Tag: ಸುಪ್ರಿಂಕೋರ್ಟ್

  • ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- ವಿವಾದಿತ ವಸ್ತುವಿನ ರಕ್ಷಣೆ ವಿಸ್ತರಣೆಗೆ ಮನವಿ

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- ವಿವಾದಿತ ವಸ್ತುವಿನ ರಕ್ಷಣೆ ವಿಸ್ತರಣೆಗೆ ಮನವಿ

    ನವದೆಹಲಿ: ಜ್ಞಾನವಾಪಿ ಮಸೀದಿ (Gnanavapi Temple) ಯಲ್ಲಿ ಪತ್ತೆಯಾದ ಶಿವಲಿಂಗ (Shivalinga) ರೂಪದ ಆಕೃತಿಯನ್ನು ರಕ್ಷಿಸುವ ಆದೇಶವನ್ನು ವಿಸ್ತರಿಸಬೇಕು ಎಂದು ಸುಪ್ರೀಂಕೋರ್ಟ್ (Supreme Court) ಗೆ ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್ ಮನವಿ ಮಾಡಿದರು. ಇಂದು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಿದರು.

    ಪತ್ತೆಯಾದ ಆಕೃತಿಯ ರಕ್ಷಿಸುವ ಆದೇಶವು ನವೆಂಬರ್ 12 ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನಲೆ ಈ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಮುಸ್ಲಿಂ ಪಕ್ಷಗಳು ಸಲ್ಲಿಸಿದ ಆದೇಶ 7 ನಿಯಮ 11 ದೂರುಗಳ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅವರು ತಿಳಿಸಿದರು. ವಾದ ಆಲಿಸಿದ ಸಿಜೆಐ ಡಿವೈ ಚಂದ್ರಚೂಡ್ ನಾಳೆ ಮಧ್ಯಾಹ್ನ ಮೂರು ಗಂಟೆಗೆ ಈ ಬಗ್ಗೆ ವಿಚಾರಣೆ ನಡೆಸಲಾಗುವುದು, ಇದಕ್ಕಾಗಿ ಪೀಠವೊಂದನ್ನು ರಚನೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮುಕುಡಪ್ಪ, ಪುಟ್ಟಸ್ವಾಮಿ ವಿರುದ್ಧ ಸಿದ್ದರಾಮಯ್ಯ ಬೆಂಬಲಿಗರ ಆಕ್ರೋಶ – ಮನೆ ಬಾಗಿಲು, ಗೇಟ್ ತಳ್ಳಿ ನುಗ್ಗೋ ಯತ್ನ

    ಜ್ಞಾನವಾಪಿ ಮಸೀದಿಯ ಆವರಣದ ಸಮೀಕ್ಷೆಯ ಸಮಯದಲ್ಲಿ ಕಂಡುಬಂದ ವಸ್ತುವು ಶಿವಲಿಂಗವೇ? ಅಥವಾ ನೀರಿನ ಕಾರಂಜಿಯೋ ಎನ್ನುವ ಬಗ್ಗೆ ಒಂದು ವೈಜ್ಞಾನಿಕ ತನಿಖೆಯನ್ನು ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‍ಐ) ನಿರ್ದೇಶನಗಳನ್ನು ಕೋರಿ ಹಿಂದೂ ಪಕ್ಷಗಳು ಸಲ್ಲಿಸಿದ ಮನವಿಯನ್ನು ಕಳೆದ ತಿಂಗಳು ವಾರಣಾಸಿ ಜಿಲ್ಲಾ ನ್ಯಾಯಾಲಯ (Varanasi District Judge) ವು ತಿರಸ್ಕರಿಸಿತು. ಈ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ (Alahabad HighCourt) ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

    ವಿವಾದಿತ ವಸ್ತುವಿನ ವಯಸ್ಸನ್ನು ನಿರ್ಧರಿಸಲು ಕಾರ್ಬನ್ ಡೇಟಿಂಗ್, ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್), ಉತ್ಖನನ ಮತ್ತು ಇತರ ವಿಧಾನಗಳಿಂದ ವಸ್ತುವಿಗೆ ಹಾನಿಯಾಗುತ್ತದೆಯೇ ಎಂಬ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಲ್ಲಿಸುವಂತೆ ಹೈಕೋರ್ಟ್ ಕಳೆದ ವಾರ ಎಎಸ್‍ಐ ಮಹಾನಿರ್ದೇಶಕರನ್ನು ಕೇಳಿದೆ.

    Live Tv
    [brid partner=56869869 player=32851 video=960834 autoplay=true]

  • CBSE 12ನೇ ತರಗತಿ ಪರೀಕ್ಷೆಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ

    CBSE 12ನೇ ತರಗತಿ ಪರೀಕ್ಷೆಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ

    ನವದೆಹಲಿ: ಜುಲೈನಲ್ಲಿ 12ನೇ ತರಗತಿ ಪರೀಕ್ಷೆಗಳು ನಡೆಸಲು CBSE ಬೋರ್ಡ್ ಅಧಿಸೂಚನೆ ಹೊರಡಿಸಿದ್ದು ಪರೀಕ್ಷೆಗೆ ತಡೆ ಕೋರಿ ಪೋಷಕರ ಒಕ್ಕೂಟ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯದಲ್ಲೂ SSLC ಪರೀಕ್ಷೆಗಳು ಬೇಕು ಬೇಡ ಎನ್ನುವ ಚರ್ಚೆ ನಡೆದಿದ್ದು ಈ ಅರ್ಜಿ ವಿಚಾರಣೆ ಮಹತ್ವ ಪಡೆದುಕೊಂಡಿದೆ.

    ಕೊರೊನಾ ಹಿನ್ನೆಲೆ ಮುಂದೂಡಿಕೆಯಾಗಿದ್ದ 12ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ 15 ರೊಳಗೆ ನಡೆಸಲು ಸಿಬಿಎಸ್‍ ಇ ಬೋರ್ಡ್ ದಿನಾಂಕ ಪ್ರಕಟಿಸಿತ್ತು. ಕೊರೊನಾ ಸಂಕಷ್ಟ ಸಂಧರ್ಭದಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಿರುವ ಬೋರ್ಡ್ ವಿರುದ್ಧ ದೆಹಲಿಯ ಪೋಷಕರ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದೆ.

    ಕೊರೊನಾ ಸೋಂಕು ಜುಲೈನಲ್ಲಿ ಹೆಚ್ಚಳವಾಗಲಿದ್ದು, ಮೂರು ಲಕ್ಷದ ಗಡಿ ದಾಟಲಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆ ತಜ್ಞರು ಹೇಳಿದ್ದಾರೆ. ಈ ನಡುವೆ ದೆಹಲಿಯಲ್ಲಿ ಜುಲೈ ವೇಳೆಗೆ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದ್ದು ಗ್ಲೌಸ್, ಮಾಸ್ಕ್ ಧರಿಸಿ ಮಕ್ಕಳು ಪರೀಕ್ಷೆ ಬರೆಯುವುದು ಅಸಾಧ್ಯ ಎಂದು ಪೋಷಕರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

    ವಿದೇಶಗಳಲ್ಲೂ ಶಾಲೆಗಳನ್ನು ಹೊಂದಿರುವ ಸಿಬಿಎಸ್‍ ಇ ಬೋರ್ಡ್ ಕೊರೊನಾ ಹಿನ್ನೆಲೆ ಪರೀಕ್ಷೆಗಳನ್ನು ರದ್ದು ಮಾಡಿದೆ. ಸುಮಾರು 250 ವಿದೇಶಿ ಶಾಲೆಗಳಲ್ಲಿ ಆಂತರಿಕ ಅಂಕಗಳು ಆಧರಿಸಿ ಉತ್ತೀರ್ಣ ಮಾಡಲಾಗಿದೆ. ಕೊರೊನಾ ತೀವ್ರತೆ ಅರಿತು ಭಾರತದಲ್ಲೂ ಅದೇ ಮಾದರಿ ಜಾರಿ ತರಬಹುದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

  • ನಿರ್ಭಯಾ ಹಂತಕರಿಗೆ ಗಲ್ಲು- ಆಶಾದೇವಿ ಮೊದಲ ಪ್ರತಿಕ್ರಿಯೆ

    ನಿರ್ಭಯಾ ಹಂತಕರಿಗೆ ಗಲ್ಲು- ಆಶಾದೇವಿ ಮೊದಲ ಪ್ರತಿಕ್ರಿಯೆ

    ನವದೆಹಲಿ: ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಹಂತಕರಿಗೆ ಗಲ್ಲು ಆಗುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಆಶಾದೇವಿ, ಸರ್ಕಾರ, ರಾಷ್ಟ್ರಪತಿ ಮತ್ತು ದೇಶದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸುತ್ತೇನೆ. ಅಪರಾಧಿಗಳು ಪದೇ ಪದೇ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಮೂರು ಬಾರಿ ಡೆತ್ ವಾರೆಂಟ್ ಮುಂದೂಡಿಕೆಯಾಗಿತ್ತು. ಹಾಗಾಗಿ ನ್ಯಾಯ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಎದ್ದಿತ್ತು. ಇಂದು ಏಕಕಾಲದಲ್ಲಿ ನಾಲ್ವರಿಗೂ ಗಲ್ಲಿಗೆ ಹಾಕಿದ್ದಾರೆ ಎಂದು ಹೇಳಿದರು.

    ಹಂತಕರ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಜಾಗೊಳ್ಳುತ್ತಿದ್ದ ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಭಯಾ ತಾಯಿ ಆಶಾ ದೇವಿ, ಜೀತೇಂದ್ರ ಮತ್ತು ಸೀಮಾಜೀ ವಕೀಲಿ ವೃತ್ತಿ ಜೊತೆ ತಮ್ಮ ಕೆಲಸ ಮಾಡಿದರು. ನಮ್ಮ ನ್ಯಾಯ ಸಿಗಲಿದೆ ಎಂಬ ಭರವಸೆಯನ್ನು ನೀಡಿದ್ದರು. ಇಂದು ಕೊನೆಗೂ ನಮಗೆ ನ್ಯಾಯ ಸಿಕ್ಕಿದೆ ಎಂದರು.

    ನಿರ್ಭಯಾ ಹಂತಕರು ದೆಹಲಿ ಹೈಕೋರ್ಟ್ ತಮ್ಮ ಅರ್ಜಿಯನ್ನು ವಜಾಗೊಳಿಸುತ್ತಿದ್ದಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮಧ್ಯರಾತ್ರಿ ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.

  • ಮಧ್ಯರಾತ್ರಿ ನಿರ್ಭಯಾ ಹಂತಕರ ಹೈಡ್ರಾಮಾ-ಹೈಕೋರ್ಟ್ ಬಳಿಕ ಸುಪ್ರೀಂ ಮುಂದೆ

    ಮಧ್ಯರಾತ್ರಿ ನಿರ್ಭಯಾ ಹಂತಕರ ಹೈಡ್ರಾಮಾ-ಹೈಕೋರ್ಟ್ ಬಳಿಕ ಸುಪ್ರೀಂ ಮುಂದೆ

    ನವದೆಹಲಿ: ನಿರ್ಭಯಾ ಹಂತಕರು ದೆಹಲಿ ಹೈಕೋರ್ಟ್ ತಮ್ಮ ಅರ್ಜಿಯನ್ನು ವಜಾಗೊಳಿಸುತ್ತಿದ್ದಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮಧ್ಯರಾತ್ರಿ ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತು.

    ದೋಷಿಗಳ ಪರ ವಕೀಲ ಎ.ಪಿ.ಸಿಂಗ್ ನ್ಯಾಯಾಲಯದ ಮುಂದೆ ಅಪರಾಧಿ ಪವನ್ ಗುಪ್ತಾ ಪ್ರೌಢನಾಗಿರಲಿಲ್ಲ ಎಂಬ ಅಂಶವನ್ನಿಟ್ಟು ವಾದ ಆರಂಭಿಸಿದ್ದರು. ಹೀಗೆ ಈ ಹಿಂದೆ ಉಲ್ಲೇಖಿಸಿದ್ದ ಹಲವು ವಿಚಾರಗಳನ್ನೇ ಎ.ಪಿ.ಸಿಂಗ್ ನ್ಯಾಯಾಧೀಶರ ಮುಂದೆ ಇಟ್ಟು ವಾದ ಆರಂಭಿಸಿದ್ದರು. ತಡರಾತ್ರಿ ಸುಪ್ರೀಂನಲ್ಲಿ ನಡೆದ ವಾದ-ಪ್ರತಿವಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

    ಸುಪ್ರೀಂನಲ್ಲಿ ನಡೆದ ವಾದ-ಪ್ರತಿವಾದ
    * ಜಡ್ಜ್ : ನಿರ್ಭಯಾ ಅಪರಾಧಿ ಪವನ್ ಗುಪ್ತಾ ಪ್ರೌಢನಾಗಿರಲಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಈ ಹಿಂದೆ ವಿಚಾರಣೆಗೆ ಪರಿಗಣಿಸಿತ್ತು. ಈ ವಿಚಾರವನ್ನು ನ್ಯಾಯಾಲಯ ತಿರಸ್ಕರಿಸಿದ ನಂತರವೂ ಪ್ರಸ್ತಾಪಿಸುವುದರಲ್ಲಿ ಯಾವುದೇ ಅರ್ಥವಿಲ್ಲ
    * ಎ.ಪಿ.ಸಿಂಗ್, ದೋಷಿಗಳ ಪರ ವಕೀಲ : ಲೆಫ್ಟಿನೆಂಟ್ ಜನರಲ್ ಎದುರು ಕ್ಷಮಾದಾನ ಅರ್ಜಿ ಬಾಕಿಯಿದೆ

    * ಜಡ್ಜ್ : ಈ ವಿಚಾರವನ್ನು ನೀವು ಮಧ್ಯಾಹ್ನವೇ ಹೇಳಿದ್ದಿರಿ
    * ಎ.ಪಿ.ಸಿಂಗ್, ದೋಷಿಗಳ ಪರ ವಕೀಲ : ದೆಹಲಿಯ ಲೆಫ್ಟಿನೆಂಟ್ ಜನರಲ್ ಮತ್ತು ಮುಖ್ಯಮಂತ್ರಿ ಎದುರು ಕ್ಷಮಾದಾನದ ಅರ್ಜಿ ಬಾಕಿಯಿದೆ. ಅವರು ಕ್ಷಮಾದಾನ ಕೊಟ್ಟರೆ ಗಲ್ಲು ಶಿಕ್ಷೆಗೆ ಯಾವುದೇ ಅರ್ಥವಿರುವುದಿಲ್ಲ ಎಂದು ವಕೀಲ ವಾದ ಮಂಡನೆ.

    * ಜಡ್ಜ್ : ಈ ವಿಚಾರವನ್ನು ಪರಿಗಣಿಸಲು ಆಗುವುದಿಲ್ಲ
    * ಜಡ್ಜ್ : ಗುರುವಾರವಷ್ಟೇ ಸುಪ್ರೀಂಕೋರ್ಟ್ ಅಕ್ಷಯ್ ಕ್ಷಮಾದಾನ ಅರ್ಜಿ ತಿರಸ್ಕರಿಸಿತ್ತು. ಈಗ ಯಾವುದರ ಆಧಾರದ ಮೇಲೆ ಎರಡನೇ ಕ್ಷಮಾದಾನ ಅರ್ಜಿಯ ತಿರಸ್ಕಾರದ ವಿಚಾರವನ್ನು ಪ್ರಶ್ನಿಸುತ್ತಿದ್ದೀರಿ. ಈಗಾಗಲೇ ಮಂಡಿಸಿರುವ ವಾದವನ್ನೇ ನೀವು ಮತ್ತೆ ಮಂಡಿಸುತ್ತಿದ್ದೀರಿ

    * ಎ.ಪಿ.ಸಿಂಗ್, ದೋಷಿಗಳ ಪರ ವಕೀಲ : ಆತುರದ ನ್ಯಾಯತೀರ್ಮಾನವಾಗಿದೆ. ಅಕ್ಷಯ್ ಕ್ಷಮಾದಾನ ಅರ್ಜಿ ತಿರಸ್ಕಾರ ಪ್ರಶ್ನಿಸಿರುವ ಮರುಪರಿಶೀಲನಾ ಅರ್ಜಿ ಸುಪ್ರೀಂನಲ್ಲಿ ಬಾಕಿಯಿದೆ ಎಂಬ ಮಾಹಿತಿ ನೀಡಿದ ನಂತರವೂ ವಿಚಾರಣಾ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಡೆ ನೀಡದೆ ಇರಲು ಹೇಗೆ ಸಾಧ್ಯ..?

    * ಜಡ್ಜ್ : ನೀವು ಈ ಎಲ್ಲಾ ಅಂಶಗಳನ್ನು ಹಿಂದೆಯೇ ಹಲವು ಬಾರಿ ಪ್ರಸ್ತಾಪಿಸಿದ್ದೀರಿ. ಅವು ಇಂದು ಹೇಗೆ ಪ್ರಸ್ತುತವಾಗಲಿವೆ?
    * ಎ.ಪಿ.ಸಿಂಗ್, ದೋಷಿಗಳ ಪರ ವಕೀಲ : ಪವನ್ ಗುಪ್ತಾ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಬಚ್ಚಿಡಲಾಗಿತ್ತು. ಅತಿ ಮುಖ್ಯ ಮಾಹಿತಿಗಳಿದ್ದ ದಾಖಲೆಗಳನ್ನೂ ಅಧಿಕಾರಿಗಳು ಕಣ್ಮರೆ ಮಾಡಿದ್ದರು.

    * ತುಷಾರ್ ಮೆಹ್ತಾ, ಸಾಲಿಸಿಟರ್ ಜನರಲ್ : ಈಗ ಅಪರಾಧಿಗಳ ಪರ ವಕೀಲರು ಪ್ರಸ್ತಾಪಿಸುತ್ತಿರುವ ಅಂಶಗಳು ಈ ಹಿಂದೆಯೂ ಹಲವು ಬಾರಿ, ಹಲವು ಹಂತದ ನ್ಯಾಯಾಲಯಗಳಲ್ಲಿ ಮತ್ತು ಕ್ಷಮಾದಾನ ಅರ್ಜಿಗಳಲ್ಲಿ ಪ್ರಸ್ತಾಪವಾಗಿದೆ.
    * ಜಡ್ಜ್ : ನಿಮಗೆ ಬೇಕು ಎಂದಾಗ ಪ್ರಕರಣಗಳನ್ನು ಮತ್ತೊಮ್ಮೆ ಮಗದೊಮ್ಮೆ ಮರು ವಿಚಾರಣೆ ನಡೆಸಲು ಆಗುವುದಿಲ್ಲ. ರಾಷ್ಟ್ರಪತಿಗಳು ಎರಡನೇ ಬಾರಿಗೆ ಕ್ಷಮಾದಾನ ಮನವಿ ತಳ್ಳಿಹಾಕಿದ್ದನ್ನು ಈ ಆಧಾರದಲ್ಲಿ ಪ್ರಶ್ನಿಸಲು ಆಗುವುದಿಲ್ಲ
    * ಜಡ್ಜ್ : ಎಪಿ ಸಿಂಗ್ ಅವರೇ ನೀವು ತೀರ್ಪು ಮರುಪರೀಶಲನೆ ಮಾಡಬೇಕೆಂದು ಹೇಳುತ್ತಿದ್ದೀರಾ..? ಅರ್ಜಿ ವಜಾ

    ದೆಹಲಿ ಹೈಕೋರ್ಟ್ ನಲ್ಲಿ ನಡೆದ ವಾದ-ಪ್ರತಿವಾದ

    ದೋಷಿಗಳ ಪರ ವಕೀಲ ಎ.ಪಿ ಸಿಂಗ್ : ಪಟಿಯಾಲ ಕೋರ್ಟ್‍ನಲ್ಲಿ ನಮ್ಮ ಅರ್ಜಿ ವಜಾ ಆಗಿದೆ. ಹಾಗಾಗಿ ನೀವು ಅರ್ಜಿ ವಿಚಾರಣೆ ನಡೆಸಬೇಕು
    ಜಡ್ಜ್ : ನಿಮ್ಮ ಎಲ್ಲಾ ಕಾನೂನು ಹೋರಾಟ ಅಂತ್ಯವಾಗಿದೆ
    ದೆಹಲಿ ಸರ್ಕಾರದ ಪರ ವಕೀಲ ರಾಹುಲ್ ಮೆಹ್ರಾ : ಹೈಕೋರ್ಟ್ ಮುಂದೆ ಡೆತ್ ವಾರೆಂಟ್‍ಗೆ ತಡೆ ಕೇಳುವಂತಿಲ್ಲ. ಸುಪ್ರೀಂನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು
    ದೋಷಿಗಳ ಪರ ವಕೀಲ ಎ.ಪಿ ಸಿಂಗ್ : ದೋಷಿಗಳಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. ನನ್ನ ಹತ್ತಿರ ದಾಖಲೆ ಇದೆ. ಕೊರೋನಾ ವೈರಸ್ ಭೀತಿ ಹಿನ್ನೆಲೆ, ಜೆರಾಕ್ಸ್ ಅಂಗಡಿ ತೆರೆದಿಲ್ಲ, ಆದ್ದರಿಂದ ಕೋರ್ಟ್‍ಗೆ ದಾಖಲೆ ನೀಡಲು ಆಗ್ತಿಲ್ಲ.
    ಜಡ್ಜ್ : ಇದೊಂದು ಅಡಿಪಾಯ ಇರದ ಅರ್ಜಿ, ಗಲ್ಲು ಶಿಕ್ಷೆ ತಡೆಯಲು ಬೇಕಾಗುವ ಅಂಶ ಹೇಳಿ.
    ದೋಷಿಗಳ ಪರ ವಕೀಲ ಎ.ಪಿ ಸಿಂಗ್ : ದೋಷಿಗಳ ಕುಟುಂಬವನ್ನೊಮ್ಮೆ ನೋಡಿ. ಹಿಂದಿನ ಎಲ್ಲಾ ವಿಚಾರಣೆಯಲ್ಲೂ ಭಾಗಿಯಾಗಿದ್ದೇವೆ.
    ಜಡ್ಜ್: ಸುಪ್ರೀಂಕೋರ್ಟ್ ಆದೇಶವನ್ನು ಬದಿಗಿರಿಸಬೇಕೆ?

    ದೋಷಿಗಳ ಪರ ವಕೀಲ ಎ.ಪಿ ಸಿಂಗ್: ದಾಖಲೆಗಳನ್ನು ಒದಗಿಸಲು ಎರಡ್ಮೂರು ದಿನ ಅವಕಾಶ ಕೊಡಿ.
    ಜಡ್ಜ್: ಅರ್ಜಿಯಲ್ಲಿ ಪ್ರಮುಖ ಅಂಶಗಳನ್ನು ಉಲ್ಲೇಖಿಸದೆ ನೀವು ತಡೆ ಕೇಳುವಂತಿಲ್ಲ, ನಿಮ್ಮ ವಾದಕ್ಕೂ ಅರ್ಜಿಯಲ್ಲಿರುವ ಮನವಿಗೂ ಸಂಬಂಧವಿಲ್ಲ.
    ಜಡ್ಜ್ : ನಿಮ್ಮ ಕಕ್ಷಿದಾರರು ಇನ್ನು ಕೆಲವೇ ಹೊತ್ತಿನಲ್ಲಿ ದೇವರನ್ನು ಭೇಟಿ ಮಾಡಲಿದ್ದಾರೆ. ನೀವು ಅರ್ಜಿಯಲ್ಲಿನ ಹೊಸ ಅಂಶಗಳ ಬಗ್ಗೆ ಹೇಳದಿದ್ದರೆ ಕೊನೆ ಕ್ಷಣದಲ್ಲಿ ನಾವೂ ಏನೂ ಮಾಡಲಾಗದು.
    ದೆಹಲಿ ಸರ್ಕಾರದ ಪರ ವಕೀಲ ರಾಹುಲ್ ಮೆಹ್ರಾ: ದೋಷಿಗಳು ಸಲ್ಲಿಸಿರುವ ಅರ್ಜಿಯಲ್ಲಿ ಹುರುಳಿಲ್ಲ. ಈ ಅರ್ಜಿಯನ್ನು ವಜಾ ಮಾಡಿ
    ( ಅತ್ಯಾಚಾರಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಜಾ. ಶುಕ್ರವಾರ ಬೆಳಗ್ಗೆ 5.30ಕ್ಕೆ ಗಲ್ಲು ಜಾರಿ )

  • ಸಂವಿಧಾನ ಪೀಠದಿಂದ ಅಯೋಧ್ಯೆ ತೀರ್ಪು – ಐವರು ನ್ಯಾಯಾಧೀಶರ ಕಿರು ಪರಿಚಯ ಓದಿ

    ಸಂವಿಧಾನ ಪೀಠದಿಂದ ಅಯೋಧ್ಯೆ ತೀರ್ಪು – ಐವರು ನ್ಯಾಯಾಧೀಶರ ಕಿರು ಪರಿಚಯ ಓದಿ

    ನವದೆಹಲಿ: ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಲಿದ್ದು, ಐವರು ನ್ಯಾಯಮೂರ್ತಿಗಳಿಗೆ ನೀಡಲಾಗುವ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಬೆಳಗ್ಗೆ 10.30ಕ್ಕೆ ತನ್ನ ತೀರ್ಪನ್ನು ಪ್ರಕಟಿಸಲಿದೆ. ಎಲ್ಲ ನ್ಯಾಯಾಧೀಶರಿಗೆ ಝಡ್ ಪ್ಲಸ್ ಭದ್ರತೆಯನ್ನು ನೀಡಲಾಗಿದೆ ಎಂದು ವರದಿಯಾಗಿದೆ.

    ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್:
    ಮುಖ್ಯ ನ್ಯಾಯಮೂರ್ತಿಗಳಾಗಿರುವ ರಂಜನ್ ಗೋಗೊಯ್ ಅಸ್ಸಾಂ ಮೂಲದವರು. ದೇಶದ ಈಶಾನ್ಯ ಭಾಗದಿಂದ ನ್ಯಾಯಾಂಗ ವ್ಯವಸ್ಥೆಯಲ್ಲಿ ಉನ್ನತ ಸ್ಥಾನಕ್ಕೆ ನೇಮಕಗೊಂಡ ಮೊದಲಿಗರು ರಂಜನ್ ಗೋಗೊಯ್. 1978ರಲ್ಲಿ ಗುವಾಹಟಿಯ ಹೈಕೋರ್ಟ್ ನಲ್ಲಿ ವಕೀಲರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಫೆಬ್ರವರಿ 28, 2001ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ನ್ಯಾಯಾಧೀಶರಾದ ನಂತರ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಗಳಲ್ಲಿ ರಂಜನ್ ಗೋಗಯ್ ಸೇವೆ ಸಲ್ಲಿಸಿದ್ದಾರೆ. ಏಪ್ರಿಲ್ 2012ರಂದು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದರು. ನವೆಂಬರ್ 17ರಂದು ನಿವೃತ್ತಿ ಹೊಂದುತ್ತಿರುವ ರಂಜನ್ ಗೋಗೊಯ್, ವೃತ್ತಿ ಜೀವನದಲ್ಲಿ ಹಲವು ಪ್ರಕರಣಗಳನ್ನು ಆಲಿಸಿದ್ದು, ಅವುಗಳಲ್ಲಿ ಅಯೋಧ್ಯೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‍ಸಿಆರ್) ಸೇರಿವೆ. ಶುಕ್ರವಾರ ಸ್ವತಃ ಉತ್ತರ ಪ್ರದೇಶ ಪೊಲೀಸರ ಜೊತೆ ಭದ್ರತೆ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದರು.

    ನ್ಯಾ. ಶರದ್ ಅರವಿಂದ್ ಬೋಬ್ಡೆ:
    ರಂಜನ್ ಗೋಗೊಯ್ ಅವರ ನಿವೃತ್ತಿ ಬಳಿಕ ನ್ಯಾ. ಶರದ್ ಅರವಿಂದ್ ಬೋಬ್ಡೆ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕವಾಗಲಿದ್ದಾರೆ. 2000ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬೋಬ್ಡೆ ಅವರು ನೇಮಕಗೊಂಡರು. ಮಧ್ಯ ಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಮೂಲದವರಾಗಿರುವ ಬೋಬ್ಡೆ ಅವರು ಏಪ್ರಿಲ್ 2013ರಲ್ಲಿ ಸುಪ್ರಿಂಕೋರ್ಟಿಗೆ ಬಡ್ತಿ ಪಡೆದರು. 63 ವರ್ಷದ ಬೋಬ್ಡೆ ನವೆಂಬರ್ 17ರ ನಂತರ ಸಿಜೆಐ ಆಗಿ 18 ತಿಂಗಳು ಕಾರ್ಯ ನಿರ್ವಹಿಸಲಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ, ವಿಶ್ವದ ಪ್ರಮುಖವಾದ ಕೇಸ್ ಗಳಲ್ಲಿ ಅಯೋಧ್ಯೆ ಪ್ರಕರಣ ಸಹ ಒಂದಾಗಿದೆ ಎಂದು ಹೇಳಿದ್ದರು.

    ನ್ಯಾ. ಡಿ.ವೈ.ಚಂದ್ರಚೂಡ್
    ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ಅತಿ ಹೆಚ್ಚು ವರ್ಷ ಸೇವೆ ಸಲ್ಲಿಸಿದ್ದ ವೈ.ವಿ. ಚಂದ್ರಚೂಡ್ ಅವರ ಪುತ್ರರಾಗಿರುವ ಡಿ.ವೈ.ಚಂದ್ರಚೂಡ್ ಮೇ 2016ರಲ್ಲಿ ಸುಪ್ರೀಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡರು. ಹಾರ್ವರ್ಡ್ ನಲ್ಲಿ ಕಾನೂನು ಪದವಿ ಪಡೆದಿರುವ ಚಂದ್ರಚೂಡ್ ಬಾಂಬೆ ಮತ್ತು ಅಲಹಬಾದ್ ಹೈಕೋರ್ಟಿನಲ್ಲಿ ಸೇವೆ ಸಲ್ಲಿಸಿದ್ದಾರೆ.

    ನ್ಯಾ.ಅಶೋಕ್ ಭೂಷಣ್:
    1979ರಲ್ಲಿ ನ್ಯಾ.ಅಶೋಕ್ ಭೂಷಣ್ ಅಲಹಬಾದ್ ಹೈಕೋರ್ಟಿನಲ್ಲಿ ವಕೀಲರಾಗಿ ತಮ್ಮ ವೃತ್ತಿ ಜೀವನವನ್ನು ಅರಂಭಿಸಿದರು. 2001ರಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡರು. ಜುಲೈ 2014ರಲ್ಲಿ ಕೇರಳ ಹೈಕೋರ್ಟಿಗೆ ವರ್ಗಾವಣೆಗೊಂಡು ಮಾರ್ಚ್ 2015ರಲ್ಲಿ ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ಮೇ 13, 2016ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.

    ನ್ಯಾ.ಅಬ್ದುಲ್ ನಜೀರ್:
    ಫೆಬ್ರವರಿ 1983ರಲ್ಲಿ ಕರ್ನಾಟಕದ ಹೈಕೋರ್ಟಿನಲ್ಲಿ 20 ವರ್ಷಗಳ ಕಾಲ ನ್ಯಾ.ಅಬ್ದುಲ್ ನಜೀರ್ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. 2003ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. ತದನಂತರ ಖಾಯಂ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ಫೆಬ್ರವರಿ 17, 2017ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

  • ಮೇಕೆದಾಟು ಬಳಿಕ ತಮಿಳುನಾಡಿನಿಂದ ಮತ್ತೊಂದು ಕಿರಿಕ್

    ಮೇಕೆದಾಟು ಬಳಿಕ ತಮಿಳುನಾಡಿನಿಂದ ಮತ್ತೊಂದು ಕಿರಿಕ್

    ಬೆಂಗಳೂರು: ಮೇಕೆದಾಟು ಬಳಿಕ ಕೆ.ಸಿ ವ್ಯಾಲಿ ಯೋಜನೆಗೂ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ.

    ಕೆ.ಸಿ ವ್ಯಾಲಿ ಜೊತೆಗೆ ಕೋಲಾರದ ಮಾಲೂರು ಬಳಿ ನಿರ್ಮಿಸುತ್ತಿರುವ ಮಾರ್ಕೇಂಡೇಯ ಜಲಾಶಯಕ್ಕೂ ಅಡ್ಡಗಾಲು ಹಾಕುತ್ತಿದೆ. ಎರಡು ಯೋಜನೆಗೆ ಅವಕಾಶ ನೀಡದಂತೆ ತಮಿಳುನಾಡು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಡಿ – ಮತ್ತೆ ತಮಿಳುನಾಡು ಕ್ಯಾತೆ

    ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಪುದುಚೇರಿ ನಡುವೆ ಇರುವ ಪೆನ್ನಾರ್ ಮತ್ತು ಪಾಲಾರ್ ನದಿ ನೀರು ಹಂಚಿಕೆ ವಿಚಾರವಾಗಿ ವಿವಾದವನ್ನು ಶುರು ಮಾಡಿದ್ದು, ಪೆನ್ನಾರ್ ನದಿ ಕಣಿವೆಯಲ್ಲಿ ಯಾವುದೇ ಯೋಜನೆಗಳಿಗೆ ಅವಕಾಶ ನೀಡದಂತೆ ಮನವಿ ಮಾಡಿದೆ. ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಇದನ್ನೂ ಓದಿ: ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?

    ಕೆಸಿ ವ್ಯಾಲಿ ಯೋಜನೆ ಪೆನ್ನಾರ್ ನದಿ ಕಣಿವೆ ಪ್ರದೇಶದಲ್ಲಿದೆ. ಕೆ.ಸಿ ವ್ಯಾಲಿ ಯೋಜನೆಗೆ ಬೆಂಗಳೂರಿನ ಚರಂಡಿ ನೀರನ್ನು ಶುದ್ಧೀಕರಿಸಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ಕಾವೇರಿ ನದಿ ಕಣಿವೆ ವ್ಯಾಪ್ತಿಯಲ್ಲಿದೆ. ಬೆಂಗಳೂರಿನಲ್ಲಿ ಬಳಕೆಯಾಗಿ ಚರಂಡಿ ಸೇರಿದ ನೀರನ್ನು ಶುದ್ಧಗೊಳಿಸಿ ಕಾವೇರಿ ನದಿಗೆ ಮರಳಿ ಬಿಡಬೇಕು.

    ಈಗ ಕೆ.ಸಿ ವ್ಯಾಲಿಗೆ ನೀರು ಹರಿಸುವುದು ನದಿ ಕಣಿವೆ ಬದಲಾಯಿಸಿದಂತೆ. ಎತ್ತಿನಹೊಳೆ ಯೋಜನೆಗಾಗಿ ನಿರ್ಮಿಸಲು ಹೊರಟಿರುವ ಮಾರ್ಕೇಂಡೇಯ ಜಲಾಶಯ ಪೆನ್ನಾರ್ ನದಿ ನೈಸರ್ಗಿಕ ಹರಿವಿಗೆ ಧಕ್ಕೆ ಮಾಡಲಿದೆ. ಡ್ಯಾಂ ನಿರ್ಮಾಣದಿಂದ ತಮಿಳುನಾಡಿನ ಆರು ಜಿಲ್ಲೆಗೆ ತೊಂದರೆಯಾಗಲಿದೆ. ಅಷ್ಟೇ ಅಲ್ಲದೆ ಕುಡಿಯುವ ನೀರಿನ ನೆಪದಲ್ಲಿ ಕೃಷಿ ನೀರಾವರಿಗೆ ಕರ್ನಾಟಕ ಯೋಜನೆ ರೂಪಿಸಿದೆ. ಕೆಳ ರಾಜ್ಯಗಳ ಒಪ್ಪಿಗೆ ಇಲ್ಲದೆ ಕೆ.ಸಿ ವ್ಯಾಲಿ ಸೇರಿ ಇನ್ನು ಯಾವ ಯೋಜನೆಗೂ ಅವಕಾಶ ನೀಡಬಾರದು ಎಂದು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ.

  • ತಲಾಖ್ ತೀರ್ಪಿಗೆ ಸ್ವಾಗತ, ಶಬರಿಮಲೆ ತೀರ್ಪಿಗೆ ವಿರೋಧ ಯಾಕೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

    ತಲಾಖ್ ತೀರ್ಪಿಗೆ ಸ್ವಾಗತ, ಶಬರಿಮಲೆ ತೀರ್ಪಿಗೆ ವಿರೋಧ ಯಾಕೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

    ನವದೆಹಲಿ: ಸುಪ್ರಿಂ ಕೋರ್ಟ್ ನ ತ್ರಿವಳಿ ತಲಾಖ್ ತೀರ್ಪಿಗೆ ಸ್ವಾಗತ ಕೋರಿದ್ದವರು ಇಂದು ಶಬರಿಮಲೆಯ ತೀರ್ಪಿನ ವಿರುದ್ಧ ಯಾಕೆ ಬೀದಿಗಿಳಿದಿದ್ದಾರೆ ಎಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.

    ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ನಾವು ಪಾಲಿಸಬೇಕು. ಈ ಹಿಂದೆ ಇದೇ ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಬಗ್ಗೆ ತೀರ್ಪು ನೀಡಿದ್ದಾಗ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದರು. ಆದರೆ ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿಚಾರದಲ್ಲಿ, ಸುಪ್ರೀಂ ಕೋರ್ಟ್ ತೀರ್ಪು ನಮ್ಮ ಸಂಸ್ಕೃತಿಗೆ ವಿರುದ್ಧವಾದದ್ದು ಎಂದು ಹೇಳುತ್ತಿದ್ದೀರಿ. ಶಬರಿಮಲೆ ವಿವಾದ ನಿಮ್ಮ ಸಂಸ್ಕೃತಿಯಾದರೆ, ತ್ರಿವಳಿ ತಲಾಖ್ ಅವರ ಸಂಸ್ಕೃತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಈ ವಿವಾದ ಹಿಂದೂ ನವೋದಯ ಮತ್ತು ಗೊಡ್ಡು ಸಂಪ್ರದಾಯದ ನಡುವಿನ ಹೋರಾಟ. ಎಲ್ಲಾ ಹಿಂದುಗಳು ಒಂದೇ. ಎಲ್ಲಾ ಜಾತಿ ಮತ್ತು ಪಂಗಡಗಳೂ ಸಮಾನವಾದದ್ದು. ಜಾತಿ ವ್ಯವಸ್ಥೆ ತೊಲಗಬೇಕು. ಯಾಕೆಂದರೆ ಇಂದು ಬ್ರಾಹ್ಮಣರು ಬೌದ್ಧಿಕರಾಗಿ ಉಳಿದಿಲ್ಲ. ಅವರು ಸಿನಿಮಾ, ವಾಣಿಜ್ಯ ಸೇರಿದಂತೆ ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜಾತಿ ಎಂಬುದು ಹುಟ್ಟಿನಿಂದ ನಿರ್ಧಾರವಾಗುತ್ತದೆ ಎಂಬುದನ್ನು ಎಲ್ಲಿಯೂ ಬರೆದಿಲ್ಲ. ಶಾಸ್ತ್ರಗಳನ್ನೂ ನಾವು ತಿದ್ದುಪಡಿ ಮಾಡಬಹುದು ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕಂಟಕ

    ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕಂಟಕ

    ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಚುನಾವಣೆಗೆ ನಿಲ್ಲುವ ಮೊದಲೇ ಕಂಟಕ ಎದುರಾಗಿದೆ.

    ಈ ಬಾರಿ ಚುನಾವಣೆಗೆ ನಿಲ್ಲಲ್ಲು ಯೋಜನೆ ರೂಪಿಸಿದ್ದ ಜನಾರ್ದನ ರೆಡ್ಡಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಮೈನಿಂಗ್ ಕೇಸ್‍ನಲ್ಲಿ ಸುಪ್ರೀಂಕೋರ್ಟ್‍ಗೆ ತೆರಳಿ ಇಬ್ಬರು ಮಾಜಿ ಸಿಎಂಗಳ ವಿರುದ್ಧ ಕೇಸ್ ಗೆದ್ದಿರೋ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಂ ಅದೇ ಮಾದರಿಯಲ್ಲಿ ರೆಡ್ಡಿಯ ಅಕ್ರಮ ಮೈನಿಂಗ್ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲು ತೀರ್ಮಾನ ಮಾಡಿದ್ದಾರೆ.

    ರೆಡ್ಡಿ ವಿರುದ್ಧ ಜಾರಿ ನಿರ್ದೇಶನಾಲಯ ಹಾಕಿದ್ದ ಕೇಸನ್ನು ಹೈಕೋರ್ಟ್ ಮಾರ್ಚ್ 13ರಂದು ವಜಾ ಮಾಡಿತ್ತು. ಆದರೆ, ಇಡಿ ಮೇಲ್ಮನವಿ ಸಲ್ಲಿಸಿಲ್ಲ. ಇದೀಗ ಇದೇ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನೆ ಮಾಡಲು ಅಬ್ರಹಂ ತೀರ್ಮಾನಿಸಿದ್ದಾರೆ.

    ಕೇಸ್‍ಗೆ ಮರುಜೀವ: ಹೈಕೋರ್ಟ್ ಮಾರ್ಚ್ 13ರಂದು ಇಡಿ ದಾಖಲಿಸಿದ್ದ ಕೇಸ್ ವಜಾ ಮಾಡಿತ್ತು. ಸರ್ಕಾರಕ್ಕೆ 884 ಕೋಟಿ ರೂ. ವಾಪಸ್ ನೀಡಲು ಕೋರ್ಟ್ ಹೇಳಿತ್ತು. ಹಳೆಯ ಕೇಸ್‍ಗೆ ಹೊಸ ಕಾನೂನು ಅನ್ವಯ ಆಗೋದಿಲ್ಲ ಎಂದು ಹೈಕೋರ್ಟ್ ಈ ಕೇಸನ್ನು ವಜಾ ಮಾಡಿತ್ತು. ಇದೇ ಪ್ರಕರಣವನ್ನ ಕೈಗೆತ್ತಿಕೊಂಡು ಸೋಮವಾರ ಸುಪ್ರೀಂಕೋರ್ಟ್‍ನಲ್ಲಿ ಟಿ.ಜೆ.ಅಬ್ರಾಹಂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಾರೆ.

    ಇದನ್ನೂ ಓದಿ: ಗಣಿನಾಡಿಗೆ ಜನಾರ್ದನ ರೆಡ್ಡಿ ಗುಡ್‍ಬೈ?