ್ಸು, ಲೈಂಗಿಕ ದೃಷ್ಟಿಕೋನ, ಜೀವನಶೈಲಿ ಕಾರಣಕ್ಕಾಗಿ ಕ್ಯಾನ್ಸರ್ ಚಿಕಿತ್ಸೆಗೆ ಅಡೆತಡೆಗಳನ್ನು ಎದುರಿಸುತ್ತಿರುತ್ತಾರೆ. ಸೂಕ್ತ ಸಮಯಕ್ಕೆ ಚಿಕಿತ್ಸೆಗೆ ಎದುರಾಗುವ ಅಡೆತಡೆಯನ್ನು ಸರಿದೂಗಿಸುವ ಕ್ರಮಕೈಗೊಳ್ಳಲು ಯೂಐಸಿಸಿ ನಿರ್ಧರಿಸಿದೆ.

  • ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಭುವನೇಶ್ವರ: ವಿಶ್ವದೆಲ್ಲೆಡೆ ಇಂದು ಕ್ರಿಸ್‌ಮಸ್‌ ಸಂಭ್ರಮ ಮನೆಮಾಡಿದೆ. ಈ ನಡುವೆ ಕಲಾವಿದರೊಬ್ಬರು ತಮ್ಮ ವಿಶಿಷ್ಟ ಕಲೆಯ ಮೂಲಕ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಶುಭಾಶಯ ತಿಳಿಸಿದ್ದಾರೆ.

    ಹೌದು, ಅಂತಾರಾಷ್ಟ್ರೀಯ ಮರಳು ಶಿಲ್ಪ ಕಲಾವಿದ ಸುದರ್ಶನ್‌ ಪಾಟ್ನಾಯಕ್‌ ಅವರು, ಪುರಿ ಕಡಲ ತೀರದಲ್ಲಿ ಸುಮಾರು 5,400 ಗುಲಾಬಿಗಳನ್ನು ಬಳಸಿ ಸಂತಾ ಕ್ಲಾಸ್‌ ಅವರ ಕಲಾಕೃತಿ ರೂಪಿಸಿ ಗಮನ ಸೆಳೆದಿದ್ದಾರೆ. ಆ ಮೂಲಕ ಕ್ರೈಸ್ತ ಬಾಂಧವರಿಗೆ ವಿಶಿಷ್ಟ ರೀತಿಯಲ್ಲಿ ಕ್ರಿಸ್‌ಮಸ್‌ ಶುಭಕೋರಿದ್ದಾರೆ. ಇದನ್ನೂ ಓದಿ: ಕೊರೊನಾ ಟೈಮ್ ನಲ್ಲಿ ನೀವು ಮಾಡಿದ ಕೆಲಸಕ್ಕೆ ಹ್ಯಾಂಡ್ ಸಾಫ್ ಎಂದ ರಚಿತಾ

    ಕೆಂಪು ಹಾಗೂ ಬಿಳಿ ಗುಲಾಬಿ ಹೂಗಳನ್ನು ಬಳಸಿಕೊಂಡು ಸಮುದ್ರ ತೀರದ ಮರಳಿನಲ್ಲಿ ಸಂತಾ ಕ್ಲಾಸ್‌ ಕಲಾಕೃತಿ ಮೂಡಿಸಿದ್ದಾರೆ. ಜೊತೆಗೆ ʼಕ್ರಿಸ್‌ಮಸ್‌ ಶುಭಾಶಯಗಳು, ಕೋವಿಡ್‌ ನಿಯಮಗಳನ್ನು ಪಾಲಿಸಿ ಕ್ರಿಸ್‌ಮಸ್‌ ಆಚರಿಸಿʼ ಎಂಬ ಸಾಲುಗಳನ್ನು ಬರೆದು ವಿಶ್‌ ಮಾಡಿದ್ದಾರೆ.

    ಸುಮಾರು 28 ಅಡಿ ಅಗಲ ಮತ್ತು 50 ಅಡಿ ಉದ್ದದಲ್ಲಿ ಸಂತಾ ಕ್ಲಾಸ್‌ ಅವರ ಕಲಾಕೃತಿ ಮೂಡಿಬಂದಿದೆ. ಈ ಕಲಾಕೃತಿಯನ್ನು ರೂಪಿಸಲು ಸುದರ್ಶನ್‌ ಅವರು ಸುಮಾರು 8 ಗಂಟೆಗಳ ಸಮಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಮರಳು ಶಿಲ್ಪ ಕಲಾಸಂಸ್ಥೆಯ ಸಹಕಾರವನ್ನೂ ಪಡೆದಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

    ಕೊರೊನಾ ಸಾಂಕ್ರಾಮಿಕ ಇಡೀ ವಿಶ್ವವನ್ನು ವ್ಯಾಪಿಸಿ ಸಂಕಷ್ಟ ಉಂಟುಮಾಡಿರುವುದು ನಮಗೆಲ್ಲರಿಗೂ ತಿಳಿದಿದೆ. ಆದರೂ ನಾವು ಹಬ್ಬ ಆಚರಣೆಗಳನ್ನು ಮಾಡುತ್ತಿದ್ದೇವೆ. ಕೋವಿಡ್‌ ನಿಯಮಗಳನ್ನು ಪಾಲಿಸಿ ಕ್ರಿಸ್‌ಮಸ್‌ ಆಚರಿಸುವಂತೆ ಕಲಾಕೃತಿ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದೇವೆ. ಈ ಕಲಾಕೃತಿಯು ದಾಖಲೆ ಪುಸ್ತಕದಲ್ಲಿ ಹೆಸರಾಗುತ್ತದೆ ಎಂದು ಕಲಾವಿದ ಸುದರ್ಶನ್‌ ಪ್ರತಿಕ್ರಿಯಿಸಿದ್ದಾರೆ.

  • ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.2

    ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ನಂ.2

    – 2 ಹುಲಿಗಳ ಅಂತರದಲ್ಲಿ ಮೊದಲ ಸ್ಥಾನ ತಪ್ಪಿಸಿಕೊಂಡ ಕರ್ನಾಟಕ
    – ಮಧ್ಯಪ್ರದೇಶದಲ್ಲಿವೆ ಹೆಚ್ಚು ಹುಲಿಗಳು

    ನವದೆಹಲಿ: ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕೆಲವೇ ಸಂಖ್ಯೆಗಳ ಅಂತರದಲ್ಲಿ ಕರ್ನಾಟಕ ನಂ.1 ಪಟ್ಟ ಕೈತಪ್ಪುತ್ತಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಎರಡನೇ ಸ್ಥಾನದಲ್ಲಿಯೇ ಮುಂದುವರಿದಿದೆ.

    ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಮಧ್ಯ ಪ್ರದೇಶ 526 ಹುಲಿಗಳನ್ನು ಹೊಂದುವ ಮೂಲಕ ಮೊದಲ ಸ್ಥಾನ ಪಡೆದಿದೆ. ಕರ್ನಾಟಕ 524 ಹುಲಿಗಳನ್ನು ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದೆ. ಇನ್ನು 442 ಹುಲಿಗಳನ್ನು ಹೊಂದಿರುವ ಉತ್ತರಾಖಂಡ್ ಮೂರನೇ ಸ್ಥಾನದಲ್ಲಿದೆ. ಅಂತರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹುಲಿಗಳ ಅಂಕಿ ಸಂಖ್ಯೆಗಳ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

    ಉತ್ತರಾಖಂಡ್‍ನ ಜಿಮ್ ಕಾರ್ಬೆಟ್‍ನಲ್ಲಿ 231 ಹುಲಿಗಳಿಗಳಿದ್ದು, ನಾಗರಹೊಳೆ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 127 ಹಾಗೂ 126 ಹುಲಿಗಳಿವೆ. ದೇಶದಲ್ಲಿ ಒಟ್ಟು 50 ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿವೆ ಎಂದು ಜಾವಡೇಕರ್ ಅವರು ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ.

    ರಾಜ್ಯದಲ್ಲಿ ಪ್ರಸ್ತುತ ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿಳಿಗಿರಿ ರಂಗನ ಬೆಟ್ಟ ಸಂರಕ್ಷಿತ ಧಾಮಗಳಿವೆ. ರಾಜ್ಯದಲ್ಲಿ ಒಟ್ಟು 524 ಹುಲಿಗಳಿವೆ. ಪ್ರಕಾಶ್ ಜಾವಡೇಕರ್ ಹುಲಿಗಳ ಅಂಕಿ ಸಂಖ್ಯೆಗಳ ವರದಿ ಬಿಡುಗಡೆ ಮಾಡಿದರೆ, ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಅಂತಾರಾಷ್ಟ್ರೀಯ ಹುಲಿ ದಿನಕ್ಕೆ ವಿಶೇಷ ಕಲೆ ಮೂಲಕ ಜಾಗೃತಿ ಮೂಡಿಸಿದ್ದಾರೆ.

    ಪೂರಿ ಬೀಚ್‍ನಲ್ಲಿ ಮರಳಿನಲ್ಲಿ ಹುಲಿಯ ಚಿತ್ರ ಬಿಡುಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಕುರಿತು ಚಿತ್ರವನ್ನು ಟ್ವೀಟ್ ಮಾಡಿ ಸಾಲುಗಳನ್ನು ಬರೆದಿರುವ ಅವರು, ಹುಲಿಗಳ ಆವಾಸಸ್ಥಾನಗಳನ್ನು ರಕ್ಷಿಸುವ ಮೂಲಕ ಅವುಗಳ ಸಂರಕ್ಷಣೆಗಾಗಿ ಎಲ್ಲರೂ ಒಟ್ಟಾಗೋಣ. ಪೂರಿ ಬೀಚ್‍ನಲ್ಲಿ ಬಿಡಿಸಿದಿ ಚಿತ್ರವೊಂದನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.