Tag: ಸುಪ್ರಿಂ ಕೋರ್ಟ್

  • ನೋಟಾಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ನಿಷೇಧಿಸಿ, ಮರು ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ

    ನೋಟಾಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ನಿಷೇಧಿಸಿ, ಮರು ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ

    – ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

    ನವದೆಹಲಿ: ಚುನಾವಣೆಗಳಲ್ಲಿ ನೋಟಾ (Nota) ಅತಿ ಹೆಚ್ಚು ಗಳಿಸಿದರೆ ಆ ಚುನಾವಣೆಯನ್ನು ಅನುರ್ಜಿತ ಎಂದು ಘೋಷಿಸಬೇಕು. ನೋಟಾಗಿಂತ ಕಡಿಮೆ ಮತಗಳನ್ನು ಪಡೆದ ಅಭ್ಯರ್ಥಿಗಳನ್ನು ಐದು ವರ್ಷಗಳ ಕಾಲ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court), ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

    ಶಿವಖೇರಾ ಎನ್ನುವವರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು. ನೋಟಾವನ್ನು ಕಾಲ್ಪನಿಕ ಅಭ್ಯರ್ಥಿಯನ್ನು ಆಯೋಗ ಪ್ರಚಾರ ನಡೆಸಬೇಕು. ನೋಟಾದೆದುರು ಸೋತ ಅಭ್ಯರ್ಥಿಗಳಿಗೆ ಮುಂದಿನ ಐದು ವರ್ಷ ಯಾವ ಚುನಾವಣೆಯಲ್ಲೂ ಸ್ಪರ್ಧೆಗೆ ಅವಕಾಶ ನೀಡಬಾರದು ಎಂದು ವಾದ ಮಂಡಿಸಲಾಯಿತು‌. ಇದನ್ನೂ ಓದಿ: 100% ವಿವಿಪ್ಯಾಟ್ ಸ್ಲಿಪ್ ಎಣಿಕೆ ಸಾಧ್ಯವಿಲ್ಲ: ಸುಪ್ರೀಂ ಹೇಳಿದ್ದೇನು?

    ವಾದ ಮಂಡನೆ ವೇಳೆ ಗುಜುರಾತ್‌ನ ಸೂರತ್‌ ಕ್ಷೇತ್ರ ಉದಾಹರಣೆ ನೀಡಿ, ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು ಇತರೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ ಕಾರಣ ಯಾವುದೇ ಚುನಾವಣೆಯಿಲ್ಲದೆ ಬಿಜೆಪಿ ಅಭ್ಯರ್ಥಿ ವಿಜಯಿ ಎಂದು ಘೋಷಿಸಲಾಯಿತು. ಒಬ್ಬರೇ ಅಭ್ಯರ್ಥಿ ಇದ್ದರೂ ಮತದಾರರಿಗೆ ನೋಟಾಕ್ಕೆ ಮತ ಹಾಕುವ ಅವಕಾಶವಿರುವುದರಿಂದ ಚುನಾವಣೆ ನಡೆಯಬೇಕು ಎಂದು ಹೇಳಿದರು.

    ನೋಟಾ ನಿಯಮವನ್ನು ಇನ್ನಷ್ಟು ಅಭಿವೃದ್ದಿಪಡಿಸುವ ವಾದವನ್ನು ಒಪ್ಪಿಕೊಂಡ ಸಿಜೆಐ ಡಿ.ವೈ ಚಂದ್ರಚೂಡ್ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದರು‌. ಈ ಹಿಂದೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ನೋಟಾ ಆಯ್ಕೆಯನ್ನ ಇವಿಎಂನಲ್ಲಿ ಚುನಾವಣಾ ಆಯೋಗ ಸೇರಿಸಿತ್ತು. ಇದನ್ನೂ ಓದಿ: ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ಇಲ್ಲ – ಇವಿಎಂ ಬಗ್ಗೆ ಸಲ್ಲಿಕೆಯಾದ ಎಲ್ಲಾ ಅರ್ಜಿ ವಜಾ

  • ಸಲಿಂಗ ವಿವಾಹಕ್ಕೆ ಕೇಂದ್ರ ಸರ್ಕಾರದ ವಿರೋಧ

    ಸಲಿಂಗ ವಿವಾಹಕ್ಕೆ ಕೇಂದ್ರ ಸರ್ಕಾರದ ವಿರೋಧ

    ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲಿಂಗಕಾಮಿ ದಂಪತಿ ಸುಪ್ರೀಂಕೋರ್ಟ್‌ಗೆ (Supreme Court) ಸಲ್ಲಿಸಿರುವ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧಿಸಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಅಫಿಡೆವಿಟ್ ಸಲ್ಲಿಸಿರುವ ಸರ್ಕಾರ (Central Government) ಇದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದು ಹೇಳಿದೆ.

    ಸಲಿಂಗ ಸಂಬಂಧಗಳು ಕಾನೂನುಬಾಹಿರವಲ್ಲದಿದ್ದರೂ, ಭಾರತೀಯ ವ್ಯವಸ್ಥೆಯಲ್ಲಿ ಪುರುಷ ಮತ್ತು ಮಹಿಳೆಯ ನಡುವೆ ಮದುವೆ (Marriage) ವ್ಯವಸ್ಥೆ ಹೊಂದಿದೆ. ಸಲಿಂಗ ವ್ಯಕ್ತಿಗಳು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಮತ್ತು ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆ ವಿರುದ್ಧವಾಗಿದೆ ಎಂದು ಅಫಿಡೆವಿಟ್‌ನಲ್ಲಿ ಅಭಿಪ್ರಾಯಪಟ್ಟಿದೆ.

    ಒಂದೇ ಲಿಂಗಕ್ಕೆ ಸೇರಿದ ವ್ಯಕ್ತಿಗಳ ನಡುವಿನ ಮದುವೆಯ ಗುರುತಿಸುವಿಕೆ ನೋಂದಣಿಗಿಂತ ದೂರವಿದೆ. ಮದುವೆ ತನ್ನದೆಯಾದ ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ವ್ಯವಸ್ಥೆಯನ್ನು ರಚಿಸುತ್ತವೆ. ಅಲ್ಲದೆ ಹಲವಾರು ಹಕ್ಕುಗಳು ಮತ್ತು ಹೊಣೆಗಾರಿಕೆಗಳನ್ನು ಹೊಂದುವ ಸಾಮಾಜಿಕ ವ್ಯವಸ್ಥೆಯಾಗಿದೆ. ಈ ಕಾರಣದಿಂದಲೇ ನೊಂದಣಿಗಿಂತ ಶಾಸ್ತ್ರೋಕ್ತವಾಗಿ ಮದುವೆ ಮಾಡಲಾಗುತ್ತದೆ.

    ಸಾಮಾಜಿಕ ಸಂಬಂಧದ ನಿರ್ದಿಷ್ಟ ರೂಪವನ್ನು ಗುರುತಿಸಲು ಯಾವುದೇ ಮೂಲಭೂತ ಹಕ್ಕು ಇಲ್ಲ, ನಾಗರಿಕರು ಆರ್ಟಿಕಲ್ 19ರ ಅಡಿಯಲ್ಲಿ ಹಕ್ಕನ್ನು ಹೊಂದಿದ್ದಾರೆ ಎಂಬುದು ನಿಜವಾಗಿದ್ದರೂ, ಇಂತಹ ವ್ಯವಸ್ಥೆಗೆ ರಾಜ್ಯವು ಅಗತ್ಯವಾಗಿ ಕಾನೂನು ಮಾನ್ಯತೆ ನೀಡಬೇಕು ಎಂಬುದಿಲ್ಲ. ಅಥವಾ ಆರ್ಟಿಕಲ್ 21ರ ಅಡಿಯಲ್ಲಿ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕು ಇಲ್ಲಿ ಸೇರಿಸಲು ಸಾಧ್ಯವಿಲ್ಲ.

    ನಿಷೇಧಿತ ಸಂಬಂಧದ ಮದುವೆ ʼಮದುವೆಯ ಷರತ್ತುಗಳುʼ ಮತ್ತು ಧಾರ್ಮಿಕ ಅವಶ್ಯಕತೆಗಳ ಉಲ್ಲಂಘನೆಗೆ ಕಾರಣವಾಗುತ್ತದೆ. ಭಾರತದ ಶಾಸಕಾಂಗ ವ್ಯವಸ್ಥೆಯು ಪುರುಷ ಮತ್ತು ಮಹಿಳೆಯ ನಡುವಿನ ವಿವಾಹದ ಕಾನೂನು ಸಂಬಂಧದ ಗುರುತಿಸುವಿಕೆಗೆ ಮಾತ್ರ ಸೀಮಿತವಾಗಿದೆ. ಸಲಿಂಗ ವಿವಾಹದಲ್ಲಿ ಮೇಲಿನ ಉಲ್ಲೇಖಿಸಿದ ಮತ್ತು ಇತರ ಶಾಸನಬದ್ಧ ನಿಬಂಧನೆಗಳನ್ನು ಕಾರ್ಯಗತಗೊಳಿಸುವುದು ಅಸಾಧ್ಯ. ಇದನ್ನೂ ಓದಿ: ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ದರ್ಪ ಮೆರೆದ ವ್ಯಕ್ತಿ!

    ತಮ್ಮ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕನ್ನು LGBTQIA+ ನಾಗರಿಕರಿಗೂ ವಿಸ್ತರಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರ ಪೀಠ ವಿಚಾರಣೆ ನಡೆಸುತ್ತಿದ್ದು, ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ ಸಲಿಂಗ ವಿವಾಹವನ್ನು ಗುರುತಿಸುವ ಎಲ್ಲಾ ಅರ್ಜಿಗಳನ್ನು ವರ್ಗಾಯಿಸಿಕೊಂಡಿದೆ.

    ಹೈದರಾಬಾದ್‌ ಮೂಲದ ಸಲಿಂಗಕಾಮಿಗಳಾದ ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್ ಡ್ಯಾಂಗ್ ಅವರು ಅರ್ಜಿ ಸಲ್ಲಿಸಿದ್ದಾರೆ. ಪುಟ್ಟಸ್ವಾಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ LGBTQIA+ ವ್ಯಕ್ತಿಗಳು ಸಮಾನತೆ, ಘನತೆ ಮತ್ತು ಗೌಪ್ಯತೆಯ ಹಕ್ಕನ್ನು ಇತರ ಎಲ್ಲಾ ನಾಗರಿಕರಂತೆಯೇ ಸಂವಿಧಾನವು ಖಾತರಿಪಡಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ ಎಂದು ವಾದಿಸಲಾಯಿತು.

    ಮತ್ತೊಂದು ಸಲಿಂಗಕಾಮಿ ದಂಪತಿ ಪಾರ್ಥ್ ಫಿರೋಜ್ ಮೆಹ್ರೋತ್ರಾ ಮತ್ತು ಉದಯ್ ರಾಜ್ ಅವರು ಸಲ್ಲಿಸಿದ ಮತ್ತೊಂದು ಅರ್ಜಿಯಲ್ಲಿ ಸಲಿಂಗ ವಿವಾಹಗಳನ್ನು ಗುರುತಿಸದಿರುವುದು ಸಂವಿಧಾನದ 14 ನೇ ವಿಧಿಯ ಅಡಿಯಲ್ಲಿ ಗುಣಮಟ್ಟದ ಹಕ್ಕು ಮತ್ತು ಸಂವಿಧಾನದ 21 ನೇ ವಿಧಿ ಅಡಿಯಲ್ಲಿ ಬದುಕುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದರು. ಇದನ್ನೂ ಓದಿ: ನನ್ನ ಪತ್ನಿಯನ್ನು ಹುಡುಕಿಕೊಡಿ- ಬೆಂಗಳೂರು ಪೊಲೀಸರಿಗೆ ಛತ್ತಿಸ್‌ಗಢ ವ್ಯಕ್ತಿ ದೂರು

  • ಯಾವುದೇ ಕಾರಣಕ್ಕೂ ಮೇಕೆದಾಟು ನಿರ್ಮಾಣಕ್ಕೆ ಅನುಮತಿ ನೀಡಲ್ಲ: ತಮಿಳುನಾಡು ಸರ್ಕಾರ

    ಯಾವುದೇ ಕಾರಣಕ್ಕೂ ಮೇಕೆದಾಟು ನಿರ್ಮಾಣಕ್ಕೆ ಅನುಮತಿ ನೀಡಲ್ಲ: ತಮಿಳುನಾಡು ಸರ್ಕಾರ

    ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ತಮಿಳುನಾಡು ಸರ್ಕಾರ ಹೇಳಿದೆ.

    ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಿನ್ನೆಲೆ ಪ್ರಕರಣ ಸಂಬಂಧ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಕಳೆದ ವಿಚಾರಣೆ ವೇಳೆ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್ ಗೆ ಉತ್ತರಿಸಿರುವ ತಮಿಳುನಾಡು ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣ ಬಗ್ಗೆ ನಿರ್ಧರಿಸುವ ಯಾವುದೇ ಅಧಿಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಇಲ್ಲ ಎಂದು ಹೇಳಿದೆ.

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸುಪ್ರೀಂಕೋರ್ಟ್ ನೀಡಿದ ಕಾರ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು, ನೀರು ಹಂಚಿಕೆ ಬಗ್ಗೆ ಪರಿಶೀಲನೆ ಮಾಡಬೇಕು. ಈ ಪ್ರಾಧಿಕಾರಕ್ಕೆ ಅಣೆಕಟ್ಟು ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸುವ ಅಧಿಕಾರ ಇಲ್ಲ. ಹೀಗಾಗಿ ತನ್ನ ಸಭೆಯಲ್ಲಿ ಅಣೆಕಟ್ಟು ನಿರ್ಮಾಣದ ಬಗ್ಗೆ ಅಥವಾ ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚೆ ಮಾಡಬಾರದು ಎಂದು ಹೇಳಿದೆ.

    River

    ಕಳೆದ ಒಂಭತ್ತು ವರ್ಷದಲ್ಲಿ ಐದು ವರ್ಷ ಕರ್ನಾಟಕ ಸಮರ್ಪಕ ನೀರು ಹರಿಸದೇ ತಮಿಳುನಾಡಿಗೆ ಮೋಸ ಮಾಡಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಕೆಳ ಹಂತದ ರಾಜ್ಯಗಳಿಗೆ ತೊಂದರೆಯಾಗಲಿದೆ. ಹೀಗಾಗಿ ಅಣೆಕಟ್ಟು ನಿರ್ಮಾಣ ಮಾಡಬಾರದು ಎಂದು ತನ್ನ ಅಫಿಡೆವಿಟ್ ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಮೇಕೆದಾಟು ಆಣೆಕಟ್ಟು ನಿರ್ಮಾಣ ಯೋಜನೆ- ಜು. 26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

    ಇನ್ನು ಕರ್ನಾಟಕವೂ ಈ ಬಗ್ಗೆ ಉತ್ತರಿಸಿದ್ದು ಮೇಕೆದಾಟು ಯೋಜನೆ ಕರ್ನಾಟಕದ ಯೋಜನೆಯಾಗಿದ್ದು ತಮಿಳುನಾಡು ಅನುಮತಿ ಅಗತ್ಯ ಇಲ್ಲ. ಇದು ಕುಡಿಯುವ ನೀರು ಮತ್ತು ಹೈಡ್ರೋ ಪವರ್ ಪ್ರಾಜೆಕ್ಟ್ ಯೋಜನೆಯಾಗಿದೆ. ಇದರಿಂದ ತಮಿಳುನಾಡಿಗೆ ನೀರಿನ ಕೊರತೆಯಾಗುವುದಿಲ್ಲ. ನೀರಿನ ಕೊರತೆಯ ಬಗ್ಗೆ ಪ್ರಾಧಿಕಾರ ಸಭೆಯಲ್ಲಿ ಚರ್ಚಿಸಬಹುದು ಎಂದು ತಿಳಿಸಿದೆ.

    ಮೇಕೆದಾಟು ಅಣೆಕಟ್ಟು ನಿರ್ಮಿಸಲು ಹೊರಟಿರುವ ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಡಿಪಿಆರ್ ಬಗ್ಗೆ ಚರ್ಚಿಸಲು ಅನುಮತಿ ಕೇಳಿತ್ತು. ಇದಕ್ಕೆ ಪ್ರಾಧಿಕಾರ ಒಪ್ಪಿಕೊಂಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ನಡೆಸಿದಂತೆ ಸೂಚಿಸಲು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ಬಗ್ಗೆ ಸೋಮವಾರ ವಿಸ್ತೃತ ವಿಚಾರಣೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ

    ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ

    ನವದೆಹಲಿ: ಕೊರೊನಾ ಸೋಂಕಿನಿಂದ ದೂರವಿರಲು ಪ್ರತಿಯೊಬ್ಬರು ಲಸಿಕೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್ ಲಸಿಕೆಗಾಗಿ ಕೋವಿನ್ ಪೋರ್ಟಲ್‍ನಲ್ಲಿ ನೋಂದಣಿಗಾಗಿ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್‍ಗೆ ತಿಳಿಸಿದೆ.

    ಪುಣೆ ಮೂಲದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥ್ ಶಂಕರ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕೊವಿಡ್-19 ಲಸಿಕೆಯನ್ನು ನೀಡುವ ಉದ್ದೇಶಕ್ಕಾಗಿ ಗುರುತಿನ ಏಕೈಕ ಪುರಾವೆಯಾಗಿ ಆಧಾರ್ ಕಾರ್ಡ್ ನೀಡಲು ಕೇಳಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಾಯೋಗಿಕ ಕ್ರಮಗಳಿಗೆ ವಿರುದ್ಧವಾಗಿ, ಇತ್ತೀಚೆಗೆ ಮತ್ತೊಂದು ಮಾರ್ಗಸೂಚಿಯನ್ನು ಹೊರಡಿಸಿದೆ. ಇದರಲ್ಲಿ ಲಸಿಕೆ ನೀಡದ ವ್ಯಕ್ತಿಗಳಿಗೂ ಲಸಿಕೆ ನೀಡುವಂತೆ ನಿರ್ದೇಶಿಸಲಾಗಿದೆ. ಕೋವಿಡ್ ಪೋರ್ಟಲ್‍ನಲ್ಲಿ ಉಲ್ಲೇಖಿಸಿದಂತೆ ಏಳು ಸೂಚಿಸಲಾದ ಫೋಟೋ ಐಡಿ ಕಾರ್ಡ್‍ಗಳಲ್ಲಿ ಯಾವುದಾದರೂ ಒಂದನ್ನು ನೀಡಿದರೆ ಸಾಕು. ಲಸಿಕೆಗಾಗಿ ಕೊವಿನ್ ಪೋರ್ಟಲ್‍ನಲ್ಲಿ ಆಧಾರ್ ವಿವರಗಳನ್ನು ಸಲ್ಲಿಸುವ ಕಡ್ಡಾಯ ಪೂರ್ವ-ಷರತ್ತನ್ನು ತೆಗೆದುಹಾಕುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮನವಿ ಮಾಡಲಾಗಿತ್ತು. ಇದನ್ನೂ ಓದಿ: ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿವೆ: ಈಶ್ವರ್ ಖಂಡ್ರೆ

     

    ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ವಕೀಲ ಅಮನ್ ಶರ್ಮಾ, ಆಧಾರ್ ಮಾತ್ರ ಪೂರ್ವ ಷರತ್ತಲ್ಲ ಮತ್ತು ಯಾವುದೇ ಗುರುತಿನ ಚೀಟಿ ಇಲ್ಲದ 87 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.


    ನ್ಯಾಯಪೀಠ ಹೇಳಿದ್ದೇನು?: ಆಧಾರ್ ವಿವರ ದಾಖಲಿಸುವುದು ವ್ಯಾಕ್ಸಿನೇಷನ್ ಪಡೆಯಲು ಕಡ್ಡಾಯವಲ್ಲ, ಪಾಸ್‍ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಮತದಾರರ ಚೀಟಿ, ಪಡಿತರ ಚೀಟಿ ಸೇರಿಂದತೆ 9 ಗುರುತಿನ ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಲಸಿಕೆ ಪಡೆಯಲು ಸಲ್ಲಿಸಬಹುದು.

    ಎಲ್ಲ ಸಂಬಂಧಿತ ಅಧಿಕಾರಿಗಳು ಆರೋಗ್ಯ ಸಚಿವಾಲಯದ ನೀತಿಗೆ ಅನುಸಾರವಾಗಿ ಕಾರ್ಯನಿರ್ವಹಿಸಬೇಕು. ಜೈಲು ಕೈದಿಗಳು, ಮಾನಸಿಕ ಆರೋಗ್ಯ ಸಂಸ್ಥೆಗಳಲ್ಲಿನ ಕೈದಿಗಳು ಮುಂತಾದ ಗುರುತಿನ ಚೀಟಿಗಳನ್ನು ಹೊಂದಿರದ ಇತರ ವರ್ಗದ ವ್ಯಕ್ತಿಗಳಿಗೆ ಅವಕಾಶ ನೀಡಬೇಕು. ಕೋವಿನ್ ಫೋರ್ಟಲ್‍ನಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಕೋರ್ಟ್ ಸೂಚನೆ ನೀಡಿದೆ.

  • ಟಿಕ್ ಟಾಕ್ ಮೇಲಿನ ಬ್ಯಾನ್ ತೆರವು – ಕೋರ್ಟ್ ವಿಚಾರಣೆಯಲ್ಲಿ ಇಂದು ಏನಾಯ್ತು?

    ಟಿಕ್ ಟಾಕ್ ಮೇಲಿನ ಬ್ಯಾನ್ ತೆರವು – ಕೋರ್ಟ್ ವಿಚಾರಣೆಯಲ್ಲಿ ಇಂದು ಏನಾಯ್ತು?

    ಚೆನ್ನೈ: ಚೀನಾ ಮೂಲದ ಬೈಟ್ ಡಾನ್ಸ್ ಕಂಪನಿಯ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ಮೇಲೆ ಈ ಹಿಂದೆ ವಿಧಿಸಿದ್ದ ನಿಷೇಧವನ್ನು ಮದ್ರಾಸ್ ಹೈಕೋರ್ಟ್ ತೆರವುಗೊಳಿಸಿದೆ.

    ಕಳೆದ ಏಪ್ರಿಲ್ 18 ರಿಂದ ಗೂಗಲ್ ಪ್ಲೇ ಸ್ಟೋರ್ ಹಾಗೂ ಆ್ಯಪ್ ಸ್ಟೋರ್ ನಲ್ಲಿ ಟಿಕ್ ಟಾಕನ್ನು ತೆಗೆದು ಹಾಕಲಾಗಿತ್ತು. ಸುಪ್ರೀಂ ಕೋರ್ಟ್ ಸೋಮವಾರ ನೀಡಿದ ಸೂಚನೆ ಮೇರೆಗೆ ಇಂದು ಮದ್ರಾಸ್ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾ.ಎಸ್‍ಎಸ್ ಸುಂದರ್ ಹಾಗೂ ನ್ಯಾ. ಎನ್ ಕಿರುಬಕರನ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆಯನ್ನು ನಡೆಸಿತು.

    ಟಿಕ್‍ಟಾಕ್ ಪರವಾಗಿ ಹಿರಿಯ ವಕೀಲ ಐಸಾಕ್ ಮೋಹನ್‍ಲಾಲ್ ವಿಚಾರಣೆಗೆ ಹಾಜರಾಗಿ, ಅಶ್ಲೀಲ/ ನಗ್ನ ವಿಡಿಯೋಗಳನ್ನು ಅಪ್ಲೋಡ್ ಮಾಡದಂತೆ ಆಪ್‍ನಲ್ಲಿ ಟೆಕ್ನಾಲಜಿಯನ್ನು ಅಭಿವೃದ್ಧಿ ಪಡಿಸಿದ್ದೇವೆ. ಈ ಹಿಂದಿನ ವಿಚಾರಣೆಯ ಸಮಯದಲ್ಲಿ ಕೋರ್ಟ್ ಎತ್ತಿದ ಆಕ್ಷೇಪಗಳಿಗೆ ಸಂಬಂಧಿಸಿದಂತೆ ನಾವು ವಿವಿಧ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

    ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿದ್ದ ಅರವಿಂದ್ ದತಾರ್ ಅವರು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಆನ್‍ಲೈನ್ ಭಾಷಣಕ್ಕೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ಸಂವಿಧಾನ ವಾಕ್ ಸ್ವಾತಂತ್ರ್ಯಕ್ಕೆ ಅನುಮತಿ ನೀಡಿದೆ. ನ್ಯಾಯಾಂಗದ ಮೂಲಕ ಬಳಕೆದಾರರ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ಅಪ್ಲಿಕೇಶನ್ ನಿಷೇಧ ಮಾಡದೇ ಬಳಕೆದಾರರ ಸುರಕ್ಷತೆಯ ಬಗ್ಗೆ ಗಮನ ಹರಿಸುವುದು ಉತ್ತಮ ಎಂದು ತನ್ನ ಅಭಿಪ್ರಾಯವನ್ನು ಮಂಡಿಸಿದರು.

    ಈ ವೇಳೆ ಅರ್ಜಿದಾರರು ಚೀನಾ ದೇಶದ ಅಪ್ಲಿಕೇಶನ್ ಇದಾಗಿದ್ದು, ಇದರಿಂದಾಗಿ ದೇಶದ ಭದ್ರತೆಗೆ ಅಪಾಯವಿದೆ ಎಂದು ಮತ್ತೊಂದು ಅಂಶವನ್ನು ಉಲ್ಲೇಖಿಸಿ ನಿಷೇಧವನ್ನು ತೆರವುಗೊಳಿಸಬಾರದು ಎಂದು ಮನವಿ ಮಾಡಿದರು.

    ಎರಡು ಕಡೆಯ ವಾದಗಳನ್ನು ಅಲಿಸಿದ ಕೋರ್ಟ್ ಗ್ರಾಹಕರಿಗೆ ರಕ್ಷಣೆ ನೀಡಬೇಕೆಂದು ಟಿಕ್ ಟಾಕ್ ಕಂಪನಿಗೆ ಸೂಚಿಸಿತು. ಅದರಲ್ಲೂ ಮಕ್ಕಳ ರಕ್ಷಣೆಗೆ ವಿಶೇಷ ಗಮನಹರಿಸಬೇಕೆಂದು ಹೇಳಿ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಇದನ್ನು ಓದಿ: ಟಿಕ್ ಟಾಕ್ ಬ್ಯಾನ್‍ನಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ನಷ್ಟ!

    ಏನಿದು ಪ್ರಕರಣ?
    ಟಿಕ್ ಟಾಕ್ ಆ್ಯಪ್ ಪೊರ್ನೋಗ್ರಫಿಗೆ ಕಾರಣವಾಗುತ್ತಿದೆ, ಮಕ್ಕಳನ್ನು ದುರುಪಯೋಗ ಪಡಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿ ಅರ್ಜಿದಾರರು ಆ್ಯಪ್ ನಿಷೇಧಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಪ್ ನಿಷೇಧಿಸುವಂತೆ ಮಧ್ಯಂತರ ಆದೇಶ ಹೊರಡಿಸಿತ್ತು.

    ಈ ಆದೇಶಕ್ಕೆ ತಡೆ ನೀಡಬೇಕೆಂದು ಟಿಕ್‍ಟಾಕ್ ಕಂಪನಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್ ಈ ಆದೇಶಕ್ಕೆ ತಡೆ ನೀಡದ ಕಾರಣ ಸರ್ಕಾರ ಈ ಆಪ್ ನಿಷೇಧಿಸುವಂತೆ ಗೂಗಲ್ ಮತ್ತು ಆಪಲ್ ಕಂಪನಿಗಳಿಗೆ ಸೂಚಿಸಿತ್ತು.

    ಏ.22ರಂದು ಸುಪ್ರೀಂ ಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟಿಗೆ ಒಪ್ಪಿಸಿತ್ತು. ಈ ವೇಳೆ ಟಿಕ್ ಟಾಕ್ ಆ್ಯಪ್ ನಿಷೇಧ ಮಾಡುವಂತೆ ಸಲ್ಲಿಸಲಾಗಿರುವ ಅರ್ಜಿಯಲ್ಲಿರುವ ತಕಾರಾರುಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಬೈಟ್ ಡ್ಯಾನ್ಸ್ ಸಂಸ್ಥೆ ಕೂಡ ಕೋರ್ಟ್ ನಲ್ಲಿ ಪ್ರಶ್ನಿಸಬಹುದು. ಒಂದು ವೇಳೆ ಏ.24ರಂದು ಈ ಕುರಿತು ನಿರ್ಧಾರ ಕೈಗೊಳ್ಳಲು ಮದ್ರಾಸ್ ಹೈಕೋರ್ಟ್ ವಿಫಲವಾದರೆ, ಆಗ ಆ್ಯಪ್ ಬ್ಯಾನ್ ಕುರಿತಂತೆ ನೀಡಿದ್ದ ಆದೇಶ ರದ್ದುಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು.

  • ಟಿಕ್ ಟಾಕ್ ಬ್ಯಾನ್‍ನಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ನಷ್ಟ!

    ಟಿಕ್ ಟಾಕ್ ಬ್ಯಾನ್‍ನಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ನಷ್ಟ!

    ನವದೆಹಲಿ: ಭಾರತದಲ್ಲಿ ಚೀನಾ ಮೂಲದ ಬೈಟ್‍ಡ್ಯಾನ್ಸ್ ಕಂಪನಿಯ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ನಿಷೇಧಿಸಲಾಗಿದ್ದು, ಇದರಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ರೂ. ನಷ್ಟವಾಗುತ್ತಿದೆ.

    ಟಿಕ್ ಟಾಕ್ ನಿಷೇಧ ಸಂಬಂಧ ಸುಪ್ರಿಂ ಕೋರ್ಟ್‍ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಈ ಕುರಿತು ವಾದ ಮಂಡಿಸಿರುವ ಬೈಟ್ ಡ್ಯಾನ್ಸ್ ಕಂಪನಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಆ್ಯಪ್ ನಿಷೇಧದ ಬಳಿಕ ಕೇವಲ ಬೈಟ್ ಡ್ಯಾನ್ಸ್ ಗೆ ಮಾತ್ರವಲ್ಲ, ಈ ಆ್ಯಪ್ ಬಳಕೆ ಮಾಡುತ್ತಿದ್ದ ಸುಮಾರು 20 ಲಕ್ಷ ಗ್ರಾಹಕರಿಗೂ ತೊಂದರೆಯಾಗುತ್ತಿದೆ. ಅಲ್ಲದೆ ಕಂಪನಿಯ 250ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಟಿಕ್‍ಟಾಕ್ ನಿಷೇಧ ಕುರಿತಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟಿಗೆ ಒಪ್ಪಿಸಿತ್ತು. ಈ ವೇಳೆ ಟಿಕ್ ಟಾಕ್ ಆ್ಯಪ್ ನಿಷೇಧ ಮಾಡುವಂತೆ ಸಲ್ಲಿಸಲಾಗಿರುವ ಅರ್ಜಿಯಲ್ಲಿರುವ ತಕಾರಾರುಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಬೈಟ್ ಡ್ಯಾನ್ಸ್ ಸಂಸ್ಥೆ ಕೂಡ ಕೋರ್ಟ್ ನಲ್ಲಿ ಪ್ರಶ್ನಿಸಬಹುದು. ಒಂದು ವೇಳೆ ಏ.24ರಂದು ಈ ಕುರಿತು ನಿರ್ಧಾರ ಕೈಗೊಳ್ಳಲು ಮದ್ರಾಸ್ ಹೈಕೋರ್ಟ್ ವಿಫಲವಾದರೆ, ಆಗ ಆ್ಯಪ್ ಬ್ಯಾನ್ ಕುರಿತಂತೆ ನೀಡಿದ್ದ ಆದೇಶ ರದ್ದುಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

    ಭಾರತದಲ್ಲಿ 3 ಕೋಟಿ ಜನರು ಟಿಕ್‍ಟಾಕ್ ಅಪ್ಲಿಕೇಶನ್ ಡೌನ್‍ಲೋಡ್ ಮಾಡಿದ್ದರೆ, ವಿಶ್ವದಲ್ಲಿ 100 ಕೋಟಿ ಮಂದಿ ಈ ಆ್ಯಪ್ ಡೌನ್‍ಲೋಡ್ ಮಾಡಿದ್ದಾರೆ. ವಿಡಿಯೋ ಪೇಜ್‍ನಲ್ಲಿ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಟಿಕ್‍ಟಾಕ್ ಆದಾಯಗಳಿಸುತ್ತಿದೆ.

    ನಿಷೇಧ ಯಾಕೆ?
    ಈ ಅಪ್ಲಿಕೇಶನ್ ನಲ್ಲಿ ಜನ ಆಕ್ಷೇಪಾರ್ಹ ವಿಡಿಯೋಗಳನ್ನು ಹಂಚಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಹೀಗಾಗಿ ಈ ಆ್ಯಪನ್ನು ನಿಷೇಧಿಸಬೇಕೆಂದು ಅರ್ಜಿದಾರರು ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಅರ್ಜಿದಾರರ ವಾದವನ್ನು ಪುರಸ್ಕರಿಸಿದ ಮದ್ರಾಸ್ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆ್ಯಪ್ ನಿಷೇಧಿಸುವಂತೆ ಏ.3 ರಂದು ಮಧ್ಯಂತರ ಆದೇಶ ಹೊರಡಿಸಿತ್ತು. ಟಿಕ್ ಟಾಕ್ ಆ್ಯಪನ್ನು ಅಭಿವೃದ್ಧಿಪಡಿಸಿದ ಬೈಟ್‍ಡಾನ್ಸ್ ಟೆಕ್ನಾಲಜಿ ಈ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

    ಮದ್ರಾಸ್ ಹೈ ಕೋರ್ಟ್  ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಅಪ್ಲಿಕೇಶನ್ ಕಿತ್ತು ಹಾಕುವಂತೆ ಆಪಲ್ ಮತ್ತು ಗೂಗಲ್ ಕಂಪನಿಗಳಿಗೆ ಸೂಚಿಸಿತ್ತು. ಕೇಂದ್ರದ ಸೂಚನೆಯ ಹಿನ್ನೆಲೆಯಲ್ಲಿ ಗೂಗಲ್ ಮತ್ತು ಆಪಲ್ ಕಂಪನಿ ಆ್ಯಪ್ ಸ್ಟೋರ್ ನಿಂದ ಟಿಕ್ ಟಾಕ್ ಕಿತ್ತು ಹಾಕಿತ್ತು.

  • ಲಾಲೂಗೆ ಜೈಲೇ ಗತಿ – ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ಲಾಲೂಗೆ ಜೈಲೇ ಗತಿ – ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ನವದೆಹಲಿ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

    ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರ ಜಾಮೀನಿಗೆ ಸಿಬಿಐ ಆಕ್ಷಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಲಾಲೂಗೆ ಜಾಮೀನು ನೀಡಲು ನಿರಾಕರಿಸಿದೆ.

    ಮೇವು ಹಗರಣದಲ್ಲಿ ಭಾಗಿಯಾಗಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾಧವ್‍ರಿಗೆ 25 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಗೆ ಲಾಲೂ ಪ್ರಸಾದ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

    ಲಾಲೂ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಯಾಕೆ ಬಿಡುಗಡೆ ಮಾಡುತ್ತಿಲ್ಲ. ಜಾಮೀನು ಮಂಜೂರು ಮಾಡಿದರೆ ಏನು ಸಮಸ್ಯೆಯಾಗುತ್ತದೆ? ಈ ಪ್ರಕರಣ ಜಾಮೀನು ಸಿಗುವ ಕೇಸ್ ಆಗಿದೆ ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು.

    ಆಕ್ಷೇಪಣೆ ಯಾಕೆ?
    ಅನಾರೋಗ್ಯದ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಅವರಿಗೆ ಜಾಮೀನು ನೀಡಿದರೆ ಅವರು ಲೋಕಸಭಾ ಚುನಾವಣೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಅನಾರೋಗ್ಯ ನೆಪ ಮಾಡಿಕೊಂಡು ಜಾಮೀನು ಕೋರುತ್ತಿದ್ದಾರೆ ಎಂದು ಸಿಬಿಐ ವಾದಿಸಿತ್ತು. ಈ ಹಿಂದೆ ಲಾಲೂ ಪ್ರಸಾದ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ಹಲವು ರಾಜಕೀಯ ವ್ಯಕ್ತಿಗಳು ಭೇಟಿ ಮಾಡಿದ್ದರು. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಸಿಬಿಐ ಆಕ್ಷೇಪಣೆ ಸಲ್ಲಿಸಿತ್ತು.

    ಏನಿದು ಪ್ರಕರಣ?
    20 ವರ್ಷಗಳ ಹಿಂದೆ ಬಿಹಾರದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವುದಾಗಿ ಚಾಯ್ಬಾಸ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಜಾನುವಾರುಗಳಿಗೆ ಮೇವು ಹಾಗೂ ಔಷಧ ಒದಗಿಸುವ ನೆಪದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಸರ್ಕಾರದ ಹಣವನ್ನು ಲೂಟಿ ಮಾಡಿದ್ದರು. 900 ಕೋಟಿ ರೂ. ಮೊತ್ತದ ಮೇವು ಹಗರಣ ಸಂಬಂಧ ಒಟ್ಟು 53 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 44 ಪ್ರಕರಣಗಳ ತೀರ್ಪು ಈಗಾಗಲೇ ಹೊರಬಿದ್ದಿದೆ. ಲಾಲು ಪ್ರಸಾದ್ ಯಾದವ್ ವಿರುದ್ಧ ಆರು ಪ್ರಕರಣಗಳು ದಾಖಲಾಗಿವೆ. 4 ಪ್ರಕರಣದಲ್ಲಿ ಲಾಲೂ ದೋಷಿಯಾಗಿದ್ದು, ಒಟ್ಟು 25 ವರ್ಷ ಕಾಲ ಲಾಲೂ ಪ್ರಸಾದ್ ಯಾದವ್ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

  • ಗಮನಿಸಿ, ಈಗಾಗಲೇ ಆಧಾರ್ ಲಿಂಕ್ ಆಗಿರೋ ಸಿಮ್ ನಿಷ್ಕ್ರಿಯವಾಗಲ್ಲ

    ಗಮನಿಸಿ, ಈಗಾಗಲೇ ಆಧಾರ್ ಲಿಂಕ್ ಆಗಿರೋ ಸಿಮ್ ನಿಷ್ಕ್ರಿಯವಾಗಲ್ಲ

    ನವದೆಹಲಿ:  ಆಧಾರ್‌ನಿಂದ ಪಡೆದ ಸಿಮ್ ಕಾರ್ಡ್‌ಗಳು ಸುಪ್ರಿಂ ಕೋರ್ಟ್ ತೀರ್ಪಿನಿಂದ ನಿಷ್ಕ್ರಿಯಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

    ಆಧಾರ್ ಕಾರ್ಡ್ ಅನ್ನು ಸಿಮ್ ಕಾರ್ಡ್‌ಗಳಿಗೆ ಜೋಡನೆ ಮಾಡುವುದರಿಂದ ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ ಆಗುತ್ತಿರುವುದನ್ನ ತಡೆಯಲು ಸುಪ್ರಿಂ ಕೋರ್ಟ್ ಎಲ್ಲಾ ಟೆಲಿಕಾಂ ಕಂಪನಿಗಳಿಗೆ ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಲು(ಕೆವೈಸಿ) ಆಧಾರ್ ಜೋಡನೆಯನ್ನು ನಿಲ್ಲಿಸಲು ಹೇಳಿತ್ತು. ಇದರಿಂದಾಗಿ ಗ್ರಾಹಕರಿಗೆ ಈ ಹಿಂದೆ ಆಧಾರ್ ನಿಂದ ಪಡೆದ ಸಿಮ್ ಕಾರ್ಡ್‌ಗಳ ಸೇವೆಯನ್ನ ನಿಷ್ಕ್ರಿಯಗೊಳಿಸುವ ಭಯ ಎದುರಾಗಿತ್ತು.

    ಟಿಲಿಕಾಂ ಸಚಿವಾಲಯ ಮತ್ತು ಆಧಾರ್ ಪ್ರಾಧಿಕಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿ, ಸುಪ್ರಿಂ ಕೋರ್ಟ್ ಆಧಾರ್ ಮೂಲಕ ಹೊಸ ಸಿಮ್ ಕಾರ್ಡ್‌ಗಳನ್ನ ಪಡೆಯುವುದನ್ನ ನಿಷೇಧಿಸಿದೆ. ಆದರೆ ಈ ಹಿಂದೆ ಆಧಾರ್ ಮೂಲಕ ಪಡೆದ ಸಿಮ್ ಕಾರ್ಡ್‌ಗಳನ್ನ ನಿಷ್ಕ್ರಿಯಗೊಳಿಸಿಲು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ.

    ಗ್ರಾಹಕರು ತಮ್ಮ ಆಧಾರ್ ದಾಖಲೆಗಳನ್ನ ಬದಲಾಯಿಸಲು ಇಚ್ಛಿಸುವವರು ಸರ್ಕಾರಿಂದ ಗುರುತಿಸ್ಪಟ್ಟ ಗುರುತಿನ ಚೀಟಿ ಅಥವಾ ವಿಳಾಸವನ್ನ ಸ್ವಯಂಪ್ರೇರಿತವಾಗಿ ಸಲ್ಲಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದೆ.

    ಆಧಾರ್ ಮೇಲೆ ನಿರ್ಬಂಧ ಹೇರಿದೆಯೇ ಹೊರತು ಟೆಲಿಕಾಂ ಕಂಪನಿಗಳ ಮೇಲೆ ಹೇರಿಲ್ಲ. ಹೀಗಾಗಿ ಟೆಲಿಕಾಂ ಕಂಪನಿಗಳು ಆಧಾರ್ ಮೂಲಕ ಸಂಗ್ರಹಿಸಿಕೊಂಡಿರುವ ಗ್ರಾಹಕರ ಮಾಹಿತಿಗಳನ್ನು ಡಿಲೀಟ್ ಮಾಡುವ ಅಗತ್ಯವಿಲ್ಲ ಎನ್ನುವ ವಿಚಾರ ಹೇಳಿಕೆಯಲ್ಲಿದೆ.

    ದೇಶದ ಎಲ್ಲಾ ಟೆಲಿಕಾಂ ಕಂಪನಿಗಳಿಗೆ ಸುಪ್ರಿಂ ಕೋರ್ಟ್ ಅಕ್ಟೋಬರ್ 15 ಒಳಗೆ ಆಧಾರ್ ವೆರಿಫಿಕೇಶನ್ ಅನ್ನು ನಿಲ್ಲಿಸಲು ಹೇಳಿತ್ತು. ಆದರೆ ಗ್ರಾಹಕರಿಗೆ ತಾವು ಈ ಹಿಂದೆ ಆಧಾರ್ ನಿಂದ ಪಡೆದ ಸಿಮ್ ಕಾರ್ಡ್‌ಗಳ ಸೇವೆಯನ್ನ ಕಡಿತಗೊಳಿಸಲಾಗುವುದು ಎಂಬ ಆತಂಕ ಮೂಡಿತ್ತು. ಆದರೆ ಈಗ ಆ ಎಲ್ಲಾ ಅನುಮಾನ ಮತ್ತು ಆತಂಕಗಳಿಗೆ ಬ್ರೇಕ್ ಸಿಕ್ಕಂತೆ ಆಗಿದೆ.

    ಆಧಾರ್ ಮೇಲಿನ ದಾಳಿ ಸಂವಿಧಾನದ ಮೇಲೆ ದಾಳಿ ನಡೆಸಿದಂತೆ ಆಗುತ್ತದೆ. ಆಧಾರ್ ವಿಶಿಷ್ಟವಾಗಿರುವುದೇ ಉತ್ತಮವಾಗಿದ್ದು, ಈಗಾಗಲೇ ಆಧಾರ್ ಜನ ಸಾಮನ್ಯ ಬಳಿ ತಲುಪಿದ್ದು, ಅದು ದೇಶದ ಗುರುತಿನ ಪತ್ರವಾಗಿದೆ. ಈಗ ಆಧಾರ್ ವಿರೋಧಿಸಿದರೆ ಕೈಯಲ್ಲಿರುವ ಮಗುವನ್ನ ಎಸೆದಂತೆ. ಆಧಾರ್ ವಿರೋಧಿಸಿದ್ರೆ ಸಂವಿಧಾನ ವಿರೋಧಿಸಿದಂತೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಆಧಾರ್‌ಗೆ ಸಾಂವಿಧಾನಿಕಾ ಮಾನ್ಯತೆಯನ್ನು ಕೋರ್ಟ್ ನೀಡಿದ್ದರೂ ಸಿಮ್ ಖರೀದಿಗೆ ಕಡ್ಡಾಯ ಮಾಡಕೂಡದು ಎಂದು ಹೇಳಿತ್ತು.

    ಆಧಾರ್ ಯಾವುದಕ್ಕೆ ಬೇಕು?
    ಸರ್ಕಾರಿ ಸೌಲಭ್ಯ, ಪ್ಯಾನ್, ಆದಾಯ ತೆರಿಗೆ (ಐಟಿ ರಿಟನ್ರ್ಸ್), ಆಸ್ತಿ ಖರೀದಿ, ಪ್ಯಾನ್ ನಂಬರ್, ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ವ್ಯವಹಾರಗಳಿಗೆ ಆಧಾರ್ ಕಡ್ಡಾಯಗೊಳಿಸಲಾಗಿದೆ.

    ಆಧಾರ್ ಯಾವುದಕ್ಕೆ ಬೇಡ?
    1. ಖಾಸಗಿ ಸಂಸ್ಥೆಗಳು ಆಧಾರ್ ಕೇಳುವಂತಿಲ್ಲ
    2. ಆಧಾರ್ ಮಾಹಿತಿ ಅಥವಾ ದತ್ತಾಂಶವನ್ನು 6 ತಿಂಗಳಕ್ಕೂ ಹೆಚ್ಚಿನ ಕಾಲ ಸಂಗ್ರಹಿಸಿಟ್ಟುಕೊಳ್ಳುವಂತಿಲ್ಲ.
    3. ಎಲ್ಲ ಬ್ಯಾಂಕ್‍ಗಳಿಗೆ ಆಧಾರ್ ಮಾಹಿತಿ ಕೊಡುವಂತಿಲ್ಲ.
    4. ಸೆಕ್ಷನ್ 7ರ ಪ್ರಕಾರ ಶಾಲೆಗಳ ಪ್ರವೇಶಾತಿ ವೇಳೆ ಆಧಾರ್ ಕೊಡುವ ಅಗತ್ಯವಿಲ್ಲ.
    5. ಸಿಬಿಎಸ್‍ಸಿ, ಯುಜಿಸಿ, ನೀಟ್ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ.
    6. ಸಿಮ್ ಖರೀದಿ, ಪೇಟಿಎಂ, ಫೋನ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್ ಆ್ಯಯಪ್ ಗಳಿಗೆ ಕಡ್ಡಾಯವಲ್ಲ.
    7. ಸೆಕ್ಷನ್ 2(ಬಿ) ಅಕ್ರಮ ವಲಸಿಗರಿಗೆ ಆಧಾರ್ ಕೊಡುವಂತಿಲ್ಲ.
    8. ಮೊಬೈಲ್ ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಅವಶ್ಯಕತೆಯಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದ್ರೆ ಸಾಮೂಹಿಕ ಆತ್ಮಹತ್ಯೆ- ಶಿವಸೇನಾ ಕಾರ್ಯಕರ್ತೆಯರಿಂದ ಬೆದರಿಕೆ

    ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದ್ರೆ ಸಾಮೂಹಿಕ ಆತ್ಮಹತ್ಯೆ- ಶಿವಸೇನಾ ಕಾರ್ಯಕರ್ತೆಯರಿಂದ ಬೆದರಿಕೆ

    ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರು ಪ್ರವೇಶ ಮಾಡಿದರೆ ನಮ್ಮ ಮಹಿಳಾ ಕಾರ್ಯಕರ್ತೆಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲಿದ್ದಾರೆ ಎಂದು ಕೇರಳದ ಶಿವಸೇನೆ ಹೇಳಿದೆ.

    ಮಾಧ್ಯಮಗಳ ಜೊತೆ ಮಾತನಾಡಿದ ಶಿವಸೇನಾ ಸದಸ್ಯರಾದ ಪೆರಿಂಗಂಮ್ಮಾಲಾ ಅಜಿ, ಸುಪ್ರಿಂ ಕೋರ್ಟ್ ಆದೇಶವನ್ನ ಖಂಡಿಸಿ, ಇದೇ ಅಕ್ಟೋಬರ್ 17 ಮತ್ತು 18 ರಂದು ಪಂಪಾ ನದಿಯ ತೀರದಲ್ಲಿ ನಮ್ಮ ಮಹಿಳಾ ಕಾರ್ಯಕರ್ತರೆಲ್ಲಾ ಸೇರಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಆತ್ಮಹತ್ಯೆ ಮಾಡಿಕೊಳ್ಳಲಿರುವ ಮಹಿಳೆಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಒಂದು ವೇಳೆ ಮಹಿಳೆಯರು ಶಬರಿಮಲೆಗೆ ಪ್ರವೇಶಿಸಿದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗಲಿದ್ದಾರೆ ಎಂದು ಪೆರಿಂಗಂಮ್ಮಾಲಾ ಅಜಿ ಹೇಳಿದ್ದಾರೆ.

    ಶಬರಿಮಲೆ ಮಹಿಳೆಯರ ಪ್ರವೇಶದ ವಿಚಾರವಾಗಿ ದೇಶದೆಲ್ಲೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇರಳದ ಸರ್ಕಾರ ಮತ್ತು ಇನ್ನಿತರ ಭಕ್ತರು ಈ ಆದೇಶದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಶಿವಸೇನಾ ಕಾರ್ಯಕರ್ತರಿಂದ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

    ಕಳೆದ ಸೆಪ್ಟಂಬರ್ 28 ರಂದು ಕೇರಳದ ಶಬರಿಮಲೆಯ ಅಯ್ಯಪ್ಪನ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿಯ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರಿಂ ಕೋರ್ಟ್‌ನ  ಮಹತ್ವದ ತೀರ್ಪನ್ನು ನೀಡಿತ್ತು. ಭಕ್ತಿಯನ್ನು ಲಿಂಗದ ಆಧಾರದಲ್ಲಿ ವಿವರಿಸಲು ಸಾಧ್ಯವಿಲ್ಲ. ಧಾರ್ಮಿಕ ಹಕ್ಕಿಗೂ-ದೈಹಿಕ ಸ್ಥಿತಿಗತಿಗೂ ಸಂಬಂಧವೇ ಇಲ್ಲ. ಅಯ್ಯಪ್ಪನ ಭಕ್ತರು ಅನ್ಯಧರ್ಮದವರಂತೆ ಪ್ರತ್ಯೇಕ ಸ್ಥಾನಮಾನ ಹೊಂದಿಲ್ಲ. ಒಂದೆಡೆ ಮಹಿಳೆಯರನ್ನು ದೇವರಂತೆ ಪೂಜಿಸುತ್ತೇವೆ. ಮತ್ತೊಂದೆಡೆ ನಿಷೇಧ ಹೇರಲಾಗಿದೆ. ಮಹಿಳೆ ದೇವರಿಗೆ ಸಮಾನವಾಗಿದ್ದು ಮಹಿಳೆಯರಿಗೆ ಶಬರಿಮಲೆಗೆ ಬಹಿಷ್ಕಾರ ಸರಿಯಲ್ಲ. ಮಹಿಳೆಯರ ಬಗೆಗಿನ ಇಬ್ಬಗೆ ನೀತಿಯಿಂದ ಆಕೆಯ ಸ್ಥಾನಮಾನಕ್ಕೆ ಧಕ್ಕೆಯಾಗಿದೆ ಎಂದು ಕೋರ್ಟ್ ಹೇಳಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಜೆಐ ಮಹಾಭಿಯೋಗ ನೋಟಿಸ್ ನಿರಾಕರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

    ಸಿಜೆಐ ಮಹಾಭಿಯೋಗ ನೋಟಿಸ್ ನಿರಾಕರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

    ನವದೆಹಲಿ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಾಧೀಶ (ಸಿಜೆಐ) ದೀಪಕ್ ಮಿಶ್ರಾ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿದ್ದ ಮಹಾಭಿಯೋಗ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಸ್ಪೀಕರ್ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.

    ನೋಟಿಸ್ ನಲ್ಲಿ ಹೇಳಲಾದ ಯಾವುದೇ ಅಂಶಗಳಿಗೆ ಸೂಕ್ತ ಸಾಕ್ಷಿಗಳಾಗಲಿ, ಆಧಾರಗಳಾಗಲಿ ಇಲ್ಲ. ಕಾನೂನು ಮತ್ತು ಸಂವಿಧಾನ ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ನಿಲುವಳಿ ನೋಟಿಸ್ ಸ್ವೀಕರಿಸಲು ಅನರ್ಹವಾಗಿದೆ. ಹಾಗಾಗಿ ನಿರಾಕರಿಸಿದ್ದೇನೆ ಎಂದು ಹೇಳಿದ್ದಾರೆ.

    ಮಹಾಭಿಯೋಗ ನಿಲುವಳಿ ನೋಟಿಸ್ ನಲ್ಲಿ ಮಾಡಿರುವ 5 ಆರೋಪಗಳು ಹಾಗೂ ಅದಕ್ಕೆ ಒದಗಿಸಿರುವ ದಾಖಲಾತಿಗಳನ್ನು ಪರಿಶೀಲಿಸಿದ್ದೇನೆ. ಎಲ್ಲೂ ಕೂಡ ಸಿಜೆಐ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಕಂಡು ಬಂದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗಕ್ಕೆ ಮನಮೋಹನ್ ಸಿಂಗ್ ಸಹಿ ಮಾಡಿಲ್ಲ ಏಕೆ?

    ಒಂದು ವೇಳೆ ನಿಲುವಳಿ ನೋಟಿಸ್ ನಿರಾಕರಿಸಿದ್ದೇ ಆದಲ್ಲಿ ಸುಪ್ರಿಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಹೇಳಿತ್ತು. ರಾಜ್ಯಸಭಾಧ್ಯಕ್ಷರ ನಿರಾಕರಣೆಯ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ನಡೆಯನ್ನು ನಿರ್ಧಾರ ಮಾಡುತ್ತೇವೆ ಎಂದು ಕಾಂಗ್ರೆಸ್ ಸದಸ್ಯ ಪಿ ಎಲ್ ಪುನಿಯಾ ಹೇಳಿದ್ದಾರೆ.ಇದನ್ನೂ ಓದಿ:ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆಯುವುದು ಹೇಗೆ?

    ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಹಿರಿಯ ಕಾನೂನು ತಜ್ಞ ಕೆ ಪರಾಶರನ್, ಮಾಜಿ ಸಿಜೆಐ ಬಿ ಸುದರ್ಶನ್ ರೆಡ್ಡಿ ಅವರ ಜೊತೆ ಕೂಡ ವೆಂಕಯ್ಯ ನಾಯ್ಡು ಈ ವಿಚಾರದ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.