Tag: ಸುಬುಧೇಂದ್ರ ತೀರ್ಥ ಸ್ವಾಮಿ

  • ಮಂತ್ರಾಲಯ ಶ್ರೀಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ – ಅದ್ದೂರಿಯಾಗಿ ನಡೆದ ಸೀಮೋಲ್ಲಂಘನ

    ಮಂತ್ರಾಲಯ ಶ್ರೀಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ – ಅದ್ದೂರಿಯಾಗಿ ನಡೆದ ಸೀಮೋಲ್ಲಂಘನ

    ರಾಯಚೂರು: ಮಂತ್ರಾಲಯ (Mantralaya) ಶ್ರೀ ಗುರು ರಾಘವೇಂದ್ರ ಸ್ವಾಮಿಗಳ (Sri Guru Raghavendra Swamy) ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ ಹಿನ್ನೆಲೆ 13ನೇ ಚಾತುರ್ಮಾಸ್ಯ ಸಮಾರೋಪ ಸಮಾರಂಭವನ್ನ ಮಂತ್ರಾಲಯದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

    ಇಲ್ಲಿನ ಕೊಂಡಾಪುರ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಮೂಲಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸೀಮೋಲ್ಲಂಘನ ಆಚರಣೆ ಮಾಡಿದರು. ಪ್ರಾಣದೇವರು, ಮಂಚಾಲಮ್ಮ ದೇವಿ, ಗುರು ರಾಯರ ಹಾಗೂ ಇತರ ಬೃಂದಾವನಗಳಿಗೆ ಮಂಗಳಾರತಿ ಮಾಡಿ ಸೀಮೋಲ್ಲಂಘನಕ್ಕೆ ಚಾಲನೆ ನೀಡಿದರು.ಇದನ್ನೂ ಓದಿ: ಅಕ್ರಮ ಅನ್ನಭಾಗ್ಯ ಅಕ್ಕಿ ದಂಧೆ ಅಡ್ಡೆ ಮೇಲೆ ದಾಳಿ – ಓರ್ವ ವಶಕ್ಕೆ

    ನೂರಾರು ಭಕ್ತರೊಂದಿಗೆ ಭವ್ಯ ಮೆರವಣಿಗೆಯಲ್ಲಿ ಕೊಂಡಾಪುರ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಶ್ರೀಗಳು ಮಠಕ್ಕೆ ಮರಳಿದರು. ಭಕ್ತರಿಂದ ಪುಷ್ಪವೃಷ್ಠಿ, ಗುರುವಂದನೆ ಕಾರ್ಯಕ್ರಮ ನಡೆಯಿತು. ಬಳಿಕ ಸುಬುಧೇಂದ್ರ ತೀರ್ಥ ಸ್ವಾಮಿಗಳು ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.

     

  • ಸಿಇಟಿ ವೇಳೆ ಜನಿವಾರ ತೆಗೆಸಿದ ಘಟನೆಗೆ ಮಂತ್ರಾಲಯ ಶ್ರೀ ಖಂಡನೆ – ಮತ್ತೆ ಮರುಕಳಿಸದಂತೆ ಸರ್ಕಾರಕ್ಕೆ ಎಚ್ಚರಿಕೆ

    ಸಿಇಟಿ ವೇಳೆ ಜನಿವಾರ ತೆಗೆಸಿದ ಘಟನೆಗೆ ಮಂತ್ರಾಲಯ ಶ್ರೀ ಖಂಡನೆ – ಮತ್ತೆ ಮರುಕಳಿಸದಂತೆ ಸರ್ಕಾರಕ್ಕೆ ಎಚ್ಚರಿಕೆ

    ರಾಯಚೂರು: ಶಿವಮೊಗ್ಗ, ಬೀದರ್‌ನಲ್ಲಿ ಸಿಇಟಿ ಪರೀಕ್ಷೆ (CET Exam) ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಅಕ್ಷರಶಃ ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮಂತ್ರಾಲಯ (Mantralaya)  ಗುರುರಾಘವೇಂದ್ರ ಸ್ವಾಮಿ ಮಠದ (Guru Raghavendra Swamy Mutt) ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subudhendra Theertha Swami) ಹೇಳಿದರು.

    ಮಂತ್ರಾಲಯದಲ್ಲಿ ಮಾತನಾಡಿದ ಅವರು, ಅವರವರ ಧರ್ಮವನ್ನು ಆಚರಿಸಲು ಸಂವಿಧಾನದಲ್ಲಿ ಅವಕಾಶ ಹಾಗೂ ಅಧಿಕಾರವಿದೆ. ಸಂವಿಧಾನದ ಬಗ್ಗೆ ಒಂದೆಡೆ ಮಾತನಾಡುವುದು, ಇನ್ನೊಂದೆಡೆ ಸ್ವಾತಂತ್ರ‍್ಯವನ್ನು ಹರಣ ಮಾಡುವಂತಹ ದ್ವಂದ್ವ ನಿಲುವು ಅತ್ಯಂತ ಖಂಡನೀಯ. ಕೇವಲ ವಿಪ್ರ ಸಮಾಜ ಮಾತ್ರವಲ್ಲ, ಯಾವುದೇ ಸಮುದಾಯದ ವಿಚಾರ ಬಂದಾಗ ಈ ರೀತಿಯಾದ ಧರ್ಮ-ವಿರೋಧಿ ಚಟುವಟಿಕೆಗಳು ಅತ್ಯಂತ ಅಸಹ್ಯ, ಹೇಯವಾಗಿರುವಂತವು. ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸುತ್ತೇವೆ ಹಾಗೂ ಖಂಡಿಸುತ್ತೇವೆ. ಇದರ ವಿರುದ್ಧ ಪ್ರತಿಭಟಿಸುತ್ತೇವೆ ಎಂದರು.ಇದನ್ನೂ ಓದಿ: ಧಾರವಾಡದಲ್ಲಿಯೂ ಜನಿವಾರ ಜಟಾಪಟಿ – ಹುರಕಡ್ಲಿ ಕಾಲೇಜಿನಲ್ಲಿ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ

    ಈ ರೀತಿ ಪುನರಾವರ್ತನೆಯಾಗದಂತೆ ಸರ್ಕಾರ ಎಚ್ಚರ ವಹಿಸಬೇಕು. ವಿದ್ಯಾರ್ಥಿಯ ಭವಿಷ್ಯ ಹಾಳಾಗಿದೆ, ಧರ್ಮಕ್ಕೆ ಚ್ಯುತಿ ಬಂದಿದೆ. ಎಲ್ಲಿಯೋ ಯಾರೋ ಶಾಸಕರು, ಮಂತ್ರಿಗಳು ತಪ್ಪಾಯಿತು ಎಂದು ಕೇಳುವುದು, ಸರಿಪಡಿಸುತ್ತೇವೆ ಎನ್ನುವುದು. ಕೇವಲ ಕಣ್ಣೀರು ಒರೆಸುವ ಮಾತು. ಹೀಗೆ ಮುಂದುವರೆದರೆ ಜಾತ್ಯತೀತವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಸರ್ವಧರ್ಮಗಳ ಶಾಂತಿ ಹೂದೋಟವಾದ ಕರ್ನಾಟಕ ರಾಜ್ಯದಲ್ಲಿ ಧರ್ಮವಿರೋಧಿ ನೀತಿ ನಡೆಯುತ್ತಿದೆ ಎಂದರೆ ಇನ್ನೂ ಎಲ್ಲಿ ಮೊರೆ ಹೋಗಬೇಕು ಎಂದು ಪ್ರಶ್ನಿಸಿದರು.

    ಬೇರೆ ಯಾವ ಸಮುದಾಯಕ್ಕೆ ಇಲ್ಲದಿರುವುದು ವಿಪ್ರ ಸಮುದಾಯಕ್ಕೆ ಮಾತ್ರ ಯಾಕೆ? ಇದನ್ನ ತೀವ್ರವಾಗಿ ಖಂಡಿಸುತ್ತೇವೆ, ಅನ್ಯಾಯ ಸರಿಪಡಿಸಬೇಕು. ಮುಂದೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರು.ಇದನ್ನೂ ಓದಿ: PUBLiC TV Impact | ಜನಿವಾರ ಹಾಕಿದ್ದಕ್ಕೆ ಸಿಇಟಿಗೆ ನೋ ಎಂಟ್ರಿ – ಫ್ರೀ ಎಂಜಿನಿಯರಿಂಗ್ ಸೀಟ್ ಆಫರ್ ಕೊಟ್ಟ ಈಶ್ವರ್ ಖಂಡ್ರೆ

  • ಮಂತ್ರಾಲಯದಲ್ಲಿ ಅದ್ಧೂರಿ ರಾಮೋತ್ಸವ – ಅಭಯರಾಮನ ಅನಾವರಣ

    ಮಂತ್ರಾಲಯದಲ್ಲಿ ಅದ್ಧೂರಿ ರಾಮೋತ್ಸವ – ಅಭಯರಾಮನ ಅನಾವರಣ

    -ಶೋಭಾಯಾತ್ರೆಯಲ್ಲಿ ಮುಸ್ಲಿಂ ಭಕ್ತರು ಭಾಗಿ

    ರಾಯಚೂರು: ಅಯೋಧ್ಯೆಯಲ್ಲಿ (Ayodhya) ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಶುಭಘಳಿಗೆ ಹಿನ್ನೆಲೆ ರಾಯರ ಸನ್ನಿಧಿ ಮಂತ್ರಾಲಯದಲ್ಲೂ (Mantralaya) ಮರ್ಯಾದಾ ಪುರುಷೋತ್ತಮನ ಭವ್ಯಮೂರ್ತಿ ಅನಾವರಣಗೊಂಡಿದೆ.

    36 ಅಡಿ ಎತ್ತರದ ಏಕಶಿಲಾ ಅಭಯರಾಮನ ಮೂರ್ತಿಯನ್ನು ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಪ್ರತಿಷ್ಠಾಪನೆ ಮಾಡಿದ್ದಾರೆ. ಶ್ರೀರಾಮನ ಮೂಲಾರ್ಚಕರಾದ ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ ಭವ್ಯ ರಾಮಮೂರ್ತಿ ಅನಾವರಣಗೊಂಡಿದೆ. ಮಂತ್ರಾಲಯದಲ್ಲಿ ರಾಯರಿಗೂ ಮೊದಲು ನಿತ್ಯ ಶ್ರೀರಾಮನಿಗೆ ಪೂಜೆ ನಡೆಯುತ್ತದೆ. ಈ ಹಿನ್ನೆಲೆ ಮಂತ್ರಾಲಯ ಮಠ ಅಭಯ ಶ್ರೀರಾಮನ ಮೂರ್ತಿ ಸ್ಥಾಪನೆಗೆ ಮುಂದಾಗಿದೆ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಉದಯವಾಗಿದೆ: ನರೇಂದ್ರ ಮೋದಿ

    ದೇಶದ ಮೂಲೆ ಮೂಲೆಯಿಂದ ಬಂದ ಸಹಸ್ರಾರು ಭಕ್ತರು ಇಂದು ರಾಯರ ಮಠದಲ್ಲಿ ರಾಮನ ದರ್ಶನ ಪಡೆಯುತ್ತಿದ್ದಾರೆ. ಮಂತ್ರಾಲಯ ರಾಯರ ಮಠ ಹಾಗೂ ಅಭಯರಾಮ (Abhayarama) ಸೇವಾ ಸಮಿತಿಯಿಂದ ಏಕಶಿಲಾ ರಾಮನ ಮೂರ್ತಿ ತಲೆಎತ್ತಿದ್ದು ಮುಂದಿನ ಒಂದು ವರ್ಷದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಗ್ರೇ ಗ್ರಾನೈಟ್ ಏಕಶಿಲೆಯಲ್ಲಿ ಕೆತ್ತನೆಯಾದ 36 ಅಡಿ ಎತ್ತರದ ಅಭಯರಾಮನ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಇದನ್ನೂ ಓದಿ: ಶಿವಮೊಗ್ಗ: ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠೆ ಸಂಭ್ರಮದ ವೇಳೆ ಅಲ್ಲಾಹು ಅಕ್ಬರ್ ಎಂದು ಕೂಗಿದ ಮುಸ್ಲಿಂ ಮಹಿಳೆ

    ಅಯೋಧ್ಯ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಮಂತ್ರಾಲಯದ ರಾಜಬೀದಿಗಳಲ್ಲಿ ಶ್ರೀರಾಮನ ಶೋಭಾ ಯಾತ್ರೆ ಅದ್ದೂರಿಯಾಗಿ ನಡೆಯಿತು. ಬೃಹತ್ ಶೋಭಾ ಯಾತ್ರೆ ವೇಳೆ ಮಂತ್ರಾಲಯದ ರಾಯರ ಮಠ ಸಂಪೂರ್ಣವಾಗಿ ಕೇಸರಿ ಮಯವಾಗಿತ್ತು. ಕೇಸರಿ ಧ್ವಜಗಳನ್ನ ಹಿಡಿದು ಬೀದಿಗಳಲ್ಲಿ ರಾಯರ ಭಕ್ತರು ಹೆಜ್ಜೆಹಾಕಿದರು. ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಶೋಭಾ ಯಾತ್ರೆ ನಡೆಯಿತು. ರಾಯರ ಮಠದಲ್ಲಿ ಶೋಭಾಯಾತ್ರೆ ಚಾಲನೆ ವೇಳೆ ಮುಸ್ಲಿಂ ಭಕ್ತರು ಸಹ ಭಾಗವಹಿಸಿದ್ದಾರೆ. ಶೋಭಾಯಾತ್ರೆಯಲ್ಲಿ ಪಾಲ್ಗೊಂಡು ಹೆಜ್ಜೆ ಹಾಕಿದರು. ಇದನ್ನೂ ಓದಿ: ಮಂದಸ್ಮಿತ, ಮುಗ್ಧಮುಖದ ಬಾಲರಾಮನ ಕಣ್ತುಂಬಿಕೊಂಡು ಪುನೀತರಾದ ರಾಮಭಕ್ತರು

  • ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ

    ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ

    -ಈಡೇರಲೇ ಇಲ್ಲ ಅಪ್ಪು ಆಸೆ

    ರಾಯಚೂರು: ನಟ ಪುನೀತ್ ರಾಜ್‍ಕುಮಾರ್ ಅಗಲಿಕೆ ಹಿನ್ನೆಲೆ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ, ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪುನೀತ್ ಇನ್ನಿಲ್ಲ ಎನ್ನುವುದನ್ನು ಅರಗಿಸಿಕೊಳ್ಳುವುದು ಕಷ್ಟ. ಪುನೀತ್ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ. ಡಾ.ರಾಜ್‍ಕುಮಾರ್ ಕುಟುಂಬ ರಾಯರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ವಿಶೇಷ ಸಂದರ್ಭಗಳಲ್ಲಿ ಮಠಕ್ಕೆ ತಪ್ಪದೇ ಬಂದು ಹೋಗುತ್ತಾರೆ. ಮೂರು ಜನ ಅಣ್ಣತಮ್ಮಂದಿರು ಮಠದಲ್ಲಿ ಸಂಗೀತ ಕಾರ್ಯಕ್ರಮ ನಡೆಸುವುದಾಗಿ ಪುನೀತ್ ಹೇಳಿದ್ದರು. ರಾಯರ ಆರಾಧನ ಸಂದರ್ಭದಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತೇವೆ ಎಂದಿದ್ದರು ಆದರೆ ಅದು ಈಡೇರಲೇ ಇಲ್ಲ ಎಂದರು. ಇದನ್ನೂ ಓದಿ: ಪುನೀತ್ ಸಾವಿನ ಸುದ್ದಿ ನೋಡಿ ಹೃದಯಾಘಾತದಿಂದ ಅಭಿಮಾನಿ ಸಾವು

    ಪುನೀತ್ ರಾಜ್‍ಕುಮಾರ್ ಚಿಕ್ಕವರಿದ್ದಾಗಿನಿಂದಲೂ ವಾರ ಬಂತಮ್ಮ ಗುರುವಾರ ಬಂತಮ್ಮ ಹಾಡನ್ನು ಹೇಳುತ್ತಿದ್ದರು. ಅಪ್ಪು ಅಗಲಿಕೆಯ ನೋವು ಭರಿಸುವಂತ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದರು.

    ರಾಯಚೂರಿನಲ್ಲಿ ಅಪ್ಪು ಅಭಿಮಾನಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಶ್ರದ್ಧಾಂಜಲಿ ಅರ್ಪಿಸಿದರು. ನಗರದ ಅಂಬೇಡ್ಕರ್ ವೃತ್ತ ಹಾಗೂ ಗಾಂಧಿ ವೃತ್ತದಲ್ಲಿ ಮೇಣದ ಬತ್ತಿ ಬೆಳಗಿ ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು. ಇದನ್ನೂ ಓದಿ: 2 ಗಂಟೆ ವ್ಯಾಯಾಮ, ಮೂರು ಗಂಟೆ ಐಸಿಯುನಲ್ಲಿ ಚಿಕಿತ್ಸೆ – ಪುನೀತ್ ಕೊನೆಕ್ಷಣ ಹೀಗಿತ್ತು

  • ಇಂದು ಮಾಧ್ವ ಸಮಾಜಕ್ಕೆ ಅತ್ಯಂತ ಕರಾಳದಿನ – ಸುಬುಧೇಂದ್ರ ತೀರ್ಥ ಸ್ವಾಮಿ

    ಇಂದು ಮಾಧ್ವ ಸಮಾಜಕ್ಕೆ ಅತ್ಯಂತ ಕರಾಳದಿನ – ಸುಬುಧೇಂದ್ರ ತೀರ್ಥ ಸ್ವಾಮಿ

    ರಾಯಚೂರು: ಇಂದು ಮಾಧ್ವ ಸಮಾಜಕ್ಕೆ ಅತ್ಯಂತ ಕರಾಳದಿನ. ರಾತ್ರೋ ರಾತ್ರಿ ವ್ಯಾಸರಾಜರ ವೃಂದಾವನವನ್ನು ಅಗೆದು ಹಾಕಿದ್ದು ಖಂಡನೀಯ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ.

    ಕೊಪ್ಪಳ ಜಿಲ್ಲೆಯ ಅನೆಗೊಂದಿಯಲ್ಲಿನ ವ್ಯಾಸರಾಜರ ವೃಂದಾವನವನ್ನು ಧ್ವಂಸ ಮಾಡಿದ ಹಿನ್ನೆಲೆಯಲ್ಲಿ ಇಂದು ಮಾತನಾಡಿದ ಅವರು, ತುಂಗಭದ್ರಾ ನದಿಯ ದಡದಲ್ಲಿರುವ ವಿವಾದಿತ ಪ್ರದೇಶದಲ್ಲಿರುವ ವೃಂದಾವನ ಧ್ವಂಸ ಮಾಡಿರುವುದಕ್ಕೆ ರಕ್ತ ಕುದಿಯುತ್ತಿದೆ. ಇದನ್ನು ಪ್ರತಿಯೊಬ್ಬರು ಬೇಧ ಭಾವವಿಲ್ಲದೇ ಖಂಡಿಸಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಸಮಗ್ರವಾಗಿ ಸೂಕ್ತವಾದ ತನಿಖೆ ಮಾಡಿ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಆಗ್ರಹ ಮಾಡಿದ ಸ್ವಾಮೀಜಿ, ಈ ವಿಚಾರದಲ್ಲಿ ಭೇದ ಮರೆತು ಎಲ್ಲರೂ ಒಂದಾಗುವಂತೆ ಎಲ್ಲಾ ಮಠಾಧೀಶರಲ್ಲಿ ಮನವಿ ಮಾಡಿಕೊಂಡರು.

    ವೃಂದಾವನ ಮರು ನಿರ್ಮಾಣವನ್ನು ಎಲ್ಲರೂ ಒಟ್ಟಾಗಿ ಮಾಡಲು ಸಹಕಾರ ಕೋರಿದ ಸ್ವಾಮೀಜಿ, ಮಂತ್ರಾಲಯದಲ್ಲಿ ಪೂಜೆ ಮುಗಿಸಿ ಊಟವನ್ನು ಮಾಡದೇ ಕೋಲಾರಕ್ಕೆ ಹೊರಟಿದ್ದಾರೆ. ಮಧ್ಯರಾತ್ರಿ ನವವೃಂದಾವನ ಅಗೆದು ಹಾಕಿದ್ದು, ನಿಧಿಗಾಗಿ ಅಗೆದು ಹಾಕಿರುವ ಶಂಕೆ ವ್ಯಕ್ತವಾಗಿದೆ.

  • ಮಂತ್ರಾಲಯ ಮಠದಿಂದ ಕೊಡಗು ಪ್ರವಾಹ ಸಂತ್ರಸ್ತರಿಗೆ 15 ಲಕ್ಷ ರೂ. ಪರಿಹಾರ

    ಮಂತ್ರಾಲಯ ಮಠದಿಂದ ಕೊಡಗು ಪ್ರವಾಹ ಸಂತ್ರಸ್ತರಿಗೆ 15 ಲಕ್ಷ ರೂ. ಪರಿಹಾರ

    ರಾಯಚೂರು: ಭೀಕರ ಪ್ರವಾಹದಿಂದ ತತ್ತರಿಸಿರುವ ಕೊಡಗು ಹಾಗೂ ಕೇರಳಕ್ಕೆ ತಲಾ 15 ಲಕ್ಷ ರೂ. ಪರಿಹಾರವನ್ನು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠ ನೀಡುವುದಾಗಿ ತಿಳಿಸಿದೆ.

    ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಅವರು, ಕೊಡಗು ಜನರ ಪರಿಹಾರ ಕಾರ್ಯಕೈಗೊಳ್ಳಲು ನೆರವು ನೀಡುವ ದೃಷ್ಟಿಯಿಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ 15 ಲಕ್ಷ ರೂ. ಚೆಕ್ ನೀಡಲಾಗುವುದು. ಅಲ್ಲದೇ ಈಗಾಗಲೇ ಕೊಡಗು ನೆರೆ ಪೀಡಿತ ಜನರ ಸಹಾಯಕ್ಕಾಗಿ ಮಂತ್ರಾಲಯ ಬೆಂಗಳೂರು ಸೇರಿ ಇತರ ಮಠದಿಂದ ಸ್ವಯಃ ಸೇವರಕನ್ನು ಕಳುಹಿಸಲಾಗಿದೆ ಎಂದು ತಿಳಿಸಿದರು.

    ಇದೇ ವೇಳೆ ಕೊಡಗು ಪ್ರವಾಹದಿಂದ ಉಂಟಾಗಿರುವ ನಷ್ಟದ ಕುರಿತು ಅಧ್ಯಯನ ನಂತರ ಮಾಹಿತಿ ಸಂಗ್ರಹಿಸಿ ಸಹಾಯ ಕಾರ್ಯ ನೀಡುವ ಅಶ್ವಾಸನೆ ನೀಡಿದ ಅವರು, ಆಹಾರ, ಔಷಧಿ, ನೀರು ಇತರೆ ಸಿದ್ಧ ವಸ್ತುಗಳನ್ನು ಈಗಾಗಲೇ ಪೂರೈಕೆ ಮಾಡಲಾಗಿದೆ. ಅಲ್ಲದೇ ವಿದ್ಯಾಭ್ಯಾಸ, ವೈದ್ಯಕೀಯ ಸೌಲಭ್ಯಗಳನ್ನ ಕಲ್ಪಿಸಲಾಗುವುದು ಎಂದು ಸುಬುಧೇಂದ್ರ ತೀರ್ಥ ಸ್ವಾಮಿ ತಿಳಿಸಿದರು. ಇದನ್ನೂ ಓದಿ: ಕೇರಳ, ಕೊಡಗು ಜಲಪ್ರಳಯ: ಕೊಲ್ಲೂರು ದೇವಸ್ಥಾನದಿಂದ 1.25 ಕೋಟಿ ರೂ. ಪರಿಹಾರ ಘೋಷಣೆ

    ಇದೇ ಆಗಸ್ಟ್ 25 ರಿಂದ ಆರಂಭವಾಗುವ ರಾಯರ ಆರಾಧನೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು ಕ್ರಮಕೈಗೊಂಡಿದ್ದು, ಪ್ರವಾಹ ಸಂತ್ರಸ್ತರಿಗೆ ಸಂಪೂರ್ಣ ನೆರವು ನೀಡಲಾಗವುದು ಎಂದು ತಿಳಿಸಿದರು. ಇದನ್ನೂ ಓದಿ: ಕೊಡಗಿನ ಸಂತ್ರಸ್ತರಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ 2 ಕೋಟಿ ರೂ. ಪರಿಹಾರ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv