Tag: ಸುದೀಪ

  • ನಾನು ಮನುಷ್ಯಳೇ ಅಲ್ಲವಾ ಸರ್? – ಸುದೀಪ್‍ಗೆ ರೇಷ್ಮೆ ಅಕ್ಕ ಪ್ರಶ್ನೆ

    ನಾನು ಮನುಷ್ಯಳೇ ಅಲ್ಲವಾ ಸರ್? – ಸುದೀಪ್‍ಗೆ ರೇಷ್ಮೆ ಅಕ್ಕ ಪ್ರಶ್ನೆ

    ಬಿಗ್‍ಬಾಸ್ ಮನೆಯಲ್ಲಿ ವೈಷ್ಣವಿ ತಾಳ್ಮೆಯಿಂದ ಇದ್ದು, ಯಾರೊಂದಿಗೂ ಇವರೆಗೂ ಜಗಳವನ್ನು ಮಾಡಿಕೊಂಡಿರಲಿಲ್ಲ. ಆದರೆ ಸೆಕೆಂಡ್ ಸೀಸನ್‍ನಲ್ಲಿ ವೈಷ್ಣವಿ ಸ್ವಲ್ಪ ತಾಳ್ಮೆ ಕಳೆದುಕೊಂಡು ನಡೆದುಕೊಂಡಿದ್ದಾರೆ. ಈ ಕುರಿತಾಗಿ ಸುದೀಪ್ ವೈಷ್ಣವಿಯನ್ನು ಕೇಳಿದಾಗ ವೈಷ್ಣವಿ ಒಂದೇ ಒಂದು ಮಾತಿಗೆ ಸುದೀಪ್ ಮರು ಮಾತನಾಡದೇ ಸುಮ್ಮನಾಗಿದ್ದಾರೆ.

    ‘ಸೂಪರ್ ಸಂಡೆ ವಿತ್ ಸುದೀಪ’ ಕಾರ್ಯಕ್ರಮದಲ್ಲಿ ಚರ್ಚೆ ನಡೆಯುತ್ತಿತ್ತು. ಎಸ್ ಆರ್ ನೋ ಆಟದಲ್ಲಿ ಸುದೀಪ್ ಮನೆಯಲ್ಲಿ ನಡೆದಿರುವ ಕೆಲವು ವಿಚಾರಗಳನ್ನು ಆಧರಿಸಿ ಪ್ರಶ್ನೆಯನ್ನು ಮಾಡುತ್ತಾರೆ. ಗೆಲ್ಲಬೇಕು ಎನ್ನುವ ಹಠ ಬಂದಮೇಲೆ ವೈಷ್ಣವಿಗೆ ಕೋಪ ಬರೋಕೆ ಆರಂಭವಾಗಿದೆ ಎಂದು ಸುದೀಪ್ ಪ್ರಶ್ನೆ ಮಾಡಿದರು. ಆಗ ಹೆಚ್ಚಿನವರು ಹೌದು ಎನ್ನುವ ಉತ್ತರವನ್ನು ಕೊಟ್ಟಿದ್ದಾರೆ. ವೈಷ್ಣವಿಗೆ ಮೊದಲಿನಿಂದಲೂ ಕೋಪ ಬರುತ್ತಿತ್ತು. ಅದನ್ನು ಅವರು ಮನೆಯಲ್ಲಿ ತೋರಿಸಿರಲಿಲ್ಲ. ಈಗ ಅದನ್ನು ತೋರಿಸೋಕೆ ಆರಂಭಿಸಿದ್ದಾರೆ ಎಂದು ನನಗೆ ಅನ್ನಿಸುತ್ತಿದೆ ಎಂದು ಪ್ರಶಾಂತ್ ಹೇಳಿದರು.

    ಮಂಜು ಕೂಡ ಸುದೀಪ ಪ್ರಶ್ನೆಗೆ ಹೌದು ಸುಮ್ಮನೇ ಇದ್ದರೇ ಪ್ರಯೋಜನ ಇಲ್ಲ ಎಂದು ಬದಲಾಗಿದ್ದಾರೆ ಎನ್ನುವ ಉತ್ತರ ಕೊಟ್ಟರು. ವೈಷ್ಣವಿಗೆ ಈ ಪ್ರಶ್ನೆ ಕೇಳಿದಾಗ ನಾನು ಮನುಷ್ಯಳೇ ಅಲ್ಲವಾ ಸರ್? ಎಂದು ಮರು ಪ್ರಶ್ನೆ ಹಾಕಿದರು. ಆಗ ಸುದೀಪ್ ನಕ್ಕು ಸುಮ್ಮನಾಗಿದ್ದಾರೆ.

    ಬಿಗ್‍ಬಾಸ್ ಎಂಟನೇ ಸೀಸನ್ ಆರಂಭದಲ್ಲಿ ವೈಷ್ಣವಿ ತುಂಬಾನೇ ಸೈಲೆಂಟ್ ಆಗಿದ್ದರು. ಅವರು ಎಲ್ಲರೊಂದಿಗೂ ಅಷ್ಟಾಗಿ ಬೆರೆಯುತ್ತಿರಲಿಲ್ಲ. ಈ ವಿಚಾರ ಇಟ್ಟುಕೊಂಡು ಮನೆ ಮಂದಿ ವೈಷ್ಣವಿ ಅವರನ್ನು ಟೀಕೆ ಮಾಡಿದ್ದರು. ಅವರ ಗಾಡಿ ಇನ್ನೂ ಸ್ಟಾರ್ಟ್ ಆಗಿಲ್ಲ ಎಂದು ಅನ್ನಿಸುತ್ತಿದೆ ಎಂದು ಕೆಲವರು ಅಭಿಪ್ರಾಯ ಹೊರ ಹಾಕಿದ್ದರು. ಇದನ್ನು ವೈಷ್ಣವಿ ಗಂಭೀರವಾಗಿ ಪರಿಗಣಿಸಿದ್ದರು. ಈ ಕಾರಣಕ್ಕೆ ಅವರಲ್ಲಿ ಸಾಕಷ್ಟು ಬದಲಾವಣೆ ಆಗಿತ್ತು. ಟಾಸ್ಕ್‌ನಲ್ಲಿ ಅಗ್ರೆಸ್ಸಿವ್ ಆಗಿ ಆಡೋಕೆ ಆರಂಭಿಸಿದ್ದರು. ಈ ವಾರ ಪ್ರಶಾಂತ್ ಅವರೊಂದಿಗೆ ಜಗಳ ಮಾಡಿಕೊಂಡು ಸುದ್ದಿಯಾದ್ದರು.

  • ಮೌರ್ಯ ಸಾಮ್ರಾಜ್ಯದಲ್ಲಿ ಒಂದಾಗ್ತಾರ ಅಪ್ಪು-ಕಿಚ್ಚ-ಉಪ್ಪಿ!?

    ಮೌರ್ಯ ಸಾಮ್ರಾಜ್ಯದಲ್ಲಿ ಒಂದಾಗ್ತಾರ ಅಪ್ಪು-ಕಿಚ್ಚ-ಉಪ್ಪಿ!?

    ಬೆಂಗಳೂರು: 2017ರಲ್ಲಿ `ರಾಜಕುಮಾರ’ ಮತ್ತು `ಅಂಜನೀಪುತ್ರ’ ಸಿನಿಮಾಗಳ ಮೂಲಕ ಸಿಲ್ವರ್ ಸ್ಕ್ರೀನ್‍ನಲ್ಲಿ ಶೈನ್ ಆದ ಪವರ್ ಸ್ಟಾರ್ ಮುಂದೇನು ಮಾಡ್ತಾರೆ ಅಂತ ಅಭಿಮಾನಿಗಳಲ್ಲಿ ಪ್ರಶ್ನೆ ಹುಟ್ಟಿಕೊಂಡಿದೆ. ಇದರ ಮಧ್ಯೆ ಮೌರ್ಯ ಸಾಮ್ರಾಜ್ಯದ ದೊರೆ ಚಂದ್ರಗುಪ್ತ ಮಹಾರಾಜ ಗೆಟಪ್‍ನಲ್ಲಿ ಪುನೀತ್ ಕಾಣಿಸಿಕೊಳ್ತಾರೆ ಅನ್ನೊ ಖಬರ್‍ದಾರ್ ನ್ಯೂಸ್ ಗಾಂಧಿ ನಗರದಲ್ಲಿ ಹರಿದಾಡುತ್ತಿದೆ.

    ಕನ್ನಡ ಬೆಳ್ಳಿತೆರೆಯ ಮೇಲೆ ಮೌರ್ಯ ಸಾಮ್ರಾಜ್ಯ ಚಿತ್ತಾರವಾಗಲಿದ್ದು, ಈ ಬಿಗ್ ಸಿನಿಮಾದಲ್ಲಿ ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಜೊತೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಕಾಣಿಸಿಕೊಳ್ಳಲಿದ್ದಾರೆ ಅಂತಾ ಹೇಳಲಾಗುತ್ತಿದೆ.

    ನಿರ್ಮಾಪಕ ಮುನಿರತ್ನ ಸದ್ಯ ಸ್ಯಾಂಡಲ್‍ವುಡ್‍ನ ಮಹತ್ವಕಾಂಕ್ಷೆಯ ಸಿನಿಮಾ `ಮುನಿರತ್ನ ಕುರುಕ್ಷೇತ್ರ’ ಚಿತ್ರದ ನಿರ್ಮಾಣದಲ್ಲಿ ಮಗ್ನರಾಗಿದ್ದಾರೆ. ಕುರುಕ್ಷೇತ್ರದ ಬಳಿಕ ಮತ್ತೊಂದು ಐತಿಹಾಸಿಕ ಕಥೆಯುಳ್ಳ ಮೌರ್ಯ ಸಾಮ್ರಜ್ಯದ ಮಹಾರಾಜ ಚಂದ್ರಗುಪ್ತರ ಬಗ್ಗೆ ಚಿತ್ರ ನಿರ್ಮಿಸಲು ಪ್ಲಾನ್ ಮಾಡಿದ್ದಾರೆ. ‘ಚಾಣಿಕ್ಯ ಚಂದ್ರಗುಪ್ತ’ ಕಥೆಯನ್ನ ಮುನಿರತ್ನರವರೇ ಬರೆದ್ದಿದ್ದು, ಮುಂದಿನ ವರ್ಷದ ಜೂನ್ ಅಥವಾ ಜುಲೈನಲ್ಲಿ ಈ ಚಿತ್ರವನ್ನ ನಿರ್ಮಾಣ ಮಾಡುವ ಯೋಜನೆಯಲ್ಲಿದ್ದಾರೆ. ಕುರುಕ್ಷೇತ್ರ ಚಿತ್ರದಂತೆ ಈ ಚಿತ್ರದಲ್ಲಿಯೂ ಸ್ಯಾಂಡಲ್‍ವುಡ್ ಸ್ಟಾರ್ ಮಹೋದಯರನ್ನು ಒಂದೂಗುಡಿಸುವ ಆಲೋಚನೆಯಲ್ಲಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಈ ಚಿತ್ರದಲ್ಲಿ ನಟಿಸುವಂತೆ ಕೇಳಿಕೊಳ್ಳಲು ಮುನಿರತ್ನ ನಿರ್ಧರಿಸಿದ್ದಾರೆ.

    ಈ ಬಗ್ಗೆ ಸ್ವತಃ ಮುನಿರತ್ನ ಅವರೇ ಮಾಧ್ಯಮದ ಕೆಲ ಪ್ರತಿನಿಧಿಗಳಿಗೆ ಇತ್ತೀಚೆಗೆ ಅನೌಪಚಾರಿಕವಾಗಿ ಮಾಹಿತಿ ನೀಡಿದ್ದಾರಂತೆ. ಚಿತ್ರದ ಕಥೆ ಹೆಣೆಯಲಾಗುತ್ತಿದ್ದು, ನಿರ್ದೇಶಕರನ್ನು ಕೂಡ ಹುಡುಕುತ್ತಿದ್ದಾರಂತೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಕ್ರಿಸ್ತ ಪೂರ್ವ 3ನೇ ಶತಮಾನದ ಮೌರ್ಯ ದೊರೆ ಚಂದ್ರಗುಪ್ತ ಮತ್ತು ಅವನ ಸಲಹೆಗಾರ ಗುರು ಚಾಣಕ್ಯ, ನಂದ ರಾಜವಂಶ, ಅಲೆಕ್ಸಾಂಡರ್ ದೊರೆ ಮತ್ತು ಮೌರ್ಯ ಸಾಮ್ರಾಜ್ಯದ ಸ್ಥಾಪನೆ ಕುರಿತು ಚಿತ್ರ ತಯಾರಿಸಲು ಸಿದ್ಧತೆ ನಡೆಸಿದ್ದಾರೆ ಅಂತಾ ಹೇಳಲಾಗಿದೆ.