Tag: ಸುಧಾ ಕೊಂಗರ

  • ತಮಿಳಿನತ್ತ ನಟಿ- ಶಿವಕಾರ್ತಿಕೇಯನ್‌ಗೆ ಶ್ರೀಲೀಲಾ ಜೋಡಿ

    ತಮಿಳಿನತ್ತ ನಟಿ- ಶಿವಕಾರ್ತಿಕೇಯನ್‌ಗೆ ಶ್ರೀಲೀಲಾ ಜೋಡಿ

    ನ್ನಡತಿ ಶ್ರೀಲೀಲಾಗೆ (Sreeleela) ಪರಭಾಷೆಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್ ಸ್ಟಾರ್ ನಟನಿಗೆ ನಾಯಕಿಯಾದ ಬೆನ್ನಲ್ಲೇ ಕಾಲಿವುಡ್‌ಗೂ (Kollywood) ಪಾದಾರ್ಪಣೆ ಮಾಡೋಕೆ ನಟಿ ಸಜ್ಜಾಗಿದ್ದಾರೆ. ಶಿವಕಾರ್ತಿಕೇಯನ್‌ಗೆ (Sivakarthikeyan) ನಾಯಕಿಯಾಗಿ ‘ಕಿಸ್’ ನಟಿ ತಮಿಳಿಗೆ ಎಂಟ್ರಿ ಕೊಡ್ತಿದ್ದಾರೆ.

    ತೆಲುಗಿನಲ್ಲಿ ಇತ್ತೀಚೆಗೆ ಶ್ರೀಲೀಲಾ ನಟಿಸಿದ ಸಿನಿಮಾಗಳು ಫ್ಲಾಪ್ ಆದರೂ ಅವರಿಗೆ ಡಿಮ್ಯಾಂಡ್ ಏನು ಕಮ್ಮಿಯಾಗಿಲ್ಲ. ನಟಿಯ ಪ್ರತಿಭೆ ಮತ್ತು ಬ್ಯೂಟಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇನ್ನೂ ದಿನಗಳಿಂದ ನಟಿಯ ತಮಿಳು ಡೆಬ್ಯೂ ಕುರಿತು ಭಾರೀ ಚರ್ಚೆ ಶುರುವಾಗಿತ್ತು. ಈಗ ಸ್ಟಾರ್ ನಿರ್ದೇಶಕಿ ಸುಧಾ ಕೊಂಗರ ಸಿನಿಮಾಗೆ ಶ್ರೀಲೀಲಾ ಆಯ್ಕೆಯಾಗಿದ್ದಾರೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಶಿವಕಾರ್ತಿಕೇಯನ್ ನಟನೆಯ ‘ಪುರಾಣನೂರು’ ಚಿತ್ರಕ್ಕೆ ‘ಸೂರರೈ ಪೊಟ್ರು’ ಡೈರೆಕ್ಟರ್ ಸುಧಾ ಕೊಂಗರ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ ಡ್ಯಾನ್ಸ್ ಸ್ಕಿಲ್ ಮತ್ತು ನಟನೆ ಮೆಚ್ಚಿ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:3 ವರ್ಷಗಳಿಂದ ಸೆಕ್ಸ್ ಮಾಡಿಲ್ಲ- ಕಾರಣ ಬಿಚ್ಚಿಟ್ಟ ಉರ್ಫಿ ಜಾವೇದ್

    ಈಗಾಗಲೇ ಶಿವಕಾರ್ತಿಕೇಯನ್ ಜೊತೆ ಶ್ರೀಲೀಲಾ ಫೋಟೋಶೂಟ್ ಕೂಡ ಆಗಿದೆ ಎಂಬುದು ಸದ್ಯ ಹರಿದಾಡುತ್ತಿರುವ ವಿಚಾರ. ಈ ಸಂಗತಿ ನಿಜನಾ? ಈ ಪ್ರಾಜೆಕ್ಟ್ ಕುರಿತು ಸದ್ಯದಲ್ಲೇ ಅಧಿಕೃತ ಘೋಷಣೆ ಆಗುವವರೆಗೂ ಕಾದುನೋಡಬೇಕಿದೆ.

    ಅಂದಹಾಗೆ, ಬಾಲಿವುಡ್‌ನಲ್ಲಿ ಕಿಯಾರಾ ಪತಿ ಸಿದ್ಧಾರ್ಥ್ ಮಲ್ಹೋತ್ರಾಗೆ ಹೀರೋಯಿನ್ ಆಗಿ ಶ್ರೀಲೀಲಾ ಆಯ್ಕೆಯಾಗಿದ್ದಾರೆ. ಅಕ್ಟೋಬರ್‌ನಿಂದ ಶೂಟಿಂಗ್ ಶುರುವಾಗಲಿದೆ. ಇದರೊಂದಿಗೆ ನಿತಿನ್ ಜೊತೆ ‘ರಾಬಿನ್‌ಹುಡ್’ ಸಿನಿಮಾ, ಪವನ್ ಕಲ್ಯಾಣ್ ಜೊತೆಗಿನ ಚಿತ್ರ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಿವೆ.

  • ಸೂರ್ಯ 43ನೇ ಸಿನಿಮಾಗೆ ಸುಧಾ ಕೊಂಗರ ಡೈರೆಕ್ಟರ್

    ಸೂರ್ಯ 43ನೇ ಸಿನಿಮಾಗೆ ಸುಧಾ ಕೊಂಗರ ಡೈರೆಕ್ಟರ್

    ಮಿಳಿನ ಖ್ಯಾತ ನಟ ಸೂರ್ಯ (Surya) ಹಾಗೂ ನಿರ್ದೇಶಕಿ ಸುಧಾ ಕೊಂಗರ (Sudha Kongara) ಮತ್ತೊಮ್ಮೆ ಕೈ ಜೋಡಿಸಿದ್ದಾರೆ. ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸಿನಿಮಾ ಸೂರರೈ ಪೋಟ್ರು ಮೂಲಕ ಸಂಚಲನ ಸೃಷ್ಟಿಸಿದ್ದ ಈ ಜೋಡಿ ಮಗದೊಮ್ಮೆ ಒಂದಾಗಿದ್ದಾರೆ. ಸೂರ್ಯ ನಟಿಸಲಿರುವ 43ನೇ ಸಿನಿಮಾಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ.

    ಸೂರರೈ ಪೋಟ್ರು ಸಿನಿಮಾ ಪ್ರೇಕ್ಷಕರು ಹಾಗೂ ವಿಮರ್ಷಕರಿಂದಲೂ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು. ಆಸ್ಕರ್ ರೇಸ್ ಗೂ ಇಳಿದಿದ್ದ ಈ ಚಿತ್ರ ಹಲವು ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ  ಬಾಚಿಕೊಂಡಿತ್ತು. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಹಿನ್ನೆಲೆ ಸಂಗೀತ, ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ಈ ತಂಡ ಹೊಸ ಪ್ರಾಜೆಕ್ಟ್ ಗೆ ಒಂದಾಗಿದೆ.

    ಸೂರರೈ ಪೋಟ್ರೂ ಮೂಲಕ ಧಮಾಕ ಎಬ್ಬಿಸಿದ್ದ ಸೂರ್ಯ ಹಾಗೂ ಸುಧಾ ಕೊಂಗರ ಹೊಸ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಮಾಲಿವುಡ್ ಹ್ಯಾಂಡ್ಸಮ್ ಹಂಕ್ ದುಲ್ಕರ್ ಸಲ್ಮಾನ್, ನಜ್ರಿಯಾ ಫಹದ್ ಹಾಗೂ ವಿಜಯ್ ವರ್ಮಾ  ಸೂರ್ಯ 43 ಚಿತ್ರದ ಭಾಗವಾಗಿದ್ದಾರೆ.

    ತಾತ್ಕಾಲಿಕವಾಗಿ #Suriya43 ಎಂದು ಟೈಟಲ್ ಇಡಲಾಗಿದೆ. ಸೂರ್ಯ ಒಡೆತನದ 2D ಎಂಟರ್‌ಟೈನ್‌ಮೆಂಟ್ ನಡಿ ಜ್ಯೋತಿಕಾ, ಸೂರ್ಯ ಮತ್ತು ರಾಜಶೇಖರ್ ಕರ್ಪೂರಸುಂದರಪಾಂಡಿಯನ್ ನಿರ್ಮಿಸಲಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಜಿವಿ ಪ್ರಕಾಶ್ ಸಂಗೀತ ನಿರ್ದೇಶಿಸ್ತಿರುವ 100 ಚಿತ್ರ ಇದಾಗಿರೋದು ಮತ್ತೊಂದು ವಿಶೇಷ..ಸೂರರೈ ಪೋಟ್ರೂ ಮೂಲಕ ಮೋಡಿ ಮಾಡಿದ್ದ ಸೂರ್ಯ, ಸುಧಾ ಹಾಗೂ ಜಿವಿ ಪ್ರಕಾಶ್ ಹೊಸ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Hombale Films ಜೊತೆ ಕೈಜೋಡಿಸಿದ ರಜನಿಕಾಂತ್?

    Hombale Films ಜೊತೆ ಕೈಜೋಡಿಸಿದ ರಜನಿಕಾಂತ್?

    ಹೊಂಬಾಳೆ ಫಿಲ್ಮ್ಸ್ಇದೀಗ ಕೆಜಿಎಫ್, ಕೆಜಿಎಫ್ 2 (KGF 2), ಕಾಂತಾರ (Kantara) ಅಂತಹ ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳನ್ನ ಕೊಡ್ತಿದೆ. ಸ್ಟಾರ್ ಕಲಾವಿದರ ಜೊತೆ ಸಿನಿಮಾ ಮಾಡ್ತಿದ್ದಾರೆ. ಈ ಬೆನ್ನಲ್ಲೇ ಹೊಂಬಾಳೆ ಸಂಸ್ಥೆ (Hombale Films) ಜೊತೆ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಹೊಂಬಾಳೆ ಸಂಸ್ಥೆ ನಿರ್ಮಾಣದಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ ‘ಕಾಂತಾರ’ ಸಿನಿಮಾ ನೋಡಿ ತಲೈವಾ ಭೇಷ್ ಎಂದಿದ್ದರು. ರಿಷಬ್‌ನ ಮನೆಗೆ ಆಹ್ವಾನಿಸಿ ಸನ್ಮಾನಿಸಿದ್ದರು. ಇದೆಲ್ಲದರ ಬೆನ್ನಲ್ಲೇ ಹೊಂಬಾಳೆ ಬ್ಯಾನರ್ ಚಿತ್ರದಲ್ಲಿ ರಜನಿಕಾಂತ್ (Rajanikanth) ನಟಿಸ್ತಾರೆ ಎನ್ನುವ ಊಹಾಪೋಹ ಶುರುವಾಗಿತ್ತು. ಆದರೆ ಈ ಬಗ್ಗೆ ಇದುವರೆಗೂ ಅಧಿಕೃತ ಮಾಹಿತಿ ಮಾತ್ರ ಸಿಕ್ಕಿಲ್ಲ.‌ ಇದನ್ನೂ ಓದಿ: ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ರಜನಿಕಾಂತ್ (Rajanikanth) ಅವರು ಹೊಂಬಾಳೆ ಫಿಲ್ಮ್ಸ್ ಚಿತ್ರದಲ್ಲಿ ನಟಿಸೋದು ಪಕ್ಕಾ ಎನ್ನುವ ಚರ್ಚೆ ಈಗ ಕಾಲಿವುಡ್‌ನಲ್ಲಿ (Kollywood) ಶುರುವಾಗಿದೆ. ಸುಧಾ ಕೊಂಗರ (Sudha Kongara) ಅವರು ತಲೈವಾ ನಟನೆಯ ಚಿತ್ರಕ್ಕೆ ನಿರ್ದೇಶನ ಮಾಡುತ್ತಾರೆ ಎನ್ನಲಾಗ್ತಿದೆ. ಈ ಹಿಂದೆಯೇ ಹೊಂಬಾಳೆ ಸಂಸ್ಥೆ- ಸುಧಾ ಕೊಂಗರ ನಿರ್ದೇಶನದಲ್ಲಿ ಒಂದು ಸಿನಿಮಾ ಘೋಷಿಸಿತ್ತು. ಆದರೆ ಆ ಚಿತ್ರಕ್ಕೆ ಹೀರೋ ಯಾರು ಎನ್ನುವುದು ಪಕ್ಕ ಆಗಿರಲಿಲ್ಲ. ತಮಿಳಿನ ಸೂರ್ಯ, ಯಶ್, ಸಿಂಬು ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿತ್ತು. ಆದರೆ ಈಗ ತಲೈವಾ ಹೆಸರು ಚಾಲ್ತಿಗೆ ಬಂದಿದೆ. ಈಗಾಗಲೇ ಸುಧಾ ಕೊಂಗರ ಸೂಪರ್ ಸ್ಟಾರ್‌ಗೆ ಕಥೆ ಹೇಳಿದ್ದಾರಂತೆ. ಅದಕ್ಕೆ ತಲೈವಾ ಕೂಡ ಓಕೆ ಎಂದಿದ್ದಾರೆ ಅಂತೆ. ಈ ವಿಚಾರ ಅದೆಷ್ಟರ ಮಟ್ಟಿಗೆ ನಿಜಾ? ಎಂಬುದನ್ನ ಚಿತ್ರತಂಡ ತಿಳಿಸುವವರೆಗೂ ಕಾದುನೋಡಬೇಕಿದೆ.

    3 ವರ್ಷಗಳ ಹಿಂದೆ ಬಂದ ‘ಸುರರೈ ಪೋಟ್ರು’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಕೊರೊನಾ ಸಂಕಷ್ಟದ ಸಮಯದಲ್ಲಿ ನೇರವಾಗಿ ಓಟಿಟಿಗೆ ಬಂದಿದ್ದ ಸಿನಿಮಾ ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಜಿ.ಆರ್ ಗೋಪಿನಾಥ್ ಜೀವನಾಧರಿತ ಈ ಚಿತ್ರದಲ್ಲಿ ಸೂರ್ಯ ಹೀರೊ ಆಗಿ ನಟಿಸಿದ್ದರು. ಸುಧಾ ಕೊಂಗರ ನಿರ್ದೇಶನಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ನಿರ್ದೇಶಕಿ ಸುಧಾ ಕೊಂಗರ ಹೊಸ ಬಗೆಯ ಸಿನಿಮಾ ಮಾಡಲು ಮುಂದಾಗಿದ್ದಾರೆ.

  • ರತನ್ ಟಾಟಾ ಬಯೋಪಿಕ್‌ಗೆ ಸುಧಾ ಕೊಂಗರಾ ಆ್ಯಕ್ಷನ್ ಕಟ್

    ರತನ್ ಟಾಟಾ ಬಯೋಪಿಕ್‌ಗೆ ಸುಧಾ ಕೊಂಗರಾ ಆ್ಯಕ್ಷನ್ ಕಟ್

    `ಸೂರರೈ ಪೊಟ್ರು’ (Soorarai Pottru) ಚಿತ್ರದ ಭರ್ಜರಿ ಸಕ್ಸಸ್ ಬಳಿಕ ನಿರ್ದೇಶಕಿ ಸುಧಾ ಕೊಂಗರ ಈ ಚಿತ್ರವನ್ನ ಹಿಂದಿಗೂ ರಿಮೇಕ್ ಮಾಡುತ್ತಿದ್ದಾರೆ. ಇದರ ನಡುವೆ ಅವರ ಮುಂದಿನ ಚಿತ್ರದ ಬಗ್ಗೆ ಸೂಪರ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಯಶಸ್ವಿ ಉದ್ಯಮಿ ರತನ್ ಟಾಟಾ(Ratan Tata) ಬಯೋಪಿಕ್ ಮಾಡಲು ನಿರ್ದೇಶಕಿ ಸುಧಾ (Sudha Kongara) ಸಜ್ಜಾಗಿದ್ದಾರೆ.

    2020ರಲ್ಲಿ ಸೂರ್ಯ (Actor Surya) ನಟನೆಯ `ಸೂರರೈ ಪೊಟ್ರು’ ಸಿನಿಮಾಗೆ ಹಲವು ಪ್ರಶಸ್ತಿಗಳು ಲಭಿಸಿತ್ತು. ಇದರ ಹಿಂದಿ ರಿಮೇಕ್‌ನಲ್ಲಿ ಅಕ್ಷಯ್ ಕುಮಾರ್‌ಗೆ ಸುಧಾ ಡೈರೆಕ್ಷನ್ ಮಾಡ್ತಿದ್ದಾರೆ. ಇದರ ಜೊತೆ ಹೊಸ ಸಿನಿಮಾಗೂ ಪ್ಲ್ಯಾನ್‌ ಮಾಡಿದ್ದಾರೆ. ರತನ್ ಟಾಟಾ ಕಥೆಯನ್ನ ತೆರೆಯ ಮೇಲೆ ತರಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಕ್ಸಸ್‌ ಸಂಭ್ರಮದಲ್ಲಿ ʻಕಾಂತಾರʼ ಸಿನಿಮಾ ತಂಡ

    ರತನ್ ಟಾಟಾ ಅವರು ಈ ದೇಶ ಕಂಡ ಹೆಸರಾಂತ ಉದ್ಯಮಿ. ಅವರ ಕುರಿತು ಸಿನಿಮಾ ಮಾಡುವುದು, ಅದನ್ನು ಬೆಳ್ಳಿತೆರೆ ಮೇಲೆ ತರುವುದು ಎಲ್ಲರ ಹೆಮ್ಮೆ ಆಗಿದೆ. ರತನ್ ಟಾಟಾ ಅವರ ಕುರಿತು ಸಮಾಜಕ್ಕೆ ಗೊತ್ತಿರದ ಒಂದಷ್ಟು ವಿಶೇಷತೆಗಳನ್ನು ಈ ಸಿನಿಮಾದ ಮೂಲಕ ಹೇಳುವ ಉದ್ದೇಶವಿದೆ. ಸದ್ಯ ಸ್ಕ್ರಿಪ್ಟ್ ವರ್ಕ್ ಕೆಲಸ ಕೂಡ ಜಾರಿಯಲ್ಲಿದೆ. 2023ರ ನವೆಂಬರ್ ವೇಳೆ ಶೂಟಿಂಗ್ ಆರಂಭಿಸುವ ಕುರಿತು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

    ಇನ್ನೂ ರತನ್ ಟಾಟಾ ಪಾತ್ರಕ್ಕೆ ಅಕ್ಷಯ್ ಕುಮಾರ್ ಅಥವಾ ತಮಿಳು ನಟ ಸೂರ್ಯ ಇಬ್ಬರಲ್ಲಿ ಒಬ್ಬರು ಈ ಪಾತ್ರ ಮಾಡಲಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಅದ್ಯಾವ ನಟ ರತನ್‌ ಟಾಟಾ ಪಾತ್ರಕ್ಕೆ ಜೀವ ತುಂಬಲಿದ್ದಾರೆ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ನಟಿ ಕೀರ್ತಿ ಸುರೇಶ್‌ಗೆ ವಿಶ್ ಮಾಡಿ ಕುತೂಹಲ ಮೂಡಿಸಿದ ಹೊಂಬಾಳೆ ಫಿಲ್ಮ್ಸ್

    ಖ್ಯಾತ ನಟಿ ಕೀರ್ತಿ ಸುರೇಶ್‌ಗೆ ವಿಶ್ ಮಾಡಿ ಕುತೂಹಲ ಮೂಡಿಸಿದ ಹೊಂಬಾಳೆ ಫಿಲ್ಮ್ಸ್

    ಹಾನಟಿ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಹಾಗೂ ಅನೇಕ ಹಿಟ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಕೀರ್ತಿ ಸುರೇಶ್ (Keerthy Suresh) ಅವರ ಹುಟ್ಟು ಹಬ್ಬಕ್ಕೆ ಶುಭಾಶಯಗಳನ್ನು ಹೇಳುವ ಮೂಲಕ ಕುತೂಹಲ ಮೂಡಿಸಿದೆ ಹೊಂಬಾಳೆ ಫಿಲ್ಮ್ಸ್. ಈ ಟ್ವಿಟ್ ಒಂದಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ಹೊಂಬಾಳೆ ನಿರ್ಮಾಣದ ಮುಂದಿನ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಟಿಸಲಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ.

    ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ಅಡಿ ಈಗಾಗಲೇ ತೆಲುಗಿನಲ್ಲಿ ಸಲಾರ್ ಮೂಡಿ ಬರುತ್ತಿದ್ದರೆ, ಮಲಯಾಳಂ ಸಿನಿಮಾ ರಂಗದಲ್ಲೂ ಚಿತ್ರ ಮಾಡುತ್ತಿದ್ದಾರೆ. ತಮಿಳಿಗಾಗಿ ಚಿತ್ರವೊಂದನ್ನು ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಅದಕ್ಕೆ ಸುಧಾ ಕೊಂಗರ ನಿರ್ದೇಶಕಿ ಎಂದು ಈಗಾಗಲೇ ಗೊತ್ತು ಮಾಡಲಾಗಿದೆ. ಸುಧಾ ಮಾಡಲಿರುವ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ಸುಧಾ ಕೊಂಗಾರ (Sudha Kongara) ನಿರ್ದೇಶನದ ಚಿತ್ರದಲ್ಲಿ ಕೀರ್ತಿ ಸುರೇಶ್ ನಾಯಕಿಯಾದರೆ, ತಮಿಳಿನ ಖ್ಯಾತ ನಟ ಸಿಂಬು (Simbu) ನಾಯಕ ಎನ್ನಲಾಗುತ್ತಿದೆ. ಈ ಕಾರಣಕ್ಕಾಗಿಯೇ ಕೀರ್ತಿ ಸುರೇಶ್ ಅವರ ಹುಟ್ಟು ಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶ್ ಮಾಡಿದೆ. ಹೊಂಬಾಳೆ ಬ್ಯಾನರ್ ನಲ್ಲಿ ಮೂಡಿ ಬಂದ ಕಾಂತಾರ ಸಿನಿಮಾ ಬಗ್ಗೆ ಸಿಂಬು ಕೂಡ ಮೆಚ್ಚುಗೆ ಮಾತುಗಳನ್ನಾಡಿದ್ದರು. ಈ ಮೂಲಕ ಅವರು ಒಂದು ಸಣ್ಣ ಸುಳಿವು ಕೊಟ್ಟಿದ್ದರು.

    ಬಹುತೇಕ ಸಿಂಬು ಜೊತೆಯೇ ಕೀರ್ತಿ ಸುರೇಶ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಥವಾ ಯುವರಾಜ್ ಕುಮಾರ್ (Yuvraj Kumar) ಗಾಗಿ ಹೊಂಬಾಳೆ ಸಿನಿಮಾವೊಂದನ್ನು ಘೋಷಿಸಿದ್ದು, ಈ ಚಿತ್ರಕ್ಕಾದರೂ ಅವರು ಬರಲಿದ್ದಾರೆ ಎನ್ನುವ ಮಾತೂ ಜೋರಾಗಿದೆ. ಒಟ್ಟಿನಲ್ಲಿ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರಲಿರುವ ಮುಂದಿನ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿ ಪಕ್ಕಾ ಎಂದೇ ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಂಬಾಳೆ ಬ್ಯಾನರ್ ಮುಂದಿನ ಚಿತ್ರಕ್ಕೆ `ಮಹಾನಟಿ’ ಕೀರ್ತಿ ಸುರೇಶ್ ನಾಯಕಿ

    ಹೊಂಬಾಳೆ ಬ್ಯಾನರ್ ಮುಂದಿನ ಚಿತ್ರಕ್ಕೆ `ಮಹಾನಟಿ’ ಕೀರ್ತಿ ಸುರೇಶ್ ನಾಯಕಿ

    ಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ `ಸರ್ಕಾರಿ ವಾರಿ ಪಾಟ’ ಚಿತ್ರದ ಸಕ್ಸಸ್ ನಂತರ ಪ್ರತಿಷ್ಠಿತ ಬ್ಯಾನರ್ ಹೊಂಬಾಳೆ ಬ್ಯಾನರ್‌ಗೆ ಕೀರ್ತಿ ಸುರೇಶ್ ಸಾಥ್ ನೀಡಿದ್ದಾರೆ. ಜತೆಗೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಿರ್ದೇಶಕಿಯ ಡೈರೆಕ್ಷನ್‌ನಲ್ಲಿ ಕೀರ್ತಿ ಸುರೇಶ್ ಕಾಣಿಸಿಕೊಳ್ತಿದ್ದಾರೆ.

    ಸೌತ್ ಸಿನಿರಂಗದಲ್ಲಿ ಟಾಪ್ ನಟಿಮಣಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್ ಸತತ ಸೋಲಿನಿಂದ ಕಂಗೆಟ್ಟಿದ್ದರು. ಈಗ `ಸರ್ಕಾರಿ ವಾರಿ ಪಾಟ’ ಚಿತ್ರದ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಇದೀಗ ಚಿತ್ರದ ಆಯ್ಕೆಯಲ್ಲೂ ಚ್ಯೂಸಿಯಾಗಿರುವ ಕೀರ್ತಿ ಸುರೇಶ್ ಸದ್ಯ ಹೊಂಬಾಳೆ ಬ್ಯಾನರ್ ನಿರ್ಮಾಣ ಹೊಸ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಇದನ್ನೂ ಓದಿ:ಸೋನು ಶ್ರೀನಿವಾಸ್ ಗೌಡಗೆ ಟ್ರೋಲ್ ಆಗಿ ಫೇಮಸ್ ಆಗುವ ಆಸೆ: ಉದಯ್ ಸೂರ್ಯ

    ರಾಷ್ಟ್ರ ವಿಜೇತೆ ಸುಧಾ ಕೊಂಗರ ನಿರ್ದೇಶನದ ಹೊಸ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಟಿಟೌನ್‌ನಲ್ಲಿ ಸದ್ದು ಮಾಡುತ್ತಿದೆ. ನಾಯಕ ಯಾರು ಎಂಬುದು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. `ಸೂರರೈ ಪೋಟ್ರು’ ಖ್ಯಾತಿಯ ನಿರ್ದೇಶಕಿ ಸುಧಾ ಕೊಂಗರ ಡೈರೆಕ್ಷನ್ ಕೀರ್ತಿ ಸುರೇಶ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • `ಹೊಂಬಾಳೆ ಫಿಲ್ಮ್ಸ್‌’ ಸುಧಾ ಕೊಂಗರ ನಿರ್ದೇಶನದಲ್ಲಿ ಕಾಲಿವುಡ್ ನಟ ಸೂರ್ಯ..!

    `ಹೊಂಬಾಳೆ ಫಿಲ್ಮ್ಸ್‌’ ಸುಧಾ ಕೊಂಗರ ನಿರ್ದೇಶನದಲ್ಲಿ ಕಾಲಿವುಡ್ ನಟ ಸೂರ್ಯ..!

    ದೇಶಾದ್ಯಂತ ಸಂಚಲನ ಮೂಡಿಸುತ್ತಿರುವ `ಹೊಂಬಾಳೆ ಫಿಲ್ಮ್ಸ್‌’ ಇತ್ತೀಚೆಗಷ್ಟೇ ಸುಧಾ ಕೊಂಗರ ಜತೆ ಸಿನಿಮಾ ಮಾಡುವುದಾಗಿ ಅಧಿಕೃತವಾಗಿ ಅನೌನ್ಸ್ ಮಾಡಲಾಗಿತ್ತು. ಈಗ ಸುಧಾ ಕೊಂಗರ ನಿರ್ದೇಶನದಲ್ಲಿ ಕಾಲಿವುಡ್ ನಟ ಸೂರ್ಯ ನಟಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    `ಸೂರರೈ ಪೊಟ್ರು’ ಯಶಸ್ಸಿನ ನಂತರ ಮತ್ತೆ ಕಾಲಿವುಡ್ ಸೂಪರ್ ಸ್ಟಾರ್‌ಗೆ ನಿರ್ದೇಶನ ಮಾಡಲಿದ್ದಾರೆ ಸುಧಾ ಕೊಂಗರ ಎಂಬ ಊಹಾಪೋಹ ಹರಿದಾಡುತ್ತಿದೆ. ಈ ಚಿತ್ರ ಯಶಸ್ಸಿನ ನಂತರ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಹಾಗಾಗಿ ಮತ್ತೆ ನಟ ಸೂರ್ಯಗೆ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

    ಹೊಂಬಾಳೆ ಬ್ಯಾನರ್‌ನ ಚಿತ್ರದ ನಂತರ ಮತ್ತೆ ಸೂರ್ಯ ಮತ್ತು ಸುಧಾ ಒಟ್ಟಿಗೆ ಚಿತ್ರ ಮಾಡಲಿದ್ದಾರೆ. ಬಯೋಪಿಕ್ ಚಿತ್ರದಲ್ಲಿ ನಟಿಸಲಿದ್ದು, ಈ ಚಿತ್ರವನ್ನು ಸೂರ್ಯ ಅವರ ಸ್ವಂತ ಬ್ಯಾನರ್‌ನಲ್ಲೇ ನಿರ್ಮಾಣವಾಗಿದೆ. ಅದಕ್ಕೂ ಮುಂಚೆ ಸೂರ್ಯ ಒಪ್ಪಿಕೊಂಡಿರುವ ಚಿತ್ರಗಳನ್ನು ಪೂರ್ಣಗೊಳಿಸಬೇಕಿದೆ. ಇದನ್ನೂ ಓದಿ: ಪ್ಲಾಸ್ಟಿಕ್ ಸುತ್ತಿಕೊಂಡು ಬಂದ ಉರ್ಫಿ ಜಾವೇದ್ : ಕಾಸ್ಟ್ಯೂಮ್ ಡಿಸೈನರ್ ಹುಡುಕುತ್ತಿದ್ದಾರೆ ನೆಟ್ಟಿಗರು

    `ಹೊಂಬಾಳೆ ಫಿಲ್ಮ್ಸ್‌’ ಅಡಿಯಲ್ಲಿ ಮೂಡಿ ಬರಲಿರುವ ನೈಜ ಆಧಾರಿತ ಕಥೆಗೆ ಸುಧಾ ಕೊಂಗರ ಆಕ್ಷನ್ ಕಟ್ ಹೇಳ್ತಿದ್ದಾರೆ. ಸುಧಾ ಅವರ ಕಥೆಗೆ ನಾಯಕ ನಟನ ಹುಡುಕಾಟದಲ್ಲಿದೆ ಚಿತ್ರತಂಡ. ಸಿನಿಮಾದ ಅಧಿಕೃತ ಮಾಹಿತಿಗಾಗಿ ಕಾದುನೋಡಬೇಕಿದೆ.

  • ʻಹೊಂಬಾಳೆ ಫಿಲ್ಮ್ಸ್‌ʼ ಹೊಸ ಸಿನಿಮಾ ಅನೌನ್ಸ್: ಭರ್ಜರಿ ಅವಕಾಶ ಗಿಟ್ಟಿಸಿಕೊಂಡ `ಸೂರರೈ ಪೋಟ್ರು’ ನಿರ್ದೇಶಕಿ

    ʻಹೊಂಬಾಳೆ ಫಿಲ್ಮ್ಸ್‌ʼ ಹೊಸ ಸಿನಿಮಾ ಅನೌನ್ಸ್: ಭರ್ಜರಿ ಅವಕಾಶ ಗಿಟ್ಟಿಸಿಕೊಂಡ `ಸೂರರೈ ಪೋಟ್ರು’ ನಿರ್ದೇಶಕಿ

    ದೇಶಾದ್ಯಂತ ಸಂಚಲನ ಮೂಡಿಸುತ್ತಿರುವ `ಹೊಂಬಾಳೆ ಫಿಲ್ಮ್ಸ್‌ʼ ಸಂಸ್ಥೆ `ಕೆಜಿಎಫ್ ಚಾಪ್ಟರ್ 2′ ಯಶಸ್ಸಿನಿಂದ ಸದ್ಯ ಭಾರೀ ಸುದ್ದಿ ಮಾಡ್ತಿದೆ. ಹೀಗೆ ಒಂದಲ್ಲಾ ಒಂದು ವಿಚಾರವಾಗಿ ಸೌಂಡ್ ಮಾಡ್ತಿರೋ ಹೊಂಬಾಳೆ ಬ್ಯಾನರ್‌ನಿಂದ ನಿರ್ದೇಶಕಿ ಸುಧಾ ಕೊಂಗರ ಅವರಿಗೆ ಚಿತ್ರ ಮಾಡುವ ಅವಕಾಶ ಸಿಕ್ಕಿದೆ. ಈ ಬಗ್ಗೆ ಬ್ರೇಕಿಂಗ್ ನ್ಯೂಸ್ ಹೊರಬಿದ್ದಿದೆ.

    ಸಿನಿಮಾರಂಗದಲ್ಲಿ ಮೈಲಿಗಲ್ಲು ನಿರ್ಮಾಣ ಮಾಡಿರುವ ಸಂಸ್ಥೆಯಿಂದ ಅನೇಕ ಚಿತ್ರಗಳು ನಿರ್ಮಾಣವಾಗುತ್ತಿದೆ. ಈಗ ಚಿತ್ರ ಕೂಡ ಅನೌನ್ಸ್ ಮಾಡಲಾಗಿದೆ. ಮತ್ತೊಂದು ವಿಶೇಷ ಅಂದ್ರೆ, ಈ ಬಾರಿ ʻಹೊಂಬಾಳೆ ಫಿಲ್ಮ್ಸ್‌ʼ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ದೇಶನ ಮಾಡುವ ಅವಕಾಶವನ್ನು ಕಾಲಿವುಡ್ ಲೇಡಿ ನಿರ್ದೇಶಕಿ ಸುಧಾ ಕೊಂಗರ ಗಿಟ್ಟಿಸಿಕೊಂಡಿದ್ದಾರೆ.

    ನಿರ್ದೇಶಕಿ ಸುಧಾ ಕೊಂಗರ ಅವರು ಮೂಲತಃ ಆಂಧ್ರ ಪ್ರದೇಶದವರಾಗಿದ್ದು, ಅವರು ತಮಿಳು ಸಿನಿಮಾರಂಗದಲ್ಲಿ ಸಾಧನೆ ಮಾಡಿದ್ದಾರೆ. ಡಿಫರೆಂಟ್ ಸಬ್‌ಜೆಕ್ಟ್ಗಳನ್ನ ತೆರೆಯ ಮೇಲೆ ತೋರಿಸುವಲ್ಲಿ ಸೈ ಎನಿಸಿಕೊಂಡಿದ್ದಾರೆ. ಈ ಹಿಂದೆ ಸೂರ್ಯ ನಟನೆಯ `ಸೂರರೈ ಪೋಟ್ರು’ ನಿರ್ದೇಶನ ಮಾಡಿ ಗಮನ ಸೆಳೆದಿದ್ದರು. ಇದನ್ನೂ ಓದಿ:ನನ್ನಿಂದ ತಪ್ಪಾಯ್ತು – ತಂಬಾಕು ಬ್ರ್ಯಾಂಡ್ ಅಂಬಾಸಿಡರ್ ಪಟ್ಟ ತ್ಯಜಿಸಿದ ಅಕ್ಷಯ್

    ಕಾಲಿವುಡ್ ಪ್ರತಿಭಾವಂತ ನಿರ್ದೇಶಕಿ ಸುಧಾ ಕೊಂಗರ ಅವರ ಕೆಲಸ ಗುರುತಿಸಿ ಇದೀಗ ಹೊಂಬಾಳೆ ಸಂಸ್ಥೆಯಡಿ ನಿರ್ದೇಶನ ಮಾಡುವ ಅವಕಾಶವನ್ನು ಕೊಟ್ಟಿದ್ದಾರೆ. ಹಾಗಂತ ಅಧಿಕೃತವಾಗಿ `ಹೊಂಬಾಳೆ ಫಿಲ್ಮ್ಸ್‌ʼ ಟ್ವಿಟರ್‌ನಲ್ಲಿ ಘೋಷಿಸಿದ್ದಾರೆ. ಸುಧಾ ಕೊಂಗರ ಅವರಿಗೆ `ಹೊಂಬಾಳೆ ಫಿಲ್ಮ್ಸ್‌’ ಮೂಲಕ ವಿಜಯ್ ಕಿರಗಂದೂರು ಸಾಥ್‌ ನೀಡಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.