Tag: ಸುಬ್ರಮಣ್ಯನ್ ಸ್ವಾಮಿ

  • ಕೊಡವ ಲ್ಯಾಂಡ್ ಕೇಸ್‌ : ಕೇಂದ್ರ ಸರ್ಕಾರಕ್ಕೆ ದಂಡ ವಿಧಿಸಿದ ಹೈಕೋರ್ಟ್‌

    ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಪ್ರಮುಖ ಬೇಡಿಕೆಯಾದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯ (Geo-Political Autonomy for Kodava Tribe ) ಕುರಿತು ಆಯೋಗವನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (PIL) ವಿಚಾರಣೆ ನಡೆಸಿದ ಹೈಕೋರ್ಟ್‌ (Karnataka High Court) ಆಕ್ಷೇಪಣೆ ಸಲ್ಲಿಸಲು ವಿಳಂಬ ಧೋರಣೆ ತೋರಿದ್ದಕ್ಕೆ ಕೇಂದ್ರ ಗೃಹ ಸಚಿವಾಲಯಕ್ಕೆ (Central home Ministry) 5 ಸಾವಿರ ರೂ. ದಂಡ ವಿಧಿಸಿದೆ.

    ಹೈಕೋರ್ಟ್‌ ಮುಖ್ಯ ನ್ಯಾ.ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆಯಲ್ಲಿ ಅರ್ಜಿದಾರರ ಪರ ಡಾ.ಸುಬ್ರಮಣಿಯನ್‌ ಸ್ವಾಮಿ ಹಾಗೂ ವಕೀಲ ಕೀರನ್ ನಾರಾಯಣ್ ಅವರು ವಾದ ಮಂಡಿಸಿದರು.

    ನ್ಯಾಯಾಲಯದ ಮುಂದೆ ಹಲವು ಬಾರಿ ಅರ್ಜಿ ವಿಚಾರಣೆಗೆ ಬಂದಿದ್ದು, ಪ್ರತಿವಾದಿಗಳಲ್ಲಿ ಒಂದಾದ ಕೇಂದ್ರವು ಅರ್ಜಿಗೆ ಆಕ್ಷೇಪಿಸಲು ಹೆಚ್ಚಿನ ಸಮಯ ಬಯಸಿ ಹಲವು ಬಾರಿ ವಿಚಾರಣೆಯನ್ನು ಮುಂದೂಡುವಂತೆ ಮಾಡಿದ ಕಾರಣ ದಂಡ ವಿಧಿಸಲಾಗಿದೆ.  ಇದನ್ನೂ ಓದಿ: 10 ಜನ ಸೇರಿಕೊಂಡು ಒಬ್ಬನನ್ನು ಹೊಡೆದಿದ್ದಾರೆ ಸರ್‌: ಬಿಜೆಪಿ ನಾಯಕರ ಮುಂದೆ ಸ್ಥಳೀಯರ ಕಣ್ಣೀರು

    ಮುಂದಿನ ವಿಚಾರಣೆಯನ್ನು ನವೆಂಬರ್ 29 ಕ್ಕೆ ಮುಂದೂಡಿದ್ದು, ಆಕ್ಷೇಪಣೆಯನ್ನು ಸಲ್ಲಿಸುವಂತೆಯೂ ಅದೇಶಿಸಿದೆ. ಕರ್ನಾಟಕ ರಾಜ್ಯ ಸರಕಾರ, ಕೇಂದ್ರ ಕಾನೂನು ಇಲಾಖೆ ಹಾಗೂ ಗೃಹ ಇಲಾಖೆ ಈ ಪ್ರಕರಣದಲ್ಲಿ ಪ್ರತಿವಾದಿಗಳಾಗಿವೆ.

    ಕೊಡವ ಭೂ ರಾಜಕೀಯ ಸ್ವಾಯತ್ತತೆ ಸಂಬಂಧ ಆಯೋಗ ರಚಿಸುವಂತೆ ಕೇಂದ್ರ ಮಾಜಿ ಸಚಿವ ಡಾ.ಸುಬ್ರಮಣಿಯನ್‌ ಸ್ವಾಮಿ (Subramanian Swamy) ಅವರ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

    ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ವಿರಾಟ್ ಹಿಂದೂಸ್ಥಾನ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಶ್ರೇಯಾ ನಾಚಪ್ಪ, ಅರೆಯಡ ಗಿರೀಶ್, ಕಿರಿಯಮಾಡ ಶೆರಿನ್, ಬೇಪಡಿಯಂಡ ಬಿದ್ದಪ್ಪ, ಅಪ್ಪಾರಂಡ ಪೂವಣ್ಣ, ವಿಎಚ್‌ಎಸ್ ರಾಜ್ಯಾಧ್ಯಕ್ಷ ನಿಕುಂಜ್ ಶಾ, ಸದಸ್ಯರಾದ ನಟರಾಜ್, ರವಿಶಂಕರ್, ವಕೀಲರಾದ ಪಾರ್ಥ್, ಶ್ರೀಕಂಠ ಶರ್ಮಾ, ಮಂಜುನಾಥ್ ಅವರುಗಳು ಹಾಜರಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು 23 ದಿನಗಳ ಸಂಸದರ ಸಂಬಳವನ್ನು ಪಡೆಯುತ್ತೇನೆ: ಸುಬ್ರಮಣಿಯನ್ ಸ್ವಾಮಿ

    ನಾನು 23 ದಿನಗಳ ಸಂಸದರ ಸಂಬಳವನ್ನು ಪಡೆಯುತ್ತೇನೆ: ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: 23 ದಿನಗಳ ಕಲಾಪ ನಡೆಯದಿರುವುದಕ್ಕೆ ನಾನು ಕಾರಣ ಅಲ್ಲ. ಹೀಗಾಗಿ ನಾನು ಸಂಸದರ ಸಂಬಳವನ್ನು ಪಡೆಯುತ್ತೇನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

    ಅಧಿವೇಶನದ ಎಲ್ಲಾ ದಿನಗಳೂ ಹಾಜರಿದ್ದೇನೆ. 23 ದಿನಗಳೂ ಕಲಾಪ ನಡೆದಿಲ್ಲ ಇದರಲ್ಲಿ ನನ್ನ ತಪ್ಪೇನು ಇಲ್ಲ. ನಾನು ರಾಷ್ಟ್ರಪತಿಗಳ ಪ್ರತಿನಿಧಿ. ಅವರು ಹೇಳೋ ತನಕ ನಾನು ಹೇಗೆ ಸಂಬಳ ಬೇಡವೆಂದು ಹೇಗೆ ಹೇಳಲಿ ಎಂದು ಸ್ವಾಮಿ ಪ್ರಶ್ನಿಸಿದ್ದಾರೆ.

    ಈ ಬಾರಿ ಅಧಿವೇಶನದ ಎಲ್ಲಾ ದಿನಗಳೂ ವ್ಯರ್ಥವಾಗಿದೆ. ಕಾಂಗ್ರೆಸ್‍ನ ಅಸಂವಿಧಾನಿಕ ರಾಜಕಾರಣದಿಂದಾಗಿ ಲೋಕಸಭೆ ಮತ್ತು ರಾಜ್ಯಸಭಾ ಕಲಾಪಗಳಿಗೆ ಅಡ್ಡಿಯಾಗಿದೆ. ಇದರಿಂದಾಗಿ ಬಹಳಷ್ಟು ಮಸೂದೆಗಳು ಅಂಗೀಕಾರ ಆಗಿಲ್ಲ. ಸಾರ್ವಜನಿಕ ಹಿತಾಸಕ್ತಿಯ ಯಾವ ವಿಚಾರಗಳನ್ನು ಚರ್ಚಿಸಿಲ್ಲ. ಸಾರ್ವಜನಿಕರ ಕೆಲಸಗಳನ್ನು ಮಾಡಿದಾಗ ಮಾತ್ರ ಸಂಬಳವನ್ನು ತೆಗೆದುಕೊಳ್ಳಬೇಕು. ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಸಂಸದರು ಅಧಿವೇಶನದ ಸಂಬಳ ಮತ್ತು ಭತ್ಯೆಗಳನ್ನು ತೆಗೆದುಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಮಿತ್ರ ಪಕ್ಷಗಳೊಂದಿಗೆ ಚರ್ಚೆ ಮಾಡಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ನಿನ್ನೆ ತಿಳಿಸಿದ್ದರು.

    ನಾವು ಜನರ ಹಣವನ್ನು ಪಡೆದು ಪ್ರಜೆಗಳ ಸೇವೆ ಮಾಡುತ್ತೇವೆ. ಜನರ ಸೇವೆ ಮಾಡಲು ಸಾಧ್ಯವಾಗದೇ ಇದ್ದರೆ ಅವರ ಹಣವನ್ನು ಪಡೆಯಲು ನಮಗೆ ಯಾವುದೇ ಹಕ್ಕಿಲ್ಲ ಎಂದು ಅನಂತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

    ಸಂಬಳ ಮತ್ತು ಭತ್ಯೆ ತೆಗೆದುಕೊಳ್ಳುವುದಿಲ್ಲ ಅನ್ನುವುದು ಸಚಿವ ಸಂಪುಟದ ನಿರ್ಣಯವಾಗಿದೆ. ಅಧಿವೇಶನದ ಎಲ್ಲಾ ದಿನಗಳು ವ್ಯರ್ಥವಾಗಿದ್ದಕ್ಕೆ ವಿರೋಧ ಪಕ್ಷಗಳೇ ಕಾರಣ ಎನ್ನುವ ಸಂದೇಶವನ್ನು ಜನರಿಗೆ ತಿಳಿಸಲು ಎನ್‍ಡಿಎ ಸದಸ್ಯರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.