Tag: ಸುಪಾರಿ

  • ನನ್ನನ್ನು ಕೊಲ್ಲಲು ನಟ ಅಕ್ಷಯ್ ಕುಮಾರ್ ಸುಪಾರಿ ಕೊಟ್ಟಿದ್ದಾರೆ: ಖಾನ್ ಟ್ವೀಟ್

    ನನ್ನನ್ನು ಕೊಲ್ಲಲು ನಟ ಅಕ್ಷಯ್ ಕುಮಾರ್ ಸುಪಾರಿ ಕೊಟ್ಟಿದ್ದಾರೆ: ಖಾನ್ ಟ್ವೀಟ್

    ಬಾಲಿವುಡ್ (Bollywood)  ನ ಖ್ಯಾತ ನಟ ಅಕ್ಷಯ್ ಕುಮಾರ್ ಮೇಲೆ ಗುರುತರ ಆರೋಪ ಮಾಡಿದ್ದಾರೆ ನಟ, ನಿರ್ಮಾಪಕ ಹಾಗೂ ಸ್ವಯಂ ಘೋಷಿತ ವಿಮರ್ಶಕ ಕಮಲ್ ಆರ್ ಖಾನ್ (Kamal R Khan). ಈ ಕುರಿತು ಟ್ವೀಟ್ ಮಾಡಿರುವ ಅವರು ‘ನನ್ನನ್ನು ಜೈಲಿಗೆ (Jail) ಕಳುಹಿಸಿ ಸಾಯಿಸಲು ಅಕ್ಷಯ್ ಕುಮಾರ್ ಸುಪಾರಿ ಕೊಟ್ಟಿದ್ದಾರೆ’ ಎಂದು ಅವರು ಬರೆದುಕೊಂಡಿದ್ದಾರೆ.

    ಬಾಲಿವುಡ್ ನಲ್ಲಿ ನನಗೆ ತುಂಬಾ ಜನ ಸ್ನೇಹಿತರು ಇದ್ದಾರೆ. ಅಕ್ಷಯ್ ಕುಮಾರ್ (Akshay Kumar) ಅವರನ್ನು ಹೊರತು ಪಡಿಸಿ ಎಲ್ಲರೂ ನನ್ನೊಂದಿಗೆ ಚೆನ್ನಾಗಿದ್ದಾರೆ. ಆದರೆ, ಅಕ್ಷಯ್ ಕುಮಾರ್ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ನನ್ನ ಸಾವು ಬಯಸುತ್ತಿದ್ದಾರೆ. ಜೈಲಿಗೆ ಕಳುಹಿಸಿ, ಅಲ್ಲಿಯೇ ಸಾಯಿಸಲು (Murder) ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಮುಂಬೈನಿಂದ ಸ್ಯಾಂಡಲ್ ವುಡ್ ಗೆ ಬಂದ ಪ್ರಾಚಿ ಶರ್ಮಾ

    ಅವರನ್ನು ನಾನು ಅಕ್ಷಯ್ ಕುಮಾರ್ ಎಂದು ಕರೆಯಲಾರೆ. ಅವರು ನಮ್ಮ ಭಾರತದವರು ಅಲ್ಲ. ಆತ ಕೆನಡಿಯನ್. ಕೆನಡಾದ ಪೌರತ್ವ ಹೊಂದಿದ್ದಾರೆ. ಹಾಗಾಗಿ ನಾನು ಅವರನ್ನು ಕೆನಡಿಯನ್ ಕುಮಾರ್ ಎಂದು ಕರೆಯುತ್ತಾನೆ. ಹಾಗೆ ಕರೆದರೆ ಅವರಿಗೆ ಸಿಟ್ಟು ಬರುತ್ತದೆ. ಇದೇ ಕಾರಣಕ್ಕಾಗಿ ಅವರು ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಎಂದರು.

     

    ಈ ರೀತಿಯಾಗಿ ಕಮಲ್ ಆರ್ ಖಾನ್ ಆರೋಪ ಮಾಡುತ್ತಿರುವುದು ಮೊದಲೇನೂ ಅಲ್ಲ. ಅನೇಕರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಈ ಕಾರಣಕ್ಕಾಗಿ ಅವರು ಜೈಲಿಗೂ ಹೋಗಿದ್ದಾರೆ. ಆದರೂ, ನಟ-ನಟಿಯರ ಮೇಲೆ, ನಿರ್ದೇಶಕರ ಮೇಲೆ, ನಿರ್ಮಾಪಕರ ಮೇಲೆ ಆರೋಪ ಮಾಡುವುದನ್ನು ಅವರು ಬಿಟ್ಟಿಲ್ಲ.

  • ಸುರೇಶ್‌ ಗೌಡ ಕೊಲೆಗೆ ಸುಪಾರಿ ಆರೋಪ – ಶಾಸಕ ಗೌರಿಶಂಕರ ಸೇರಿ ಮೂವರ ವಿರುದ್ಧ FIR

    ಸುರೇಶ್‌ ಗೌಡ ಕೊಲೆಗೆ ಸುಪಾರಿ ಆರೋಪ – ಶಾಸಕ ಗೌರಿಶಂಕರ ಸೇರಿ ಮೂವರ ವಿರುದ್ಧ FIR

    ತುಮಕೂರು: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ (Suresh Gowda) ಅವರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ (Gowrishankar) ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಸುರೇಶ್ ಗೌಡರು ಕೊಟ್ಟ ದೂರಿನ ಅನ್ವಯ ತುಮಕೂರಿನ (Tumakuru) ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ, ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದನ್ನೂ ಓದಿ: ಸುರೇಶ್ ಗೌಡ ಕೊಲೆಗೆ ಸುಪಾರಿ ಆರೋಪ- 5 ಕೋಟಿ ಡೀಲ್ ನಡೆದಿದೆ ಎಂದ ಮಾಜಿ ಶಾಸಕ

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಗೌರಿಶಂಕರ ಅಕ್ರಮ ಎಸಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆಯೋಗಕ್ಕೆ ದೂರು‌ ನೀಡಿದ್ದರು. ಅಲ್ಲದೇ ನಕಲಿ ಬಾಂಡ್ ಹಂಚಿ ಮತದಾರರಿಗೆ ಮೋಸ ಮಾಡಿದ್ದಾರೆ ಎಂದು ದೂರಿದ್ದರು. ಈ ದೂರಿ‌ನಿಂದ ಶಾಸಕ ಗೌರಿಶಂಕರ ಕೆರಳಿ ನನ್ನ ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ಸುರೇಶ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ತುಮಕೂರಿನ ಮಾಜಿ ಮೇಯರ್ ಗಡ್ಡ ರವಿಯನ್ನು ಕೊಲೆ ಮಾಡಿ ಜೈಲಿನಲ್ಲಿದ್ದ ರೌಡಿಶೀಟರ್ ಸುಜಯ್ ಭಾರ್ಗವ್‌ಗೆ ಸುಮಾರು 5 ಕೋಟಿ ರೂ.ಗೆ ಸುಪಾರಿ ನೀಡಲಾಗಿದೆ. ಅದರ ವೆಚ್ಚವನ್ನು ತುಮಕೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಗೋಲ್ಡ್‌ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಭರಿಸುವ ಪ್ಲಾನ್ ಮಾಡಿದ್ದಾರೆ ಎಂದು ದೂರಲಾಗಿದೆ. ಅಲ್ಲದೇ ಭಾರಿ ವಾಹನ ಹತ್ತಿಸಿ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸುವ ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ದೂರಿದ್ದಾರೆ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಶಾಸಕ ಗೌರಿಶಂಕರ್‌ಗೆ ಥೈಲ್ಯಾಂಡ್ ಅಂದರೆ ಬಲು ಪ್ರೀತಿ, ಗೋವಾ ಅಂದರೆ ಮೋಜು, ಅಸೆಂಬ್ಲಿ ಅಂದರೆ ಅಲರ್ಜಿ: ಸುರೇಶ್ ಗೌಡ

    Live Tv
    [brid partner=56869869 player=32851 video=960834 autoplay=true]

  • ಕುಡಿಯಲು ಹಣ ಕೊಡಲ್ಲ ಅಂತಾ ಕಿರುಕುಳ ನೀಡ್ತಿದ್ದ ಮಗನ ಹತ್ಯೆಗೆ ಸುಪಾರಿ ಕೊಟ್ಟ ತಂದೆ-ತಾಯಿ!

    ಕುಡಿಯಲು ಹಣ ಕೊಡಲ್ಲ ಅಂತಾ ಕಿರುಕುಳ ನೀಡ್ತಿದ್ದ ಮಗನ ಹತ್ಯೆಗೆ ಸುಪಾರಿ ಕೊಟ್ಟ ತಂದೆ-ತಾಯಿ!

    ಹೈದರಾಬಾದ್: ಮದ್ಯ ವ್ಯಸನಿ ನಿರುದ್ಯೋಗಿ ಮಗನ ಕಿರುಕುಳದಿಂದ ಬೇಸತ್ತು, ಆತನ ಹತ್ಯೆಗೆ ತಂದೆ-ತಾಯಿಯೇ ಸುಪಾರಿ (Supari) ಕೊಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ಸಾಯಿ ರಾಮ್‌ (26) ಕೊಲೆಯಾದ ಯುವಕ. ಸರ್ಕಾರಿ ಶಾಲೆಯ ಪ್ರಾಂಶುಪಾಲರು ಮತ್ತು ಅವರ ಪತ್ನಿ ಖಮ್ಮಂನಲ್ಲಿ ತಮ್ಮ ಮಗನನ್ನು ಹತ್ಯೆ ಮಾಡಲು 8 ಲಕ್ಷ ರೂ.ಗೆ ಸುಪಾರಿ ಕೊಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷತ್ರಿಯ ರಾಮ್ ಸಿಂಗ್ ಮತ್ತು ರಾಣಿ ಬಾಯಿ ಹಾಗೂ ನಾಲ್ವರು ಆರೋಪಿಗಳನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ವೈಫೈ ಪಾಸ್‍ವರ್ಡ್ ಹಂಚಿಕೊಳ್ಳದ್ದಕ್ಕೆ ನಡೆಯಿತು ಯುವಕನ ಭೀಕರ ಕೊಲೆ

    ಸಾಯಿ ರಾಮ್ ದೇಹವನ್ನು ಸೂರ್ಯಪೇಟೆಯ ಮೂಸಿಯಲ್ಲಿ ಎಸೆಯಲಾಗಿತ್ತು. ಒಂದು ದಿನದ ನಂತರ ಪತ್ತೆಯಾಗಿದೆ. ಆಪಾದಿತ ಹಂತಕರಲ್ಲಿ ಒಬ್ಬ ತಲೆಮರೆಸಿಕೊಂಡಿದ್ದಾನೆ. ಅಪರಾಧಕ್ಕೆ ಬಳಸಿದ ಕುಟುಂಬದ ಕಾರನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳಿಂದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೆ ಮಗ ಕಾಣೆಯಾಗಿದ್ದ ಬಗ್ಗೆ ಪೋಷಕರು ದೂರು ದಾಖಲಿಸಿರಲಿಲ್ಲ. ನಂತರ ಮಗನ ಹತ್ಯೆ ಬಗ್ಗೆ ತಿಳಿದು ಶವವನ್ನು ಗುರುತಿಸಲು ಶವಾಗಾರಕ್ಕೆ ಹೋಗಲು ಪೋಷಕರು ಅದೇ ಕಾರನ್ನು ಬಳಸಿದ್ದು ತನಿಖೆಯಿಂದ ತಿಳಿದುಬರಲಿದೆ.

    ರಾಮ್ ಸಿಂಗ್, ಮಾರಿಪೆಡಾ ಬಾಂಗ್ಲಾ ಗ್ರಾಮದ ಸರ್ಕಾರಿ ಗುರುಕುಲದ ಪ್ರಾಂಶುಪಾಲರಾಗಿದ್ದರು. ದಂಪತಿಯ ಪುತ್ರಿ ಯುಎಸ್‌ನಲ್ಲಿ ನೆಲೆಸಿದ್ದಾರೆ. ಸಾಯಿ ರಾಮ್ ತನ್ನ ಹೆತ್ತವರು ಮದ್ಯಪಾನಕ್ಕೆ ಹಣ ನಿರಾಕರಿಸಿದಾಗ ನಿಂದಿಸಿ ಥಳಿಸುತ್ತಿದ್ದ. ಆತನನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದ್ದರೂ ಪ್ರಯೋಜನವಾಗಿರಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೊರಗೆ ಬರದಿದ್ರೆ ಕಾಲು ಮುರಿಯುತ್ತೇವೆ- SFI ಕಾರ್ಯಕರ್ತರಿಂದ ಪ್ರಾಂಶುಪಾಲರಿಗೆ ಧಮ್ಕಿ

    ಹುಜೂರಾಬಾದ್ ಸರ್ಕಲ್ ಇನ್ಸ್‌ಪೆಕ್ಟರ್ ರಾಮಲಿಂಗ ರೆಡ್ಡಿ ಅವರ ಪ್ರಕಾರ, ದಂಪತಿ ತಮ್ಮ ಮಗನನ್ನು ಕೊಲ್ಲಲು ರಾಣಿ ಬಾಯಿಯ ಸಹೋದರ ಸತ್ಯನಾರಾಯಣರಿಂದ ಸಹಾಯವನ್ನು ಪಡೆದಿದ್ದರು. ಸತ್ಯನಾರಾಯಣ ಅವರು ಕೊಲೆ ಮಾಡಲು ಮಿರ್ಯಾಲಗೂಡು ಮಂಡಲದ ಆರ್ ರವಿ, ಡಿ ಧರ್ಮ, ಪಿ ಎನ್. ನಾಗರಾಜು, ಡಿ ಸಾಯಿ ಮತ್ತು ಬಿ ರಾಂಬಾಬು ಎಂಬುವರ ನೆರವು ಕೇಳಿದ್ದರು. ಎಂಟು ಲಕ್ಷಕ್ಕೆ ಸುಪಾರಿ ನೀಡಿ 1.5 ಲಕ್ಷ ಮುಂಗಡ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

    2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

    ಶಿವಮೊಗ್ಗ: ಯುವಕನ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಹರ್ಷನ ಕೊಲೆಗೆ ಎರಡು ವರ್ಷಗಳ ಹಿಂದೆಯೇ ಸುಪಾರಿ ಕೊಟ್ಟಿದ್ದರು ಎಂದು ಮೃತನ ಸಂಬಂಧಿ ಗಂಭೀರ ಆರೋಪ ಮಾಡಿದ್ದಾರೆ.

    ಮೆಗ್ಗಾನ್ ಆಸ್ಪತ್ರೆಯ ಬಳಿ ಹತ್ಯೆಯಾದ ಯುವಕನ ಸಂಬಂಧಿ ಪ್ರವೀಣ್ ಮಾತನಾಡಿದ್ದು, ಹೊಡೆದು ಹಾಕಿದ್ದಾರೆ ಅಷ್ಟೇ. ಇವನನ್ನು ಹೊಡೆದು ಹಾಕಿದರೆ 10 ಲಕ್ಷ ರೂ. ಕೊಡ್ತೀನಿ ಅಂತ 2 ವರ್ಷದಿಂದಲೂ‌ ಮುಸ್ಲಿಮರು ಹೇಳುತ್ತಿದ್ದರು. ಯಾರು ಹೊಡೆದು ಹಾಕಿದ್ದಾರೆ ಅಂತ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ

    ಪೊಲೀಸರು ಏನು ತನಿಖೆ ಮಾಡುತ್ತಾರೋ ಅದರ ಆಧಾರದ ಮೇಲೆ ನಮಗೆ ಗೊತ್ತಾಗಬೇಕು. ಎರಡು ವರ್ಷದಿಂದಲೂ ಈ ಜಿದ್ದು ಇದ್ದೇ ಇದೆ ಎಂದು ಪ್ರವೀಣ್‌ ಮಾಹಿತಿ ನೀಡಿದ್ದಾನೆ.

    ಹರ್ಷ ಎಂಬಾತ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ

    ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

  • ಗರ್ಭಿಣಿ ಪತ್ನಿಯನ್ನು ಕೊಲ್ಲಲು ವೈದ್ಯರಿಗೇ ಸುಪಾರಿ ಕೊಟ್ಟಿದ್ದ ಭೂಪ!

    ಗರ್ಭಿಣಿ ಪತ್ನಿಯನ್ನು ಕೊಲ್ಲಲು ವೈದ್ಯರಿಗೇ ಸುಪಾರಿ ಕೊಟ್ಟಿದ್ದ ಭೂಪ!

    ಜೈಪುರ: ತನ್ನ ಪತ್ನಿಯನ್ನು ಕೊಲೆ ಮಾಡಲು ವೈದ್ಯರನ್ನು ನೇಮಿಸಿಕೊಳ್ಳಲು ಯತ್ನಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ರಾಜಸ್ಥಾನ್‌ನಲ್ಲಿ ನಡೆದಿದೆ.

    ಆರೋಪಿಯು ಪೆಡವಾ ಪ್ರದೇಶದ ಮಂಗಲ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಆತನನ್ನು ಇನ್ನೂ ಬಂಧಿಸಿಲ್ಲ ಎಂದು ಜಲವಾರ್‌ ನಗರ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ವೇಳೆ ಮಹಿಳೆಯ ಹೊಟ್ಟೆಯಲ್ಲೇ ಉಳೀತು ಹತ್ತಿ – ಶಸ್ತ್ರಚಿಕಿತ್ಸಕರ ಮೇಲೆ ಕೇಸ್

    POLICE JEEP

    ನಗರದ ಎಸ್‌ಆರ್‌ಜಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಅಖಿಲೇಶ್‌ ಮೀನಾ ಅವರ ದೂರಿನ ಮೇರೆಗೆ ಸಿಂಗ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಂಗ್‌ ಅವರು ತಮ್ಮ ನಿವಾಸಕ್ಕೆ ಬಂದು, ಪತ್ನಿಯನ್ನು ಕೊಲ್ಲಲು ವಿನಂತಿಸಿದ್ದರು. ಅದಕ್ಕಾಗಿ ಹಣವನ್ನೂ ನೀಡಿದ್ದರು ಎಂದು ವೈದ್ಯರು ಆರೋಪಿಸಿದ್ದಾರೆ.

    ತನ್ನ ಗರ್ಭಿಣಿ ಪತ್ನಿಯ ಚಿಕಿತ್ಸೆಗಾಗಿ ವ್ಯಕ್ತಿ ನಾಲ್ಕೈದು ದಿನಗಳಿಂದ ನನ್ನನ್ನು ಸಂಪರ್ಕಿಸಿದ್ದ. ಚಿಕಿತ್ಸೆಯ ಉದ್ದೇಶದಿಂದ ಬಂದಿದ್ದ ಆತ ನಂತರ, ತನ್ನ ಪತ್ನಿಯನ್ನು ಕೊಲ್ಲಬೇಕು ಎಂದು ಮನವಿ ಮಾಡಿದ್ದ. ಈತ ಮನೋರೋಗಿ ಇರಬೇಕು ಎಂದು ಭಾವಿಸಿ ಬುದ್ದಿ ಹೇಳಿ ಕಳುಹಿಸಿದ್ದೆ ಎಂದು ವೈದ್ಯರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪ್ರವಾದಿಯ ವ್ಯಂಗ್ಯಚಿತ್ರ ಕಳುಹಿಸಿದ್ದಕ್ಕೆ ಮಹಿಳೆಗೆ ಗಲ್ಲು ಶಿಕ್ಷೆ

    ಗರ್ಭಿಣಿ ಪತ್ನಿಯನ್ನು ಕೊಲ್ಲಲು ವೈದ್ಯರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಿದ ಆರೋಪದಡಿ ಮಂಗಲ್‌ ಸಿಂಗ್‌ ವಿರುದ್ಧ ಐಪಿಸಿ ಸೆಕ್ಷನ್‌ 302 ಮತ್ತು 115ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಲವಾರ್‌ ನಗರ ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಲ್ವಿರ್‌ ಸಿಂಗ್‌ ತಿಳಿಸಿದ್ದಾರೆ.

  • ಪಕ್ಕಾ ಪ್ಲಾನ್ ಮರ್ಡರ್ – ಪತ್ನಿ, ಮಗ ಸೇರಿ ಆ್ಯಕ್ಸಿಡೆಂಟ್ ರೀತಿ ರೈತನ ಹತ್ಯೆ

    ಪಕ್ಕಾ ಪ್ಲಾನ್ ಮರ್ಡರ್ – ಪತ್ನಿ, ಮಗ ಸೇರಿ ಆ್ಯಕ್ಸಿಡೆಂಟ್ ರೀತಿ ರೈತನ ಹತ್ಯೆ

    – ಮರ್ಡರ್ ಮಿಸ್ಟರಿಯನ್ನು ಬೇಧಿಸಿದ ಪೊಲೀಸರು

    ಬೆಂಗಳೂರು: ಪತ್ನಿ ಹಾಗೂ ಮಗ ಸೇರಿ ಸುಪಾರಿ ಕೊಟ್ಟು ರೈತನನ್ನು ಕೊಲೆ ಮಾಡಿಸಿದ್ದಾರೆ. ಅಚ್ಚರಿ ವಿಚಾರ ಎಂಬಂತೆ ಕೊಲೆ ಬಗ್ಗೆ ಯಾರಿಗೂ ಸುಳಿವು ಸಿಗಬಾರದು, ಅಪಘಾತದ ರೀತಿ ಕೊಲೆಯಾಗಬೇಕು. ಇದಕ್ಕೆ ಆಯ್ಕೆ ಮಾಡಿಕೊಂಡಿದ್ದು ಸಿಸಿಟಿವಿ ಕ್ಯಾಮೆರಾಗಳಿಲ್ಲದ ರಸ್ತೆ. ಭಯಾನಕ ಕೊಲೆ ಪ್ರಕರಣವನ್ನು ವೈಟ್ ಫೀಲ್ಡ್ ಪೊಲೀಸರು ಬೇಧಿಸಿದ್ದಾರೆ.

    ಜನವರಿ 21ರಂದು 58 ವರ್ಷದ ರೈತ ಸುಬ್ಬರಾಯಪ್ಪ ಕೊಲೆಯಾಗಿದ್ದು, ವ್ಯಕ್ತಿಯೊಬ್ಬರನ್ನು ಭೇಟಿಯಾಗಲು ತೆರಳುವಾಗ ಕಾರ್ ಗುದ್ದಿಸಿ ಕೊಲೆ ಮಾಡಲಾಗಿದೆ. ಆದರೆ ಸುಬ್ಬರಾಯಪ್ಪ ಅವರ ಮಗ ದೇವರಾಜ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರು ಸಹ ಬೈಕ್‍ನಿಂದ ಬಿದ್ದು ಗಾಯಗೊಂಡು ಸುಬ್ಬರಾಯಪ್ಪ ಸಾವನ್ನಪ್ಪಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಬಳಿಕ ಪೊಲೀಸರು ಅಪಘಾತ ನಡೆದ ಸ್ಥಳ ಪರೀಕ್ಷೆಗೆ ತೆರಳಿದ್ದು, ಈ ವೇಳೆ ಅವರಿಗೆ ಅನುಮಾನ ಬಂದಿದೆ. ರಸ್ತೆಯಲ್ಲಿ ತುಂಬಾ ಪ್ಯಾಚ್‍ಗಳಿವೆ, ಅಲ್ಲದೆ ರೋಡ್ ಹಂಪ್ಸ್ ಗಳಿವೆ. ಅಲ್ಲದೆ ಈ ರಸ್ತೆಯಲ್ಲಿ ಯಾವುದೇ ರೀತಿಯ ಸಿಸಿಟಿವಿ ಕ್ಯಾಮರಾಗಳಿಲ್ಲ ಎಂಬುದನ್ನು ಪೊಲೀಸರು ಅರಿತಿದ್ದಾರೆ. ಬಳಿಕ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆಳವಾದ ತನಿಖೆ ನಡೆಸಿದ್ದು, ಪ್ರಕರಣದ ಸತ್ಯವನ್ನು ಪತ್ತೆಹಚ್ಚಿದ್ದಾರೆ.

    ಅದೇ ರಸ್ತೆಯ ಇನ್ನೊಂದು ಬದಿಯಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಗಮನಿಸಿದ್ದು, ಈ ವೇಳೆ ಅಪಘಾತ ನಡೆದ ಸ್ಥಳಕ್ಕೆ ರಿಜಿಸ್ಟ್ರೇಶನ್ ನಂಬರ್ ಇಲ್ಲದ ಎಸ್‍ಯುವಿ ಕಾರ್ ಹೋಗಿರುವುದನ್ನು ಗಮನಿಸಿದ್ದಾರೆ. ಬಳಿಕ ಪೊಲೀಸರು ಕಾರ್ ಮಾಲೀಕನನ್ನು ಟ್ರೇಸ್ ಮಾಡಿದ್ದು, ಬಾಡಿಗೆ ಕಂಪನಿಯ ಸ್ಟಿಕ್ಕರ್ ಆಧಾರದ ಮೇಲೆ ಅನಿಲ್ ಕುಮಾರ್ ಹಾಗೂ ಕಾರನ್ನು ಪತ್ತೆ ಹಚ್ಚಿದ್ದಾರೆ.

    ಬಳಿಕ ಕಾಲ್ ರೆಕಾರ್ಡ್ ದಾಖಲೆಗಳನ್ನು ಪರಿಶೀಲಿಸಿದ್ದು, ಅನಿಲ್ ಕುಮಾರ್ ಸಂತ್ರಸ್ತ ಸುಬ್ಬರಾಯಪ್ಪ ಅವರಿಗೆ ಕರೆ ಮಾಡಿ, ಕೃಷಿ ಪರಿಕರಗಳನ್ನು ಖರೀದಿಸುವ ನೆಪದಲ್ಲಿ ಆ ರಸ್ತೆಗೆ ಕರೆಸಿರುವುದು ಬೆಳಕಿಗೆ ಬಂದಿದೆ. ಇನ್ನೂ ಆಶ್ಚರ್ಯಕರ ಸಂಗತಿ ಎಂದರೆ ಅನಿಲ್ ಕುಮಾರ್ ಕರೆ ಮಾಡಿದ ಫೋನ್‍ನ್ನು ಸುಬ್ಬರಾಯಪ್ಪ ಪತ್ನಿ ಯಶೋಧಮ್ಮ ಅವರಿಂದ ಪಡೆದಿದ್ದ. ಬಳಿಕ ಅನಿಲ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಯಶೋಧಮ್ಮ ಹಾಗೂ ಮಗ ದೇವರಾಜ್ 6 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟಿದ್ದರು ಎಂದು ಅನಿಲ್ ತಪ್ಪೊಪ್ಪಿಕೊಂಡಿದ್ದಾನೆ.

    ಸುಬ್ಬರಾಯಪ್ಪ ಅನೈತಿಕ ಸಂಬಂಧ ಹೊಂದಿದ್ದು, ಇದರಿಂದಾಗಿ ಆಸ್ತಿ ಕಡಿಮೆ ಸಿಗುತ್ತದೆ ಎಂಬ ಉದ್ದೇಶದಿಂದ ಯಶೋಧಮ್ಮ ಹಾಗೂ ಮಗ ದೇವರಾಜ್ ಕೊಲೆ ಮಾಡಲು ಪ್ಲಾನ್ ಮಾಡಿದ್ದಾರೆ. ಬಳಿಕ ಅನಿಲ್‍ಗೆ 6 ಲಕ್ಷ ರೂ.ಗೆ ಸುಪಾರಿ ನೀಡಿದ್ದರು ಎಂಬುದು ತನಿಖೆಯಿಂದ ಬಯಲಾಗಿದೆ.

  • ಮಗಳನ್ನು ಕೊಲ್ಲಲು 50 ಸಾವಿರ ಸುಪಾರಿ ಕೊಟ್ಟ ತಾಯಿ..!

    ಮಗಳನ್ನು ಕೊಲ್ಲಲು 50 ಸಾವಿರ ಸುಪಾರಿ ಕೊಟ್ಟ ತಾಯಿ..!

    ಭುವನೇಶ್ವರ: ಮಹಿಳೆಯೊಬ್ಬಳು ಕಾಂಟ್ರೆಕ್ಟ್ ಕಿಲ್ಲರ್ಸ್ ಗೆ ಐವತ್ತು ಸಾವಿರ ಸುಪಾರಿ ನೀಡಿ ಮಗಳನ್ನೇ ಕೊಲ್ಲಿಸಿರುವ ವಿಚಿತ್ರ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.

    ಸ್ವತಃ ಮಗಳನ್ನು ಕೊಲ್ಲಲು 58 ವರ್ಷದ ಸುಕಿರಿ ಗಿರಿ, ಪ್ರಮೋದ್ ಜೀನಾ(32) ಸೇರಿದಂತೆ ಮತ್ತಿಬ್ಬರಿಗೆ 50,000 ರೂ. ಸುಪಾರಿ ನೀಡಿದ್ದಾಳೆ. ಇದೀಗ ಸುಕುರಿ ಗಿರಿ, ಆರೋಪಿ ಪ್ರಮೋದ್ ಜೀನಾ ಸೇರಿದಂತೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಚಾರವಾಗಿ ಪೊಲೀಸರು ತನಿಖೆ ನಡೆಸಿದಾಗ ಸುಕಿರಿ ಗಿರಿ ಅವರ ಮಗಳು ಶಿಬಾನಿ ನಾಯಕ್(36), ಅಕ್ರಮವಾಗಿ ಮದ್ಯ ವ್ಯಾಪಾರ ನಡೆಸುತ್ತಿದ್ದ ಕಾರಣ ಅವರ ಸಂಬಂಧದ ಮಧ್ಯೆ ಬಿರುಕು ಮೂಡಿದೆ.

    ಅಕ್ರಮ ಮದ್ಯ ವ್ಯಾಪಾರ ಮಾಡದಂತೆ ಬಹಳಷ್ಟು ಬಾರಿ ಸುಕಿರಿ ತನ್ನ ಮಗಳಿಗೆ ತಿಳಿಸಿದ್ದಾಳೆ. ಆದರೆ ತಾಯಿಯ ಮಾತನ್ನು ಶಿಬಾನಿ ಕೇಳುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೊನೆಗೆ ಸುಕುರಿ, ಪ್ರಮೋದ್ ಜಿನಾನನ್ನು ಭೇಟಿ ಮಾಡಿ ಮಗಳನ್ನು ಕೊಲ್ಲಲು 50000 ರೂ. ಸುಪಾರಿ ನೀಡುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಪ್ರವಾಶ್ ಪಲ್ ಹೇಳಿದ್ದಾರೆ. ಜೊತೆಗೆ ಕಾಂಟ್ರೆಕ್ಟರ್ ಕಿಲ್ಲರ್ ಗೆ ಮೊದಲೇ ಅಡ್ವಾನ್ಸ್ ರೂಪದಲ್ಲಿ 8,000 ರೂ. ನೀಡಿದ್ದಾಳೆ.

    ಜನವರಿ 12 ರಂದು ನಾಗ್ರಾಮ್ ಗ್ರಾಮದ ಸೇತುವೆಯ ಬಳಿ ಆರೋಪಿಗಳು ಶಿಬಾನಿ ನಾಯಕ್‍ನನ್ನು ಕಲ್ಲು ಮತ್ತು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

     

  • 7 ಲಕ್ಷಕ್ಕೆ ಸುಪಾರಿ, 1 ಲಕ್ಷ ಅಡ್ವಾನ್ಸ್‌ – ಗಾಯಕಿ ಅನನ್ಯ ಭಟ್ ತಂದೆ ಅರೆಸ್ಟ್

    7 ಲಕ್ಷಕ್ಕೆ ಸುಪಾರಿ, 1 ಲಕ್ಷ ಅಡ್ವಾನ್ಸ್‌ – ಗಾಯಕಿ ಅನನ್ಯ ಭಟ್ ತಂದೆ ಅರೆಸ್ಟ್

    – ಪ್ರೊ. ಕಿರಿಕ್‍ಗೆ ಬೇಸತ್ತು ಸುಪಾರಿ ಕೊಟ್ಟಿದ್ದ ವಿಶ್ವನಾಥ್ ಭಟ್
    – ಸೆ.20ರಂದು ಮೈಸೂರಿನ ನಿವೇದಿತಾ ನಗರದಲ್ಲಿ ಕೊಲೆ

    ಮೈಸೂರು: ಒಂದು ತಿಂಗಳ ಹಿಂದೆ ಮೈಸೂರಿನಲ್ಲಿ ನಡೆದ ನಿಗೂಢ ಕೊಲೆ ರಹಸ್ಯ ಬಯಲಾಗಿದೆ. ಸುಪಾರಿ ಹಂತಕರ ಹೆಡೆಮುರಿ ಕಟ್ಟುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸ್ಯಾಂಡಲ್‍ವುಡ್ ಖ್ಯಾತ ಹಿನ್ನಲೆ ಗಾಯಕಿ ಅನನ್ಯಭಟ್ ತಂದೆ ವಿಶ್ವನಾಥ್ ಭಟ್ ಕೊಲೆಯ ಕಿಂಗ್ ಪಿನ್ ಆಗಿದ್ದಾನೆ. ತನ್ನ ವ್ಯವಹಾರಕ್ಕೆ ಅಡ್ಡಿಯಾದ ವ್ಯಕ್ತಿಯ ಕೊಲೆಗೆ 7 ಲಕ್ಷ ಸುಪಾರಿ ಕೊಟ್ಟ ಅನನ್ಯ ಭಟ್ ತಂದೆ ಇದೀಗ ಪೊಲೀಸರ ಅತಿಥಿ.

    ಸೆಪ್ಟೆಂಬರ್ 20 ರಂದು ಮೈಸೂರಿನ ನಿವೇದಿತ ನಗರದಲ್ಲಿ ನಿವೃತ್ತ ಪ್ರಾಂಶುಪಾಲರಾದ ಪರಶಿವಮೂರ್ತಿ ಅವರ ಭೀಕರ ಹತ್ಯೆ ನಡೆದಿತ್ತು. ಈ ಪ್ರಕರಣವನ್ನು ಮೈಸೂರಿನ ಸರಸ್ವತಿ ಪುರಂ ಪೊಲೀಸರು ಭೇದಿಸಿದ್ದು,  ವಿಶ್ವನಾಥ್ ಸೇರಿದಂತೆ 5 ಆರೋಪಿಗಳನ್ನು ಬಂಧಿಸಲಾಗಿದೆ. ಸುಪಾರಿ ಹಂತಕ ನಾಗೇಶ್, ಸುಪಾರಿ ಹಂತಕನಿಗೆ ಸಹಕರಿಸಿದ ನಿರಂಜನ್, ವಿಶ್ವನಾಥ್ ಸ್ಕೆಚ್‍ಗೆ ಸಹಕರಿಸಿದ ಶಿಕ್ಷಕರಾದ ಸಿದ್ದರಾಜು ಹಾಗೂ ಪರಶಿವ ಬಂಧಿತ ಆರೋಪಿಗಳು.

    ಕೊಲೆ ಮಾಡಿಸಿದ್ದು ಯಾಕೆ?
    ಎನ್.ಆರ್.ಮೊಹಲ್ಲಾದಲ್ಲಿರುವ ವಿಶ್ವಚೇತನ ಸಂಸ್ಕೃತ ಪಾಠಶಾಲೆಯ ಮುಖ್ಯ ಶಿಕ್ಷಕರಾಗಿದ್ದ ವಿಶ್ವನಾಥ್‍ಗೆ ಕಾರ್ಯದರ್ಶಿಯಾಗಿದ್ದ ಪರಶಿವಮೂರ್ತಿ ಸಾಕಷ್ಟು ಕಿರುಕುಳ ಕೊಡುತ್ತಿದ್ದರು. ಪ್ರತಿ ತಿಂಗಳ ವೇತನದಲ್ಲಿ ಹಾಗೂ ಸರ್ಕಾರದಿಂದ ಬರುವ ಅನುದಾನದಲ್ಲಿ ಪಾಲುಕೊಡುವುದು ಸೇರಿದಂತೆ ಕೆಲವು ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ವೈಮನಸ್ಸು ಆರಂಭವಾಗಿತ್ತು.

    ಪರಶಿವಮೂರ್ತಿಯನ್ನ ಮುಗಿಸಿದರೆ ತೊಂದರೆ ತಪ್ಪುತ್ತದೆ ಎಂದು ನಿರ್ಧರಿಸಿದ ವಿಶ್ವನಾಥ್ ಸಹ ಶಿಕ್ಷಕರಾದ ಪರಶಿವ ಜೊತೆ ಸಮಾಲೋಚಿಸಿ ಕೊಲೆ ಮಾಡಿಸುವ ನಿರ್ಧಾರಕ್ಕೆ ಬಂದಿದ್ದಾನೆ. ಇಬ್ಬರು ಸಮಾಲೋಚನೆ ನಡೆಸಿ ಮತ್ತೊಂದು ಸಂಸ್ಕೃತ ಪಾಠಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿದ್ದ ಸಿದ್ದರಾಜು ಜೊತೆ ಈ ವಿಚಾರವನ್ನು ಚರ್ಚಿಸಿದ್ದಾರೆ.

    ಮೂವರು ಸೇರಿ ತೀರ್ಮಾನಕ್ಕೆ ಬಂದು ಕೊಲೆಗೆ ಸಂಚು ರೂಪಿಸಿ, ಮೈಸೂರು ತಾಲೂಕಿನ ಭೂಗತಹಳ್ಳಿ ನಿವಾಸಿ ನಾಗೇಶ್ ಗೆ ಸುಪಾರಿ ಕೊಟ್ಟಿದ್ದಾರೆ. ಸುಪಾರಿಗೆ ಒಪ್ಪಿಗೆ ಪಡೆದು ಒಂದು ಲಕ್ಷ ಮುಂಗಡ ಪಡೆದ ನಾಗೇಶ್ ತನ್ನ ಸ್ನೇಹಿತ ನಿರಂಜನ್ ಜೊತೆ ಸೇರಿ ಸೆಪ್ಟೆಂಬರ್ 20 ರಂದು ಕೊಲೆ ಮಾಡಿ ಪರಾರಿಯಾಗಿದ್ದ.

    ಸಿಕ್ಕಿಬಿದ್ದಿದ್ದು ಹೇಗೆ?
    ಕೌಟುಂಬಿಕ ವಿಚಾರದಲ್ಲಿ ಪತ್ನಿಯಿಂದ ಪ್ರತ್ಯೇಕವಾಗಿ ನಿವೇದಿತ ನಗರದಲ್ಲಿ ಒಂಟಿಯಾಗಿ ವಾಸವಿದ್ದ ಪರಶಿವಮೂರ್ತಿ ಸಾಕಷ್ಟು ಬಡ್ಡಿ ವ್ಯವಹಾರ ಮಾಡುತ್ತಿದ್ದರು. ಅಲ್ಲದೆ ಮಹಿಳೆಯರ ಜೊತೆ ಲೈಂಗಿಕ ಸಂಪರ್ಕ ಇತ್ತು. ಬಡ್ಡಿ ವ್ಯವಹಾರದಲ್ಲಿ ಕೊಲೆ ನಡೆದಿರಬಹುದೆಂದು ಪೊಲೀಸರು ಆರಂಭದಲ್ಲಿ ಶಂಕಿಸಿದ್ದರು. ಕೊಲೆ ಕೇಸ್‍ನ ವಿಚಾರಣೆ ವೇಳೆ ಸಂಸ್ಕೃತ ಶಾಲೆಯ ಹಳೆಯ ಪ್ರಕರಣ ಮುನ್ನೆಲೆಗೆ ಬಂದಿದೆ. ಶಾಲೆಯ ಕೇಸ್ ಆಧರಿಸಿ ಪೊಲೀಸರು ವಿಶ್ವನಾಥ್ ಭಟ್ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಿಶ್ವನಾಥ್ ಭಟ್ ಕೊಲೆ ರಹಸ್ಯವನ್ನು ಹೇಳಿದ್ದಾನೆ.

    ಸಂಪರ್ಕ ಕಡಿತ:
    ವಿಶ್ವನಾಥ್ ಜೊತೆಗಿನ ಸಂಪರ್ಕವನ್ನ ಗಾಯಕಿ ಅನನ್ಯಭಟ್ ಎರಡು ವರ್ಷಗಳ ಹಿಂದೆಯೇ ಕಡಿದುಕೊಂಡಿದ್ದಾರೆ. ಅನನ್ಯಭಟ್‌ಗೂ ಈ ಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಅನನ್ಯ ಭಟ್‌ ಪ್ರತಿಕ್ರಿಯಿಸಿ, ನನಗೂ ಅಷ್ಟಾಗಿ ಈ ವಿಚಾರದ ಬಗ್ಗೆ ಗೊತ್ತಿಲ್ಲ. ಟೋಟಲ್ ಇನ್ಫಾರ್ಮೆಷನ್‌ ನನಗೂ ಇಲ್ಲ. ನನಗೂ ಗೊತ್ತಿಲ್ಲ ಏನು ಅಂತ ಎಂದು ತಿಳಿಸಿದ್ದಾರೆ.

  • ಮಗನನ್ನೇ ಕೊಲ್ಲಲು 2 ಲಕ್ಷಕ್ಕೆ ಸುಪಾರಿ – ಪಾಪಿ ತಂದೆ ಸೇರಿ 6 ಮಂದಿ ಅರೆಸ್ಟ್

    ಮಗನನ್ನೇ ಕೊಲ್ಲಲು 2 ಲಕ್ಷಕ್ಕೆ ಸುಪಾರಿ – ಪಾಪಿ ತಂದೆ ಸೇರಿ 6 ಮಂದಿ ಅರೆಸ್ಟ್

    – ಏರಿ ಮೇಲೆ ಮಗನಿಗೆ ಗುಂಡು ಹೊಡೆಸಿದ್ದ ಅಪ್ಪ

    ಹಾಸನ: ಆಸ್ತಿ ವಿವಾದದ ವಿಚಾರವಾಗಿ ಮಗನನ್ನೇ ಕೊಲೆ ಮಾಡಿಸಿದ ಅಪ್ಪನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

    ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಕೆರೆ ಏರಿ ಮೇಲೆ ಕಳೆದ ತಿಂಗಳು ಕೊಲೆಯಾಗಿತ್ತು. ಆಗಸ್ಟ್ 27ರ ರಾತ್ರಿ ಬೈಕಿನಲ್ಲಿ ಬರುತ್ತಿದ್ದ ಪುನೀತ್(26) ಎಂಬಾತನನ್ನು ಶೂಟೌಟ್ ಮಾಡಲಾಗಿತ್ತು. ಕುಟುಂಬ ಕಲಹ ಮತ್ತು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

    ಬಂಧಿತರನ್ನು ಪುನೀತ್ ತಂದೆ ಹೇಮಂತ್, ಕಾಂತರಾಜು, ಪ್ರಶಾಂತ್, ಸುನಿಲ್, ನಂದೀಶ, ನಾಗರಾಜ್ ಎಂದು ಗುರುತಿಸಲಾಗಿದೆ. ಮಗನ ಜೀವ ತೆಗೆಯಲು ನಾಲ್ಕೈದು ತಿಂಗಳಿಂದ ಪ್ಲಾನ್ ಮಾಡಿದ್ದ ತಂದೆ ಹೇಮಂತ್, ಇದಕ್ಕಾಗಿ 2 ಲಕ್ಷ ರೂಪಾಯಿಗೆ ಸುಪಾರಿ ಕೂಡ ನೀಡಿದ್ದ. ಕೆರೆ ಏರಿ ಮೇಲೆ ಆರೋಪಿಗಳಾದ ಸ್ವಾಮಿ, ನಂದೀಶ್ ಮತ್ತು ಕಾಂತರಾಜು ಬಂದೂಕಿನಿಂದ ಶೂಟ್ ಮಾಡಿ ಕೊಲೆ ಮಾಡಿದ್ದರು. ಇನ್ನಿಬ್ಬರು ಪುನೀತ್ ಬೈಕ್‍ನಲ್ಲಿ ಬರುತ್ತಿರುವ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡಿದ್ದರು.

    ಪುನೀತ್ ಕೊಲೆಯ ನಂತರ ಆತನ ತಾಯಿ ಯಶೋಧಮ್ಮ ದೂರು ನೀಡಿದ್ದು, ತಂದೆ ಹೇಮಂತ್ ಮತ್ತು ಪುನೀತ್ ನಡುವೆ ಕೆಲ ವರ್ಷಗಳಿಂದ ಆಸ್ತಿ ಹಂಚಿಕೆ ವಿಚಾರವಾಗಿ ವೈಷಮ್ಯ ಇತ್ತು. ಈ ಕಾರಣದಿಂದ ಪತಿ ಹಾಗೂ ಇನ್ನೊಬ್ಬ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಆರೋಪದ ಮೇರೆಗೆ ತಂದೆ ಹೇಮಂತ್ ಅನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆಯ ವಿಚಾರ ಹೊರಗೆ ಬಂದಿದೆ.

    2 ಲಕ್ಷ ರೂ.ಗೆ ಮಗನನ್ನೇ ಡೀಲ್ ಮಾಡಿದ್ದ ತಂದೆ ಮುಂಗಡವಾಗಿ 5 ಸಾವಿರ ನೀಡಿದ್ದ ಎನ್ನಲಾಗಿದೆ. ಈಗ ಪಾಪಿ ತಂದೆ ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 5 ಮೊಬೈಲ್, 1.88 ಲಕ್ಷ ರೂ ನಗದು ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಎಸ್.ಪಿ ಶ್ರೀನಿವಾಸ್ ಗೌಡ, ಕಗ್ಗಂಟಾಗಿದ್ದ ಪ್ರಕರಣ ಬೇಧಿಸಿದ ತನಿಖಾ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.

  • ತಂದೆಯೇ ಸುಪಾರಿ ಕೊಟ್ಟು ಮಗನನ್ನು ಕೊಲೆ ಮಾಡಿಸಿದ್ದಾರೆ: ತಾಯಿ ಆರೋಪ

    ತಂದೆಯೇ ಸುಪಾರಿ ಕೊಟ್ಟು ಮಗನನ್ನು ಕೊಲೆ ಮಾಡಿಸಿದ್ದಾರೆ: ತಾಯಿ ಆರೋಪ

    – ತೆಂಗಿನಕಾಯಿ ಕೆಡವಿದ್ದೆ ತಪ್ಪಾಯ್ತಾ?

    ಹಾಸನ: ಚನ್ನರಾಯಪಟ್ಟಣದ ಬೇಡಿಗನಹಳ್ಳಿ ಸಮೀಪ ನಡೆದ ಪುನೀತ್ ಕೊಲೆಯ ಹಿಂದೆ ತಂದೆ ಹಾಗೂ ಸೋದರನ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಪುನೀತನ ತಾಯಿ ಯಶೋಧಮ್ಮ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ತಂದೆ ಹೇಮಂತ್ ಮತ್ತು ಪುನೀತ್ ನಡುವೆ ಕೆಲ ವರ್ಷಗಳಿಂದ ಆಸ್ತಿ ಹಂಚಿಕೆ ವಿಚಾರವಾಗಿ ವೈಷಮ್ಯ ಇತ್ತು. ಈ ಕಾರಣದಿಂದ ಪತಿ ಹಾಗೂ ಇನ್ನೊಬ್ಬ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ತಮ್ಮ ದೂರಿನಲ್ಲಿ ತಾಯಿ ಯಶೋಧಮ್ಮ ಮನವಿ ಮಾಡಿದ್ದಾರೆ.

    ಮೂರು ವರ್ಷಗಳಿಂದ ತಂದೆ ಮತ್ತು ಪುನೀತ್ ಬೇರೆಯಾಗಿದ್ದರು. ಪುನೀತನೊಂದಿಗೆ ತಾಯಿ ಯಶೋಧಮ್ಮ ವಾಸವಾಗಿದ್ದರು ಈ ನಡುವೆ ತೋಟದಲ್ಲಿ ತೆಂಗಿನಕಾಯಿ ಕೆಡವಿದ್ದರಿಂದ ತಂದೆ ಹೇಮಂತ್ ತಮ್ಮ ಹಿರಿಯ ಮಗ ಪುನೀತ್‍ಗೆ ವಾರ್ನಿಂಗ್ ಮಾಡಿದ್ದರು. ಈ ಕಾರಣದಿಂದಲೇ ಕೊಲೆ ಮಾಡಲಾಗಿದೆ ಎಂದು ಯಶೋಧಮ್ಮ ದೂರು ನೀಡಿದ್ದು, ತಂದೆಯಿಂದಲೇ ಮಗನ ಹತ್ಯೆ ಆಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಶಂಕಿತ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.